SANMATHI PATTAR

ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಒಂದು ತಿಂಗಳ ಕಾಲ ಆಯ್ದ ಮೂವತ್ತು ಮನೆಗಳಲ್ಲಿ ದಿನನಿತ್ಯ ವಚನ ನಿರ್ವಚನ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದ ಮೊದಲ ದಿನ ಕುವೆಂಪು ಬಡಾವಣೆಯ ವಕೀಲ ನಾಗರಾಜ್ ಗುತ್ತೇದಾರ ಅವರ ಮನೆಯಲ್ಲಿ ವಚನ ನಿರ್ವಚನ ಆರಂಭವಾಗಲಿದೆ. ಕಾರಟಗಿಯ ಶ್ರೀಮತಿ ಲೀಲಾ ಮಲ್ಲಿಕಾರ್ಜುನ ಅವರು “ಇಳೆ ನಿಂಬು ಮಾವು ಮಾದಲಕ್ಕೆ ಹುಳಿ ನೀರನೆರೆದವದಾರಯ್ಯಾ” ಎನ್ನುವ ಅಕ್ಕಮಹಾದೇವಿಯ ವಚನದ ಕುರಿತು ಭಾಷಣ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜೆ. ನಾಗರಾಜ ವಹಿಸಲಿದ್ದು, ಹಲವರು ಮುಖ್ಯ…

Read More
ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಗಂಗಾವತಿ: ತಾಲೂಕಿನ ಗಾಳೆಮ್ಮಗುಡಿ ಕ್ಯಾಂಪ್‌ನ ಬೇತ್ಸಥಾ ಮೆಥೋಡಿಸ್ಟ್ ಚರ್ಚ್‌ನ ಸಭಾ ಪಾಲಕರಾದ ರೇ. ಎಡ್ವಿನ್ ಬಾಬು ಅವರು ಸುಮಾರು ಹನ್ನೊಂದು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜುಲೈ-೨೦ ಭಾನುವಾರ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದಿದರು. ಅವರು ಕ್ರಿಸ್ತನ ಮಾರ್ಗಗಳನ್ನು ಬೋಧನೆ ಮಾಡುತ್ತಾ, ಆತನ ದೇವೋಕ್ತಿಗಳನ್ನು ಜನರಿಗೆ ತಿಳಿಸಿ ಯೇಸುವಿನ ಸಂದೇಶಗಳನ್ನು ಭಕ್ತಿಯಿಂದ ಪ್ರಚಾರ ಮಾಡಿದರು. “ನಿನ್ನಂತೆಯೇ ನಿನ್ನ ನೆರೆಹೊರೆಯವರನ್ನು ಪ್ರೀತಿಸು” ಎಂಬ ಕ್ರಿಸ್ತನ ಉಪದೇಶಗಳನ್ನು ಭೋದನೆ ಮಾಡುತ್ತಾ, ಪ್ರೀತಿಯ ಜೀವನ ನಡೆಸುವಂತೆ ಉತ್ಸಾಹ ನೀಡಿದ್ದಾರೆ. “ನೀನು ನಿನ್ನ…

Read More
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ನಗರದ ಪ್ರತಿಷ್ಠಿತ ಸಂಕಲ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಕಲ್ಪ ಸಂಸ್ಥೆಯ ಕಾರ್ಯಾಧ್ಯಕ್ಷರು ಮತ್ತು ವಕೀಲರಾದ ನಾಗರಾಜ್ ಎಸ್. ಗುತ್ತೇದಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಚುನಾವಣೆಗಳು ಅಧಿಕಾರವನ್ನು ಶಾಂತಿಯುತವಾಗಿ ಒಬ್ಬರಿಂದ ಒಬ್ಬರಿಗೆ ಹಸ್ತಾಂತರಿಸಲು ಸಹಾಯಮಾಡುತ್ತವೆ ಎಂಬುದನ್ನು ಅವರು…

Read More
ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯ ಶ್ರೀನಿವಾಸ್ ಅವರು ಚಿಕ್ಕವಯಸ್ಸಿನಿಂದಲೂ ಜನಪದ ಹಾಡು, ತಂಬೂರಿ ಶೈಲಿಯ ಕತೆಗಳನ್ನು ಹಾಡುತ್ತಾ ಬಂದಿದ್ದಾರೆ. ಸಿದ್ದಪ್ಪಾಜಿ ಪವಾಡಗಳು, ಮಂಟೇಸ್ವಾಮಿ ಕತೆ ಬಿಳಿಗಿರಿರಂಗನ ಕತೆ, ಮುಡುಕುತೊರೆ ಮಲ್ಲಿಕಾರ್ಜುನನ ಕತೆ, ಮಲೆಮಹದೇಶ್ವರ ಕತೆ. ಹೀಗೆ ಹಲವಾರು ಕತೆಗಳನ್ನು ತಾಳ ತಂಬೂರಿ ಗಗ್ಗರದ ನಾದಕ್ಕೆ ತಕ್ಕಂತೆ ಹಾಡುತ್ತಾರೆ. ಸರಿಸುಮಾರು ಐವತ್ತಕ್ಕೂ ಹೆಚ್ಚು ತತ್ವಪದಗಳನ್ನು, ಅಂತಿಮಯಾತ್ರೆಯ ಭಜನೆ ಪದಗಳನ್ನು, ಶೋಕಗೀತೆಗಳನ್ನು ಹಾಡುವಲ್ಲಿ ಕರಗತ ಮಾಡಿಕೊಂಡಿದ್ದಾರೆ. ಇವರ ಮಾಂಬಳ್ಳಿ ಮನೆಯ ಪಕ್ಕ ಮಹದೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನ, ಆ…

Read More
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚೆಗೆ ಹಾಸನ ಸೇರಿ ರಾಜ್ಯದ ಹಲವೆಡೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ, ಇದು ಆತಂಕಕಾರಿ ವಿಷಯವಾಗಿದೆ. ಅದೇ ರೀತಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ವೈದ್ಯ ಡಾ|| ಜಿ. ಚಂದ್ರಪ್ಪ ಹೇಳಿದರು. ಇಂತಹ ಮಾರಕ ರೋಗಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜುಲೈ-೧೬…

Read More
ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಗಂಗಾವತಿ: ಜುಲೈ-೧೫ ಮಂಗಳವಾರ, ಬೆಂಗಳೂರಿನ ಸದಾಶಿವನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಕಲಾವಿದ ಹಾಗೂ ಪತ್ರಕರ್ತ ಚನ್ನಬಸವ ಕೊಟಗಿಗೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಚಿತ್ರ ಸಂತೆ ಪತ್ರಿಕೆಯ ಸಂಪಾದಕರಾದ ಗಿರೀಶ್ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ವರ್ಷದಿಂದ ವರ್ಷಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಬಾರಿ…

Read More
ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಗಂಗಾವತಿ: ಜುಲೈ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ 9ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ 26 ಕ್ರೀಡಾಪಟುಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರೇಗೌಡ ಪೊಲೀಸ್ ಪಾಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮ್ಮ ಸಂಸ್ಥೆಯ 26 ಕರಾಟೆ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಅಹಾನ್, ಸಾತ್ವಿಕ್, ಕೃಷ್ಣ, ರಿಷಿಕ್, ಚಿನ್ನಪ್ಪ, ಅವೇಜ್,…

Read More
ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ನಗರದಲ್ಲಿರುವ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮–೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಜೊತೆಗೆ ಸ್ನೇಹಿತರ ಸಮ್ಮಿಲನ ಕೂಡ ಆಯೋಜಿಸಲಾಗಿದ್ದು, ಶಾಲಾ ಆವರಣದಲ್ಲಿ ಭಾವುಕ ಕ್ಷಣಗಳು ಮೆಲುಕು ಹಾಕಿದವು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ಉದ್ಘಾಟಿಸಿದರು. ಅವರು ಮಾತನಾಡಿ, ಶಾಲೆಯ ೧೨೦ನೇ ವಸಂತದ ಆರಂಭ ಈ ಸಂಧರ್ಭದಲ್ಲಿ ಬಹುಮಾನವಾಗಿದೆ ಎಂದರು. ಈ ಹಳೆಯ ವಿದ್ಯಾರ್ಥಿಗಳ ಪ್ರೀತಿ, ನೆನೆಪುಗಳು ಇಂತಹ ಗುರುವಂದನಾ ಕಾರ್ಯಕ್ರಮದ ಮೂಲಕ ವ್ಯಕ್ತವಾಗಿವೆ ಎಂದೂ…

Read More
ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ. ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು. ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ. ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ. ಇವರು…

Read More
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…

Read More