Headlines
ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎ.ಐ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎ.ಐ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ದಕ ಸಂಘದ ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನವೆಂಬರ್-೨೨ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ AI ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ (ರಿ) ದ ಶಾಶ್ವತ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕೊಟ್ಟೂರು ಮಹಾಸ್ವಾಮಿಗಳು ಉದ್ಘಾಟಿಸಿದರು. ಸ್ವಾಮೀಜಿಗಳು ವಿದ್ಯಾರ್ಥಿಗಳ ನೈತಿಕತೆ, ಶಿಸ್ತಿನ ಮಹತ್ವ ಮತ್ತು ಗುಣಮಟ್ಟಾಧಾರಿತ ಶಿಕ್ಷಣದ ಅಗತ್ಯತೆಯ ಬಗ್ಗೆ ತಮ್ಮ ಆಶಯ ಭರಿತ ಆಶೀರ್ವಚನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶರಣಬಸವಯ್ಯ…

Read More
ನಿರ್ಮಲ ತುಂಗಭದ್ರಾ ಅಭಿಯಾನದ ೩ನೇ ಹಂತದ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್‌ಗಳ ಅನಾವರಣ ಕಾರ್ಯಕ್ರಮ.

ನಿರ್ಮಲ ತುಂಗಭದ್ರಾ ಅಭಿಯಾನದ ೩ನೇ ಹಂತದ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್‌ಗಳ ಅನಾವರಣ ಕಾರ್ಯಕ್ರಮ.

ಗಂಗಾವತಿ: ಆನೆಗುಂದಿಯ ನವಬೃಂದಾವನದಲ್ಲಿ ನವೆಂಬರ್-೧೮ ರಂದು ಶ್ರೀ ಪದ್ಮನಾಭತೀರ್ಥರ ಆರಾಧನಾ ಮಹೋತ್ಸವದ ಸಮಾರಂಭದಲ್ಲಿ ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಸುಬುಧೇಂದ್ರತೀರ್ಥರು ಹಾಗೂ ಆರ್ಯ ಅಕ್ಷೋಭ್ಯತೀರ್ಥ ಸಂಸ್ಥಾನ ಬಾಳಗಾರು ಮಠದ ಪೀಠಾಧಿಪತಿಗಳಾದ ಶ್ರೀಅಕ್ಷೋಭ್ಯ ರಾಮಪ್ರಿಯ ತೀರ್ಥರು ಮತ್ತು ಮುಳಬಾಗಿಲು ಶ್ರೀಪಾದರಾಜಮಠದ ಪೀಠಾಧಿಪತಿಗಳಾದ ಶ್ರೀ ಸುಜಯನಿಧಿತೀರ್ಥರು ಅಮೃತ ಹಸ್ತದಿಂದ ಡಿಸೆಂಬರ್‌ನಲ್ಲಿ ಕಿಷ್ಕಿಂದೆಯಿಂದ ಮಂತ್ರಾಲಯದವರೆಗೆ ನಡೆಯುವ ೩ನೇ ಹಂತದ ನಿರ್ಮಲ ತುಂಗಭದ್ರ ಅಭಿಯಾನದ ಜಲ ಜಾಗೃತಿ ಮತ್ತು ಜನ ಜಾಗೃತಿ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್‌ಗಳನ್ನು ಅನಾವರಣಗೊಳಿಸಿದರು….

Read More
ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪೋತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ: ನಾರಾಯಣರಾವ್ ವೈದ್ಯ.

ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪೋತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ: ನಾರಾಯಣರಾವ್ ವೈದ್ಯ.

ಗಂಗಾವತಿ: ಮನದ ಅಂಧಕಾರವನ್ನು ತೊಡೆದುಹಾಕುವಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ಮಹತ್ವದಾಯಕವಾಗಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಶುಕ್ರವಾರದಂದು ಶ್ರೀ ಶಾರದಾಂಬ ದೇಗುಲದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕತ್ತಲು ಎಂಬುವುದು ಅಜ್ಞಾನದ ಸಂಕೇತವಾಗಿತ್ತು. ಅಂತಹ ಅಜ್ಞಾನವನ್ನು ದೀಪ ಹಚ್ಚುವುದರ ಮೂಲಕ ಬೆಳಕು ನೀಡುವ ಕಾರ್ಯ ಕಾರ್ತಿಕೋತ್ಸವದ ಉದ್ದೇಶವಾಗಿದೆ. ಕಳೆದ ೮ ವರ್ಷಗಳಿಂದ ಶೃಂಗೇರಿಯ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ವಿವಿಧ ಸಮಾಜದ ಹಾಗೂ ವಿವಿಧ ಭಜನಾ ಮಂಡಳಿಗಳ ಮಹಿಳೆಯರಿಂದ ಶಂಕರ…

Read More
ಗಂಗಾವತಿಯ ಕಲ್ಯಾಣಂ ನಾಗರಾಜ್ ಅವರಿಗೆ ಸಂತ ಶ್ರೀ ಕನಕದಾಸರ ಕಾವ್ಯರತ್ನ ರಾಷ್ಟ್ರೀಯ ಪ್ರಶಸ್ತಿ ಹಾಗೂ ಧಾರವಾಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಗಂಗಾವತಿಯ ಕಲ್ಯಾಣಂ ನಾಗರಾಜ್ ಅವರಿಗೆ ಸಂತ ಶ್ರೀ ಕನಕದಾಸರ ಕಾವ್ಯರತ್ನ ರಾಷ್ಟ್ರೀಯ ಪ್ರಶಸ್ತಿ ಹಾಗೂ ಧಾರವಾಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಗಂಗಾವತಿ: ಗದುಗಿನ ಡಾ. ವ್ಹಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ನವೆಂಬರ್-೦೨ ರಂದು ಗದುಗಿನ ಕೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ೭೦ನೇ ಕನ್ನಡ ರಾಜ್ಯೋತ್ಸವ ಹಾಗೂ ಡಾ. ವ್ಹಿ.ಬಿ ಹಿರೇಮಠರ ೧೩ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿದ್ದ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿಯ ಶಾಂತಲಿಂಗ ಮಹಾಸ್ವಾಮಿಗಳು ಹಾಗೂ ವಿಶ್ವನಾಥ ಮಹಾಸ್ವಾಮಿಗಳ ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ವ್ಹಿ.ಬಿ ಹಿರೇಮಠ ಅವರುಗಳ ಅಭಯ ಹಸ್ತದಿಂದ ಗಂಗಾವತಿಯ…

Read More
ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ: ನವೆಂಬರ್-೮ ಶನಿವಾರ ಸಂಜೆ ೫:೦೦ ಗಂಟೆಗೆ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ಭಜನಾ ಮಂಡಳಿಯ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು ಎಂದು ಪರಮ ಪೂಜ್ಯ ಶ್ರೀ ಶರಣಬಸವ ದೇವರು ಪ್ರಕಟಣೆಯಲ್ಲಿ ತಿಳಿಸಿದರು. ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮಹಿಳೆಯರಿ ಗೋಸ್ಕರ ವಿಶೇಷವಾಗಿ ಈ ಒಂದು ವೇದಿಕೆ ಸ್ಥಾಪನೆಯಾಗಿದ್ದು ಅದಕ್ಕಾಗಿ ಗಂಗಾವತಿಯ ಎಲ್ಲಾ ಮಹಿಳೆಯರು ಆಧ್ಯಾತ್ಮಿಕವಾಗಿ ಈ ಒಂದು ಭಜನಾ ಮಂಡಳಿಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಆಶೀರ್ವಾದ ರೂಪವಾಗಿ ಹೇಳಿದರು. ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ…

Read More
ನವೆಂಬರ್-೮ ರಂದು ಗಂಗಾವತಿಯಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ  ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ನವೆಂಬರ್-೮ ರಂದು ಗಂಗಾವತಿಯಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ಗಂಗಾವತಿ: ನಗರದ ಶ್ರೀ ಮಾತಾ ಕರೋಕೆ ಸ್ಟುಡಿಯೋ ಹಾಗೂ ಸಪ್ತಸ್ವರ ಸಾಂಸ್ಕೃತಿಕ ಕಲಾ ಬಳಗ ಇವರಿಂದ ನವೆಂಬರ್-೮ ಶನಿವಾರ ಸಂಜೆ ೫:೩೦ಕ್ಕೆ ಗಂಗಾವತಿಯ ಕೋರ್ಟ್ ಮುಂಭಾಗದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ನಗರಸಭೆ ಸದಸ್ಯರಾದ ಆರ್. ಕಣ್ಣನ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯೋಧ್ಯಮಿಗಳಾದ ಶಿವಪ್ಪ ಗಾಳಿ ವಹಿಸಲಿದ್ದು, ಡಿ.ವೈ.ಎಸ್.ಪಿ ಆದ ಜಯಪ್ಪ…

Read More
ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ: ಪ್ರಸ್ತುತ ಈ ವರ್ಷ ನಡೆದ ಹಾನಗಲ್ಲ ಶ್ರೀ ಕುಮಾರೇಶ್ವರರ ೧೫೮ನೇ ಜಯಂತ್ಯೋತ್ಸವದ ಪ್ರಯುಕ್ತವಾಗಿ ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪಿಸಬೇಕೆಂದು ಇಚ್ಛೆಯನ್ನು ಹೊಂದಿ, ನವೆಂಬರ್-೮ ಶನಿವಾರ, ಸಂಜೆ ೦೪:೦೦ ಗಂಟೆಗೆ ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಶ್ರೀ ಕೊಟ್ಟೂರೇಶ್ವರ ಸಿಟಿ ಸ್ಕ್ಯಾನಿಂಗ್ ಸೆಂಟರ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಭಜನಾ ಮಂಡಳಿಯ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದೆ ಎಂದು ಶ್ರೀ ಹಾನಗಲ್ಲ ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆಯ ಅಧ್ಯಕ್ಷರಾದ ಪರಮಪೂಜ್ಯ…

Read More
ನವೆಂಬರ್-೦೯ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ  ಹಿರಿಯ ಸಾಹಿತಿ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ  ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

ನವೆಂಬರ್-೦೯ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

ಗಂಗಾವತಿ: ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನವಂಬರ್-೯ ಭಾನುವಾರದಂದು ಹಿರಿಯ ಸಾಹಿತಿಗಳಾದ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ೧೧ನೇ ಚುಟುಕು ಸಾಹಿತ್ಯ ಸಮ್ಮೇಳನ ಜರುಗಲಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಮ್ಮೇಳನವು ಸದರಿ ದಿನದಂದು ಬೆಳಗ್ಗೆ ೧೦ ರಿಂದ ರಾತ್ರಿ ೧೦ ರವರೆಗೆ ಜರುಗಲಿದ್ದು, ಇದರ ದಿವ್ಯಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಕುಕನೂರು ಶಾಖಾಮಠದ ಡಾ. ಮಹಾದೇವ ಮಹಾಸ್ವಾಮಿಗಳು, ಗಜೇಂದ್ರಗಡ…

Read More
ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಗಂಗಾವತಿ: ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು ೧೩ ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಜಜಾ ಹುಸ್ನಾ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದುಕೊಂಡರು. ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ಟುಗೆದರ್ ವನ್ ವಿಷಯ ಕುರಿತು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ…

Read More
ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಗಂಗಾವತಿ: ನವೆಂಬರ್‌-01 ಶನಿವಾರ ಆರೋನ್ ಮಿರಜ್‌ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೈಕ್ ರೈಲಿಯ ಮೂಲಕ ಕನ್ನಡ ಮಾತೆಯನ್ನು ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನವನ್ನು ಹೆಚ್ಚಿಸಲು ರಂಗೋಲಿಗಳ ಮೂಲಕ ವ್ಯಾಕರಣ ಹಾಗೂ ಕವಿಗಳ ಭಾವಚಿತ್ರಗಳನ್ನು ಮಕ್ಕಳಿಂದ ಬಿಡಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಬೆಳಗಿಸುವುದರ ಮೂಲಕ ಸಂಸ್ಥೆಯ ಕಾರ್ಯದರ್ಶಿಗಳಾದ ರುಬಿನ್ ಮಿರಜ್‌ಕರ್ ಉದ್ಘಾಟಿಸಿ “ಕಲಿಯೋಕೆ ಕೋಟಿ ಭಾಷೆ, ಆದರೆ ಆಡೋಕೆ ಒಂದೇ ಭಾಷೆ…

Read More