ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸಾಧಕರಿಗೆ ಸನ್ಮಾನ.

ಗಂಗಾವತಿ: ಇಂದು ಗಂಗಾವತಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅಲ್ಲಮಪ್ರಭು ಬೆಟ್ಟದೂರು ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಪ್ರಶಸ್ತಿ ಪಡೆದ ಡಾ|| ಚಂದ್ರಪ್ಪ ಇವರನ್ನು ಸನ್ಮಾನಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಲ್ಲಮಪ್ರಭು ಬೆಟ್ಟದೂರು ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡುತ್ತಾ ತಮ್ಮ ಬದುಕಿನ ಹಲವು ಘಟನೆಗಳನ್ನು ಹಂಚಿಕೊಳ್ಳುತ್ತ “ಕೊಪ್ಪಳ ಜಿಲ್ಲೆ ಮಾಡುವಾಗ ಎಲ್ಲರೂ ನಮ್ಮನ್ನು…

Read More

ಡಿಸೆಂಬರ್ 6 ರಂದು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನಾಚರಣೆ: ಶ್ರೀ ಕೊಟ್ಟೂರು ಮಹಾಸ್ವಾಮಿಗಳು.

ಗಂಗಾವತಿ. ನಗರದ ಅತ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾದ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪರ ದಿನಾಚರಣೆ ಡಿಸೆಂಬರ್ 6 ರಂದು ಶ್ರೀ ಕೊಟ್ಟೂರೇಶ್ವರ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 10:30 ಕ್ಕೆ ಜರುಗಲಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮಿಗಳು ಹೇಳಿದರು. ಅವರು ಮಂಗಳವಾರದಂದು. ಕಾಲೇಜಿನ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥೆಯ ಸಂಸ್ಥಾಪಕ ಚೇತನರಾದ ಲಿಂಗೈಕ್ಯ ಶ್ರೀ ಚನ್ನಬಸವ ಸ್ವಾಮಿಗಳು ಕಲ್ಮಠ ಇವರ ಸಂಸ್ಕಣೆಯಲ್ಲಿ ಎರಡನೇ ವರ್ಷದ…

Read More
ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಲೋಕಕಲ್ಯಾಣಾರ್ಥವಾಗಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ಆಚರಣೆ.

ಗಂಗಾವತಿ: ನಗರದ ಆನೆಗುಂದಿ ರಸ್ತೆಯ ಲಲಿತ್ ಮಹಲ್ ಹೋಟಲ್ ಎದುರಿನಲ್ಲಿರುವ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ರವಿವಾರ ಲೋಕಕಲ್ಯಾಣಾರ್ಥವಾಗಿ ದೇವಸ್ಥಾನದ ಸಕಲ ಭಕ್ತಾದಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ತಿಕೋತ್ಸವವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು ಎಂದು ಶ್ರೀ ತ್ರಯಂಬಕೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿಯಾದ ಆದಯ್ಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ ವಕೀಲರು ದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು, ಕರುಣಾಳು ಬಾ ಬೆಳಕೆ ಮುಸುಕಿದೆ ಮಬ್ಬಿನಲಿ ಎಂಬ ಹಾಡಿನ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಹೋಗುವ ಉದ್ದೇಶದಿಂದ ಇಂದು…

Read More

ಸೃಜನಾತ್ಮಕ ಸಿನಿಮಾಗಳ ಮುಲಕ ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮಟ್ಟಕ್ಕೆ ಪುಟ್ಟಣ್ಣ ಕಣಗಲ್ ಒಯ್ದಿದ್ದರು: ಕೆ.ನಿಂಗಜ್ಜ

ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಪುಟ್ಟಣ್ಣ ಕಣಗಲ್ ಜನ್ಮದಿನಾಚರಣೆ ಗಂಗಾವತಿ: ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರೆಯಲು ಮೇರು ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರು ಸಹ ಕಾರಣರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಹೇಳಿದರು. ಅವರು ಗಂಗಾವತಿಯ ಹೊಸಳ್ಳಿ ರಸ್ತೆಯಲ್ಲಿರುವ ಪರಶುರಾಮ ದೇವರ ಮನೆ ಕರೋಕೆ ಸ್ಟುಡಿಯೋದಲ್ಲಿ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಜನ್ಮ ದಿನಾಚರಣೆಯ ನಿಮಿತ್ಯ ಕೇಕ್ ಕತ್ತರಿಸಿ ಮಾತನಾಡಿದರು.‌ ಅವರು ನಿರ್ದೇಶಿಸಿದ ಕೆಲವೇ ಕೆಲವು…

Read More
ಶ್ರೀ ದತ್ತ ಜಯಂತಿ ಉತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ದತ್ತ ಜಯಂತಿ ಉತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಗಂಗಾವತಿ: ನಗರದ ಶಂಕರ ಮಠದಲ್ಲಿ. ೧೫ನೇ ವರ್ಷದ ಶ್ರೀ ದತ್ತಾತ್ರೇಯ ಜಯಂತೋತ್ಸವ ಪ್ರಯುಕ್ತ ಶನಿವಾರದಂದು ಪೂರ್ವಭಾವಿ ಸಭೆಯನ್ನು. ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಗನ್ನಾಥ ಅಳವಂಡಿಕರ್ ವಹಿಸಿ ಮಾತನಾಡಿ ತ್ರಿಮೂರ್ತಿ ಅವತಾರ ಶ್ರೀ ದತ್ತಾತ್ರೇಯ ಗುರುಗಳ ಜಯಂತೋತ್ಸವ ಡಿಸೆಂಬರ್ ೧೪ ಮತ್ತು ೧೫ರಂದು ಎರಡು ದಿನಗಳ ಕಾಲ ಸಂಭ್ರಮ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಗುತ್ತಿದ್ದು. ಇದಕ್ಕಾಗಿ ಹಲವು ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ವೇದಮೂರ್ತಿ ಮಹೇಶಭಟ್ಟ ಜೋಶಿ ಮಾತನಾಡಿ ಧಾರ್ಮಿಕ ಆಚರಣೆಯ ಜೊತೆಗೆ ಹಂಪಿಯ…

Read More
ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತುಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ: ಹನುಮಂತಪ್ಪ ಐಹೊಳೆ

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತುಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ: ಹನುಮಂತಪ್ಪ ಐಹೊಳೆ

ಗಂಗಾವತಿ: ರಾಜ್ಯದ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರುಗಳ ಕ್ಷೇಮಾಭಿವೃದ್ಧಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಿ, ಸರ್ಕಾರವು ಜಾರಿಗೊಳಿಸಿ ವಿವಿಧ ಯೋಜನೆಗಳ ಸೌಲಭ್ಯಗಳು ಕಾರ್ಮಿಕರುಗಳಿಗೆ ಮರಿಚಿಕೆಯಾಗಿವೆ ಎಂದು ಹೈದ್ರಾಬಾದ್ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಹೈದ್ರಾಬಾದ್-ಕರ್ನಾಟಕ ವಿಭಾಗದ ಅಧ್ಯಕ್ಷರಾದ ಹನುಮಂತಪ್ಪ ಐಹೊಳೆ ಕಳವಳ ವ್ಯಕ್ತಪಡಿಸಿದ್ದಾರೆ.ಅವರು ಶುಕ್ರವಾರ ಶಾಸಕರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯು ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣದ ಕುಟುಂಬಗಳ ಕ್ಷೇಮಾಭಿವೃದ್ಧಿಗಾಗಿ…

Read More