ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಮಂತ್ರಾಲಯ ಪಾದಯಾತ್ರೆ, ಯೋಧರ ಹಾಗೂ ರೈತರ ಹಿತ ರಕ್ಷಣೆಗಾಗಿ ಪ್ರಾರ್ಥಿಸಿ: ದರೋಜಿ ನಾಗರಾಜ್ ಶೆಟ್ಟಿ

ಗಂಗಾವತಿ 15: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ರವಿವಾರ ದಿನದಂದು ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಸಂಕಲ್ಪ, ಭಜನೆ ಮಾಡುವುದರ ಮುಖಾಂತರ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇಶ ಕಾಯುವ ಯೋಧ ಹಾಗೂ ಅನ್ನದಾತ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ತಾಯಿ ಶ್ರೀ ಕನ್ನಿಕಾ ಪರಮೇಶ್ವರಿ ಆಶೀರ್ವಾದದಿಂದ ಸುಗಮವಾಗಿ ನಡೆಯಲಿ ಮತ್ತು ಪಾದಯಾತ್ರೆಯಲ್ಲಿ ಪಾಲ್ಗೊಂಡಂತಹ ಎಲ್ಲಾ ಪಾದಯಾತ್ರೆಗಳಿಗೆ ಶ್ರೀ ಗುರು ರಾಯರ ಅನುಗ್ರಹವಾಗಲಿ ಪಾದಯಾತ್ರೆಗೆ ಅನುಕೂಲ ಮಾಡಿದಂತ ದಾನಿಗಳಿಗೆ ರಾಯರ ಆಶೀರ್ವಾದ ಲಭಿಸಲಿ. ಈ ದೇಶದ ಸೈನಿಕರಿಗೆ, ರೈತರಿಗೆ ಗುರು ರಾಯರು ಹೆಚ್ಚಿನ ಶಕ್ತಿ ಕೊಡಲಿ ಎಂದು ಹೇಳಿದರು.

ಗುರುಗಳಾದ ಶ್ರೀ ಗುರು ಭೀಮ್ ಭಟ್ ಜೋಶಿ ಮಾತನಾಡಿ ಆರ್ಯವೈಶ್ಯ ಸಮಾಜದಿಂದ ನಾಲ್ಕನೇ ವರ್ಷದ ಪಾದಯಾತ್ರೆ ಸಮಾಜದ ಸಂಘಟನೆಗೆ ಹಾಗೂ ಧಾರ್ಮಿಕ ಮನೋಭಾವನೆ ಬೆಳೆಸಿಕೊಳ್ಳಲು ಅತ್ಯಂತ ಸಹಕಾರಿಯಾಗಿದೆ. ಕಲಿಯುಗದ ಕಾಮಧೇನು ಶ್ರೀ ರಾಯರು ಸರ್ವರಿಗೂ ಶಾಂತಿ ಸಮೃದ್ಧಿ ಕರುಣಿಸಲಿ ಧರ್ಮ ರಕ್ಷಣೆಯ ಕಾರ್ಯ ಹೆಚ್ಚು ಹೆಚ್ಚು ನಡೆಯುವಂತಾಗಲಿ. ಲೋಕ ಕಲ್ಯಾಣಕ್ಕಾಗಿ ನಡೆಯುವ ಈ ಪಾದಯಾತ್ರೆ ದೇಶಕ್ಕೆ ಒಳಿತಾಗಲಿ ಎಂದು ಗುರು ರಾಯರನ್ನು ಪ್ರಾರ್ಥಿಸಿ ಆಶೀರ್ವದಿಸಿದರು.

ಜಿ.ಆರ್.ಎಸ್ ಸತ್ಯನಾರಾಯಣ ಮಾತನಾಡಿ ತಾಯಿ ಶ್ರೀ ಕನ್ನಿಕಾ ಪರಮೇಶ್ವರಿ ಆಶೀರ್ವಾದದಿಂದ ನಡೆಯುವ ನಾಲ್ಕನೇ ವರ್ಷದ ಪಾದಯಾತ್ರೆ ಸುಗಮವಾಗಲಿ ಮತ್ತು ರಾಯರು ಅನುಗ್ರಹದಿಂದ ದೇಶಕ್ಕೆ ಒಳಿತಾಗಲಿ ಪಾದಯಾತ್ರೆಯಲ್ಲಿ ಭಾಗವಹಿಸಿದಂತ ಎಲ್ಲಾ ಯಾತ್ರೆಗಳಿಗೆ ರಾಯರು ಹೆಚ್ಚಿನ ಶಕ್ತಿ ಕೊಡಲಿ ದೇಶಕ್ಕೆ ಮಳೆ ಬೆಳೆ ಯಾವುದೇ ಕೊರತೆ ಆಗದಂತೆ ಮತ್ತು ಸೈನಿಕರಿಗೆ. ಕಾರ್ಮಿಕರಿಗೆ. ಬಡವರಿಗೆ. ರೈತರಿಗೆ ಶ್ರೀ ರಾಯರ ಅನುಗ್ರಹವಾಗಲಿ ಹೇಳಿದರು.

ಈ ಸಂದರ್ಭದಲ್ಲಿ ದರೋಜಿ ವೆಂಕಟೇಶ. ಹಣವಾಳ ಚಂದ್ರಶೇಖರ. ಬೆನ್ನೂರು ಪ್ರಹ್ಲಾದ. ಎನ್ ಗಂಗಾಧರ. ದಮ್ಮೂರ್ ಸುರೇಶ. ಬನ್ನಿಗೋಳ ಚಂದ್ರಶೇಖರ. ಚಿದಂಬರ. ಶೇಖರ ಸ್ವಾಮಿ. ಶಂಭುಲಿಂಗ ಹೊಸಳ್ಳಿ. ವೆಂಕಟೇಶ. ಸತ್ಯನಾರಾಯಣ ನವ ಬೃಂದಾವನ ಭಜನಾ ಮಂಡಳಿ ಅಧ್ಯಕ್ಷರಾದ ದರೋಜಿ ನರಸಿಂಹ ಶ್ರೇಷ್ಠಿ. ಭಜನಾ ಮಂಡಳಿ ಸರ್ವ ಸದಸ್ಯರು ಹಾಗೂ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷರಾದ ದಮ್ಮೂರು ರುಕ್ಮಿಣಿಮ್ಮ ಹುಷಾರಾಣಿ. ಸಂಪತ್ ಲಕ್ಷ್ಮಿ . ದಮ್ಮೂರ್ ಮಂಜುಳಾ. ದರೋಜಿ ರೇಖಾ ಸೇರಿದಂತೆ ಮಹಿಳಾ ಮಂಡಳಿಯ ಸರ್ವ ಸದಸ್ಯರು ಹಾಗೂ ಸಮಾಜದ ಹಿರಿಯರು ಸೇರಿದಂತೆ ಗಂಗಾವತಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಸಮಾಜ ಬಾಂಧವರು ಭಾಗವಹಿಸಿದ್ದರು.

ಭಾರತೀಯ ಪ್ರಜಾಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಲು ಚಿಂತಲಕುಂಟ ನೇಮಕ-ಪಂಪಾಪತಿ ಸಿದ್ದಾಪುರ

ಗಂಗಾವತಿ: ಭಾರತೀಯ ಪ್ರಜಾ ಸೇನೆಯ ಸಂಸ್ಥಾಪಕರು ಮಂಜುನಾಥ್ ಆರ್., ರಾಜ್ಯ ಅಧ್ಯಕ್ಷರಾದ ಟಿ ವೇಣುಗೋಪಾಲ್ ಅವರ ಆದೇಶದ ಮೇರೆಗೆ ಜೂನ್-೦೪ ಬುಧವಾರ ನಗರದ ಹಳೆ ಪ್ರವಾಸಿ ಮಂದಿರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸಿದ್ದಾಪುರ, ವಿಭಾಗೀಯ ಕಾರ್ಯದರ್ಶಿ ಹುಲುಗಪ್ಪ ಕೊಜ್ಜಿಯವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷರನ್ನಾಗಿ ನರಸಿಂಹಲು ಚಿಂತಲಕುಂಟ ಅವರನ್ನು ನೇಮಕ ಮಾಡಲಾಗಿದೆ.

ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಪಂಪಾಪತಿ ಸಿದ್ದಾಪುರ ಅವರು, ಕೊಪ್ಪಳ ಜಿಲ್ಲಾ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಡವರ, ದೀನ ದಲಿತರ, ಅನ್ಯಾಯಕ್ಕೊಳಗಾದವರ, ನೊಂದವರ, ಶೋಷಿತರ ಪರ ಸಾಮಾಜಿಕ ಹೋರಾಟಗಳನ್ನು ಮಾಡುತ್ತಾ ಸಂಘಟನೆಯ ಶಕ್ತಿ ಮತ್ತು ಕೀರ್ತಿಯನ್ನು ಹೆಚ್ಚಿಸುವಂತೆ ಆದೇಶಿಸಿದರು.

ಇದೇ ಸಂದರ್ಭದಲ್ಲಿ ಸಂಘಟನೆಯ ವಿಭಾಗಿಯ ಸಹಕಾರ್ಯದರ್ಶಿ ಅಬೂಬಕರ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸೋಮಪ್ಪ ಅಕ್ಕಿರೊಟ್ಟಿ, ಕೊಪ್ಪಳ ಜಿಲ್ಲಾ ಗೌರವಾಧ್ಯಕ್ಷರಾದ ಹನುಮಂತಪ್ಪ ಹೊಸಪೇಟೆ, ಜಿಲ್ಲಾ ಸಹಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಯುವ ಘಟಕ ಉಪಾಧ್ಯಕ್ಷ ಅಯ್ಯಪ್ಪ, ಗಂಗಾವತಿ ತಾಲೂಕ ಅಧ್ಯಕ್ಷರು ಕೃಷ್ಣ ಹೊಸಳ್ಳಿ, ಗಂಗಾವತಿ ತಾಲೂಕು ಸಂಘಟನಾ ಕಾರ್ಯದರ್ಶಿ ಪರಶುರಾಮ್ ಅಕ್ಕಿರೊಟ್ಟಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

 

ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ನಿರುಪಾದಿ ಕೇಸರಹಟ್ಟಿ ನೇಮಕ

ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು.

ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ, ಮಂಜುನಾಥ ಸೋಮಸಾಗರ, ನಾಗರಾಜ ಬೊಮ್ನಾಳ, ಬಸವರಾಜ ಬುನ್ನಟ್ಟಿ, ಕಳಕಪ್ಪ ಮತ್ತು ರಮೇಶ್ ಮೆಹಬೂಬ್ ನಗರ, ವೀರೇಶ್ ಸರಿಗಮ, ಗವಿಸಿದ್ದಪ್ಪ ಇವರುಗಳು ಉಪಸ್ಥಿತರಿದ್ದರು.

ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ

ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ ಪಾದಯಾತ್ರೆಯಿಂದ ಧಾರ್ಮಿಕತೆ ಜೊತೆಗೆ ಆರೋಗ್ಯ ಸದೃಢತೆ ಗೊಳ್ಳುತ್ತದೆ ಎಂದು ಹೇಳಿದರು.

ಗುರುಗಳಾದ ಗುರು ಭೀಮ್ ಭಟ್ ಜೋಶಿ ಮಾತನಾಡಿ ನಾಲ್ಕನೇ ವರ್ಷದ ಪಾದಯಾತ್ರೆ ಸುಗಮವಾಗಿ ನೆರವೇರಿತು. ಸುಮಾರು 150 ರಿಂದ 180 ಜನ ಭಾಗವಹಿಸಿ. ಜೊತೆಗೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸುಮಾರು 400 ರಿಂದ 500 ಜನ ಸೇರಿ ಪಂಚಾಮೃತ ಅಭಿಷೇಕ. ಅಷ್ಟೋತ್ತರ ಪಾರಾಯಣ ಪೂಜೆ ಮತ್ತು ಭಜನೆಯಲ್ಲಿ ಭಾಗವಹಿಸಿದಂತ ಎಲ್ಲರಿಗೂ ಶ್ರೀ ವೆಂಕಟೇಶ್ವರ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲೆಂದು ಹೇಳಿದರು.

ಈ ಸಂದರ್ಭದಲ್ಲಿ ನವ ಬೃಂದಾವನ ಭಜನಾ ಮಂಡಳಿ ಅಧ್ಯಕ್ಷರಾದ ದರೋಜಿ ನರಸಿಂಹ ಶ್ರೇಷ್ಠಿ ಮಾತನಾಡಿ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸಿದ ನಮ್ಮ ಸಮಾಜದ ಎಲ್ಲರಿಗೂ ಜೊತೆಗೆ ಸಹಕಾರ ನೀಡಿದಂತಹ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ನರಸಿಂಹ ಆಚಾರ. ಹಣವಾಳ ಚಂದ್ರಶೇಖರ್. ಜಿ ಆರ್ ಎಸ್ ಸತ್ಯನಾರಾಯಣ. ಚಂದ್ರು ಬನ್ನಿಗೋಳ, ಚಿದಂಬರ ಶ್ರೇಷ್ಠಿ, ಸಂತೋಷ್ ಹೇಮಾ ಗುಡ್ಡ, ಗಣೇಶ್ ವೆಂಕಟಗಿರಿ, ದಮ್ಮೂರು ರಾಜಕುಮಾರ, ಮಲ್ಲಯ ದರೋಜಿ, ವೆಂಕಣ್ಣ ದರೋಜಿ, ಪ್ರಹ್ಲಾದ್ ಶ್ರೇಷ್ಠಿ, ಮಹಿಳಾ ಮಂಡಳಿಯ ಅಧ್ಯಕ್ಷರಾದ ರುಕ್ಮಿಣಮ್ಮ ಮತ್ತು ಮಹಿಳಾ ಸದಸ್ಯರು ಸೇರಿದಂತೆ ನವ ಬೃಂದಾವನ ಭಜನಾ ಮಂಡಳಿಯ ಸರ್ವ ಸದಸ್ಯರು ಮತ್ತು ಸಮಾಜದ ಮುಖಂಡರು ಹಿರಿಯರು ಪಾಲ್ಗೊಂಡು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಹಣವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಧ ಮಕ್ಕಳಿಗೆ ಉಚಿತ ಹೇರ್ ಕಟಿಂಗ್ ಸೇವೆ: ಕಾಂತಪ್ಪ ಎಚ್. ಬಾವಿಕಟ್ಟಿ

ಗಂಗಾವತಿ: ತಾಲೂಕಿನ ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣವಾಳ ಗ್ರಾಮದಲ್ಲಿ ಕರ್ನಾಟಕ ಹೇರ್ ಕಟಿಂಗ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್ ಜೆಂಟ್ಸ್ ವತಿಯಿಂದ ಮಾಲಿಕರಾದ ಕಾಂತಪ್ಪ ಹಡಪದ ಬಾವಿಕಟ್ಟಿ ಅವರು ಅಂಧ ಮಕ್ಕಳಿಗೆ ತಮ್ಮ ಜೀವನ ಪರ್ಯಂತ ಉಚಿತ ಕ್ಷೌರ ವೃತ್ತಿಯನ್ನು ಹಲವು ವರ್ಷಗಳಿಂದ ಉಚಿತವಾಗಿ ಮಾಡುತ್ತಾ ಬಂದಿದ್ದು. ಈ ವರ್ಷದಲ್ಲಿ ಗ್ರಾಮ ಪಂಚಾಯತಿಯ ಮಳಿಗೆಯಲ್ಲಿರುವ ಅಂಗಡಿಯನ್ನು ತನ್ನ ಸ್ವಂತ ಜಮೀನಿನ ಸರ್ವೆ ನಂಬರಿಗೆ ಅಂಗಡಿಯನ್ನು ವರ್ಗಾಯಿಸಿಕೊಂಡು ಅಂದರೆ ಉಚಿತವಾಗಿ ಸೇವೆ ಮಾಡುತ್ತಿರುವುದನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಟಿಂಗ್ ಶಾಪ್ ಮಾಲಿಕರಾದ ಕಾಂತಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಕಾಯಕವೇ ಕೈಲಾಸ ಎಂಬಂತೆ ಇರುವ ನನ್ನ ವೃತ್ತಿಯಲ್ಲಿ ಅದರ ಒಂದು ಸೇವೆಗಾಗಿ ಅಂಧರಿಗೆ ನಾನು ಜೀವನ ಪರ್ಯಂತ ಅವರ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಶ್ರೀ ಶನೇಶ್ವರ ಜಯಂತಿ ನಿಮಿತ್ಯ ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜರುಗಿದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ ೨೬ ಮತ್ತು ೨೭ ರಂದು ಶ್ರೀ ಶನೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು.

ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ನವಗ್ರಹ ಪೂಜಾ, ಗಣಹೋಮಗಳು ಜರುಗಿದವರು. ಮರುದಿನ ಮೇ-೨೭ ಮಂಳವಾರ ಬೆಳಗಿನ ಜಾವ ೫:೩೦ಕ್ಕೆ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಲೋಕಕಲ್ಯಾಣಕ್ಕಾಗಿ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು, ಹಾಗೆಯೇ ಮಠದ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಿಗೆ ಹಾಗೂ ಫಕೀರೇಶ್ವರ ಸ್ವಾಮಿ ಗದ್ದುಗೆಗೆ ಪೂಜಾ ಹಾಗೂ ಅಭಿಷೇಕ ಮಾಡಲಾಯಿತು.

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಕೂಕನಪಳ್ಳಿಯ ಫಕೀರಯ್ಯಸ್ವಾಮಿ ಹಿರೇಮಠ, ಶಾಂತಯ್ಯ ಪುರಾಣಿಕಮಠ ನಾಗೇಂದ್ರಗಡ, ಗಂಗಾವತಿಯ ಮಂಜುನಾಥ ಕುರುಗೋಡು, ಚಿದಾನಂದ ಶಂಕ್ರಪ್ಪ ಹೂಗಾರ, ಸಿ.ಬಿ.ಎಸ್ ಚಾನೆಲ್‌ನ ದಶರಥ, ಸಂಡೂರಿನ ಅನೂಪ ಬಂಡ್ರಿ, ಗುರಪ್ಪ ಕಾರಟಗಿ, ಅಮರಪ್ಪ ಕಲಬುರ್ಗಿ, ಬೆಟ್ಟಪ್ಪ ಬೀರಪ್ಪ ಜೀರಾಳ, ಜಯಕುಮಾರ ಶಂಭುಲಿಂಗಪ್ಪ ವಡ್ಡರಹಟ್ಟಿ, ಡಾ|| ಸುಜಾತ ಶ್ರೀನಿವಾಸಲು, ನಾಗನಗೌಡ ಪಾಟೀಲ್, ದೊಡ್ಡನಗೌಡ ಪಾಟೀಲ್, ಬಸವಣ್ಣೆಯ್ಯಸ್ವಾಮಿ ಹಿರೇಮಠ, ತಿಮ್ಮಾಪುರದ ಪರ್ವತಯ್ಯ ಹಿರೇಮಠ ಹಾಗೂ ಕುಟುಂಬವರ್ಗ ಈ ಎಲ್ಲಾ ದಂಪತಿಗಳು ಸೇರಿದಂತೆ ಕಲ್ಮಂಗಿ, ಆಗೋಲಿ, ಅಬ್ಬಿಗೇರಿ, ಸಾಲೋಟಗಿ, ಕಕ್ಕೇರಿ, ಕಾಸನಕಂಡಿ, ಪಿ.ಕೆ ಹಳ್ಳಿ, ಬೆನ್ನೂರು, ಹಿರೇಹಡಗಲಿ, ಕೇಸರಹಟ್ಟಿ, ವೆಂಕಟಗಿರಿ, ಗಡ್ಡಿ, ವಡ್ಡರಹಟ್ಟಿ ಹಾಗೂ ಗಂಗಾವತಿ ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಪ್ರಮುಖರು ಹಾಗೂ ಭಕ್ತಾದಿಗಳು ಭಾಗವಹಿಸಿ ಯಶಸ್ವಿಯಾಗಿ ಜರುಗಿದವು.

ಶ್ರೀ ಶನೇಶ್ವರ ಜಯಂತ್ಯೋತ್ಸವವನ್ನು ಅದ್ಧೂರಿಯಾಗಿ, ವೈಭವದಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಆಚರಿಸಿ, ಮದ್ಯಾಹ್ನ ಮಹಾಪ್ರಸಾದ ಸ್ವೀಕರಿಸಿ ಭಕ್ತಾದಿಗಳು ಶ್ರೀ ಶನೇಶ್ವರಸ್ವಾಮಿ ಕೃಪೆಗೆ ಪಾತ್ರರಾದರು ಎಂದು ವೆಂಕಟಗಿರಿ ಹಾಲಸ್ವಾಮಿ ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹೇಳಿದರು.

೧ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಮೇ-೨೫ ಭಾನುವಾರದಂದು ವಿಜಯನಗರ ಜಿಲ್ಲೆಯ ಹಂಪಿನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪ ಭವನದಲ್ಲಿ ೧ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಆಯೋಜನೆಯಾಗಿತ್ತು. ಈ ಸ್ಪರ್ಧೆಯಲ್ಲಿ ಸರಿಸುಮಾರು ೫೦೦ ಹೆಚ್ಚು ವಿದ್ಯಾರ್ಥಿಗಳು ವಿವಿಧ ತಾಲೂಕು ಮತ್ತು ಜಿಲ್ಲೆಗಳಿಂದ ಭಾಗವಹಿಸಿದ್ದರು.

ಈ ಸ್ಪರ್ಧೆಯಲ್ಲಿ ಗಂಗಾವತಿಯ ಪ್ರತಿಷ್ಠಿತ ಕರಾಟೆ ತರಬೇತಿ ಸಂಸ್ಥೆಯಾದ ಬಿ.ಎಲ್. ಬುಲ್ಸ್ ಕರಾಟೆ ಡು ಸ್ಪೋರ್ಟ್ ಅಸೋಸಿಯೇಷನ್ (ರಿ) ಗಂಗಾವತಿ ವತಿಯಿಂದ ೯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಟಾ ವಿಭಾಗದಲ್ಲಿ ೨ ಪ್ರಥಮ ಸ್ಥಾನ, ೪ ದ್ವಿತೀಯ ಸ್ಥಾನ, ೩ ತೃತೀಯ ಸ್ಥಾನ ಹಾಗೂ ಕುಮುಟೆ ವಿಭಾಗದಲ್ಲಿ ೨ ಪ್ರಥಮ ಸ್ಥಾನ, ೨ ದ್ವಿತೀಯ ಸ್ಥಾನ, ೧ ತೃತೀಯ ಸ್ಥಾನ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಅಹಾನ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಹರಿಣಿ ಕಟಾ ವಿಭಾಗದಲ್ಲಿ ಪ್ರಥಮ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಚಿನ್ನು ಕಟಾ ವಿಭಾಗದಲ್ಲಿ ದ್ವಿತೀಯ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಅಖಿಲೇಶ್ ಕಟಾ ವಿಭಾಗದಲ್ಲಿ ದ್ವಿತೀಯ ಮತ್ತು ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ಯಷೀಕಾ ಕಟಾ ವಿಭಾಗದಲ್ಲಿ ತೃತೀಯ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಅಬುಬಕರ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಶರತ್ ಪಂಡಿತ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ, ಪ್ರಣವಿ, ದಿಲೀಪ್, ಕಟಾ ವಿಭಾಗದಲ್ಲಿ ತೃತೀಯ ಪಡೆದು ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೊಲೀಸ್ ಪಾಟೀಲ್ ರವರು ಮಾತನಾಡಿ ಈ ಕರಾಟೆ ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕರಾಟೆ ಮುಖ್ಯ ತರಬೇತುದರಾದ ಮಂಜುನಾಥ ರಾಥೋಡ್ ಮಾತನಾಡಿ ಮಕ್ಕಳು ತಮ್ಮ ಆತ್ಮಸ್ಥೈರ್ಯ ಮತ್ತು ಧೈರ್ಯವನ್ನು ಕಳೆದುಕೊಳ್ಳಬಾರದು. ಇವತ್ತಿನ ಸೋಲು ನಾಳಿನ ಗೆಲುವಿನ ಮೆಟ್ಟಲು ಎಂದು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು.

ಕರಾಟೆ ಶಿಕ್ಷಕರಾದ ಶಿಲ್ಪಾ. ಫಯಾಜ್, ಪ್ರಜ್ವಲ್, ಮೀನಾಕ್ಷಿ ಮತ್ತು ಕ್ರೀಡಾಪಟುಗಳ ಪೋಷಕರಾದ ಮಂಜುನಾಥ, ಸುನಿಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು.


ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ ಶನೇಶ್ವರ ಜಯಂತ್ಯೋತ್ಸವವನ್ನು ಅದ್ಧೂರಿಯಾಗಿ, ವೈಭವದಿಂದ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಆಚರಿಸಲಾಗುವುದು, ಅಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಕಾರಣ ಈ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಕಲ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಶನೇಶ್ವರಸ್ವಾಮಿ ಕೃಪೆಗೆ ಪಾತ್ರರಾಗಬೇಕೆಂದು ವೆಂಕಟಗಿರಿ ಹಾಲಸ್ವಾಮಿ ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಭಕ್ತಮಂಡಳಿ ಪ್ರಮುಖರಾದ ಮಂಜುನಾಥ ಕುರುಗೋಡು ಮೊಬೈಲ್ ಸಂಖ್ಯೆ: ೯೩೪೨೨೭೦೪೦೮ ಗೆ ಸಂಪರ್ಕಿಸಿರಿ.

ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ

ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಅವರು ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ೧೨ನೇ ವಾರ್ಷಿಕೋತ್ಸವ ಮತ್ತು ರ‍್ಯಾಂಕ್ ಪಡೆದ ಸಾಧಕಿಯರನ್ನ ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಐಟಿ-ಬಿಟಿ ಉದ್ಯೋಗಗಳಿಗಿಂತ ಕೃಷಿ ವೃತ್ತಿಯು ಅತ್ಯಂತ ಮಹತ್ವವಾದದ್ದು ಮತ್ತು ಬೆಲೆಯುತವಾದದ್ದು, ಏಕೆಂದರೆ ಮುಂದಿನ ದಿನಮಾನಗಳಲ್ಲಿ ಒಂದೇ ಒಂದು ಎಕರೆ ಕೃಷಿ ಭೂಮಿ ಇರುವ ರೈತನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುತ್ತಾನೆ ಎಂದು ತಿಳಿಸಿದರು. ಇಂದಿನ ಮಹಿಳೆ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸಾಧಿಸುವ ಕಡೆ ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಇಂದಿನ ಯುವತಿಯರಲ್ಲಿ ಬುದ್ಧಿವಂತಿಕೆ ಜೊತೆಗೆ ತಾಳ್ಮೆ, ಆತ್ಮವಿಶ್ವಾಸ ಸಾಧಿಸುವ ಛಲ ಕುಟುಂಬದ ಜೊತೆ ಹೊಂದಾಣಿಕೆ, ಸಹಕಾರ, ಸಂಸ್ಕಾರಗಳ ಗುಚ್ಛವಾಗಿ ಮುಂದೆ ಸಾಗಬೇಕು, ಅದರಿಂದ ಪರಿಪೂರ್ಣ ಬದುಕಿನ ಅನಾವರಣವಾಗಲಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹೇಮಂತರಾಜ್ ಕಲ್ಮಿಂಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಸಾಧನೆಯನ್ನು ಪ್ರಶಂಶಿಸಿದರು.
ಉಪಾಧ್ಯಕ್ಷರಾದ ಡಾ. ಎಂ.ಆರ್ ಮಂಜುಸ್ವಾಮಿಯವರು ಪ್ರಾಸ್ತಾವಿಕ ನುಡಿಗಳಲ್ಲಿ ನಿಯಮಿತ ಅವಧಿಯಲ್ಲಿ ಸಂಸ್ಥೆಯ ಅಮೋಘ ಸಾಧನೆಗೆ ವಿದ್ಯಾರ್ಥಿನಿಯರು ಕಾರಣರಾಗಿದ್ದಾರೆ. ೯ ವರ್ಷದಲ್ಲಿ ಆರು ಚಿನ್ನದ ಪದಕ, ೨೪ ರ‍್ಯಾಂಕುಗಳನ್ನು ಗಳಿಸಿದ್ದು ಕಲ್ಯಾಣ ಕರ್ನಾಟಕದಲ್ಲಿ ವಿಶಿಷ್ಟ ಸಾಧನೆಗೈದಿದೆ ಎಂದರು.

ಡಾ. ಅಮಿತ್ ಕುಮಾರ್ ರೆಡ್ಡಿಯವರು ಉಪನ್ಯಾಸಕರಿಗೆ ಅವರ ಪರಿಶ್ರಮವನ್ನು ಪ್ರಶಂಶಿಸಿ, ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್ ಮಾತನಾಡಿ, ಪ್ರತಿವರ್ಷ ಉನ್ನತ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಅಭಿನಂದಿಸಿ, ಮುಂದಿನ ಜೀವನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಪ್ರಾಚಾರ್ಯರಾದ ಬಸಪ್ಪ ಸಿರಿಗೇರಿ ರ‍್ಯಾಂಕ್ ಸಾಧಕಿಯರಾದ ಬಿ.ಕಾಂ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಮತ್ತು ಚಿನ್ನದ ಪದಕ ಪಡೆದ ಜೇಬಾ, ೫ನೇ ರ‍್ಯಾಂಕ್ ಪಡೆದ ಅಕ್ಷತಾ, ೬ನೇ ರ‍್ಯಾಂಕ್ ಪಡೆದ ಜಯಶ್ರೀ, ಅದೇರಿತಿ ಬಿ.ಎ ಪದವಿಯಲ್ಲಿ ಕುಮಾರಿ ಸುಭದ್ರಾ ಇವರು ಐಚ್ಛಿಕ ಕನ್ನಡ ವಿಷಯದಲ್ಲಿ ಚಿನ್ನದ ಪದಕ ಮತ್ತು ೬ನೇ ರ‍್ಯಾಂಕ್, ಕುಮಾರಿ ಉಮಾ ಇವರು ೪ನೇ ರ‍್ಯಾಂಕ್, ಕುಮಾರಿ ಹನುಮಂತಿ ೫ನೇ ರ‍್ಯಾಂಕ್, ಕುಮಾರಿ ಅನಿತಾ ಕೋರಿ ೧೦ನೇ ರ‍್ಯಾಂಕ್ ಗಳಿಸಿದ ಈ ಎಲ್ಲಾ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯ ನೆರವೇರಿಸಿಕೊಟ್ಟು, ವಿದ್ಯಾರ್ಥಿನಿಯರ ಸಾಧನೆ ಹಾಗೂ ಪಾಲಕರ ಸಹಕಾರ, ಪ್ರಾಧ್ಯಾಪಕರ ಶ್ರಮವನ್ನ ಸ್ಮರಿಸಿದರು.

ಈ ಸಂದರ್ಭದಲ್ಲಿ ಶಂಕರಲಿAಗಪ್ಪ ಕೊಪ್ಪದ್ ರವರು ಮುಖ್ಯ ಅತಿಥಿಗಳಾಗಿ ಹಿತನುಡಿಗಳನ್ನು ನುಡಿದರು. ವಿಶೇಷವಾಗಿ ಈ ಸಾಧನೆಯನ್ನು ಇತಿಹಾಸ ಪ್ರಾಧ್ಯಾಪಕರಾದ ದಿವಂಗತ ಪಂಡರಿನಾಥ್ ಅಗ್ನಿಹೋತ್ರಿ ಅವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪಂಪಾಪತಿ, ಪವಿತ್ರ ಬಸವರಾಜ್ ಹಾಗೂ ಎಲ್ಲಾ ಪ್ರಾಧ್ಯಾಪಕ ವೃಂದದವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರು ಶಿವಶರಣರವರು ನಿರೂಪಿಸಿದರೆ, ಶ್ರೀಮತಿ ಆಶಾ ಸ್ವಾಗತಿಸಿ, ಅಧ್ಯಾಪಕರಾದ ಚನ್ನಬಸವ ವಂದಿಸಿದರು.

ಶ್ರೀ ಕನ್ನಿಕಾಪರಮೇಶ್ವರಿ ದೇವಿಯ ಭವ್ಯ ಮೆರವಣಿಗೆ.

ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತ್ರತ್ವದಲ್ಲಿ ಕುಲದೇವತೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಯ ಜಯಂತೋತ್ಸವದ ಪ್ರಯುಕ್ತ ಬುಧವಾರದಂದು ಅಮ್ಮನವರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ವಾದ್ಯ ವೈಭವದೊಂದಿಗೆ ಜರುಗಿತು.

ಬೆಳಿಗ್ಗೆ ಐದು ಜನ ಮಹಿಳೆಯರು ಕಳಸ ಪೂರ್ಣ ಕುಂಭದೊಂದಿಗೆ ದೇವಸ್ಥಾನದ ಆವರಣದಿಂದ ಪ್ರಮುಖ ರಾಜ ಬೀದಿಗಳ ಮೂಲಕ ತೆರಳಿ ಗಂಗೆ ಪೂಜೆ ನೆರವೇರಿಸಿ ದೇವಸ್ಥಾನಕ್ಕೆ ಆಗಮಿಸಿತು.

ಬಳಿಕ ದೇವಸ್ಥಾನದಲ್ಲಿ ಪೂರ್ಣ ಕುಂಭದೊಂದಿಗೆ ಆಗಮಿಸಿದ ಮಹಿಳೆಯರಿಗೆ ಉಡಿ ತುಂಬುವಿಕೆ ಸೇರಿದಂತೆ ಭಜನೆ ಅಮ್ಮನವರಿಗೆ ಅಭಿಷೇಕ ಲಲಿತ ಸಹಸ್ರ ಪಾರಾಯಣ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಅರ್ಚಕ ಅವಧೂತ ಭಟ್ಟರು ನೆರವೇರಿಸಿದರು.

ಸಮಾಜದ ಅಧ್ಯಕ್ಷ ನಾಗರಾಜ ದರೋಜಿ ಹಾಗೂ ಸತ್ಯ ಜಿ ಆರ್ ಎಸ್ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷ ರುಕ್ಮಿಣಿ ಬಾಯಿ ಆಚರಣೆ ಕುರಿತು ಮಾತಾಡಿದರು.