VISHWAROOPA NEWS BLOG

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಗಂಗಾವತಿ: ತಾವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಪ್ರಾಧ್ಯಾಪಕರಾದ ಉಮಾಕಾಂತ ಅವರೆಡ್ಡಿ ಆವರಿಗೆ ಆಂಧ್ರಪ್ರದೇಶದ ಕುಪ್ಪಮ್‌ನ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯದ ಆಂಗ್ಲಭಾಷೆ ವಿಭಾಗದ ಸಂಶೋಧನಾ ವಿದ್ಯಾರ್ಥಿ ಉಮಾಕಾಂತ ಅವರೆಡ್ಡಿ ಅವರು ಡಾ. ಜಿ. ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ. ಅಮಿತಾವ್ ಘೋಶ್: ಎ ನ್ಯಾಷನಲಿಸ್ಟಿಕ್ ಅಪ್ರೋಚ್’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಆಂಧ್ರಪ್ರದೇಶದ ಕುಪ್ಪಮ್ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ. ವಿವಿಧ ಸರ್ಕಾರಿ ಪ್ರಥಮ…

Read More
ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಶಾರ್ಟ್ ಬಾಸ್ ದೋಸ್ತಾ ಕಾಮಿಡಿ ಟಾಕ್..!

ಆತ: ಮದುವೆಯಾಗಿ ಹತ್ತು ವರ್ಷ ಆಯ್ತು. ನಾನು ಈಗಲೂ ಒಬ್ಬಳನ್ನು ಪ್ರೀತಿಸ್ತಿದ್ದೀನಿ. ಈತ: ನಿನ್ನ ಹೆಂಡ್ತಿನ ಅಷ್ಟೊಂದು ಪ್ರೀತಿಸ್ತೀಯಾ..? ಆತ: ಹೆಂಡತಿನ ಯಾರದ್ರು ಪ್ರೀತಿ ಮಾಡ್ತಾರಾ..? ಈತ: ಹಾಗಾದ್ರೇ ಅವಳು ಬೇರೇನಾ..ಯಾರು ಅವಳು..? ಆತ: ಅವಳ್ಯಾರು ಅಂತ ಹೇಳಿದ್ರೇ ನನ್ನ ಹಂಡತಿ ಕಿಕ್‌ಹೌಟ್ ಮಾಡ್ತಾಳೆ. ಈತ: ನೀವು ಒಳ್ಳೆಯ ಹಾಸ್ಯ ಸಾಹಿತಿಗಳು ಖರೆ, ನಿಮ್ಮ ಹಾಸ್ಯ ಬರಹಗಳ ಐವತ್ತು ಪುಸ್ತಕಗಳು ಪ್ರಕಟವಾಗಿವೆ ಬರಾಬರ್ ಓಕೆ. . ಆದರೆ ಇದಾದ ಮೇಲೆ ನಿಮ್ಮಲ್ಲಿ ಆಗಿರುವ ಬದಲಾವಣೆ ಆದರೂ ಏನು…

Read More
ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಗಂಗಾವತಿ: ಸಂಗೀತ ಎಂಬುದು ಯಾವುದೇ ಒಬ್ಬ ವ್ಯಕ್ತಿಯ ಸ್ವತ್ತಲ್ಲ. ಯಾವುದೇ ಜಾತಿ ಮತ ಎಣಿಸದೆ, ಸರ್ವರನ್ನೂ ಆಕರ್ಷಿಸುವ ದಿವ್ಯಶಕ್ತಿ ಸಂಗೀತ ಹೊಂದಿದೆ ಎಂದು ಗಾನಯೋಗಿ ಶ್ರೀ ಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ ಅಧ್ಯಕ್ಷ ಕೆಎಫ್ ಮುದ್ದಾಬಳ್ಳಿ ಹೇಳಿದರು. ಅವರು. ಕಳೆದ ಮಹಾ ಶಿವರಾತ್ರಿ ಪ್ರಯುಕ್ತ ಹಿರೇಜಂತಕಲ್‌ನ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಅಬೀದಾ ಬೇಗಂ, ಕಲಾವಿದ ವೆಂಕಟೇಶ್ ದಾಸನಾಳ ಇತರರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಣ್ಣಪ್ಪ…

Read More
ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಮಾರ್ಚ್-೩ ಸೋಮವಾರ ವಿಜಯನಗರ ಸಾಮ್ರಾಜ್ಯದ ರಾಜ ವಂಶಸ್ಥರಾದ ಶ್ರೀರಂಗದೇವರಾಯಲು ಅವರ ೮೭ನೇ ವರ್ಷದ ಜನ್ಮದಿನೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಜಯನಗರ ಸಾಮ್ರಾಜ್ಯದಲ್ಲಿ ಆನೆಗೊಂದಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಹಲವಾರು ತಲೆಮಾರುಗಳಿಂದ ಇವರ ವಂಶಸ್ಥರಾಗಿ ಇದೇ ಆನೆಗೊಂದಿ ಗ್ರಾಮದಲ್ಲಿ ಜೀವಿಸುತ್ತಿದ್ದಾರೆ. ಶ್ರೀರಂಗದೇವರಾಯಲು ರಾಜಕೀಯಕ್ಕೆ ಪ್ರವೇಶಿಸಿ ಸತತ ಐದುಬಾರಿ ಕನಕಗಿರಿ ಮತ್ತು ಗಂಗಾವತಿ ಎರಡು ಕ್ಷೇತ್ರಗಳಿಗೆ ಶಾಸಕರಾಗಿ, ಸಚಿವರಾಗಿ ರೈತಾಪಿ ವರ್ಗದ ಜನರ ಹಿತವನ್ನು ಕಾಯುತ್ತ ಮತ್ತು ದೀನ-ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಈ ಹಿಂದೆ ಹಂಪಿ…

Read More
ಅಡುಗೆ ಮನೆಯೇ ವಿಜ್ಞಾನದ ಲ್ಯಾಬ್, ತಾಯಿಯೇ ವಿಜ್ಞಾನದ ಗುರು:  ಹಿರಿಯ ವಿಜ್ಞಾನಿ ಮಹಾಂತಶಿವಯೋಗಿ

ಅಡುಗೆ ಮನೆಯೇ ವಿಜ್ಞಾನದ ಲ್ಯಾಬ್, ತಾಯಿಯೇ ವಿಜ್ಞಾನದ ಗುರು: ಹಿರಿಯ ವಿಜ್ಞಾನಿ ಮಹಾಂತಶಿವಯೋಗಿ

ಗಂಗಾವತಿ: ಮಕ್ಕಳಿಗೆ ಅಡುಗೆ ಮನೆಯೆ ವಿಜ್ಞಾನದ ಲ್ಯಾಬ್ ಇದ್ದಹಾಗೆ, ತಾಯಿಯೇ ವಿಜ್ಞಾನ ಗುರು ಎಂದು ಗಂಗಾವತಿಯ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಹಿರಿಯ ವಿಜ್ಞಾನಿಗಳಾದ ಮಹಾಂತಶಿವಯೋಗಿಯವರು ಹೇಳಿದರು. ಅವರು ಮಾರ್ಚ್-೩ ಸೋಮವಾರ ನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಆಚರಿಸಲಾದ ವಿಜ್ಞಾನ ದಿನಾಚರಣೆಯಲ್ಲಿ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಈ ಶಾಲೆಯ ಮಕ್ಕಳು ಮಾಡಿದ ಸ್ಪ್ರೇಯನ್ನು ಖಾಲಿ ಬೋರ್ಡ್‌ನಲ್ಲಿ ಸಿಂಪಡಿಸಿದಾಗ ವೆಲ್‌ಕಮ್ ಟು ಮಹಾನ್ ಸೈನ್ಸ್ ಡೇ ಎಂದು ಗೋಚರಿಸಿತು. ಮಹಾನ್ ಕಿಡ್ಸ್ ಶಾಲೆ ಮಕ್ಕಳು ಬಯೋಲಜಿ, ಫಿಸಿಕ್ಸ್, ಕೆಮಿಸ್ಟ್ರಿ,…

Read More
ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುಂಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಮಾರ್ಚ್-೩ ಸೋಮವಾರ ಗಂಗಾವತಿ ನಗರದ ಸರ್ಕೀಟ್ ಹೌಸ್‌ನಲ್ಲಿ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬೂದುಗುಂಪ ಅವರನ್ನು ನೇಮಕ ಮಾಡಲಾಯಿತು. ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿಯವರು ನೇಮಕಾತಿ ಆದೇಶ ಪತ್ರ ನೀಡಿ, ಕಾರಟಗಿ ತಾಲ್ಲೂಕ ಕೇಂದ್ರದಾಧ್ಯಂತ ಪ್ರವಾಸ ಮಾಡಿ ಅಥವಾ ಪತ್ರಿಕಾ ಪ್ರಕಟಣೆಯ ಮೂಲಕ ಸಂಘಟನೆ ಬಲಪಡಿಸಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Read More
ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಇದೇ ಮಾರ್ಚ್ 5 ಬುಧವಾರ ರಂದು ಜರುಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಟಿ ರಾಮಕೃಷ್ಣ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ಎಸ್ ಸುರೇಶ್, ಯು ಚೆನ್ನಪ್ಪ, ರಾಚೋಟಯ್ಯ ಭಗವತಿ, ಗುರುರಾಜ್, ಪ್ರಹ್ಲಾದ, ರಾಮಚಂದ್ರ ಶೆಟ್ಟಿ, ಎಂ ರಾಮಾಂಜನೇಯ, ಕನಕಮೂರ್ತಿ, ಗಾಳಿ ಶಿವಪ್ಪ, ಡಾ|| ಎ.ಎಸ್.ಎನ್ ರಾಜು  ಹಾಗೂ ಕಿರಣ್ ಕುಮಾರ್ ಹೇಳಿದರು. ಅವರು…

Read More
ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಗಂಗಾವತಿ: ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಶೃಂಗೇರಿಯ ಶ್ರೀ ಶಾರದಾ ಪೀಠ 36ನೆಯ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ 50ನೇ ವರ್ಷದ ಸನ್ಯಾಸತ್ವ ಪ್ರಯುಕ್ತ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಡಿಯಲ್ಲಿ ಶ್ರೀಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರು ಮಾರ್ಚ್-7 ರಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀ ಶಂಕರ ಸೇವಾ ಸಮಿತಿ ಕೋಟೆ ಕೊಪ್ಪಳ ಅಧ್ಯಕ್ಷರಾದ ಕೃಷ್ಣ ಪದಕಿ. ವೆಂಕಟೇಶ್ ಪದಕಿ. ಶ್ರೀನಿವಾಸ್ ಹಾಗೂ ಡಿವಿ ಜೋಶಿ ಕೊಪ್ಪಳ ಅವರು ಹೇಳಿದರು. ಅವರು ಗಂಗಾವತಿಯ…

Read More
ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ: ಇತ್ತೀಚೆಗೆ ಫೆಬ್ರವರಿ-೨೧ ರಂದು ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬವನ್ನು ತಾಲೂಕಿನ ಆಚಾರ ನರಸಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು ಎಂದು ಮರಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ಕೆ.ಎಂ ರವರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಈ ಕಲಿಕಾ ಹಬ್ಬದಲ್ಲಿ ಶಿಕ್ಷಣ ಪ್ರೇಮಿ ನಾಗರಾಜ ಬರಗೂರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರಟಗಿ ವಲಯದ…

Read More
ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ…

Read More