೩೨ ಸಾಧಕರಿಗೆ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಶ್ಲಾಘನೀಯ: ಲಲಿತಾ ರಾಣಿ
ಗಂಗಾವತಿ: ವಿವಿಧ ಕ್ಷೇತ್ರಗಳಲ್ಲಿ ೩೨ ಸಾಧಕರನ್ನು ಗುರುತಿಸಿ, ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು. ಅವರು ಭಾನುವಾರ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀ ಚನ್ನಬಸವ ಪ್ರಕಾಶನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಸಳ್ಳಿಯ ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಮಹಿಳಾ ಕವನ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ದಿವಂಗತ ವೇದವ್ಯಾಸರಾವ್ ನವಲಿ…
