VISHWAROOPA NEWS BLOG

ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಕನಕಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ

ಇಂದು ಕನಕಗಿರಿ ತಾಲೂಕು ಪಂಚಾಯತ್‌ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ರಾಜಶೇಖರ್‌ ಅವರು ನೆರವೇರಿಸಿದರು. ಈ ವೇಳೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಕೆಡಿಪಿ ಸದಸ್ಯರು, ತಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Read More
ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ…

Read More
ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಪತ್ರಿಕಾ ಮಾದ್ಯಮ ಪ್ರಜಾಪ್ರಭುತ್ವದ ಪ್ರಾಣವಾಯು: ಕೆ.ವಿ ಪ್ರಭಾಕರ್

ಬೆಂಗಳೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಅವರು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹಿರಿಯ ಪತ್ರಕರ್ತರಿಗೆ ಮಾಧ್ಯಮಶ್ರೀ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಸ್ವಾತಂತ್ರ‍್ಯಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯದ ನಂತರ ಅಭಿವೃದ್ಧಿಯಾದ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ…

Read More
ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಸನಾತನ ಧರ್ಮ ರಕ್ಷಣೆಗೆ ಶೃಂಗೇರಿ ಶಾರದಾ ಪೀಠದ ಕೊಡುಗೆ ಅನನ್ಯ: ನಾರಾಯಣರಾವ್ ವೈದ್ಯ.

ಗಂಗಾವತಿ: ಅದ್ವೈತ ಸಿದ್ದಾಂತದ ತಳಹದಿಯ ಮೇಲೆ ಜಗದ್ಗುರು ಶ್ರೀ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾದ ಪೀಠಗಳಲ್ಲಿ ಪ್ರಥಮ ಪೀಠ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶೃಂಗೇರಿ ಶಾರದಾ ಪೀಠ ತನ್ನದೇ ಆದ ಗುರು ಪರಂಪರೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪೀಠವು ಸನಾತನ ಧರ್ಮದ ರಕ್ಷಣೆ ಹಾಗೂ ದೇಶದ ಸುಭಿಕ್ಷೆಗೆ ಮಹತ್ವವಾದ ಕೊಡುಗೆಯನ್ನು ನೀಡಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಮಂಗಳವಾರ ಶಾರದಾ ದೇವಸ್ಥಾನದಲ್ಲಿ ಜಗದ್ಗುರು ಶ್ರೀಶ್ರೀ ವಿದುಶೇಖರ ಮಹಾಸ್ವಾಮಿಗಳವರ ೩೩ನೆಯ ವರ್ಧಂತಿ…

Read More
ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದುಶೇಖರ ಮಹಾಸ್ವಾಮಿಗಳ ಜನನ ತಿರುಪತಿಯಲ್ಲಿ ನಿಷ್ಠಾವಂತ ವೇದ ವಿದ್ವಾಂಸರ ಮನೆಯಲ್ಲಿ 1993ರ ಜುಲೈ 24 ರಂದು ಆಯಿತು. ಅವರ ತಂದೆ ಕುಪ್ಪಾ ವೇ ಬ್ರ.ಶ್ರೀ.ಶಿವಸುಬ್ರಹ್ಮಣ್ಯ ಅವದಾನಿ ಮತ್ತು ತಾಯಿ ಶ್ರೀಮತಿ ಸೀತಾ ನಾಗಲಕ್ಷ್ಮಿ.ಈ ದಂಪತಿಗಳ ಕಿರಿಯ ಪುತ್ರರೇ ತಿರುಪತಿಯಲ್ಲಿ ವೆಂಕಟೇಶ್ವರನ ಕೃಪೆಯಿಂದ ಜನಿಸಿ ವೆಂಕಟೇಶ ಪ್ರಸಾದರೆನಿಸಿದರು. ಐದನೇ ವಯಸ್ಸಿನಲ್ಲೇ ಅವರಿಗೆ ಬ್ರಹ್ಮೋಪದೇಶ ಆಯಿತು. ತಾತ ರಾಮಗೋಪಾಲ ಯಾಜಿಯವರಲ್ಲಿ ಬಾಲಕ ಕೃಷ್ಣ ಯಜುರ್ವೇದ ಕ್ರಮಾಂಕ ಪಾಠ ಕಲಿಯಲು ಆರಂಭಿಸಿದ್ದು ಉಪನಯನದ ನಂತರ. 2006 ರಲ್ಲಿ ತಂದೆಯವರೊಂದಿಗೆ ಬಾಲಕ ಶೃಂಗೇರಿಗೆ…

Read More
ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು. ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More
ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಗಂಗಾವತಿ 15: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ರವಿವಾರ ದಿನದಂದು ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಸಂಕಲ್ಪ, ಭಜನೆ ಮಾಡುವುದರ ಮುಖಾಂತರ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇಶ ಕಾಯುವ ಯೋಧ ಹಾಗೂ ಅನ್ನದಾತ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ತಾಯಿ ಶ್ರೀ ಕನ್ನಿಕಾ…

Read More
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ಪುಟ್ಟಣ್ಣನ ಕತ್ತೆ

“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನವರಾದ ಸಿದ್ದು ಪೂರ್ಣಚಂದ್ರ ಮತ್ತು ನನ್ನ ಸ್ನೇಹ ಕೆಲ ವರ್ಷಗಳಿಂದ ಆತ್ಮೀಯವಾಗಿ ಬೆಳೆದಿದೆ. ಇಂದು ಫೋನ್ ಗೆ ಸಿಕ್ಕರು….

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More
ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ,…

Read More