ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು, ಅಲ್ವೇರ ದ್ವಿತೀಯ ಸ್ಥಾನವನ್ನು, ವೈಷ್ಣವಿ ತೃತೀಯ ಸ್ಥಾನವನ್ನು ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಮುಶಿರ ಪ್ರಥಮ ಸ್ಥಾನವನ್ನು ಪಡೆಯುವುದರ ಮುಖಾಂತರ ತಾಲೂಕಿನಲ್ಲಿ ಮಹಾನ್ ಶಾಲೆಯ ಕೀರ್ತಿಯನ್ನು ತಂದಿದ್ದಾರೆ.
ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ ಕಾರ್ಯಕ್ರಮದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪೊಲೀಸ್ ಉಪಾಧೀಕ್ಷರಾದ ಸಿದ್ದಲಿಂಗಪ್ಪಗೌಡ ಪಾಟೀಲ್, ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ಮಾಳಿ, ಪೊಲೀಸ್ ಉಪ ನಿರೀಕ್ಷಕರಾದ ಶ್ರೀಮತಿ ಶಾರದಮ್ಮ, ಆರಕ್ಷಕ ಪೊಲೀಸ್ ಉಪನಿರೀಕ್ಷಕರಾದ ಇಸ್ಮಾಯಿಲ್ ಸಾಹೇಬ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್ ವಸ್ತ್ರದ ಮಕ್ಕಳಿಗೆ ಪ್ರಶಸ್ತಿ ಪತ್ರವನ್ನು ಹಾಗೂ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.
ಶಾಲೆ ಅಧ್ಯಕ್ಷರಾದ ನೇತ್ರಾಜ್ ಗುರುವಿನ ಮಠ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ಗುರುವಿನ ಮಠ ಹಾಗೂ ಪೂರ್ಣಿಮಾ, ಕುಮೋದಿನಿ, ಮಂಜುನಾಥ್, ವೀರಯ್ಯ, ಶ್ರೀದೇವಿ, ಶಿವಾನಿ, ವಿಜಯಲಕ್ಷ್ಮಿ, ಶಾಂತ ಹಿರೇಮಠ, ಚಂದ್ರಶೇಖರ, ಸಿದ್ದೇಶ್ ಇನ್ನಿತರ ಶಿಕ್ಷಕರು ಶುಭ ಹಾರೈಸಿದರು.

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು.
ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್ ಕಲ್ಯಾಣಿ, ಎನ್ ವಿಜಯ್, ವಿಜಯ್ ಕುಮಾರ್ ಆಳ್ಳಿ ಜ್ಯೋತಿಶ್, ಇವರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮ ನಡೆಸುವ ತಯಾರಿಗೆ ಸಾಕ್ಷಿಯಾದರು.
ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಆಟೋಟಗಳನ್ನು ಏರ್ಪಡಿಸಲಾಗಿತ್ತು, ಬಂದಂತ ಶಿಕ್ಷಕರಿಗೆ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ  ಮಾಡಲಾಗಿತ್ತು,
ಈ ಸಂದರ್ಭದಲ್ಲಿ ಶಿಕ್ಷಕರು ರಮೇಶ್ ಕುಲಕರ್ಣಿ,ಅಜ್ಮೀರ್ ನಂದಾಪುರ್, ರಾಜೇಶ್ವರ್ ರೆಡ್ಡಿ, ವರಲಕ್ಷ್ಮಿ, ಅಕ್ಕಮಹಾದೇವಿ ಪದ್ಮ ಆಶಾ ಹಾಗೂ ಶಿಕ್ಷಕ ವೃಂದ, ಹಳೆ ವಿದ್ಯಾರ್ಥಿಗಳು  ಕುಮಾರಸ್ವಾಮಿ, ನಿರುಪಾದಿ, ಸಲೀಂ, ಸುಮಂಗಳ, ಸರಸ್ವತಿ, ಮಹಾದೇವಿ, ರೇಣುಕಾ, ವಿದ್ಯಾರ್ಥಿ ವಿದ್ಯಾರ್ಥಿನಿಯರು  ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.
ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಗಂಗಾವತಿ: ಕಿಷ್ಕಿಂಧಾ ಪ್ರತಿಷ್ಠಾನ ಗಂಗಾವತಿ, ವಿಪ್ರಸಿರಿ ಸೌಹಾರ್ದ ಸಹಕಾರ ಸಂಘ ನಿಯಮಿತ ಗಂಗಾವತಿ ಇವರಿಂದ ಜನವರಿ-೨೫ ರಿಂದ ೩೧ ರವರೆಗೆ ಸಂಜೆ ೬ ರಿಂದ ೮ ರವರೆಗೆ ನಗರದ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ ನಡೆಯಲಿದೆ ಎಂದು ಸಂಚಾಲಕರಾದ ಪವನಕುಮಾರ ಗುಂಡೂರು ಪ್ರಕಟಣೆಯಲ್ಲಿ ತಿಳಿಸಿದರು.

ಈ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯನ್ನು ಕಜ್ಜಿಡೋಣಿ ಶಂಕರಾಚಾರ್ಯ ಅವಧೂತ ಆಶ್ರಮದ ವಿದ್ವಾನ್ ಶ್ರೀ ಕೃಷ್ಣಾನಂದ ಶರಣರು ಮಾಡಲಿದ್ದು, ಪ್ರವಚನವನ್ನು ಖ್ಯಾತ ವಿದ್ವಾಂಸರಾದ ವಿದ್ವಾನ್ ಶ್ರೀ ಜಗದೀಶ ಶರ್ಮಾ ಸಂಪ ಬೆಂಗಳೂರು ಇವರು ನೀಡಲಿದ್ದಾರೆ.
ಜನವರಿ-೨೫ ಶನಿವಾರ ರಾಮಾಯಣ ಅವತಾರ, ಜನವರಿ-೨೬ ರವಿವಾರ ಶಬರಿ-ಮಾತಂಗ ಪರ್ವತ, ಜನವರಿ-೨೭ ಸೋಮವಾರ ಶ್ರೀರಾಮ-ಪಂಪಾಸರೋವರ, ಜನವರಿ-೨೮ ಮಂಗಳವಾರ ಆಂಜನೇಯ-ಅAಜನಾದ್ರಿ, ಜನವರಿ-೨೯ ಬುಧವಾರ ಸುಗ್ರೀವ-ಋಷ್ಯಮೂಕ, ಜನವರಿ-೩೦ ಗುರುವಾರ ವಾಲಿ-ತಾರಾ ಪರ್ವತ ಕುರಿತಂತೆ ಪ್ರವಚನ ನಡೆಯಲಿದೆ. ಪ್ರವಚನದ ಸಮಾರೋಪ ಸಮಾರಂಭವು ಜನವರಿ-೩೧ ಶನಿವಾರ ಸಂಜೆ ೬:೦೦ ಗಂಟೆಗೆ ರಾಮಾಯಣದ ಸಂದೇಶದೊAದಿಗೆ ನಡೆಯಲಿದೆ ಎಂದು ತಿಳಿಸಿದರು.

ಮತ್ತೊರ್ವ ಸಂಚಾಲಕರಾದ ನಾಗರಾಜ ಗುತ್ತೇದಾರ ಮಾತನಾಡಿ, ಸನಾತನ ಸಂಸ್ಕೃತಿಯನ್ನು, ಮೌಲ್ಯಗಳನ್ನು, ಆದರ್ಶನಗಳನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕಿಷ್ಕಿಂಧಾ ಕಾಂಡ ವಿಶೇಷವಾಗಿ ನಮ್ಮ ನೆಲದ ಬಗ್ಗೆ ಮಾಹಿತಿ ನೀಡುತ್ತದೆ. ಕುಟುಂಬದ ಎಲ್ಲಾ ಸದಸ್ಯರು ಒಟ್ಟಾಗಿ ಈ ರೀತಿಯ ಪ್ರವಚನ ಕಾರ್ಯಕ್ರಮಗಳಿಗೆ ಭಾಗವಹಿಸುವುದರಿಂದ ಭತ್ತದ ಕಣಜವು ಜ್ಞಾನದ ಕಣಜ, ಆಧ್ಯಾತ್ಮಿಕ ಕಣಜ ಆಗುವುದರಲ್ಲಿ ಸಂದೇಹವಿಲ್ಲ. ಕಾರಣ ಗಂಗಾವತಿಯ ಸರ್ವ ಸಮಾಜದ ನಾಗರಿಕರು ಪ್ರವಚನದ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಹಸ್ತಾಂತರಿಸುವ ಕಾರ್ಯದಲ್ಲಿ ನಿರತರಾಗಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಇತರ ಸಂಚಾಲಕರಾದ ಜೋಗದ ನಾರಾಯಣಪ್ಪ ನಾಯಕ, ಸುಬ್ರಹ್ಮಣ್ಯ ರಾಯಕರ್, ಅಕ್ಕಿ ಚಂದ್ರಶೇಖರ, ಅರ್ಜುನ ಕೆ.ವೈ.ಟಿ.ಸಿ., ಬದರಿ ನಾರಾಯಣ ಜೋಶಿ, ಅನೀಲ್ ದೇಸಾಯಿ, ಗುರುರಾಜ ಚಿರ್ಚನಗುಡ್ಡ, ಜಗನ್ನಾಥ ಆಲಂಪಲ್ಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ

ಗಂಗಾವತಿ: ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಪ್ರಯುಕ್ತ, ಪುರಪ್ರವೇಶ ಮಾಡುವುದರ ಮೂಲಕ ಸರ್ವ ಭಕ್ತಾದಿಗಳು ಸಕಲ ವಾದ್ಯ ವೈಭವದೊಂದಿಗೆ ವಿವಿಧ ಮಹಿಳಾ ಭಜನಾ ಮಂಡಳಿಯವರ ಸೊಗಸಾದ ಕೋಲಾಟ, ಭಜನೆ. ಋತಿಜ್ವರ, ವೇದ ಮಂತ್ರ ಘೋಷದೊಂದಿಗೆ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳುವುದರ ಮೂಲಕ ವಾಲ್ಮೀಕಿ ವೃತ್ತದಲ್ಲಿ ವೇದಮೂರ್ತಿ ಮಹೇಶ್ ಭಟ್ ತಂಡದವರಿಂದ ಮಹರ್ಷಿ ವಾಲ್ಮೀಕಿ ಅವರಿಗೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಸರ್ವಲಾoಕೃತ ತೆರೆದ ವಾಹನ ಮೂಲಕ ಶೋಭಾ ಯಾತ್ರೆ ನಡೆಸಲಾಯಿತು.

ಈ ಸಂದರ್ಭದಲ್ಲಿ ನಾಯಕ ಸಮಾಜದ ಮುಖಂಡರುಗಳಾದ ವೀರಭದ್ರಪ್ಪ ನಾಯಕ. ಜೋಗದ ನಾರಾಯಣಪ್ಪ ನಾಯಕ ಸೇರಿದಂತೆ ತಾಲೂಕ ಬ್ರಾಹ್ಮಣ ಸಮಾಜದ ಭಾಂಧವರು. ವಿವಿಧ ಸಮಾಜದ ಮುಖಂಡರು ಯಾವುದೇ ಭೇದ ಭಾವ ಇಲ್ಲದೆ ಸರ್ವ ಜನಾಂಗದವರು ಪಾಲ್ಗೊಂಡಿದ್ದು ವಿಶೇಷವಾಗಿ ಕಂಡುಬಂದಿತು.

ರಾಜಬೀದಿಯ ಉದ್ದಕ್ಕೂ ಸತೀಶ್ ಗುರೂಜಿ ಅವರ ನೇತೃತ್ವದ ಶ್ರೀ ರಾಮನಗರ ಕಲ್ಗೂಡಿ ಹೇರೂರು ನವ ಬೃಂದಾವನ ಭಜನಾ ಮಂಡಳಿ, ಶಾರದಾ ಶಂಕರ ಭಜನಾ ಮಂಡಳಿ ಸೇರಿದಂತೆ ವಿವಿಧ ಭಜನಾ ಮಂಡಳಿ ಮಹಿಳೆಯರು ದಾರಿ ಉದ್ದಕ್ಕೂ ವಿಶೇಷ ಗಮನ ಸೆಳೆದರು. ಕೊಪ್ಪಳ ರಾಯಚೂರು ವಿಜಯನಗರ ಜಿಲ್ಲೆ ಗದಗ ಭಾಗಗಳಿಂದ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶ್ರೀಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ. ರಾಘವೇಂದ್ರ ಮೇಗೂ ರ್ ಸುದರ್ಶನ್ ಜೋಶಿ. ಆರ್ಯವೈಶ್ಯ ಸಮಾಜದ ಬಾಂಧವರು ಪಾಲ್ಗೊಂಡಿದ್ದರು .

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ ತು ಜೋರಾ, ಅಮತು ರೆಹಮಾನ್, ಸೋನುಶ್ರೀ ಎ.ಟಿ., ನಿರೀಕ್ಷಾ, ರೋಜಾ ಯು., ರಿತಿಕಾ ಐಲಿ ಮತ್ತು ಶಿವಾಂಶ್ ಕೌಟಿ ಇವರುಗಳು ಪಡೆದುಕೊಂಡಿರುತ್ತಾರೆ.

ಗಡಿನ್ ಹೆಚ್.ಡಿ., ಮೊಹಮ್ಮದ್ ಅಯಾನ್, ಕೃತಿಕಾ ಎಸ್.ಹೆಚ್., ಪ್ರಿಯಾಶ್ರೀ, ಸಾತ್ವಿಕಾ ಆರ್., ಸನಾತನಿ ಹಿರೇಮಠ, ಯಶೋಧರೆ ಧಾನಿ ಈ ಏಳು ವಿದ್ಯಾರ್ಥಿಗಳು ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಉಳಿದ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ನೋಬಲ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ ನೀಡಲಾಗಿದೆ.
ಈ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಸಹಕರಿಸಿದ ಪಾಲಕರಿಗೂ ಜೀನಿಯಸ್ ಅಬಾಕಸ್ ಸೆಂಟರ್‌ನ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಮತ್ತು ಆಡಳಿತಾಧಿಕಾರಿಯಾದ ಬಿ.ಎಸ್ ಪ್ರಕಾಶರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಗಂಗಾವತಿ: ನಗರದ ದುರ್ಗಮ್ಮ ದೇವಸ್ಥಾನದ ಹತ್ತಿರವಿರುವ ಶ್ರೀ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ನಿಜಶರಣ ಚೌಡಯ್ಯ ಶರಣರ ಜಯಂತಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು.

ಡಂಬದವೈರಿ ವೀರಗಣಾಚಾರಿ, ನಿಜದನಗಾರಿ, ಸಮಾಜದಲ್ಲಿ ಮೌಡ್ಯತೆಯ ವಿರುದ್ದ, ಅನಿಷ್ಠ ಪದ್ದತಿಗಳ ವಿರುದ್ದ, ಮೂಡನಂಬಿಕೆಗಳ ವಿರುದ್ಧ ನೇರವಾಗಿ ತಮ್ಮ ವಚನಾಮೃತದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಕಠೋರವಾಗಿ ನಿಷ್ಠುರವಾಗಿ ತನ್ನ ಹೆಸರಿನಲ್ಲಿಯೇ ವಚನಗಳನ್ನು ಬರೆದ ಏಕೈಕ ನಿಜಶರಣ ಅಂದರೆ ಅದು ಅಂಬಿಗರ ಚೌಡಯ್ಯನವರು ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ತಾಲೂಕ ಅಧ್ಯಕ್ಷರಾದ ಹನುಮೇಶ ಭಟಾರಿ ಹೇಳಿದರು.

ಮುಂದುವರೆದು ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ಶರಣರಲ್ಲಿ ಇವರು ಕೂಡ ಒಬ್ಬರಾಗಿ ಸಮನ್ವಯತೆ, ಸಹಬಾಳ್ವೆ, ಸಮಾನತೆ ವಿಷಯವಾಗಿ ನೇರವಾಗಿ ಪ್ರತಿಪಾದಿಸುತ್ತಿದ್ದರು. ಇಂತಹ ಒಬ್ಬ ನಾಡಿನ ಶ್ರೇಷ್ಠ ದಾರ್ಶನಿಕನ ೯೦೫ನೇ ಜಯಂತಿಯನ್ನು ಈ ದಿನ ನಾವು ಆಚರಿಸುತ್ತಿದ್ದೇವೆ. ಈ ಶರಣರ ಸಂಸ್ಕೃತಿಯನ್ನು ಉಳಿಸಿ, ಬೆಳೆಸೋಣ ಎಂದು ತಿಳಿಸಿದರು.
ಹಾಗೆಯೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ನೀಡುವ ರಾಜ್ಯಮಟ್ಟದ ಜೆ ನಾರಾಯಣಸ್ವಾಮಿ ಪ್ರಶಸ್ತಿಗೆ ಬಾಜನರಾದ ಗಂಗಾಮತ ಸಮಾಜದ ಪತ್ರಕರ್ತ ಚಂದ್ರಶೇಖರ್ ಮುಕ್ಕುಂದಿ ಇವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್.ಶ್ರೀನಾಥ, ನಗರಸಭೆಯ ಅಧ್ಯಕ್ಷ ಮೌಲಸಾಬ, ತಹಸಿಲ್ದಾರರಾದ ಯು. ನಾಗರಾಜ, ಮುಖಂಡರಾದ ನಾರಾಯಣಪ್ಪ ನಾಯಕ, ಸಮಾಜದ ಮುಖಂಡರಾದ ಮುಸ್ಟೂರು ರಾಜಶೇಖರಪ್ಪ, ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷರಾದ ಪರಶುರಾಮ ಮಡ್ಡೇರ್, ಬಿ. ಅಶೋಕ, ಅಂಬಿಗರ ಅಂಜಿನಪ್ಪ, ಬಿ. ರಾಜು, ಎಚ್.ವೈ. ಮನಗೂಳಿ, ಮಲ್ಲಿಕಾರ್ಜುನ ಮುಕ್ಕುಂದಿ, ಆನೆಗುಂದಿ ಭೋಗೇಶ್, ಮರಳಿ ನಿರುಪಾದಿ, ಹೊಸಳ್ಳಿ ಮರಿಯಪ್ಪ, ಮರಳಿ ಹೊನ್ನಪ್ಪ, ಕೋಟಿ ಮಹಾದೇವಪ್ಪ, ಸಿದ್ದು ಹೊಸಳ್ಳಿ, ಮಲ್ಲಾಪುರ ಎರಿಸ್ವಾಮಿ, ಭೈರೇಶ, ಹನುಮೇಶ, ಗೋಪಿ, ಮೋಹನ್, ರಾಜೇಂದ್ರ ಬಟಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

ಹಾವೇರಿ ಜಿಲ್ಲೆಯಲ್ಲಿ ಹರಿಯುವ ತುಂಗಭದ್ರ ನದಿಯ ದಂಡೆಯಲ್ಲಿ ಚೌಡದಾನಪುರದಲ್ಲಿ ಅಂಬಿಗರ ಚೌಡಯ್ಯ ಪೀಠ ಇದ್ದು, ಈ ಹಿಂದೆ ೨೦೧೭ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರು ೩೨ ಕೋಟಿಗಳಲ್ಲಿ ಕೂಡಲಸಂಗಮ ಮಾದರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಇವರ ಸಮಾಧಿಯನ್ನು ಜೀರ್ಣೋದ್ಧಾರ ಮಾಡುವುದಾಗಿ ಭರವಸೆಯನ್ನು ನೀಡಿದ್ದರು. ಆದರೆ ಆ ಭರವಸೆ ಇನ್ನು ಈಡೇರಿಲ್ಲ, ಹಾಗಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತೊಮ್ಮೆ ರಾಜ್ಯಕ್ಕೆ ಮುಖ್ಯಮಂತ್ರಿ ಆಗಿರುವುದರಿಂದ ಬಡ ಸಮಾಜದ ಒಳಿತಿಗಾಗಿ ಸಮಾಜದ ಬೇಡಿಕೆಯನ್ನು ಈಡೇರಿಸಬೇಕೆಂದು ಅವರಲ್ಲಿ ವಿನಂತಿಸುತ್ತೇನೆ.

ವಿಜಯನಗರ ವಿಜಯ ಮಹೋತ್ಸವ ವಿಶ್ವ ಶಾಂತಿ ಹೋಮ

ಗಂಗಾವತಿ: ಭಾರತ ಅಭ್ಯುತ್ತಾನ ಮಂಗಳ ಯಾತ್ರಾದ ಎಲ್ಲಾ ಸದಸ್ಯರಿಂದ ತಾಲೂಕಿನ ಆನೆಗುಂದಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಇದೇ ಕ್ರೋಧಿ ನಾಮ ಸಂವತ್ಸರದ ಪುಷ್ಯ ಮಾಸದ ಬುಧವಾರ ಅಂದರೆ ಜನವರಿ-೨೨ ಬುಧವಾರ ಬೆಳಿಗ್ಗೆ ೭ ರಿಂದ ಸಂಜೆ ೮ ರವರೆಗೆ ವಿಶ್ವ ಶಾಂತಿ ಹೋಮ ಹಾಗೂ ನರಸಿಂಹ ಹೋಮವನ್ನು ನೆರವೇರಿಸಲು ಗುರುಹಿರಿಯರ ಸಮ್ಮುಖದಲ್ಲಿ ನಿಶ್ಚಯಿಸಲಾಗಿದೆ.

ಎಲ್ಲರೂ ಬಂಧು ಬಾಂಧವರೊಂದಿಗೆ ಮತ್ತು ಸ್ನೇಹಿತರೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನರಸಿಂಹ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಹಾಗೂ ವಿಶ್ವ ಶಾಂತಿ ಹೋಮದ ಮೂಲಕ ಒಬ್ಬ ಜವಾಬ್ದರಿಯುತ ಪ್ರಜೆಯಾಗಿ ಜಗತ್ತಿಗೆ ಶಾಂತಿಯನ್ನು ಪಸರಿಸಲು ಸಹಕಾರ ನೀಡಬೇಕೆಂದು ಭಾರತ ಅಭ್ಯುತ್ತಾನದ ವತಿಯಿಂದ ಕೊರಲಾಗಿದೆ.
ಸದರಿ ದಿನದಂದು ಮದ್ಯಾಹ್ನ ೧ ರಿಂದ ಹಾಗೂ ಸಂಜೆ ೮ ರಿಂದ ಪ್ರಸಾದ ವಿನಿಯೋಗ ಇರುತ್ತದೆ.

ಶಂಕರ ಮಠದ ನವೀಕೃತ ಸಭಾಂಗಣದ ಉದ್ಘಾಟನೆ ಹಾಗೂ ಶೃಂಗೇರಿಯ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಯಶಸ್ವಿಗೆ ಪ್ರಾರ್ಥಿಸಿ ಗಣಪತಿ ಹೋಮ.

ಗಂಗಾವತಿ. ಶೃಂಗೇರಿ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಜನವರಿ-21 ಹಾಗೂ 22 ರಂದು ಜರುಗಲಿರುವ ವಿಜಯ ಯಾತ್ರೆ 2025 ರ ಯಶಸ್ವಿಗೆ ಪ್ರಾರ್ಥಿಸಿಕೊಂಡು ಸೋಮವಾರದಂದು ಪೂಜ್ಯರಿಂದ ಲೋಕಾರ್ಪಣೆಗೊಳ್ಳಲಿರುವ ನವೀಕರಿಸಿದ ಸಭಾಂಗಣದ ಆವರಣದಲ್ಲಿ ಪ್ರಥಮ ಪೂಜೆ, ವಿಘ್ನ ವಿನಾಶಕ ಗಣಪತಿ ಪೂಜೆ, ಹೋಮವನ್ನು ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡದವರು ಸಾಂಗತವಾಗಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿ ಕಿರಿಯ ಸ್ವಾಮೀಜಿಗಳು ವಿಜಯ ಯಾತ್ರೆಯ ಹಿನ್ನೆಲೆಯಲ್ಲಿ ಭಕ್ತ ಕೋಟಿ ಅನುಗ್ರಹಿಸಲು ನಗರಕ್ಕೆ ಆಗಮಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಹಾಗಣಪತಿ ಹೋಮದೊಂದಿಗೆ ಯಾವುದೇ ರೀತಿಯ ಸಂಕಷ್ಟಗಳು ಆಗಬಾರದು ಎಂಬ ಉದ್ದೇಶದಿಂದ ಈ ಹೋಮದಿಂದಲೇ  ಸದರಿ ದಿನಗಳಂದು ವಿಜಯ ಯಾತ್ರೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸಕಲ ಭಕ್ತಾದಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೇದಮೂರ್ತಿ ಮಹೇಶ್ ಭಟ್ಟ ಜೋಶಿ ಸೇರಿದಂತೆ ಶಂಕರ ಮಠದ ಹಿರಿಯ ಸದಸ್ಯರಾದ ರಾಘವೇಂದ್ರ ಅಳವಂಡಿಕರ್. ಬ್ರಾಹ್ಮಣ ಸಮಾಜದ ತಾಲೂಕ ಅಧ್ಯಕ್ಷ ರಾಘವೇಂದ್ರ ಮೇಗೂರು. ಜಗನ್ನಾಥ್ ರಾವ್ ಅಳವಂಡಿಕರ್. ಶ್ರೀನಿವಾಸ ಕರಮುಡಿ, ಸುದರ್ಶನ ವೈದ್ಯ, ಭೀಮಸೇನ್ ರಾವ್. ವೇಣು ಇತರರು ಉಪಸ್ಥಿತರಿದ್ದರು.

ಅಮೀತಕುಮಾರ ರೆಡ್ಡಿ ಅವರ ಸಂಶೋದನೆಗೆ ಬಳ್ಳಾರಿ ವಿ.ವಿ ಡಾಕ್ಟರೇಟ್

ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್‌ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ.

ಇವರ ಅಧ್ಯಯನಕ್ಕೆ ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೇಘರಾಜ ಬಿ. ರವರು ಮಾರ್ಗದರ್ಶನ ನೀಡಿದ್ದಾರೆ.

ಈ ಕುರಿತು ಅಮೀತಕುಮಾರ ರೆಡ್ಡಿ ಮಾತನಾಡಿ ನಾನು ಪ್ರಾಧ್ಯಾಪಕನಾಗಿ ಪಿಎಚ್.ಡಿ. ಪದವಿಯನ್ನು ಪಡೆಯುವ ಹಂಬಲದೊಂದಿಗೆ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಅಧ್ಯಯನವನ್ನು ಕೈಗೊಂಡು ಮುಂದಿನ ಪೀಳಿಗೆಗೆ ಅನುಕೂಲವಾಗುವ ಉದ್ದೇಶವನ್ನಿಟ್ಟುಕೊಂಡು ಪೂರೈಸಿರುತ್ತೇನೆ ಎಂದು ತಿಳಿಸಿದರು.

ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ ನಗರಕ್ಕೆ ಆಗಮನ: ನಾರಾಯಣರಾವ್ ವೈದ್ಯ

ಗಂಗಾವತಿ: ಸನಾತನ ಧರ್ಮದ ಪ್ರವರ್ತಕರಾದ ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಕರ್ನಾಟಕದ ಪ್ರಪ್ರಥಮ ಪೀಠವೆಂದಿನಿಸಿದ ಶೃಂಗೇರಿಯ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು ಈಗಾಗಲೇ ವಿಜಯಯಾತ್ರೆಯನ್ನು ಆರಂಭಿಸಿದ್ದು, ಜನವರಿ-೨೧ ರಂದು ಗಂಗಾವತಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಶೃಂಗೇರಿ ಶಂಕರಮಠದ ಧರ್ಮದರ್ಶಿ ನಾರಾಯಣ್ ರಾವ್ ವೈದ್ಯ ಹೇಳಿದರು.

ಅವರು ಶಂಕರಮಠದ ಕಾರ್ಯಾಲಯದಲ್ಲಿ ಪತ್ರಿಕಾ ವರದಿಗಾರರ ಹಾಗೂ ಮಾಧ್ಯಮದೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದಕ್ಕೂ ಪೂರ್ವದಲ್ಲಿ ಸುವರ್ಣ ಭಾರತಿ ಮಹೋತ್ಸವ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರ ವಿಜಯಯಾತ್ರೆಯ ಅಮಂತ್ರಣ ಪತ್ರಿಕೆಯನ್ನು ವೇದಿಕೆಯಲ್ಲಿನ ತಾಲೂಕ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಘವೇಂದ್ರ ಮೇಗುರ್, ಸುದರ್ಶನ್ ಜೋಶಿ, ತಿರುಮಲ್‌ರಾವ್ ಆಲಂಪಲ್ಲಿ, ಮುರಳೀಧರ ಕುಲಕರ್ಣಿ ಇತರರು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ನಾರಾಯಣರಾವ್ ವೈದ್ಯ ಅವರು ಜನವರಿ-೨೧ ಮಂಗಳವಾರದಂದು ಜುಲೈನಗರದಿಂದ ಮೋಟಾರ್ ಬೈಕ್ ರ‍್ಯಾಲಿ ಮೂಲಕ ಶ್ರೀಗಳನ್ನು ಸ್ವಾಗತಿಸಿ, ಶ್ರೀಗಳ ಪುರ ಪ್ರವೇಶ, ಪೂರ್ಣಕುಂಭ ಸ್ವಾಗತ, ವಾಲ್ಮೀಕಿ ವೃತ್ತದಿಂದ ಶುಭಾಯಾತ್ರೆಯ ಮೂಲಕ ಶಂಕರ ಮಠಕ್ಕೆ ಆಗಮನ, ನಂತರ ಧೂಳಿ ಪಾದಪೂಜೆ, ಜ್ಯೋತಿ ಬೆಳಗಿಸುವುದರ ಮೂಲಕ ನವೀಕೃತ ಸಭಾಂಗಣದ ಉದ್ಘಾಟನೆ ಮಾಡಲಿದ್ದು, ಶ್ರೀಗಳವರಿಗೆ ಫಲ ಸಮರ್ಪಣೆ ಹಾಗೂ ಶ್ರೀಗಳಿಂದ ಆಶೀರ್ವಚನ, ಶ್ರೀ ಚಂದ್ರಮೌಳೇಶ್ವರ ಪೂಜೆ ಪ್ರಸಾದ ವಿನಿಯೋಗ ಜರುಗಲಿದೆ.

ಜನವರಿ-೨೨ ಬುಧವಾರ ಶ್ರೀಮಠದ ರಕ್ಷಕರಿಂದ ಶ್ರೀ ಚಂದ್ರಮೌಳೇಶ್ವರಕ್ಕೆ ಪೂಜೆ, ಶ್ರೀಗಳ ದರ್ಶನ, ಭಕ್ತರಿಂದ ಪಾದಪೂಜೆ, ಭಿಕ್ಷಾ ವಂದನೆ, ಶ್ರೀಗಳಿಂದ ಅನುಗ್ರಹ ಸಂದೇಶ, ಆಶೀರ್ವಚನ, ತೀರ್ಥಪ್ರಸಾದ ವಿತರಣೆ ಹಾಗೂ ಫಲ ಮಂತ್ರಾಕ್ಷತೆಯೊಂದಿಗೆ ವಿಜಯಯಾತ್ರೆ ಸಂಪನ್ನಗೊಳ್ಳಲಿದೆ.

ಈ ಶುಭ ಸಂದರ್ಭದಲ್ಲಿ ಸರ್ವಸಮಾಜದ ಬಂಧುಗಳು, ಅಪಾರ ಸಂಖ್ಯೆಯ ಭಕ್ತಾದಿಗಳು ಈ ಎರಡೂ ದಿನದ ವಿಜಯ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಗಳ ಹಾಗೂ ಶ್ರೀ ಶಾರದಾದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಿಳಿಸಿದರು.