ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಭರದ್ವಾಜ್

ಗಂಗಾವತಿ : ನಗರದ ಬಸ್ ನಿಲ್ದಾಣದ ಹತ್ತಿರ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಜೂನ್ ೨೫, ಬುಧವಾರದಂದು ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೋಂದಣಿ ಪೂರ್ವ ಸಭೆ ಜರುಗಿತು. ಸಭೆಯನ್ನು ಸಂಘದ ಕಾನೂನು ಸಲಹೆಗಾರ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶೇಖರಗೌಡ ಪಾಟೀಲ್ ಅವರು ಸಂಘದ ಮೂಲ ಧ್ಯೇಯ ಮತ್ತು ಉದ್ದೇಶಗಳ ಕುರಿತು ಸದಸ್ಯರಿಗೆ ವಿವರವಾಗಿ ತಿಳಿಸಿದರು. ಪ್ರಸ್ತುತ ಜಿಲ್ಲೆಯಾದ್ಯಂತ ಅಂತರರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ…

Read More
ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಗಂಗಾವತಿ : ಧ್ಯಾನ, ಜ್ಞಾನ, ಸತ್ಸಂಗ, ಮತ್ತು ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆ ಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕಿ ಲಲಿತಾ ನಾರಾಯಣ ಕಂದಗಲ್ ರವರು ನುಡಿದರು. ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ʼಚಿಂತನ ಮಂಥನʼ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. “ಜೈಲುವಾಸ ಶಿಕ್ಷೆಯಲ್ಲ, ಅದು  ಒಂದು ಹೊಸ ಶಿಕ್ಷಣ,” ಎಂದು ಅವರು ಹೇಳಿದರು. ಅನೇಕ ಮಹನೀಯರಾದ ನೆಹರು, ಗಾಂಧಿ, ನೆಲ್ಸನ್ ಮಂಡೇಲಾರಂತಹ ಜೈಲುವಾಸದಲ್ಲಿದ್ದಾಗಲೇ ಆ…

Read More
ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಅಧ್ಯಯನದ ಮೂಲಕ ಸಾಹಿತ್ಯ ರಚನೆಯಾಗಬೇಕು: ರುದ್ರೇಶ ಭಂಡಾರಿ

ಗಂಗಾವತಿ : ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಿ ಮಾರ್ಪಡಬೇಕು. ಚುಟುಕು ಕವಿಗಳು ಅಧ್ಯಯನದ ಮೂಲಕ ಗಂಭೀರವಾಗಿ ಸಾಹಿತ್ಯ ರಚಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು. ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಜೂನ್ ೨೧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕವಿಗೋಷ್ಠಿಗೆ ಅರಳಹಳ್ಳಿ ಬೃಹನ್ಮಠದ ಪೂಜ್ಯ ಶ್ರೀ ರೇವಣಸಿದ್ದಯ್ಯತಾತನವರು ದಿವ್ಯಸಾನಿಧ್ಯ ವಹಿಸಿದ್ದರು….

Read More
ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಗಂಗಾವತಿ: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್‌ ವತಿಯಿಂದ ಜೂನ್ ೨೮ ಮತ್ತು ೨೯ ರಂದು ೧೬ ಹಾಗೂ ೧೯ ವರ್ಷದೊಳಗಿನ ಉತ್ತಮ ಆಟಗಾರರ ಜಿಲ್ಲಾ ಮಟ್ಟದ ಆಯ್ಕೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದ ನಿರ್ದೇಶಕ ರಾಘವೇಂದ್ರ ತೂನ ಅವರು, ಆಸಕ್ತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ. ಜೂನ್ ೨೮ ಶನಿವಾರ ೧೬ ವರ್ಷದೊಳಗಿನ ಆಟಗಾರರ ಆಯ್ಕೆ ಹಾಗೂ ಜೂನ್-೨೯ ಭಾನುವಾರ ೧೯ ವರ್ಷದೊಳಗಿನ ಉತ್ತಮ…

Read More
ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯ ಯೋಗ ದಿನಾಚರಣೆ.

ಗಂಗಾವತಿ: ಜೂನ್-೨೧ ಶನಿವಾರದಂದು ಬೆಳಿಗ್ಗೆ ೬.೩೦ಕ್ಕೆ “ಆರೋನ್ ಮಿರಜಕರ್ ಆಂಗ್ಲ ಮಾಧ್ಯಮ ಶಾಲೆ”, ಹಾಗೂ “ನಿವೇದಿತಾ ಶಾಲೆ”ಯ ಸಹಯೋಗದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಶೀರ್ಷಿಕೆಯಡಿ ‘೧೧ನೇ ಅಂತರಾಷ್ಟ್ರೀಯ ಯೋಗ’ ದಿನವನ್ನು ಆಯೋಜಿಸಲಾಗಿತ್ತು. ಯೋಗ ಶಿಬಿರದಲ್ಲಿ ಗಂಗಾವತಿಯ ಸ್ನೇಹ ಬಳಗ ಯೋಗ ಸಂಸ್ಥೆಯ ಯೋಗ ತರಬೇತುದಾರರಾದ ಪರಸಪ್ಪ ಕುರುಗೋಡ ಹಾಗೂ ಆನಂದ ಪಟ್ಟಣಶೆಟ್ಟಿಯವರು ಯೋಗ ತರಬೇತಿಯನ್ನು ನೀಡಿ ಹಾಗೂ ಯೋಗ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಶಿಬಿರದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ರುಬೀನ್…

Read More
ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಗಂಗಾವತಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಸವನದುರ್ಗದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಛತ್ರಪ್ಪ ತಂಬೂರಿ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ವಿವರಿಸಿದರು. ಅವರು ಯೋಗ, ಪ್ರಾಣಾಯಾಮ ಹಾಗೂ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿಗಳ ಓದು ಮತ್ತು ಏಕಾಗ್ರತೆಯ ಅಭಿವೃದ್ಧಿಗೆ ಯೋಗ ಮತ್ತು ಧ್ಯಾನ ಹೇಗೆ ಸಹಾಯಕವಾಗಬಹುದು ಎಂಬುದನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದರು.ಯೋಗ ಮತ್ತು ಪ್ರಾಣಾಯಮದ ಆಸನಗಳನ್ನು ಮಾಡಿ ತೋರಿಸಿ,…

Read More
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ  ರಮೇಶ್ ಕೋಟಿ ನೇಮಕ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ರಮೇಶ್ ಕೋಟಿ ನೇಮಕ

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷ ಜಿ.ಎಮ್.ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಸಂಘದ ಸಂಘಟನೆ ಮಾಡಲು ಮತ್ತು ವೃತ್ತಿಪರ ಪತ್ರಕರ್ತರನ್ನು ಸಂಘದ ಸದಸ್ಯತ್ವ ಮಾಡಲು ಮತ್ತು ಸಂಘದ ಹೆಸರಿಗೆ ಚ್ಯುತಿ ಬರದಂತೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

Read More
ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಗಂಗಾವತಿ 15: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ರವಿವಾರ ದಿನದಂದು ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಸಂಕಲ್ಪ, ಭಜನೆ ಮಾಡುವುದರ ಮುಖಾಂತರ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇಶ ಕಾಯುವ ಯೋಧ ಹಾಗೂ ಅನ್ನದಾತ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ತಾಯಿ ಶ್ರೀ ಕನ್ನಿಕಾ…

Read More
ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ. ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ,…

Read More
ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ,…

Read More