ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ಸುಂದರೇಶ ಡಿ ಉಡುವಾರೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾಕುಂಚ ವಿಭಿನ್ನ ಕಾರ್ಯಕ್ರಮಗಳನ್ನು ಹಾಗೂ…

Read More
ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ…

Read More
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ)ಯ ಸರ್ವ ಸದಸ್ಯರ 8ನೇ ವಾರ್ಷಿಕ ಮಹಾಸಭೆಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿತು.ಸಭೆಯಲ್ಲಿ ಇತ್ತೀಚೆಗೆ ಕೀರ್ತಿಶೇಷರಾದ ಹಾಸನದ ಹಿರಿಯ ಕಲಾವಿದರಾದ ಚೆಲುವೆಗೌಡರು, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ, ಕಾದಂಬರಿಕಾರರಾದ ಶ್ರೀ ಎಸ್. ಎಲ್ ಭೈರಪ್ಪ, ಗಾಯಕರಾದ ಹಾಸನ ಬಾಬು ಹಾಗೂ ಹರಿಕಥಾ ವಿದ್ವಾಂಸರು ಹಾಗೂ ಪೌರಾಣಿಕ ರಂಗ ನಿರ್ದೇಶಕರಾದ ಚಂದ್ರಚಾರ್ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯ ಆಗುಹೋಗುಗಳ ವರದಿಯ ನಂತರ ಕಲಾವಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಲವು…

Read More
ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್‌-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ‌ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ‌ ಪ್ರಕಾರವು ರಚಿಸುವುದಾಗಿದೆ ಎಂದು‌ ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು. ಪ್ರಾಸ್ತಾವಿಕ…

Read More
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ…

Read More
ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೋತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಧಕರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಶಸ್ತಿ ಫಲಕ, ಸ್ಮರಣಿಕೆ, ಶಾಲು, ಫಲ ತಾಂಬೂಲಗಳನ್ನು ನವೆಂಬರ್ 9ರ ಭಾನುವಾರ ಹಾಸನದ ಎವಿಕೆ ಕಾಲೇಜು ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಲೇಖಿಕಾ ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀಮತಿ ಶೈಲಜಾ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರು:…

Read More
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…

Read More
ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯….

Read More
ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ಹಾಸನ:ಸೆ-24: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ರವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 26-07-1934 ರಲ್ಲಿ ಜನಿಸಿದರು. ಆನೇಕ ಪ್ರಶಸ್ತಿಗಳಾದ ಸರಸ್ವತಿ ಸನ್ಮಾನ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಆನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಅವರು ಲೇಖಕರಾಗಿ, ವಿಮರ್ಶಕರಾಗಿ, ಅಧ್ಯಾಪಕರಾಗಿ, ಕಥೆ, ಕಾಂದಬರಿ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.1999 ರಲ್ಲಿ ಕನಕಪುರದಲ್ಲಿ ನಡೆದ 67 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ನೂರಾರು ಕಾದಂಬರಿ…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More