11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ಯಾತ್ರೆ
ಗಂಗಾವತಿ: ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ವತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಿಂದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ 11ನೇ ವರ್ಷದ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪುಷ್ಯ ಮಹತ್ವದ ನಿಮಿತ್ತವಾಗಿ ಯಾತ್ರೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಪುಷ್ಪ ಮಾಸದ ನಿಮಿತ್ತವಾಗಿ ನಾವು 11ನೇ ವರ್ಷದ ಶ್ರೀ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ವಾಸವಿ ದೀಕ್ಷಾ ಮಾಲಾಧಾರಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಸುಮಾರು 26 ಜನ…
