ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎ.ಐ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ
ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ದಕ ಸಂಘದ ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನವೆಂಬರ್-೨೨ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ AI ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ (ರಿ) ದ ಶಾಶ್ವತ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕೊಟ್ಟೂರು ಮಹಾಸ್ವಾಮಿಗಳು ಉದ್ಘಾಟಿಸಿದರು. ಸ್ವಾಮೀಜಿಗಳು ವಿದ್ಯಾರ್ಥಿಗಳ ನೈತಿಕತೆ, ಶಿಸ್ತಿನ ಮಹತ್ವ ಮತ್ತು ಗುಣಮಟ್ಟಾಧಾರಿತ ಶಿಕ್ಷಣದ ಅಗತ್ಯತೆಯ ಬಗ್ಗೆ ತಮ್ಮ ಆಶಯ ಭರಿತ ಆಶೀರ್ವಚನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶರಣಬಸವಯ್ಯ…
