ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಆಷಾಢ ಮಾಸದ ಭೀಮನ ಅಮಾವಾಸ್ಯೆ: ಕಿಷ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು

ಗಂಗಾವತಿ: ಇತಿಹಾಸ ಪ್ರಸಿದ್ಧ ಹನುಮ ಹುಟ್ಟಿದ ನಾಡೆಂದು ಪ್ರಸಿದ್ಧವಾದ ವಿಜಯನಗರ ಸಾಮ್ರಾಜ್ಯದ ಆನೆಗುಂದಿ ಪ್ರದೇಶದ ಕಿಷ್ಕಿಂದ ಅಂಜನಾದ್ರಿಯಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಪೂಜಾ ಕಾರ್ಯಕ್ರಮಗಳು ಚಿಕ್ಕ ರಾಮಪುರದ ಆಂಜನೇಯ ದೇವಾಲಯದಲ್ಲಿ, ಪ್ರಧಾನ ಅರ್ಚಕ ಶ್ರೀ ವಿದ್ಯಾದಾಸ ಬಾಬಾಜಿ ಅವರ ನೇತೃತ್ವದಲ್ಲಿ ಉತ್ಸವಪೂರ್ವಕವಾಗಿ ನೆರವೇರಿಸಲ್ಪಟ್ಟವು. ಬೆಳಿಗ್ಗೆ ಮೂಲ ಆಂಜನೇಯನಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ಅಷ್ಟೋತ್ತರ ಪಾರಾಯಣ, ವಾಯುಸ್ತುತಿ ಪಠಣ, ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಭಜನೆಗಳನ್ನು ಮಾಡಲಾಯಿತು. ಪೂಜೆಯ ಬಳಿಕ ಮಹಾಮಂಗಳಾರತಿ ಹಾಗೂ…

Read More
ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಲಯನ್ಸ್ ಕ್ಲಬ್ ನ ವತಿಯಿಂದ ಉಚಿತ ಕನ್ನಡಕ ವಿತರಣೆ

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಮತ್ತು ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಜುಲೈ 24ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ, ಜುಲೈ 16ರಂದು ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡಿದ್ದ ನೇತ್ರ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ 360 ಕನ್ನಡಕಗಳನ್ನು ವಿತರಿಸಲಾಯಿತು. ವಿತರಣಾ ಕಾರ್ಯಕ್ರಮ ಶ್ರೀರಾಮನಗರದ ಎ.ಕೆ.ಆರ್.ಡಿ ಪಿಯು ಕಾಲೇಜಿನ ಆವರಣದಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ…

Read More
ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಗಂಗಾವತಿಯಲ್ಲಿ ಜುಲೈ-೨೪ರಿಂದ ಆರಂಭವಾಗಲಿದೆ ವಚನ ಶ್ರಾವಣ – ೨೦೨೫

ಒಂದು ತಿಂಗಳ ಕಾಲ ಆಯ್ದ ಮೂವತ್ತು ಮನೆಗಳಲ್ಲಿ ದಿನನಿತ್ಯ ವಚನ ನಿರ್ವಚನ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದ ಮೊದಲ ದಿನ ಕುವೆಂಪು ಬಡಾವಣೆಯ ವಕೀಲ ನಾಗರಾಜ್ ಗುತ್ತೇದಾರ ಅವರ ಮನೆಯಲ್ಲಿ ವಚನ ನಿರ್ವಚನ ಆರಂಭವಾಗಲಿದೆ. ಕಾರಟಗಿಯ ಶ್ರೀಮತಿ ಲೀಲಾ ಮಲ್ಲಿಕಾರ್ಜುನ ಅವರು “ಇಳೆ ನಿಂಬು ಮಾವು ಮಾದಲಕ್ಕೆ ಹುಳಿ ನೀರನೆರೆದವದಾರಯ್ಯಾ” ಎನ್ನುವ ಅಕ್ಕಮಹಾದೇವಿಯ ವಚನದ ಕುರಿತು ಭಾಷಣ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜೆ. ನಾಗರಾಜ ವಹಿಸಲಿದ್ದು, ಹಲವರು ಮುಖ್ಯ…

Read More
ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಚರ್ಚ್ ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ರಂದು ನಿವೃತ್ತಿ

ಗಂಗಾವತಿ: ತಾಲೂಕಿನ ಗಾಳೆಮ್ಮಗುಡಿ ಕ್ಯಾಂಪ್‌ನ ಬೇತ್ಸಥಾ ಮೆಥೋಡಿಸ್ಟ್ ಚರ್ಚ್‌ನ ಸಭಾ ಪಾಲಕರಾದ ರೇ. ಎಡ್ವಿನ್ ಬಾಬು ಅವರು ಸುಮಾರು ಹನ್ನೊಂದು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜುಲೈ-೨೦ ಭಾನುವಾರ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದಿದರು. ಅವರು ಕ್ರಿಸ್ತನ ಮಾರ್ಗಗಳನ್ನು ಬೋಧನೆ ಮಾಡುತ್ತಾ, ಆತನ ದೇವೋಕ್ತಿಗಳನ್ನು ಜನರಿಗೆ ತಿಳಿಸಿ ಯೇಸುವಿನ ಸಂದೇಶಗಳನ್ನು ಭಕ್ತಿಯಿಂದ ಪ್ರಚಾರ ಮಾಡಿದರು. “ನಿನ್ನಂತೆಯೇ ನಿನ್ನ ನೆರೆಹೊರೆಯವರನ್ನು ಪ್ರೀತಿಸು” ಎಂಬ ಕ್ರಿಸ್ತನ ಉಪದೇಶಗಳನ್ನು ಭೋದನೆ ಮಾಡುತ್ತಾ, ಪ್ರೀತಿಯ ಜೀವನ ನಡೆಸುವಂತೆ ಉತ್ಸಾಹ ನೀಡಿದ್ದಾರೆ. “ನೀನು ನಿನ್ನ…

Read More
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್

ನಗರದ ಪ್ರತಿಷ್ಠಿತ ಸಂಕಲ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಕಲ್ಪ ಸಂಸ್ಥೆಯ ಕಾರ್ಯಾಧ್ಯಕ್ಷರು ಮತ್ತು ವಕೀಲರಾದ ನಾಗರಾಜ್ ಎಸ್. ಗುತ್ತೇದಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಚುನಾವಣೆಗಳು ಅಧಿಕಾರವನ್ನು ಶಾಂತಿಯುತವಾಗಿ ಒಬ್ಬರಿಂದ ಒಬ್ಬರಿಗೆ ಹಸ್ತಾಂತರಿಸಲು ಸಹಾಯಮಾಡುತ್ತವೆ ಎಂಬುದನ್ನು ಅವರು…

Read More
ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚೆಗೆ ಹಾಸನ ಸೇರಿ ರಾಜ್ಯದ ಹಲವೆಡೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ, ಇದು ಆತಂಕಕಾರಿ ವಿಷಯವಾಗಿದೆ. ಅದೇ ರೀತಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ವೈದ್ಯ ಡಾ|| ಜಿ. ಚಂದ್ರಪ್ಪ ಹೇಳಿದರು. ಇಂತಹ ಮಾರಕ ರೋಗಗಳನ್ನು ನಿಯಂತ್ರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜುಲೈ-೧೬…

Read More
ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಗಂಗಾವತಿ: ಜುಲೈ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ 9ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ 26 ಕ್ರೀಡಾಪಟುಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರೇಗೌಡ ಪೊಲೀಸ್ ಪಾಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮ್ಮ ಸಂಸ್ಥೆಯ 26 ಕರಾಟೆ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಅಹಾನ್, ಸಾತ್ವಿಕ್, ಕೃಷ್ಣ, ರಿಷಿಕ್, ಚಿನ್ನಪ್ಪ, ಅವೇಜ್,…

Read More
ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ನಗರದಲ್ಲಿರುವ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮–೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಜೊತೆಗೆ ಸ್ನೇಹಿತರ ಸಮ್ಮಿಲನ ಕೂಡ ಆಯೋಜಿಸಲಾಗಿದ್ದು, ಶಾಲಾ ಆವರಣದಲ್ಲಿ ಭಾವುಕ ಕ್ಷಣಗಳು ಮೆಲುಕು ಹಾಕಿದವು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ಉದ್ಘಾಟಿಸಿದರು. ಅವರು ಮಾತನಾಡಿ, ಶಾಲೆಯ ೧೨೦ನೇ ವಸಂತದ ಆರಂಭ ಈ ಸಂಧರ್ಭದಲ್ಲಿ ಬಹುಮಾನವಾಗಿದೆ ಎಂದರು. ಈ ಹಳೆಯ ವಿದ್ಯಾರ್ಥಿಗಳ ಪ್ರೀತಿ, ನೆನೆಪುಗಳು ಇಂತಹ ಗುರುವಂದನಾ ಕಾರ್ಯಕ್ರಮದ ಮೂಲಕ ವ್ಯಕ್ತವಾಗಿವೆ ಎಂದೂ…

Read More
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More