ಪ್ರಶಸ್ತಿಗಳು, ಪುರಸ್ಕೃತರ ಜವಾಬ್ದಾರಿಯನ್ನು ಹೆಚ್ಚಿಸಿ ಜಾಗೃತರನ್ನಾಗಿ ಮಾಡುತ್ತವೆ: ಜಗನ್ನಾಥ್ ಆಲಂಪಲ್ಲಿ

ಗಂಗಾವತಿ: ಪ್ರಶಸ್ತಿ ಹಾಗೂ ಪುರಸ್ಕಾರಗಳು ಪುರಸ್ಕೃತರ ಜವಾಬ್ದಾರಿಯನ್ನು ಹೆಚ್ಚಿಸಿ ಜಾಗೃತರನ್ನಾಗಿ ಮಾಡುತ್ತವೆ. ಆ ನಿಟ್ಟಿನಲ್ಲಿ  ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ ಇತರೆ ಸಂಘ-ಸಂಸ್ಥೆಗಳಿಂದ ಇದೇ ತಿಂಗಳು ಕೊನೆಯಲ್ಲಿ ನೀಡಲಾಗುವ ಶಿಕ್ಷಣ ತಜ್ಞ ಹೆಚ್ ನರಸಿಂಹಯ್ಯ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಲಿಟಲ್‌ ಹಾಟ್ಸ್‌ ಶಾಲೆಯ ಕಾರ್ಯದರ್ಶಿಯಾದ ಜಗನ್ನಾಥ ಆಲಂಪಲ್ಲಿ ಅಭಿಪ್ರಾಯಪಟ್ಟರು.

ಅವರು ಸ್ವಾಮಿ ವಿವೇಕಾನಂದ ಆಂಗ್ಲಭಾಧ್ಯಮ ಶಾಲೆಯಲ್ಲಿ ಶಾಲೆಯ ಮುಖ್ಯ ಗುರುಗಳು ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳಿಂದ ಅಭಿನಂದನೆ ಜೊತೆಗೆ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ ಇತರೆ ಸಂಘ-ಸಂಸ್ಥೆಗಳಿಂದ ಇದೇ ದಿನಾಂಕ 28 ರಿಂದ ಮೂರು ದಿನಗಳ ಕಾಲ ಯಾದಗಿರಿಯಲ್ಲಿ ಜರುಗಲಿರುವ ರಾಜ್ಯ ಮಟ್ಟದ ಬೃಹತ್ ಸಮಾವೇಶದಲ್ಲಿ ಶಿಕ್ಷಣ ತಜ್ಞ ಹೆಚ್ ನರಸಿಂಹಯ್ಯ ರಾಜ್ಯಮಟ್ಟದ ಪ್ರಶಸ್ತಿಗೆ ನಾನು ಆಯ್ಕೆಯಾಗಿರುವುದು ಒಂದು ಕಡೆ ಸಂತಸವಾದರೆ ಮತ್ತೊಂದು ಕಡೆ ನಾನು ಮತ್ತಷ್ಟು ಜವಾಬ್ದಾರಿ ಅನುಸರಿಸಬೇಕಾದ ಅವಶ್ಯಕತೆ ಇದೆ ಹೇಳಿದರು. ಪ್ರತಿಯೊಬ್ಬರು ನಿರ್ದಿಷ್ಟವಾದ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ನಡೆದಾಗ ಯಶಸ್ಸಿನ ದಾರಿ ಸುಲಭವಾಗಲಿದೆ ಎಂದು  ತಾವು ನಡೆದು ಬಂದ ದಾರಿಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶಾರುಣ್ ಕುಮಾರಿ, ಶಿಕ್ಷಕರಾದ ಅಪರ್ಣ, ಭುವನೇಶ್ವರಿ, ಸುನಿತಾ, ಶಾಂತ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡು ಸಂತಸ ಹಂಚಿಕೊಂಡರು. https://aratt.ai/@vishwaroopa_news_blog

ಹಿರಿಯ ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿಗೆ ಜೀ ಕನ್ನಡ ನ್ಯೂಸ್‌ನಿಂದ ವೀರ ಕನ್ನಡಿಗ ಅವಾರ್ಡ್

ಗಂಗಾವತಿ: ನಗರದ ಹಿರಿಯ ನ್ಯಾಯವಾದಿ, ವೀರಶೈವ ಸಮಾಜದ ಮುಖಂಡ ಸೋಮನಾಥ ಪಟ್ಟಣಶೆಟ್ಟಿ ಅವರಿಗೆ ಜೀ ಕನ್ನಡ ನ್ಯೂಜ್ ಅವರಿಂದ ವೀರ ಕನ್ನಡಿಗ ಅವಾರ್ಡ್ ಪ್ರದಾನ ಮಾಡಲಾಗಿದೆ. ಕನ್ನಡ ನಾಡು ನುಡಿ ಏಳ್ಗೆಗೆ ಶ್ರಮಿಸುತ್ತಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ ವಿವಿಧ ಜಿಲ್ಲೆಗಳಿಂದ ಗುರುತಿಸಿರುವ ಜೀ ಕನ್ನಡ ನ್ಯೂಜ್ ಅವರು ಪ್ರತಿ ವರ್ಷ ಈ ಅವಾರ್ಡ್ ನೀಡಲಾಗಿದೆ.

ಪ್ರಸಕ್ತ ೨೦೨೫ನೇ ಸಾಲಿನ ಈ ಅವಾರ್ಡ್ ಗೆ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನ್ಯಾಯವಾದಿ ಪಟ್ಟಣಶೆಟ್ಟಿ ಅವರಿಗೆ ನೀಡಲಾಗಿದೆ. ಕಳೆದ ೪೦ ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿರುವ ಸೋಮನಾಥ ಪಟ್ಟಣಶೆಟ್ಟಿ ಅವರು ಗಂಗಾವತಿಯ ಹಿರಿಯ ನ್ಯಾಯವಾದಿಯಾಗಿ, ವಿವಿಧ ಬ್ಯಾಂಕ್ ಮತ್ತು ಇನ್ಸೂರೆನ್ಸ್ ಕಂಪನಿಗಳಿಗೆ ಕಾನೂನು ಸಲಹೆಗಾರರಾಗಿದ್ದಾರೆ. ವಕೀಲ ವೃತ್ತಿಯ ಜೊತೆಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ವಕೀಲ ವೃತ್ತಿಗೆ ಮಾದರಿಯಾಗಿದ್ದಾರೆ. ಬಡವರಿಗೆ ಸರಕಾರಿ ಯೋಜನೆಗಳು ನೇರವಾಗಿ ತಲುಪಬೇಕು. ರಸ್ತೆ ಸುಧಾರಣೆ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳ ಅಭಿವೃದ್ಧಿಯಾಗಬೇಕೆಂಬ ಕಳಕಳಿ ಹೊಂದಿದ್ದಾರೆ. ಅವರ ಸೇವಾ ಮನೋಭಾವನೆ ಮತ್ತು ಕನ್ನಡದ ಕಳಕಳಿಯನ್ನು ಗುರುತಿಸಿ ಜೀ ನ್ಯೂಜ್ ಅವರು ಈ ಅವಾರ್ಡ್ ನೀಡಿದ್ದಾರೆ.

ಡಿ.೪ ರಂದು ಬೆಂಗಳೂರಿನ ಲಲಿತ್ ಅಶೋಕ ಹೊಟೇಲ್‌ನಲ್ಲಿ ಸಂಜೆ ೫.೦೦ ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ, ಸಚಿವರಾದ ಹೆಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಸೇರಿದಂತೆ ಬಿಜೆಪಿಯ ಚಲುವಾದಿ ನಾರಾಯಣಸ್ವಾಮಿ ಅವರ ಅಮೃತ ಹಸ್ತದಿಂದ ಈ ಅವಾರ್ಡ್ ನೀಡಿ ಅಭಿನಂದಿಸಲಾಗಿದೆ ಎಂದು ಜೀ ಕನ್ನಡ ನ್ಯೂಜ್ ನ ಸಂಪಾದಕ ರವಿ.ಎಸ್ ಅವರು ತಿಳಿಸಿದರು.

ಹಿರಿಯ ನಟಿಯಾದ ತಾರಾ ಅವರು ಮಾತನಾಡಿ, ಝೀ ಕನ್ನಡ ನ್ಯೂಸ್ ಅವರು ನಾಡಿನ ವಿವಿಧ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ವಿಶೇಷವಾದ ವೀರ ಕನ್ನಡಿಗ ಅವಾರ್ಡ್ ಪಡೆದ ಹಿರಿಯ ನ್ಯಾಯವಾದಿ ಸೋಮನಾಥ ಎಸ್ ಪಟ್ಟಣಶೆಟ್ಟಿ ಅವರಿಗೆ ಗಂಗಾವತಿಯ ಮುಖಂಡರು, ಸಾರ್ವಜನಿಕರು ಶುಭ ಹಾರೈಸಿದ್ದಾರೆ. https://aratt.ai/@vishwaroopa_news_blog

ಶಂಕರ ಮಠದಲ್ಲಿ ದತ್ತ ಜಯಂತಿ ಆಚರಣೆ ಜನ್ಮ ಸಾರ್ಥಕತೆಗೆ ಗುರುವಿನ ಅನುಗ್ರಹ ಅವಶ್ಯಕ: ನಾರಾಯಣರಾವ್ ವೈದ್ಯ.

ಗಂಗಾವತಿ: ಹರ ಮುನಿದರೂ ಗುರು ಕಾಯುವನಂತೆ ಎಂಬಂತೆ ಪ್ರತಿಯೊಬ್ಬ ವ್ಯಕ್ತಿಯ ಜೀವನ ಸಾರ್ಥಕತೆಗೆ ಗುರುಗಳ ಅನುಗ್ರಹ ಅತ್ಯವಶ್ಯವಾಗಿದೆ ಎಂದು ಶಂಕರಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.

ಅವರು ನಗರದ ಶಂಕರ ಮಠದ ಶಾರದಾ ಮಂದಿರದಲ್ಲಿ ಗುರುವಾರದಂದು ತ್ರಿಮೂರ್ತಿ ಅವತಾರಿಗಳಾದ ಶ್ರೀ ದತ್ತಾತ್ರೇಯ ಜಯಂತೋತ್ಸವ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಶ್ರೀಮಠದ ನಿರ್ಮಾಣಕ್ಕೆ ಪೂರ್ವದಲ್ಲಿ ಹಲವು ದಶಕಗಳಿಂದ ಶ್ರೀ ಶಂಕರಾಚಾರ್ಯ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಹಲವು ವೈವಿಧ್ಯಮಯವಾದ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಧರ್ಮಜಾಗೃತಿ ಹಾಗೂ ಸಮಾಜದ ಸಂಘಟನೆಗೆ ಗಮನಹರಿಸುತ್ತಾ ಬರಲಾಗಿದೆ.

ದಿವಂಗತ ಭೀಮಸೇನ್‌ರಾವ್ ಅಳವಂಡಿಕರ್ ಅವರ ಪರಿಶ್ರಮದಿಂದ ಹಾಗೂ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ವಜ್ರೋತ್ಸವ ಹಾಗೂ ವಿದುಶೇಖರ ಮಹಾಸ್ವಾಮಿಗಳ ಅನುಗ್ರಹದ ಮೇರೆಗೆ ಸರ್ವಜನಾಂಗದವರ ಸಹಕಾರದಿಂದ ನಗರದಲ್ಲಿ ಶೃಂಗೇರಿ ಪೀಠದ ಉಭಯ ಜಗದ್ಗುರುಗಳ ಅನುಗ್ರಹದಿಂದ ಶ್ರೀಮಠ ಸ್ಥಾಪಿಸಿ ಎಂಟು ವರ್ಷಗಳು ಪೂರೈಸಿದ್ದು, ಶ್ರೀಮಠದ ಎಲ್ಲಾ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಾಂಗತವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದತ್ತಾತ್ರೇಯ ಪಾದುಕೆಗಳಿಗೆ ಅಭಿಷೇಕ, ಅಷ್ಟೋತ್ತರ ಪಾರಾಯಣ, ಪಾಲಕಿ ಉತ್ಸವ, ತೊಟ್ಟಿಲು ಸೇವೆ ಕಾರ್ಯಕ್ರಮವನ್ನು ಮಹೇಶ್ ಭಟ್ ಜೋಷಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕ ಕುಮಾರ್ ಭಟ್ ಅವರು ನಡೆಸಿಕೊಟ್ಟ ಈ ಕಾರ್ಯಕ್ರಮವು ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಜಗನ್ನಾಥ್ ಅಳವಂಡಿಕರ್, ಬಾಲಕೃಷ್ಣ ದೇಸಾಯಿ, ಶೇಷಗಿರಿ ಗಡಾದ್, ಶ್ರೀನಿವಾಸ ಕರಮುಡಿ, ಭೀಮಾಶಂಕರ್ ಹೊಸಳ್ಳಿ, ನಾಗೇಶ್, ಅನಿಲ್ ಭಟ್, ಕಾಶಿನಾಥ್ ಭಟ್ ಜೋಶಿ ಸೇರಿದಂತೆ ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. https://aratt.ai/@vishwaroopa_news_blog

ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಗಂಗಾವತಿಯ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ

ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಈ ವಿದ್ಯಾರ್ಥಿನಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. https://aratt.ai/@vishwaroopa_news_blog

ಯಶಸ್ವಿಯಾಗಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ

ಗಂಗಾವತಿ: ಡಿಸೆಂಬರ್-೩ ಬುಧವಾರ ವಿಶ್ವವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಜಿಲ್ಲೆಯ ಸಂಘ ಸಂಸ್ಥೆಗಳು ಹಾಗೂ ಸರ್ಕಾರದ ಸಂಯುಕ್ತಾಶ್ರಯದಲ್ಲಿ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಿತು.

ವಿಶ್ವವಿಕಲಚೇತನರ ದಿನಾಚರಣೆ ನಿಮಿತ್ಯ ವಿವಿಧ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಸ್ಪರ್ಧೆಗಳಲ್ಲಿ ಲಯನ್ಸ್ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ೩೦ ವಿದ್ಯಾರ್ಥಿಗಳು ಭಾಗವಹಿಸಿ, ಕಿರಿಯರು ಹಾಗೂ ಹಿರಿಯರ ವಿಭಾಗ (೮-೧೧, ೧೨-೧೫ ಮತ್ತು ೧೬ ರಿಂದ ೨೧ ವರ್ಷ ಹಾಗೂ ೨೧ ವರ್ಷ ಮೇಲ್ಪಟ್ಟವರ ಕ್ರೀಡಾ ಸ್ಪರ್ಧೆಗಳಲಾದ ೨೫ ಮಿ, ೫೦ ಮಿ, ಮತ್ತು ೧೦೦ ಮಿ. ಓಟ, ಬಕೆಟ್‌ನಲ್ಲಿ ಚಂಡು ಹಾಕುವುದು, ಸಾಫ್ಟ್ ಬಾಲ್ ಥ್ರೋ, ಹಾಗೂ ಗುಂಡು ಎಸೆತಗಳಲ್ಲಿ ೧೦ ಪ್ರಥಮ ಹಾಗೂ ೧೦ ದ್ವಿತಿಯ ಬಹುಮಾನ ಪಡೆದು ಸಂಸ್ಥೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.

ಲಯನ್ಸ್ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲಾ ಮುಖ್ಯಗುರುಗಳಾದ ಪ್ರಭು ಹಿರೇಮಠ, ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರರು ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿಕಲಚೇತನರು ಹಾಗೂ ಶಾಲಾ ಸಿಬ್ಬಂದಿ ಎಲ್ಲರ ಸಹಕಾರದಿಂದ ವಿಶ್ವ ವಿಕಲಚೇತನರ ದಿನಾಚರಣೆ ಯಶಸ್ವಿಯಾಗಿದ್ದು, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾ ಡಾ|| ಜಿ.ಚಂದ್ರಪ್ಪರವರು ಹರ್ಷ ವ್ಯಕ್ತಪಡಿಸಿದ್ದಾರೆ. https://aratt.ai/@vishwaroopa_news_blog

ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎ.ಐ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ದಕ ಸಂಘದ ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನವೆಂಬರ್-೨೨ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ AI ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ (ರಿ) ದ ಶಾಶ್ವತ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕೊಟ್ಟೂರು ಮಹಾಸ್ವಾಮಿಗಳು ಉದ್ಘಾಟಿಸಿದರು. ಸ್ವಾಮೀಜಿಗಳು ವಿದ್ಯಾರ್ಥಿಗಳ ನೈತಿಕತೆ, ಶಿಸ್ತಿನ ಮಹತ್ವ ಮತ್ತು ಗುಣಮಟ್ಟಾಧಾರಿತ ಶಿಕ್ಷಣದ ಅಗತ್ಯತೆಯ ಬಗ್ಗೆ ತಮ್ಮ ಆಶಯ ಭರಿತ ಆಶೀರ್ವಚನವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶರಣಬಸವಯ್ಯ ವಹಿಸಿ, ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ, AI  ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ ಶರಣೆಗೌಡ ಜಿ. ಮಾಲಿಪಾಟೀಲ್ ಭಾಗವಹಿಸಿ ವಿದ್ಯಾರ್ಥಿಗಳು ಹೊಸ ಯುಗದಲ್ಲಿ ಸ್ಪರ್ಧಾತ್ಮಕ ಕೌಶಲ್ಯಗಳನ್ನು ಹೊಂದಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗಂಗಾವತಿಯ ಎಂ.ಡಿ. ನಾಸಿರುದ್ದೀನ್ ಭಾಗವಹಿಸಿ, ಶಿಕ್ಷಣದಲ್ಲಿ ಗುಣಮಟ್ಟದ ಭೂಮಿಕೆ, ಹೊಸ ಶೈಕ್ಷಣಿಕ ಅವಶ್ಯಕತೆಗಳು, ವಾಣಿಜ್ಯದಲ್ಲಿ ಎ.ಐ ತಂತ್ರಜ್ಞಾನದ ಕುರಿತು ಮತ್ತು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಕುರಿತು ಉಪಯುಕ್ತ ಹಾಗೂ ಪ್ರೇರಣದಾಯಕ ಉಪನ್ಯಾಸವನ್ನು ನೀಡಿದರು.

ಐ.ಕ್ಯೂ.ಎ.ಸಿ ಸಂಯೋಜಕರು ಹಾಗೂ ವಾಣಿಜ್ಯಶಾಸ್ತçದ ಉಪನ್ಯಾಸಕರಾದ ದಾದಾ ಕಲಂದರ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದರು.
ಇದೇ ಸಂದರ್ಭದಲ್ಲಿ ಎಂಕಾಂ ವಿಭಾಗದ ಸಂಯೋಜಕರು ಹಾಗೂ ಹಿರಿಯ ಉಪನ್ಯಾಸಕರಾದ ಸೋಮನಗೌಡ ಎಸ್.ಕೆ. ಅವರು ತಮ್ಮ ಮಾತಿನಲ್ಲಿ ವಿಭಾಗದ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಯಲಕ್ಷ್ಮೀ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ವರ್ಗ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. https://aratt.ai/@vishwaroopa_news_blog

ನಿರ್ಮಲ ತುಂಗಭದ್ರಾ ಅಭಿಯಾನದ ೩ನೇ ಹಂತದ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್‌ಗಳ ಅನಾವರಣ ಕಾರ್ಯಕ್ರಮ.

ಗಂಗಾವತಿ: ಆನೆಗುಂದಿಯ ನವಬೃಂದಾವನದಲ್ಲಿ ನವೆಂಬರ್-೧೮ ರಂದು ಶ್ರೀ ಪದ್ಮನಾಭತೀರ್ಥರ ಆರಾಧನಾ ಮಹೋತ್ಸವದ ಸಮಾರಂಭದಲ್ಲಿ ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಸುಬುಧೇಂದ್ರತೀರ್ಥರು ಹಾಗೂ ಆರ್ಯ ಅಕ್ಷೋಭ್ಯತೀರ್ಥ ಸಂಸ್ಥಾನ ಬಾಳಗಾರು ಮಠದ ಪೀಠಾಧಿಪತಿಗಳಾದ ಶ್ರೀಅಕ್ಷೋಭ್ಯ ರಾಮಪ್ರಿಯ ತೀರ್ಥರು ಮತ್ತು ಮುಳಬಾಗಿಲು ಶ್ರೀಪಾದರಾಜಮಠದ ಪೀಠಾಧಿಪತಿಗಳಾದ ಶ್ರೀ ಸುಜಯನಿಧಿತೀರ್ಥರು ಅಮೃತ ಹಸ್ತದಿಂದ ಡಿಸೆಂಬರ್‌ನಲ್ಲಿ ಕಿಷ್ಕಿಂದೆಯಿಂದ ಮಂತ್ರಾಲಯದವರೆಗೆ ನಡೆಯುವ ೩ನೇ ಹಂತದ ನಿರ್ಮಲ ತುಂಗಭದ್ರ ಅಭಿಯಾನದ ಜಲ ಜಾಗೃತಿ ಮತ್ತು ಜನ ಜಾಗೃತಿ ಪಾದಯಾತ್ರೆಯ ಕರಪತ್ರ, ಪೋಸ್ಟರ್ ಮತ್ತು ಬಟ್ಟೆ ಬ್ಯಾನರ್‌ಗಳನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಂತ್ರಾಲಯ ಶ್ರೀಗಳು “ನಿರ್ಮಲ ತುಂಗಭದ್ರಾ ಅಭಿಯಾನ ಅತ್ಯಂತ ಉಪಯುಕ್ತ ಮತ್ತು ಮಹತ್ತರ ಕಾರ್ಯ. ಜಲಜಾಗೃತಿಯ ಈ ಪಾದಯಾತ್ರೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಎಲ್ಲರೂ ಪಾದಯಾತ್ರೆಯಲ್ಲಿ ಪಾಲ್ಗೊಂಡು ನದಿಗಳ ಉಳಿವಿಗೆ ಶ್ರಮಿಸಬೇಕು” ಎಂದರು.
ಮೂರು ಜನ ಪೀಠಾಧಿಪತಿಗಳಿಂದ ಪುಣ್ಯಕ್ಷೇತ್ರ ನವ ಬೃಂದಾವನದಲ್ಲಿ ಪಾದಯಾತ್ರೆಯ ಕರಪತ್ರ, ಪೋಸ್ಟರ್‌ಗಳನ್ನು ಬಿಡುಗಡೆಯಾಗಿದ್ದಕ್ಕೆ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಬಸವರಾಜ ಪಾಟೀಲ್ ವೀರಾಪೂರ್, ಪ್ರಮುಖರಾದ ಮಾಧವನ್ ಬೆಂಗಳೂರು, ಬಾಲಕೃಷ್ಣ ನಾಯ್ಡು, ಲೋಕೇಶ್ವರಪ್ಪ ಶಿವಮೊಗ್ಗ, ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು, ಸಂತೋಷ ಕೆಲೋಜಿ, ಗುಂಡೂರು ಪವನಕುಮಾರ್ ಹಾಗೂ ಸಂಚಾಲಕರಾದ ಡಾ|| ಶಿವಕುಮಾರ್ ಮಾಲಿಪಾಟೀಲ, ವಿಷು ತೀರ್ಥ ಜೋಶಿ, ನಾಗರಾಜ ಎಸ್. ಗುತ್ತೇದಾರ ವಕೀಲರು, ಮಂಜುನಾಥ, ಜಗನ್ನಾಥ್ ಅಲ್ಲಂಪಲ್ಲಿ, ಸರ್ವೇಶ ವಸ್ತ್ರದ್ ಶಿರಿಗೇರಿ, ಮಂಜುನಾಥ ಕಟ್ಟಿಮನಿ, ಅರ್ಜನ್ ಆರ್, ರಾಘವೇಂದ್ರ ತೂನಾ, ಅಲೆಮಾರಿ ಕೃಷ್ಣ ಇತರರು ಸಂತಸ ವ್ಯಕ್ತಪಡಿಸಿದ್ದಾರೆ. https://aratt.ai/@vishwaroopa_news_blog

ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪೋತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ: ನಾರಾಯಣರಾವ್ ವೈದ್ಯ.

ಗಂಗಾವತಿ: ಮನದ ಅಂಧಕಾರವನ್ನು ತೊಡೆದುಹಾಕುವಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ಮಹತ್ವದಾಯಕವಾಗಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.

ಅವರು ಶುಕ್ರವಾರದಂದು ಶ್ರೀ ಶಾರದಾಂಬ ದೇಗುಲದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕತ್ತಲು ಎಂಬುವುದು ಅಜ್ಞಾನದ ಸಂಕೇತವಾಗಿತ್ತು. ಅಂತಹ ಅಜ್ಞಾನವನ್ನು ದೀಪ ಹಚ್ಚುವುದರ ಮೂಲಕ ಬೆಳಕು ನೀಡುವ ಕಾರ್ಯ ಕಾರ್ತಿಕೋತ್ಸವದ ಉದ್ದೇಶವಾಗಿದೆ. ಕಳೆದ ೮ ವರ್ಷಗಳಿಂದ ಶೃಂಗೇರಿಯ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ವಿವಿಧ ಸಮಾಜದ ಹಾಗೂ ವಿವಿಧ ಭಜನಾ ಮಂಡಳಿಗಳ ಮಹಿಳೆಯರಿಂದ ಶಂಕರ ಮಠದಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತ ಬರಲಾಗಿದೆ. ಪ್ರಸ್ತುತ ದಿನಗಳಲ್ಲಿ ಜೀವನದ ಮೌಲ್ಯ ಕುಸಿಯುತ್ತಿದೆ, ಪ್ರೀತಿ ವಿಶ್ವಾಸ, ನಾವು ನಮ್ಮವರು ಎಂಬ ಭಾವನೆ ಬೆಳೆಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಧಾರ್ಮಿಕ ಆಚರಣೆಯ ಮೂಲಕ, ಗುಣಮಟ್ಟದ ಸಂಸ್ಕಾರ ಬೆಳೆಸಿಕೊಳ್ಳುವುದರ ಮೂಲಕ ಭಾರತದ ಭವ್ಯ ಪರಂಪರೆ ಸಂಸ್ಕೃತಿ ಉಳಿಸಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಧಾರ್ಮಿಕ ಸಮಾರಂಭದ ನೇತೃತ್ವವನ್ನು ವಹಿಸಿದ ಭೀಮಭಟ್ ಬಸಾಪಟ್ಟಣ ಮಾತನಾಡಿ ಕಾರ್ತಿಕ ಮಾಸದ ದೀಪೋತ್ಸವಕ್ಕೆ ಸಂಪ್ರದಾಯ ಸೇರಿದಂತೆ ವೈಜ್ಞಾನಿಕ ಹಿನ್ನೆಲೆ ಇದೆ. ಕಾರ್ತಿಕ ಮಾಸ ಕತ್ತಲೆಯಿಂದ ಕೂಡಿದ್ದು ಪ್ರಕೃತಿ ದತ್ತವಾದ ಚಳಿ ಹೊಂದಿದೆ. ಮನುಷ್ಯನಲ್ಲಿ ಇರುವ ಅಜ್ಞಾನ ಅಂಧಕಾರವನ್ನು ಹೊಡೆದೋಡಿಸಿ ಸುಜ್ಞಾನದ ಬೆಳಕನ್ನು ಶ್ರೀ ಶಾರದಾಂಬೆ ದೇವಿಗೆ ಸಮರ್ಪಿಸುವ ಸಂಕಲ್ಪ ಹೊಂದಲಾಗಿದೆ ಎಂದು ಆಚರಣೆಯ ಸಮಗ್ರ ಮಾಹಿತಿಯನ್ನು ಹೇಳಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ಅಳವಂಡಿಕರ್ ದಂಪತಿಗಳು ಸೇರಿದಂತೆ ಶಾರದಾ ಶಂಕರ ಭಕ್ತ ಮಂಡಳಿ, ಇತರರು ಏಕಕಾಲಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಮಹಾಸಂಕಲ್ಪ ಭಜನೆ ಮಹಾ ಮಂಗಳಾರತಿ, ಮತ್ತಿತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭದಲ್ಲಿ ಭೀಮಶಂಕರ್ ಹೊಸಳ್ಳಿ, ಶೇಷಗಿರಿ ಗಡಾದ್, ವೇಣುಗೋಪಾಲ್ ಶ್ರೀಧರ್, ನಾಗೇಶ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಯುವಕರು ಮಹಿಳೆಯರು ಮಕ್ಕಳು ದೀಪೋತ್ಸವ ಬೆಳಗಿ ಸಂಭ್ರಮಿಸಿದರು. https://aratt.ai/@vishwaroopa_news_blog

ಗಂಗಾವತಿಯ ಕಲ್ಯಾಣಂ ನಾಗರಾಜ್ ಅವರಿಗೆ ಸಂತ ಶ್ರೀ ಕನಕದಾಸರ ಕಾವ್ಯರತ್ನ ರಾಷ್ಟ್ರೀಯ ಪ್ರಶಸ್ತಿ ಹಾಗೂ ಧಾರವಾಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಗಂಗಾವತಿ: ಗದುಗಿನ ಡಾ. ವ್ಹಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ನವೆಂಬರ್-೦೨ ರಂದು ಗದುಗಿನ ಕೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ೭೦ನೇ ಕನ್ನಡ ರಾಜ್ಯೋತ್ಸವ ಹಾಗೂ ಡಾ. ವ್ಹಿ.ಬಿ ಹಿರೇಮಠರ ೧೩ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿದ್ದ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿಯ ಶಾಂತಲಿಂಗ ಮಹಾಸ್ವಾಮಿಗಳು ಹಾಗೂ ವಿಶ್ವನಾಥ ಮಹಾಸ್ವಾಮಿಗಳ ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ವ್ಹಿ.ಬಿ ಹಿರೇಮಠ ಅವರುಗಳ ಅಭಯ ಹಸ್ತದಿಂದ ಗಂಗಾವತಿಯ ಹಗಲುವೇಷ ಕಲಾವಿದ ಕಲ್ಯಾಣಂ ನಾಗರಾಜ ಅವರಿಗೆ ಸಂತ ಶ್ರೀ ಕನಕದಾಸರ ಕಾವ್ಯರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅದೇರೀತಿ ನವೆಂಬರ್-೯ ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುವತಿಯಿಂದ ಹಮ್ಮಿಕೊಂಡ ಕನ್ನಡಿಗರ ಕನ್ನಡ ರಾಜ್ಯೋತ್ಸವ ಹಾಗೂ ಕನಕೋತ್ಸವ ಕಾರ್ಯಕ್ರಮದಲ್ಲಿಯೂ ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಬೆಳಗಾವಿಯ ಹಿರಿಯ ನ್ಯಾಯವಾದಿಗಗಳಾದ ಬಸವರಾಜ ಸಿ. ಯರಗಣವಿ, ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಅಕ್ಷರದೀಪ ಫೌಂಡೇಷನ್ ಅಧ್ಯಕ್ಷರಾದ ಪ್ರವೀಣಕುಮಾರ ಕನ್ಯಾಳ, ಶಿಕ್ಷಕರು ಹಾಗೂ ಸಾಹಿತಿಗಳಾದ ಗಣಪತಿ ಹೆಗಡೆ ಅವರುಗಳ ಅಮೃತ ಹಸ್ತದಿಂದ ಕಲ್ಯಾಣಂ ನಾಗರಾಜ್ ಅವರಿಗೆ ಧಾರವಾಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಹೀಗೆ ಹುಟ್ಟಿಂದಿನಿಂದಲೇ ಹಗಲುವೇಷ ಕಲೆಯನ್ನು ರೂಢಿಸಿಕೊಂಡು ಬಂದ ಕಲ್ಯಾಣಂ ನಾಗರಾಜ ಅವರು ಹಗಲುವೇಷ ಧರಿಸಿ ಸರ್ಕಾರದ ವಿವಿಧ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಮಾಯಣ ಮತ್ತು ಮಹಾಭಾರತಗಳಲ್ಲಿ ಬರುವ ಸುಮಾರು ೩೨ ಪಾತ್ರಧಾರಿ ವೇಷಗಳನ್ನು ಧರಿಸಿ ಅಭಿನಯಿಸುವುದರೊಂದಿಗೆ ಹಾರ್ಮೋನಿಯಂ, ತಬಲಾ ನುಡಿಸುವುದು ಸೇರಿದಂತೆ ಗಾಯನದೊಂದಿಗೆ ತಮ್ಮ ಕಲೆಯನ್ನು ಕನ್ನಡ ನಾಡಿನಲ್ಲಿ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲಿಯೂ ಪ್ರದರ್ಶಿಸಿ ಜನಮನ್ನಣೆ ಗಳಿಸಿದ್ದು, ಸರ್ಕಾರದಿಂದ ಹಾಗೂ ಸರ್ಕಾರೇತರ ಸಂಸ್ಥೆಗಳಿ೦ದ ಸಾಕಷ್ಟು ಪ್ರಶಸ್ತಿ ಹಾಗೂ ಸನ್ಮಾನಗಳನ್ನು ಪಡೆದಿರುತ್ತಾರೆ.

ಇಂತಹ ಬಹುಮುಖಿ ಪ್ರತಿಭೆ ಹೊಂದಿದ ಕಲಾವಿದರಿಗೆ ಕರ್ನಾಟಕ ಸರ್ಕಾರ ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಿಲ್ಲ. ಮುಂದಿನ ದಿನಗಳಲ್ಲಿಯಾದರೂ ಸರ್ಕಾರ ಇವರ ಪ್ರತಿಭೆಯನ್ನು ಗುರುತಿಸಿ ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿ ಪ್ರೋತ್ಸಾಹಿಸಬೇಕಿದೆ.

https://aratt.ai/@vishwaroopa_news_blog

ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ: ನವೆಂಬರ್-೮ ಶನಿವಾರ ಸಂಜೆ ೫:೦೦ ಗಂಟೆಗೆ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ಭಜನಾ ಮಂಡಳಿಯ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು ಎಂದು ಪರಮ ಪೂಜ್ಯ ಶ್ರೀ ಶರಣಬಸವ ದೇವರು ಪ್ರಕಟಣೆಯಲ್ಲಿ ತಿಳಿಸಿದರು.

ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮಹಿಳೆಯರಿ ಗೋಸ್ಕರ ವಿಶೇಷವಾಗಿ ಈ ಒಂದು ವೇದಿಕೆ ಸ್ಥಾಪನೆಯಾಗಿದ್ದು ಅದಕ್ಕಾಗಿ ಗಂಗಾವತಿಯ ಎಲ್ಲಾ ಮಹಿಳೆಯರು ಆಧ್ಯಾತ್ಮಿಕವಾಗಿ ಈ ಒಂದು ಭಜನಾ ಮಂಡಳಿಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಆಶೀರ್ವಾದ ರೂಪವಾಗಿ ಹೇಳಿದರು.

ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಯುತ ಶ್ರೀಕಂಠ ಚೌಕಿಮಠ ಇವರು ಅಂತರ್ಜಾಲದ ಮೂಲಕ ಭಜನಾ ಮಂಡಳಿಯ ಸ್ಥಾಪನೆಯ ಎಲ್ಲಾ ನಿಯಮಾವಳಿಗಳ ಬಗ್ಗೆ ಸವಿಸ್ತಾರವಾಗಿ ನಿರೂಪಿಸಿದರು.

ಉಪನ್ಯಾಸಕಿಯಾದ ಶ್ರೀಮತಿ ಅರ್ಚನಾ ಹಿರೇಮಠ ಇವರು ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಧಾರವಾಹಿಗಳಿಗೆ ಅವಲಂಬನೆಯಾಗಿದ್ದು ಅದಕ್ಕಾಗಿ ಆಧ್ಯಾತ್ಮಿಕವಾಗಿ ಹೊರಬರಲು ಈ ಒಂದು ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಮಾಜಿ ಕಾಡಾ ಅಧ್ಯಕ್ಷರಾದ ಶ್ರೀಯುತ ತಿಪ್ಪೇರುದ್ರ ಸ್ವಾಮಿರವರು ಮಹಿಳೆಯರು ಈ ಒಂದು ಭಜನಾ ಮಂಡಳಿಯನ್ನು ಮುನ್ನಡೆಸಿಕೊಂಡು ಹೋಗಲು ಹಾಗೂ ಮುಂದಿನ ದಿನಮಾನಗಳಲ್ಲಿ ಎಲ್ಲಾ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಧ್ಯಾತ್ಮಿಕವಾಗಿ ಈ ಒಂದು ಭಜನಾ ಮಂಡಳಿಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. https://aratt.ai/@vishwaroopa_news_blog