VISHWAROOPA NEWS BLOG

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ಭಾವನೆಗಳ ಜಗತ್ತಿನಲ್ಲಿ ಹೃದಯದ ಕವಿತೆ ಗೊರೂರು ಅನಂತರಾಜು, ಹಾಸನ.

ನಾನು ಸಾಹಿತ್ಯ ಕ್ಷೇತ್ರಕ್ಕೆ ಬಂದು ಬರೆಯಲು ಪ್ರಾರಂಭಿಸಿದ್ದು ೨೦೨೦ರ ಕರೋನ ಸಮಯದಲ್ಲಿ. ಊರು ಹೋಗು ಕಾಡು ಬಾ ಎನ್ನುವ ವಯಸ್ಸಿನಲ್ಲಿ. ನನ್ನ ಹವ್ಯಾಸ ಬಟ್ಟೆ ಹೊಲಿಯುವುದು, ಕರಕುಶಲ ಕಲೆ, ಕೃತಕ ಆಭರಣಗಳ ತಯಾರಿಕೆ ಕ್ರೋಶಾವರ್ಕ್, ನಿಬ್ ಪೈಂಟಿಂಗ್, ಪರ್ಸ್ ವ್ಯಾನಿಟಿ ಬ್ಯಾಗ್ ತಯಾರಿಕೆ, ಸೀರೆ ಕುಚ್ಚು ಹಾಕುವುದು ಕಸೂತಿ ಇವುಗಳನ್ನು ಮನೆಯಲ್ಲಿಯೇ ಕಲಿಸಿ ತರಬೇತಿ ಕೊಡುತ್ತಿದ್ದೆ. ಕೊರೋನ ಮಾರಿಯಿಂದ ಸಂಪರ್ಕವಿಲ್ಲದೆ ಕೆಲಸಗಳಿಗೆ ಅಡೆತಡೆಯಾಗಿ ದುಡಿಮೆ ಇಲ್ಲದೆ ಮನೆಯಲ್ಲಿ ಕೂರುವಂತಾಗಿ ಸಾಲದಿದ್ದಕ್ಕೆ ಕರೋನ ಬರುವ ಒಂದು ತಿಂಗಳ ಮುಂಚೆ…

Read More
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಸಹಕಾರ ಅಗತ್ಯ: ಡಾ|| ಅಮರೇಶ ಪಾಟೀಲ್

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಪಾಲಕರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುತ್ತದೆ. ಆದರೂ ಅವರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ದೊರೆಯಲಿ ಎಂಬ ಉದ್ದೇಶದಿಂದ ತಮಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳನ್ನು ಶಾಲೆಗಳಿಗೆ ಕಳಿಸುತ್ತಾರೆ. ಸರಕಾರದ ಜೊತೆಗೆ ನಾವೂ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಪಡಿಸುವಲ್ಲಿ ಸರ್ಕಾರದ ಜವಾಬ್ದಾರಿ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಅಷ್ಟೇ ಇರುತ್ತದೆ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಐಎಪಿ ವಿಜಯನಗರ ಶಾಖೆಯ ಅಧ್ಯಕ್ಷರಾದ ಡಾ||…

Read More
ಪವಿತ್ರ ಕುಂಭಮೇಳ ಅಮೃತ ಸ್ನಾನ  ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ…

Read More
ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಶೇಖರ್ ಕಪೂರ್ ಅವರ ಮಗಳು ಕಾವೇರಿ ಅವರ ಚೊಚ್ಚಲ ಚಿತ್ರ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ:

ಖ್ಯಾತ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಅವರ ಪುತ್ರಿ ಕಾವೇರಿ ಕಪೂರ್ ಇತ್ತೀಚೆಗೆ ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ತಯಾರಾದ ರೋಮ್-ಕಾಮ್‌ನಲ್ಲಿ ಕಾವೇರಿ ಕಪೂರ್ ಮತ್ತು ವರ್ಧನ್ ಪುರಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವರ್ಧನ್ ಪುರಿ ಅಂಬರೀಶ್ ಪುರಿಯ ಮೊಮ್ಮಗ. ಈ ಚಿತ್ರವು ಇಂದು ಫೆಬ್ರವರಿ 11 ರಂದು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಯಿತು. ಬಾಬಿ ಔರ್ ರಿಷಿ ಕಿ ಲವ್ ಸ್ಟೋರಿ ಯು.ಕೆ ಹಿನ್ನೆಲೆಯಲ್ಲಿ…

Read More
ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಹರಿಶ್ಚಂದ್ರ ಸತ್ಯಕ್ಕಾಗಿ ಪಟ್ಟ ಕ್ಲೇಶವನ್ನೆಲ್ಲಾ ನಾನೂ ಪಡಬೇಕು ಎಂದಿದ್ದ ಗಾಂಧೀಜಿ

ಗಾಂಧೀಜಿಯವರ ಆತ್ಮ ಕಥೆ ಅಥವಾ ನನ್ನ ಸತ್ಯಾನ್ವೇಷಣೆ ಪುಸ್ತಕ ಓದುತ್ತಿದ್ದೆ. ನಾವು ಗುಜರಾತ್ ಪ್ರವಾಸ ಹೋಗಿ ಬಂದು ಆಗಲೇ ಮೂರು ವರ್ಷ ಕಳೆದಿದೆ. ನಮ್ಮ ಅಕ್ಕ ಬಾವನವರು ಗುಜರಾತ್ ಪ್ರವಾಸ ಪ್ರಸ್ತಾಪಿಸಿದಾಗ ಆ ಪ್ರವಾಸಿ ಪಟ್ಟಿಯಲ್ಲಿ ನನ್ನನ್ನು ಆಕರ್ಷಿಸಿದ್ದು ಒಂದು ದ್ವಾರಕ ಮತ್ತೊಂದು ಪೋರ್‌ಬಂದರ್. ಮಹಾಭಾರತ ಕಥೆ ಓದಿದ್ದು ಟಿವಿ ದಾರಾವಾಹಿ ನೋಡಿದ್ದು ದ್ವಾರಕಾ ನೋಡಲು ಆಸಕ್ತಿ ಮೂಡಿಸಿದ್ದರೆ ಗಾಂಧೀಜಿಯವರ ಜನ್ಮಸ್ಥಳ ವೀಕ್ಷಣೆಗೆ ಅವರ ಆತ್ಮಕಥೆ ಪ್ರೇರಣೆ ಆಗಿತ್ತು. ನನ್ನ ಪತ್ನಿಯದು ಧಾರ್ಮಿಕ ನೋಟ ನನ್ನದು ಐತಿಹಾಸಿಕ…

Read More
ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಸತತ ಅಧ್ಯಯನ ಮೂಲಕ ಚುಟುಕು ಸಾಹಿತ್ಯದ ಶ್ರೀಮಂತಿಕೆ. ಜಿಲ್ಲಾ ಮಟ್ಟದ ೩ನೆಯ ಕವಿಗೋಷ್ಠಿಯಲ್ಲಿ ಕವಿ -ಶಿ.ಕಾ ಬಡಿಗೇರ ಸಲಹೆ

ಕೊಪ್ಪಳ: ಚುಟುಕು ಸಾಹಿತ್ಯಕ್ಕೆ ಅಪಾರ ಮಹತ್ವ ಇದೆ ಉದಯೋನ್ಮುಖ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುಟುಕು ಸಾಹಿತ್ಯ ಅಧ್ಯಯನ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರತ್ನಿಸಬೇಕೆಂದು ಹಿರಿಯ ಸಾಹಿತಿ ಶಿ.ಕಾ.ಬಡಿಗೇರ ಅಭಿಪ್ರಾಯಪಟ್ಟರು. ಅವರು ಭಾನುವಾರ ಸಮೀಪದ ಭಾಗ್ಯನಗರದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಯೋಜಿಸಿದ್ದ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಮುಕ್ತ ಚುಟುಕು ಕವಿಗೋಷ್ಠಿ ಚುಟುಕು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಅಖಂಡ ರಾಯಚೂರು ಜಿಲ್ಲೆ ಇದ್ದಾಗ ಕೊಪ್ಪಳ ಜಿಲ್ಲೆಯ ಅನೇಕ…

Read More
ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ

ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳದ ಶ್ರದ್ಧಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಧುಮತಿ ಪಟ್ಟಣಶೆಟ್ಟಿ ಅವರು ಸೇವಾಭಾರತಿಯ ಕಾರ್ಯವನ್ನು ಮೆಚ್ಚಿ ಮಾತನಾಡಿದರು….

Read More

ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ಫೆಬ್ರವರಿ-೮ ಶನಿವಾರದಂದು ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀ ರಾಜರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ವೇ||ಮೂ|| ಸಿದ್ದರಾಮಯ್ಯ ಗುರುವಿನ್, ಶ್ರೀ ವೇ||ಮೂ|| ಸಿದ್ದಯ್ಯ ಗುರುವಿನ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಶಾಸಕರು ಶ್ರೀ ಗಾಲಿ ಜನಾರ್ಧನ್ ರೆಡ್ಡಿ ಇವರು ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ೩೭ ವರ್ಷಗಳಿಂದ ಈ ಸಂಸ್ಥೆಯು ಶಿಕ್ಷಣ ನೀಡುತ್ತಾ ಬಂದಿರುವುದು ಅತ್ಯಂತ ಮಹತ್ವ…

Read More

ಗಂಗಾವತಿಯ ಕನ್ನಡ ಜಾಗೃತಿ ಭವನದಲ್ಲಿ ಫೆಬ್ರವರಿ-೧೩ ರಿಂದ ೨೪ ರವರೆಗೆ ಸಂಸ್ಕೃತ ಜ್ಞಾನ ಸಂಪಾದನಾ ಶಿಬಿರ

ಗಂಗಾವತಿ: ಶ್ರೀ ಹಾನಗಲ್ಲ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಅರಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ ಮತ್ತು ಕನ್ನಡ ಜಾಗೃತಿ ಸಮಿತಿ ಇವರ ಸಹಯೋಗದಲ್ಲಿ ಶ್ರೀ ಗುರು ಕುಮಾರೇಶ್ವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆಬ್ರವರಿ-13 ಗುರುವಾರದಿಂದ, 24 ಸೋಮವಾರದವರೆಗೆ ಪ್ರತಿದಿನ ಸಂಜೆ 5:30 ರಿಂದ 7:೦೦ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಸ್ಕೂಲ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಸಂಸ್ಕೃತ ಜ್ಞಾನ ಸಂಪಾದನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು…

Read More
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು-ಶಿವಸ್ವಾಮಿ.

ಗಂಗಾವತಿ: ನಗರದ ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ-೮ ಶನಿವಾರದಂದು ಕಾಲೇಜು ಹಬ್ಬ ಹಾಗೂ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಶ್ರೀ ಎ.ಎಂ.ಶಿವಸ್ವಾಮಿಯವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಆಗಿ ಹೋದ ಜೀವಪರ ಸಾಹಿತಿಗಳು, ಕವಿಗಳು, ದಾರ್ಶನಿಕರು, ಸಂತರು, ದಾಸರು ಇವರು ಹೇಳಿಕೊಟ್ಟ ಸಾಮರಸ್ಯದ ಬದುಕು ನಮ್ಮದಾಗಬೇಕು. ಇಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ನೆಮ್ಮದಿಯ ಹೊಸ ಭಾರತ ಕಟ್ಟವುದಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ವಿಷಯ…

Read More