ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಗಂಗಾವತಿ: ನಗರದ ಶಾರದಾ ನಗರದಲ್ಲಿರುವ ಶ್ರೀ ಶಂಕರಮಠ ಹಾಗೂ ಶ್ರೀ ಶಾರದಾದೇವಿಯ 7ನೇ ವರ್ಷದ ಪ್ರತಿಷ್ಠಾಪನಾ ದಿನಾಚರಣೆಯನ್ನು ಮಾರ್ಚ್-10‌ ಸೋಮವಾರದಂದು ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ಶ್ರೀ ಶಾರದಾದೇವಿ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಶಾರದ ಶಂಕರ ಭಕ್ತ ಮಂಡಳಿ, ವಿಜಯಧ್ವಜ ಭಜನಾ ಮಂಡಳಿ, ಸೌಂದರ್ಯ ಲಹರಿ ಭಗಿನಿಯರ ಬಳಗ ಸೇರಿದಂತೆ ಇತರೆ ಭಜನಾ ಮಂಡಳಿಯ ಸದಸ್ಯರುಗಳಿಂದ ಲಲಿತಾ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ, ಅಷ್ಟೋತ್ತರ ಪಾರಾಯಣ, ಭಜನೆ ಸೇರಿದಂತೆ ಇತರೆ…

Read More
ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಪರೀಕ್ಷೆಯು ಭಯ ನಿರ್ಮಿಸುವುದಕ್ಕಲ್ಲ, ನಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲು ಇರುವ ಅವಕಾಶ ಗಂಗಾವತಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದುಕೊಂಡು ನಮ್ಮ ತಾಲೂಕಿಗೆ ಮತ್ತು ತಂದೆ-ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಲು, ಒಳ್ಳೆಯ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪರೀಕ್ಷೆ ಎನ್ನುವುದು ಭಯದ ವಾತಾವರಣವನ್ನು ನಿರ್ಮಿಸುವುದಲ್ಲ, ನಿಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲಿಕ್ಕೆ ಇರುವ ಒಂದು ಸುವರ್ಣಾವಕಾಶ ಎಂದು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಹೇಳಿದರು. ಅವರು ಇಂದು ಮಾರ್ಚ್-೮ ಶನಿವಾರ, ಗಂಗಾವತಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ. ಸಮುದಾಯ…

Read More
ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ನಗರದ ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ೨೦೨೪-೨೫ ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಾರ್ಚ್-೮ ಶನಿವಾರ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಅವರು ವೇದಿಕೆ ಮೇಲೆ ಹಾಸಿನರಾದ ಎಲ್ಲಾ ಗಣ್ಯರೊಂದಿಗೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವಿ.ಗೊಂಡಬಾಳ ವಹಿಸಿ ಮಾತನಾಡಿ, ಮಕ್ಕಳಲ್ಲಿ ಸಹನೆ ಸತತ ಪರಿಶ್ರಮ ಧನಾತ್ಮಕ ಚಿಂತನೆ ಕಠಿಣ ಪರಿಶ್ರಮಗಳು ಯಶಸ್ಸಿನ ಮೆಟ್ಟಿಲುಗಳು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

Read More
ಶೃಂಗೇರಿಯ ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಭವ್ಯವಾದ ಶುಭಯಾತ್ರೆ.

ಶೃಂಗೇರಿಯ ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಭವ್ಯವಾದ ಶುಭಯಾತ್ರೆ.

ಕೊಪ್ಪಳ: ನಗರಕ್ಕೆ ಆಗಮಿಸಿದ ಶೃಂಗೇರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಶೋಭಾ ಯಾತ್ರೆ ಸಹಸ್ರಾರು ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಶುಕ್ರವಾರದಂದು ಜರುಗಿತು. ಹೊಸಪೇಟೆ ರಸ್ತೆಯಲ್ಲಿರುವ ಶ್ರೀ ಈಶ್ವರ ದೇವಸ್ಥಾನದಿಂದ ಆರಂಭಗೊಂಡ ಶೋಭಾಯಾತ್ರೆಯಲ್ಲಿ ವಿವಿಧ ಭಜನಾ ಮಂಡಳಿಯ ಸದಸ್ಯರು ಹಾಡು, ಕೋಲಾಟಗಳಿಂದ ಗಮನ ಸೆಳೆದರು. ಬಳಿಕ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜಗದ್ಗುರುಗಳಿಂದ ಆಶೀರ್ವಚನ ಜರುಗಿತು.

Read More
ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಬೆಳ್ಳಿ ಸಿಂಹಾಸನ ಹಾಗೂ ಪ್ರಭಾವಳಿ ಸಮರ್ಪಣೆ, ಸಾಗರದಲ್ಲಿ ಹರಿದು ಬಂತು ಭಕ್ತ ಸಮೂಹ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಬೆಳ್ಳಿ ಸಿಂಹಾಸನ ಹಾಗೂ ಪ್ರಭಾವಳಿ ಸಮರ್ಪಣೆ, ಸಾಗರದಲ್ಲಿ ಹರಿದು ಬಂತು ಭಕ್ತ ಸಮೂಹ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಮಾರ್ಚ್-5 ಬುಧವಾರರಂದು ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಜರುಗಿತು. ಇದೇ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಅವರಿಗೆ ಬೆಳ್ಳಿ ಸಿಂಹಾಸನ ಹಾಗೂ ಬೆಳ್ಳಿ ಪ್ರಭಾವಳಿಯನ್ನು ದೇವಸ್ಥಾನ ಸಮಿತಿಯ ನೇತೃತ್ವದಲ್ಲಿ ಸಮರ್ಪಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜೋಶಿ ಹಾಗೂ ಋತುಜರ್ ತಂಡದವರಿಂದ ಬ್ರಾಹ್ಮಿ ಮುಹೂರ್ತದಲ್ಲಿ ಕಾಕಡ ಆರತಿ, ಪಂಚಾಮೃತ ಅಭಿಷೇಕ, ಮಹಾಸಂಕಲ್ಪ, ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಸಾಯಿಬಾಬಾ ನಾಮಸ್ಮರಣೆಯನ್ನು ನಡೆಸಲಾಯಿತು….

Read More
ಮಾರ್ಚ್-4‌ ರಂದು ಜರುಗಿದ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ

ಮಾರ್ಚ್-4‌ ರಂದು ಜರುಗಿದ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ

ಗಂಗಾವತಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಕೊಟ್ಟೂರು ಬಸವೇಶ್ವರ ಮಹಾರಥೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ, ಭಕ್ತಿ ಭಾವನೆಯಿಂದ ಸಂಜೆ 5:30ಕ್ಕೆ ಶ್ರೀಮಠದ ಆವರಣದಿಂದ ಸಕಲ ವಾದ್ಯ, ವೈಭವದೊಂದಿಗೆಹೊರಟ ಮಹಾರಥೋತ್ಸವದಲ್ಲಿ ಭಕ್ತಾದಿಗಳು ನಾಣ್ಯ ಹಾಗೂ ಉತ್ತತ್ತಿಯನ್ನು ರಥೋತ್ಸವಕ್ಕೆ ಸಮರ್ಪಿಸಿ ತಮ್ಮ ಭಕ್ತಿ ಭಾವವನ್ನು. ವ್ಯಕ್ತಪಡಿಸಿದರು. ರಥೋತ್ಸವ ಕಲ್ಮಠದವರೆಗೆ ತೆರಳಿ ದೇವಸ್ಥಾನಕ್ಕೆ ಆಗಮಿಸಿತು. ಈ. ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಮಹೇಶ್, ಹೊಸಳ್ಳಿ ಶಂಕರಗೌಡ, ನವಲಿ ವಾಸು, ಪರಗಿ ನಾಗರಾಜ್ ಸೇರಿದಂತೆ ವಿವಿಧ ಸಮಾಜ ಬಾಂಧವರು ಪಾಲ್ಗೊಂಡಿದ್ದರು..

Read More
ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಉಮಾಕಾಂತ ಅವರೆಡ್ಡಿ ಅವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪ್ರದಾನ.

ಗಂಗಾವತಿ: ತಾವರಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಪ್ರಾಧ್ಯಾಪಕರಾದ ಉಮಾಕಾಂತ ಅವರೆಡ್ಡಿ ಆವರಿಗೆ ಆಂಧ್ರಪ್ರದೇಶದ ಕುಪ್ಪಮ್‌ನ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯದ ಆಂಗ್ಲಭಾಷೆ ವಿಭಾಗದ ಸಂಶೋಧನಾ ವಿದ್ಯಾರ್ಥಿ ಉಮಾಕಾಂತ ಅವರೆಡ್ಡಿ ಅವರು ಡಾ. ಜಿ. ಉಮಾಮಹೇಶ್ವರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ. ಅಮಿತಾವ್ ಘೋಶ್: ಎ ನ್ಯಾಷನಲಿಸ್ಟಿಕ್ ಅಪ್ರೋಚ್’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಆಂಧ್ರಪ್ರದೇಶದ ಕುಪ್ಪಮ್ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ. ವಿವಿಧ ಸರ್ಕಾರಿ ಪ್ರಥಮ…

Read More
ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಭಕ್ತಿ ಮಾರ್ಗಕ್ಕೆ ಜಾತಿ ಧರ್ಮದ ಹಂಗಿಲ್ಲ: ಕೆ.ಎಫ್. ಮುದ್ದಾಬಳ್ಳಿ

ಗಂಗಾವತಿ: ಸಂಗೀತ ಎಂಬುದು ಯಾವುದೇ ಒಬ್ಬ ವ್ಯಕ್ತಿಯ ಸ್ವತ್ತಲ್ಲ. ಯಾವುದೇ ಜಾತಿ ಮತ ಎಣಿಸದೆ, ಸರ್ವರನ್ನೂ ಆಕರ್ಷಿಸುವ ದಿವ್ಯಶಕ್ತಿ ಸಂಗೀತ ಹೊಂದಿದೆ ಎಂದು ಗಾನಯೋಗಿ ಶ್ರೀ ಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ ಅಧ್ಯಕ್ಷ ಕೆಎಫ್ ಮುದ್ದಾಬಳ್ಳಿ ಹೇಳಿದರು. ಅವರು. ಕಳೆದ ಮಹಾ ಶಿವರಾತ್ರಿ ಪ್ರಯುಕ್ತ ಹಿರೇಜಂತಕಲ್‌ನ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಅಬೀದಾ ಬೇಗಂ, ಕಲಾವಿದ ವೆಂಕಟೇಶ್ ದಾಸನಾಳ ಇತರರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಣ್ಣಪ್ಪ…

Read More
ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ರಾಜ ಮನೆತನದ ಶ್ರೀರಂಗದೇವರಾಯಲು ಜನ್ಮ ದಿನೋತ್ಸವ

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಮಾರ್ಚ್-೩ ಸೋಮವಾರ ವಿಜಯನಗರ ಸಾಮ್ರಾಜ್ಯದ ರಾಜ ವಂಶಸ್ಥರಾದ ಶ್ರೀರಂಗದೇವರಾಯಲು ಅವರ ೮೭ನೇ ವರ್ಷದ ಜನ್ಮದಿನೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಜಯನಗರ ಸಾಮ್ರಾಜ್ಯದಲ್ಲಿ ಆನೆಗೊಂದಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಹಲವಾರು ತಲೆಮಾರುಗಳಿಂದ ಇವರ ವಂಶಸ್ಥರಾಗಿ ಇದೇ ಆನೆಗೊಂದಿ ಗ್ರಾಮದಲ್ಲಿ ಜೀವಿಸುತ್ತಿದ್ದಾರೆ. ಶ್ರೀರಂಗದೇವರಾಯಲು ರಾಜಕೀಯಕ್ಕೆ ಪ್ರವೇಶಿಸಿ ಸತತ ಐದುಬಾರಿ ಕನಕಗಿರಿ ಮತ್ತು ಗಂಗಾವತಿ ಎರಡು ಕ್ಷೇತ್ರಗಳಿಗೆ ಶಾಸಕರಾಗಿ, ಸಚಿವರಾಗಿ ರೈತಾಪಿ ವರ್ಗದ ಜನರ ಹಿತವನ್ನು ಕಾಯುತ್ತ ಮತ್ತು ದೀನ-ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಈ ಹಿಂದೆ ಹಂಪಿ…

Read More
ಅಡುಗೆ ಮನೆಯೇ ವಿಜ್ಞಾನದ ಲ್ಯಾಬ್, ತಾಯಿಯೇ ವಿಜ್ಞಾನದ ಗುರು:  ಹಿರಿಯ ವಿಜ್ಞಾನಿ ಮಹಾಂತಶಿವಯೋಗಿ

ಅಡುಗೆ ಮನೆಯೇ ವಿಜ್ಞಾನದ ಲ್ಯಾಬ್, ತಾಯಿಯೇ ವಿಜ್ಞಾನದ ಗುರು: ಹಿರಿಯ ವಿಜ್ಞಾನಿ ಮಹಾಂತಶಿವಯೋಗಿ

ಗಂಗಾವತಿ: ಮಕ್ಕಳಿಗೆ ಅಡುಗೆ ಮನೆಯೆ ವಿಜ್ಞಾನದ ಲ್ಯಾಬ್ ಇದ್ದಹಾಗೆ, ತಾಯಿಯೇ ವಿಜ್ಞಾನ ಗುರು ಎಂದು ಗಂಗಾವತಿಯ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಹಿರಿಯ ವಿಜ್ಞಾನಿಗಳಾದ ಮಹಾಂತಶಿವಯೋಗಿಯವರು ಹೇಳಿದರು. ಅವರು ಮಾರ್ಚ್-೩ ಸೋಮವಾರ ನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಆಚರಿಸಲಾದ ವಿಜ್ಞಾನ ದಿನಾಚರಣೆಯಲ್ಲಿ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಈ ಶಾಲೆಯ ಮಕ್ಕಳು ಮಾಡಿದ ಸ್ಪ್ರೇಯನ್ನು ಖಾಲಿ ಬೋರ್ಡ್‌ನಲ್ಲಿ ಸಿಂಪಡಿಸಿದಾಗ ವೆಲ್‌ಕಮ್ ಟು ಮಹಾನ್ ಸೈನ್ಸ್ ಡೇ ಎಂದು ಗೋಚರಿಸಿತು. ಮಹಾನ್ ಕಿಡ್ಸ್ ಶಾಲೆ ಮಕ್ಕಳು ಬಯೋಲಜಿ, ಫಿಸಿಕ್ಸ್, ಕೆಮಿಸ್ಟ್ರಿ,…

Read More