ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಅರಸೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಡಾ.ಬಸವರಾಜ್ ಆಯ್ಕೆ

ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ.

ಹಾಸನ ಜಿಲ್ಲಾ ಘಟಕವು ಸುಂದರೇಶ ಡಿ ಉಡುವಾರೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾಕುಂಚ ವಿಭಿನ್ನ ಕಾರ್ಯಕ್ರಮಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಲವಾ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ನೀಡುತ್ತಾ ಎಲೆ ಮರೆ ಕಾಯಿಯಂತಿರುವ ನೂರಾರು ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಸುತ್ತಾ ಬಂದಿದೆ.

ಪ್ರಸ್ತುತ: ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾಘಟಕದ ಅರ ಅರಸೀಕೆರೆ ತಾಲ್ಲೂಕಿನ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ  ಬಸವರಾಜ್ ರವರನ್ನು ನೇಮಿಸಿ ರಾಜ್ಯಾಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ಅವರು ಅನುಮೋದನೆ ಮಾಡಿದ್ದಾರೆ.

ಡಾ. ಬಸವರಾಜ್ ರವರು ಸಹಾಯಕ ಪ್ರಾಧ್ಯಾಪಕರಾಗಿ ವಿವೇಕಾನಂದ ಶಿಕ್ಷಣ ಕಾಲೇಜು ಅರಸೀಕೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು. ಶಿಕ್ಷಣ ತಜ್ಞರು, ಪರಿಸರವಾದಿಗಳು, ವೈಚಾರಿಕ ಚಿಂತಕರು ಆಗಿರುವ ಡಾ.ಬಸವರಾಜ್ ಕಳೆದ ಹತ್ತು ವರ್ಷಗಳಿಂದ ಅರಸೀಕೆರೆಯಲ್ಲಿ ವಿವಿದ ಕನ್ನಡಪರ ಹಾಗೂ ವೈಚಾರಿಕ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ನಾಡು ನುಡಿ, ಭಾಷೆ ಕನ್ನಡ ತಾಯಿಯ ಸೇವೆಯನ್ನು ನಿಸ್ವಾರ್ಥದಿಂದ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಡಿ.ಉಡುವಾರೆ, ಗೌರವಾಧ್ಯಕ್ಷರಾದ ಶ್ರೀ ವೇಂಕಟೇಶ ಉದಯ ವರದಿ ಪತ್ರಿಕೆಯ ಸಂಪಾದಕರು ಹಾಸನ, ಡಾ. ಲೋಕೇಶ ಉಪನ್ಯಾಸಕರು ಹೊಳೆನರಸೀಪುರ, ಡಾ. ಬರಳು ಶಿವರಾಮ ಚನ್ನರಾಯಪಟ್ಟಣ ತಾಲ್ಲೂಕು. ಡಾ. ಹರೀಶ್ ಉಪನ್ಯಾಸಕರು ಅರಸೀಕೆರೆ. ಡಾ. ಗಿರೀಶ್ ಮರಡಿ ಉಪನ್ಯಾಸಕರು ಹಾಸನ. ಕಾರ್ಯದರ್ಶಿಗಳಾದ ದಿಬ್ಬೂರು ರಮೇಶ, ಸಂಘಟನಾ ಕಾರ್ಯದರ್ಶಿಗಳಾದ ಶಿವಕುಮಾರ ಆರ್. ಅಧ್ಯಕ್ಷರು:ವಿಶ್ವಾಸ್ ಡಿ. ಗೌಡರು ಸಕಲೇಶಪುರತಾಲ್ಲೂಕು. ಪರಮೇಶ್ ಮಡಬಲು. ಗಿರಿಜಾ ನಿರ್ವಾಣಿ. ರಾಣಿ ಚಿರಾಶ್ರಿ. ಬೋರೇಗೌಡರು ಅರಸೀಕೆರೆ. ಬೇಲೂರು. ಪುಟ್ಟೇಗೌಡರು ಅಧ್ಯಕ್ಷರು ಅರಕಲಗೂಡು. ಹಾಗು ಹಾಸನ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ ನಡೋಣಿ ಸದಸ್ಯರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ರಾಷ್ಟ್ರಮಟ್ಟದ ಚಿತ್ರ ಕಲಾವಿದರು ಬೆಳಗಾವಿ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಕೆ ಎಸ್ ನಾಯ್ಕರವರು ವಹಿಸಲಿದ್ದಾರೆ. ಗೊರೂರು ಅನಂತರಾಜು ಅವರ ಕೃತಿ ನಿಂತು ಹೋದ ರಂಗ ವೈಭವ ಪುಸ್ತಕದ ಲೋಕಾರ್ಪಣೆಯನ್ನು ಡಾ.ಸಿ ಸೋಮಶೇಖರ್, ಐ ಎ ಎಸ್ ಬಸವ ವೇದಿಕೆ ಬೆಂಗಳೂರು ಅಧ್ಯಕ್ಷರು ನೆರವೇರಸುತ್ತಾರೆ. ಸಿಂಗಾರ ಎಂಬ ಹಾಡನ್ನು ಶ್ರೀಮತಿ ಕಮಲ ಕುಲಕರ್ಣಿ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ಶ್ರೀ ಮಧುನಾಯ್ಕ, ಲಂಬಾಣಿ, ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ (ನೋಂ), ಹೂವಿನ ಹಡಗಲಿ. ಮುಖ್ಯ ಅತಿಥಿಗಳಾಗಿ ಶ್ರೀ ಗೊರೂರು ಅನಂತರಾಜು ಗೌರವ ಅಧ್ಯಕ್ಷರು ಹಾಗೂ ಸಾಹಿತಿಗಳು, ಶ್ರೀ ವಿರುಪಾಕ್ಷಪ್ಪ ಯು ಉಪಾಧ್ಯಕ್ಷರು, ಶ್ರೀ ಉದೇದಪ್ಪ ಕ್ಯಾದಿಗೆಹಾಳ್ ಹೊಸಪೇಟೆ ತಾಲೂಕು ಅಧ್ಯಕ್ಷರು. ಶ್ರೀ ಪಿ.ವಿ ವೆಂಕಟೇಶ ವಕೀಲರು ಕರುನಾಡ ಕ್ರಿಯಾಶೀಲ ಸಮಿತಿ ಅಧ್ಯಕ್ಷರು ಹೊಸಪೇಟೆ ಇವರು ಹಾಜರಿರುತ್ತಾರೆ.

ಈ ಸ್ಪರ್ದೆಯ ತೀರ್ಪುಗಾರರಾಗಿ ಶ್ರೀ ಕುಬೇರನಾಯ್ಕ ದಾವಣಗೆರೆ ಹಾಗೂ ಶ್ರೀ ಸ್ವರೂಪ ಭಾರದ್ವಾಜ್ ರವರು ನಿರ್ವಹಿಸುತ್ತಾರೆ.

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ)ಯ ಸರ್ವ ಸದಸ್ಯರ 8ನೇ ವಾರ್ಷಿಕ ಮಹಾಸಭೆಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿತು.ಸಭೆಯಲ್ಲಿ ಇತ್ತೀಚೆಗೆ ಕೀರ್ತಿಶೇಷರಾದ ಹಾಸನದ ಹಿರಿಯ ಕಲಾವಿದರಾದ ಚೆಲುವೆಗೌಡರು, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ, ಕಾದಂಬರಿಕಾರರಾದ ಶ್ರೀ ಎಸ್. ಎಲ್ ಭೈರಪ್ಪ, ಗಾಯಕರಾದ ಹಾಸನ ಬಾಬು ಹಾಗೂ ಹರಿಕಥಾ ವಿದ್ವಾಂಸರು ಹಾಗೂ ಪೌರಾಣಿಕ ರಂಗ ನಿರ್ದೇಶಕರಾದ ಚಂದ್ರಚಾರ್ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯ ಆಗುಹೋಗುಗಳ ವರದಿಯ ನಂತರ ಕಲಾವಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ 40 ಕಲಾವಿದರಿಗೆ ಕಲಾಭೂಷಣ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು. ಸಮಿತಿಯ ಶ್ರೇಯೋಭಿವೃದ್ಧಿಗೆ ಸದಸ್ಯರುಗಳೊಡನೆ ಚರ್ಚಿಸಿ ಸಲಹೆಗಳನ್ನು ಪಡೆದು ಅನಂತರ ಅಧ್ಯಕ್ಷರಾದ ರವಿಕುಮಾರ್ ಬಿದರೆಯವರು ಮಾತನಾಡಿ ಇನ್ನೂ ಉನ್ನತ ಮಟ್ಟದಲ್ಲಿ ಸಂಘವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸದಸ್ಯರೆಲ್ಲರ ಸಹಕಾರವನ್ನು ಕೋರುತ್ತಾ ತಮ್ಮ ಅಧ್ಯಕ್ಷೀಯ ಭಾಷಣ ಮಾಡಿದರು.ಮಧ್ಯಾಹ್ನ ಊಟದ ನಂತರ ರಂಗಗೀತೆಗಳ ಕಾರ್ಯಕ್ರಮವನ್ನು ನಡೆಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷರಾದ ಬಿದರೆ ರವಿಕುಮಾರ್, ಕಾರ್ಯದರ್ಶಿ ವೇದ ಶಿವಕುಮಾರ್, ಖಜಾಂಚಿ ರಮೇಶ್ ಗೌಡಪ್ಪ, ಗೌರವಾಧ್ಯಕ್ಷರಾದ ಶೇಖರಪ್ಪ, ಉಪಾಧ್ಯಕ್ಷರಾದ ಶ್ರೀಕಂಠಪ್ಪ, ಸೋಮಶೇಖರ್, ಕಾರ್ಯಾಧ್ಯಕ್ಷರಾದ ನಾಗಮೋಹನ್, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಗವೇನಹಳ್ಳಿ, ಕಾನೂನು ಸಲಹೆಗಾರರಾದ ಮಹೇಂದ್ರ ಹಾಗೂ ಸಲಹೆಗಾರರಾದ ರಂಗಸ್ವಾಮಿ ಕೆ ಕೆ, ಟಿ ವಿ, ನಾಗರಾಜ್, ನಾಗರಾಜ್ ಸಿ ಜೆ, ತೇಜೂರು ಸೋಮಣ್ಣ ದ್ಯಾವೇಗೌಡ, ಕೇಶವ ಜಿ ಜಿ. ಮುಂತಾದವರು ಉಪಸ್ಥಿತರಿದ್ದರು.

ೋಮಶೇಖರ್ ಸ್ವಾಗತಿಸಿ, ಸಾವಿತ್ರಿ ಗಂಗಾಧರ್ ಪ್ರಾರ್ಥಿಸಿದರು, ಶಶಿಕಾಂತ್ ನಿರೂಪಿಸಿ, ನಾಗಮೋಹನ್ ವಂದಿಸಿದರು.

ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್‌-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ‌ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ‌ ಪ್ರಕಾರವು ರಚಿಸುವುದಾಗಿದೆ ಎಂದು‌ ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು.

ಪ್ರಾಸ್ತಾವಿಕ ‌ ನುಡಿಯಲ್ಲಿ ಅರಸೀಕೆರೆ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪದ್ಮಮೂರ್ತಿಯವರು ಲೇಖಕಿ ಸಾವಿತ್ರಮ್ಮ ಓಂಕಾರ್ ಅವರು ‌ ಸಾಹಿತ್ಯದಲ್ಲಿ ನಡೆದುಬಂದ ಹೆಜ್ಜೆಗಳನ್ನ ಹೇಳಿ ಅಭಿನಂದನೆ ಸಲ್ಲಿಸಿದರು. ಹಾಸನದ ಸಾಹಿತಿಗಳು ಗೊರೂರು ಅನಂತರಾಜುರವರು ಕೃತಿ ಪರಿಚಯವನ್ನ ಸುದೀರ್ಘವಾಗಿ ಮಾಡಿಕೊಡುತ್ತಾ ಅವರ ಅನೇಕ ಕೃತಿಗಳನ್ನ ಪರಿಚಯಿಸಿಕೊಟ್ಟಿರುವ ಕೃತಿಯ ಲೇಖಕಿ ಸಾವಿತ್ರಮ್ಮ ಓಂಕಾರ್ ಅವರ ಕಾರ್ಯನ ಬಗ್ಗೆ ಶ್ಲಾಘಿಸಿದರು.

ಕೃತಿಯ ‌ ಲೇಖಕಿ ತಮ್ಮ ಮನದ‌‌ ಮಾತಿನಲ್ಲಿ ಬಂದ‌ ಪ್ರತಿಯೊಬ್ಬರಿಗೂ ಕೃತಿಯಲ್ಲಿರುವ ಎಲ್ಲಾ ೭೪ಜನ ಸಾಧಕರ ಬಗ್ಗೆ ಪ್ರಶಂಸೆ ಮತ್ತು ಅಭಿನಂದನೆ ಸಲ್ಲಿಸಿದರು. ನಾಗರತ್ನ ರಾಜಶೇಖರ್ ರವರು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಸ್ವರಚಿತ ಚುಟುಕು ವಾಚನ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಸನದ ಪತ್ರಕರ್ತರು,‌ ಕಸಾಪ‌‌ ಮಾಜಿ‌ ಅಧ್ಯಕ್ಷರು ‌ ಉದಯರನಿ ಮಾತನಾಡಿ ಸಾಹಿತಿಗಳಿಗಾಗೇ ಒಂದು ಪುಟವನ್ನು ಮೀಸಲಿಟ್ಟ ಪ್ರತಿನಿಧಿ ಪತ್ರಿಕೆಯ ಬಗ್ಗೆ ತಿಳಿಸಿದರು. ಕೃತಿಯ‌ ಬಗ್ಗೆ ಪ್ರಶಂಸನೀಯ ನುಡಿಗಳನ್ನು‌ ಆಡಿ ಪ್ರತಿಯೊಬ್ಬ ಸಾಹಿತಿಗಳನ್ನು ಉತ್ತೇಜಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರು ಸುಂದರೇಶ್ ಡಿ. ಉಡುವಾರೆ, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷರು ಡಾ. ಬರಾಳು ಶಿವರಾಮ ವೇದಿಕೆಯಲ್ಲಿದ್ದು ಮಾತನಾಡಿದರು.

ಪುಸ್ತಕದಲ್ಲಿರುವ ಸಾಧಕರುಗಳಾದ ಮಧುಮಾಲತಿ ರುದ್ರೇಶ್, ಮಾಲಾ ಚಲುವನಹಳ್ಳಿ, ಸುಭದ್ರಾ, ಶಫೀತಾ ಬೇಗಂ, ಪ್ರೇಮಲತಾ ಸೋಮಶೇಖರ್, ಸುಧಾ ಬಾಣಾವರ. ವಿಶ್ವಾಸ್ ಗೌಡ. ಮಲ್ಲೇಶ್, ಉಮೇಶ್ ಹೊಸಹಳ್ಳಿ, ರುದ್ರೇಶ್, ಚಂದ್ರು ಬಾಣಾವರ, ಡಾ. ಹರೀಶ್ ಉಪಾನ್ಯಾಸಕರು, ಮುಂತಾದವರು ಚುಟುಕು ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಬಂದ ಪ್ರತಿಯೊಬ್ಬರಿಗೂ ಪುಸ್ತಕದ ಜೊತೆ ಸನ್ಮಾನ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಲವಾರು ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ನೀಡುತ್ತಾ ಎಲೆಮರೆಕಾಯಿಯಂತಿರುವ ನೂರಾರು ಪ್ರತಿಭೆಗಳನ್ನು ಗುರುತಿಸುತ್ತಾ ಬಂದಿದೆ.

ಪ್ರಸ್ತುತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಸಂಚಾಲಕರಾನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ಅವರು ಅನುಮೋದನೆ ಮಾಡಿದ್ದಾರೆ. ಇಂದಿರಾ ಲೋಕೇಶ್ ರವರು ಸರಕಾರಿ ಪ್ರೌಢಶಾಲೆ ಬೆಳಗೋಡು ಸಕಲೇಶಪುರ ತಾಲೂಕು ಹಿಂದಿ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಕವನ, ಕಥೆ, ಲೇಖನ ಹಾಗೂ ಪ್ರಬಂಧಗಳ ರಚನೆ ಆಗಿರುತ್ತದೆ. ಜಿಲ್ಲಾ ಮಟ್ಟದ ಕವಿ ವಿಭೂಷಣ, ರಾಜ್ಯ ಮಟ್ಟದ ಕನ್ನಡ ರತ್ನ, ರಾಜ್ಯಮಟ್ಟದ ಕವಿರತ್ನ, ರಾಜ್ಯ ಮಟ್ಟದ ಕರುನಾಡು ಸಿರಿ ಸಂಪದ ಸಾಹಿತ್ಯ ಸೇವಾ ಪ್ರಶಸ್ತಿ, ಡಾ. ಪುನೀತ್ ರಾಜ್ ಕುಮಾರ್ ಪುರಸ್ಕಾರ, ಸಾಹಿತ್ಯ ಸೌರಭ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, ರಾಜ್ಯ ಮಟ್ಟದ ರಾಷ್ಟ್ರ ಭಾಷಾ ಸೇವಾ ರತ್ನ ಪುರಸ್ಕಾರ, ಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

ಹಾಸನ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಡಿ.ಉಡುವಾರೆ, ಗೌರವಾಧ್ಯಕ್ಷರು ಶ್ರೀ ವೆಂಕಟೇಶ.. ಉದಯ ವರದಿ ಪತ್ರಿಕೆಯ ಸಂಪಾದಕರು ಹಾಸನ, ಡಾ.ಲೋಕೇಶ ಉಪನ್ಯಾಸಕರು ಹೊಳೆನರಸೀಪುರ, ಡಾ. ಬರಾಳು ಶಿವರಾಮ, ಚನ್ನರಾಯಪಟ್ಟಣ ತಾಲ್ಲೂಕು. ಕಾರ್ಯದರ್ಶಿ ದಿಬ್ಬೂರು ರಮೇಶ, ಸಂಘಟನಾ ಕಾರ್ಯದರ್ಶಿ, ಶಿವಕುಮಾರ ಆರ್. ವಿಶ್ವಾಸ್ ಡಿ. ಗೌಡರು ಸಕಲೇಶಪುರ ತಾ. ಅಧ್ಯಕ್ಷರು. ಪರಮೇಶ್ ಮಡಬಲು. ಗಿರಿಜಾ ನಿರ್ವಾಣಿ. ರಾಣಿ ಚರಾಶ್ರಿ. ಬೋರೇಗೌಡರು ಅರಸೀಕೆರೆ. ಕಿರಣ್ ಅಧ್ಯಕ್ಷರು ಚುಸಾಪ ಬೇಲೂರು. ಎಸ್. ಎಸ್. ಪುಟ್ಟೇಗೌಡರು ಅಧ್ಯಕ್ಷರು ಅರಕಲಗೂಡು ತಾ. ಹಾಗು ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಗೊರೂರು ಅನಂತರಾಜು ಅವರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ

ಬೆಂಗಳೂರಿನ ಲೇಖಿಕಾ ಸಾಹಿತ್ಯ ವೇದಿಕೆಗೆ 25 ವರ್ಷ ತುಂಬಿದ ಪ್ರಯುಕ್ತ ವೇದಿಕೆಯು ತನ್ನ 25ನೇ ವಾರ್ಷಿಕೋತ್ಸವ ರಜತ ಮಹೋತ್ಸವ ಲೇಖಿಕಾ ಸಾಹಿತ್ಯ ಸಂಭ್ರಮದ ಅಂಗವಾಗಿ 25 ಸಾಧಕರಿಗೆ ಲೇಖಿಕಾ ಶ್ರೀ 2025 ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಶಸ್ತಿ ಫಲಕ, ಸ್ಮರಣಿಕೆ, ಶಾಲು, ಫಲ ತಾಂಬೂಲಗಳನ್ನು ನವೆಂಬರ್ 9ರ ಭಾನುವಾರ ಹಾಸನದ ಎವಿಕೆ ಕಾಲೇಜು ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಲೇಖಿಕಾ ಸಾಹಿತ್ಯ ವೇದಿಕೆಯ ಸಂಚಾಲಕರಾದ ಶ್ರೀಮತಿ ಶೈಲಜಾ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರು: ಗೊರೂರು ಅನಂತರಾಜು (ಹಾಸನ), ಡಾ. ವೀಣಾ ( ಸುಳ್ಯ), ಲೀಲಾವತಿ (ಹಾಸನ), ಪದ್ಮ ಆನಂದ್ (ಮೈಸೂರು) ದೀಪಿಕಾ ಚಾಟಿ (ಬೆಳಗಾವಿ), ರಾಧಾ ಟೇಕಲ್ (ಬೆಂಗಳೂರು), ಉಷಾ ನರಸಿಂಹನ್ (ಮೈಸೂರು), ಉದಯರವಿ (ಹಾಸನ), ಕೆ. ಎಂ. ಲೋಲಾಕ್ಷಿ (ಮೈಸೂರು), ಕೃಷ್ಣ ಪದಕಿ (ಶಿರಸಿ), ವಿದ್ಯಾ ಶಿರಹಟ್ಟಿ (ಧಾರಾವಾಡ ), ಗಣೇಶ ಅಮೀನಗಡ (ಮೈಸೂರು) ಯಶೋಧಾ ಡಿ (ಬೆಂಗಳೂರು), ಎನ್.ಎಲ್. ಚನ್ನೇಗೌಡ (ಹಾಸನ), ಸುಮಾ ವೀಣಾ (ಹಾಸನ), ರೂಪಾ ಜೋಶಿ (ಹುಬ್ಬಳ್ಳಿ), ಮುಕುಂದ ಗಂಗೂರ್ (ಹೊಸಪೇಟೆ), ನಾಗಲಕ್ಷ್ಮಿ ಎಂ.ಜೆ. (ಚಿಕ್ಕಮಗಳೂರು), ಡಾ. ಕರುಣಾ ಲಕ್ಷ್ಮಿ (ಮೈಸೂರು), ದಮಯಂತಿ ನರೇಗಲ್ (ಧಾರವಾಡ ), ಮಧುರಾ ಕರ್ಣಂ (ಬೆಳಗಾವಿ), ಭಾಗಿರಥಿ ಹೆಗಡೆ (ಶಿರಸಿ), ಸುಕನ್ಯಾ ಮುಕುಂದ್ (ಹಾಸನ), ಪ್ರಭಾ ದಿನಮಣಿ (ಹಾಸನ).

ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ, ಕವಿತೆಯೇ ಕವಿಯನ್ನು ಶಿಫಾರಸ್ಸು ಮಾಡಿದರೆ ಮಾತ್ರ ಸಹೃದಯರೆದೆಯ ಸಿಂಹಾಸನನ್ನು ಪಂಪ-ಕುಮಾರವ್ಯಾಸ-ಕುವೆಂಪು-ಬೇಂದ್ರೆಯವರಂತೆ ಏರಬಹುದು, ಇದನ್ನು ಇಂದಿನ ಬಹುಪಾಲು ಬರೆಹಗಾರರು ಮರೆತಿರುವುದು ಖೇದಕರ ಸಂಗತಿ ಎಂದು ಕವಿ ಡಾ. ಜಯಪ್ಪ ಹೊನ್ನಾಳಿ ಹೇಳಿದರು.

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಮೈಸೂರು ಜಿಲ್ಲಾ ಘಟಕದಿಂದ ಹಾರ್ಡ್ವೀಕ್ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತಾಡಿದ ಅವರು, ವಿಶ್ವಪ್ರಜ್ಞೆ ಕವಿಗಳದಾಗಬೇಕು, ಅವರು ಶಾಶ್ವತ ಸಾಂಸ್ಕೃತಿಕ ಶಾಸಕರು ತಾವೆಂಬುದನ್ನೆಂದಿಗೂ ಮರೆಯಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕವಯತ್ರಿ ಹೇಮಗಂಗಾ ಮಾತನಾಡಿ, ಭಾಷಾ ಶುದ್ಧಿ ಕವಿಗಳಿಗೆ ಬಹುಮುಖ್ಯ, ಭಾಷೆಯ ಮೇಲೆ ಪ್ರಭುತ್ವವಿಲ್ಲದಿರೆ ಉತ್ತಮ ಸಾಹಿತ್ಯ ಸೃಷ್ಟಿಸಲು ಸಾಧ್ಯವಿಲ್ಲ, ಪ್ರೌಢವಾದ ಭಾಷಾ ಸಂಪನ್ನತೆಯನ್ನು ಕವಿಗಳು ಎಲ್ಲಕ್ಕೂ ಮೊದಲು ತಮ್ಮದಾಗಿಸಿಕೊಳ್ಳಬೇಕು ಎಂದರು.

ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷೆ ಶ್ರೀಮತಿ ಇಂದಿರಾ ವಸಂತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮೀರಾ ಕೇಸರ್ಕರ್ ಎಲ್ಲರನ್ನೂ ಸ್ವಾಗತಿಸಿದರು, ಸ್ಮಿತಾ ಹೇಮೇಶ್ ಪ್ರಾರ್ಥನೆ ಹಾಗೂ ಕುಮಾರಿ ಪರಿಣಿತ ಹಚ್ಚೇವು ಕನ್ನಡದ ದೀಪ ದೀಪಾರತಿಯ ಅಮೋಘ ನೃತ್ಯ ದೊಂದಿಗೆ ಎಲ್ಲರನ್ನು ರಂಜಿಸಿ ಮೆಚ್ಚುಗೆಗೆ ಪಾತ್ರರಾದರು.

ಮುಖ್ಯ ಅತಿಥಿಗಳಾಗಿ ಎಂ ಶಿವಸ್ವಾಮಿ, ಶೈಲಜಾ ಹಾಸನ, ರಾಜೇಶ್ವರಿ ಹುಲ್ಲೇನಳ್ಳಿ, ರಾಘವೇಂದ್ರ, ಶಿವಕುಮಾರ್, ಬಿಡಿಎಂ ಕುಮಾರ್, ಹಿರಿಯ ಕವಿಗಳಾದ ಎನ್.ಎಲ್. ಚನ್ನೇಗೌಡ, ಗೊರೂರು ಅನಂತ ರಾಜು, ಶೀಲಾ ಭಟ್ ಇದ್ದು ಕವಿತೆ ವಾಚಿಸಿದರು. 20ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು. ಪುಷ್ಪಲತಾ ನಾರಾಯಣ್, ಮಂಜುಳ ಜಾದವ್ ನಿರ್ವಹಿಸಿದರು.

ಮನೋಜ್ ಕುಮಾರ್, ಅನಿಲ್ ಕುಮಾರ್ ನಿರೂಪಿಸಿದರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಾಸಂಗಿಕವಾಗಿ ಮಾತನಾಡುತ್ತ ವೇದಿಕೆಯ ಧ್ಯೇಯೋದ್ದೇಶಗಳನ್ನು ತಿಳಿಸಿ, ವೇದಿಕೆ ಮುನ್ನೆಡೆಸಲು ಸರ್ವರ ಸಹಕಾರ ಕೋರಿದರು ಮತ್ತು ಕಾರ್ಯಕ್ರಮದ ಕಡೆಯಲ್ಲಿ ವಂದನಾರ್ಪಣೆ ಮಾಡಿದರು.

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯.

ಕಾರ್ಯಕ್ರಮವನ್ನು ಶ್ರೀ ಶ್ರೀ ಕ್ಷೇತ್ರ ಚಂದ್ರವನ ಶ್ರೀರಂಗಪಟ್ಟಣ ಪೂರ್ವ ವಾಹಿನಿ ಕಾವೇರಿ ನದಿ ತೀರದಲ್ಲಿ ಹಮ್ಮಿಕೊಳ್ಳಲಾಗಿದೆ. ಒಟ್ಟು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳಿಗೆ ಆಹ್ವಾನ ನೀಡಲಾಗಿದೆ. ಮಧ್ನಾಹ ಊಟದ ವ್ಯವಸ್ಥೆ ಮಾಡಲಾಗಿದೆ, ಸಂಜೆ ಟೀ ವ್ಯವಸ್ಥೆ ಮಾಡಲಾಗಿದೆ.  ಭಾಗವಹಿಸಿದ ಕವಿಗಳಿಗೆ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಗವುದು. ಪ್ರಥಮ, ದ್ವಿತೀಯ, ತೃತೀಯ, ಇಬ್ಬರಿಗೆ ಸಮಾಧಾನ ಪ್ರಶಸ್ತಿ ನೀಡಿ ವೇದಿಕೆಯಲ್ಲಿ ಸನ್ಮಾನ ಮಾಡಲಾಗುವುದು.

 

ನಾಡಿನ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಬೈರಪ್ಪ ರವರು ನಿಧನಕ್ಕೆ ಸಂತಾಪ

ಹಾಸನ:ಸೆ-24: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ರವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 26-07-1934 ರಲ್ಲಿ ಜನಿಸಿದರು. ಆನೇಕ ಪ್ರಶಸ್ತಿಗಳಾದ ಸರಸ್ವತಿ ಸನ್ಮಾನ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಆನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಅವರು ಲೇಖಕರಾಗಿ, ವಿಮರ್ಶಕರಾಗಿ, ಅಧ್ಯಾಪಕರಾಗಿ, ಕಥೆ, ಕಾಂದಬರಿ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.1999 ರಲ್ಲಿ ಕನಕಪುರದಲ್ಲಿ ನಡೆದ 67 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ನೂರಾರು ಕಾದಂಬರಿ ರಚಿಸಿದ್ದಾರೆ.

ಇವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ನಿಧನಕ್ಕೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಡಾ. ನಾಯಕರಹಳ್ಳಿ ಮಂಜೇಗೌಡ, ಗೌರವಾಧ್ಯಕ್ಷರಾದ ರವಿನಾಕಲಗೂಡು, ಕಲ್ಲಹಳ್ಳಿ ಹರೀಶ್, ಕತ್ತಿಮಲ್ಲೇನಹಳ್ಳಿ ಪರಮೇಶ್, ಸೋಮನಾಯಕ್ ದಿಬ್ಬೂರು ರಮೇಶ್, ಹರಳಹಳ್ಳಿ ರಂಗಸ್ವಾಮಿ, ಪುಟ್ಟಣ್ಣ ನಂದಕುಮಾರ, ಭಾರತ ಸೇವಾದಳ ವಲಯ ಸಂಘಟಕಿ ವಿ.ಎಸ್.ರಾಣಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಚೈತ್ರ ನಾಯಕರಹಳ್ಳಿ, ಉಪಾಧ್ಯಕ್ಷರಾದ ಗುಡುಗನಹಳ್ಳಿ ಮಂಜುನಾಥ ಮುಂತಾದವರು ಸಂತಾಪ ಸೂಚಿಸಿದ್ದಾರೆ.

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಈ ಶಾಲೆಯ ಎಲ್ಲಾ ಶಿಕ್ಷಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.