ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಅಪಾರ ಭಕ್ತಸಮೂಹ ಹೊಂದಿದ ಪೂಜ್ಯ ದೊಡ್ಡ ಯಮನೂರಪ್ಪ ನವಣಕ್ಕಿಯವರ ನಿಧನ: ಭಕ್ತ ಸಮೂಹ ಸಂತಾಪ

ಗಂಗಾವತಿ: ಗಂಗಾವತಿಯ ದೈವೀ ಪುರುಷ ಪೂಜ್ಯನೀಯ ಲಿಂಗೈಕ್ಯ ಶ್ರೀ ನವಣಕ್ಕಿ ನಾಗಪ್ಪ ತಾತನವರ ಹಿರಿಯ ಸುಪುತ್ರರಾದ ಪೂಜ್ಯನೀಯ ಶ್ರೀ ದೊಡ್ಡ ಯಮನಪ್ಪ ನವಣಕ್ಕಿಯವರು ತಂದೆಯವರ ಮಾರ್ಗದಲ್ಲಿಯೇ ಸೇವೆಯನ್ನು ಸಲ್ಲಿಸಿ ಅಪಾರ ಸಂಖ್ಯೆಯ ಭಕ್ತರನ್ನು ಸಂಪಾದಿಸಿಕೊಂಡಿದ್ದು, ಅವರು ಭಾನುವಾರ ರಾತ್ರಿ ೯ ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವು ಮಾರ್ಚ್-೨೪ ಸೋಮವಾರ ಗಂಗಾವತಿಯ ಜುಲೈನಗರದ ಬೈಪಾಸ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿತು. ಪೂಜ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಕುರುಹಿನಶೆಟ್ಟಿ ಸಮಾಜದ ಯಜಮಾನರುಗಳು, ಎಂ. ಮಲ್ಲಿಕಾರ್ಜುನ ನಾಗಪ್ಪ, ಚೆಗೂರು ಶ್ಯಾಮಣ್ಣ,…

Read More
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 50ನೇ ವರ್ಷದ ಶ್ರೀ ಶರಣಬಸವೇಶ್ವರ ಪುರಾಣ, ಸಾಮೂಹಿಕ ವಿವಾಹ ಹಾಗೂ ಜಾತ್ರಾ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಗಂಗಾವತಿ: ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಾನಗಲ್ ಶ್ರೀಗಳ 11 ದಿನದ ಪುರಾಣ ಕಾರ್ಯಕ್ರಮ ಜರುಗಿಸಲಾಯಿತು. ಜಾತ್ರಾ ದಿನದ ಅಂಗವಾಗಿ ಶರಣ ಬಸವೇಶ್ವರ ಮೂರ್ತಿಗೆ ಪೂಜಾ ಪುನಸ್ಕಾರ ಹಾಗೂ ಹೋಮ ಹವನಗಳನ್ನು ಅರ್ಚಕರಿಂದ ನೆರೆವೆರಿಸಲಾಯಿತು. ಬೆಳಗಿನ ಜಾವ ವದುವರರನ್ನು ಕರೆತಂದು ಡಣಾಪೂರ ಗ್ರಾಮದ ತುಂಗಾಭದ್ರ ನದಿಗೆ ತೆರಳಿ ಕುಂಭಕಳಸಗಳಿಂದ ಪೂಜಾ ಕಾರ್ಯಕ್ರಮಗಳನ್ನು ಮಾಡಿಕೊಂಡು ಗ್ರಾಮದ ರಾಜ ಬೀದಿಯಲ್ಲಿ ಸಕಲವಾದ್ಯವೃಂದಗಳಿಂದ, ಡೊಳ್ಳು, ವಿವಿದ ಮೇಳಗಳಿಂದ ಶರಣ ಬಸವೇಶ್ವರ ದೇವಸ್ಥಾನಕ್ಕೆ…

Read More
ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಮಹಿಳೆಗೆ ಅನುಕಂಪ ಬೇಡ, ಅವಕಾಶ ನೀಡಿ: ಡಾ.ಶೋಭಾ.ಕೆ.ಎಸ್.

ಇಂದು ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭವನ್ನು ಜ್ಯೋತಿ ಬೆಳಗಿ ವಿನೂತನ ವಿಶೇಷ ರೀತಿಯಲ್ಲಿ ತೊಟ್ಟಿಲು ತೂಗುವ ಮೂಲಕ ಉದ್ಘಾಟಿಸಿದ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಶೋಭಾ.ಕೆ.ಎಸ್.ರವರು ಇತ್ತೀಚಿನ ಶತಮಾನಗಳಲ್ಲಿ ಮಹಿಳೆ ಆಧುನಿಕ ಯುಗದಲ್ಲಿ ತೀವ್ರವಾಗಿ ಸದೃಢವಾಗುತ್ತಿರುವುದರಿಂದ ಮಹಿಳೆಗೆ ಅನುಕಂಪ ಬೇಡ ಅವಕಾಶ ನೀಡಿ ಎಂದು ಕರೆಕೊಟ್ಟರು. ಕಾರ್ಯಕ್ರಮದ ಘನ ಉಪಸ್ಥಿತರಿದ್ದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕರಿಗೂಳಿ…

Read More
ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಅದ್ಧೂರಿಯಾಗಿ ಜರುಗಿದ ಶ್ರೀಗುರು ಬೆಟ್ಟದಲಿಂಗೇಶ್ವರ ಜಾತ್ರಾ ಮಹೋತ್ಸವ

ಗಂಗಾವತಿ: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ೧೩೩ನೇ ಶ್ರೀಗುರು ಬೆಟ್ಟದೇಶ್ವರ ಶ್ರೀಗುರು ಲಿಂಗೇಶ್ವರರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವವು ಮಾರ್ಚ್-೨೨ ಶನಿವಾರ ಅದ್ಧೂರಿಯಗಿ ಜರುಗಿತು. ಹಿಂದಿನ ದಿನ ಮಾರ್ಚ್-೨೧ ಶುಕ್ರವಾರ ೧೩೩ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿದ್ದು, ಮಾರ್ಚ್-೨೨ ಫಾಲ್ಗುಣ ಬಹುಳ ಅಷ್ಠಮಿ ಶನಿವಾರ ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, ೧೧:೧೫ ರಿಂದ ೧೨:೧೫ ರವರೆಗಿನ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಜರುಗಿದವು. ಮದ್ಯಾಹ್ನ ಮಹಾಪ್ರಸಾದ ಕಾರ್ಯಕ್ರಮ…

Read More
ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಗಂಗಾವತಿ: ನಗರದ ಹಿರೇಜಂತಕಲ್‌ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾರ್ಚ್-೨೦ ಗುರುವಾರದಂದು ಬಸವ ನೀಲಾಂಬಿಕೆ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಮ್ಮ ಆರೇಗಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಡಾ. ಮುಮ್ತಾಜ್ ಬೇಗಂ, ವಿಜಯಲಕ್ಷ್ಮಿ, ಅರ್ಚನಾ ರಾಘವೇಂದ್ರ ಶಿರಿಗೇರಿ, ಲಲಿತಮ್ಮ ತಿಪ್ಪೇರುದ್ರಸ್ವಾಮಿ, ಗೌರಮ್ಮ ಕುಂಬಾರ, ಮಂಜುಳಾ ಹೊಸಪೇಟೆ, ಸಿಂಧು, ಶೋಭಾ ರವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಗೌರಮ್ಮ…

Read More
ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹಿರಿಯರಾದ ಮುದುಕಪ್ಪ ಗಡ್ಡಿ ಸಹೋದರರು ಮತ್ತು ಕುಟುಂಬದ ಸದಸ್ಯರು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಆರಾಧ್ಯ ದೈವ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಒಂದು ಕೆಜಿ ಬೆಳ್ಳಿಯ ಪೇಟವನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಿದರು. ಅವರ ಕುಟುಂಬವು ವಂಶಪಾರಂಪರ್ಯವಾಗಿ ಶ್ರೀ ಬೆಟ್ಟದಲಿಂಗೇಶ್ವರ ದೇವರಿಗೆ ಜಾತ್ರೆಯ ಸಮಯದಲ್ಲಿ ಪಾದಯಾತ್ರೆ ಮಾಡುತ್ತಾ ಬಂದಿದ್ದು, ಅದರಂತೆ ಈ ವರ್ಷದ ಮಾರ್ಚ್-೨೨ ರಂದು ನಡೆಯುವ ಶ್ರೀ ಬೆಟ್ಟದ ಲಿಂಗೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಪಾದಯಾತ್ರೆ ಮೂಲಕ…

Read More
ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಸಂಚಲನ ಮೂಡಿಸಿದ ನ್ಯಾಯಾಧೀಶರ ಪಾದಯಾತ್ರೆ

ಗಂಗಾವತಿ: ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ನಡೆದ ನ್ಯಾಯಾಧೀಶರ ನೇತೃತ್ವದ ಪಾದಯಾತ್ರೆ ಗಂಗಾವತಿ ನಗರದಲ್ಲಿ ಸಂಚಲನ ಮೂಡಿಸಿದೆ. ತಾಲೂಕು ಕಾನೂನು ನೆರವು ಸಮಿತಿ, ಗಂಗಾವತಿ ವಕೀಲರ ಸಂಘ, ನಗರಸಭೆ ಗಂಗಾವತಿ ಹಾಗೂ ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್, ಗ್ರಾಮೀಣ ರೇಡಿಯೋ ಭಾರತಿ ಇವರುಗಳು ಮುಂದಾಳತ್ವದಲ್ಲಿ ಪಾದಯಾತ್ರೆಯು ಶ್ರೀಕೃಷ್ಣದೇವರಾಯ ವೃತ್ತದಿಂದ ಚಾಲನೆಗೊಂಡು ಅಂಬೇಡ್ಕರ್ ವೃತ್ತ, ಬಸವಣ್ಣ ವೃತ್ತದ ಮೂಲಕ ಗಾಂಧಿವೃತ್ತ ತಲುಪಿತು. ಅಲ್ಲಿ ಸ್ವಚ್ಛತೆಯ ಮೂಲಮಂತ್ರ ಸಾರಿದ ಮಹಾತ್ಮಗಾಂಧಿಜಿಯವರ ಪುತ್ಥಳಿಗೆ ನ್ಯಾಯಾಧೀಶರು ಮಾಲಾರ್ಪಣೆ ಮಾಡಿ ಅಲ್ಲಿ…

Read More
ಪರಶುರಾಮರವರ ಕರೋಕೆಯಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನಾಚರಣೆ

ಪರಶುರಾಮರವರ ಕರೋಕೆಯಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನಾಚರಣೆ

ಗಂಗಾವತಿ: ಕನ್ನಡ ನಾಡಿನ ರಾಜಕುಮಾರ, ಡಾ. ಪುನೀತ್‌ ರಾಜಕುಮಾರ ರವರು ಒಬ್ಬ ನಟನಾಗಿ ಮಾತ್ರವಲ್ಲದೇ ಸಾಮಾಜಿಕ ಸೇವೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿ ಮಾದರಿಯಾಗಿದ್ದಾರೆ. ಯುವಪೀಳಿಗೆ ಯುವಕರು ಅವರನ್ನು ಮಾರ್ಗದರ್ಶನವಾಗಿಟ್ಟುಕೊಂಡು ಸಮಾಜ ಸೇವೆಯಲ್ಲಿ ತೊಡಗಲಿ ಎಂದು ಹವ್ಯಾಸಿ ಹಾಡುಗಾರರಾದ ಪರಶುರಾಮ ದೇವರಮನೆ ಹೇಳಿದರು. ಅವರು ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಸಂಗೀತ ಸ್ವರಾಂಜಲಿ ಕರೋಕೆ ಕಲಾ ತಂಡದ ವತಿಯಿಂದ ಏರ್ಪಡಿಸಿದ್ದ ಪುನೀತ್ ರಾಜಕುಮಾರ ಅವರ 50ನೇ ಹುಟ್ಟು ಹಬ್ಬದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುವ ಕಾರ್ಯಕ್ರಮದಲ್ಲಿ ತಿಳಿಸಿದರು. ಅವರು ಕಿಷ್ಕಿಂದಾ ಅಂಜನಾದ್ರಿಯ…

Read More
ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಸ್ವಾಮಿ

ಗಂಗಾವತಿ: ತಾಲೂಕಿನ ಎಂ.ಎಸ್.ಎಂ.ಎಸ್ ಮಹಾವಿದ್ಯಾಲಯದಲ್ಲಿ ಶಿಕ್ಷಣಪ್ರೇಮಿ, ಹಿರಿಯ ರಾಜಕಾರಣಿ ಹೆಚ್.ಎಂ. ಸಿದ್ದರಾಮಸ್ವಾಮಿ ತಮ್ಮ ೭೦ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮದೇ ಪ್ರೌಢಶಾಲೆ ಮತ್ತು ಕಾನೂನು ಪದವಿ ಕಾಲೇಜು, ಡಿಗ್ರಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಮತ್ತು ಸಂಭ್ರಮದೊಂದಿಗೆ ಆಚರಿಸಿಕೊಂಡರು. ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿದ್ದರಾಮಸ್ವಾಮಿಯವರ ಬಗ್ಗೆ ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಅವರು ನಡೆದುಕೊಳ್ಳುವ ರೀತಿ-ನೀತಿಗಳ ಬಗ್ಗೆ ಕೊಂಡಾಡಿದರು. ಸಿದ್ದರಾಮ ಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಹಲವಾರು ಕಷ್ಟ ಕಾರ್ಪಣ್ಯಗಳನ್ನು…

Read More
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಭಾಜನರಾಗಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿ ಇವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಇಂದು ಸನ್ಮಾನಿಸಿದರು. ವೀರಾಪುರ ಕೃಷ್ಣ ಅವರು ಒಬ್ಬ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಶೋಷಣೆಗಳ ಕುರಿತಾಗಿ, ದೌರ್ಜನ್ಯಗಳ ಕುರಿತಾಗಿ ವರದಿ ಮಾಡುವ ಮೂಲಕ ಹಾಗೂ ತಮ್ಮನ್ನು ತಾವು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಈ ಪ್ರಶಸ್ತಿ ಅವರಿಗೆ ಲಭಿಸಿರುವುದು ಸ್ತುತ್ಯಾರ್ಹವಾಗಿದೆ ಎಂದು…

Read More