VISHWAROOPA NEWS BLOG

ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಮಹಾಶಿವರಾತ್ರಿ ಅಂಗವಾಗಿ ಸಿದ್ದಿಕೆರೆಯಲ್ಲಿ ಬೇಡರ ಕಣ್ಣಪ್ಪ ನಾಮಫಲಕಕ್ಕೆ ಪೂಜಾ ಕಾರ್ಯಕ್ರಮ

ಗಂಗಾವತಿ: ನಗರದ ೪ನೇ ವಾರ್ಡ್ ಸಿದ್ದಿಕೆರೆಯಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಬೇಡರ ಕಣ್ಣಪ್ಪ ಭಾವಚಿತ್ರವಿರುವ ನಾಮಫಲಕಕ್ಕೆ ಗಂಗಾವತಿ ತಾಲೂಕ ಶ್ರೀಗುರು ಆದಿಕವಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲಾವಿದರ ಸಂಘದಿಂದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಸಂಘದ ಅಧ್ಯಕ್ಷರಾದ ಜೆ. ಸೋಮಪ್ಪ ಕವಿಗಳು ಪ್ರಕಟಣೆ ಮೂಲಕ ತಿಳಿಸಿದರು. ಅವರು ಮಹಾಶಿವರಾತ್ರಿಯ ದಿನ ಸಂಜೆ ೬ ಗಂಟೆಗೆ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಬೇಡರ ಕಣ್ಣಪ್ಪನು ಮಹಾಶಿವನ ಭಕ್ತನಾಗಿ ತನ್ನ ಕಣ್ಣುಗಳನ್ನು ದಾನ ನೀಡಿದ ದಿನವೇ ಮಹಾಶಿವರಾತ್ರಿಯಾಗಿದ್ದು,…

Read More
ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಶ್ರದ್ಧೆ ಭಕ್ತಿಯಿಂದ ಜರುಗಿದ ಕಾಲಜ್ಞಾನಿ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ.

ಗಂಗಾವತಿ: ಸಮೀಪದ ಶ್ರೀ ರಾಮನಗರದ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಗೋವಿಂದಾಂಬ ಸಮಿತ ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿಗಳವರ ಕಲ್ಯಾಣ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ. ಶ್ರದ್ಧೆ ಭಕ್ತಿಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ. ಶ್ರೀಕಾಂತ್ ನೇತೃತ್ವದಲ್ಲಿ. ಶ್ರೀ ವೀರ ಬ್ರಹ್ಮೇಂದ್ರ ಸ್ವಾಮಿ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವಿಶ್ವಕರ್ಮ ಸಮಾಜದ ದೇವಸ್ಥಾನ ಸಮಿತಿಯ ಯುವ ಮುಖಂಡ ರಾಮ ಬ್ರಹ್ಮ ದಂಪತಿಗಳಿಂದ ಮಹಾಸಂಕಲ್ಪ ಕಲ್ಯಾಣೋತ್ಸವ…

Read More
ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ…

Read More
ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮ

ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮ

ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಚನ್ನಬಸವ ಸ್ವಾಮಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯು ಗತಿಸಿದ 40 ವರ್ಷದ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುತ್ತದೆ. ಅದರಂತೆ ಇಂದು ಶಾಲೆಯಲ್ಲಿ ವಿಶೇಷವಾದ ಅಮ್ಮನ ಕೈ ತುತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಾಲೆಯ 350ಕ್ಕೂ ಹೆಚ್ಚು ಪಾಲಕರು ಶಾಲೆಗೆ ಆಗಮಿಸಿ ತಮ್ಮ ಮಕ್ಕಳೊಂದಿಗೆ ತಮ್ಮ ಅಮೃತದ ಕೈಗಳಿಂದ ತುತ್ತು ಮಾಡಿ ಮಕ್ಕಳಿಗೆ ಊಟ ಮಾಡಿಸಿದರು. ಕಾರ್ಯಕ್ರಮವು ಪಾಲಕರಿಂದಲೇ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಪ್ರಕಾಶ್ ಗೌಡ…

Read More
ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಗಂಗಾವತಿ: ನಗರದ ಶ್ರೀ ಕೊಟ್ಟೂರುಬಸವೇಶ್ವರ ದೇವಸ್ಥಾನ ಸಮಿತಿ ನೇತೃತ್ವದಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥನದಲ್ಲಿ ಇಷ್ಟಲಿಂಗ ಧೀಕ್ಷಾ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ ನಡೆಯಲಿದೆ ಎಂದು ಬಸವಕೇಂದ್ರದ ಗಂಗಾವತಿ ತಾಲೂಕ ಕಾರ್ಯದರ್ಶಿಯಾದ ಎ.ಕೆ. ಮಹೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯರು ಹಾಗೂ ಸುಳೇಕಲ್ ಬೃಹನ್ಮಠದ ಪೂಜ್ಯ ಶ್ರೀ ಭುವನೇಶ್ವರಯ್ಯ ತಾತನವರು ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಹೊಸಪೇಟೆ…

Read More
ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಗಂಗಾವತಿ: ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದ ಪವಿತ್ರ ಜಲವನ್ನು ಆರ್ಯವೈಶ್ಯ ಸಮಾಜದ ಬಾಂಧವರು ಸೇರಿದಂತೆ ಭಕ್ತಾದಿಗಳಿಗೆ ಸಮಾಜದ ಅಧ್ಯಕ್ಷೆ ರೂಪರಾಣಿ ರಾಯಚೂರುರವರು ಸೋಮವಾರದಂದು ವಿತರಿಸಿದರು. ನಗರದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರದಂತೆ ನಡೆಸಲಾಗುತ್ತಿರುವ ಭಜನೆ, ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ, ಧಾರ್ಮಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಕರ್ತನ ಸನ್ಮಾನವನ್ನು ದೇವಸ್ಥಾನದ ಅರ್ಚಕ ದಿಗಂಬರ್ ಭಟ್ ನೆರವೇರಿಸಿದರು. ಬಳಿಕ ಜಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷೆ ರೂಪರಾಣಿಯವರು, ತಾವು…

Read More
ಪರಿಮಳ ಬಸವರಾಜ ಬಡಿಗೇರ ಅವರಿಗೆ ರಾಜ್ಯಮಟ್ಟದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನ

ಪರಿಮಳ ಬಸವರಾಜ ಬಡಿಗೇರ ಅವರಿಗೆ ರಾಜ್ಯಮಟ್ಟದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನ

ಯಲಬುರ್ಗಾ: ತಾಲೂಕಿನ ಗುನ್ನಾಳ ಗ್ರಾಮದ ಆಶಾ ಕಾರ್ಯಕರ್ತೆ ಪರಿಮಳ ಬಸವರಾಜ ಬಡಿಗೇರ ಅವರಿಗೆ ಧಾರವಾಡದಲ್ಲಿ ರವಿವಾರ ನಡೆದ ರಾಜ್ಯಮಟ್ಟದ ಪ್ರಪ್ರಥಮ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಧಾರವಾಡದ ಪಾಟೀಲ್ ಪುಟ್ಟಪ್ಪ ಸಭಾಭವನ, ವಿದ್ಯಾವರ್ಧಕ ಸಂಘ ಕಲಾ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಪರಿಮಳ ಬಸವರಾಜ ಬಡಿಗೇರ ಅವರು ಸುಮಾರು ವರ್ಷದಿಂದಲೂ ಆಶಾ ಕಾರ್ಯಕರ್ತೆಯಾಗಿ ಉತ್ತಮ ಕರ್ತವ್ಯನಿರ್ವಹಿಸಿದ ಪ್ರಯುಕ್ತ ಸಮಾಜದ ವತಿಯಿಂದ ಅವರಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ…

Read More
ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ಸೈಕಾಲಜಿ ಪ್ರಕಾರ, ವ್ಯಕ್ತಿಗಳು ನಡೆಯುವಾಗ ಫೋನ್ ನೋಡುತ್ತಾ ನಡೆದರೆ ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ಪರಿಣಾಮಗಳು

ನಿಮ್ಮ ಫೋನ್ ಅನ್ನು ನೋಡುತ್ತಾ ನಡೆಯುವುದರಿಂದ ಮಾನಸಿಕ ಮತ್ತು ದೈಹಿಕ ಪರಿಣಾಮಗಳ ಬಗ್ಗೆ ತಿಳಿಯಿರಿ ಸಾಮಾನ್ಯವಾಗಿ ಜನರು ನಡೆಯುವಾಗ ತಮ್ಮ ಫೋನ್ ನೋಡುತ್ತಾ ನಡೆಯುತ್ತಿದ್ದಾರೆ. ಪ್ರತಿದಿನ ತಲೆ ತಗ್ಗಿಸಿ ಫೋನ್‌ ಆಪರೇಟ್‌ ಮಾಡುತ್ತಾ ನಡೆದಾಡುವ ಜನರನ್ನು ನಾವು ಕಾಣುತ್ತೇವೆ. ನಮ್ಮ ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಇದು ಸಾಮಾನ್ಯವೆಂದು ತೋರುತ್ತಿದೆ. ಆದರೆ ಮನೋವಿಜ್ಞಾನವು ಈ ಅಭ್ಯಾಸ ನಿಮ್ಮ ದೇಹ ಮತ್ತು ಮನಸ್ಸು ಗೊಂದಲಕ್ಕೊಳಗಾಗುತ್ತದೆ ಎಂದು ಹೇಳುತ್ತದೆ. ಸಂದೇಶಗಳನ್ನು ಪರಿಶೀಲಿಸುವುದರ ಜೊತೆಗೆ, ನೀವು ಹೇಗೆ ಚಲಿಸುತ್ತಿದ್ದೀರಿ ಮತ್ತು ನೀವು ಹೇಗೆ…

Read More
ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಗಂಗಾವತಿ: ಭಾರತ ಸೇವಾದಳ ಮತ್ತು ಶಿಕ್ಷಕರ ಸಂಘದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಇಲಾಖೆ ರೂಪಿಸುವ ಕಾರ್ಯಕ್ರಮಗಳಾದ ವಿಶೇಷ ತರಗತಿ, ಗುಂಪು ಅಧ್ಯಯನ, ೨೦ ಅಂಶಗಳ ಕಾರ್ಯಕ್ರಮಗಳು, ಪೂರ್ವಸಿದ್ಧತಾ ಪರೀಕ್ಷೆಗಳು, ಭೌತಿಕ ಸೌಕರ್ಯಗಳು ಸೇರಿದಂತೆ ವಿನೂತನ ಯೋಜನೆಗಳೊಂದಿಗೆ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆ ಬಸಾಪಟ್ಟಣದಲ್ಲಿ ಭಾರತ ಸೇವಾದಳ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ…

Read More
ಮಕ್ಕಳು ದೇಶದ ಆಸ್ತಿ: ಭಾರತ್ ಸೇವಾದಳ ತಾಲೂಕ ಅಧ್ಯಕ್ಷ ಸುರೇಶ್ ಸಿಂಗನಾಳ

ಮಕ್ಕಳು ದೇಶದ ಆಸ್ತಿ: ಭಾರತ್ ಸೇವಾದಳ ತಾಲೂಕ ಅಧ್ಯಕ್ಷ ಸುರೇಶ್ ಸಿಂಗನಾಳ

ಗಂಗಾವತಿ: ಮಕ್ಕಳು ದೇಶದ ಆಸ್ತಿ. ಅವರ ಮನಸ್ಸಿನಲ್ಲಿ ಜಾತಿ-ಮತ-ಭಾಷೆಯ ಭೇದಭಾವ ಬರದಂತೆ ಕಾಪಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಧಾರ್ಮಿಕ ಐಕ್ಯತೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಭಾರತ ಸೇವಾದಳ ಸಮಿತಿಯು ಮಕ್ಕಳ ನಾಯಕತ್ವ ಶಿಬಿರವನ್ನು ಹಮ್ಮಿಕೊಂಡಿದೆ ಎಂದು ತಿಳಿಸುತ್ತಾ, ಮಕ್ಕಳಲ್ಲಿ ದೇಶಭಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಿದೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ನಾಯಕತ್ವ ಶಿಬಿರದ ಧ್ವಜಾರೋಹಣವನ್ನು ನೆರವೇರಿಸಿ ತಾಲೂಕು ಸಮಿತಿಯ ಅಧ್ಯಕ್ಷರಾದ ಸುರೇಶ…

Read More