ಸರ್, ನನ್ನ ಕ್ಸಾನ್ಸರ್ ನೋವಲ್ಲಿ ಸ್ವಾಂತನ ನೀಡಿದ್ದು ನನ್ನ ಹಾಡು. ನಾನು ಸ್ನೇಹ ತೀರ್ಥಹಳ್ಳಿ

ಸಾರ್, ನಮಸ್ಕಾರ. ನನ್ನ ಹೆಸರು ಸ್ನೇಹ, ಊರು ತೀರ್ಥಹಳ್ಳಿ. ನನಗೆ ಸಂಗೀತವೇ ಉಸಿರು, ಕನಸು, ಜೀವನದ ಭಾಗವಾಗಿದೆ. ನಾಲ್ಕನೇ ತರಗತಿಯಿಂದಲೇ ವೇದಿಕೆ ಮೇಲೆ ಹಾಡುತ್ತಿದ್ದೆ.

ಪಿಯುಸಿವರೆಗೂ ಪ್ರತಿಯೊಂದು ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸುತ್ತಿದ್ದೆ. ಮದುವೆಯ ನಂತರ ಬೇರೆ ಊರಿಗೆ ಹೋಗಬೇಕಾಯಿತು. ಅಲ್ಲಿ ನನ್ನನ್ನು ಗುರುತಿಸುವವರಿಗೆ ಸ್ವಲ್ಪ ಸಮಯ ಬೇಕಾಯಿತು.

ಒಮ್ಮೆ ಮನಸ್ಸು ಮಾಡಿ ಒಂದು ಸ್ಪರ್ಧೆಗೆ ಹೋದೆ. ಅಲ್ಲಿ ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಇತ್ತು. 125 ಜನ ಸ್ಪರ್ಧಿಗಳು ಇದ್ದರು. ಎಲ್ಲರೂ ಚೆನ್ನಾಗಿ ಹಾಡಿದರು. ನಾನು “ಈ ಆಗಸ ಇದ್ದಾರೆ…” ಎಂಬ ಭಾವಗೀತೆ ಹಾಡಿದೆ.

ಅದಕ್ಕೆ ನನಗೆ ಪ್ರಥಮ ಸ್ಥಾನ ಲಭಿಸಿತು. ಅದಾಗಿನಿಂದ ಸ್ಥಳೀಯವಾಗಿ ನಾನು ಹಾಡುವ ಅವಕಾಶಗಳು ಹೆಚ್ಚಾದವು.

ಭಜನೆ ಕಾರ್ಯಕ್ರಮಗಳು, ಪ್ರಾರ್ಥನೆ ಹಾಡುಗಳು ಎಲ್ಲ ಕಡೆ ಕರೆ ಬರುತ್ತಿತ್ತು. ಅದರೊಡನೆ ನನ್ನ ಪ್ರಯಾಣ ಮುಂದುವರಿದಿತು.

ಸ್ನೇಹಿತರು ಕರೋಕೆ ಬಗ್ಗೆ ತಿಳಿಸಿದರು. ಮ್ಯೂಸಿಕ್ ಗೊತ್ತಿದ್ದರಿಂದ ಕರೋಕೆ ಹಾಸುಹೊಕ್ಕಾಗಲಿಲ್ಲ. ಮೊದಲಿಗೆ “ಈ ಹಸಿರು ಸಿರಿಯಲಿ ನವಿಲೆ…” ಹಾಡನ್ನು ಗೈದಿದ್ದೆ. ಈ ಹಾಡು ಜನಪ್ರಿಯವಾಯಿತು, ಇಂದಿಗೂ ನಾನು ಅದನ್ನು ಹಾಡುತ್ತೇನೆ.

ಇದು ನನ್ನ ಸಂಗೀತ ಪಯಣದ ಮತ್ತೊಂದು ಅಧ್ಯಾಯವಾಯಿತು. ಗಂಡ, ಎರಡು ಮಕ್ಕಳು ಸೇರಿ ಸಂತೋಷದಿಂದ ಜೀವನ ಸಾಗಿಸುತ್ತಿದ್ದೆವು. ಆದರೆ ಒಂದು ದಿನ ಹಠಾತ್‌ ನನ್ನ ಜೀವನದಲ್ಲಿ ಬದಲಾವಣೆವಾಯಿತು.

ನನಗೆ ಕ್ಯಾನ್ಸರ್ ಎಂದು ಪತ್ತೆಯಾಯಿತು. 38 ವರ್ಷದ ವಯಸ್ಸು, ಚಿಕ್ಕ ಮಕ್ಕಳ ಜೊತೆ ಈ ಸುದ್ದಿ ಕೇಳಿ ಭಯವೂ, ತಲೆಕೆಡಿಸಿಕೊಳ್ಲುವಂತ ಪರಿಸ್ಥಿತಿಯೂ ಉಂಟಾಯಿತು. ಜ್ಯೋತಿಷ್ಯ ನಂಬುವುದಕ್ಕಿಂತ ಚಿಕಿತ್ಸೆಯ ಕಡೆ ನಿರ್ಧಾರ ಮಾಡಿದೆ. ಆದರೆ ಆಸ್ಪತ್ರೆಗೆ ಹೋಗಿದಂತೆ ಅನುಭವಿಸಿದ ನೋವು ಮರೆತೇ ಆಗಲ್ಲ.

ಟ್ರೀಟ್ಮೆಂಟ್ ಸುಲಭವಾಗಿರಲಿಲ್ಲ. ನರಕ ಅನುಭವಿಸಿದ್ದೆ. ಮನಸ್ಸಿಗೆ ತಾನೇ ಧೈರ್ಯ ಹೇಳಿಕೊಂಡು ಮುಂದುವರಿಯಬೇಕಾಯಿತು. ಅವರು ಕೇಳಿದಂತೆ ನನ್ನ ಹಾಡುಗಳು ನನ್ನಿಗೆ ಶಕ್ತಿ ಕೊಟ್ಟವು. ಪುನಃ ಹಾಡಲು ಪ್ರಾರಂಭ ಮಾಡಿದೆ.

ಭಾವಗೀತೆ, ಜನಪದ ಗೀತೆಗಳ ಮೂಲಕ ನನ್ನ ನೋವನ್ನು ಮರೆತುಬಿಡುತ್ತಿದ್ದೆ. ಕರೋಕೆ ಮೂಲಕ ಅಭ್ಯಾಸ ಮುಂದುವರಿಸಿದೆ. ಅಂತೆಯೇ ಟ್ರೀಟ್ಮೆಂಟ್ ಮುಗಿಯಿತು. ನಾನು ‘ನಾರ್ಮಲ್’ ಎಂಬ ವರದಿ ಪಡೆದೆ.

ಆದರೆ ಮಾತ್ರೆಗಳನ್ನು ನಿಲ್ಲಿಸಲಿಲ್ಲ. ಅದರ ಜೊತೆಗೆ ಇನ್ನೂ ಹಲವು ಕಾಯಿಲೆಗಳು ನನ್ನ ಜೀವನದಲ್ಲಿ ಸೇರಿಕೊಂಡವು. ಸಂಗೀತವೇ ಆ ಸಂಕಷ್ಟದಿಂದ ದಾರಿ ತೋರಿಸಿತು. ಕ್ಯಾನ್ಸರ್ ಬಂದವನು ಸತ್ತೇ ಹೋಗ್ತಾನೆ ಎಂಬ ಜನರ ನಂಬಿಕೆಗೆ ಬದಲಾಗಿಸಲು ನಾನು ಮುಂದಾದೆ. ದೇವರು ನನ್ನಲ್ಲಿ ಆತ್ಮಬಲ ತುಂಬಿದನು.

ನಾನು ಮ್ಯೂಸಿಕ್‌ ಮೂಲಕ ಬದುಕನ್ನು ಪುನರಾಯಿಸಿಕೊಂಡೆ. ಗುಂಪಿನಲ್ಲಿ ಹಾಡುತ್ತಿದ್ದಾಗ ನನ್ನ ಪ್ರತಿಭೆ ಮಸುಕಾಗಿ ಹೋಗುತ್ತಿತ್ತು. ಆದ್ದರಿಂದ ಸಿಂಗಲ್ ಹಾಡುಗಳನ್ನು ಮಾಡಲು ನಿರ್ಧರಿಸಿದೆ.

ಸ್ನೇಹಿತರು ನನ್ನ ಮೇಲೆ ನಂಬಿಕೆ ಇಟ್ಟು, ವೇದಿಕೆಯಲ್ಲಿ ಐದು ಹಾಡುಗಳಿಗೆ ಅವಕಾಶ ಕೊಟ್ಟರು. ಆಗಿನಿಂದ ನನ್ನ ಪ್ರಯಾಣ ಮುಂದುವರಿಯಿತು. ಎಲ್ಲೆಡೆ ನಾನು ಪ್ರೀತಿಯಿಂದ ಕರೆಯಲ್ಪಡುತ್ತಾ ಹಾಡುತ್ತಿದ್ದೇನೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಆನ್‌ಲೈನ್ ವೇದಿಕೆ ನನಗೆ ಹೊಸ ಅಂಗಳವಾಯಿತು. ಅಲ್ಲಿ ಹಾಡಿದ ಹಾಡು ಆಯ್ಕೆ ಆಯ್ತು. ಮಧು ನಾಯ್ಕ್ ಲಂಬಾಣಿ ಅವರು ನನ್ನಲ್ಲಿ ಆಸಕ್ತಿಯಿಂದ ಮಾತನಾಡಿದರು. ಅವರು ಉತ್ತಮ ಸಂಘಟಕರಾಗಿದ್ದು ನಮ್ಮಂತಹ ಕಲಾವಿದರಿಗೆ ಮುಖ್ಯ ವಾಹಿನಿಗೆ ತಲುಪಲು ಸಹಾಯ ಮಾಡಿದ್ದಾರೆ.

ಇಂದಿನವರೆಗೆ 300ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿದ್ದೇನೆ. ಮದುವೆ, ಹಬ್ಬ, ಶುಭಸಮಾರಂಭ ಎಲ್ಲೆಡೆ ಗಾಯನ ಮಾಡಿದ್ದೇನೆ. ನಾನು ಒಬ್ಬಳಾಗಿ ಹೋಗುವುದು ಸರಿಯೆಂದು ಅನಿಸದ ಕಾರಣ ನನ್ನ ಮಗಳಿಗೂ ಹಾಡು ಕಲಿಸಿದ್ದೇನೆ.
ಅವಳು ನನ್ನ ಜೊತೆಗೆ 6ನೇ ವರ್ಷದಿಂದಲೇ ಹಾಡುತ್ತಿದ್ದಾಳೆ. ಇಡೀ ಕುಟುಂಬ ನನ್ನ ಹಿಂದೆ ನಿಂತಿದೆ.

“ನಂದೇ ಸ್ನೇಹ ತೀರ್ಥಹಳ್ಳಿ” ಎಂಬ ಯೂಟ್ಯೂಬ್ ಚಾನೆಲ್ ಹೊಂದಿದ್ದೇನೆ. ಜನ ನನ್ನ ಹಾಡುಗಳನ್ನು ಕೇಳುತ್ತಾರೆ. ಇದರಿಂದ ಮತ್ತಷ್ಟು ಕಲಿಕೆಗೆ ಸಹಾಯವಾಗುತ್ತಿದೆ. ಎಲ್ಲೆಡೆ “ಯೂಟ್ಯೂಬ್ ಸಿಂಗರ್ ಸ್ನೇಹ ಅಲ್ವಾ?” ಎನ್ನುತ್ತಾರೆ. ಇದು ನನಗೆ ಸಂತೋಷ, ಧೈರ್ಯ ಮತ್ತು ಬಲವನ್ನು ನೀಡುತ್ತದೆ.

27 ರಂದು ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಸನ್ಮಾನ ಸಿಕ್ಕಿತು. ಅದು ನನ್ನ ಜೀವನದ ಮರೆಯಲಾರದ ಕ್ಷಣ. ಗುರುರಾದ ಗೊರೂರು ಅನಂತರಾಜು ಸರ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು.

ನನ್ನ ಕಷ್ಟ ಧೈರ್ಯದಿಂದ ಕೇಳಿದ ನಿಮಗೆ ಅನಂತ ಧನ್ಯವಾದಗಳು.
ನಿಮ್ಮ ಸ್ನೇಹ, ತೀರ್ಥಹಳ್ಳಿ.

ಸಂಗೀತವೇ ನನ್ನ ಉಸಿರು – ನಾಗರಕಟ್ಟೆಯ ಗಾನಕೋಗಿಲೆ ಸಿ. ಹನುಮಂತನಾಯ್ಕ

ಕಳೆದ 12 ವರ್ಷಗಳಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದೇನೆ.

ಜಾನಪದ ಗೀತೆ ವೈಯಕ್ತಿಕ ಮತ್ತು ಸಮೂಹ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ್ದು, ಹಿಂದೂಸ್ತಾನಿ ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ.

ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಲಾ ಪ್ರೀತಿಗೆ ಮತ್ತಷ್ಟು ಬೆಳಕು ಹರಿಸಿದ್ದೇನೆ.

ಇಂತಹ ವೈವಿಧ್ಯಮಯ ಪ್ರತಿಭೆ ಹೊಂದಿರುವ ವ್ಯಕ್ತಿ ನಾಗರಕಟ್ಟೆಯ ಸಿ. ಹನುಮಂತನಾಯ್ಕ, ಪ್ರಸ್ತುತ ದಾವಣಗೆರೆಯ ದುಗ್ಗಮ್ಮಪೇಟೆಯ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿದ್ದಾರೆ.

ಇವರು ಮೂರು ಬಾರಿ ರಾಜ್ಯ ಪ್ರಶಸ್ತಿ ಪಡೆದಿರುವುದರ ಜೊತೆಗೆ ಅಂಗವಿಕಲರ ರಾಜ್ಯ ಮಟ್ಟದ ಪ್ರಬಂಧ ಹಾಗೂ ಗಾಯನ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದಿದ್ದಾರೆ.

ಹುಟ್ಟಿದ 14 ತಿಂಗಳ ನಂತರ ಪೋಲಿಯೋ ರೋಗದಿಂದ ವಿಕಲಚೇತನರಾದ ಇವರು ತಂದೆ ಚಂದ್ರನಾಯ್ಕ ಅವರಿಂದ ಪ್ರೇರಣೆಯುಂಟಾಯಿತು ಎಂದು ಕೃತಜ್ಞತಾಪೂರ್ವಕವಾಗಿ ನೆನಪಿಸುತ್ತಾರೆ.

ತಾಯಿ ಪುಟ್ಟಿಬಾಯಿ, ಪತ್ನಿ ಪವಿತ್ರಾ, ಮಗ ವಿಕ್ರಮ್ ನಾಯ್ಕ ಹಾಗೂ ಮಗಳು ದ್ರುವೀಕ ಅವರ ಪ್ರೀತಿಯ ಕುಟುಂಬವಾಗಿದೆ.

ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ನಾಗರಕಟ್ಟೆಯಲ್ಲಿಯೇ ಮುಗಿಸಿ, ದಾವಣಗೆರೆಯ ಮೋತಿಯಪ್ಪ ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದರು.

ಡಿ.ಎಡ್ ತರಬೇತಿಯನ್ನು ತುಮಕೂರಿನ ಚಿಕ್ಕನಹಳ್ಳಿ ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಪಡೆದು, ಧಾರವಾಡದಿಂದ ಬಿಎ, ಇಗ್ನೋದಿಂದ ಬಿ.ಎಡ್ ಮಾಡಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ ಪದವಿಯನ್ನು ಪಡೆದಿರುವ ಇವರು, 2010ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಶಿಕ್ಷಕರ ಹುದ್ದೆಗೆ ಆಯ್ಕೆಯಾದರು.

ಬಾಲ್ಯದಲ್ಲಿಯೇ ತಂದೆ ಹಾಡುತ್ತಿದ್ದ ಲಾವಣಿ, ಕೋಲಾಟ, ಭಜನೆ ಪದಗಳು ಇವರಿಗೆ ಸಂಗೀತದ ಪ್ರೇರಣೆಯಾಗಿದ್ದು, 4ನೇ ತರಗತಿಯಿಂದ ಹಾಡುಗಳನ್ನು ಹಾಡತೊಡಗಿದರು.

ಇವರೆಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ 130ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗಳಿಸಿರುವ ಗಾನಕೋಗಿಲೆ. ಅವರಿಗೆ ‘ಕಲಾ ವಿಭೂಷಣ’, ‘ಶಿಕ್ಷಣ ಸೌರಭ’ ಪ್ರಶಸ್ತಿಗಳು ಲಭಿಸಿವೆ.

ಇವರ ಮತ್ತೊಂದು ವಿಶೇಷತೆ ಎಂದರೆ ಗಂಡು ಹಾಗೂ ಹೆಣ್ಣು ಧ್ವನಿಯಲ್ಲಿ ಹಾಡಬಹುದಾದ ಅಪರೂಪದ ಪ್ರತಿಭೆ. ಮಕ್ಕಳಿಗೂ ಈ ಕಲೆಯನ್ನು ಧಾರೆಯೆರೆಯುತ್ತಿದ್ದಾರೆ.

ಕೊರೊನಾ ಸಂದರ್ಭದಲ್ಲಿ ತ್ರಿಚಕ್ರ ವಾಹನದಲ್ಲಿ ಆಹಾರ ಪೊಟ್ಟಣಗಳನ್ನು ವಿತರಿಸುವ ಮೂಲಕ ಇವರು ಸಾಮಾಜಿಕ ಕಳಕಳಿಯನ್ನು ಸಹ ವ್ಯಕ್ತಪಡಿಸಿದ್ದಾರೆ.

ಇವರು ಕರ್ನಾಟಕ ರಾಜ್ಯ ಬರಹಗಾರರ ಸಂಘದ (ರಿ.) ಹೂವಿನಹಡಗಲಿ ಘಟಕದ ಅಧ್ಯಕ್ಷ ಮಧುನಾಯ್ಕ್ ಲಂಬಾಣಿ ಅವರು ಆಯೋಜಿಸಿದ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಹಾಡಿ “ಕರ್ನಾಟಕ ಕರುನಾಡ ಕೋಗಿಲೆ” ಪ್ರಶಸ್ತಿಗೆ ಪಾತ್ರರಾದರು.

ಈ ಕಾರ್ಯಕ್ರಮದಲ್ಲಿ ಅವರು ಹಾಡಿದ ಕರೋಕೆ ಗೀತೆಯನ್ನು ತೀರ್ಪುಗಾರನಾಗಿ ನಾನು ಆಲಿಸಿದ್ದು, ಅವರ ಸಾಮೂಹಿಕ ನಾಡಗೀತೆ ವಿಶೇಷವಾಗಿ ಗಮನಸೆಳೆದಿತು.

“ಹತ್ತನೇ ವಯಸ್ಸಿನಿಂದಲೇ ನಾನು ಜಾನಪದ, ಭಾವಗೀತೆ, ಲಾವಣಿ, ಚಿತ್ರಗೀತೆಗಳನ್ನೇ ಹಾಡುತ್ತಾ ಕಲಿಸುತ್ತಾ ಬಂದಿದ್ದೇನೆ ಸಾರ್,” ಎನ್ನುತ್ತಾರೆ ಅವರು.

“ನಮ್ಮ ಶಾಲೆಯ ಎರಡನೇ ತರಗತಿಯ ಮಕ್ಕಳು ನಾಡಗೀತೆಗಳನ್ನು ಕರೋಕೆಯೊಂದಿಗೆ ತುಂಬಾ ಸೊಗಸಾಗಿ ಹಾಡುತ್ತಾರೆ ಸಾರ್,” ಎಂದು ಸಂತೋಷದಿಂದ ಹೇಳುತ್ತಾರೆ.

“ವಿಕಲಚೇತನ ಎಂದು ಕೆಲವೊಮ್ಮೆ ಮನಸ್ಸಿಗೆ ನೋವಾಗುತ್ತದೆ. ಆಗ ಎರಡು ಹಾಡುಗಳನ್ನು ಹಾಡಿ ತೃಪ್ತಿಪಟ್ಟುಕೊಳ್ಳುತ್ತೇನೆ,” ಎನ್ನುತ್ತಾರೆ ಅವರು ಭಾವೋದ್ರೇಕದಿಂದ.

“ನನ್ನ ಮನಸ್ಸು, ಹೃದಯ ಹರ್ಷಗೊಳ್ಳುತ್ತದೆ. ನೋವು ಮರೆತುಹೋಗುತ್ತದೆ. ನಿಜಕ್ಕೂ ಸಂಗೀತವೇ ನನ್ನ ಉಸಿರು,” ಎಂದು ಕಣ್ಣೀರಿನಿಂದ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಗೊರೂರು ಅನಂತರಾಜು, ಹಾಸನ.
9449462879
ವಿಳಾಸ :ಹುಣಸಿನಕೆರೆ ಬಡಾವಣೆ,
29ನೇ ವಾಡ್೬, 3ನೇ ಕ್ರಾಸ್,
ಶ್ರೀ ಶನೀಶ್ವರ ದೇವಸ್ಥಾನ ರಸ್ತೆ,
ಹಾಸನ-573201

ಸಾರ್, ನನಗೆ ಹಾಡುವುದೆಂದರೆ ತುಂಬಾ ಇಷ್ಟ.ನಾನು ಅಶ್ವಿನಿ ಹರೀಶ್

ನನ್ನ ಹೆಸರು ಅಶ್ವಿನಿ ಹರೀಶ್. ನಾನು 25-4-1984 ರಂದು ಹೊನ್ನವಳ್ಳಿಯಲ್ಲಿ ಜನಿಸಿದ್ದೇನೆ. ಈ ಊರು ಚಲನಚಿತ್ರ ಹಾಸ್ಯನಟ ಹೊನ್ನವಳ್ಳಿ ಕೃಷ್ಣ ಅವರ ಹುಟ್ಟೂರು.

ನನ್ನ ತಂದೆ-ತಾಯಿಗೆ ಎಂಟು ಮಂದಿ ಮಕ್ಕಳಿದ್ದು, ನಾನು ಏಳನೇ ಸ್ಥಾನದಲ್ಲಿದ್ದೇನೆ. ನಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಹೇಮಾವತಿ ಪ್ರೌಢಶಾಲೆಯಲ್ಲಿ 10ನೇ ತರಗತಿವರೆಗೆ ಓದಿದ್ದೇನೆ.

ಚಿಕ್ಕಂದಿನಿಂದಲೇ ನನಗೆ ಹಾಡು ಹಾಡುವುದು ಬಹಳ ಇಷ್ಟವಾಗಿತ್ತು. ಶಾಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನಗಳನ್ನು ಗಳಿಸಿದ್ದೆ.

ಹೊಲದ ಹತ್ತಿರ ಕೆಲಸ ಮಾಡುವಾಗ ದನ ಮೇಯಿಸುವಾಗ ನನಗೆ ನಾನೇ ಹಾಡಿಕೊಳ್ಳುತ್ತಿದೆ. ಮನೆಯಲ್ಲಿ ಕೆಲಸ ಮಾಡುವಾಗಲು ಪಾತ್ರೆ ತೊಳೆಯುವಾಗಲು ಮನೆ ಸಾರಿಸುವಾಗಲೂ ಹಾಡು ಹೇಳುತ್ತಲೇ ಇದ್ದೆ.

ಪಿಯುಸಿ ವಿದ್ಯಾಭ್ಯಾಸಕ್ಕಾಗಿ ಅರಕಲಗೂಡು ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಸೇರಿದ್ದೆ. ಆದರೆ ಆ ವೇಳೆ ನನ್ನ ತಂದೆ ನಿಧನರಾದರು.

ಕುಟುಂಬದ ಆರ್ಥಿಕ ತೊಂದರೆಗಳಿಂದಾಗಿ ವಿದ್ಯಾಭ್ಯಾಸ ಮುಂದುವರಿಯಲಿಲ್ಲ. ಆದರೂ ನಾನು ಹಾಡು ಹೋದ ಹಾದಿಯನ್ನು ತೊರೆದಿಲ್ಲ.

2006 ರಲ್ಲಿ “ಈ ಟಿವಿಯ ಹಾಡಿಗೊಂದು ಹಾಡು” ಕಾರ್ಯಕ್ರಮದ ಆಡಿಶನ್‌ ನಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದೆ.

ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ಗಾಯಕಿ ಬಿ.ಆರ್. ಛಾಯ ಮತ್ತು ರವಿಶಂಕರ್ ಜ್ಯೂರಿಯಾಗಿ ಭಾಗವಹಿಸಿದ್ದರು.

ಅರಕಲಗೂಡಿಗೆ ಮನೆ ಬದಲಾಯಿಸಿದ ನಂತರ, ಜನಪದ ಕಲಾವಿದ ದೇವಾನಂದ್ ವರಪ್ರಸಾದ್ ಅವರು ಬೇಸಿಗೆ ಶಿಬಿರ ಆಯೋಜಿಸಿದ್ದರು.

ಅವರಿಗೆ ನನ್ನ ಮಗಳನ್ನು ಸೇರಿಸಲು ಹೋಗಿ ನನ್ನಲ್ಲಿದ್ದ ಗಾಯನ ಆಸಕ್ತಿಯನ್ನು ನೋಡಿ, ಅವರಿಗೆ ಹಾಡಲು ಅವಕಾಶ ನೀಡಿದರು.

ಮೈಸೂರು ದಸರಾ, ಕೋಟಿ ಕಂಠ ಗೀತೆ, YESHTEL ಟಿವಿ ಕಾರ್ಯಕ್ರಮಗಳಲ್ಲಿ ಜನಪದ ಗೀತೆಗಳನ್ನು ಹಾಡಿದ್ದೇನೆ.

ಮೈಸೂರು ಕಿರು ರಂಗಮಂದಿರದ ಜಾನಪದ ಹಬ್ಬದಲ್ಲಿ ‘ಸೋಜಿಗಾದ ಸೂಜುಮಲ್ಲಿಗೆ’ ಹಾಡು ಹಾಡಿ ಶ್ರೋತೃಗಳ ಮನಗೆದ್ದಿದ್ದೆ.

ದೇವಾನಂದ್ ಅವರ ಸಂಗೀತ ಸಂಯೋಜನೆಯಲ್ಲಿ “ದೂರದ ಬೆಟ್ಟ ನುಣ್ಣಗೆ” ಎಂಬ ನಾಟಕದಲ್ಲಿ ನಾನು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದೆ.

ಸೋಬಾನೆ, ರಾಗಿ ಬೀಸೋ ಪದಗಳ ತರಬೇತಿ ಅವರು ನೀಡಿದರು. ಅವರ ಮಾರ್ಗದರ್ಶನದಿಂದ ನಾನು ಹೊಸ ಶೈಲಿಗಳನ್ನು ಕಲಿತೆ.

ಶೇಖರ್ ಅವರು ನನ್ನ ಚಲನಚಿತ್ರ ಗೀತೆಗಳ ಗಾಯನದ ಶೈಲಿಗೆ ಮಾರ್ಗದರ್ಶನ ನೀಡಿದ್ದಾರೆ. ಕರೋಕೆ ಪಾಠ ಕಲಿಸಿದ್ದಾರೆ.

ಅವರು ಆಯೋಜಿಸಿದ್ದ “ಸ್ವರ ಸಂಭ್ರಮ” ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಿ ಬಹುಮಾನ ಹಾಗೂ ಸ್ಮರಣಿಕೆಗಳನ್ನು ಗಳಿಸಿದ್ದೆ.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಯೂತ್ ಮೇಳದಲ್ಲಿ ಜಿಲ್ಲಾ ಮಟ್ಟ, ವಿಭಾಗ ಮಟ್ಟ ಜಯಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾದೆ.

ಆದರೆ ಕೋವಿಡ್ ಕಾರಣದಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ. ಇದು ನನ್ನ ಸಂಗೀತ ಪಯಣದಲ್ಲಿ ಒಂದು ನಿರಾಸೆಯ ಹಂತವಾಯಿತು.

‘ಲಹರಿ’ ಎಂಬ ತಂಡವನ್ನು ತಯಾರಿಸಿ ವಿವಿಧ ಹಬ್ಬಗಳಲ್ಲಿ ಭಾಗವಹಿಸಿದ್ದೆ. ಹಳ್ಳಿ ಸಂಸ್ಕೃತಿ ಹಬ್ಬದಲ್ಲಿ ನನ್ನ ಮಗಳು ಹಾಗೂ ಮಕ್ಕಳು ಸೇರಿಕೊಂಡಿದ್ದೆವು.

ಅಲ್ಲಿ ಭಜನೆ, ನೃತ್ಯ, ಜನಪದ ಗೀತೆಗಳು, ಆರತಿ ಶಾಸ್ತ್ರದ ಹಾಡುಗಳೊಂದಿಗೆ ಪ್ರಥಮ ದ್ವಿತೀಯ ಬಹುಮಾನ ಗಳಿಸಿದ್ದೆವು.

ಅರಕಲಗೂಡು ದಸರಾ, ಗಣೇಶೋತ್ಸವ, ಶಿಕ್ಷಕರ ದಿನಾಚರಣೆಯಲ್ಲಿ ನಮ್ಮ ತಂಡದಿಂದ ಹಾಡುಗಳನ್ನು ಪ್ರಸ್ತುತಪಡಿಸಿದ್ದೆವು.

ಹಾಸನ ಜಿಲ್ಲೆಯ ಬರಹಗಾರರ ಸಂಘದ ಅಧ್ಯಕ್ಷ ಸುಂದರೇಶ್ ಡಿ. ಉಡುವಾರೆ ಅವರು ಕರೀಂಖಾನ್ ಪ್ರಶಸ್ತಿ ನೀಡಿ ಗೌರವಿಸಿದರು.

ಕರ್ನಾಟಕ ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯಕ್ ಲಂಬಾಣಿ ಅವರು ನಡೆಸಿದ ಆನ್‌ಲೈನ್ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಗೌರವ ಪಡೆದೆ.

2024ರ ಶಿವಮೊಗ್ಗ “ಕನ್ನಡ ನುಡಿ ವೈಭವ” ಕಾರ್ಯಕ್ರಮದಲ್ಲಿ ನನಗೆ ‘ಗಾನಕೋಗಿಲೆ’ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಗೊರೂರು ಅನಂತರಾಜು, ಹಾಸನ.
9449462879
ವಿಳಾಸ: ಹುಣಸಿನಕೆರೆ ಬಡಾವಣೆ,
29ನೇ ವಾರ್ಡ್, 3 ನೇ ಕ್ರಾಸ್,
ಶ್ರೀ ಶನೈಶ್ಚರ ದೇವಸ್ಥಾನ ರಸ್ತೆ,
ಹಾಸನ-573201

ವಿದ್ಯಾ ವಿನಯ ಸಂಪನ್ನಂ ವೀತರಾಗಂ ವಿವೇಕಿನಮ್ ವಂದೇ ವೇದಾಂತ ತತ್ವಜ್ಞಂ ವಿಧುಶೇಖರ ಭಾರತೀಂ

ವಿದುಶೇಖರ ಮಹಾಸ್ವಾಮಿಗಳ ಜನನ ತಿರುಪತಿಯಲ್ಲಿ ನಿಷ್ಠಾವಂತ ವೇದ ವಿದ್ವಾಂಸರ ಮನೆಯಲ್ಲಿ 1993ರ ಜುಲೈ 24 ರಂದು ಆಯಿತು. ಅವರ ತಂದೆ ಕುಪ್ಪಾ ವೇ ಬ್ರ.ಶ್ರೀ.ಶಿವಸುಬ್ರಹ್ಮಣ್ಯ ಅವದಾನಿ ಮತ್ತು ತಾಯಿ ಶ್ರೀಮತಿ ಸೀತಾ ನಾಗಲಕ್ಷ್ಮಿ.ಈ ದಂಪತಿಗಳ ಕಿರಿಯ ಪುತ್ರರೇ ತಿರುಪತಿಯಲ್ಲಿ ವೆಂಕಟೇಶ್ವರನ ಕೃಪೆಯಿಂದ ಜನಿಸಿ ವೆಂಕಟೇಶ ಪ್ರಸಾದರೆನಿಸಿದರು. ಐದನೇ ವಯಸ್ಸಿನಲ್ಲೇ ಅವರಿಗೆ ಬ್ರಹ್ಮೋಪದೇಶ ಆಯಿತು. ತಾತ ರಾಮಗೋಪಾಲ ಯಾಜಿಯವರಲ್ಲಿ ಬಾಲಕ ಕೃಷ್ಣ ಯಜುರ್ವೇದ ಕ್ರಮಾಂಕ ಪಾಠ ಕಲಿಯಲು ಆರಂಭಿಸಿದ್ದು ಉಪನಯನದ ನಂತರ.

2006 ರಲ್ಲಿ ತಂದೆಯವರೊಂದಿಗೆ ಬಾಲಕ ಶೃಂಗೇರಿಗೆ ಮೊದಲ ಬಾರಿ ಆಗಮಿಸಿದಾಗ ಈ ಕ್ಷೇತ್ರ ಬಾಲಕನನ್ನು ಸೆಳೆದಿರಲೇಬೇಕು. ಪುನ: 2008 ರಲ್ಲಿ ತಂದೆಯವರೊಂದಿಗೆ ಬಂದರು. ಆಗಲೇ ತಮಗೆ ಶೃಂಗೇರಿಯೇ ಕರ್ಮಭೂಮಿ ಎಂದವರ ಮನಸ್ಸು ಗಟ್ಟಿ ಮಾಡಿತ್ತು.

2009 ರಲ್ಲಿ ಮತ್ತೆ ಶೃಂಗೇರಿಗೆ ಬಂದಾಗ ಜಗದ್ಗುರುಗಳಿಂದ ತಾನು ಶಾಸ್ತ್ರ ಕಲಿಯಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದರು. ತಂದೆಯವರ ಅನುಮತಿ ನಂತರ ಜಗದ್ಗುರುಗಳ ಅನುಮತಿಯೂ ದೊರಕಿತು. ಕೇವಲ ಒಂದೂವರೆ ವರ್ಷದಲ್ಲಿ ಸಂಸ್ಕೃತ ಕಲಿತಿದ್ದು ಮಾತ್ರವಲ್ಲ ಕನ್ನಡದಲ್ಲಿ ಉಪನ್ಯಾಸ ನೀಡುವಷ್ಟು ಅವರು ಸಮರ್ಥರಾಗಿದ್ದರು. ಉಳಿದವರಿಗೆ ಒಂದೇ ಭಾಷೆ ಕಲಿಯಲು ಕನಿಷ್ಠ ನಾಲ್ಕು ವರ್ಷದ ಕಲಿಕೆ ಅಗತ್ಯವಾದರೆ ಇವರಿಗೆ ಇಷ್ಟು ಸ್ವಲ್ಪ ಸಮಯದಲ್ಲೇ ಎರಡು ಭಾಷೆಯ ಹಿಡಿತ ಸಿದ್ಧಿಸಿತ್ತು.

ಸಂಸ್ಕೃತ ಕಾವ್ಯ ಮತ್ತು ಸಾಹಿತ್ಯವನ್ನು ಶೃಂಗೇರಿಯ ವಿದ್ವಾನ್ ಶಿವಕುಮಾರ ಶರ್ಮ ಬೋಧಿಸಿದರೆ ವಿದ್ವಾನ್ ಕೃಷ್ಣ ರಾಜ ಭಟ್ಟರು ವ್ಯಾಕರಣ ಬೋಧಿಸಿದರು. ಎಲ್ಲವೂ ಬಹುಬೇಗ ಕಲಿತ ಬ್ರಹ್ಮಚಾರಿ ಅಚ್ಚರಿಗೆ ಕಾರಣರಾದರು. ಸೂಕ್ಷ್ಮ ಗ್ರಾಹಿ ಬ್ರಹ್ಮಚಾರಿಯಯ ಗುಣ ಸ್ವಭಾವ, ಜ್ಞಾನದಾಹ ಅರಿತ ಜಗದ್ಗುರುಗಳು ತಾವೇ ಶಾಸ್ತ್ರ ಕಲಿಸಲು ನಿರ್ಧರಿಸಿದರು. ಎರಡು ವರ್ಷ ಜಗದ್ಗುರುಗಳಿಂದ ಶಿಕ್ಷಣ ದೊರಕಿತು. ನ್ಯಾಯ ಶಾಸ್ತ್ರ, ಮೀಮಾಂಸ ಮತ್ತು ವೇದಾಂತ ಕಲಿಕೆ ಸಾಗುತ್ತಿದ್ದಾಗಲೇ ಅವರ 22 ನೇ ವಯಸ್ಸಿನಲ್ಲೇ ಜನವರಿ 23.2015 ರಂದು ಜಗದ್ಗುರುಗಳು ಅವರಿಗೆ ಸನ್ಯಾಸವಿತ್ತು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿ ಶ್ರೀವಿಧುಶೇಖರ ಭಾರತಿ ಎಂಬ ಯೋಗಪಟ್ಟನೀಡಿದರು.

ಆಗ ಜಗದ್ಗುರುಗಳು ತಮಗೆ ಅತ್ಯಂತ ಪೂಜನೀಯರಾದ ತಮ್ಮ ಪರಮಗುರು ಸ್ಮರಣೆಯಲ್ಲಿ ತಾವು ಶ್ರೀ ವಿಧುಶೇಖರ ಎಂಬ ಯೋಗಪಟ್ಟ ನೀಡುತ್ತಿದ್ದು ವಿಧು ಎಂದರೆ ಚಂದ್ರನೆಂದೇ ಅರ್ಥ ಎಂದು ವಿವರ ನೀಡಿದ್ದರು.

ಮುಂದೆ ಎರಡು ವರ್ಷಗಳ ಕಾಲ ಅವರು ತಮ್ಮ ಗುರುವರ್ಯರಿಂದ ಸಂಪೂರ್ಣ ವೇದಾಂತ ಶಾಸ್ತ್ರಹೃದ್ಗತ ಮಾಡಿಕೊಂಡರು. ತಮಿಳು ಶಿಕ್ಷಣವನ್ನೇನೂ ಅವರು ಪಡೆದವರಲ್ಲ. 2017 ರಲ್ಲಿ ತಮ್ಮ ಗುರುವರ್ಯರೊಂದಿಗೆ ಧರ್ಮ ವಿಜಯಯಾತ್ರೆ ಕೈಗೊಂಡಾಗ ಅವರ ತಮಿಳುನಾಡಿನಲ್ಲಿ ತಮಿಳಿನಲ್ಲೇ ಅನುಗ್ರಹ ಭಾಷಣ ಮಾಡಿದರು. ಮುಂದೆ ಅವರು ತಮಿಳುನಾಡಿನ ವಿಜಯಯಾತ್ರೆಯ ಸಂಧರ್ಭದಲ್ಲೆಲ್ಲಾ ತಾವು ತಮಿಳು ಮಾತೃಭಾಷೆಯವರೇ ಎಂಬ ರೀತಿ ಉಪನ್ಯಾಸ ನೀಡಿದರು. ತಮ್ಮ 25ನೇ ವಯಸ್ಸಿನಲ್ಲೇ ಜಗದ್ಗುರುಗಳ ಅನುಜ್ಞೆಯಂತೆ ಅವರು ಐದು ತಿಂಗಳ ಧರ್ಮವಿಜಯ ಯಾತ್ರೆಯನ್ನು ಕರ್ನಾಟಕ, ಆಂದ್ರಗಳಲ್ಲಿ ಕೈಗೊಂಡರು. ನಂತರ 4 ತಿಂಗಳ ಮಹಾರಾಷ್ಟ್ರ ವಿಜಯಯಾತ್ರೆಯನ್ನು ಮಾಡಿದರು. 2020 ರಲ್ಲಿ ಕೇರಳದಲ್ಲಿ ವಿಜಯಯಾತ್ರೆಯನ್ನು ಕೈಗೊಂಡರು ಮತ್ತು ಮಲೆಯಾಳಿಯಲ್ಲೇ ಅನುಗ್ರಹ ಭಾಷಣ ಮಾಡಿದರು. 2022 ರಲ್ಲಿ ತಮ್ಮ ಗುರುವರ್ಯರ ಅನುಜ್ಞೆಯಂತೆ ದ್ವಾರಕೆಗೆ ತೆರಳಿ ದ್ವಾರಕಾ ಮತ್ತು ಬದರೀ ಶಂಕರಾಚಾರ್ಯರ ಪಟ್ಟಾಭಿಷೇಕ ನಡೆಸಿ ಅನುಗ್ರಹಿಸಿದರು. ಆಗ ಅವರು ಹಿಂದಿ ಭಾಷೆಯ ಉಪನ್ಯಾಸ ಗಮನ ಸೆಳೆಯಿತು.

ಅವನಿ ಶೃಂಗೇರಿ ಮಠ, ನೆಲಮಾವು ಮಠಗಳ ಮಠಾದಿಪತಿಗಳಿಗೆ ಅವರು ಪಟ್ಟಾಭಿಷೇಕ ಮಾಡಿದರು. ಕಾಶ್ಮೀರದ ಟ್ವೀಟ್ವಾಲ್ ಗೆ ತಮ್ಮ ಗುರುವರ್ಯರ ಆದೇಶದಂತೆ ತೆರಳಿ ಶಾರದಾಂಬೆಯ ಪ್ರಾಣ ಪ್ರತಿಷ್ಠೆ ಮಾಡಿ ಅಭಿನವ ಶಂಕರಾಚಾರ್ಯರೆನಿಸಿದರು. ಅವರು ಗುರುವರ್ಯರ ಆದೇಶದಂತೆ ಧರ್ಮ ಪ್ರಬೋಧನೆಗಾಗಿ ನಿರಂತರ ಧರ್ಮ ವಿಜಯ ಯಾತ್ರೆಯನ್ನು ಕೈಗೊಳ್ಳುವ ಮೂಲಕ ಪರಿವ್ರಾಜಕಾಚಾರ್ಯರೆನಿಸಿದ್ದಾರೆ.
ಅವರು ದೇವಸ್ಥಾನಗಳಲ್ಲಿ ನಡೆಸುವ ಪೂಜೆ, ದೇವಸ್ಥಾನಗಳ ಕುಂಭಾಭಿಷೇಕದಲ್ಲಿ, ಹೋಮ ಹವನಗಳಲ್ಲಿ ಪಾಲ್ಗೊಳ್ಳುವ ರೀತಿ ಭಕ್ತರ ಹೃನ್ಮನ ಸೆಳೆಯುತ್ತದೆ.

ಶೃಂಗೇರಿಯ ಅತ್ಯಂತ ಪ್ರಸಿದ್ಧ ವಾಕ್ಯಾರ್ಥ ಸಭೆಗಳಲ್ಲಿ ಅವರು ಅಧ್ಯಕ್ಷತೆವಹಿಸಿ ನಿರ್ವಹಿಸುವ ರೀತಿ ದೇಶದ ಪ್ರಖ್ಯಾತ ಪಂಡಿತರನ್ನೇ ನಿಬ್ಬೆರಗಾಗುವಂತೆ ಮಾಡಿದೆ. ಧರ್ಮ ಆಚರಣೆಗೆ ಅವರು ನೀಡುವ ಉಪನ್ಯಾಸಗಳು ಮನಸ್ಸಿಗೆ ನಾಟುತ್ತದೆ. ಸತತ ಅಧ್ಯಯನ ಮತ್ತು ಅಧ್ಯಾಪನ ನಡೆಸುವ ಅವರು ತಮ್ಮ ಅನುಗ್ರಹ ಭಾಷಣಗಳಲ್ಲಿ ಭಗವದ್ಗೀತೆ, ಶಂಕರ ಭಾಷ್ಯ, ವೇದ, ಉಪನಿಷತ್, ಶಂಕರ ವಿಜಯ, ಪುರಾಣಗಳ ಶ್ಲೋಕಗಳನ್ನು ಪೋಣಿಸುವ ರೀತಿ ಅವರ ಅಪಾರ ವಿದ್ವತ್ ಗೆ ಸಾಕ್ಷಿ ಹೇಳುತ್ತದೆ.

ಶೃಂಗೇರಿಯ ಗುರುಪರಂಪರೆಯ ಎಲ್ಲಾ ವಿಶೇಷಣಗಳೂ ಅವರಲ್ಲಿ ಮೈತಾಳಿದೆ. ಈ ವರ್ಷದ ಅವರ ಉತ್ತರ ಭಾರತದ ಧರ್ಮ ವಿಜಯ ಯಾತ್ರೆ ಉದ್ದಕ್ಕೂ ಕಂಡ ದೃಶ್ಯ ಭಾರತದ ಧಾರ್ಮಿಕ ಕ್ಷೇತ್ರದಲ್ಲಿ ನವ ನಕ್ಷತ್ರೋದಯವಾಗಿದ್ದಕ್ಕೆ ಸಾಕ್ಷಿ ಒದಗಿಸಿತು. ಪ್ರಯಾಗರಾಜ್ ಮಹಾ ಕುಂಭದಲ್ಲಿ ಅವರು ಮೌನಿ ಅಮವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಇದಕ್ಕೂ ಮೊದಲು ಅಲ್ಲಿ ಪ್ರತಿದಿನ ಶಾಸ್ತ್ರ ಸಭೆ ನಡೆಸಿದರು. ಸಂತ ಸಮ್ಮೇಳನದ ಅಧ್ಯಕ್ಷತೆ ವಹಿಸಿದರು. ಮೂರು ಆಮ್ನಾಯ ಪೀಠಾದೀಶ್ವರರು ಪಾಲ್ಗೊಂಡ ಧರ್ಮ ಸಂಸತ್ ಅಧ್ಯಕ್ಷತೆ ವಹಿಸಿದರು.

ಕಾಶಿಯಲ್ಲಿ ಮಾತಾ ಅನ್ನಪೂರ್ಣೇಶ್ವರಿಯ ಪ್ರತಿಷ್ಠಾ ಕುಂಭಾಭಿಷೇಕ ನಡೆಸಿದರು. ತಮ್ಮ ಗುರುವರ್ಯರು ಎಲ್ಲೆಲ್ಲಿ ತೆರಳಿ ಅನುಗ್ರಹಿಸಿದ್ದರೋ ಅಲ್ಲೆಲ್ಲಾ ತೆರಳಿ ಅನುಗ್ರಹಿಸಿದರು. ಕಾಶೀ ವಿಶ್ವನಾಥನ ಪೂಜೆ ನೇರವೇರಿಸಿದರು.

ಈಗಾಗಲೇ ಅವರು ಸುಬ್ರಹ್ಮಣ್ಯ ಪುಣ್ಯ ಕ್ಷೇತ್ರಗಳಾದ ತಿರಚಂದೂರು ಮತ್ತು ಪಳನಿಗೆ ತೆರಳಿ ಪೂಜೆ ನೆರವೇರಿಸಿದ್ದಾರೆ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂಬತ್ತು ಕಡೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇಶಾದ್ಯಂತ ನೂರಾರು ದೇವಸ್ಥಾನಗಳ ಕುಂಭಾಭಿಷೇಕ, ಪ್ರತಿಷ್ಠಾ ಕಾರ್ಯಕ್ರಮ ನಡೆಸಿದ್ದಾರೆ.

ಎಲ್ಲಕ್ಕೂ ಶಿಖರಪ್ರಾಯವಾಗಿ ಅವರ ಅಚಲ ಗುರುಭಕ್ತಿ ಸಾಟಿ ಇಲ್ಲದ್ದು. ಎಲ್ಲೇ ಶೃಂಗೇರಿಯಿಂದ ದೂರ ತೆರಳಲಿ ತಮ್ಮ ಗುರುವರ್ಯರ ಸ್ಮರಣೆ ಮಾಡದೇ ಅವರು ಅನುಗ್ರಹ ಭಾಷಣ ನೀಡುವುದೇ ಇಲ್ಲ.ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳ ಸನ್ಯಾಸ ಸ್ವೀಕರಿಸಿದ ಸುವರ್ಣ ವರ್ಷಾಚರಣೆಯನ್ನು ಅವರು ಅಭೂತಪೂರ್ವವಾಗಿ ಆಚರಿಸಿದರು. ಸುವರ್ಣ ಭಾರತಿ ಕಾರ್ಯಕ್ರಮ ಒಂದು ನವ ಇತಿಹಾಸ ಸೃಷ್ಟಿಸಿತು. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ “ನಮ: ಶಿವಾಯ” ಶ್ರೀ ಭಾರತೀತೀರ್ಥ ಮಹಿಸ್ವಾಮಿಗಳ ಸುವರ್ಣ ವರ್ಷದ ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಕಂಠಗಳು ಏಕಕಾಲಕ್ಕೆ ಒಂದೆಡೆ ಶಂಕರ ಭಗವತ್ಪಾದರ ಸ್ತೋತ್ರ ಪಠಣ ಮಾಡುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿತು.

ಶೃಂಗೇರಿಯಲ್ಲಿ ಗುರುವರ್ಯರ ಗೌರವಾರ್ತ ನಡೆದ ತ್ರಿವೇಣಿ ಸಂಗಮವೂ ಒಂದು ವಿಶ್ವ ದಾಖಲೆಯೇ. ಶೃಂಗೇರಿಯಂತ ಪುಟ್ಟ ಹಳ್ಳಿಯಲ್ಲಿ ಐವತ್ತು ಸಹಸ್ರ ಭಕ್ತರು ಸ್ತೋತ್ರ ಪಠಣ ಮಾಡಿ ಇತಿಹಾಸ ಸೃಷ್ಟಿಸಿದರು.

ದೇಶ ಯುದ್ದ ಸ್ಥಿತಿಯಲ್ಲಿದ್ದಾಗಲೇ ಜಗದ್ಗುರುಗಳು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮ ನಡೆಸಿದರು. ಆ ಸಂಧರ್ಭ ಅವರು ಪುರ ಪ್ರವೇಶ ಮಾಡುವಾಗ ಸಂಪ್ರದಾಯದಂತೆ ತಮ್ಮ ಶೋಭಾಯಾತ್ರೆ ಸಿದ್ಧತೆ ಆಗಿದ್ದರೂ ಅದನ್ನು ನಿರಾಕರಿಸಿದರು. ದೇಶ ಸಂಕಷ್ಟದಲ್ಲಿದೆ ನಮ್ಮ ಶೋಭಾಯಾತ್ರೆ ಬೇಡ ಎಂದರು. ದೇಶದ ಒಳಿತಿಗಾಗಿ ಅವಿರತ ಪ್ರಾರ್ಥನೆ ಸಲ್ಲಿಸಲು ಭಕ್ತರಿಗೆ ಉಪದೇಶಿಸಿದರು. ಕಾಶ್ಮೀರದ ಉಗ್ರರ ದಾಳಿಯಲ್ಲಿ ಬಲಿಯಾದ ಎಲ್ಲ ಸಂತ್ರಸ್ತರ ಕುಟುಂಬಗಳಿಗೂ ಶಾರದಾ ಪ್ರಸಾದ ರೂಪವಾಗಿ ತಲಾ ಎರಡು ಲಕ್ಷ ರೂ ಕಳಿಸಿಕೊಟ್ಟರು.ಅವರ ಅಪ್ರತಿಮ ದೇಶಭಕ್ತಿ ಶ್ರೀ ವಿದ್ಯಾರಣ್ಯರನ್ನು ನೆನಪಿಗೆ ತರುವಂತಿತ್ತು.

ಜಗದ್ಗುರು ಶ್ರೀ ವಿಧುಶೇಖರ ಭಾರತಿಯವರನ್ನು ಆಗಲೇ ದೇಶದ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಅನೇಕ ರಾಜ್ಯದ ರಾಜ್ಯಪಾಲರು, ಗೃಹಸಚಿವರೂ ಸೇರಿದಂತೆ ಕೇಂದ್ರದ ಮಂತ್ರಿಗಳು, ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಒಳಗೊಂಡಂತೆ ಅನೇಕ ಮುಖ್ಯ ಮಂತ್ರಿಗಳು, ಧಾರ್ಮಿಕ ಮುಖಂಡರು, ನ್ಯಾಯ ಮೂರ್ತಿಗಳು, ಎಲ್ಲಾ ಕ್ಷೇತ್ರಗಳ ಮುಖಂಡರು ಭೇಟಿ ಆಗಿ ಅನುಗ್ರಹ ಪಡೆದಿದ್ದಾರೆ.

ಸಕಲ ಶಾಸ್ತ್ರ ಪಾರಂಗತರಾಗಿ, ವೇದಾಂತ ಹೃದ್ಗತ ಮಾಡಿಕೊಂಡು ನೈಜ ಸನ್ಯಾಸಿಯಾಗಿ ಸನಾತನ ಧರ್ಮದ ತೋರುಬೆಳಕಾಗಿ ಅವರು ಮೂಡಿ ಬಂದಿದ್ದಾರೆ. ಶೃಂಗೇರಿಯ ಧಕ್ಷಿಣಾಮ್ನಾಯ ಶಾರದಾಪೀಠವನ್ನು ಮುನ್ನೆಡೆಸುವ ಸಮರ್ಥ ಪೀಠಾದೀಶ್ವರರಾಗಿ ಮಠದ ಬಹು ಆಯಾಮದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವರು ಶಕ್ತಿ ತುಂಬುತ್ತಿದ್ದಾರೆ. ತಮ್ಮ ಶಿಷ್ಯರು ತಮಗೆ ಪ್ರತಿಕ್ಷಣ ಆನಂದ ಉಂಟು ಮಾಡುತ್ತಿದ್ದಾರೆ. ನಮ್ಮ ಮನಸ್ಸಿನಲ್ಲಿದ್ದುದನ್ನು ಅವರ ಓದಬಲ್ಲರು.

ಶೃಂಗೇರಿಗೆ ಅತ್ಯಂತ ಯೋಗ್ಯ ಉತ್ತರಾಧಿಕಾರಿಯನ್ನು ಜಗನ್ಮಾತೆ ಶಾರದಾಂಬೆ ಅನುಗ್ರಹಿಸಿದ್ದಾಳೆ ಎಂಬ ಜಗದ್ಗುರು ಶ್ರೀ ಭಾರತೀತೀರ್ಥರ ಮಾತು ಅಕ್ಷರಶಃ ಸತ್ಯವಾಗಿದೆ. ಜಗದ್ಗುರು ಶ್ರೀ ವಿಧುಶೇಖರ ಭಾರತಿಯವರು ಸನಾತನ ಧರ್ಮದ ಸಮರ್ಥ ಮಾರ್ಗದರ್ಶಕರಾಗಿ ಸಾಧನಾ ಪಥದಲ್ಲಿ ಮುನ್ನೆಡೆಯುತ್ತಿದ್ದಾರೆ.

 

ಶ್ರೀ ನಾರಾಯಣರಾವ್‌ ವೈದ್ಯ

ಧರ್ಮದರ್ಶಿಗಳು, ಶೃಂಗೇರಿ ಶಂಕರಮಠ

ಶಾರದಾ ನಗರ, ಗಂಗಾವತಿ.

 

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ.

ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ.

ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ ಸಮಾರಂಭದಲ್ಲಿ ಕನ್ನಡ ಕೋಗಿಲೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾದ ಡಾ. ವಿದ್ಯಾ ಕೆ. ಅವರು ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರಾದ ಮಧುನಾಯಕ್ ಲಂಬಾಣಿ ಉದ್ಘಾಟಿಸಲಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಆಶಯ ಭಾಷಣ ನೀಡಲಿದ್ದಾರೆ.

ಹಾಸನದ ಸಾಹಿತಿ ಗೊರೂರು ಅನಂತರಾಜು ಮತ್ತು ಕುರುವಂಜಿ ಕೆ.ಪಿ. ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದಲ್ಲದೆ, ಚಿಕ್ಕಮಗಳೂರಿನ ಬಿ.ಎಲ್. ಪ್ರವೀಣ್, ಜಯಣ್ಣ, ಎಂ.ಎಸ್. ನಾಗರಾಜ್, ಎಚ್.ಎಂ. ಜಗದೀಶ್, ಹಸೈನಾರ್ ಬಿಳಿಗುಳ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಕೇಶ್ ಸಿಂಗ್, ಡಾ. ಶೈಲಜಾ ಕುಮಾರ್, ವಿನೋದ್, ಇಂಪಾ ನಾಗರಾಜ್, ನವೀನ್ ಬಿ.ಆರ್., ವಿಜಯ್ ಕುಮಾರ್, ಸಿ.ಆರ್.ಗೌರವ ಕಾರ್ಯದರ್ಶಿ, ರವಿ ಕುನ್ನಳ್ಳಿ ಗೌರವ ಸಹ ಉಪಸ್ಥಿತರಿರಲಿದ್ದಾರೆ.

ಪ್ರಶಸ್ತಿ ಪ್ರದಾನವನ್ನು ಮಹಾಭಾರತ ಕಲಾವಿದರಾದ ಮಧುಚಂದ್ರ, ರಮೇಶ್ ಯಾದವ್ ಮತ್ತು ಕಾಮಿಡಿ ಕಿಲಾಡಿ ಕಲಾವಿದರು ನೆರವೇರಿಸಲಿದ್ದಾರೆ.

ತಂಬೂರಿ ಜನಪದ ಹಾಡುಗಾರರು ಮಾಂಬಳ್ಳಿ ಶ್ರೀನಿವಾಸ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯ ಶ್ರೀನಿವಾಸ್ ಅವರು ಚಿಕ್ಕವಯಸ್ಸಿನಿಂದಲೂ ಜನಪದ ಹಾಡು, ತಂಬೂರಿ ಶೈಲಿಯ ಕತೆಗಳನ್ನು ಹಾಡುತ್ತಾ ಬಂದಿದ್ದಾರೆ.

ಸಿದ್ದಪ್ಪಾಜಿ ಪವಾಡಗಳು, ಮಂಟೇಸ್ವಾಮಿ ಕತೆ ಬಿಳಿಗಿರಿರಂಗನ ಕತೆ, ಮುಡುಕುತೊರೆ ಮಲ್ಲಿಕಾರ್ಜುನನ ಕತೆ, ಮಲೆಮಹದೇಶ್ವರ ಕತೆ. ಹೀಗೆ ಹಲವಾರು ಕತೆಗಳನ್ನು ತಾಳ ತಂಬೂರಿ ಗಗ್ಗರದ ನಾದಕ್ಕೆ ತಕ್ಕಂತೆ ಹಾಡುತ್ತಾರೆ.

ಸರಿಸುಮಾರು ಐವತ್ತಕ್ಕೂ ಹೆಚ್ಚು ತತ್ವಪದಗಳನ್ನು, ಅಂತಿಮಯಾತ್ರೆಯ ಭಜನೆ ಪದಗಳನ್ನು, ಶೋಕಗೀತೆಗಳನ್ನು ಹಾಡುವಲ್ಲಿ ಕರಗತ ಮಾಡಿಕೊಂಡಿದ್ದಾರೆ.

ಇವರ ಮಾಂಬಳ್ಳಿ ಮನೆಯ ಪಕ್ಕ ಮಹದೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನ, ಆ ಕಾಲಕ್ಕೆ ಮಠವಾಗಿತ್ತು. ಮುಂಭಾಗದಲ್ಲಿ ಮಜ್ಜನದ ಹನ್ನೆರಡಾಳುದ್ದ ನೆಲಬಾವಿ ಇದೆ.

ಆ ಬಾವಿಗೆ ತಮ್ಮ ಹತ್ತನೇ ವಯಸ್ಸಿನಲ್ಲಿಯೇ ಕಾಲು ಜಾರಿ ಬೀಳುತ್ತಾರೆ, ಮಗ ಕಾಣದಿದ್ದಾಗ ತಂದೆತಾಯಿಗಳು ಊರೆಲ್ಲಾ ಹುಡುಕಾಡುತ್ತಾರೆ, ಎಲ್ಲೂ ಸಿಗುವುದಿಲ್ಲ.

ಕೊನೆಗೆ ಮಠದ ಮುಂದಿನ ಬಾವಿಯಿಂದ ತಾಳದ ಶಬ್ಧ ಕೇಳಿಸುತ್ತದೆ. ಜನ ಓಡಿಹೋಗಿ ನೋಡಲು ತಾಳ ಹಾಕುತಿದ್ದ ಹುಡುಗ ಕಾಣಿಸುತ್ತಾನೆ.

ಆಗ ಹಗ್ಗದ ಸಹಾಯದಿಂದ ಮೇಲಕ್ಕೆ ಎತ್ತಿ ನೋಡಿದಾಗ ಬಾಲಕ ಶ್ರೀನಿವಾಸನ ಕೈಲಿ ತಾಳಗಳಿರುತ್ತವೆ.

ಇದನ್ನು ನೋಡಿ ತಂದೆತಾಯಿಗಳು ಮತ್ತು ಊರಿನವರು ಇವನನ್ನು ತಡೆಯಬಾರದು, ಹಾಡಲಿ ಬಿಡಿ ಎಂದು ಹೇಳುತ್ತಾರೆ.

ಅಷ್ಟು ಚಿಕ್ಕ ವಯಸ್ಸಿನಲ್ಲಿಯೇ ಬರೀ ತಾಳ ನುಡಿಸಿಕೊಂಡು ಸಿದ್ಧಪ್ಪಾಜಿಯ ಒಂಬತ್ತು ಪವಾಡವನ್ನು ಹಾಡುತ್ತಿದ್ದರು.

ಇವರ ಸ್ವರಮಾಧುರ್ಯಕ್ಕೆ ಜನ ಮನಸೋತು ರಾತ್ರಿಯಿಡಿ ಕುಳಿತು ಕತೆ ಕೇಳುವುದರ ಜೊತೆಗೆ ಸೊಲ್ಲು ಹಿಮ್ಮೇಳ ಹಾಡುತಿದ್ದರೆಂದರೆ ಕೇವಲ ಹನ್ನೆರಡನೇ ವಯಸ್ಸಿಗೆ ಇವರಿಗೆ ಕಲಾಸರಸ್ವತಿ ಒಲಿದಿದ್ದಳು ಎಂದು ಹೇಳಬಹುದು.

ಇವರು ತಾಳ ಹಿಡಿದು ಹಾಡಲು ಪ್ರಾರಂಭಿಸಿದಾಗ ಈಗಿನ ಹೆಸರಾಂತ ಗಾಯಕರು ಯಾರು ಇರಲಿಲ್ಲ. ಅವರೆಲ್ಲರಿಗೂ ಹಿರಿಯ ಕಲಾವಿದರು. ಇವರು ಒಂದೆರಡು ಕಡೆ ಸಿದ್ದಪ್ಪಾಜಿಯ ಕಳ್ಳಿಪವಾಡದ ಸಮಯದಲ್ಲಿ ಕಳ್ಳಿ ಹಾಲನ್ನು ಕುಡಿದಿರುವುದಾಗಿ ಹೇಳಿದ್ದಾರೆ.

ಅಂದರೆ ಅಷ್ಟು ಮೈದುಂಬಿ ಮೈಮರೆತು ಹಾಡುತ್ತಿದ್ದರು. ಇವರಿಗೆ ತಂದೆ-ತಾಯಿ, ಮಡದಿ, ಇಬ್ಬರು ಮಕ್ಕಳಿದ್ದಾರೆ. ಕತೆ ಕಾರ್ಯಕ್ರಮ ಉಳಿದಂತೆ ಪ್ರತಿದಿನವು ಬೆಳಗ್ಗೆ 7 ಗಂಟೆಯಿಂದ 10 ಗಂಟೆ ನಡುವಿನಲ್ಲಿ ಹೆಗಲಿಗೆ ಜೋಳಿಗೆ ನೇತು ಹಾಕಿಕೊಂಡು ಕೈಲಿ ದಂಬಡಿ ತಾಳ ಹಾಕುತ್ತಾ ಉಪದಾನ ಮಾಡುತ್ತಾರೆ.

ಉಪದಾನದಿಂದ ಬಂದ ದವಸ-ಧಾನ್ಯವನ್ನು ತಂದೆ-ತಾಯಿಗಳಿಗೂ ಕೊಟ್ಟು ಅವರು ಮೂರೊತ್ತು ಊಟ ಮಾಡುವಂತೆ ನೋಡಿಕೊಳ್ಳುತ್ತಿರುವುದು ನಮ್ಮ ಇವತ್ತಿನ ಯುವಜನರಿಗೆ ಮಾದರಿ. ತಂದೆ ತಾಯಿಯನ್ನು ಭಿಕ್ಷೆ ಮಾಡಿ ಸಾಕುತ್ತಿರುವವರಲ್ಲಿ ಇವರು ಮೊದಲಿಗರಿರಬಹುದು.

ಕೆಲವೊಮ್ಮೆ ಇವರು ಜೋಳಿಗೆ ಹಿಡಿದು ರಾತ್ರಿ ವೇಳೆ ಕುಂತು ಭಿಕ್ಷೆ ಮಾಡಿ ತಂದು ನೆರೆಮನೆಯವರಿಗೂ ಕೊಟ್ಟು ಊಟ ಮಾಡಿಸಿರುವ ನಿದರ್ಶನವಿದೆ. ಸುತ್ತಲಿನ ಎಲ್ಲಾ ಊರುಗಳ ಮಾಹಿತಿ ಇವರಲ್ಲಿ ಲಭಿಸುತ್ತದೆ.

ಕೋಪವೇ ಇಲ್ಲದ ವ್ಯಕ್ತಿತ್ವ ಇವರದು, ಎನ್ನುವ ನನಗೆ ಮಾಹಿತಿ ಒದಗಿಸಿದ ಮಳವಳ್ಳಿ ಪಿ. ನಾಗರತ್ನಮ್ಮ ರವರು ಜನಪದ ಕ್ಷೇತ್ರಕಾರ್ಯದಲ್ಲಿ ಕ್ರಿಯ ಶೀಲ ವ್ಯಕ್ತಿತ್ವದವರು.

ಅಂಗಡಿಯ ತರಕಾರಿಯಾಗಲಿ, ಭಿಕ್ಷೆ ಮಾಡಿದ ಅಕ್ಕಿ, ರಾಗಿಯಾಗಲಿ, ಹಣ್ಣಾಗಲಿ ಮಾಂಸವೇ ಆಗಲಿ, ಮಡದಿ ಮನೆಗೆ, ತಾಯಿ ಮನೆಗೆಂದು ಎರಡೆರಡು ಕಟ್ಟಿಸುತ್ತಾರೆ.

ಹಾಗೆಯೇ ತಾಯಿ ಮನೆಗೆ, ಮಡದಿ ಮಕ್ಕಳಿಗೆ ತಲುಪಿಸುವುದು ಇವರ ದೊಡ್ಡ ಗುಣ ಎ೦ದು ಹಾಡಿ ಹೊಗಳಿದರು ಮೇಡಂ.

ಗೊರೂರು ಅನಂತರಾಜು
ಹಾಸನ
9449462879
ವಿಳಾಸ : ಹುಣಸಿನಕೆರೆ ಬಡಾವಣೆ,
29ನೇ ವಾಡ್೬, 3 ನೇ ಕ್ರಾಸ್
ಶ್ರೀ ಶನೇಶ್ವರ ದೇವಸ್ಥಾನ,
ಹಾಸನ – 573201

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ.

ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು.

ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ.

ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ.

ಇವರು ಕೇವಲ ೩ನೇ ತರಗತಿ ವ್ಯಾಸಂಗ ಹೊಂದಿದ್ದರೂ ಜನಪದ ಸಾಹಿತ್ಯದಲ್ಲಿ ಪುಸ್ತಕಕ್ಕಿಂತಲೂ ಹೆಚ್ಚಿನ ತಿಳುವಳಿಕೆ ಹೊಂದಿದ್ದಾರೆ.

ಸಿದ್ದರಾಜು ಸುಮಾರು ೧೫ಕ್ಕೂ ಹೆಚ್ಚು ಜನಪದ ಕಥೆಗಳನ್ನು ತಂಬೂರಿಯೊಂದಿಗೆ ಸುಶ್ರಾವ್ಯವಾಗಿ ಹಾಡುತ್ತಾರೆ.

ಇವರು ಹಾಡಿಕೊಂಡು ಬಂದಿರುವ ಕಥೆಗಳು ಮಂಟೇಸ್ವಾಮಿ ತಂಬೂರಿ ಕಥೆ, ರಾಜ ಸತ್ಯವ್ರತ, ಬಣಜಿ ಹೊನ್ನಮ್ಮ, ದೊಡ್ಡಬಸವಣ್ಣನ ಕತೆ, ಅಣ್ಣತಂಗಿ ಕಥೆ, ನಲ್ಲತಂಗಿ ಕಥೆ, ಕುಂತಿ ಪದ, ಮುಡುಕುತೊರೆ ಮಲ್ಲಪ್ಪ, ಅರ್ಜುನ ಜೋಗಿ, ಬಾಲ್ನಾಗಮ್ಮ, ಮೈದಾಲರಾಮ, ನಿಂಗರಾಜಮ್ಮ. ಚೆನ್ನಿಗರಾಯ, ಕಾಳಿಂಗರಾಜನ ಕಥೆ ಪಿರಿಯಾಪಟ್ಟಣ ಕಾಳಗ.

ಅವರು ಹಾಡುವಾಗ ತಾಳ, ತಂಬೂರಿ, ಡಿಕ್ಕಿ, ದಂಬ್ಡಿ, ಕಂಬ್ಚಿ, ಚಿಟಗದಾಳ ಮುಂತಾದ ತಂತ್ರೋಪಕರಣಗಳನ್ನು ಬಳಸುತ್ತಾರೆ. ಇವುಗಳಲ್ಲಿ ಸೃಜನಶೀಲ ರಾಗ-ತಾಳ ಜೋಡಣೆ ಮೂಲಕ ಹಾಡುಗಳನ್ನು ಅತ್ಯಂತ ಸುಂದರವಾಗಿ ನಿರ್ವಹಿಸುತ್ತಾರೆ.

ಪಿ. ನಾಗರತ್ನಮ್ಮ ಮಳವಳ್ಳಿ ಸಂಪಾದಿತ “ಮಂಟೇಸ್ವಾಮಿ ಜನಪದ ಕಾವ್ಯ” ಕೃತಿಗೆ ಸಿದ್ಧರಾಜು ಹಾಡಿ ಸಹಕಾರ ನೀಡಿದ್ದಾರೆ. ಈ ಕೃತಿಯಲ್ಲಿ ಮಂಟೇಸ್ವಾಮಿ ಅವರ ಜೀವನದ ಪ್ರತಿಯೊಂದು ಘಟನೆಗೆ ಪದ ಕಟ್ಟಿ ಹಾಡಲಾಗಿದೆ.

ಧರೆ ಕಂಡ ಧರ್ಮಗುರು ಪುಸ್ತಕದ ಸ್ಥಳ ಮಾಹಿತಿಗೆ ರಾಗ ಜೋಡಿಸಿ ಹಾಡಿದ ವಿಚಾರವನ್ನು ಪಿ. ನಾಗರತ್ನಮ್ಮ ಶ್ಲಾಘಿಸಿದ್ದಾರೆ. ಅವರು ಕಲಾವಿದನ ಚತುರತೆಯನ್ನು ಪ್ರಶಂಸಿಸಿದ್ದಾರೆ.

ಹಿಮ್ಮೇಳ ಕಲಾವಿದರಾಗಿ ನೀಲಿಸಿದ್ದಯ್ಯ ಮತ್ತು ರಾಚಯ್ಯ ಕೂಡ ರಾಗಪೂರ್ಣ ಗಾನದಲ್ಲಿ ಭಾಗವಹಿಸುತ್ತಾರೆ. ಇವರು ಸಹ ತಂಬೂರಿಗಾನದಲ್ಲಿ ಬಹುಮಟ್ಟಿಗೆ ಪರಿಣಿತರಾಗಿದ್ದಾರೆ.

2023ರ ಮಾರ್ಚ್ 13ರಂದು ಗುಂಡ್ಲುಪೇಟೆ ಶಿಕ್ಷಕರ ಭವನದಲ್ಲಿ ಮಂಟೇಸ್ವಾಮಿ ಕೃತಿ ಬಿಡುಗಡೆ ಸಮಾರಂಭದಲ್ಲಿ ಇವರಿಗೆ ಸನ್ಮಾನ ಸಲ್ಲಿಸಲಾಗಿದೆ. ಈ ಕಾರ್ಯಕ್ರಮವನ್ನು ತಾಲ್ಲೂಕು ಕಸಾಪ ಮತ್ತು ಮಳವಳ್ಳಿ ಸುಂದರಮ್ಮ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಲಾಗಿತ್ತು.

2016ರಲ್ಲಿ ಸವಣೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಜಾನಪದ ಉತ್ಸವದಲ್ಲಿ ಇವರಿಗೆ ಕಲಾರಶ್ಮಿ ಸಮ್ಮಾನ ಲಭಿಸಿದೆ.
2022ರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಂಟೇಸ್ವಾಮಿ ನೀಲಗಾರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಅದೇ ವರ್ಷ ಮಳವಳ್ಳಿಯ ಮಂಟೇಸ್ವಾಮಿ ಮಠ ಕಪ್ಪಡಿ ಜಾತ್ರೆಯಲ್ಲಿಯೂ ಪ್ರಶಸ್ತಿ ಪತ್ರ ಲಭಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ 2025ರ ಮಾರ್ಚ್ 15ರಂದು ಬೀದರ್‌ನಲ್ಲಿ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ.

“ಇಷ್ಟವರೆಗೆ ಎಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ?” ಎಂಬ ಪ್ರಶ್ನೆಗೆ ಅವರು, “ಸುಮಾರು ಐದು ಸಾವಿರ ಆಗಬಹುದು” ಎಂದು ಉತ್ತರಿಸಿದರು.
ಇವರು ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲಿದ್ದಾರೆ, ಅವರಿಗೆ ನಮ್ಮೆಲ್ಲರ ಪುರಸ್ಕಾರವಾಗಲಿ.

ಗೊರೂರು ಅನಂತರಾಜು, ಹಾಸನ.
ಮೊ: ೯೪೪೯೪೬೨೮೭೯
ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ಶ್ರೀ ಶನೀಶ್ವರ ದೇವಸ್ಥಾನ ರಸ್ತೆ, ಹಾಸನ.

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ.

ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.

 

ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ.

ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು ತಂಡದಿಂದ ನಾಟಕ ಇದೆ ಬನ್ನಿ ಎಂದರು.

ಶ್ರೀ ಅನ್ನಪೂರ್ಣೇಶ್ವರಿ ಕಲಾ ಸಂಘದಿ೦ದ ಜುಲೈ 4 ರಿಂದ 9 ರವರೆಗೆ ಆರು ದಿನಗಳ ಪೌರಾಣಿಕ ನಾಟಕೋತ್ಸವ ಹಮ್ಮಿಕೊಂಡಿತ್ತು.

ಅದರಲ್ಲಿ ಕಲಾವಿದ ಡಿ.ವಿ. ನಾಗಮೋಹನ್‌ರವರ  ತಂಡದ ನಾಟಕ ಪ್ರದರ್ಶನ ಏರ್ಪಾಡಾಗಿತ್ತು.

 

ಸಿ.ಎ. ರಾಮಚಂದ್ರರಾವ್ ನನಗೆ ಅವರ ನಟನೆಯ ವಿಡಿಯೋ ಕಳುಹಿಸಿದರು. ಅವರು ಪೌರಾಣಿಕ ರಂಗಭೂಮಿಯಲ್ಲಿ ತುಂಬಾ ಕೆಲಸ ಮಾಡಿದ್ದಾರೆ ಎಂದು ಅವರು ಕಳುಹಿಸಿದ ಮಾಹಿತಿಯಿಂದ ತಿಳಿದುಬಂದಿತು.

 

ಇವರು ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ನಾಗವಲ್ಲಿ ಅಂಚೆ ಚಿಕ್ಕಯನಪಾಳ್ಯದಲ್ಲಿ ಜನಿಸಿದರು. ಇವರು ಶ್ರೀ ಅಪ್ಪುರಾವ್ ಹಾಗೂ ಶ್ರೀಮತಿ ಬೈನಾಬಾಯಿ ಅವರ ಐದನೇ ಸುಪುತ್ರರು.

ಇವರು 12 ವರ್ಷ ಬಾಲಕನಿದ್ದಾಗಲೇ ಗುಬ್ಬಿ ಕಂಪನಿಯ ಹೆಸರಾಂತ ಸಂಗೀತ ನಿರ್ದೇಶಕರಾದ ವಿರುಪಸಂದ್ರ ದಾಸೇಗೌಡರ ಸಂಗೀತ ನಿರ್ದೇಶನದಲ್ಲಿ ಕವಿರತ್ನ ಕಾಳಿದಾಸ ಪೌರಾಣಿಕ ನಾಟಕದ ಬಾಲ ಭೋಜನ ಪಾತ್ರದಲ್ಲಿ ಅಭಿನಯಿಸಿ ರಂಗಪ್ರವೇಶ ಮಾಡಿದರು.

 

ತದನಂತರ, ಅದೇ ದಾಸೇಗೌಡರ ಸಂಗೀತ ನಿರ್ದೇಶನದಲ್ಲಿ ಶ್ರೀ ಕೃಷ್ಣಗಾರುಡಿ ಎಂಬ ನಾಟಕದಲ್ಲಿ ಮಾಯಾಮೋಹಿನಿ ಪಾತ್ರವನ್ನು ಮಾಡಿ ಪಾಂಡು ವಿಜಯ ನಾಟಕದಲ್ಲಿ ಅರ್ಜುನ ಪಾತ್ರವನ್ನು ಹತ್ತು ಬಾರಿ ಮಾಡಿದ್ದಾರೆ.

ಅಂದಿನ ಕಾಲಕ್ಕೆ ಸುತ್ತ ಮುತ್ತಲಿನ ಹಳ್ಳಿಗಾಡಿನ ಜನರ ಮನಸ್ಸನ್ನು ಗೆದ್ದಿರುವ ನಾಟಕವಿದು.

ಕುರುಕ್ಷೇತ್ರ ನಾಟಕದಲ್ಲಿ ಶ್ರೀ ಕೃಷ್ಣ, ಅರ್ಜುನ, ದುರ್ಯೋಧನ, ಭೀಮ, ಕರ್ಣ ಹಾಗೂ ಅಭಿಮನ್ಯು ಈ ಒಂದೊಂದು ಪಾತ್ರವನ್ನು ಹಲವಾರು ಬಾರಿ ಮಾಡಿದ್ದಾರೆ.

ರಾಮಾಯಣದಲ್ಲಿ ದಶರಥ, ಶ್ರೀರಾಮ, ಆಂಜನೇಯ, ರಾವಣ ಮತ್ತು ಭರತ ಇಷ್ಟು ಪಾತ್ರಗಳನ್ನು ಹಲವು ಬಾರಿ ಮಾಡಿದ್ದಾರೆ.

ರಾಜ ವಿಕ್ರಮ ನಾಟಕದಲ್ಲಿ ವಿಕ್ರಮ, ಶನೇಶ್ವರನ ಪಾತ್ರಗಳನ್ನು, ದಾನ ಶೂರ ವೀರ ಕರ್ಣ ನಾಟಕದಲ್ಲಿ ಭೀಮನ ಪಾತ್ರ ಮಾಡಿದ್ದಾರೆ.

1985ರಲ್ಲಿ ಮಾರುತಿ ಕಲಾಬಳಗ, ಎಲೆಕ್ಟ್ರಾನಿಕ್ ಸಿಟಿ ಎಂಬ ಸಂಘ ಸ್ಥಾಪಿಸಿತು. ಈ ಸಂಘದಿಂದ ಕಳೆದ 25 ವರ್ಷಗಳಿಂದ ಅನೇಕ ನಾಟಕಗಳನ್ನು ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರದರ್ಶನ ಮಾಡಿ ಜನಮನ ಸೆಳೆದಿದ್ದಾರೆ.

ಈ ಮಾರುತಿ ಕಲಾ ಬಳಗದಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಯ ಕಲಾವಿದರಿಗೂ ನಟಿಸಲು ಅವಕಾಶ ಕಲ್ಪಿಸಿದ್ದಾರೆ.

ನಲ್ಲಾತಂಗ ಎಂಬ ನಾಟಕದಲ್ಲಿ ರಾಮಸಿಂಹ, ವಂಗರಾಜ, ನಲರಾಜ ವಿಜಯಸಿಂಹ, ಶ್ರೀ ಶನೇಶ್ವರ ಪಾತ್ರಗಳನ್ನು ಒಂದೊಂದು ಪಾತ್ರಗಳನ್ನು 25 ಬಾರಿ ಮಾಡಿದ್ದಾರೆ.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ 2007ರಿಂದ ಈವರೆಗೆ 150 ನಾಟಕ ಪ್ರದರ್ಶಿಸಿದ್ದಾರೆ. ತುಮಕೂರು ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ 50 ಪ್ರದರ್ಶನವಾಗಿದೆ.

ಪ್ರಚಂಡ ರಾವಣ ನಾಟಕದಲ್ಲಿ ರಾವಣ, ಆಂಜನೇಯ ಪಾತ್ರಗಳಲ್ಲಿ ಅನೇಕ ಬಾರಿ ಅಭಿನಯಿಸಿದ್ದಾರೆ.

ಸುಭದ್ರ ಕಲ್ಯಾಣ ನಾಟಕದಲ್ಲಿ ಅರ್ಜುನ ಪಾತ್ರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಯಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ತಾ. 3-2-2025 ರಂದು ಭಾರತದ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಆಧರಿಸಿದಂತೆ.

ಹೆಸರಾಂತ ರಂಗ ಕಲಾವಿದರು ರಂಗಶ್ರೀ ರಂಗಸ್ವಾಮಿ ಅವರ ಪರಿಕಲ್ಪನೆಯಲ್ಲಿ ಹೆಸರಾಂತ ರಂಗಕರ್ಮಿ ಎಸ್.ಎಲ್.ಎನ್. ಸ್ವಾಮಿ ನಿರ್ದೇಶನದಲ್ಲಿ ಯುಗೇ ಯುಗೇ ಪೌರಾಣಿಕ ನಾಟಕವು ಪ್ರದರ್ಶನಗೊಂಡಿತು.

ಈ ನಾಟಕವು ಇಂಡಿಯನ್ ಬುಕ್ ಅಫ್ ರೆಕಾರ್ಡ್‌ ನಲ್ಲಿ ದಾಖಲಾಗಿದೆ. ಈ ನಾಟಕದಲ್ಲಿ ತ್ರೇತ, ದ್ವಾಪರ ಯುಗಗಳ ರಾವಣ, ದುರ್ಯೋಧನ ಒಂದೇ ವೇದಿಕೆಯಲ್ಲಿ ಬಂದು ಈ ಎರಡು ಪಾತ್ರಗಳನ್ನು ಇವರು ಯಶಸ್ಸಿಯಾಗಿ ನಿಭಾಯಿಸಿದ್ದಾರೆ.

ಬೆಂಗಳೂರಿನ ಪುರಭವನದಲ್ಲಿ 2013ರಲ್ಲಿ ಸತತ 108 ಗಂಟೆಗಳ ಕಾಲ ಪ್ರದರ್ಶಿತ ಸಮಗ್ರ ಮಹಾಭಾರತ ಪೌರಾಣಿಕ ನಾಟಕದಲ್ಲಿ ಬಬ್ರುವಾಹನ ಪಾತ್ರ ನಿರ್ವಹಿಸಿದ್ದಾರೆ.

ಹಲವಾರು ಸಂಘ ಸಂಸ್ಥೆಗಳು ಕಲಾವಿದರು, ಇವರಿಗೆ ಹಾಗೂ ಇವರ ತಂಡಕ್ಕೆ ಪ್ರಶಸ್ತಿ, ಪುರಸ್ಕಾರ ನೀಡಿ ಸನ್ಮಾನಿಸಿವೆ.

ಈ ವರೆಗೆ 250 ನಾಟಕಗಳನ್ನು ಶ್ರೀ ಮಾರುತಿ ಕಲಾ ಬಳಗದಿಂದ ಪ್ರದರ್ಶನ ಕೊಟ್ಟಿದ್ದಾರೆ.

ತುಮಕೂರು ಸಿದ್ಧಗಂಗಾ ಮಠದಲ್ಲಿ ಬಿ.ಕಾಂ ಪದವಿ ಮಾಡಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸನ್ ವೇರ್ ಗ್ರೂಪ್ ಆಫ್ ಕಂಪನೀಸ್ ಎಚ್.ಆರ್. ಮ್ಯಾನೇಜರ್ ಆಗಿ 16 ವರ್ಷ ಸೇವೆ ಸಲ್ಲಿಸಿ ಈಗ ಜೆ.ಡಿ.ಎಸ್ ಪಕ್ಷದ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.

 

ಕೊನೆಯದಾಗಿ, ನಾನು ರೈತ ಕುಟುಂಬದಿಂದ ಬಂದರೂ ಸಹ ಈಗಲೂ ಹಳ್ಳಿಗೆ ಹೋಗಿ ಕೃಷಿ ಕೆಲಸ ಮಾಡುತ್ತೇನೆ.

ನನ್ನ ಜೀವಿತ ಕಾಲದಲ್ಲಿ ಇನ್ನೂ 250 ನಾಟಕಗಳನ್ನು ಅಭಿನಯಿಸುವ ಅಭಿಲಾಷೆ ಇದೆ ಎನ್ನುತ್ತಾರೆ.

ಗೊರೂರು ಅನಂತರಾಜು, ಹಾಸನ
ಹುಣಸಿನಕೆರೆ ಬಡಾವಣೆ,
29ನೇ ವಾರ್ಡ್, 3 ನೇ ಕ್ರಾಸ್
ಹಾಸನ – 573201

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು.

ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು.

ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ.

ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ನೌಕರರ ಸಂಘದಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಲೇಜು ದಿನಗಳಲ್ಲಿ ಕ್ರೀಡಾಪಟು. ಅಥ್ಲೆಟಿಕ್‌ ನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದವರು, ಕೋಕೋ ತಂಡದ ನಾಯಕ, ಷಟಲ್‌ ಹಾಗೂ ಬ್ಯಾಡ್ಮಿಂಟನ್ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ಅವರು ಸರ್ಕಾರಿ ನೌಕರರ ಕ್ರೀಡಾ-ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದರು. ೫ನೇ ವಯಸ್ಸಿನಲ್ಲಿ ಶನಿಮಹಾತ್ಮೆ ನಾಟಕದಲ್ಲಿ ಅಭಿನಯ ಪ್ರಾರಂಭಿಸಿದರು.

ರಾಮಾಯಣ, ಕುರುಕ್ಷೇತ್ರ, ವಿರಾಟಪರ್ವ ಮೊದಲಾದ ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಕಾಲೇಜು ದಿನಗಳಲ್ಲಿ ೧೯೭೧-೭೪ ರವರೆಗೆ ಪ್ರತಿವರ್ಷ ನಾಟಕ ಸ್ಫರ್ಧೆಗಳಲ್ಲಿ ಜಯಗಳಿಸಿದ್ದರು.

ಹಾಸನದಲ್ಲಿ ೧೯೭೦ ರಿಂದ ೨೦೦೬ರವರೆಗೆ ನಾಟಕ ಪ್ರದರ್ಶನಗಳಲ್ಲಿ ಸಕ್ರಿಯರಾಗಿದ್ದರು. ಹಾಸನ ಮತ್ತು ಪ್ರದರ್ಶನದ ರಂಗಮಂಟಪದಲ್ಲಿ ಪ್ರತಿವರ್ಷ ಅವರ ತಂಡ ನಾಟಕ ಪ್ರದರ್ಶಿಸುತ್ತಿತ್ತು.

ದಿನಾಂಕ ೨೯-೧೨-೨೦೦೩ರಂದು ರಾಷ್ಟ್ರಕವಿ ಕುವೆಂಪು ಜನ್ಮ ಶತಮಾನೋತ್ಸವದ ಅಂಗವಾಗಿ ʼರಕ್ತಾಕ್ಷಿʼ ನಾಟಕದಲ್ಲಿ ಬಸವಯ್ಯನ ಪಾತ್ರ ನಿರ್ವಹಿಸಿದ್ದರು.

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ನಾಟಕ ಸ್ಫರ್ಧೆಯಲ್ಲಿ ಶಕುನಿ ನಾಟಕದಲ್ಲಿ ಸೌಬಲನ ಪಾತ್ರ ಹಾಗೂ ಅಂಜುಮಲ್ಲಿಗೆ ನಾಟಕದಲ್ಲಿ ಗೌತಮನ ಪಾತ್ರ ನಿರ್ವಹಿಸಿದ್ದರು.

ಹಾಸನದ ಕಲಾ ಚಟುವಟಿಕೆಗಳಿಗೆ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ “ಕರ್ಣಾಟಕ ವೈಭವ” ಧ್ವನಿ-ಬೆಳಕು ನಾಟಕದಲ್ಲಿ ಸುಭಾಸ್ ಚಂದ್ರಬೋಸ್ ಪಾತ್ರವನ್ನೂ ಸಹ ನಿರ್ವಹಿಸಿದ್ದರು.

2025ರ ಮೇ 31ರಂದು ಅವರು ಓದಿದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಪತ್ರದಲ್ಲಿ ಅವರ ಸಮಾಜ ಸೇವೆ ಹಾಗೂ ಹಾಸನದ ಕಲಾಭವನ ನಿರ್ಮಾಣದ ಸಂದರ್ಭದಲ್ಲಿ ನೀಡಿದ ಸಹಕಾರವನ್ನು ಉಲ್ಲೇಖಿಸಲಾಗಿದೆ.

1992ರಲ್ಲಿ ಹಾಸನದಲ್ಲಿ ನಡೆದ ನೌಕರರ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆಯಲ್ಲಿ ಅವರ ತಂಡ ಪ್ರಥಮ ಸ್ಥಾನ ಪಡೆದಿದೆ. ಅವರು ಅಭಿನಯಿಸಿದ ಇತರೆ ಪ್ರಮುಖ ನಾಟಕಗಳು: ನಾದಬಿಂದು, ಇದಿಮಾಯಿ, ಕತ್ತಲೆ ದಾರಿ ದೂರ, ಮತ್ತೆ ಅದೇ ಕತೆ.

ಅವರು ಹಾಸ್ಯದಿಂದ ಕೂಡಿದ ನೆನಪುಗಳನ್ನು ನೆನೆಸಿ “ಮತ್ತೇನಾದರೂ ರಂಗಕತೆ ಇದೆಯಾ ಸಾರ್?” ಎಂದು ಕೇಳಿದಾಗ, “ಎಲ್ಲಾ ನಿಮಗೆ ಗೊತ್ತಲ್ಲ ಅನಂತು,” ಎಂದು ಉತ್ತರಿಸಿದರು.

ಅವರು ತಮ್ಮ 42ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿ ಹೆಚ್.ಎನ್. ಬಾರತಿಯ ನೇಪಥ್ಯ ಸಹಕಾರವನ್ನು ಸ್ಮರಿಸಿದರು.

ನಿಧಾನವಾಗಿ ಅವರು ಕಲಾ ಸೇವೆಯ ದೀರ್ಘ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಕಲಾಪ್ರಯಾಣ, ಸಮಾಜ ಸೇವೆ, ಹಾಗೂ ಕುಟುಂಬ ಸಹಕಾರ – ಈ ಎಲ್ಲಾ ಅಂಶಗಳು ಹಾಸನದ ಕಲಾ ಪರಂಪರೆಗೆ ಹೆಮ್ಮೆ ಹೆಚ್ಚಿಸುತ್ತವೆ.

ಗೊರೂರು ಅನಂತರಾಜು, ಹಾಸನ.
ಮೊ: ೯೪೪೯೪೬೨೮೭೯
ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ಶ್ರೀ ಶನೀಶ್ವರ ದೇವಸ್ಥಾನ ರಸ್ತೆ, ಹಾಸನ.

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವದ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ.

೪ನೇ ತಾರೀಕು ಶುಕ್ರವಾರ ಪಿ. ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ ನಾಟಕ.

೫ನೇ ತಾರೀಕು ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ, ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷ್ಮೀ ರಂಗನಾಥ ಸಾಂಸ್ಕೃತಿಕ ಕಲಾಸಂಘ, ಸಿಗರನಹಳ್ಳಿ ತಂಡದಿಂದ ಕುರುಕ್ಷೇತ್ರ ನಾಟಕ.

೬ನೇ ತಾರೀಕು ಭಾನುವಾರ ಸತೀಶ್ ಕಬ್ಬತ್ತಿ, ವೈಭವ್ ವೆಂಕಟೇಶ್ ಇವರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನ ತಂಡದಿಂದ ಚಂಡಾಸುರನ ವಧೆ ನಾಟಕ.

೭ನೇ ತಾರೀಕು ಸೋಮವಾರ ಬಾರೇಹೊಸರು ಜವರೇಗೌಡ್ರು, ಹನುಮೇಗೌಡ್ರು ಇವರ ಶ್ರೀ ಬಸವೇಶ್ವರ ಕಲಾಸಂಘ, ಹಾಸನ ತಂಡದಿಂದ ಛಲದೊಳ್ ದುರ್ಯೋಧನ ನಾಟಕ.

೮ನೇ ತಾರೀಕು ಮಂಗಳವಾರ ರಮೇಶ್ ಗೌಡಪ್ಪ, ಹೆಚ್.ಎಂ.ಪ್ರಭಾಕರ್ ಇವರ ಹಾಸನಾಂಬ ಕಲಾ ಟ್ರಸ್ಟ್, ಹಾಸನ ತಂಡದಿಂದ ಧರ್ಮರಾಜ್ಯ ಸ್ಥಾಪನೆ ನಾಟಕ

೯ನೇ ತಾರೀಕು ಬುಧವಾರ ಸಿ.ಎ.ರಾಮಚಂದ್ರರಾವ್ ಇವರ ಶ್ರೀ ಮಾರುತಿ ಕಲಾ ಬಳಗ, ಬೆಂಗಳೂರು ತಂಡದಿಂದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.