ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಿಂದ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 14 ದಿನಗಳ ಸಾಫ್ಟ್ ಟಾಯ್ಸ್ (ಮೃದು ಆಟಿಕೆಗಳು) ತರಬೇತಿ ಹಾಗೂ 38 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ 23 ರಂದು ಸಂದರ್ಶನ ನಡೆಯಲಿದ್ದು, ಅ.24 ರಂದು ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಸಕ್ತರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್‌ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್, ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದಲ್ಲಿ ೫೧ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಣೆ.

ಗಂಗಾವತಿ: ಅಕ್ಟೋಬರ್-೧೨ ರಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ವಿವೇಕ ಭಾರತಿ ಶಾಲೆ ಆವರಣದಲ್ಲಿ ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದ ಅಂಗವಾಗಿ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ಪರೀಕ್ಷೆ ಮತ್ತು ಮಕ್ಕಳಿಗೆ ಸಸಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಪರಿವೀಕ್ಷಕರಾಗಿ ಅಬ್ದುಲ್ ರಜಾಕ್ ಸಿಂಧನೂರ್ ರವರು ಆಗಮಸಿದ್ದರು ಹಾಗೂ ೫೧ ಕರಾಟೆ ವಿದ್ಯಾರ್ಥಿಗಳು ಬೆಲ್ಟ್ ಪರೀಕ್ಷೆಯಲ್ಲಿ ಭಾಗವಹಿಸಿದ್ದರು ಮತ್ತು ಪ್ರಿಯಾ ಮತ್ತು ಪ್ರಣವಿ ವಿದ್ಯಾರ್ಥಿಗಳು ಡಬಲ್ ಪ್ರಮೋಶನ್ ಪಡೆದುಕೊಂಡರು.

ಕರಾಟೆಯ ಮುಖ್ಯ ತರಬೇತಿರಾದ ಮಂಜುನಾಥ ರಾಠೋಡ್ ಮಾತನಾಡಿ ಮಕ್ಕಳಿಗಿರುವ ಧೈರ್ಯ. ಪ್ರತಿಭೆ. ಸಾಹಸ ಪ್ರದರ್ಶನ ಮತ್ತು ಇನ್ನಿತರ ಐಚ್ಛಿಕ ಕಲಿಕೆ ಮಕ್ಕಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಜೊತೆಗೆ ಆತ್ಮ ರಕ್ಷಣಾ ಕಲೆ ಎಲ್ಲರಿಗೂ ಬಹು ಮುಖ್ಯವಾಗಿದೆ ಎಂದು ಹೇಳಿದ್ದರು. ಕರಾಟೆ ತರಬೇತಿದಾರಾದ ಫಯಾಜ್, ಮೀನಾಕ್ಷಿ, ಪ್ರಜ್ವಲ್ ಮತ್ತು ವಿವೇಕ ಭಾರತಿ ಶಾಲೆ ಅಧ್ಯಕ್ಷರಾದ ಅಶೋಕ್ ಮತ್ತು ಕರಾಟೆ ಪಾಲಕರಾದ ಮಂಜುನಾಥ್, ಶ್ರೀಮತಿ ಲಕ್ಷಿö್ಮ, ಶ್ರೀಮತಿ ಶ್ರೀಕುಮಾರಿ, ಡಾ|| ಕಿರಣ್ ಕುಮಾರ್, ಮಂಜುನಾಥ್ ವಕೀಲರು, ಪಲ್ಲವಿ, ವಲಿಭಾಷಾ, ಭೀಮರಾಯ ಮುಂತಾದವರು ಉಪಸ್ಥಿತರಿದ್ದರು.

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ ಭಾರತಿ ಸ್ವಾಮಿಗಳು ಸಾಧಕಾಶ್ರಮ ಗೊಂದಿಮಠ ಅವರ ನೇತೃತ್ವದಲ್ಲಿ ಕಳೆದ 38 ವರ್ಷಗಳಿಂದ ಶ್ರೀ ಪಾಂಡುರಂಗ ಪಂಡರಾಪುರಕ್ಕೆ ಪಾದಯಾತ್ರೆಯನ್ನು ಇಂದಿಗೂ ನಾವು ಮುಂದುವರಿಸಿಕೊಂಡು ಬಂದಿದ್ದೇವೆ. ಪಾದಯಾತ್ರೆ ಉದ್ದೇಶ ದುಷ್ಟ ಚಟಗಳಿಂದ ದೂರ ಮಾಡುವುದು. ಗೋಂದಿಮಠ ಎಂದರೆ ಜೀವನದ ಜಂಜಾಟದಲ್ಲಿ ಜೊತೆಗೆ ಗೊಂದಲವಿಲ್ಲದ ಜೀವನ ನಡೆಸುವುದಕ್ಕೆ ಆಶ್ರಯ ನೀಡುವಂತ ಮಠ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವ ಬೃಂದಾವನ ಭಜನಾ ಮಂಡಳಿಯ ಅಧ್ಯಕ್ಷರಾದ ದರೋಜಿ ನರಸಿಂಹ ಶ್ರೇಷ್ಠಿ ಮತ್ತು ಭಜನಾ ಮಂಡಳಿಯ ಸದಸ್ಯರು, ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರುಕ್ಮಿಣಿಮ್ಮ. ಶ್ರೀಮತಿ ಪದ್ಮಾವತಿ, ಶ್ರೀಮತಿ ರಾಧಿಕಾ ಮತ್ತು ಸದಸ್ಯರು, ವಾಸವಿ ಯುವಜನ ಸಂಘದ ಅಧ್ಯಕ್ಷ ಮಂಜುನಾಥ ಮತ್ತು ದರೋಜಿ ವೆಂಕಟೇಶ. ಗುರು ಭೀಮ್ ಭಟ್ ಜೋಶಿ. ಭೀಷ್ಮ ನಾರಾಯಣ ಸೇರಿದಂತೆ ಸಮಾಜದ ಮುಖಂಡರಾದ ಜಿ.ಆರ್.ಎಸ್ ಸತ್ಯನಾರಾಯಣ, ಸಂಜಿವ ಕುಮಾರ ರಾಯಚೂರು. ಹೊಸೂರ ಮಂಜುನಾಥ ಶ್ರೇಷ್ಠಿ, ಬಸವರಾಜ, ಪ್ರಶಾಂತ ಸೇರಿದಂತೆ ಇತರರು ಭಾಗವಹಿಸಿ ಅಧ್ಯಕ್ಷರ ಕುಟುಂಬಸ್ಥರಿಂದ ಲಘುಉಪಹಾರವನ್ನು ನೆರವೇರಿಸಲಾಯಿತು.

ಡಾ|| ಶಿವಕುಮಾರ ಮಾಲಿಪಾಟೀಲ್ ರವರಿಗೆ ಹೊಸಪೇಟೆಯಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ.

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಅಧ್ಯಕ್ಷರು, ದಂತವೈದ್ಯರು, ಪರಿಸರ ಪ್ರೇಮಿಗಳು, ಸಾಹಿತಿಗಳಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಅಕ್ಟೋಬರ್-೧೦ ರಂದು ಹೊಸಪೇಟೆಯಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿಯನ್ನು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಮಂಡಳಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ, ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ್, ಬಳ್ಳಾರಿ ಸಂಸದರಾದ ಇ. ತುಕಾರಾಂ, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ನೀಡಲಾಗಿರುತ್ತದೆ.

ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವೃತ್ತಿಯಲ್ಲಿ ದಂತವೈದ್ಯರಾಗಿ ಸಾಮಾಜಿಕ ಕಳಕಳಿ ಹಾಗೂ ನಿಸ್ವಾರ್ಥತೆಯಿಂದ, ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ್, ಗಂಗಾವತಿ ಪ್ರಾಣೇಶ್, ಕಳಕನಗೌಡ ಪಾಟೀಲ್ ಹಾಗೂ ಇತರ ಹಿರಿಯರ ಮಾರ್ಗದರ್ಶನದಲ್ಲಿ ಹಲವಾರು ಸಮಾಜಮುಖಿ, ಪರಿಸರ ಸ್ನೇಹಿ ಕಾರ್ಯಗಳನ್ನು ಮಾಡಿರುತ್ತಾರೆ.

ಈ ಪ್ರಶಸ್ತಿಯನ್ನು ಸ್ವೀಕರಿಸಿದ ಡಾ|| ಶಿವಕುಮಾರ ಮಾಲಿಪಾಟೀಲ್‌ ಮಾತನಾಡಿ, ನಮ್ಮ ಈ ಸೇವೆಗೆ ಗಂಗಾವತಿ ಚಾರಣ ಬಳಗ ಸದಸ್ಯರಾದ ಮೈಲಾರಪ್ಪ ಬೂದಿಹಾಳ, ಪ್ರಹ್ಲಾದ ಕುಲಕರ್ಣಿ, ರಮೇಶ ಗಬ್ಬೂರು, ರಾಮನಾಥ ಭಂಡಾರಕರ್, ಸುರೇಶ ಸಿಂಗನಾಳ, ಬದರಿನಾಥ ಸಿರಿಗೇರಿ, ಡಾ. ಬದರಿ ಪ್ರಸಾದ, ಶ್ರೀಮತಿ ಸಿ. ಮಹಾಲಕ್ಷಿö್ಮÃ, ಉಲ್ಲಾಸ್, ಶಾಹೀನ್ ಕೌಸರ್, ಮಂಜುನಾಥ ಗುಡ್ಲಾನೂರು, ಆಂಜನೇಯ ಟಿ., ಎನ್. ಸೂರ್ಯನಾರಾಯಣ, ಹನುಮೇಶ ಭಾವಿಕಟ್ಟಿ, ಮಹಮ್ಮದ ರಫಿ, ಆನಂದ ಲಕ್ಕಿ, ಮಂಜುನಾಥ ಕಟ್ಟಿಮನಿ, ಜಗದೀಶ ಮಾಲಿಪಾಟೀಲ್, ಹರನಾಯಕ, ಶರಣಪ್ಪ ಹಡಪದ ಹೀಗೆ ಸಮಾನ ಮನಸ್ಕರ ಸಹಕಾರದಿಂದ ದುರ್ಗಮ್ಮನ ಹಳ್ಳ ಸ್ವಚ್ಛತಾ ಆಂದೋಲನ, ಪ್ಲಾಸ್ಟಿಕ್ ಮುಕ್ತ ಗಂಗಾವತಿ ಅಭಿಯಾನ, ಅರಣ್ಯ ಪ್ರದೇಶದಲ್ಲಿ ಹೊಂಡಗಳ ನಿರ್ಮಾಣ, ಸ್ಮಾರಕಗಳ ಸ್ವಚ್ಛತಾ ಕಾರ್ಯ, ಸೂರ್ಯನಾಯಕನ ಕೆರೆ ಅಭಿವೃದ್ಧಿ, ಹಲವಾರು ವನಮಹೋತ್ಸವ ಕಾರ್ಯಕ್ರಮಗಳು ಹೀಗೆ ಹತ್ತಾರು ಅಭಿವೃದ್ಧಿಪರ ಕಾರ್ಯಗಳನ್ನು ಮಾಡಲಾಗಿದೆ ಎಂದರು.

ಇವರ ಈ ಸಾಮಾಜಿಕ, ಪರಿಸರಸ್ನೇಹಿ ಕಾಳಜಿಯುತ ಕಾರ್ಯಗಳನ್ನು ಗುರುತಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಪ್ರಶಸ್ತಿ ನೀಡಿ ಸನ್ಮಾನಿಸಿರುವುದಕ್ಕಾಗಿ ಗಂಗಾವತಿ ಚಾರಣ ಬಳಗವು ಡಾ|| ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದೆ.

12 ರಂದು ಜಿ ಹಂಪಣ್ಣ ಹೊಸ್ಕೇರಾ ಲಯನ್ಸ್ ಕಣ್ಣಿನ ಆಸ್ಪತ್ರೆ ಲೋಕಾರ್ಪಣೆ… ಹಲವು ದಶಕಗಳ ಕನಸು ನನಸು… ಎಂ.ಜೆ.ಎಫ್ ಲ. ಟಿ ರಾಮಕೃಷ್ಣ.

ಗಂಗಾವತಿ: ಸಾಮಾಜಿಕ ಸೇವಾ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಹಲವು ದಶಕಗಳ ಕನಸು ಅಕ್ಟೋಬರ್‌-12 ರಂದು ನೆರವೇರಲಿದ್ದು,  ಜಿ ಹಂಪಣ್ಣ ಹೊಸ್ಕೇರಾ ಲಯನ್ಸ್ ಕಣ್ಣಿನ ಆಸ್ಪತ್ರೆಯು ಕಂಪ್ಲಿ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆ ಜರುಗಲಿದೆ ಎಂದು ಲಯನ್ಸ್ ಕಣ್ಣಿನ ಆಸ್ಪತ್ರೆ ಸಮಿತಿಯ ಅಧ್ಯಕ್ಷ ಎಂ.ಜೆ.ಎಫ್‌ ಲ. ಟಿ. ರಾಮಕೃಷ್ಣ ಹೇಳಿದರು.

ಅವರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಅಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಯಾದ ಲಯನ್ಸ್ ಕ್ಲಬ್ ಗಂಗಾವತಿ ಹಿರಿಯ ಸದಸ್ಯರಾದ ಡಾ||  ಜಿ. ಚಂದ್ರಪ್ಪ, ಡಾ|| ಎ. ಸೋಮರಾಜು, ಡಾ|| ಮಾಧವ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನೂತನ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಲಾಗುತ್ತಿದ್ದು ಇದರ ಸದುಪಯೋಗವನ್ನು ಸಮಾಜದಲ್ಲಿನ ಬಡವರು ವಯಸ್ಸಾದವರು ಪಡೆದುಕೊಳ್ಳಬೇಕೆಂದು ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪೂರ್ವ ಪ್ರಾಥಮಿಕ ಶಾಲೆಯಿಂದ ಹಿಡಿದು, ಪಿಯುಸಿ ಕಾಲೇಜು ಹಾಗೂ ಬುದ್ಧಿಮಾಂದ್ಯ ಮಕ್ಕಳಿಗೆ ವಸತಿ ಸಹಿತ ಶಿಕ್ಷಣ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬರಲಾಗಿದ್ದು. ಅಂದಾಜು 5 ಕೋಟಿ ರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ|| ಜಿ. ಚಂದ್ರಪ್ಪ, ಡಾ|| ಎ. ಸೋಮರಾಜು, ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಜಂಬಣ್ಣ ಐಲಿ, ಖಜಾಂಚಿಯಾದ ಶಿವಪ್ಪ ಗಾಳಿ, ಪ್ರಾಚಾರ್ಯ ಅಭಿಷೇಕ್, ಶೇಷಗಿರಿ ರಾವ್ ಸೇರಿದಂತೆ ಇತರರು ಮಾತನಾಡಿದರು.

ಎಸ್.ಎಫ್.ಐ ನೂತನ ಕೊಪ್ಪಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ.

ಗಂಗಾವತಿ: ಅಕ್ಟೋಬರ್-8 ರಂದು ಗಂಗಾವತಿ ನಗರದಲ್ಲಿ ನಡೆದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ನಡೆದ ಎಸ್.ಎಫ್.ಐ ಜಿಲ್ಲಾ ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾಧ್ಯಕ್ಷರಾಗಿ ಶಿವುಕುಮಾರ್ ಈಚನಾಳ್, ಜಿಲ್ಲಾ ಕಾರ್ಯದರ್ಶಿಯಾಗಿ ಬಾಲಾಜಿ ಚಳ್ಳಾರಿ, ಉಪಾಧ್ಯಕ್ಷರಾಗಿ ನಾಗರಾಜು ಯು, ಹನುಮೇಶ್ ಮ್ಯಾಗೇಡಿ, ಷರೀಫ್ ಎಂ.ಪಿ., ಪೂಜಾ ಕೊಪ್ಪಳ, ಜಂಟಿ ಕಾರ್ಯದರ್ಶಿಗಳಾಗಿ ರೋಜಾ ಬಿ., ದರ್ಶನ್ ಹೊಸ್ಕೇರ, ಬಸಯ್ಯ ಹಿರೇಮಠ್, ಸದಸ್ಯರಾಗಿ ಮಾರುತಿ ಕನಕಗಿರಿ, ರಮೇಶ್ ಅಗಸಿಮುಂದಿನ ಕುಷ್ಟಗಿ, ಹನುಮೇಶ್ ಚಳ್ಳಾರಿ, ದೊಡ್ಡಬಸವ ಕುಷ್ಟಗಿ, ರಾಜು ಕೊಪ್ಪಳ, ಮೌನೇಶ್ ಕುಷ್ಟಗಿ, ದೀಪಾ ಚಲವಾದಿ, ವೈಶಾಲಿ ಹಣವಾಳ್, ಲಕ್ಷö್ಮಣ ಹೊಸಗುಡ್ಡ, ಶರಣಬಸವ. ಬಿ ಆಯ್ಕೆಯಾದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿಯವರು, ಕೊಪ್ಪಳ ಜಿಲ್ಲೆಯಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತದಲ್ಲಿದೆ, ಶಿಕ್ಷಣದ ಖಾಸಗೀಕರಣ ಹೆಚ್ಚುತ್ತಿದೆ. ಕನ್ನಡ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳಿಲ್ಲ, ಸೂಸಜ್ಜಿತ ಕಟ್ಟಡಗಳಿಲ್ಲ, ವಿದ್ಯಾರ್ಥಿಗಳ ಅನುಗುಣವಾಗಿ ಹಾಸ್ಟೆಲ್ ಸೌಲಭ್ಯವಿಲ್ಲ, ಗ್ರಾಮೀಣ ಭಾಗಗಳಿಗೆ ರಸ್ತೆ-ಬಸ್ ವ್ಯವಸ್ಥೆ ಇಲ್ಲ, ಹೀಗೆ ಹತ್ತಾರು ಸಮಸ್ಯೆಗಳು ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯಲು ನೇರ ಕಾರಣವಾಗಿವೆ. ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುವ ದುಷ್ಟ ಯೋಜನೆಯು ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕತ್ತಲೆ ತರುತ್ತಿದೆ. ಶಿಕ್ಷಣದ ಹಕ್ಕು ಎಲ್ಲರಿಗೂ ಎನ್ನುವುದು ಸಂವಿಧಾನದ ಆಶಯ, ಆದರೆ ಸರ್ಕಾರ ಅದನ್ನು “ಹಣವಿದ್ದವರಿಗೆ ಮಾತ್ರ” ಎಂಬ ರೀತಿಗೆ ತರುತ್ತಿದೆ. ಭಾರತ ವಿದ್ಯಾರ್ಥಿ ಫೆಡರೇಶನ್ ಸಂಘಟನೆಯನ್ನು ಜಿಲ್ಲಾಧ್ಯಂತ ವಿಸ್ತರಿಸಿ, ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಿ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳ ಧ್ವನಿಯಾಗಿ ಎಸ್.ಎಫ್.ಐ. ನೂತನ ಜಿಲ್ಲಾ ಸಮಿತಿಯು ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಗಂಗಾವತಿಯ ಡಾ. ಚನ್ನಬಸವ ಕೊಟಗಿ ಅವರಿಗೆ ರಾಷ್ಟ್ರೀಯ ಸಾಧಕ ಪ್ರಶಸ್ತಿ

ಗಂಗಾವತಿ: ನಗರದ ನಿವಾಸಿಯಾದ ಚನ್ನಬಸವ ಕೊಟಗಿಯವರು ಒಬ್ಬ ವರದಿಗಾರರಾಗಿ ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ೧೫ ವರ್ಷಗಳಿಂದ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಬೆಂಗಳೂರಿನ ಗ್ಲೋಬಲ್ ಎಂಟರ್‌ ಪ್ರೈಸಸ್‌ ವತಿಯಿಂದ ರಾಷ್ಟ್ರೀಯ ಸಾಧಕ ಪ್ರಶಸ್ತಿ-೨೦೨೫ ನೀಡಲಾಗುತ್ತಿದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶಾಂತಾ ತಿಳಿಸಿದ್ದಾರೆ.

ಚನ್ನಬಸವ ಕೊಟಗಿಯವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯನಿರ್ವಹಿಸಿ, ಪ್ರಸ್ತುತ ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಹಾಗೂ ಭಾರತೀಯ ಜೀವ ವಿಮಾ ನಿಗಮದ ಏಜೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಇತ್ತೀಚೆಗೆ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇವರ ಈ ಸಾಧನೆಯನ್ನು ಗುರುತಿಸಿದ ಬೆಂಗಳೂರಿನ ಗ್ಲೋಬಲ್ ಎಂಟರ್‌ ಪ್ರೈಸಸ್‌ ರವರು ಇವರಿಗೆ ಅಕ್ಟೋಬರ್-೧೩ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಟೌನ್‌ಹಾಲ್‌ನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಇವರಿಗೆ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕರು, ಕಲಾವಿದರು, ಪತ್ರಕರ್ತರು, ಸಾಹಿತಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶ್ರೀ ಶಾರದಾ ಶರನ್ನ ನವರಾತ್ರಿ. ಚಂಡಿ ಹವನ ಸಂಪನ್ನ

ಗಂಗಾವತಿ. ನಗರದ ಶಂಕರಮಠದ ಶ್ರೀ ಶಾರದಾದೇ ಗುಳದಲ್ಲಿ ಬುಧವಾರ ರಂದು ನವ ಚಂಡಿ ಹವನ ಸಂಪನ್ನಗೊಂಡಿತು. ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ತಂಡ ದವರಿಂದ ಸೇವಾಕರ್ತರಿಗೆ ಮಹಾಸಂಕಲ್ಪ ಹಾಗೂ ವೈದ್ಯ ನೇತೃತ್ವದಲ್ಲಿ ಪೂರ್ಣಾಹುತಿಯನ್ನು ಸಂಪನ್ನಗೊಳಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ 75ನೇ ವರ್ಧಂತಿ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ನವಚಂಡಿ ಹವನವನ್ನು ಆಯೋಜಿಸಲಾಗಿದ್ದು. ಇದರೊಂದಿಗೆ ದಂಪತಿ ಪೂಜೆ ಹಾಗೂ ಕನ್ನಿಕಾ ಪೂಜೆಯನ್ನು ಭಕ್ತರಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾ ತೀರ್ಥ ನಾರ್ವೆ ದಂಪತಿಗಳು, ಪವನ್ ಕುಮಾರ್, ಕಾರ್ತಿಕ್ ದಂಪತಿಗಳು ನೇತೃತ್ವ ವಹಿಸಿದ್ದರು. ಸುಮಾರು 600ಕ್ಕೂ ಅಧಿಕ ಭಕ್ತಾದಿಗಳು ವಿವಿಧ ಸಮಾಜದ ಮುಖಂಡರು ಅಮ್ಮನವರ ದರ್ಶನ ಪಡೆದು ಪುನೀತರಾದರು. ಬಳಿಕ ಅನ್ನ ಸಂತರ್ಪಣೆ ನಡೆಸಲಾಯಿತು

ಬನ್ನಿಯಿಂದ ಬಂಗಾರದ ಜೀವನ ನಡೆಸೋಣ: ಪೂಜ್ಯ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು..

ಎಲ್ಲರ ಸಹಕಾರದಿಂದ ಶರನ್ನನವರಾತ್ರಿ ಕಾರ್ಯಕ್ರಮ ಯಶಸ್ವಿ: ಅಧ್ಯಕ್ಷರು ದರೋಜಿ ನಾಗರಾಜ ಶ್ರೇಷ್ಠಿ.ಗಂಗಾವತಿ: ನಗರದ ಹಿರೇಜಂತಗಲ್ ವಿರುಪಾಪುರದಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟಂಬರ್ 22ನೇ ತಾರೀಖಿನಿಂದ ಅಕ್ಟೋಬರ್ 1ನೇ ತಾರೀಖಿನವರೆಗೆ ನಡೆದ ಶರನ್ ನವರಾತ್ರಿಯ ಪುರಾಣವು ದೇವಸ್ಥಾನದ ಶ್ರೀ ವಾಸವಿ ವೇದಿಕೆಯಲ್ಲಿ ಹತ್ತು ದಿನಗಳವರೆಗೆ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪುರಾಣದ ಸಾನಿಧ್ಯವನ್ನು ವಹಿಸಿದ ಪರಮ ಪೂಜ್ಯಶ್ರೀ ಪದ್ಮಾಕ್ಷರಯ್ಯ ಮಹಾಸ್ವಾಮಿಗಳು ಸುಳೆಕಲ್ ಅವರು ಮಾತನಾಡಿ ಶರನ್ ನವರಾತ್ರಿಯ ಒಂದೊಂದು ದೇವಿಯ ಅವತಾರವು ಪುರಾಣದಲ್ಲಿ ತಿಳಿಸಲಾಯಿತು.

ಈ ಪುರಾಣದಲ್ಲಿ ಸಮಾಜ ಬಾಂಧವರು ಭಾಗವಹಿಸಿ ಪ್ರತಿದಿನವೂ ದೇವಿಗೆ ಕುಂಕುಮಾರ್ಚನೆ, ಲಲಿತ ಸಹಸ್ರನಾಮಾವಳಿ, ಪುರಾಣ ಪ್ರವಚನ ಸಂಗೀತ, ಭಜನಾ ಕಾರ್ಯಕ್ರಮ ಸೇರಿದಂತೆ ಪ್ರತಿನಿತ್ಯವೂ ಸಮಾಜದ ಅಧ್ಯಕ್ಷರ ನೇತೃತ್ವದಲ್ಲಿ ನೆರವೇರಿಸಲಾಗಿದೆ ಎಲ್ಲರಿಗೂ ಶ್ರೀದೇವಿ ಕನ್ನಿಕಾಪರಮೇಶ್ವರಿ ಆಶೀರ್ವದಿಸಲಿ ಜೊತೆಗೆ ಮಹಾನಮಿ ದಿನದಂದು ಬನ್ನಿಯನ್ನು ತೆಗೆದುಕೊಂಡು ನಮ್ಮ ಜೀವನವನ್ನು ಬಂಗಾರ ಮಾಡಿಕೊಳ್ಳೋಣ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಮಾತನಾಡಿ ದೇವಸ್ಥಾನದಲ್ಲಿ ಶರನ್‌ ನವರಾತ್ರಿ ಮುಗಿಯುವರೆಗೂ ಪ್ರತಿನಿತ್ಯವೂ ನಮ್ಮ ಸಮಾಜದ ಬಾಂಧವರು ಸಹಕಾರ ನೀಡಿದ್ದಾರೆ. ವಿಶೇಷವಾಗಿ ಮಹಿಳೆಯರು ದಿನನಿತ್ಯವು ಪುರಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆ ತಾಯಿ ಕನ್ನಿಕಾಪರಮೇಶ್ವರಿ ಕೃಪೆಗೆ ಪಾತ್ರರಾಗಿದ್ದರೆ ಮತ್ತು ದಿನನಿತ್ಯವೂ ಮಹಾಪ್ರಸಾದ ವ್ಯವಸ್ಥೆಯನ್ನು ಮಾಡಿದಂತ ವ್ಯವಸ್ಥಾಪಕರಿಗೂ ನವ ಬೃಂದಾವನ ಭಜನಾ ಮಂಡಳಿಯವರಿಗೂ ಶ್ರೀವಾಸವಿ ಮಹಿಳಾ ಮಂಡಳಿಯವರಿಗೂ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವ ಬೃಂದಾವನ ಭಜನಾ ಮಂಡಳಿ ಅಧ್ಯಕ್ಷರು ದರೋಜಿ ನರಸಿಂಹ ಶ್ರೇಷ್ಠಿ, ಶ್ರೀ ವಾಸವಿ ಯುವಜನ ಸಂಘದ ಅಧ್ಯಕ್ಷ ಎನ್.ವಿ ಮಂಜುನಾಥ, ಗೌರವಾಧ್ಯಕ್ಷ ದರೋಜಿ ವೆಂಕಟೇಶ, ಶ್ರೀ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸೇರಿದಂತೆ ದಮ್ಮೂರು ರಾಜಕುಮಾರ, ಸಿರಿಗೇರಿ ಬಾಲಚಂದ್ರಯ್ಯ, ಮಲ್ಲಿಕಾರ್ಜುನ ಪ್ರಿನ್ಸಿಪಾಲರು ವಿದ್ಯಾನಿಕೇತನ ಕಾಲೇಜ್, ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ರುಕ್ಮಿಣಿ, ಶ್ರೀಮತಿ ಪದ್ಮಾವತಿ, ಶ್ರೀಮತಿ ರಾಧಿಕಾ, ಶ್ರೀಮತಿ ಉಷಾರಾಣಿ, ವಾಸವಿ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ದಮ್ಮೂರು ಮಂಜುಳ, ಶ್ರೀಮತಿ ಎಂ.ಪಿ ಸುಮಲತಾ ಸೇರಿದಂತೆ ಸಮಾಜದ ಅಪಾರ ಮುಖಂಡರು ಹಿರಿಯರ ನೇತೃತ್ವದಲ್ಲಿ ಶರನ್‌ ನವರಾತ್ರಿಯ ಕೊನೆಯ ದಿನವನ್ನು ಮಹಾಮಂಗಳಾರತಿಯೊಂದಿಗೆ ಸಂಪನ್ನಗೊಳಿಸಲಾಯಿತು.

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು.

ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ವೇದಮೂರ್ತಿ ಪಂಡಿತ್ ಸುಬ್ರಹ್ಮಣ್ಯ ಹಾಗೂ ನಾಗರತ್ನ ಅವರು ವಾಸವಿ ಹೋಮದ ನೇತ್ರತ್ವವನ್ನು ವಹಿಸಿ ಅಧ್ಯಕ್ಷ ದಂಪತಿಗಳು ಸೇರಿದಂತೆ ಕಾರ್ಯದರ್ಶಿಗಳಾದ ಈಶ್ವರ ಶೆಟ್ಟಿ ದಂಪತಿಗಳು ಹಾಗೂ ಕಾರ್ಯಕಾರಣಿ ಸಮಿತಿಯ ದಂಪತಿಗಳಿಂದ ಪೂರ್ಣಾಹುತಿ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಕುಮಾರಿಕಾ ಪೂಜಾ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಉಪಾಧ್ಯಕ್ಷ ಸುರೇಶ್. ಶೆಟ್ಟಿ. ಭಾಗ್ಯ ಈಶ್ವರ ಶೆಟ್ಟಿ. ಪ್ರಸಾದ ಪಾನ ಗಂಟೆ. ಮಂಜುನಾಥ್, ಮಾರುತಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು