ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಗಂಗಾವತಿ: ಜುಲೈ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ 9ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ 26 ಕ್ರೀಡಾಪಟುಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರೇಗೌಡ ಪೊಲೀಸ್ ಪಾಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮ್ಮ ಸಂಸ್ಥೆಯ 26 ಕರಾಟೆ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಅಹಾನ್, ಸಾತ್ವಿಕ್, ಕೃಷ್ಣ, ರಿಷಿಕ್, ಚಿನ್ನಪ್ಪ, ಅವೇಜ್,…

Read More
ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ನಗರದಲ್ಲಿರುವ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮–೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಜೊತೆಗೆ ಸ್ನೇಹಿತರ ಸಮ್ಮಿಲನ ಕೂಡ ಆಯೋಜಿಸಲಾಗಿದ್ದು, ಶಾಲಾ ಆವರಣದಲ್ಲಿ ಭಾವುಕ ಕ್ಷಣಗಳು ಮೆಲುಕು ಹಾಕಿದವು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ಉದ್ಘಾಟಿಸಿದರು. ಅವರು ಮಾತನಾಡಿ, ಶಾಲೆಯ ೧೨೦ನೇ ವಸಂತದ ಆರಂಭ ಈ ಸಂಧರ್ಭದಲ್ಲಿ ಬಹುಮಾನವಾಗಿದೆ ಎಂದರು. ಈ ಹಳೆಯ ವಿದ್ಯಾರ್ಥಿಗಳ ಪ್ರೀತಿ, ನೆನೆಪುಗಳು ಇಂತಹ ಗುರುವಂದನಾ ಕಾರ್ಯಕ್ರಮದ ಮೂಲಕ ವ್ಯಕ್ತವಾಗಿವೆ ಎಂದೂ…

Read More
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More
ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು. ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More
ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಗಂಗಾವತಿ: ಗಂಗಾವತಿ ತಾಲೂಕಿನ ಆನೆಗೊಂದಿ, ಸಾಣಾಪುರ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮ ಜುಲೈ 03 ಗುರುವಾರ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಎಂದು ಸಮಾಜಸೇವಕರಾದ ಮಂಜುನಾಥ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಜುನಾಥ ಕಲಾಲ್ ಅವರು ಮಾತನಾಡುತ್ತಾ, “ನಾವು ಕಳೆದ 13 ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿದ್ದೇವೆ” ಎಂದು ತಿಳಿಸಿದರು. ಲಾಕ್‌ಡೌನ್ ಸಮಯದಲ್ಲಿ 6000ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಪೌರಕಾರ್ಮಿಕರಿಗೆ ಆಹಾರ…

Read More
ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದ ಚಹಾ ಅಂಗಡಿಯ ನಾಮಫಲಕ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

ಗಂಗಾವತಿ : ಜೂನ್-೨೮ ಶನಿವಾರದಂದು ತ್ರಿವಿಧ ದಾಸೋಹದ ನಾಡು ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಒಂದು ಭಾವಪೂರ್ಣ ಸಮಾರಂಭ ನಡೆಯಿತು. ಡಾ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳವರ ಗ್ರಂಥ ಲೋಕಾರ್ಪಣೆಯು ಈ ದಿನದ ಆಕರ್ಷಣೆಯಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸೇತುವೆ ಬಳಿ ಸ್ಥಾಪಿಸಲಾದ “ಸಿದ್ದಗಂಗಾಶ್ರೀ ಬೆಲ್ಲದ ಚಹಾ ಅಂಗಡಿ”ಗೆ ವಿಶೇಷ ಗೌರವ ದೊರೆಯಿತು. ಅಂಗಡಿಯ ನಾಮಫಲಕವನ್ನು ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಅನಾವರಣಗೊಳಿಸಿ ಸಾಂಕೇತಿಕವಾಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಈ ಅಂಗಡಿ ನಾಡಿನಾದ್ಯಂತ ಹೆಸರಾಗಲಿ….

Read More
ಇ-ಆಸ್ತಿ ತಂತ್ರಾಂಶದ ಮೂಲಕ  ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಇ-ಆಸ್ತಿ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ

ಗಂಗಾವತಿ : ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನು ಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಕೆ.ಎಂ.ಡಿ.ಎಸ್ ನಿಂದ ಅವಕಾಶ ಸಲ್ಲಿಸಿರುತ್ತಾರೆ. ಆದ ಕಾರಣ ಸಾರ್ವಜನಿಕರು ಈ…

Read More
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರ್ಯಾಕ್‌ ಶೂಟ್ ವಿತರಣೆ

ಗಂಗಾವತಿ‌ : ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣದ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎ.ವಿದ್ಯಾಗಿರಿ ಪ್ರೌಢಶಾಲೆಯಲ್ಲಿ ಇಂದು ೨೦೨೫-೨೬ ನೇ ಸಾಲಿನ ಕ್ರೀಡಾಕೂಟಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿಗಳಾದ ನಟೇಶ್ ಹಾಗೂ ಹೊಸದಾಗಿ ದೈಹಿಕ ಶಿಕ್ಷಣ ಪರೀಕ್ಷಕರಾಗಿ ಆಗಮಿಸಿದ ಶ್ರೀಮತಿ ಸರಸ್ವತಿ ಜೂಡಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ಮತ್ತು ತಾಲೂಕ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ : ಇತ್ತೀಚೆಗೆ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ, ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ಕುಮಾರಿ ಸಹಸ್ರ.ಹೆಚ್, ಕುಮಾರಿ ರೋಜಾ ಮತ್ತು ಖುಷಿತ್ ಆರಾಧ್ಯ. ಈ ೦೩ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಅತ್ಯುತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಗಂಗಾವತಿ ನಗರಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಈ ಫಲಿತಾಂಶಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಒಡೆಯರ್ ಮತ್ತು…

Read More