ಸೂರ್ಯನಾಯಕನತಾಂಡದಲ್ಲಿ ಪ್ರಥಮ ಬಾರಿಗೆ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿ ಅದ್ಧೂರಿ ಆಚರಣೆ
ಗಂಗಾವತಿ: ನಗರದ ಹೊರವಲಯದ ಸೂರ್ಯನಾಯಕನತಾಂಡದಲ್ಲಿ ಇದೇ ಪ್ರಥಮ ಬಾರಿಗೆ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ರವರ ೨೮೬ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿಯ ನಿಮಿತ್ಯ ಸಂತ ಸೇವಾಲಾಲ್ ಭಾವಚಿತ್ರದೊಂದಿಗೆ ತಾಂಡಾದಲ್ಲಿ ಕುಂಭ ಹೊತ್ತ ಮಹಿಳೆಯರೊಂದಿಗೆ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದ ಹತ್ತಿರದಲ್ಲಿರುವ ಬಂಜಾರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಶಿಕ್ಷಕರಾದ ರಾಜಶೇಖರ ಅವರಿಗೆ ಹಾಗೂ ಸ.ಕಿ.ಪ್ರಾ ಶಾಲೆಯ ಮುಖ್ಯಗುರುಗಳಾದ ಮಲ್ಲಿಕಾರ್ಜುನರವರಿಗೆ ಹಾಗೂ ಹಿರಿಯ ಶಿಕ್ಷಕರಾದ…
