ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ. ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ…

Read More
ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಕಲೆಯು ಮಾನವನ ಹುಟ್ಟಿನೊಂದಿಗೆ ಬೆಳೆದು ಬಂದ ಚಮತ್ಕಾರ

ಒಂದು ಕಾಲದ ಸಂಸ್ಕೃತಿಯೊಂದಿಗೆ ಸಂಬಂಧ ಜೋಡಿಸುವ ಸಂಪರ್ಕ ಸಾಧನೆಯಾಗಿರುವ ಭಾಷೆಯಂತೆ ಕಲೆಯೂ ಸಂಪರ್ಕ ಮಾಧ್ಯಮ. ಕಲೆಯು ಮಾನವನ ಹುಟ್ಟಿನೊಂದಿಗೆ ದೈವದತ್ತವಾಗಿ ಬೆಳೆದು ಬಂದ ಚಮತ್ಕಾರ ಎಂದು ಸಾಹಿತಿ ಗೊರೂರು ಅನಂತರಾಜು ತಿಳಿಸಿದರು. ಹಾಸನದ ಒಡನಾಡಿ ಚಿತ್ರಕಲಾ ಬಳಗ ಹಾಸನಾಂಬ ಕಲಾಕ್ಷೇತ್ರದ ಹೊರಂಗಣದಲ್ಲಿ ಭಾನುವಾರ ಹಾಗೂ ಸೋಮವಾರದಂದು ಏರ್ಪಡಿಸಿದ ಕಲಾವಿದ ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ವಸಂತಕುಮಾರ್ ಡ್ರಾಯಿಂಗ್ ಶೀಟ್ ಪೆನ್ಸಿಲ್ ವರ್ಕ್ಸನಲ್ಲಿ ರಚಿಸಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಕತೆಗಾರ್ತಿ ಶ್ರೀಮತಿ ಭಾನು ಮುಷ್ತಾಕ್,…

Read More
ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಮೈಸೂರು ಶೋಭಾರಾಣಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಹಾಸನ: ಹಾಸನದ ಚಿತ್ಕಲಾ ಪೌ೦ಡೇಶನ್ ವತಿಯಿಂದ ಏರ್ಪಡಿಸಿರುವ ಏಕ ವ್ಯಕ್ತಿಚಿತ್ರ ಕಲಾ ಪ್ರದರ್ಶನಕ್ಕೆ ಕದಂಬ ಸೈನ್ಯ ಕನ್ನಡ ಪರ ಸಂಘಟನೆಯ ರಾಜ್ಯಾಧ್ಯಕ್ಷರು ಬೇಕ್ರಿ ರಮೇಶ್, ಸಾಹಿತಿ ಗೊರೂರು ಅನಂತರಾಜು, ಚಿತ್ರ ಕಲಾವಿದ ಯಾಕೂಬ್, ಉಪನ್ಯಾಸಕರು ಎ.ರಾಮಮೂರ್ತಿ ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್ ಏಪ್ರಿಲ್-25‌ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿ.ಎಸ್ ದೇಸಾಯಿಯವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಚಿತ್ಕಲಾ ಫೌಂಡೇಶನ್ ವತಿಯಿಂದ ಹಾಸದ ಜನತೆಗೆ ಶೋಭಾ ರಾಣಿ ಅವರ ಕಲಾಕೃತಿಗಳನ್ನು ಪರಿಚಯಿಸುವ ಉದ್ದೇಶದಿಂದ…

Read More
ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಉಮೇಶ್ ನಾಯ್ಕ್ ಗೆ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರ್ಕಾರ ಬೆಂಗಳೂರು ವತಿಯಿಂದ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನುಮಾರ್ಚ್‌ 27 ಗುರುವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರು ಶ್ರೀ ಎ. ಆರ್. ಗೋವಿಂದಸ್ವಾಮಿರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 25 ವರ್ಷಗಳಿಂದ ಜಾನಪದ ಕ್ಷೇತ್ರ ಮತ್ತು ಬಂಜಾರ ಗಾಯನ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ದಾವಣಗೆರೆ ತಾಲೂಕು ಚಿನ್ನಸಮುದ್ರ ಗ್ರಾಮದ ಹೆಮ್ಲ ನಾಯ್ಕ್…

Read More
ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ಬೆಂಗಳೂರು: ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗ ತಂಡ ಮೂರು ದಿನ ಯುಗಾದಿ ನಾಟಕೋತ್ಸವವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ – ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ – ಎಂಡ್ ಇಲ್ಲದ ಬಂಡ ಅವತಾರ – ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ ಮಲ್ಲೇಶ್ವರಂ ಬಡಾವಣೆಯ ಆಪ್ತ ರಂಗಮಂದಿರದಲ್ಲಿ ನಡೆಯಿತು. ರಂಗ ಉಪನ್ಯಾಸದಲ್ಲಿ ಪ್ರಸ್ತುತ ಕನ್ನಡ ರಂಗಭೂಮಿ ಕುರಿತು ನಾಟಕಕಾರ…

Read More
ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ…

Read More
ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ…

Read More
ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಮಾರ್ಚ್‌ -16 ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ೫ ವರ್ಷಗಳ ಅವಧಿಗೆ ಮಧು ನಾಯ್ಕ ಲಂಬಾಣಿಯವರನ್ನು ಅಧ್ಯಕ್ಷರನ್ನಾಗಿ ಮರುಆಯ್ಕೆ ಮಾಡಲಾಯಿತು. ಸಂಘವು ತಮ್ಮ ೫ ವರ್ಷದ ಅವಧಿಯಲ್ಲಿ ಹಲವಾರು ನೂತನ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ ಕರ್ನಾಟಕ ರಾಜ್ಯದ ಮನೆ ಮಾತಾಗಿದೆ. ಕೇವಲ ಸಾಹಿತ್ಯ ಕೃಷಿಗಾಗಿ ಸೀಮಿತವಾಗಿರದೇ ರೈತರಿಗೆ ಸಲಹೆ, ಆರೋಗ್ಯ ಮಾಹಿತಿ, ಸೈನಿಕರಿಗೆ ಗೌರವ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಾರ್ಯಗಳನ್ನು ಹಲವಾರು…

Read More
ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಮಾರ್ಚ್ ೧೬ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ…

Read More
ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು…

Read More