ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ
ಗಂಗಾವತಿ: ಜುಲೈ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ 9ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ 26 ಕ್ರೀಡಾಪಟುಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರೇಗೌಡ ಪೊಲೀಸ್ ಪಾಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮ್ಮ ಸಂಸ್ಥೆಯ 26 ಕರಾಟೆ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಅಹಾನ್, ಸಾತ್ವಿಕ್, ಕೃಷ್ಣ, ರಿಷಿಕ್, ಚಿನ್ನಪ್ಪ, ಅವೇಜ್,…
