ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ದೇವರಾಜ ಬೂದುಗುಂಪ ನೇಮಕ

ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುಂಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಮಾರ್ಚ್-೩ ಸೋಮವಾರ ಗಂಗಾವತಿ ನಗರದ ಸರ್ಕೀಟ್ ಹೌಸ್‌ನಲ್ಲಿ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬೂದುಗುಂಪ ಅವರನ್ನು ನೇಮಕ ಮಾಡಲಾಯಿತು. ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿಯವರು ನೇಮಕಾತಿ ಆದೇಶ ಪತ್ರ ನೀಡಿ, ಕಾರಟಗಿ ತಾಲ್ಲೂಕ ಕೇಂದ್ರದಾಧ್ಯಂತ ಪ್ರವಾಸ ಮಾಡಿ ಅಥವಾ ಪತ್ರಿಕಾ ಪ್ರಕಟಣೆಯ ಮೂಲಕ ಸಂಘಟನೆ ಬಲಪಡಿಸಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Read More
ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೇ ವಾರ್ಷಿಕೋತ್ಸವದ ಸಂಭ್ರಮ, ಪ್ರಭಾವಳಿ ಸಮರ್ಪಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಶಿರಡಿ ನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ 25ನೆಯ ವಾರ್ಷಿಕೋತ್ಸವ ಇದೇ ಮಾರ್ಚ್ 5 ಬುಧವಾರ ರಂದು ಜರುಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಟಿ ರಾಮಕೃಷ್ಣ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ಎಸ್ ಸುರೇಶ್, ಯು ಚೆನ್ನಪ್ಪ, ರಾಚೋಟಯ್ಯ ಭಗವತಿ, ಗುರುರಾಜ್, ಪ್ರಹ್ಲಾದ, ರಾಮಚಂದ್ರ ಶೆಟ್ಟಿ, ಎಂ ರಾಮಾಂಜನೇಯ, ಕನಕಮೂರ್ತಿ, ಗಾಳಿ ಶಿವಪ್ಪ, ಡಾ|| ಎ.ಎಸ್.ಎನ್ ರಾಜು  ಹಾಗೂ ಕಿರಣ್ ಕುಮಾರ್ ಹೇಳಿದರು. ಅವರು…

Read More
ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಗಂಗಾವತಿ: ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಶೃಂಗೇರಿಯ ಶ್ರೀ ಶಾರದಾ ಪೀಠ 36ನೆಯ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ 50ನೇ ವರ್ಷದ ಸನ್ಯಾಸತ್ವ ಪ್ರಯುಕ್ತ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಡಿಯಲ್ಲಿ ಶ್ರೀಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರು ಮಾರ್ಚ್-7 ರಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀ ಶಂಕರ ಸೇವಾ ಸಮಿತಿ ಕೋಟೆ ಕೊಪ್ಪಳ ಅಧ್ಯಕ್ಷರಾದ ಕೃಷ್ಣ ಪದಕಿ. ವೆಂಕಟೇಶ್ ಪದಕಿ. ಶ್ರೀನಿವಾಸ್ ಹಾಗೂ ಡಿವಿ ಜೋಶಿ ಕೊಪ್ಪಳ ಅವರು ಹೇಳಿದರು. ಅವರು ಗಂಗಾವತಿಯ…

Read More
ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ: ಇತ್ತೀಚೆಗೆ ಫೆಬ್ರವರಿ-೨೧ ರಂದು ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬವನ್ನು ತಾಲೂಕಿನ ಆಚಾರ ನರಸಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು ಎಂದು ಮರಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ಕೆ.ಎಂ ರವರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಈ ಕಲಿಕಾ ಹಬ್ಬದಲ್ಲಿ ಶಿಕ್ಷಣ ಪ್ರೇಮಿ ನಾಗರಾಜ ಬರಗೂರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರಟಗಿ ವಲಯದ…

Read More
ಗಂಗಾವತಿಯ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ವಿನೂತನ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ

ಗಂಗಾವತಿಯ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ವಿನೂತನ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ

ಗಂಗಾವತಿ: ಫೆಬ್ರವರಿ-೨೮ ಶುಕ್ರವಾರದಂದು ಜಯನಗರದಲ್ಲಿರುವ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ ಕಾರ್ಯಕ್ರಮ ಎಂದರೆ ವಿದ್ಯಾರ್ಥಿಗಳು ಒಂದು ದಿನದ ಶಿಕ್ಷಕರಾಗುತ್ತಾರೆ ಮತ್ತು ಅವರು ತಮ್ಮ ಆಯ್ಕೆಯ ವಿಷಯದ ಬಗ್ಗೆ ಒಂದು ಪರಿಕಲ್ಪನೆಯನ್ನು ವಿವರಿಸುತ್ತಾರೆ ಅಥವಾ ಸಣ್ಣ ಪ್ರಾತ್ಯಕ್ಷಿಕೆಯನ್ನು ನೀಡುತ್ತಾರೆ. ಭಾಗವಹಿಸುವಾಗ ವಿದ್ಯಾರ್ಥಿಗಳು ಒಂದು ಪರಿಕಲ್ಪನೆಯನ್ನು ಉತ್ತಮವಾಗಿ ಕಲಿಯಲು ಪ್ರೇರೇಪಿಸಲ್ಪಡುತ್ತಾರೆ. ಪ್ರೇಕ್ಷಕರ ಮುಂದೆ ನಿರಾಳವಾಗಿರುವುದು ಕಷ್ಟ. ಅದಕ್ಕಾಗಿಯೇ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಅವರಿಗೆ ಸವಾಲು ಹಾಕುವ ಮೂಲಕ ಅವರ ಸಂವಹನ ಮತ್ತು ಪ್ರಸ್ತುತಿ ಕೌಶಲ್ಯಗಳನ್ನು…

Read More
ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಮಾರ್ಚ್-೨ ರಂದು ಸದ್ಧರ್ಮ ಶ್ರೀಗುರುಕುಲದ ದಶಮಾನೋತ್ಸವದಲ್ಲಿ ಆರು ಜನ ಸಾಧಕರಿಗೆ “ಸದ್ಧರ್ಮ ಶ್ರೀ ಪ್ರಶಸ್ತಿ” ಘೋಷಣೆ

ಗಂಗಾವತಿ: ತಾಲೂಕಿನ ಗಡ್ಡಿ ಗ್ರಾಮದ ಸದ್ಧರ್ಮ ಶ್ರೀ ಗುರುಕುಲದ ದಶಮಾನೋತ್ಸವ ಇದೇ ಮಾರ್ಚ್-೨ ಭಾನುವಾರ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಅಜಾತ ಅಪ್ಪಾಜಿಯವರ ಪವಿತ್ರ ಪುಣ್ಯಾಶ್ರಮದಡಿಯಲ್ಲಿ ಸದ್ಧರ್ಮ ಶ್ರೀ ಗುರುಕುಲದಿಂದ ನೀಡಲಾಗುವ ವಾರ್ಷಿಕ ಸದ್ಧರ್ಮ ಶ್ರೀ ಪ್ರಶಸ್ತಿಯನ್ನು ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಜನ ಸಾಧಕರಿಗೆ ಘೋಷಿಸಲಾಗಿದ್ದು, ಪ್ರಶಸ್ತಿಯನ್ನು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಪ್ರಧಾನ ಮಾಡಲಿದ್ದಾರೆ ಎಂದು ಶ್ರೀಮಠದ ಪರಮಪೂಜ್ಯ ಸಂಗಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇತಿಹಾಸ ಹಾಗೂ ಗಂಗಾವತಿ…

Read More
ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ದಾಸನಾಳ ಗ್ರಾಮದ ಕಾಟಮೇಶ್ವರ ದೇವರ ೧೬ನೇ ವರ್ಷದ ಜಾತ್ರಾ ಮಹೋತ್ಸವ, ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳು

ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದ ಕಾಟಮೇಶ್ವರ ದೇವರ 16ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪೂಜ್ಯ ಶ್ರೀ ರೇಣುಕಾನಂದ ಮಹಾಸ್ವಾಮಿಗಳ ೧೪ನೇ ವರ್ಷದ ತುಲಾಭಾರ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥರವರು ಯಾವುದೇ ಸಮುದಾಯದ ಅಭಿವೃದ್ಧಿಗೆ, ಪ್ರಗತಿಗೆ, ಅವರ ಕುಲದೇವರ ಅನುಗ್ರಹ ತುಂಬಾ ಅವಶ್ಯವಾಗಿದೆ. ಅದರಂತೆ ಕುಲ ಗುರುಗಳ ಮಾರ್ಗದರ್ಶನ, ಅವರ ಆಶೀರ್ವಾದವಿದ್ದಲ್ಲಿ ಸಮಾಜವು ಪ್ರಗತಿಯ ಕಡೆಗೆ ಸಾಗಲು ಸಾಧ್ಯ ಎಂದರು. ಸಮಾಜದ ಎಲ್ಲ ಬಂಧುಗಳು…

Read More
ಹಂಪಿ ಉತ್ಸವದ ‘ಧ್ವನಿ ಮತ್ತು ಬೆಳಕು’ ಪ್ರದರ್ಶನಕ್ಕೆ ಗಂಗಾವತಿಯ ಎನ್.ಆರ್.ರಾಯಬಾಗಿ ಆಯ್ಕೆ

ಹಂಪಿ ಉತ್ಸವದ ‘ಧ್ವನಿ ಮತ್ತು ಬೆಳಕು’ ಪ್ರದರ್ಶನಕ್ಕೆ ಗಂಗಾವತಿಯ ಎನ್.ಆರ್.ರಾಯಬಾಗಿ ಆಯ್ಕೆ

ಗಂಗಾವತಿ: ವಿಶ್ವವಿಖ್ಯಾತ ಹಂಪಿಯಲ್ಲಿ ಫೆ. ೨೮ ಶುಕ್ರವಾರ ಆರಂಭಗೊಳ್ಳುವ ಹಂಪಿ ಉತ್ಸವದ ‘ವಿಜಯನಗರ ವೈಭವ’ ಧ್ವನಿ ಮತ್ತು ಬೆಳಕು ಪ್ರದರ್ಶನಕ್ಕೆ ನಗರದ ಕಲಾವಿದ ಜೂನಿಯರ್ ರಾಜಕುಮಾರ ಎನ್.ಆರ್. ರಾಯಬಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ರ‍್ಕಾರದ ಮಾಹಿತಿ, ಪ್ರಸಾರ ಹಾಗೂ ಸಂಪರ್ಕ ಕೇಂದ್ರ (ಗಾಯನ ಮತ್ತು ನಾಟಕ ವಿಭಾಗ), ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತ ನೇತೃತ್ವದಲ್ಲಿ ಧ್ವನಿ ಮತ್ತು ಬೆಳಕು ಪ್ರರ‍್ಶನ ಫೆ.೨೮ ರಿಂದ ಆರಂಭಗೊಂಡು ಮಾ.೭ ರವರಗೆ ನಡೆಯಲಿದೆ. ಕಲಾವಿದ ನಾರಾಯಣ ರಾಯಬಾಗಿಯು ಸತತ…

Read More
ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಮಹಾಶಿವರಾತ್ರಿ ಪ್ರಯುಕ್ತ ಗಂಗಾವತಿಯ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಗಂಗಾವತಿ: ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಗಳು ಸಾಂಗತವಾಗಿ ಜರುಗಿದವು ಎಂದು ವಿಶ್ವಕರ್ಮ ಸಮಾಜದ ಗಂಗಾವತಿ ತಾಲೂಕ ಅಧ್ಯಕ್ಷರಾದ ಕಾಳೇಶ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಸಂಜೆ ೬ಕ್ಕೆ ಶಿವಸ್ವರೂಪರಾದ ಶ್ರೀಗುರು ಮೌನೇಶ್ವರರಿಗೆ ಪೂಜೆ, ಅಭಿಷೇಕ ನೆರವೇರಿಸಲಾಯಿತು. ನಂತರದಲ್ಲಿ ಭಕ್ತಿಸಂಗೀತ ಕಾರ್ಯಕ್ರಮಕ್ಕೆ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲಿಯವರು ಚಾಲನೆ ನೀಡಿದರು. ಭಕ್ತಿ ಸಂಗೀತ ಕಾರ್ಯಕ್ರಮವನ್ನು ಸ್ಥಳೀಯ ಸಂಗೀತ ಕಲಾವಿದರಾದ ಕನಕಪ್ಪ ಚಿತ್ರಗಾರ, ಗಂಗಾಧರಯ್ಯ, ವೆಂಕಟೇಶ ದಾಸನಾಳ, ಕಾಶೀಂ…

Read More
ಮಾರ್ಚ್-05‌ ರಂದು ಗಂಗಾವತಿಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವ

ಮಾರ್ಚ್-05‌ ರಂದು ಗಂಗಾವತಿಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವ

ಗಂಗಾವತಿ: ನಗರದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವವು ಮಾರ್ಚ್-೦೫ ಬುಧವಾರದಂದು ನಡೆಯಲಿದೆ ಎಂದು ಶ್ರೀ ಶಿರಿಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷರಾದ ರಾಮಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ೨೫ನೇ ವಾರ್ಷಿಕೋತ್ಸವದ ನಿಮಿತ್ಯವಾಗಿ ಅಂದು ಭಕ್ತಾದಿಗಳಿಗೆ ಲೋಕಕಲ್ಯಾಣಾರ್ಥವಾಗಿ ಭಕ್ತ ಜನರಿಗೆ ಭೋಗ ಭಾಗ್ಯ ಆಯುರಾರೋಗ್ಯ ಅಷ್ಟೈಶ್ವರ್ಯ ಪ್ರಾಪ್ತಿಗಾಗಿ ನವಗ್ರಹ ಪರಿಹಾರಕ್ಕಾಗಿ ಅನೇಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದು ಬೆಳಿಗ್ಗೆ ೫:೧೫ಕ್ಕೆ ಕಾಕಡ ಆರತಿ, ನಂತರ ಶ್ರೀಸಾಯಿಬಾಬಾ ಅವರಿಗೆ ಪಂಚಾಮೃತ ಅಭಿಷೇಕ ಪೂಜಾದಿಗಳು ನಂತರ…

Read More