ಆರೋನ್ ಮಿರಜ್ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ
ಗಂಗಾವತಿ: ನವೆಂಬರ್-01 ಶನಿವಾರ ಆರೋನ್ ಮಿರಜ್ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೈಕ್ ರೈಲಿಯ ಮೂಲಕ ಕನ್ನಡ ಮಾತೆಯನ್ನು ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನವನ್ನು ಹೆಚ್ಚಿಸಲು ರಂಗೋಲಿಗಳ ಮೂಲಕ ವ್ಯಾಕರಣ ಹಾಗೂ ಕವಿಗಳ ಭಾವಚಿತ್ರಗಳನ್ನು ಮಕ್ಕಳಿಂದ ಬಿಡಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಬೆಳಗಿಸುವುದರ ಮೂಲಕ ಸಂಸ್ಥೆಯ ಕಾರ್ಯದರ್ಶಿಗಳಾದ ರುಬಿನ್ ಮಿರಜ್ಕರ್ ಉದ್ಘಾಟಿಸಿ “ಕಲಿಯೋಕೆ ಕೋಟಿ ಭಾಷೆ, ಆದರೆ ಆಡೋಕೆ ಒಂದೇ ಭಾಷೆ…
