ಶ್ರೀ ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು. ಇವರ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯ ಕ್ರಮದಲ್ಲಿ ಶ್ರೀ ತಿಮ್ಮನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧು ನಾಯ್ಕ್ ಮತ್ತು ಬರಹಗಾರರ ಸಂಘದ ಗೌರವಾಧ್ಯಕ್ಷರಾದ ಗೊರೂರು ಅನಂತರಾಜು ಹಾಗೂ ಹಿರಿಯ ಸಾಹಿತಿಗಳು ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಶ್ರೀ ತಿಮ್ಮ ನಾಯ್ಕ್ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

ರಂಗಸಿರಿ ಮತ್ತು ನಾಲ್ಕು ಕವನ ಸಂಕಲನಗಳು ಲೋಕಾರ್ಪಣಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ 5ನೇ ವರ್ಷದ ವಾರ್ಷಿಕೊತ್ಸವ ಪ್ರಯುಕ್ತ ನಡೆದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ನಾಟಕಕಾರ ಗೊರೂರು ಅನಂತರಾಜು ಅವರ ರಂಗಭೂಮಿ ಕುರಿತಾದ ಪುಸ್ತಕ ರಂಗ ಸಿರಿ ಕೃತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷರು ಮಧು ನಾಯ್ಕ ಲಂಬಾಣಿ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸಮಾರ೦ಭದಲ್ಲಿ ಲೋಕರ್ಪಣೆ ಮಾಡಿ ಮಾತನಾಡಿ ಈಗಾಗಲೇ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಗೊರೂರು ಅನಂತರಾಜು ಹಲವಾರು ಉದಯೋನ್ಮುಖ ಕವಿ ಸಾಹಿತಿಗಳ ಕೃತಿಗಳ ವಿಮರ್ಶೆ ಮಾಡಿ ಪತ್ರಿಕೆಗಳಲ್ಲಿ ಪ್ರಕಟಿಸಿ ಪ್ರೋತ್ಸಾಹಿಸಿದ್ದಾರೆ. ರಂಗಭೂಮಿಯಲ್ಲೂ ಸಾಕಷ್ಟು ಕ್ರಿಯಶೀಲರಾಗಿ ರಂಗದ ಮೇಲೆ ಪ್ರದರ್ಶಿತ ನಾಟಕಗಳನ್ನು ನೋಡಿ ವಿಮರ್ಶೆಯನ್ನು ಮಾಡಿ ರಂಗಭೂಮಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನನ್ನ ಒಂದು ಮಿನಿ ಕಾದಂಬರಿ ಸುಡುಗಾಡು ಕಥೆ ನಾಟಕವಾಗಿ ರೂಪಾಂತರಿಸಿದ್ದಾರೆ. ಇದನ್ನು ರಂಗದ ಮೇಲೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ಇದೇ ವೇದಿಕೆಯಲ್ಲಿ ಆನಂದ ಕುಮಾರ್ ಜಿ. ವಿ. ಯಾದವ್ ಅವರ ಭಾವದ ಬೆಳಕು, ಕವನ ಸಂಕಲನ, ನಾಗರಾಜ ಟಿ.ವಿ. ಅವರ ಕವನ ಸಂಕಲನ ಮೂಕ ಸಾಕ್ಷಿಗಳು, ವೆಂಕಣ್ಣ ಮಾಳೆಕೊಪ್ಪ ಅವರ ಧರಣಿ ಕವನ ಸಂಕಲನ, ಹಾಲೇಶ್ ಹಕ್ಕಂಡಿ ಅವರ ಅಂಬರ ಮಣಿಯ ಶೃಂಗಾರ ಕವನ ಸಂಕಲನ ಮತ್ತು ಪ್ರಮೀಳಾ ಪಾಟೀಲ ಎಸ್ ಬಿಬ್ಬಳ್ಳಿ ಅವರ ಬೆಳದಿಂಗಳು ಕವನ ಸ೦ಕಲನ ಲೋಕಾರ್ಪಣೆಗೊಂಡವು

ಹೂವಿನ ಹಡಗಲಿಯ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಅಧ್ಯಕ್ಷರಾಗಿ ಮಧುನಾಯ್ಕ ಲಂಬಾಣಿ ಮರು ಆಯ್ಕೆ

ಮಾರ್ಚ್‌ -16 ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ೫ ವರ್ಷಗಳ ಅವಧಿಗೆ ಮಧು ನಾಯ್ಕ ಲಂಬಾಣಿಯವರನ್ನು ಅಧ್ಯಕ್ಷರನ್ನಾಗಿ ಮರುಆಯ್ಕೆ ಮಾಡಲಾಯಿತು.

ಸಂಘವು ತಮ್ಮ ೫ ವರ್ಷದ ಅವಧಿಯಲ್ಲಿ ಹಲವಾರು ನೂತನ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿ ಕರ್ನಾಟಕ ರಾಜ್ಯದ ಮನೆ ಮಾತಾಗಿದೆ. ಕೇವಲ ಸಾಹಿತ್ಯ ಕೃಷಿಗಾಗಿ ಸೀಮಿತವಾಗಿರದೇ ರೈತರಿಗೆ ಸಲಹೆ, ಆರೋಗ್ಯ ಮಾಹಿತಿ, ಸೈನಿಕರಿಗೆ ಗೌರವ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವಾರು ಕಾರ್ಯಗಳನ್ನು ಹಲವಾರು ಆಸಕ್ತರ ಜಿಲ್ಲಾ ಅಧ್ಯಕ್ಷರ ಸಹಕಾರದಿಂದ ನಡೆಸುತ್ತಾ ಬಂದು ಸಂಘವನ್ನು ಇಷ್ಟು ಎತ್ತರಕ್ಕೆ ತಂದ ಕೀರ್ತಿ ಮಧುನಾಯ್ಕ ಲಂಬಾಣಿ ರವರಿಗೆ ಸಲ್ಲುತ್ತದೆ ಎ೦ದು ಸಂಘದ ಗೌರವ ಅಧ್ಯಕ್ಷ ಗೂರೂರು ಅನಂತರಾಜು ಸಭೆಯಲ್ಲಿ ಮಧು ನಾಯ್ಕ ಲಂಬಾಣಿ ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಇನ್ನೂ ೫ ವರ್ಷಗಳ ಕಾಲ ಮಧುನಾಯ್ಕ ಲಂಬಾಣಿಯವರೇ ಅಧ್ಯಕ್ಷರಾಗಿ ಮುಂದುವರೆಯಲಿ ಎಂದು ಕಾರ್ಯಕಾರಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಧುನಾಯ್ಕ ಲಂಬಾಣಿ ಇವರ ಕಾರ್ಯವೈಖರಿ ಕುರಿತು ಎಲ್ಲಾ ಜಿಲ್ಲಾ ಅಧ್ಯಕ್ಷರು ಮಾತನಾಡಿ ನಿರಂತರವಾಗಿ ನಡೆಸಿಕೊಂಡು ಎಲ್ಲರನ್ನೂ ಪ್ರೀತಿಯಿಂದ ಗೆದ್ದು ರಾಜ್ಯಮಟ್ಟದಲ್ಲಿ ಈ ಸಂಘಟನೆ ಮಧುನಾಯ್ಕ.ಲಂಬಾಣಿಯವರಿಂದ ಇಂದು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಶ್ಲಾಘಿಸಿ ಆಯ್ಕೆ ಮಾಡಿ ಅಭಿನಂದಿಸಿದರು.

ಸಂಘದ ಗೌರವ ಅಧ್ಯಕ್ಷರಾದ ಶ್ರೀ ಗೊರೂರು ಅನಂತರಾಜು, ಉಪಾಧ್ಯಕ್ಷರಾದ ಶ್ರೀಮತಿ ಬಸಮ್ಮ ಹಿರೇಮಠ ಹಾಗೂ ಶ್ರೀಮತಿ ಸುಜಾತ ಚಂದ್ರಧರನಾಯ್ಕ ಹಾಗೂ ರಾಜ್ಯಘಟಕದ ಪದಾಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾ ಅಧ್ಯಕ್ಷರು ಭಾಗವಹಿಸಿದ್ದರು.

ಶಿವಮೊಗ್ಗ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ, ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಮಾರ್ಚ್ ೧೬ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ, ಗಾಯನ ಕ್ಷೇತ್ರದಲ್ಲಿ ಹಾಗೂ ಸೇವಾ ಕ್ಷೇತ್ರದಲ್ಲಿ ಮತ್ತು ಕಾವ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರಮಟ್ಟದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಮಾರು ಎರಡು ನೂರು ಜನಗಳಿಗೆ ಸನ್ಮಾನ ಮಾಡಿದ ಕಾರ್ಯಕ್ರಮದಲ್ಲಿ ಐದು ಕೃತಿಗಳ ಲೋಕಾರ್ಪಣೆಯನ್ನು ರಾಜ್ಯಾಧ್ಯಕ್ಷ ಮಧು ನಾಯ್ಕ ಲಂಬಾಣಿ ಮಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಸಾಹಿತಿ ಡಾ. ಹಸೀನರವರು ಕವಿತೆ ವಾಚಿಸುವ ಮುಖೇನ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರಾಮು ಎನ್ ರಾಥೋಡ್ ವಹಿಸಿದ್ದರು. ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರು ಚಂದ್ರಶೇಖರ್ ಹಡಪದ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಸಾಹಿತಿ ಗೊರೂರು ಅನಂತರಾಜು, ಗೋಪಾಲ ನಾಯಕ್ ವಾಯ್ಸ್ ಆಫ್ ಇವರು ಭಾಗವಹಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಘಟಕದಿಂದ ಪ್ರಾಯೋಜಿತ ಕಾರ್ಯಕ್ರಮಗಳು ನೆರವೇರಿದವು.

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦‌ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ, ಗಾಯನ ಕ್ಷೇತ್ರದಲ್ಲಿ ಹಾಗೂ ಸೇವಾ ಕ್ಷೇತ್ರದಲ್ಲಿ ಮತ್ತು ಕಾವ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರಮಟ್ಟದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಸುಮಾರು ಎರಡು ನೂರು ಜನಗಳಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಹಾಗೂ ಐದು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಇರುತ್ತದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಸಾಹಿತಿಗಳಾದ ಡಾ. ಹಸೀನರವರು ನೆರವೇರಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಮು ಎನ್ ರಾಥೋಡ್ ವಹಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷರಾದ ಚಂದ್ರಶೇಖರ್ ಹಡಪದರವರು ಹಾಗೂ ಕೃತಿ ಲೋಕಾರ್ಪಣೆಯನ್ನು ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯ್ಕ ಲಂಬಾಣಿ ರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಸಾಹಿತಿ ಗೊರೂರು ಅನಂತರಾಜು ಹಾಗೂ ಗೋಪಾಲ ನಾಯಕ್ ವಾಯ್ಸ್ ಆಫ್ ಬಂಜಾರ ಇವರು ವಹಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸುಮಾರು 35 ಜನ ಗಾಯಕರಿಂದ ನಾಡಗೀತೆ ಹಾಗೂ ರೈತ ಗೀತೆ ನೆರವೇರಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಘಟಕದಿಂದ ಪ್ರಾಯೋಜಿತ ಕಾರ್ಯಕ್ರಮಗಳು ಜರುಗುತ್ತವೆ.

ತ್ರಿ ಭಾಷಾ ಕವಿ ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಜಯಂತೋತ್ಸವ.

ಬೆಂಗಳೂರು: ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸ್ವರಲೋಕ ಸಂಗೀತ ಮತ್ತು ಸಾಂಸ್ಕೃತಿಕ ಮಹಾ ವಿದ್ಯಾಲಯದಲ್ಲಿ ಮಾರ್ಚ್-4‌ ಮಂಗಳವಾರದಂದು ತ್ರಿಬಾಷಾ ಕವಿ ಅಂಧರ ಬಾಳಿನ ಆಶಾಕಿರಣ ಗದಗ ವೀರೇಶ್ವರ ಪುಣ್ಯಶ್ರಮದ ದಿವ್ಯಜ್ಯೋತಿ ಲಿಂಗೈಕ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 111ನೇಯ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಸುನಿತಾ ಗಂಗಾವತಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭವ್ಯ ಚಲ್ಲಯ್ಯ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಸ್ವರ ಸಂಗೀತದ ಮೂಲಕ ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮತ್ತು ಪ್ರಮೋದ್ ಅವರ ಹಾರ್ಮೋನಿಯಂ ಸಾಥ್‌, ಶರಣುಕುಮಾರ್ ಹಾಗೂ ಮಹಾಂತೇಶ್ ಸುಧೀರ್ ಅವರು ತಬಲವಾದನ ನಡೆಸಿಕೊಟ್ಟರು. ಗೀತಾ ಹಾಗೂ ಸಮಾಜ ಕ್ಷೇತ್ರದ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಭಾರತ ರತ್ನ ಮರಣೋತ್ತರ ಪ್ರಶಸ್ತಿ ನೀಡಬೇಕೆಂದು. ಆಗ್ರಹಿಸಿದರು.

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ ಬಿಡುಗಡೆಯಾಯಿತು.

ತಿರುಮಲ ವೆಂಕಟರಾಯರು ಶ್ರೀಕೃಷ್ಣದೇವರಾಯರ ೨೦ನೇ ವಂಶಸ್ಥರು ಮತ್ತು ಆನೆಗುಂದಿ ಸಂಸ್ಥಾನದಲ್ಲಿ ವಿಜಯನಗರದ ಅರಸರ ಉತ್ತರಾಧಿಕಾರಿಯಾಗಿದ್ದು, ಇವರು ಆನೆಗುಂದಿಯ ರಾಜಾ ಶ್ರೀಕೃಷ್ಣದೇವರಾಯರ ಮಗ ಮತ್ತು ರಾಜ ಶ್ರೀ ಅಚ್ಯುತ ದೇವರಾಯರ ಮೊಮ್ಮಗರಾಗಿದ್ದಾರೆ. ಇವರು ಇಂಗ್ಲೆಂಡ್‌ನ ಡರ್ಹಾಮ್ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಪದವಿ ಪಡೆದಿದ್ದಾರೆ.

ಇದು ಇವರ ಮೊದಲ ಪುಸ್ತಕವಾಗಿದ್ದು, ವಿಜಯನಗರ ಸಾಮ್ರಾಜ್ಯದ ಇತಿಹಾಸವನ್ನು ಆಕರ್ಷಕ ನಿರೂಪಣೆಯ ರೂಪದಲ್ಲಿ ಹೇಳುವ ಗುರಿಯನ್ನು ಪುಸ್ತಕ ಹೊಂದಿದೆ.

ಸದರಿ ಪುಸ್ತಕವು ಮಾರ್ಚ್ ಕೊನೆಯವಾರದ ನಂತರ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಮಹಾ ಶಿವರಾತ್ರಿ ಹುಣಸಿನಕೆರೆ ಬಡಾವಣೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ, ಭಜನೆ ಹಾಡುಗಾರಿಕೆ ಕಾರ್ಯಕ್ರಮ.

ಹಾಸನ: ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ ಮಹಾ ಮಂಗಳಾರತಿ, 7.30ಕ್ಕೆ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ.

ದೇವಾಲಯದ ಆವರಣದಲ್ಲಿನ ರಂಗ ವೇದಿಕೆಯಲ್ಲಿ ಸಂಜೆ 5.30ಕ್ಕೆ ಶ್ರೀ ಶಾರದ ಭಜನಾ ಮಂಡಳಿಯಿಂದ ಹಾಗೂ 6.30 ರಿಂದ ಶ್ರೀ ಛಾಯಾಪುತ್ರ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯುವುದು. 7.30 ರಿಂದ ಶ್ರೀಮತಿ ರಾಣಿ ಚರಾಶ್ರೀ ಮತ್ತು ಸಂಗಡಿಗರಿಂದ ಭಕ್ತಿ ಕೋಲಾಟ ಮತ್ತು ಭಕ್ತಿ ಗೀತೆ ಕಾರ್ಯಕ್ರಮ ಇರುವುದು. ರಾತ್ರಿ 11.30 ರಿಂದ ಬೆಳಗಿನ ಜಾವ 5.30 ವರೆಗೆ ಏಕಲವ್ಯ ಅಖಂಡ ಭಜನಾ ಮಂಡಳಿಯವರಿಂದ ಅಮೋಘ ಭಜನಾ ಕಾರ್ಯಕ್ರಮ ಇರುತ್ತದೆ.
ಮತ್ತು ಮಾರನೇ ದಿನ 27ರ ಗುರುವಾರ ಇದೇ ದೇವರ ಸನ್ನಿದಾನದಲ್ಲಿ ಮದ್ಯಾಹ್ನ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಆರ್. ಕೃಷ್ಣಶೆಟ್ಟಿ, ಅಧ್ಯಕ್ಷರು ಸಮಿತಿಯ ಪರವಾಗಿ ವಿನಂತಿಸಿದ್ದಾರೆ.

ಇತರ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ: https://aratt.ai/@vishwaroopa_news_blog

ಪವಿತ್ರ ಕುಂಭಮೇಳ ಅಮೃತ ಸ್ನಾನ ನೆರವೇರಿಸಿದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮುಖಂಡರಗಳ ಕುಟುಂಬಸ್ಥರು.

ಗಂಗಾವತಿ: ನಗರದ ಭಾರತೀಯ ಜನತಾ ಪಕ್ಷದ ಯುವ ಮುಖಂಡರಾದ ಶರಣಪ್ಪ ಬಚಾಳಿ ಕುಟುಂಬ ವರ್ಗದವರು, ಮಹಿಳಾ ಮೋರ್ಚಾದ ಮುಖಂಡರಾದ ಲಲಿತಾ ನಾಗರಾಜ್ ಕುಟುಂಬಸ್ಥರು ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಅಮೃತ ಸ್ನಾನ ನೆರವೇರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕುಂಭಮೇಳದ ಇತಿಹಾಸವನ್ನು ಗಮನಿಸಿದಾಗ ಭಾರತದ ಪರಂಪರೆ ಸಂಸ್ಕೃತಿಯ ಮೇಳವಾಗಿ ಕುಂಭಮೇಳ ಕಂಗೊಳಿಸುತ್ತಿದೆ. 144 ವರ್ಷಗಳ ಬಳಿಕ ಬಂದಿರುವ ಈ ಮಹಾ ಕುಂಭಮೇಳ ದೇಶ ಸೇರಿದಂತೆ ವಿದೇಶಿಗಳನ್ನು ದಿನದಿಂದ ದಿನಕ್ಕೆ ಆಕರ್ಷಿಸುತ್ತಿದೆ. ಕಳೆದ ಜನವರಿ 13 ರಿಂದ ಆರಂಭವಾದ ಈ ಮೇಳ ಧಾರ್ಮಿಕ ಕಾರ್ಯಕ್ರಮ ಫೆಬ್ರುವರಿ 26ರ ವರೆಗೆ ನಡೆಯಲಿದ್ದು,  144 ವರ್ಷಗಳ ಬಳಿಕ ಪ್ರಯಾಗರಾಜ್ ತ್ರಿವೇಣಿ ಸಂಗಮದಲ್ಲಿ ಜರುಗುತ್ತಿರುವುದು ಭಕ್ತರನ್ನು ಸಮುದ್ರದ ಅಲೆಯಂತೆ ಉಕ್ಕಿ ಉಕ್ಕಿ ಬರುತ್ತಿದೆ. ಇಂತಹ ಪವಿತ್ರವಾದ ಕುಂಭಮೇಳದಲ್ಲಿ ಅಮೃತ ಸ್ನಾನವನ್ನು ನಡೆಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದು ಬಿಜೆಪಿ ಮುಖಂಡ ಶರಣಪ್ಪ ಬಾಚಾಳಿ ಅಲ್ಲಿನ ತಮ್ಮ ಅನುಭವವನ್ನು ಹಂಚಿಕೊಂಡರು.

ಇತ್ತೀಚಿಗಷ್ಟೇ ಕಾಲ್ತುಳಿತ ಪ್ರಕರಣದಿಂದಾಗಿ ಉತ್ತರಪ್ರದೇಶ ಯೋಗಿ ನೇತೃತ್ವದ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಆಗಮಿಸಲಾಗಿದೆ ಎಂದು ತಿಳಿಸಿದರು.

ಲಲಿತಾ ನಾಗರಾಜ್ ಮಹಿಳಾ ಮೋರ್ಚಾ ಮುಖಂಡರು ಮಾತನಾಡಿ ಆತ್ಮ ಶುದ್ಧಿಗಾಗಿ ತ್ರಿವೇಣಿ ಸಂಗಮದ ಸ್ನಾನ ಅತ್ಯಂತ ಪವಿತ್ರ ಹಾಗೂ ಮಹತ್ವವನ್ನು ಹೊಂದಿದೆ. ಯೋಗ ಧ್ಯಾನ. ಆಧ್ಯಾತ್ಮಿಕ ಸೆಳೆತ ಸೇರಿದಂತೆ ವಿವಿಧತೆಯಲ್ಲಿ ಏಕತೆಯ ಮನೋಭಾವನೆ ಮೇಳದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ಹೇಳಿದರು.

ಡಾ. ಎಚ್.ಬಿ.ಯಶೋಧರಾ ಜನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ವದ ಕೊಡುಗೆಗಳು

ಹಾಸನದ ಡಾ. ಎಚ್.ಬಿ.ಯಶೋಧರಾ ಅವರು ಜಾನಪದ ಕ್ಷೇತ್ರಕ್ಕೆ ನೀಡಿದ ಎರಡು ಮಹತ್ಕಾರ್ಯಗಳಲ್ಲಿ ಒಂದು ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಸಂಶೋಧನೆ ಮತ್ತೊಂದು ಯಕ್ಷಗಾನ ಕರಿಭಂಟನ ಕಥೆ ಸಂಪಾದನೆ. ಎರಡೂ ಜನಪದ ಸಾಹಿತ್ಯಕ್ಕೆ ನೀಡಿದ ಮಹತ್ವದ ಕೊಡುಗೆಗಳಾಗಿವೆ ಎಂದು ಜನಪದ ಸಾಹಿತಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ಚಂದ್ರುಕಾಳೇನಹಳ್ಳಿ ತಿಳಿಸಿದರು.

ಹಾಸನದ ಮನೆ ಮನೆ ಕವಿಗೋಷ್ಠಿಯಿಂದ ಡಾ|| ಸಿ.ಎನ್. ಜಗದೀಶ್‌ರವರ ಪ್ರಾಯೋಜನೆಯಲ್ಲಿ ಅವರ ನಿವಾಸದಲ್ಲಿ ನಡೆದ ೩೨೬ನೇ ಕಾರ್ಯಕ್ರಮದಲ್ಲಿ ಡಾ. ಎಚ್.ಬಿ.ಯಶೋಧರಾ ಅವರ ಕನ್ನಡದಲ್ಲಿ ಯಕ್ಷಗಾನ ಸಾಹಿತ್ಯ ಕೃತಿ ಕುರಿತಂತೆ ಮಾತನಾಡಿ ಕೃತಿಯು ೧೧ ಅಧ್ಯಾಯಗಳಲ್ಲಿ ಡಾ. ಜೀ.ಶಂ.ಪ. ಅವರ ಮಾರ್ಗದರ್ಶನದಲ್ಲಿ ಸಿದ್ಧಗೊಂಡ ಮಹಾಪ್ರಬಂಧ. ಯಕ್ಷಗಾನ ಸಾಹಿತ್ಯ ಸ್ವರೂಪವನ್ನು ಹಂತ ಹಂತವಾಗಿ ವಿಶ್ಲೇಸಿಸಿದ್ದಾರೆ. ಯಕ್ಷಗಾನ ಕಾವ್ಯವೂ ಹೌದು ನಾಟಕವೂ ಹೌದು. ಯಕ್ಷಗಾನ ಕಾವ್ಯ ಕಾಲಕ್ರಮೇಣ ದೃಶ್ಯಾಂಶವನ್ನೇ ಮುಂದಾಗಿಸಿ ನಾಟಕ ಸ್ವರೂಪ ಪಡೆದುಕೊಂಡಿದನ್ನು ನಿರೂಪಿಸುವಲ್ಲಿ ಸಾಕಷ್ಟು ಆಧಾರಗಳನ್ನು ಕಲೆಹಾಕಿದ್ದಾರೆ. ಶ್ರೀಕೃಷ್ಣ ಪಾರಿಜಾತ, ತಾಳಮದ್ದಲೆ, ಗೊಂಬೆಯಾಟಗಳ ಸಾಹಿತ್ಯ ಸ್ವರೂಪವನ್ನು ಗುರುತಿಸಿದ್ದಾರೆ ಎಂದು ಕೃತಿಯನ್ನು ತಮ್ಮ ಅನುಭವ ಹಿನ್ನಲೆಯಲ್ಲಿ ಪರಿಚಯಿಸಿದರು.
ತೊಗಲುಗೊಂಬೆ ಕಲಾವಿದರು ಹೂವಿನಹಳ್ಳಿ ಕಾವಲು ಗುಂಡುರಾಜ್ ತಾವು ಅಮೇರಿಕಾ ಒಳಗೊಂಡು ಹೊರದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ಮತ್ತು ತರಭೇತಿ ನೀಡುತ್ತಾ ನಮ್ಮ ಸಂಸ್ಸೃತಿಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಕಾರ್ಯಪ್ರವೃತ್ತರಾಗಿರುವ ಕುರಿತು ಹೆಮ್ಮೆಯಿಂದ ವರ್ಣಿಸಿದರು.

ಡಾ. ಸಿ.ಎನ್. ಜಗದೀಶ್ ಮಾತನಾಡಿ ತಮ್ಮ ಧರ್ಮಪತ್ನಿ ಇಪ್ಪತ್ತು ವರ್ಷಗಳ ಹಿಂದೆ ತುಂಬಾ ಶ್ರದ್ಧೆಯಿಂದ ಈ ಜಾನಪದ ಕ್ಷೇತ್ರಕಾರ್ಯ ಮಾಡಿದ್ದು, ಸಂಗ್ರಹದ ದಾಖಲೆಗಳನ್ನು ಪ್ರದರ್ಶಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ಎನ್.ಎಲ್.ಚನ್ನೇಗೌಡ, ಸರೋಜ ಟಿ.ಎಂ., ಪದ್ಮಾವತಿ ವೆಂಕಟೇಶ್, ಸಾವಿತ್ರಿ ಬಿ.ಗೌಡ, ಜಿ.ಆರ್. ಶ್ರೀಕಾಂತ್, ಗೊರೂರು ಅನಂತರಾಜು, ದಿಬ್ಬೂರು ರಮೇಶ್, ವನಜಾ ಸುರೇಶ್ ಸ್ವರಚಿತ ಕವಿತೆ ವಾಚಿಸಿದರು. ಎ.ನಂಜಪ್ಪ, ಮಂಜುಳ ಉಮೇಶ್, ರಾಣಿ ಚರಾಶ್ರಿ ರಂಗಗೀತೆಗಳನ್ನು ಹಾಡಿದರು. ರಮೇಶ್ ರೈತಸಂಘ, ಬಾಲಕೃಷ್ಣ ಹೆಚ್.ವಿ. ಜಾನಪದ ಗೀತೆ ಹಾಡಿದರು. ಗುಂಡುರಾಜ್ ಪ್ರಾರ್ಥಿಸಿದರು. ವಿದ್ಯಾನಗರ ಕುವೆಂಪು ಯುವಕರ ಸಂಘ ಸತೀಶ್ ಜಿ.ಎಸ್. ಪರಮೇಶ್, ಲೋಕೇಶ್ ಆರ್. ಮೊದಲಾದವರು ಇದ್ದರು. Dr. Chandru Kalenhalli and other dignitaries were honored after delivering a lecture.
ಉಪನ್ಯಾಸ ನೀಡಿದ ಡಾ.ಚಂದ್ರು ಕಾಳೇನಹಳ್ಳಿಯವರನ್ನು ಸನ್ಮಾನಿಸಲಾಯಿತು.