ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕುವೆಂಪು ಶತಮಾನೋತ್ಸವ ಮಾದರಿಯ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೌಲಪೇಟೆ ಮತ್ತು ಸರ್ಕಾರಿ ಪ್ರೌಢಶಾಲೆ ಕಿನ್ನಾಳ ಮೂರು ಶಾಲೆಗಳಲ್ಲಿ ಕಲಿತ 2005 ಮತ್ತು 2006ನೇ ಸಾಲಿನ ನೇ ಎಸ್.ಎಸ್.ಎಲ್.ಸಿ ಬ್ಯಾಚಿನ ವಿದ್ಯಾರ್ಥಿಗಳ ವತಿಯಿಂದ ನಡೆದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 20 ವರ್ಷಗಳ ಹಿಂದೆ ಕಿನ್ನಾಳ ಗ್ರಾಮದ ಈ ಮೂರು ಶಾಲೆಗಳಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ‘ಗುರುವಂದನಾ’ ಮತ್ತು ‘ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಹಮ್ಮಿಕೊಂಡು, ಅಂದಿನ ಬಾಲ್ಯದ ದಿನದ ನೆನಪುಗಳನ್ನು ಮಾಡಿಕೊಂಡರು.

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಶರಣಪ್ಪ ಎ. ಜಿ. ನಿವೃತ್ತ ಪ್ರಾಚಾರ್ಯರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡಬೇಕು, ಅಂದಾಗ ಮಾತ್ರ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಜ್ಞಾನ ಮತ್ತು ಗುರು ಪರಂಪರೆಯನ್ನು ವಿದ್ಯಾರ್ಥಿಗಳಾದವರು ಸದಾ ಸ್ಮರಿಸಬೇಕೆಂದು ಅವರು ನುಡಿದರು. ಮುಂದುವರೆದು ಮಾತನಾಡಿದ ಅವರು, ಇಂತಹ ಸಂಸ್ಕಾರವುಳ್ಳ ವಿದ್ಯಾರ್ಥಿಗಳ ಬಳಗವು ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮೂರು ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದು, ತಮ್ಮ ವಿದ್ಯಾರ್ಥಿಗಳಿಂದ ಗೌರವನ್ನು ಸ್ವೀಕರಿಸಿದರು.

ನಂತರ ನಾಗರಾಜ ಸಿರಿಗೇರಿ, ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ನಮಶ್ರೀ, ಮಾರುತಿ ಹಂಚಿನಾಳ, ವೀರೇಶ್, ಗಾದಿನಿಂಗಜ್ಜ, ರಫಿ, ಶ್ರೀಕಾಂತ, ಮಂಜುಳಾ ಮೊದಲಾದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಪ್ರಸ್ತಾವಿಕವಾಗಿ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ, ಅಂತರಾಷ್ಟ್ರೀಯ ಜಾನಪದ ಕಲಾವಿದ ಮೆಹಬೂಬ್ ಕಿಲ್ಲೇದಾರ್ ಮಾತನಾಡಿದರು.

ಶ್ರೀಮತಿ ಶೃತಿ ಮೇಣೆದಾಳ ಹಾಗೂ ತಂಡದವರು ಪ್ರಾರ್ಥನೆ ಮಾಡಿದರು. ವೇದಿಕೆಯ ಮೇಲಿರುವ ಅತಿಥಿಗಳಿಗೆ ಶ್ರೀಮತಿ ಸಾವಿತ್ರಿ ಶಿಕ್ಷಕಿಯರು ಸ್ವಾಗತಿಸಿದರೆ, ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಶಂಕರ್ ದೇವಿ ,ನಾಗರಾಜ ಶೆಲ್ಲೆದ ಹಾಗೂ ಶ್ರೀಮತಿ ಆಶಾ ಅವರು ನಿರೂಪಿಸಿದರು.

ಕೊನೆಯಲ್ಲಿ ವಂದನಾರ್ಪಣೆಯನ್ನು ಶ್ರೀಮತಿ ಗಿರಿಜಾ ಉಪನ್ಯಾಸಕಿಯವರು ಅರ್ಪಿಸಿದರು.

ಗಂಗಾವತಿ ನಗರಸಭೆಯ ಪೌರಕಾರ್ಮಿಕಳಾದ ಮಾಯಮ್ಮ ಅವರು ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಭಾಜನರಾಗಿರುವುದು ಸ್ವಾಗತಾರ್ಹ

ಗಂಗಾವತಿ: ರಾಜ್ಯ ಸರ್ಕಾರ ನೀಡಲ್ಪಡುವ ರಾಜ್ಯಮಟ್ಟದ ಡಾ. ಬಾಬು ಜಗಜೀವನರಾಮ್ ಪ್ರಶಸ್ತಿಗೆ ಮಾಯಮ್ಮ ಆಯ್ಕೆ.

ಮಾಯಮ್ಮ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ಪೌರಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಏಪ್ರಿಲ್-೫ ರಂದು ಶನಿವಾರ ವಿಧಾನಸೌಧದಲ್ಲಿ ಸರ್ಕಾರದಿಂದ ಪ್ರಶಸ್ತಿ ಪಡೆದಿರುತ್ತಾರೆ.

ಇದಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯ ಅಧ್ಯಕ್ಷರಾದ ಭಾರಧ್ವಾಜ್ ಹರ್ಷ ವ್ಯಕ್ತಪಡಿಸಿದರು.

ಪ್ರಶಸ್ತಿಗೆ ಭಾಜನರಾದ ಮಾಯಮ್ಮ ಅವರನ್ನು ಇಂದು ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕ್ರಾಂತಿಚಕ್ರ ಬಳಗದವತಿಯಿಂದ ಗೌರವಯುತವಾಗಿ ಅಭಿನಂದನೆ ಸಲ್ಲಿಸಲಾಯಿತು.

ಒಂದೇ ದಿನ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ಗಂಗಾವತಿ: ನಗರದ ೩೨ನೇ ವಾರ್ಡಿನ “ಗಾಳೆಮ್ಮ ಕ್ಯಾಂಪ್” ಮತ್ತು “ಮುಡ್ಡಾಣೇಶ್ವರ ಕ್ಯಾಂಪ್” ಹಿರೇಜಂತಕಲ್ಲಿನ ಎರಡು ಅಂಗನವಾಡಿ ಕೇಂದ್ರಗಳು ಸುಮಾರು ೧೫ ವರ್ಷಗಳ ಕಾಲ ಬಾಡಿಗೆ ಕೇಂದ್ರಗಳಲ್ಲಿ ಇದ್ದವು. ಈ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಿ ಶ್ರೀಮತಿ “ಹುಲಿಗೆಮ್ಮ ಕಿರಿಕಿರಿ” ನಗರಸಭೆ ಸದಸ್ಯರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ಆರ್ ರವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಹುಲಿಗೆಮ್ಮ ಕಿರಿಕಿರಿ ರವರು ಮಾತನಾಡಿ ಅಂಗನವಾಡಿ ಕೇಂದ್ರ ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಮತ್ತು ವಾರ್ಡಿನ ಸಾರ್ವಜನಿಕರು ಅಂಗನವಾಡಿ ಕೇಂದ್ರಕ್ಕೆ ತಮ್ಮ ಮಕ್ಕಳನ್ನು ಕಳಿಸಬೇಕು. ಹಾಗೆ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನುಡಿಯಂತೆ ಮಕ್ಕಳನ್ನು ಚೆನ್ನಾಗಿ ಬೆಳೆಸಬೇಕು, ಮೊದಲ ಶಿಕ್ಷಣವೇ ಅಂಗನವಾಡಿ, ಇಲ್ಲಿನ ಶಿಕ್ಷಕರು ಮಕ್ಕಳಿಗೆ ಚೆನ್ನಾಗಿ ವಿದ್ಯಾಭ್ಯಾಸವನ್ನು ಹೇಳಿಕೊಡಬೇಕು ಅಂದಾಗ ಮಾತ್ರ ಅಂಗನವಾಡಿ ಸ್ಥಾಪಿಸಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ತಾಲೂಕ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರಾದ ಪರಶುರಾಮ ಕಿರಿಕಿರಿ ಮಾತನಾಡಿ ಮಾಜಿ ಸಚಿವ ಸನ್ಮಾನ್ಯ ಶ್ರೀ ಇಕ್ಬಾಲ್ ಅನ್ಸಾರಿ ಅವರು ನಮಗೆ ನಗರಸಭೆ ಸದಸ್ಯರು ಆದ ಮೇಲೆ ವಾರ್ಡಿನ ಜನರ ಮೂಲಭೂತ ಸೌಕರ್ಯಗಳನ್ನು ಈಡೇರಿಸಬೇಕು ಅಂದಾಗ ನಗರಸಭೆ ಸದಸ್ಯರು ಆಗಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ತಿಳಿ ಹೇಳಿದ್ದರು. ಇಂದು ಅವರ ಆಸೆಯಂತೆ ನಮ್ಮ ವಾರ್ಡಿನ ಮೂಲಭೂತ ಸೌಕರ್ಯಗಳನ್ನು ವಾರ್ಡಿನ ಜನರಿಗೆ ಕೊಡಲು ಯಶಸ್ವಿಯಾಗಿದ್ದೇವೆ ಎಂದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಪ್ರಸನ್ನ ಕಲ್ಮನಿ ಅವರು ಮಾತನಾಡಿ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಅವರು ಬಹಳ ಆಸಕ್ತಿವಹಿಸಿ ಶ್ರಮಪಟ್ಟು ಅಂಗನವಾಡಿ ಕೇಂದ್ರಕ್ಕೆ ಜಾಗವನ್ನು ಗುರುತಿಸಿ ನಗರಸಭೆ ಪೌರಯುಕ್ತರ ವತಿಯಿಂದ ಚೆಕ್‌ಬಂದಿ ಹಾಕಿಸಿ ನಮ್ಮ ಇಲಾಖೆಗೆ ತಂದು ಇಲಾಖೆಗೆ ಅಗಾಗೆ ಭೇಟಿ ನೀಡಿ ಅಂಗನವಾಡಿ ಕಟ್ಟಿಸಿಕೊಡಿ ಎಂದು ವಿನಂತಿಸಿಕೊಂಡರು. ಅದರಂತೆ ಸಿ.ಡಿ.ಪಿ.ಓ ರವರು ಅವರ ಪ್ರಸ್ತಾವನೆಯನ್ನು ಕಳುಹಿಸಿ ಒಂದೇ ವಾರ್ಡಿನಲ್ಲಿ ಎರಡು ಅಂಗನವಾಡಿ ಕೇಂದ್ರ ಆಗಿರುವುದಕ್ಕೆ ಪ್ರಶಂಸನೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರಸ್ವತಿ ರವರು ಮಾತನಾಡಿ ಮುಡ್ಡಾಣೇಶ್ವರ ಕ್ಯಾಂಪ್‌ನಲ್ಲಿ ಅಂಗನವಾಡಿ ಕೇಂದ್ರ ಬಹಳ ದಿನದ ಕನಸು ಆಗಿತ್ತು. ಶ್ರೀಮತಿ ಹುಲಿಗಮ್ಮ ಕಿರಿಕಿರಿ ಅವರು ಅದನ್ನು ಇಂದು ನನಸು ಮಾಡಿದ್ದಾರೆ. ಅವರು ಬಂದಮೇಲೆ ನಮ್ಮ ವಾರ್ಡಿಗೆ ಅಂಗನವಾಡಿ ಮತ್ತು ಮಹಿಳೆಯರ ಶೌಚಾಲಯ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕರಾದ ಶ್ರೀಮತಿ ವಿದ್ಯಾವತಿ ಹಾಗೂ ಶ್ರೀಮತಿ ಶರಣಮ್ಮ ನಾಲ್ವಡ್, ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಈರಮ್ಮ ಯಾಳಗಿ, ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರು ಹಾಗೂ ವಾರ್ಡಿನ ಮುಖಂಡರಾದ ಅಲಿಸಾಬ್, ದಡ್ಡೆದಾಳು ದುರಗಪ್ಪ, ರವಿ ನಾಯಕ್, ರಫೀ, ಹೊನ್ನೂರ್, ಜಾಫರ್, ಅಸೇನ್, ಸಿದ್ದಪ್ಪ, ಮೈಬು, ಕುಬಾಂರ್ ಸಂಗಪ್ಪ, ಬಸಪ್ಪ, ಶಾರದಮ್ಮ, ಶಾಂತಮ್ಮ. ಸರಸ್ವತಿ, ಜಯಮ್ಮ, ಮಾಲನಮ್ಮ, ಅನೀಪಮ್ಮ, ಹೇಮಾವತಿ, ಹುಸೇನಮ್ಮ, ಹುಲಿಗೆಮ್ಮ, ಫಾತಿಮಾ ಹಾಗೂ ವಾರ್ಡಿನ ಗುರುಹಿರಿಯರು ಉಪಸ್ಥಿತರಿದ್ದರು.

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ.

ಗಂಗಾವತಿ: ಏಪ್ರಿಲ್-೫ ಶನಿವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಪ್ರಯುಕ್ತ ಡಾ. ಬಾಬು ಜಗಜೀವನರಾಮ್‌ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ, ಅವರ ಸಾಧನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಇಬ್ರಾಹಿಂ ಮೇಸ್ತ್ರಿ, ಚಾಂದ್‌ಪಾಷಾ ಮುರಾಹರಿನಗರ, ಸೋಮು ಜಿ., ರಸೂಲ್, ಖಾದರಭಾಷಾ, ಇಬ್ರಾಹಿಂ ರಾಡ್‌ಬೆಂಡರ್, ಸದ್ದಾಂ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ

ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.

ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು ಸಂರಕ್ಷಿಸಿದ ಆದಿಗುರು ಶ್ರೀ ಶಂಕರಾಚಾರ್ಯರು ಪ್ರಥಮವಾಗಿ ಶೃಂಗೇರಿ ಸೇರಿದಂತೆ ದೇಶದ ಒಟ್ಟು ನಾಲ್ಕು ಮಠ ಸ್ಥಾಪಿಸುವುದರ ಮೂಲಕ ಧರ್ಮ ಜಾಗೃತಿಗಾಗಿ ಶ್ರಮಿಸುತ್ತಿದ್ದಾರೆ. ವಿಶೇಷವಾಗಿ ಶೃಂಗೇರಿ ಶಾರದಾ ಪೀಠವು ಧಾರ್ಮಿಕ ಜಾಗೃತಿಯ ಜೊತೆಗೆ ದೇಶದ ರಕ್ಷಣಾ ವ್ಯವಸ್ಥೆಗೆ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ ಎಂದು ಸಮಗ್ರ ಮಾಹಿತಿ ನೀಡಿದರು.

ಅನಿತಾ ಅಳವಂಡಿಕರ್, ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಹಾಗೂ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ವಿಜಯ ಯಾತ್ರೆ ಕುರಿತು ಮಾತನಾಡಿದರು.

ಇದಕ್ಕೂ ಪೂರ್ವದಲ್ಲಿ ಶಾರದಾ ಶಂಕರ ಭಕ್ತ ಮಂಡಳಿ ಹಾಗೂ ವಿವಿಧ ಭಜನಾ ಮಂಡಳಿಗಳ ಮಹಿಳೆಯರಿಂದ ಶ್ರೀರಾಮ ದೇವರ ತಾರಕ ಮಂತ್ರ ಹಾಗೂ ಶಂಕರಾಚಾರ್ಯರು ರಚಿತ ಕಲ್ಯಾಣ ವೃಷ್ಟಿ ಭವ, ಇತರ ಶ್ಲೋಕಗಳ ಪಾರಾಯಣ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ. ಅಳವಂಡಿಕರ್, ದತ್ತಾತ್ರೇಯ ಹೊಸಳ್ಳಿ, ಬಾಲಕೃಷ್ಣ ದೇಸಾಯಿ, ಗಾಯತ್ರಿ ಅಳವಂಡಿಕರ್, ಶ್ರೀನಿವಾಸ್ ಕರಮುಡಿ, ವೇಣು, ಶೇಷಗಿರಿ ಗಡಾದ್, ಶಂಕರ ಹೊಸಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬೆಳಿಗ್ಗೆ ದೇವಸ್ಥಾನದ ಅರ್ಚಕ ಕುಮಾರ್ ಭಟ್ಟ ಅವರಿಂದ ಶ್ರೀ ಶಾರದಾ ದೇವಿ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇಸ್ಲಾಂಪುರದ ಅಲಿ ಟ್ರಾವೆಲ್ಸ್‌ ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

ಅಂಜನಾದ್ರಿ ಶ್ರೀ ಆಂಜನೇಯಸ್ವಾಮಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಪ.ಪೂ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಗಂಗಾವತಿ: ಮಾರ್ಚ್-೩೦ ಭಾನುವಾರ ತಾಲೂಕಿನ ಕಿಷ್ಕಿಂದೆಯ ಅಂಜನಾದ್ರಿ ಪರ್ವತದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವಿದ್ಯಾದಾಸ್ ಬಾಬಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮತ್ತು ವೈಭವದಿಂದ ನಡೆಯಿತು.

ಬೆಳಗ್ಗೆಯಿಂದಲೇ ಶ್ರೀ ಲಕ್ಕಡ ದಾಸ್ ಅವರ ಮೂರ್ತಿಗೆ ವಿಶೇಷ ಪೂಜೆ ಅಭಿಷೇಕ ಕಾರ್ಯಕ್ರಮಗಳು ಹೈದರಾಬಾದಿನ ಪ್ರಮುಖ ಪಕ್ಷದ ಜಗದೀಶ್ ಸಾಂಕಲಾ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದವು.

ಭಕ್ತಾದಿಗಳಾದ ದೇವ ನಾರಾಯಣ ಸಾಂಕ್ಲಾ, ಶಿವಪ್ರಸಾದ್, ಜಿ ನರೇಶ್ ಪಚ್ಚೆವ, ಸುರೇಶ್ ಕುಮಾರ್, ಲೋಹಿಯಾ ಪರಿವಾರ ಶ್ರೀ ದೇವನಾರಾಯಣ ಸಾಂಕ್ಲಾ, ಧನ ಧನ್ಯಶ್ರೀ ಸಂಕ್ಲಾ, ಅರ್ಜುನ್ ಸಾಂಕ್ಲಾ, ರಾಮಕಿಶೋರಿ ತಿವಾರಿ ಹಾಗೂ ಹೈದರಾಬಾದಿನ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀ ಲಕ್ಕಡದಾಸ್ ಬಾಬಾ ಅವರ ೨೭ನೇ ಪುಣ್ಯಸ್ಮರಣೆಗೆ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿತ್ತು.

೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಶ್ರೀರಂಗದೇವರಾಯಲು ವೇದಿಕೆ ಎಂದು ಕರೆದಿರುವುದು ಸ್ವಾಗತಾರ್ಹ: ಶ್ರೀಮತಿ ಲಲಿತಾರಾಣಿ

ಗಂಗಾವತಿ: ಗಂಗಾವತಿಯಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ರಾಜಾ ಶ್ರೀರಂಗದೇವರಾಯಲು ರವರ ಹೆಸರನ್ನು ಇಟ್ಟಿದ್ದಕ್ಕಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು ಮತ್ತು ಗಂಗಾವತಿಯ ಜನಪ್ರಿಯ ಶಾಸಕರಾದ ಜನಾರ್ಧನ್‌ರೆಡ್ಡಿ ಅವರಿಗೆ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ಕಾಲೋನಿಯ ನಾಗರಿಕರು, ರೈತರು ಹಾಗೂ ಶ್ರೀರಂಗದೇವರಾಯಲುರವರ ಅಭಿಮಾನಿಗಳು ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರು ಈ ಜಿಲ್ಲಾ ಸಾಹಿತ್ಯ ಸಮ್ಮೇಳನದ ವೇದಿಕೆಗೆ ದಿವಂಗತ ಶ್ರೀರಂಗದೇವರಾಯಲು ಅವರ ಹೆಸರನ್ನು ಇಟ್ಟಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಜಾತಶತೃ ದಿವಂಗತ ಶ್ರೀರಂಗದೇವರಾಯಲುರವರು ಕನಕಗಿರಿ, ಗಂಗಾವತಿ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಡಿದ ಕೆಲಸಗಳು ಇವತ್ತಿಗೂ ಚಿರಸ್ಮರಣೀಯವಾಗಿದ್ದು, ಅವರ ಹೆಸರನ್ನು ಇವತ್ತು ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸ್ಮರಣೆ ಮಾಡಿಕೊಂಡು ವೇದಿಕೆಗೆ ಹೆಸರಿಟ್ಟಿರೋದು ಬಹಳ ತುಂಬಾ ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹೆಚ್.ಎಂ. ಸಿದ್ದರಾಮಸ್ವಾಮಿ, ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ, ಮುಖಂಡರಾದ ಹೆಚ್.ಎಂ. ವಿರುಪಾಕ್ಷಯ್ಯ ಸ್ವಾಮಿ ಹಾಗೂ ಸಂಗಾಪುರ ಗ್ರಾ.ಪಂ ಉಪಾಧ್ಯಕ್ಷರಾದ ಈ ರಾಘು, ಅಗಸರ ಯಮನೂರು, ರವಿ ನಾಯಕ್, ಉಪ್ಪಾರ್ ಕೃಷ್ಣ, ಅಡವಿ ಕೃಷ್ಣ, ಗೋವಿಂದ, ಶ್ರೀನಿವಾಸಬಾಬು, ಮಲ್ಲಾಪುರ ಶರಣಪ್ಪ, ಪರಶುರಾಮ ಹಾಗೂ ಇನ್ನಿತರ ಗ್ರಾಮದ ಮುಖಸ್ಥರು ಉಪಸ್ಥಿತರಿದ್ದರು.

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಾಂತ ಶಿಲ್ಪಿ ಸೇರಿದಂತೆ ವಿವಿಧ ಸಾಧಕರಿಗೆ ಸನ್ಮಾನ

ಗಂಗಾವತಿ: ಮಾರ್ಚ್ 27 ಮತ್ತು 28 ಎರಡು ದಿನಗಳ ಕಾಲ ಗಂಗಾವತಿಯಲ್ಲಿ ನಡೆದ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಾರ್ಚ್ 28ರಂದು ಗಂಗಾವತಿಯ ಶಿಲ್ಪಿಗಳಾದ ಪ್ರಶಾಂತ್ ಸೋನಾರ್ ಅವರಿಗೆ ಸಮ್ಮೇಳನದ ರಾಜಾ ದಿ. ಶ್ರೀರಂಗದವರಾಯಲು ವೇದಿಕೆಯಲ್ಲಿ ಸನ್ಮಾನಿಸಲಾಯಿತು

ಇದೇ ರೀತಿ ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹತ್ತಾರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸನ್ಮಾನ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಲಿಂಗಾರೆಡ್ಡಿ ಆಲೂರು, ಜನಪ್ರಿಯ ಶಾಸಕರಾದ ಜನಾರ್ಧನ್ ರೆಡ್ಡಿ, ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿ, ಬಿಜೆಪಿ ಮುಖಂಡರಾದ ಕೆಲೋಜಿ ಸಂತೋಷ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

ಗಂಗಾವತಿ ಜನಪ್ರೀಯ ಶಾಸಕ ಜನಾರ್ಧನರೆಡ್ಡಿಯವರಿಗೆ ಕನ್ನಡಪ್ರೇಮಿ ಜಿ.ರಾಮಕೃಷ್ಣ ಅವರಿಂದ ಆತ್ಮೀಯ ಸನ್ಮಾನ.

ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.