ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ : ಭಾರಧ್ವಾಜ್

ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಮಾನತೆ ತತ್ವಗಳ ಕುರಿತು ತಿಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಇಂಕಿಲಾಬಿ ಫಯಾಜ್ ಸರಾಜಿದಾರ, ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ…

Read More
ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

ಗಂಗಾವತಿ. ನಗರದ ತಹಶೀಲ್ ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು ಉಪ ತಹಶೀಲ್ದಾರ್ ಮಹಾಂತೇಶ್ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ. ಆಚರಣೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಮಹಾಂತೇಶ್ ಗೌಡ ಮಾಹಿತಿ ನೀಡಿದರು. ಬಳಿಕ ಶಂಕರ ಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಮಾತನಾಡಿ ಕೇಂದ್ರ ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯರ ಜಯಂತೋತ್ಸವವನ್ನು ತತ್ವಜ್ಞಾನಿಗಳ (ವಿಶ್ವ ದಾರ್ಶನಿಕರ) ದಿನಾಚರಣೆಯನ್ನು ಮೇ-2 ಶುಕ್ರವಾರದಂದು ದೇಶಾದ್ಯಂತ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಆಚರಿಸಲು ತಹಶೀಲ್ದಾರರು ಆದೇಶ ನೀಡಬೇಕು….

Read More
ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ

ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಗಡ್ಡಿ-ಉಡುಮಕಲ್ ಗ್ರಾಮದಲ್ಲಿ ಊಟಕನೂರು ಪರಮಪೂಜ್ಯ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಸ್ಥಾಪಿತವಾದ ಶಾಖಾಮಠದ ೨೯ನೇ ಜಾತ್ರಾ ಮಹೋತ್ಸವ ಇದೇ ಏಪ್ರಿಲ್-೩೦ ಬುಧವಾರ ನಡೆಯಲಿದೆ. ಏಪ್ರಿಲ್-೨೯ ಮಂಗಳವಾರ ಆಹ್ವಾನಿತರ ಭಜನಾ ಸಂಘದವರಿಂದ ಡೊಳ್ಳು ವಾದ್ಯಗಳೊಂದಿಗೆ ಅದ್ದೂರಿ ಸ್ವಾಗತ, ಏಪ್ರಿಲ್-೩೦ ಬುಧವಾರ ಬೆಳಗ್ಗೆ ೩:೦೦ ಗಂಟೆಗೆ ತಾತನವರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಬೆಳಗ್ಗೆ ೬:೦೦ ಗಂಟೆಗೆ ಸುಮಂಗಲೆಯರಿಂದ ಕಳಶದೊಂದಿಗೆ ಡೊಳ್ಳಿನ ಸಂಗಡ ಗಂಗೆಸ್ಥಳಕ್ಕೆ ಹೋಗಿ ಬರುವುದು, ನಂತರ ಗಣಾರಾಧನೆ ನಡೆಯುವುದು, ನಂತರ ಸಾಮೂಹಿಕ ವಿವಾಹಗಳು ಹಾಗೂ ಮಹಾಪ್ರಸಾದ…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ: ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿ ನೋಂದಣಿಗೆ ಸಲ್ಲಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂಘವು ಕ್ರಾಂತಿಚಕ್ರ ಬಳಗದ ಅಡಿಯಲ್ಲಿ ನೋಂದಣಿಯಾಗಲಿದ್ದು, ಸಂಘಕ್ಕೆ ನಿವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶೇಖರಗೌಡ ಮಾಲಿಪಾಟೀಲ್‌ರವರು ಗೌರವ ಸಲಹೆಗಾರರಾಗಿ ಸಲಹೆ ನೀಡಲಿದ್ದು, ಅಧ್ಯಕ್ಷರಾಗಿ ಇಬ್ರಾಹಿಂ ಮೇಸ್ತ್ರಿ,…

Read More
ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕ ಎನ್. ಭಾನುಪ್ರಸಾದ ಆಯ್ಕೆ.

ಗಂಗಾವತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಶೈಕ್ಷಣಿಕ ವಿಭಾಗವಾದ ನೇತಾಜಿ ಸುಭಾಷ್ ರಾಷ್ಟ್ರೀಯ ಕ್ರೀಡಾ ಸಂಸ್ಥೆಯು ನಡೆಸುತ್ತಿರುವ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗಾರರ ತರಬೇತಿಗೆ ಗಂಗಾವತಿಯ ಯೋಗ ಶಿಕ್ಷಕರಾದ ಎನ್. ಭಾನುಪ್ರಸಾದ್ ರವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಈ ಯೋಗ ತರಬೇತಿಯು ಪಂಜಾಬ್‌ನ ಪಟಿಯಾಲದಲ್ಲಿ ಮುಂದಿನ ತಿಂಗಳು ಮೇ-೬ ರಿಂದ ಆರು ವಾರಗಳ ಕಾಲ ನಡೆಯಲಿದೆ. ಈ ಯೋಗ ತರಬೇತಿಗೆ ಆಯ್ಕೆಯಾದ ಎನ್. ಭಾನುಪ್ರಸಾದ ಅವರಿಗೆ ಪ್ರಜ್ವಲ ಯೋಗ ಕೇಂದ್ರ, ಸ್ನೇಹ ಬಳಗ ಯೋಗ ಸಂಸ್ಥೆ ಹಾಗೂ ಪ್ರಗತಿ ಕ್ರೀಡಾ…

Read More
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು. ಅವರು ಏಪ್ರಿಲ್-೨೦ ಭಾನುವಾರ ಕೊಪ್ಪಳದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಯಾದ ಕೆ.ಬಿ. ಶ್ರೀನಿವಾಸರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ಡಾ. ಮಹಾದೇವಸ್ವಾಮಿಗಳು ಕುಕನೂರು, ಜಿಲ್ಲಾ…

Read More
ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ

ಯುವ ಜನತೆ ಕಾನೂನು ಪಾಲನೆಯ ಮೂಲಕ ಆದರ್ಶ ಪ್ರಜೆಗಳಾಗಲು ಕರೆ: ಸದಾನಂದ ನಾಯಕ

ಗಂಗಾವತಿ: ೨೦೨೪-೨೫ನೇ ಸಾಲಿನ ಸಂಕಲ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.ಎನ್.ಎಸ್ ವಿಶೇಷ ಶಿಬಿರದ ೬ನೇ ದಿನದ ಉಪನ್ಯಾಸ ಮಾಲಿಕೆ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಮಾತನಾಡಿ ಇಂದಿನ ಯುವ ಜನತೆ ಇಂತಹ ಶಿಬಿರಗಳ ಮೂಲಕ ಜವಾಬ್ದಾರಿಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆದರ್ಶ ಸಮಾಜ ನಿರ್ಮಾಣದಲ್ಲಿ ತೊಡಗಲು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರಮೇಶ ಗಾಣಿಗೇರ್‌ರವರು ಮಾತನಾಡಿ, ಮಹಿಳಾ ಕಾನೂನಿಗೆ ಸಂಬಂಧಿಸಿದ ವಿಷಯಗಳ ಅಗತ್ಯ…

Read More
ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ  ನೂತನ ಗಂಗಾವತಿ ತಾಲೂಕು ಸಮಿತಿ ರಚನೆ

ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘದ ನೂತನ ಗಂಗಾವತಿ ತಾಲೂಕು ಸಮಿತಿ ರಚನೆ

ಗಂಗಾವತಿ: ಏಪ್ರಿಲ್-೧೭ ಗುರುವಾರ ಗಂಗಾವತಿ ನಗರದ ಬಸ್‌ ಸ್ಟ್ಯಾಂಡ್‌ ಹತ್ತಿರ ಇರುವ ತುಳಸಪ್ಪ ಛತ್ರದ ಬಯಲಲ್ಲಿ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘಟನೆಯ ಸಭೆ ಸೇರಿ ನೂತನ ಗಂಗಾವತಿ ತಾಲೂಕು ಸಮಿತಿಯನ್ನು ರಚಿಸಲಾಯಿತು ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘದ ನೂತನ ತಾಲೂಕ ಗೌರವ ಅಧ್ಯಕ್ಷರಾಗಿ ಡಬ್‌ಡಬ್ ಹನುಮಂತಪ್ಪ, ಅಧ್ಯಕ್ಷರಾಗಿ ಮಾಯಮ್ಮ, ಉಪಾಧ್ಯಕ್ಷರಾಗಿ ಪಾರ್ವತಮ್ಮ, ಕಾರ್ಯದರ್ಶಿಯಾಗಿ ರಮೇಶ ಕೆ., ಖಜಾಂಚಿಯಾಗಿ ಗಾಲಿ ಹುಲಿಗೆಮ್ಮ, ಸಹ ಖಜಾಂಚಿಯಾಗಿ ಬಂಕದ ಹುಲಿಗೆಮ್ಮ, ಅದೇರೀತಿ ತಾಲ್ಲೂಕು ಸಮಿತಿ…

Read More
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶ್ರೀ ಶಿವರಾಜ ತಂಗಡಗಿಯವರು ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿದ್ದಾರೆ. ಇವರಿಗೆ ಶ್ರೀರಾಮನಗರದಲ್ಲಿ ಏಪ್ರಿಲ್-೧೫ ಮಂಗಳವಾರ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.

Read More
ರಾಂಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಹಾಗೂ  ಡಾ. ಬಾಬು ಜಗಜೀವನರಾಮ್‌ರವರ ೧೧೮ನೇ ಜನ್ಮದಿನಾಚರಣೆ ಸಮಾರಂಭ ಅದ್ಧೂರಿ ಆಚರಣೆ.

ರಾಂಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಹಾಗೂ ಡಾ. ಬಾಬು ಜಗಜೀವನರಾಮ್‌ರವರ ೧೧೮ನೇ ಜನ್ಮದಿನಾಚರಣೆ ಸಮಾರಂಭ ಅದ್ಧೂರಿ ಆಚರಣೆ.

ಗಂಗಾವತಿ: ತಾಲೂಕಿನ ರಾಂಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೪ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನರಾಮ್ ರವರ ೧೧೮ನೇ ಜನ್ಮ ದಿನಾಚರಣೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಗ್ರಾ.ಪಂ ಸದಸ್ಯರಾದ ಗೋವಿಂದಪ್ಪ ವಹಿಸಿದ್ದರು. ಗೌರವಾಧ್ಯಕ್ಷರಾಗಿ ರಾಂಪುರ ಗ್ರಾಮದ ಹನುಮಂತಪ್ಪ ಪಂಚಾಯಿತಿ ಆಗಮಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಇರಕಲ್‌ಗಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾದ ಡಾ. ಶಿವರಾಜ್ ನೆರವೇರಿಸಿ ಮುಖ್ಯ ಭಾಷಣಕಾರರಾಗಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ…

Read More