ಪತ್ರಕರ್ತರು ಸಾಮಾಜಿಕ ಜವಾಬ್ಧಾರಿ ಹೊಂದಿರಬೇಕು: ಕೆ. ನಿಂಗಜ್ಜ
ಗಂಗಾವತಿ: ನಗರದ ಐ.ಎಂ.ಎ ಹಾಲ್ನಲ್ಲಿ ಸೆಪ್ಟೆಂಬರ್-೨೨ ರಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದಿಂದ ಗಂಗಾವತಿ ತಾಲೂಕ ಘಟಕ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ ರಾಜಶೇಖರ ವಹಿಸಿ ಅವರು ಪ್ರಾಸ್ತಾವಿಕ ಮಾತನಾಡಿ, ಈ ಸಂಘಕ್ಕೆ ೭೦-೮೦ ವರ್ಷಗಳ ಇತಿಹಾಸವಿದ್ದು, ೧೯೩೬ ರಲ್ಲಿ ಕೇವಲ ತಾಲೂಕು ಸಂಘಟನೆಯಾಗಿ, ಸ್ವಾತಂತ್ರ್ಯಾ ನಂತರ ಆಗಿನ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಅವರಿಂದ ಜಿಲ್ಲಾ ಸಂಘವಾಗಿ, ಈಗ…
