VISHWAROOPA NEWS BLOG

ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ದಾರದಿಂದ ದಾರಿತೋರಿ, ನೀರಿನಿಂದ ಕಷ್ಟಕಾರ್ಪಣ್ಯ ಕಳೆಯುತ್ತಿದ್ದ ಶ್ರೀ ನವಣಕ್ಕಿ ನಾಗಪ್ಪ ತಾತನವರು: ಹೆಬ್ಬಾಳ ಶ್ರೀಗಳು

ಗಂಗಾವತಿ: ಗಂಗಾವತಿಯ ಸರ್ವ ಜನಾಂಗದ ದೈವೀ ಪುರುಷರಾದ ಪರಮಪೂಜ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರು ತಮ್ಮ ಮಂತ್ರಶಕ್ತಿಯಿಂದ ದಾರ ನೀಡಿ, ಬದುಕಿನ ದಾರಿ ತೋರಿಸುತ್ತಿದ್ದರು, ಜೊತೆಗೆ ಕಷ್ಟ, ಸಂಕೋಲೆಗಳನ್ನು ಹೊತ್ತುತಂದ ಭಕ್ತಾದಿಗಳಿಗೆ ಮಂತ್ರಿಸಿದ ನೀರು ನೀಡುವ ಮೂಲಕ ಅವರ ಕಷ್ಟಗಳನ್ನು ಕಳೆಯುತ್ತಿದ್ದರು ಎಂದು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರು ಏಪ್ರಿಲ್-೮ ಮಂಗಳವಾರ ಶ್ರೀ ನವಣಕ್ಕಿ ನಾಗಪ್ಪ ತಾತನವರ ಶಿಲಾ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದರು. ನವಣಕ್ಕಿ ನಾಗಪ್ಪನವರ ೨೧ನೇ…

Read More
ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು….

Read More
ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು  ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ: ರಾಜ್ಯ ಸರ್ಕಾರ ನೀಡಲ್ಪಡುವ ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಮಾಯಮ್ಮ ಆಯ್ಕೆ. ಮಾಯಮ್ಮ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ಪೌರಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಏಪ್ರಿಲ್-೫ ರಂದು ಶನಿವಾರ ವಿಧಾನಸೌಧದಲ್ಲಿ ಸರ್ಕಾರದಿಂದ ಪ್ರಶಸ್ತಿ ಪಡೆದಿರುತ್ತಾರೆ. ಇದಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯ ಅಧ್ಯಕ್ಷರಾದ ಭಾರಧ್ವಾಜ್ ಹರ್ಷ ವ್ಯಕ್ತಪಡಿಸಿದರು. ಪ್ರಶಸ್ತಿಗೆ ಭಾಜನರಾದ ಮಾಯಮ್ಮ ಅವರನ್ನು ಇಂದು ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕ್ರಾಂತಿಚಕ್ರ ಬಳಗದವತಿಯಿಂದ ಗೌರವಯುತವಾಗಿ ಅಭಿನಂದನೆ ಸಲ್ಲಿಸಲಾಯಿತು.

Read More
ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು…

Read More
ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ.

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ.

ಗಂಗಾವತಿ: ಏಪ್ರಿಲ್-೫ ಶನಿವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರಯುಕ್ತ ಡಾ. ಬಾಬು ಜಗಜೀವನರಾಮ್‌ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಾಧನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಇಬ್ರಾಹಿಂ ಮೇಸ್ತ್ರಿ, ಚಾಂದ್‌ಪಾಷಾ ಮುರಾಹರಿನಗರ, ಸೋಮು ಜಿ., ರಸೂಲ್, ಖಾದರಭಾಷಾ,…

Read More
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…

Read More
ಜಗದ್ಗುರು ವಾಣಿ

ಜಗದ್ಗುರು ವಾಣಿ

ನಮ್ಮ ಜೀವನದಲ್ಲಿ ಹಠ, ಆಸೆ, ಅಹಂಕಾರ ಈ ಮೂರು ಇರಬಾರದು, ಯಾವುದಕ್ಕೂ ಹಠ ಇರಬಾರದು. ಯಾವುದರ ಮೇಲು ಆತಿ ಆಸೆ ಇರಬಾರದು ಮತ್ತು ಅದು ನನ್ನದು, ನನ್ನದು ಅಷ್ಟೇ ಎಂಬ ಅಹಂಕಾರ ಇರಬಾರದು. ಇದರಿಂದ ಮನಃಶಾಂತಿ ಸಿಗುವುದಿಲ್ಲ. ನಾನು ಹೇಳಿದ್ದೆ ನಡೀಬೇಕು ಅಂತ ಇಲ್ಲ, ಎಲ್ಲವು “ಈಶ್ವರನ ಇಚ್ಛೆ” ಹೇಗೆ ಇದೆಯೋ ಹಾಗೆ ನಡೆಯುವುದು. ನಾವು ನೀವು ಹೇಳಿದ ಹಾಗೆ ಏನು ನಡೆಯೋಲ್ಲ ಎಲ್ಲವು “ಈಶ್ವರನ ಸಂಕಲ್ಪ”ಹೇಗಿದೆಯೋ ಹಾಗೆ ನಡೆಯುತ್ತದೆ. ಅದಕ್ಕೆ ನಾವು ತಲೆ ಭಾಗಬೇಕೆ ವಿನಃ…

Read More
ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More
ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಗಂಗಾವತಿ: ಮಾರ್ಚ್-೩೦ ಭಾನುವಾರ ತಾಲೂಕಿನ ಕಿಷ್ಕಿಂದೆಯ ಅಂಜನಾದ್ರಿ ಪರ್ವತದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮತ್ತು ವೈಭವದಿಂದ ನಡೆಯಿತು. ಬೆಳಗ್ಗೆಯಿಂದಲೇ ಶ್ರೀ ಲಕ್ಕಡ ದಾಸ್ ಅವರ ಮೂರ್ತಿಗೆ ವಿಶೇಷ ಪೂಜೆ ಅಭಿಷೇಕ ಕಾರ್ಯಕ್ರಮಗಳು ಹೈದರಾಬಾದಿನ ಪ್ರಮುಖ ಪಕ್ಷದ ಜಗದೀಶ್ ಸಾಂಕಲಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದವು. ಭಕ್ತಾದಿಗಳಾದ ದೇವ ನಾರಾಯಣ ಸಾಂಕ್ಲಾ, ಶಿವಪ್ರಸಾದ್,…

Read More
ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರ್ಕಾರ ಬೆಂಗಳೂರು ವತಿಯಿಂದ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನುಮಾರ್ಚ್‌ 27 ಗುರುವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರು ಶ್ರೀ ಎ. ಆರ್. ಗೋವಿಂದಸ್ವಾಮಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 25 ವರ್ಷಗಳಿಂದ ಜಾನಪದ ಕ್ಷೇತ್ರ ಮತ್ತು ಬಂಜಾರ ಗಾಯನ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ದಾವಣಗೆರೆ ತಾಲೂಕು ಚಿನ್ನಸಮುದ್ರ ಗ್ರಾಮದ ಹೆಮ್ಲ ನಾಯ್ಕ್…

Read More