ಒಂಭತ್ತು ವರ್ಷಗಳ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.

ಗಂಗಾವತಿ: “ಸಪ್ತಪದಿ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ ವಯಸ್ಸಿನ ಮಿತಿ ಇಲ್ಲವೆಂಬ ಸತ್ಯವನ್ನು ಒಬ್ಬ ಎರಡು ಮಕ್ಕಳ ತಾಯಿ ೨೦೨೪-೨೫ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪರೀಕ್ಷೆಯನ್ನು ಉತ್ತಮ ಅಂಕಗಳೊAದಿಗೆ ತೇರ್ಗಡೆಗೊಂಡು ವಿಶಿಷ್ಟತೆಗೆ ಕಾರಣರಾಗಿದ್ದಾರೆ.

ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಲಕ್ಷ್ಮಿಯೇ ಆ ಮಹಿಳೆ. ಇವರು ಹಿರೇಬೆಣಕಲ್ ಶಾಲೆಯಲ್ಲಿ ತಮ್ಮ ಎಂಟನೇ ತರಗತಿಯನ್ನು ಎರಡನೇ ರ‍್ಯಾಂಕ್ ಪಡೆದು ತೇರ್ಗಡೆಯಾಗಿದ್ದರು. ನಂತರ ತಮ್ಮ ೧೮ನೇ ವಯಸ್ಸಿನಲ್ಲಿ ಮದುವೆಯಾಗಿದ್ದು, ಇದರ ಮಧ್ಯದಲ್ಲಿ ಅವರ ಓದು ನಿಂತು ಹೋಗುತ್ತದೆ. ತದನಂತರ ಒಂಭತ್ತು ವರ್ಷಗಳ ನಂತರ ಎರಡು ಮಕ್ಕಳ ಗೃಹಿಣಿಯಾಗಿದ್ದ ಲಕ್ಷ್ಮಿಯವರಿಗೆ ಓದುವ ಆಸೆ ಚಿಗುರೋಡೆದು ಪತಿಗೆ ತಿಳಿಸಿದರು. ಅವರ ಪತಿ ಏನನ್ನು ಯೋಚಿಸದೆ ಓದಬೇಕೆಂಬ ಚಿಗುರಿಗೆ ಆಸರೆಯಾಗಿ ನಿಂತರು.

ಪತಿಯ ಆಸರೆಯನ್ನು ಪಡೆದ ಮಹಿಳೆ ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನೇರವಾಗಿ ಬರೆದು ಯಾವುದೇ ಇಂಟರ್ನಲ್ ಅಂಕಗಳಿಲ್ಲದೇ ೩೦೪ ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ. ತೆರ್ಗಡೆಯಾದ ಸಂಗತಿ ಸಾಧಾರಣವಾಗಿರಬಹುದು. ಆದರೆ ಪ್ರತಿದಿನ ಶಾಲೆಗೆ ಹೋಗಿ ಬರುವ ಎಷ್ಟೋ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಹೀಗಿರುವಾಗ ಎರಡು ಮಕ್ಕಳ ಗೃಹಿಣಿ ೯ ವರ್ಷಗಳ ನಂತರ ಮತ್ತೆ ಓದುವ ಛಲತೊಟ್ಟು ಉತ್ತಮ ಅಂಕಗಳೊಂದಿದೆ ತೇರ್ಗಡೆಯಾಗಿರುವುದು ವಿಶಿಷ್ಟವಾಗಿದೆ. ಇದು ಓದನ್ನು ಅರ್ಧಕ್ಕೆ ನಿಲ್ಲಿಸಿ ಮತ್ತೆ ಓದಬೇಕು ಎಂಬ ಆಸೆಪಡುವವರಿಗೆ ಸ್ಪೂರ್ತಿ ಎಂದು ಊರಿನ ಶಿಕ್ಷಣ ಪ್ರೇಮಿಗಳು ಖುಷಿಯನ್ನು ವ್ಯಕ್ತಪಡಿಸಿ ಅವರನ್ನು ಗೌರವಿಸಿದ್ದಾರೆ.

ಪತ್ರಕರ್ತ ನಾಗರಾಜ್ ವೈ ಗೆ ಕೇರಳದ ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸನ್ಮಾನಿಸಿ ಗೌರವ.

ಗಂಗಾವತಿ: ಟಿವಿ-೫ ಮಾಧ್ಯಮದ ಜಿಲ್ಲಾ ವರದಿಗಾರರಾದ ನಾಗರಾಜ್ ವೈ ಇವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಕೊಡಮಾಡುವ ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆ ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿಯಾದ ಬಸವರಾಜ್ ಮ್ಯಾಗಳಮನಿ ಅವರ ನೇತೃತ್ವದಲ್ಲಿ ನಾಗರಾಜ್.ವೈ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನಿಸಿ ಮಾತನಾಡಿದ ಬಸವರಾಜ್ ಮ್ಯಾಗಳಮನಿಯವರು, ನಾಗರಾಜ್ ಅವರು ಬಹಳ ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಮಾಜಿಕ ಪರ ವರದಿ ಮಾಡುವ ಮೂಲಕ ಹೆಸರು ಮಾಡಿದ್ದಾರೆ. ಅಲ್ಲದೆ ಸರಳ ವ್ಯಕ್ತಿತ್ವದ ಜೊತೆಜೊತೆಗೆ ಸಾಮಾನ್ಯ ವರ್ಗದ ಜನರ ಪರವಾಗಿ ಸುದ್ದಿ ಪ್ರಸಾರ ಮಾಡುತ್ತಾ, ಜನಪರ ಕಾಳಜಿ ಹೊಂದಿದ್ದಾರೆ. ಇವರಿಗೆ ಇದೀಗ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಸರ್ಕಾರದ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇವರ ಸಹಯೋಗದಲ್ಲಿ ಕೇರಳದ ಕಾಸರಗೋಡಿನಲ್ಲಿ ಮೇ-೩ ರಂದು ನಡೆಯಲಿರುವ ಸಮಾರಂಭದಲ್ಲಿ ಶ್ರೀ ಜೋಸೆಫ್ ಮಥಾಯಿಸ್ ದುಬೈ ಪ್ರಶಸ್ತಿ ನೀಡುತ್ತಿರುವುದು ಸಂತಸದಾಯಕವಾಗಿದೆ. ಇದರ ಜೊತೆಗೆ ಕೇರಳ ರಾಜ್ಯದಲ್ಲಿ ನೀಡುವ ಪ್ರಶಸ್ತಿಗೆ ಉತ್ತರ ಕರ್ನಾಟಕ ಭಾಗದಿಂದ ನಾಗರಾಜ್. ವೈ ಅವರು ಒಬ್ಬರೇ ಆಯ್ಕೆಯಾಗಿದ್ದು, ನಮ್ಮ ಭಾಗದ ಜನರಿಗೆ ಗೌರವ ತಂದಿದೆ ಎಂದರು.

ಈ ಸಂಧರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ರಗಡಪ್ಪ ಹೊಸಳ್ಳಿ, ರಾಮಣ್ಣ ರುದ್ರಾಕ್ಷಿ, ಮಂಜುನಾಥ ಚನ್ನಾದಾಸರ, ಮುತ್ತಣ್ಣ ಹೊಸಳ್ಳಿ, ತಿಪ್ಪೇಶ್, ಜಂಬಣ್ಣ ಮತ್ತಿತರರು ಇದ್ದರು.


ಪ್ರಶಸ್ತಿ ಸಮಾರಂಭ ೨೦೨೫ನೇ ಮೇ-೦೩ ರಂದು ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಕೆ ಶೆಟ್ಟಿ ಕುತ್ತಿಕಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕದ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮುಂತಾದ ಗಣ್ಯರು ಸೇರಿ ಪ್ರಶಸ್ತಿ ಪ್ರಧಾನಿಸುವರು ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಿಳಿಸಿದೆ.


 

ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧ ಗುರುವಾರ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಂದು ಸಿಐಟಿಯು ದುಡಿಯುವ ವರ್ಗದ ಅಂತರಾಷ್ಟ್ರೀಯತೆಗೆ ತನ್ನ ಬದ್ಧತೆಯನ್ನು ಹೊಂದಿ ಶೋಷಣೆ, ತಾರತಮ್ಯದ ವಿರುದ್ಧ, ಶಾಂತಿ ಮತ್ತು ಸಾಮರಸ್ಯಕ್ಕಾಗಿ ಎಲ್ಲಾ ದುಡಿಯುವ ಜನರ ಹೋರಾಟಗಳಲ್ಲಿ ಅವರೊಂದಿಗೆ ಒಗ್ಗೂಡಿ ನೂತನ ಪ್ರಣಾಳಿಕೆಯನ್ನು ತಂದಿದೆ ಎಂದು ಸಿ.ಐ.ಟಿ.ಯು.ನ ಜಿಲ್ಲಾಧ್ಯಕ್ಷರಾದ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಮೇ-೧ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಗರದ ಶ್ರೀ ಚನ್ನಬಸವ ಕಲಾಮಂದಿರದಲ್ಲಿ ಆಯೋಜಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಸಿಯೂಟ ಸಂಘಟನೆಯ ರಾಜ್ಯಾಧ್ಯಕ್ಷರಾದ ಲಕ್ಷ್ಮೀದೇವಿ ಸೋನಾರ್ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಿ.ಐ.ಟಿ.ಯು ರಾಜ್ಯ ಅಧ್ಯಕ್ಷರಾದ ಎಸ್. ವರಲಕ್ಷ್ಮೀಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಸ್ವತಂತ್ರ ವಲಯ ಒಕ್ಕೂಟಗಳ ಜಂಟಿ ವೇದಿಕೆಯಡಿಯಲ್ಲಿ ೨೦೨೫ರ ಮೇ ೨೦ ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಸಜ್ಜಾಗುತ್ತಿರುವ ಭಾರತದ ಕಾರ್ಮಿಕ ವರ್ಗವನ್ನು ಸಿಐಟಿಯು ಅಭಿನಂದಿಸುತ್ತದೆ. ಈ ಮುಷ್ಕರವು ದುಡಿಯುವ ಜನರ ಹಕ್ಕುಗಳು ಮತ್ತು ಜೀವನೋಪಾಯದ ಮೇಲೆ ಆಡಳಿತ ವರ್ಗಗಳ ಕ್ರೂರ ದಾಳಿಯ ವಿರುದ್ಧ ಭಾರತೀಯ ಕಾರ್ಮಿಕ ವರ್ಗದ ಅತಿದೊಡ್ಡ ಕ್ರಮವಾಗಲಿದೆ. ದೇಶದ ವರ್ಗ ಆಧಾರಿತ ಕಾರ್ಮಿಕ ಸಂಘವಾಗಿ, ಸಿಐಟಿಯು ಈ ಸಾರ್ವತ್ರಿಕ ಮುಷ್ಕರವನ್ನು ಕಾರ್ಮಿಕ ವರ್ಗದ ನೇತೃತ್ವದಲ್ಲಿ ಹೊಸ ಹಂತದ ಪ್ರತಿದಾಳಿಯ ಆರಂಭವನ್ನಾಗಿ ಮಾಡುವ ಐತಿಹಾಸಿಕ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಇಂದಿನ ಹೋರಾಟವು ರಾಷ್ಟ್ರೀಯ ಆರ್ಥಿಕತೆಯ ಮೇಲಿನ ಕಾರ್ಪೊರೇಟ್ ಲೂಟಿಯ ವಿರುದ್ಧವಾಗಿದೆ; ಇದು ದುಡಿಯುವ ಜನರ ಮೂಲಭೂತ ಪ್ರಜಾಪ್ರಭುತ್ವ, ಸಾಂವಿಧಾನಿಕ ಮತ್ತು ಕಷ್ಟಪಟ್ಟು ಗೆದ್ದ ಕೆಲಸದ ಸ್ಥಳದಲ್ಲಿನ ಹಕ್ಕುಗಳ ಮೇಲಿನ ದಾಳಿಯ ವಿರುದ್ಧವಾಗಿದೆ. ಸಾಮ್ರಾಜ್ಯಶಾಹಿ ಮತ್ತು ಬಲಪಂತೀಯ ನವ-ಫ್ಯಾಸಿಸ್ಟ್ ರಾಜಕೀಯ ಶಕ್ತಿಗಳ ವಿರುದ್ಧ ವಿವಿಧ ರಾಷ್ಟ್ರಗಳಲ್ಲಿ ದಿಟ್ಟ ಹೋರಾಟಗಳನ್ನು ಸಂಘಟಿಸಿದ್ದಕ್ಕಾಗಿ ವಿಶ್ವ ಕಾರ್ಮಿಕ ಸಂಘಗಳ ಒಕ್ಕೂಟದ (ಡಬ್ಲ್ಯೂ.ಎಫ್.ಟಿ.ಯು) ನೇತೃತ್ವದಲ್ಲಿ ಅಂತರಾಷ್ಟ್ರೀಯ ವರ್ಗಾಧಾರಿತ ಕಾರ್ಮಿಕ ವರ್ಗ ಚಳುವಳಿಯನ್ನು ಸಿಐಟಿಯು ಬೆಂಬಲಿಸುತ್ತದೆ ಮತ್ತು ಅಭಿನಂದಿಸುತ್ತದೆ. ಸಮಾಜವಾದದ ಧ್ವಜವನ್ನು ಎತ್ತರಕ್ಕೆ ಎತ್ತಿ ಹಿಡಿದಿದ್ದಕ್ಕಾಗಿ ಚೀನಾ, ಕ್ಯೂಬಾ, ವಿಯೆಟ್ನಾಂ, ಲಾವೋಸ್ ಮತ್ತು ಉತ್ತರ ಕೊರಿಯಾದ ಸಮಾಜವಾದಿ ದೇಶಗಳ ಕಾರ್ಮಿಕ ವರ್ಗವನ್ನು ಸಿಐಟಿಯು ಅಭಿನಂದಿಸುತ್ತದೆ. ಸಮಾಜವಾದಿ ರಾಷ್ಟ್ರಗಳು ಹಾಗೂ ಸಮಾಜವಾದವನ್ನು ರಕ್ಷಿಸಲು, ಸಾಮ್ರಾಜ್ಯಶಾಹಿ ಕುತಂತ್ರಗಳನ್ನು ವಿರೋಧಿಸುತ್ತಾ ತಮ್ಮ ಜನರ ಜೀವನ ಮಟ್ಟವನ್ನು ಸುಧಾರಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ. ಈ ನಿಟ್ಟಿನಲ್ಲಿ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸಿ.ಐ.ಟಿ.ಯು ಹೋರಾಟದಲ್ಲಿ ಹೊಸ ಪ್ರಣಾಳಿಕೆಯನ್ನು ತಂದಿದೆ ಎಂದರು.

ಕಾರ್ಯಕ್ರಮದ ನಿರ್ವಹಣೆಯನ್ನು ಸಿ.ಐ.ಟಿ.ಯು ತಾಲೂಕ ಕಾರ್ಯದರ್ಶಿ ಮಂಜುನಾಥ ಡಗ್ಗಿ ಅಚ್ಚುಕಟ್ಟಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಿ.ಐ.ಟಿ.ಯು ನ ನೂರಾರು ಸದಸ್ಯರು ಪಾಲ್ಗೊಂಡಿದ್ದರು

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಮಾನತೆ ತತ್ವಗಳ ಕುರಿತು ತಿಳಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತ್ರಿ, ಉಪಾಧ್ಯಕ್ಷ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿ ಮಹೆಬೂಬಸಾಬ್ ಲಾಠಿ, ಜಂಟಿ ಕಾರ್ಯದರ್ಶಿ ಚಾಂದ್‌ಪಾಷಾ ಮುರಾಹರಿನಗರ, ಸದಸ್ಯರುಗಳಾದ ಹುಲ್ಲೇಶ, ಜಗದೇಶ ಮೇಸ್ತ್ರಿ, ಸೋಮು ಜಿ. ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು.

ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು. ಅಗತ್ಯ ಇದ್ದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರವನ್ನು ಇಲಾಖೆಗಳಿಗೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ. ಜಗನ್ನಾಥ್ ಅಳವಂಡಿಕರ್, ಅನಿಲ್ ಅಳವಂಡಿಕರ್‌, ನಾಗೇಶ್ ಭಟ್, ಶೇಷಗಿರಿ, ಶ್ರೀಪಾದ್ ಮುಧೋಳಕರ್, ವೇಣುಗೋಪಾಲ್, ಹೊಸಳ್ಳಿ ಭೀಮಶಂಕರ, ಮೋಹನ್ ಲೆಕ್ಕಿಹಾಳ ಇತರರು ಉಪಸ್ಥಿತರಿದ್ದರು.

ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಗಡ್ಡಿ-ಉಡುಮಕಲ್ ಗ್ರಾಮದಲ್ಲಿ ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತವಾದ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ ಇದೇ ಏಪ್ರಿಲ್-೩೦ ಬುಧವಾರ ನಡೆಯಲಿದೆ.

ಏಪ್ರಿಲ್-೨೯ ಮಂಗಳವಾರ ಆಹ್ವಾನಿತರ ಭಜನಾ ಸಂಘದವರಿಂದ ಡೊಳ್ಳು ವಾದ್ಯಗಳೊಂದಿಗೆ ಅದ್ದೂರಿ ಸ್ವಾಗತ, ಏಪ್ರಿಲ್-೩೦ ಬುಧವಾರ ಬೆಳಗ್ಗೆ ೩:೦೦ ಗಂಟೆಗೆ ತಾತನವರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಬೆಳಗ್ಗೆ ೬:೦೦ ಗಂಟೆಗೆ ಸುಮಂಗಲೆಯರಿಂದ ಕಳಶದೊಂದಿಗೆ ಡೊಳ್ಳಿನ ಸಂಗಡ ಗಂಗೆಸ್ಥಳಕ್ಕೆ ಹೋಗಿ ಬರುವುದು, ನಂತರ ಗಣಾರಾಧನೆ ನಡೆಯುವುದು, ನಂತರ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ ಕಾರ್ಯಕ್ರಮ ಮತ್ತು ಸಂಜೆ ೫:೦೦ ಗಂಟೆಗೆ ತಾತನವರ ಉತ್ಸವ ಜರುಗಲಿದೆ.

ಉತ್ಸವದ ನೇತೃತ್ವವನ್ನು ಗಡ್ಡಿಮಠದ ಶ್ರೀ ವೇ.ಮೂ. ಈಶ್ವರಯ್ಯ ಸ್ವಾಮಿ ಹಾಗೂ ಉಡುಮಕಲ್ ಬೃಹನ್ಮಠದ ಅಧ್ಯಕ್ಷರಾದ ಶ್ರೀ ವೇ.ಮೂ. ವೀರಬಸವ ಶಾಸ್ತ್ರಿಗಳು ವಹಿಸಲಿದ್ದಾರೆ. ಮೇ-೦೧ ರಂದು ಅಮರೇಶಯ್ಯಸ್ವಾಮಿ ಗಡ್ಡಿಮಠ ಇವರ ಅಧ್ಯಕ್ಷತೆಯಲ್ಲಿ ರಸಮಂಜರಿ ಕಾರ್ಯಕ್ರಮ ಜರುಗಲಿದೆ.

ಈ ಜಾತ್ರಾ ಮಹೋತ್ಸವಕ್ಕೆ ಸಕಲ ಭಕ್ತಾದಿಗಳು ಆಗಮಿಸಿ ತಾತನವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿ ಮುಖ್ಯಸ್ಥರು ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿರುವ ಪಕೀರಪ್ಪ ಪೂಜಾರ ಇವರು ವಿನಂತಿಸಿದ್ದಾರೆ.

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ, ಉಪಾಧ್ಯಕ್ಷರಾಗಿ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಮೆಹಬೂಬಸಾಬ ಲಾಠಿ, ಜಂಟಿ ಕಾರ್ಯದರ್ಶಿಯಾಗಿ ಚಾಂದಪಾಷಾ, ಸಂಘಟನಾ ಕಾರ್ಯದರ್ಶಿಗಳಾಗಿ ಕೆ. ಮರಿಸ್ವಾಮಿ, ಎಸ್. ಸಿಖಂದರ್, ಖಜಾಂಚಿಯಾಗಿ ಸೈಯ್ಯದ್ ಇಸೂಬ್ ರವರನ್ನು ನೇಮಿಸಲಾಗಿದ್ದು, ಸಂಘವು ಕಾರ್ಮಿಕ ಇಲಾಖೆಯ ಕಾಯ್ದೆಗಳನ್ವಯ ಕಾರ್ಯನಿರ್ವಹಿಸಲಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಲಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ಗಂಗಾವತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಶೈಕ್ಷಣಿಕ ವಿಭಾಗವಾದ ನೇತಾಜಿ ಸುಭಾಷ್ ರಾಷ್ಟ್ರೀಯ ಕ್ರೀಡಾ ಸಂಸ್ಥೆಯು ನಡೆಸುತ್ತಿರುವ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕರಾದ ಎನ್. ಭಾನುಪ್ರಸಾದ್ ರವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಈ ಯೋಗ ತರಬೇತಿಯು ಪಂಜಾಬ್‌ನ ಪಟಿಯಾಲದಲ್ಲಿ ಮುಂದಿನ ತಿಂಗಳು ಮೇ-೬ ರಿಂದ ಆರು ವಾರಗಳ ಕಾಲ ನಡೆಯಲಿದೆ.
ಈ ಯೋಗ ತರಬೇತಿಗೆ ಆಯ್ಕೆಯಾದ ಎನ್. ಭಾನುಪ್ರಸಾದ ಅವರಿಗೆ ಪ್ರಜ್ವಲ ಯೋಗ ಕೇಂದ್ರ, ಸ್ನೇಹ ಬಳಗ ಯೋಗ ಸಂಸ್ಥೆ ಹಾಗೂ ಪ್ರಗತಿ ಕ್ರೀಡಾ ಸಂಸ್ಥೆ ಗಂಗಾವತಿ ಹಾಗೂ ನಿರ್ದೇಶಕರಾದ ಶ್ರೀ ಜಗನ್ನಾಥ ಅಲಂಪಲ್ಲಿ, ಕುಟುಂಬ ವರ್ಗ ಮತ್ತು ಸ್ನೇಹಿತರು ಸೇರಿದಂತೆ ಎಲ್ಲಾ ಯೋಗ ಬಂಧುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಏಪ್ರಿಲ್-೨೦ ಭಾನುವಾರ ಕೊಪ್ಪಳದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಯಾದ ಕೆ.ಬಿ. ಶ್ರೀನಿವಾಸರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ಡಾ. ಮಹಾದೇವಸ್ವಾಮಿಗಳು ಕುಕನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವಪುತ್ರಪ್ಪ ಕಾಡನವರ್, ಕೊಪ್ಪಳ ತಾಲೂಕ ಅಧ್ಯಕ್ಷರಾದ ನಾಗಭೂಷಣ ಸಾಲಿಮಠ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಎಲ್ಲ ಮುಖಂಡರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಯುವ ಘಟಕಗಳನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ಕೊಪ್ಪಳ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಹೆಚ್.ಎಂ. ವಿರುಪಾಕ್ಷಯ್ಯಸ್ವಾಮಿ, ಉಪಾಧ್ಯಕ್ಷರುಗಳಾಗಿ ಬೆಟ್ಟಪ್ಪ ಮೂಲಿಮನಿ, ವಿನಾಯಕ ಬೆನ್ನಳ್ಳಿ, ಶೇಖರಗೌಡ ಬೂದಗುಂಪ, ಅಯ್ಯನಗೌಡ ಕನಕರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಹಾಂತೇಶ ಕುಂಬಾರ, ಕಾರ್ಯದರ್ಶಿಗಳಾಗಿ ಅವಿನಾಶ ಅರಿಕೇರಿ, ಶಿವಣ್ಣ ಮೂಲಿಮನಿ, ವಿರೇಶ ಟೆಂಗಿನಕಾಯಿ, ಲಿಂಗರಾಜ ಲಿಂಗದಳ್ಳಿ, ಕೋಶಾಧ್ಯಕ್ಷರಾಗಿ ಪಂಪನಗೌಡ ಜಂತಕಲ್, ಸದಸ್ಯರುಗಳಾಗಿ ವೀರಣ್ಣ ಮರಳಿ, ವಿನಾಯಕ ಭಾವಿಕಟ್ಟಿ, ಜಗದೀಶ ಜವಳಿ, ನವೀನಕುಮಾರ ಮಾಲಿಪಾಟೀಲ್, ಶಿವಶರಣಗೌಡ ಯರಡೋಣ, ಶರಣಯ್ಯ ಬೇವಿನಾಳ, ಪಂಪಾಪತಿ ಶಿವಲಂತರ, ವೀರನಗೌಡ ಕೊಪ್ಪಳ, ಗವಿಸಿದ್ದಪ್ಪ ಮುದುಗಲ್, ಮಹೇಶ ಭೂತೆ, ಪ್ರವೀಣ ಮತ್ತೂರು, ಆಶಿಕ್ ಕಲಬುರ್ಗಿ, ದೊಡ್ಡಬಸವ ಪವಾಡಶೆಟ್ಟರ್, ಬಸವನಗೌಡ ಎಂ. ಓಲಿ, ವಿರುಪಾಕ್ಷ ಗುಂಡೂರು, ವಿಜಯಕುಮಾರ ಹಿರೇಮಠ, ಸಂಗಯ್ಯಸ್ವಾಮಿ ಸಂಶೀಮಠ, ಮಹಾಬಲೇಶ ಕಾರಟಗಿ, ಸಂತೊಷ ಹಾದಿಮನಿ, ಬಸವರಾಜ ಗಂಗಾವತಿ ಇವರುಗಳು ಆಯ್ಕೆಯಾದರು.

ಅದೇರೀತಿ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಎಸ್. ಮ್ಯಾಗಳಮನಿ, ಉಪಾಧ್ಯಕ್ಷರುಗಳಾಗಿ ಪೂರ್ಣಿಮಾ ಶಶೀಧರಗೌಡ, ಸವಿತಾ ಗಂಗಾಧರಸ್ವಾಮಿ, ಶೀಲಾ ದೇಸಾಯಿಗೌಡ, ಶಾರದಾ ಕೆ. ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಮ್ಮ ಶರಣಬಸಪ್ಪ, ಕಾರ್ಯದರ್ಶಿಗಳಾಗಿ ಜಯಶ್ರೀ ಸಾಹುಕಾರ್, ಬಸಮ್ಮ ಶಿವಪುತ್ರಪ್ಪ, ನಂದಾ ಜಗದೀಶ, ಕಾವ್ಯ ಮಹೇಶ, ಕೋಶಾಧ್ಯಕ್ಷರಾಗಿ ವಿದ್ಯಾಲಕ್ಷ್ಮಿ ಗವಿಸಿದ್ದಪ್ಪ, ಸದಸ್ಯರುಗಳಾಗಿ ಸುಜಾತ ಅಯ್ಯನಗೌಡ, ಸರಸ್ವತಿ ವಿಶ್ವನಾಥ, ಶೈಲಾ ಸಂಗಪ್ಪ, ಬಸಮ್ಮ ಶಿವಾನಂದ, ವಿಶಾಲಾಕ್ಷಿ ಹೆಚ್.ಎಸ್.ಶಶಿಧರ, ಶಶಿಕಲಾ ಚಿನಿವಾಲರ್, ಡಿ.ವರಲಕ್ಷ್ಮಿ ಮಂಜುನಾಥ, ಲಕ್ಷ್ಮಿ ವಿರೇಶ, ನಯನ ವಿಜಯಕುಮಾರ, ಕೋಮಲಾ ಕೆ. ಕುದರಿಮೋತಿ, ಸುಮಂಗಲಾ ಮಲ್ಲಿಕಾರ್ಜುನ, ಗೀತಾಂಜಲಿ ಶರಣಯ್ಯ, ನೀಲಮ್ಮ ಶೇಖರಪ್ಪ, ಸವಿತಾ ಬಸವರಾಜ, ಅನ್ನಪೂರ್ಣ ಸಂಗಪ್ಪ, ಗೀತಾ ರಾಜಶೇಖರ, ಸುಧಾರಾಣಿ ರಮೇಶ, ಉಮಾಮಹೇಶ್ವರಿ ನಾಗೂರು, ಗೀತಾ ದೇವಣ್ಣ, ಪರಿಮಳ ಸಂಗಪ್ಪ ಇವರುಗಳು ಆಯ್ಕೆಯಾದರು.

ನೂತನವಾಗಿ ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯ ಹಾಗೂ ಜಿಲ್ಲಾ ಸಮಿತಿಗಳಿಂದ ಅಭಿನಂದಿಸಿ, ಮಹಾಸಭಾದ ಎಲ್ಲಾ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗುವ ಮೂಲಕ ಬಲಪಡಿಸಲು ಸೂಚಿಸಲಾಯಿತು.

ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ

ಗಂಗಾವತಿ: ೨೦೨೪-೨೫ನೇ ಸಾಲಿನ ಸಂಕಲ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎನ್.ಎಸ್ ವಿಶೇಷ ಶಿಬಿರದ ೬ನೇ ದಿನದ ಉಪನ್ಯಾಸ ಮಾಲಿಕೆ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಮಾತನಾಡಿ ಇಂದಿನ ಯುವ ಜನತೆ ಇಂತಹ ಶಿಬಿರಗಳ ಮೂಲಕ ಜವಾಬ್ದಾರಿಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆದರ್ಶ ಸಮಾಜ ನಿರ್ಮಾಣದಲ್ಲಿ ತೊಡಗಲು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರಮೇಶ ಗಾಣಿಗೇರ್‌ರವರು ಮಾತನಾಡಿ, ಮಹಿಳಾ ಕಾನೂನಿಗೆ ಸಂಬಂಧಿಸಿದ ವಿಷಯಗಳ ಅಗತ್ಯ ಹಾಗೂ ಅನಿವಾರ್ಯತೆಗಳನ್ನು ತಿಳಿಸುತ್ತಾ, ಮಹಿಳೆಯರು ಸಬಲರಾಗಬೇಕು, ಆಧುನಿಕ ಜಗತ್ತಿನ ಈ ಯುಗದಲ್ಲಿ ಎಲ್ಲ ರಂಗದಲ್ಲಿ ಮುಂದುವರೆಯಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಪಾಟೀಲ್ ರವರು ಶಿಬಿರಾರ್ಥಿಗಳು ಪರಿಸರ ಜಾಗೃತಿ ಸಮಾಜಕ್ಕೆ ಮೌಲ್ಯಗಳ ಅಳವಡಿಕೆಯ ಕಡೆ ಗಮನಹರಿಸಲು ಕರೆ ನೀಡಿದರು.

ಯುವತಿಯರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳುವ ಮೂಲಕ ಸ್ವಾಭಿಮಾನಿಗಳಾಗಿ ಬದುಕಬೇಕೆಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮೇಘ ಸೋಮಣ್ಣನವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಸಂಸ್ಥೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಗುತ್ತೇದಾರ್‌ರವರು, ಶಿಬಿರದಲ್ಲಿ ಶಿಬಿರಾರ್ಥಿಗಳು ಮಾಡಿದ ವಿವಿಧ ಕಾರ್ಯಕ್ರಮಗಳ ಕುರಿತು ಶ್ಲಾಘಿಸಿದರು ಹಾಗೂ ಮನುಷ್ಯನ ಜೀವನದ ಎಲ್ಲಾ ಹಂತಗಳಲ್ಲಿ ಕಾನೂನು ನಮ್ಮ ನೆರವಿಗೆ ಬರುತ್ತಿದ್ದು, ಮನುಷ್ಯ ಜೀವನ ಪರ್ಯಂತ ಕಾನೂನಿನ ನೆರವಿನೊಂದಿಗೆ ಬದುಕು ಸಾಗಿಸಬೇಕು. ಕಾನೂನಿನ ಪಾಲನೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.

ಸಮಾಜದ ಪರಿವರ್ತನೆಯಲ್ಲಿ ಇಂತಹ ಶಿಬಿರಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ವಿಶೇಷ ಉಪನ್ಯಾಸ ನೀಡಿದ ಪ್ರಕಾಶ್ ಎಂ. ಕುಸುಬಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಶರಣಪ್ಪ ನಾಯ್ಕ್, ಪ್ರಾಚಾರ್ಯರಾದ ಬಸವರಾಜ್ ಶಿರಿಗೇರಿ, ಕಾರ್ಯಕ್ರಮಾಧಿಕಾರಿಗಳು, ಶಿಬಿರಾರ್ಥಿಗಳು ಉಪನ್ಯಾಸಕರು ಹಾಜರಿದ್ದರು.