ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ನೆಕ್ಕಂಟಿ ಸೂರಿಬಾಬು

ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು…

Read More

ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ನ ಸಂತರ್ಪಣೆ.

ಗಂಗಾವತಿ. ಇತಿಹಾಸ ಪ್ರಸಿದ್ಧ ಹಿರೇ ಜಂತಕಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಗಂಗಾವತಿ ನಗರ ಸೇರಿದಂತೆ ಜಾತ್ರೆಗೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಅನ್ನಸಂತರ್ಪಡೆಯನ್ನು ಆಯೋಜಿಸಲಾಗಿದೆ ಎಂದು. ನಗರಸಭೆಯ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹೇಳಿದರು. ಅವರು ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಹಂಪಿಯಲ್ಲಿರುವ ವಿರೂಪಾಕ್ಷೇಶ್ವರ ದೇವಸ್ಥಾನದಷ್ಟೇ ಅತ್ಯಂತ ಶಕ್ತಿ ಪೀಠವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಆರಂಭಗೊಂಡ ರಥೋತ್ಸವ ಹಾಗೂ ಎರಡು ದಿನಗಳ ಕಾಲ ಜರುಗಲಿರುವ ಸಾಂಸ್ಕೃತಿಕ ವೈಭವ…

Read More
ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಭಾರತೀಯ ಬಾಲ ವಿದ್ಯಾಲಯದ ಸುವರ್ಣ ಮಹೋತ್ಸವದ ಲೊಗೊ ವಿರುಪಾಕ್ಷಪ್ಪ ಸಿಂಗನಾಳ ಅವರಿಂದ ಬಿಡುಗಡೆ

ಗಂಗಾವತಿ: ತಾಲೂಕಿನ ಪ್ರಗತಿನಗರದ ಭಾರತೀಯ ಬಾಲ ವಿದ್ಯಾಲಯದಲ್ಲಿ ಫೆಬ್ರವರಿ-೦೮ ಮತ್ತು ೦೯ ಎರಡು ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವದ ಲೋಗೋ ವನ್ನು ಫೆಬ್ರವರಿ-೦೨ ರವಿವಾರ ಬಿಡುಗಡೆ ಮಾಡಲಾಯಿತು. ಈ ಲೋಗೊ ಬಿಡುಗಡೆ ಮಾಡಿದ ಸಂಸ್ಥೆಯ ಅಧ್ಯಕ್ಷರಾದ ವಿರುಪಾಕ್ಷಪ್ಪ ಸಿಂಗನಾಳ ಮಾತನಾಡಿ, ಫೆಬ್ರವರಿ-೮ ಮತ್ತು ೯ ಎರಡು ದಿನಗಳು ನಡೆಯುವ ಸುವರ್ಣ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ಆಚರಿಸೋಣ, ಎಲ್ಲಾ ಹಿರಿಯ ಗುರುಗಳು, ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು. ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ…

Read More

ಲಕ್ಷ್ಮಿಕಾಂತ್ ಹೇರೂರು ಅವರ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಸೇವೆಗೆ ಸೇಡಮ್‌ನಲ್ಲಿ “ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ”

ಗಂಗಾವತಿ: ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಕಲಬುರ್ಗಿ ಇವರು ಜನವರಿ-೨೯ ರಿಂದ ಫೆಬ್ರವರಿ-೦೬ ರವರೆಗೆ ಸೇಡಮ್‌ನ ಕಲಬುರ್ಗಿ ರಸ್ತೆಯ ಪ್ರಕೃತಿನಗರ ಬೀರನಹಳ್ಳಿಯಲ್ಲಿ ಜರುಗಿದ ೭ನೇ ಭಾರತೀಯ ಸಂಸ್ಕೃತಿ ಉತ್ಸವ ಮತ್ತು ಕೊತ್ತಲ ಸ್ವರ್ಣ ಜಯಂತಿಯ ಹಿನ್ನೆಲೆಯಲ್ಲಿ ಜನೇವರಿ-೦೪ ರಂದು ಆಯೋಜಿಸಿದ್ದ ಸಮಾರಂಭದಲ್ಲಿ ಶಿಕ್ಷಣ, ಸಮಾಜಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಗಂಗಾವತಿಯ ಲಕ್ಷ್ಮೀಕಾಂತ್ ಹೇರೂರು ಅವರಿಗೆ ಕಲ್ಯಾಣ ಕರ್ನಾಟಕ ಗೌರವ ಪುರಸ್ಕಾರ ನೀಡಿ ಗೌರವಿಸಲಾಗಿದೆ.ಲಕ್ಷ್ಮೀಕಾಂತ ಹೇರೂರು…

Read More
ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ವಸಂತ ಪಂಚಮಿ ಪ್ರಯುಕ್ತ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು.

ಗಂಗಾವತಿ. ವಸಂತ ಪಂಚಮಿ ಪ್ರಯುಕ್ತ ಸೋಮವಾರದಂದು ಶೃಂಗೇರಿಯ ಶಾರದಾ ಪೀಠದ ಗಂಗಾವತಿ ಶಂಕರ ಮಠದ ಶಾರದಾ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ನೇತೃತ್ವದಲ್ಲಿ ಜರುಗಿದವು. ಶ್ರೀ ಶಾರದಾ ಮಾತೆ ಸೇರಿದಂತೆ ಪರಿವಾರ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಶತನಾಮಾವಳಿ ಪಾರಾಯಣ ಇವುಗಳ ಜೊತೆಗೆ 14 ಅಧಿಕ ಚಿಕ್ಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅಕ್ಷರ ಅಭ್ಯಾಸವನ್ನು ನೆರವೇರಿಸಲಾಯಿತು. ಜೊತೆಗೆ ವಿವಿಧ ಶಾಲಾ ಕಾಲೇಜುಗಳ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಂಕಲ್ಪವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಮಾರ್…

Read More
ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಒಬ್ಬರ ಮನ ನೋಯಿಸದೆ ಸುದೀರ್ಘ ಸೇವೆ ಸಲ್ಲಿಸಿದ ಭೀಮಣ್ಣ ಅಜಾತ ಶತ್ರು: ರಾಘವೇಂದ್ರ ನಾಯರಿ

ಗಂಗಾವತಿ: ಅರವತ್ತು ವರ್ಷದ ಬದುಕಿನಲ್ಲಿ ನಲವತ್ತೆರಡು ವರ್ಷಗಳನ್ನು ಕೆನರಾ ಬ್ಯಾಂಕ್ ಸೇವೆಯಲ್ಲಿಯೇ ಕಳೆದುದು ವಿಶೇಷವಲ್ಲ. ಇಡೀ ತನ್ನ ಸೇವಾ ಅವಧಿಯಲ್ಲಿ ಸಹೋದ್ಯೋಗಿ ಹಾಗೂ ಗ್ರಾಹಕರಿಗೆ ಮನ ನೋಯುವಂತಹ ಒಂದೇ ಒಂದು ಮಾತನ್ನಾಡದ ಭೀಮಣ್ಣನವರದು ವಿಸ್ಮಯ ವ್ಯಕ್ತಿತ್ವವೆಂದು ಅಖಿಲ ಭಾರತ ಕೆನರಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯರಿ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕೆನರಾಬ್ಯಾಂಕ್‌ನಲ್ಲಿ ಸೇವಾ ನಿವೃತ್ತಿಹೊಂದಿದ ಭೀಮಣ್ಣನವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಭೀಮಣ್ಣನವರು ನನಗೆ ಸಹೋದ್ಯೋಗಿಯ ಜೊತೆಗೆ…

Read More
ತಿಪ್ಪೇಸ್ವಾಮಿ ಹೆಚ್. ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ತಿಪ್ಪೇಸ್ವಾಮಿ ಹೆಚ್. ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ತಿಪ್ಪೇಸ್ವಾಮಿ ಹೆಚ್. ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದಲ್ಲಿ “ಎ ಸ್ಟಡಿ ಆನ್ ಪರ್ಫಾಮೆನ್ಸ್ ಆಫ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಂಡ್ ಇಟ್ಸ್ ಅಸೊಸಿಯೇಟ್ ಬ್ಯಾಂಕ್ಸ್ ಬಿಫೋರ್ ಆಂಡ್ ಆಫ್ಟರ್ ದಿ ಮರ್ಜರ್” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ. ಇವರ ಈ ಮಹಾಪ್ರಬಂಧಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ…

Read More
ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನದಂದು ದೇವಸ್ಥಾನ ನಿರ್ಮಾಣದ ಸಂಕಲ್ಪ: ರೂಪ ರಾಣಿ ಲಕ್ಷ್ಮಣ್

ಗಂಗಾವತಿ:ನಗರದ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ಶುಕ್ರವಾರದಂದು ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಸಂಜೆ ಆಯೋಜಿಸಿದ ಶ್ರೀ ಕನ್ನಿಕಾ ಪರಮೇಶ್ವರಿ ಆತ್ಮಾರ್ಪಣೆ ದಿನ ಹಾಗೂ ವಿಶ್ವರೂಪ ದರ್ಶನ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಮಾತನಾಡಿ ನಗರದಲ್ಲಿ ಹಲವು ವರ್ಷಗಳಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ನಿರ್ಮಾಣಕ್ಕೆ ಹಲವಾರು ಅಡೆತಡೆಗಳು ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಮಾಜ ಬಾಂಧವರ ಸಮ್ಮುಖದಲ್ಲಿ ದೇವಸ್ಥಾನದ ನಿರ್ಮಾಣಕ್ಕೆ ಸಂಕಲ್ಪಿಸಿಕೊಂಡು ಪ್ರತಿಯೊಬ್ಬ ಸಮಾಜ ಬಾಂಧವರ ಕುಟುಂಬದವರಿಗೆ ಶ್ರೀಚಕ್ರ ಕಲ್ಪಿಸುವುದರ…

Read More
ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ  ಹರಿದು ಬಂತು ಭಕ್ತ ಸಾಗರ

ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ ಹರಿದು ಬಂತು ಭಕ್ತ ಸಾಗರ

ಕುಷ್ಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಡದೂರು ಸೀಮಾ ವ್ಯಾಪ್ತಿಯ ಶ್ರೀ ಕ್ಷೇತ್ರ ಅಮ್ಮನಕಟ್ಟಿಯ ಶ್ರೀ ಸಾಧ್ವಿ ಶಿರೋಮಣಿ ತಿಮ್ಮಮ್ಮನವರ 212ನೇ ಆರಾಧನಾ ಮಹೋತ್ಸವ ಅಪಾರ ಭಕ್ತಾದಿಗಳ ಮಧ್ಯೆ ಭಕ್ತಿಯಿಂದ ಜರುಗಿತು. ಗುರುವಾರದಂದು ಅಮ್ಮನವರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ.ಸಾಮೂಹಿಕ ಜವಳ, ಹರಿನಾಮ ಕೀರ್ತನೆ.ಸೇರಿದಂತೆ ಸಕಲ ವಾದ್ಯ ವೈಭವದೊಂದಿಗೆ ಹೂನೂರು ಗ್ರಾಮದ ಮೂಲಕ. ಶ್ರೀ ಕ್ಷೇತ್ರ ಅಮ್ಮನ ಕಟ್ಟೆಗೆ ಅಮ್ಮನವರ ಪಲ್ಲಕ್ಕಿ ಮಹೋತ್ಸವ ಆಗಮಿಸಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ. ದೀಡು ನಮಸ್ಕಾರ ಹಾಕುವುದರ ಮೂಲಕ…

Read More
೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಪರಮಾನಂದ ಶಿವಸಿಂಪರ್

ಗಂಗಾವತಿ: ೧ನೇ ಜುಲೈ ೨೦೨೨ ರಿಂದ ೩೧ನೇ ಜುಲೈ ೨೦೨೪ರ ಅವಧಿಯಲ್ಲಿ ೨೫ ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ ೭ನೇ ವೇತನ ಆಯೋಗದ ಅನುಷ್ಟಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವಾಗಿರುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ಪರಮಾನಂದ ಶಿವಸಿಂಪರ್ ಅವರು ಕಳವಳ ವ್ಯಕ್ತಪಡಿಸಿದರು. ಅವರು ಇಂದು ಸದರಿ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಆದ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು….

Read More