ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು
ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು…
