ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ. ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು. ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು….

Read More
ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ. ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ. ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ. ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ…

Read More
ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು. ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ. ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ. ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ…

Read More
ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದುಶೇಖರ ಮಹಾಸ್ವಾಮಿಗಳ ಜನನ ತಿರುಪತಿಯಲ್ಲಿ ನಿಷ್ಠಾವಂತ ವೇದ ವಿದ್ವಾಂಸರ ಮನೆಯಲ್ಲಿ 1993ರ ಜುಲೈ 24 ರಂದು ಆಯಿತು. ಅವರ ತಂದೆ ಕುಪ್ಪಾ ವೇ ಬ್ರ.ಶ್ರೀ.ಶಿವಸುಬ್ರಹ್ಮಣ್ಯ ಅವದಾನಿ ಮತ್ತು ತಾಯಿ ಶ್ರೀಮತಿ ಸೀತಾ ನಾಗಲಕ್ಷ್ಮಿ.ಈ ದಂಪತಿಗಳ ಕಿರಿಯ ಪುತ್ರರೇ ತಿರುಪತಿಯಲ್ಲಿ ವೆಂಕಟೇಶ್ವರನ ಕೃಪೆಯಿಂದ ಜನಿಸಿ ವೆಂಕಟೇಶ ಪ್ರಸಾದರೆನಿಸಿದರು. ಐದನೇ ವಯಸ್ಸಿನಲ್ಲೇ ಅವರಿಗೆ ಬ್ರಹ್ಮೋಪದೇಶ ಆಯಿತು. ತಾತ ರಾಮಗೋಪಾಲ ಯಾಜಿಯವರಲ್ಲಿ ಬಾಲಕ ಕೃಷ್ಣ ಯಜುರ್ವೇದ ಕ್ರಮಾಂಕ ಪಾಠ ಕಲಿಯಲು ಆರಂಭಿಸಿದ್ದು ಉಪನಯನದ ನಂತರ. 2006 ರಲ್ಲಿ ತಂದೆಯವರೊಂದಿಗೆ ಬಾಲಕ ಶೃಂಗೇರಿಗೆ…

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More
ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯ ಶ್ರೀನಿವಾಸ್ ಅವರು ಚಿಕ್ಕವಯಸ್ಸಿನಿಂದಲೂ ಜನಪದ ಹಾಡು, ತಂಬೂರಿ ಶೈಲಿಯ ಕತೆಗಳನ್ನು ಹಾಡುತ್ತಾ ಬಂದಿದ್ದಾರೆ. ಸಿದ್ದಪ್ಪಾಜಿ ಪವಾಡಗಳು, ಮಂಟೇಸ್ವಾಮಿ ಕತೆ ಬಿಳಿಗಿರಿರಂಗನ ಕತೆ, ಮುಡುಕುತೊರೆ ಮಲ್ಲಿಕಾರ್ಜುನನ ಕತೆ, ಮಲೆಮಹದೇಶ್ವರ ಕತೆ. ಹೀಗೆ ಹಲವಾರು ಕತೆಗಳನ್ನು ತಾಳ ತಂಬೂರಿ ಗಗ್ಗರದ ನಾದಕ್ಕೆ ತಕ್ಕಂತೆ ಹಾಡುತ್ತಾರೆ. ಸರಿಸುಮಾರು ಐವತ್ತಕ್ಕೂ ಹೆಚ್ಚು ತತ್ವಪದಗಳನ್ನು, ಅಂತಿಮಯಾತ್ರೆಯ ಭಜನೆ ಪದಗಳನ್ನು, ಶೋಕಗೀತೆಗಳನ್ನು ಹಾಡುವಲ್ಲಿ ಕರಗತ ಮಾಡಿಕೊಂಡಿದ್ದಾರೆ. ಇವರ ಮಾಂಬಳ್ಳಿ ಮನೆಯ ಪಕ್ಕ ಮಹದೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನ, ಆ…

Read More
ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ. ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು. ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ. ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ. ಇವರು…

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More
ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. ೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ. ೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ,…

Read More