ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು.

ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು, ಸ್ವಚ್ಛ ಗಾಳಿ ಪರಿಸರವನ್ನ ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ತಂಡ ಶೃಂಗೇರಿಯಿಂದ ಕಿಷ್ಕಿಂದೆವರೆಗೂ ಪಾದಯಾತ್ರೆ ಬಂದಿರುವುದು ಅತ್ಯಂತ ಸಾರ್ಥಕ ಕಾರ್ಯವಾಗಿದೆ. ಪಾದಯಾತ್ರೆಯ ಸಂಘಟಕರಿಗೆ ನಮ್ಮೂರಿನ ಎಲ್ಲರ ಪರವಾಗಿ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಈ ಪಾದಯಾತ್ರೆ ತಂಡದೊಂದಿಗೆ ಹುಲಿಗಿಯಿಂದ ಗಂಗಾವತಿಯವರೆಗೂ ಎಲ್ಲ ನಾಗರಿಕರು ಸಂಘ-ಸಂಸ್ಥೆಗಳು ಎಲ್ಲರೂ ಪಾದಯಾತ್ರೆಯಲ್ಲಿ ಭಾಗಿಯಾಗಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು. ಜನವರಿ-೦೭ ರಂದು ಸಂಜೆ ಆನೆಗುಂದಿ ಗ್ರಾಮದಲ್ಲಿ ಜರುಗುವ ಪಾದಯಾತ್ರೆ ಸಂಪನ್ನ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಈ ವೇಳೆ ನಿರ್ಮಲ ತುಂಗಭದ್ರಾ ಅಭಿಯಾನದ ಶಿವಮೊಗ್ಗದ ಸಂಚಾಲಕರಾದ ಬಾಲಕೃಷ್ಣನಾಯ್ಡು ರವರು ಮಾತನಾಡಿ, ಗಂಗಾವತಿ ಮತ್ತು ಕೊಪ್ಪಳ ಜಿಲ್ಲೆಯ ಸಮಸ್ತ ನಾಯಕರುಗಳು, ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟಕರು ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡುವಲ್ಲಿ ನೆರವು ನೀಡಿದ್ದೀರಿ ಮತ್ತು ಇಂದು ಪ್ರಚಾರ ರಥಕ್ಕೆ ಅತ್ಯಂತ ಭಕ್ತಿಪೂರ್ವಕ ಚಾಲನೆಯನ್ನು ನೀಡಿದ್ದೀರಿ. ನಿರ್ಮಲ ತುಂಗಭದ್ರಾ ಅಭಿಯಾನ ಯಶಸ್ವಿಯಾಗಲು ನಮಗೆ ಸಹಕಾರ ನೀಡುತ್ತಿರುವ ಸರ್ವರಿಗೂ ನಿರ್ಮಲ ತುಂಗಭದ್ರಾ ಅಭಿಯಾನ ತಂಡದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸಿಂಗನಾಳ ವಿರೂಪಾಕ್ಷಪ್ಪನವರು ಮಾತನಾಡಿ, ತಾಯಿ ತುಂಗಭದ್ರೆಯ ಒಡಲು ಇಂದು ಮಲೀನವಾಗಿದೆ. ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸೋಣ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕೋಣ ನಿರ್ಮಲ ತುಂಗಭದ್ರಾ ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ಅಲ್ಲದೇ ಕಾಡಾ ಮಾಜಿ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿಯವರು ಮಾತನಾಡಿ, ನಿರ್ಮಲ ತುಂಗಭದ್ರಾ ಅಭಿಯಾನದಲ್ಲಿ ನದಿ ಪಾತ್ರದಲ್ಲಿ ಇರುವಂತಹ ಎಲ್ಲಾ ರೈತರು, ನೀರು ಬಳಕೆದಾರ ಸಂಘದವರು, ಆನೆಗುಂದಿ ಗಂಗಾವತಿ ಭಾಗದವರಷ್ಟೇ ಅಲ್ಲದೆ, ಕಾರಟಗಿ, ನವಲಿ ಮತ್ತು ಕನಕಗಿರಿ ಭಾಗದ ರೈತರು, ನಾಗರಿಕರು ಕೂಡ ಈ ಒಂದು ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದರು. Read More ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.

ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೋತ್ಸವ. ಕನ್ನಡ ಚಿತ್ರರಂಗದ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಡಾ. ವಿಷ್ಣುವರ್ಧನ್ ಅವರೂ ಸಹ ಕಾರಣರಾಗಿದ್ದಾರೆ: ಪರಣ್ಣ ಮುನವಳ್ಳಿ. * ವಿಷ್ಣುವರ್ಧನ್ ಸರ್ಕಲ್ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ. * ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ವಿಶೇಷ ಪೂಜೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ.

ಗಂಗಾವತಿ: ಕನ್ನಡ ಚಿತ್ರರಂಗವನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮೇರು ನಟ ಸಾಹಸಸಿಂಹ ಕಲಿಯುಗದ ಕರ್ಣ ಎಂದು ಖ್ಯಾತರಾಗಿದ್ದ ಡಾ. ವಿಷ್ಣುವರ್ಧನ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ನಗರದ ಡಾ. ವಿಷ್ಣುವರ್ಧನ್ ಸರ್ಕಲ್ ನಲ್ಲಿ ಡಾ. ವಿಷ್ಣುವರ್ಧನ್ ಅವರ 15ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ ಮತ್ತು ಡಾ. ವಿಷ್ಣುವರ್ಧನ್ ಅವರ ಪುತ್ಥಳಿ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿ ಮಾತನಾಡಿದರು. ನಾನು ಸಹ ಡಾ. ವಿಷ್ಣುವರ್ಧನ್ ಅವರ ಹಲವು ಚಿತ್ರಗಳನ್ನು ನೋಡಿದ್ದೇನೆ. ಕನ್ನಡ ಎಲ್ಲಾ ಜಲ ಭಾಷೆ ಮತ್ತು ದೇಶಭಕ್ತಿ ಮೂಡಿಸುವ ಚಿತ್ರಗಳಲ್ಲಿ ವಿಷ್ಣುವರ್ಧನ್ ಅಭಿನಯಿಸುವ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಅವರ ಕನ್ನಡ ಸೇವೆ ಅಮೋಘವಾಗಿದೆ. ಅವರ ಅಭಿಮಾನಿಗಳು ರಾಜ್ಯದ ಎಲ್ಲೆಡೆ ಇದ್ದು ಪ್ರಸ್ತುತ ಅವರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುವ ಮೂಲಕ ವಿಷ್ಣು ವರ್ಧನ್ ಅವರ ಆದರ್ಶಗಳನ್ನು ಸಮಾಜದಲ್ಲಿ ಬಿತ್ತುವ ಕಾರ್ಯ ಮಾಡುತ್ತಿದ್ದಾರೆ. ಗಂಗಾವತಿಯಲ್ಲಿ ಹಲವು ವರ್ಷಗಳಿಂದ ವಿಷ್ಣುವರ್ಧನ್ ವೃತ್ತ ಬೇಡಿಕೆ ಇತ್ತು. ಇದೀಗ ವಿಷ್ಣುವರ್ಧನ್ ಸರ್ಕಲ್ ಆಗಿದ್ದು, ಮುಂಬರುವ ದಿನಗಳಲ್ಲಿ ಮುತ್ತಳಿಯ ನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಗರಸಭೆಯವರು ಮತ್ತು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಈ ನಿಟ್ಟಿನಲ್ಲಿ ಕಾರ್ಯ ಮಾಡಲು ತಾವು ಸಹ ಮನವಿ ಮಾಡುವುದಾಗಿ ಹೇಳಿದರು.

ನಗರಸಭೆ ಅಧ್ಯಕ್ಷ ಮೌಲಾಸಾಬ್ ಮಾತನಾಡಿ ಹಲವು ವರ್ಷಗಳ ಬೇಡಿಕೆ ನಂತರ ಇದೀಗ ವಿಷ್ಣುವರ್ಧನ್ ಸರ್ಕಲ್ ಮಾಡಲಾಗಿದೆ. ಜನರ ಸಂಚಾರಕ್ಕೆ ತೊಂದರೆಯಾಗದಂತೆ ಪುತ್ಥಳಿ ನಿರ್ಮಾಣ ಮಾಡಲು ತಾವು ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪ್ರಮುಖರಾದ ವೀರಭದ್ರಪ್ಪ ನಾಯಕ, ಮಹಾಬಲೇಶ, ನಾಗರಾಜ್ ಮೇದಾರ್, ರಂಗಪ್ಪ ನಾಯಕ, ಹನುಮಂತಪ್ಪ ನಾಯಕ, ಚಂದ್ರಶೇಖರ, ಷರೀಫ್, ಮಹೆಬೂಬ ಮಣ್ಣೂರು, ಶಾಮಿದ್ ಹರ್ಲಾಪೂರ, ಗೋವರ್ಧನ್, ಸಂತೋಷ್, ಕಳಕೇಶ, ನರೇಶ, ವಿರೇಶ ಅಯೋಧ್ಯಾ, ಬೆಟ್ಟಪ್ಪ ಕನಕಗಿರಿ, ನವಲಿ ಶ್ರೀಕಾಂತ, ಹುಸೇನ್ ಮೆಕಾನಿಕ್, ಮಂಜುನಾಥ ಬಸಾಪಟ್ಟಣ, ನವಣೆಕ್ಕಿ ಶಿವಪ್ಪ, ಐಲಿ ಮಾರುತಿ, ಚಂದ್ರು, ಗುರುರಾಜಶೆಟ್ಟಿ, ನೇತ್ರ ರಮೇಶ, ಎಸ್.ಎಸ್.ಪಾಷಾ, ಚಿದಾನಂದ, ಸಂಗಮೇಶ ಅಯೋಧ್ಯಾ, ಪಂಪಾನಗೌಡ, ಪ್ರೋ.ಕರಿಗೂಳಿ, ತಾಯಪ್ಪ ಮರ್ಚೇಡ್, ಸಂಗಮೇಶ ಕಲಿಕೇರಿ, ಗುರುಲಿಂಗಪ್ಪ, ಗುರುಶಾಂತಪ್ಪ, ಹೇರೂರು ಮಹೆಬೂಬ, ಅಜಯ್ ಮೇದಾರ, ಸ್ವಾಮಿ ಮೇದಾರ್, ಹುಲಿಗೇಶ ತಾಂಡ, ಗಣೇಶ ಅಗಳಕೇರಿ, ಗಣೇಶ ಮೈಬುನಗರ, ಮಾರುತಿ ಮೇದಾರ, ಮಂಜುನಾಥ ಮೇದಾರ, ಕುಮಾರ, ರಘು, ತಿರ್ಥ ಮೇದಾರ, ವಿರೇಶ ಅಯೋಧ್ಯಾ, ಸಿದ್ದಾಪುರ ಸಿದ್ದಣ್ಣ, ದುರುಗಪ್ಪ ಪೂಜಾರ, ಪರಶುರಾಮ ದೇವರಮನೆ, ಯಲ್ಲಪ್ಪ ಪೋಲಕಾಲ್, ಕಾಜಸಾಬ ಮೂಳ್ಳೂರು ಸೇರಿದಂತೆ ಅನೇಕರಿದ್ದರು.

ಸೇವೆ ಎನ್ನುವುದು ಸ್ವಾರ್ಥಕ್ಕಿಂತ ಮಿಗಿಲಾದದ್ದು

ರೋಟರಿ ಸಂಸ್ಥೆಯಿಂದ ಜಗತ್ತಿನಾದ್ಯಂತ ನಾನಾ ಕಲ್ಯಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಇಲ್ಲಿ ಸ್ವಾರ್ಥ, ಅಧಿಕಾರಕ್ಕೆ ಅವಕಾಶವಿಲ್ಲ. ಸೇವೆ ಮಾಡುವುದೇ ಇಲ್ಲಿ ಮುಖ್ಯವಾಗಿದೆ ಎಂದು ರೋಟರಿ ಜಿಲ್ಲಾ 3160 ಗವರ್ನರ್ ಡಾ. ಸಾಧು ಗೋಪಾಲ ಕೃಷ್ಣ ರವರು ಇತ್ತೀಚೆಗೆ ಗಂಗಾವತಿ ರೋಟರಿ ಸಂಸ್ಥೆಗೆ ಭೇಟಿ ನೀಡಿ ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು.

ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತವೆ, ಇದು ನಗರ, ರಾಜ್ಯ ಮಟ್ಟದಲ್ಲಿ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿದೆ.

ಗಂಗಾವತಿ ನಗರ ರೋಟರಿ ಸಂಸ್ಥೆ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಹಿಂದೆ ಹಲವಾರು ಸೇವಾ ಕಾರ್ಯಗಳನ್ನು ಮುಖ್ಯವಾಗಿ ಪಲ್ಸ್ ಪೋಲಿಯೋ ಜಾಗೃತಿ, ಆರೋಗ್ಯ ಸೇವೆ, ಆರ್ಥಿಕ ಸೇವೆ, ಸಮುದಾಯ ಸೇವೆ ಹಾಗೂ ಶೈಕ್ಷಣಿಕವಾಗಿ ಕರೋನಾ ಸಂದರ್ಭದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿದ್ಯಾ ಸೇತು ಪುಸ್ತಕ ವಿತರಣೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೇವಾ ಸೌಲಭ್ಯ ನೀಡಿ ಶೈಕ್ಷಣಿಕ ಪ್ರಗತಿಗೆ ಮಹತ್ವದ ಕಾರ್ಯವನ್ನು ಮಾಡಿದೆ ಎಂದು ಗಂಗಾವತಿ ರೋಟರಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಟಿ. ಆಂಜನೇಯ ರವರು ತಮ್ಮ ಸಂಸ್ಥೆ ಸಮುದಾಯ ಮತ್ತು ಆರೋಗ್ಯ ಸೇವೆ ಹಲವಾರು ಸೇವಾ ಕಾರ್ಯಗಳ ಜೊತೆಗೆ ಕೌಶಲ್ಯ ಅಭಿವೃದ್ಧಿ, ಉದ್ಯೋಗ ತರಬೇತಿ, ಕಾರ್ಯಾಗಾರ, ಆರ್ಥಿಕ ಸಾಕ್ಷರತೆ ಹಾಗೂ ಆರೋಗ್ಯ ಸೇವೆಗಳು, ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮತ್ತು ದೀರ್ಘಕಾಲದ ಖಾಯಿಲೆಗಳಿಗೆ ಪರಿಹಾರವನ್ನು ಕಂಡುಹಿಡಿಯುವ ಹಲವಾರು ಕಾರ್ಯಗಳು ಮಾಡುತ್ತಿದೆ ಎಂದು ತಿಳಿಸಿದರು. ಅಲ್ಲದೆ ಈ ವರ್ಷ ಗಂಗಾವತಿ ಸಂಸ್ಥೆ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಇನ್ನೂ ಹಲವಾರು ರೀತಿಯ ಸೇವಾ ಕಾರ್ಯಗಳನ್ನು ಮಾಡಲು ಬಯಸುತ್ತಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ವಿಜಯನಗರ ಝೋನ್ ಅಸಿಸ್ಟೆಂಟ್ ಗವರ್ನರ್ ಮಹೇಶ ಸಾಗರ್ ರವರು ಗಂಗಾವತಿ ಸಂಸ್ಥೆ ತುಂಬಾ ವರ್ಷಗಳಿಂದ ಆರೋಗ್ಯ, ಸಮುದಾಯಕ್ಕೆ ಉಪಯುಕ್ತವಾಗುವ ಯೋಜನೆಗಳು ಮತ್ತು ಶೈಕ್ಷಣಿಕ ಪ್ರಗತಿಗೆ ಪುಸ್ತಕಗಳು, ಕಂಪ್ಯೂಟರಗಳು ಮತ್ತು ಶಾಲಾ ಸಾಮಗ್ರಿಗಳನ್ನು ನೀಡಿದೆ. ಜನರಿಗೆ ಉಪಯುಕ್ತವಾದ ಉತ್ತಮ ಸೇವಾ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ರೋಟರಿ ಕಾರ್ಯದರ್ಶಿ ವಾಸು ಕೊಳಗದ ರವರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಎ. ಶಿವಕುಮಾರ್ ರವರು ಕಾರ್ಯಕ್ರಮ ನಿರುಪಿಸಿದರು.

ಈ ಜಿಲ್ಲಾ ಗವರ್ನರ್ ಸಮಾಲೋಚನಾ ಸಭೆಯಲ್ಲಿ ಮಾಜಿ ಅಧ್ಯಕ್ಷರಾದ ಅಜಿತ್ ರಾಜ್ ಸುರಾನ, ರೋಟರಿ ಜಿಲ್ಲಾ ಖಜಾಂಚಿ ಬಾಲ ಸೂರ್ಯ ರಾವ್, ಪ್ರಕಾಶ್ ಛೋಪ್ರಾ, ಜೆ. ನಾಗರಾಜ, ಉಗಮ ರಾಜ ಜೈನ, ದೊಡ್ಡಯ್ಯ, ಸುರೇಶ್ ಬಂಬ, ಗುರುರಾಜ, ರಾಘವೇಂದ್ರ ರಾವ್, ಶ್ರೀಧರ್ ನಾಯಕ್, ಟಿ.ಸಿ. ಶಾಂತಪ್ಪ, ಶ್ರೀನಿವಾಸ್, ಗಂಗಾಧರ್, ಚಂದ್ರಶೇಖರ್ ಗೌಡ, ದಿಲೀಪ್ ಮೋತಾ, ಬಸವರಾಜ, ಸುರೇಶ ಸೋಲಂಕಿ ಇನ್ನಿತರ ರೋಟರಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೊನೆಯಲ್ಲಿ ರೋಟರಿ ಮಾಜಿ ಕಾರ್ಯದರ್ಶಿ ಮಂಜುನಾಥ್ ರವರು ವಂದಿಸಿದರು.

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್‌ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ ರ ನಿರ್ಮಲ ತುಂಗಭದ್ರಾ ಅಭಿಯಾನದ ಸಮಾರೋಪ ಜನೇವರಿ-೦೮ ಕ್ಕೆ ಮುಂದೂಡಿಕೆ

ಗಂಗಾವತಿ: ನಿರ್ಮಲ ತುಂಗಭದ್ರಾ ಅಭಿಯಾನದ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಡಿಸೆಂಬರ್-೩೦ ಕ್ಕೆ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್‌ರವರ ನಿಧನದ ನಿಮಿತ್ಯ ಸದರಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ಅಂದರೆ ಜನೇವರಿ-೦೮ಕ್ಕೆ ಮುಂದೂಡಲಾಗಿದೆ ಎಂದು ಅಭಿಯಾನದ ರಾಷ್ಟಿçÃಯ ಸಂಚಾಲಕರಾದ ಬಸವರಾಜ ಪಾಟೀಲ್ ವೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನೇವರಿ-೦೭ ರಂದು ಅಭಿಯಾನದ ಪಾದಯಾತ್ರೆಯು ಕೊಪ್ಪಳ ಜಿಲ್ಲೆ ಪ್ರವೇಶಿಸಲಿದ್ದು, ಜನೇವರಿ-೦೮ ರಂದು ಗಂಗಾವತಿ ನಗರದಲ್ಲಿ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮ ಜರುಗಲಿದೆ.
ಈ ಅಭಿಯಾನದ ಕುರಿತು ಮಹತ್ವದ ಪೂರ್ವಭಾವಿ ಸಭೆಯನ್ನು ಡಿಸೆಂಬರ್-೨೯ ರವಿವಾರ ಸಾಯಂಕಾಲ ೪:೦೦ ಗಂಟೆಗೆ ಗಂಗಾವತಿ ನಗರದ ಐ.ಎಂ.ಎ ಭವನದಲ್ಲಿ ಕರೆಯಲಾಗಿದೆ. ಈ ಸಭೆಗೆ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ಸಮಾಜಗಳ ಹಿರಿಯ ಮುಖಂಡರು, ರೈತ ಮುಖಂಡರು, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಪತ್ರಕರ್ತರು, ಹೋರಾಟಗಾರರು ಹಾಗೂ ಮಹಿಳಾ ಪ್ರತಿನಿಧಿಗಳು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ರ ನಿಧನ: ವಿಷಾದಕರ – ಭಾರಧ್ವಾಜ್

ಗಂಗಾವತಿ: ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ರವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿದರು.
ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹಸಿಂಗ್‌ರು ಆರ್ಥಿಕ ತಜ್ಞರಾಗಿದ್ದು, 90 ರ ದಶಕದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಂಟಿತಗೊಂಡು ಗಂಭೀರ ಸ್ಥಿತಿಯಲ್ಲಿದ್ದಾಗ ಮನಮೋಹನಸಿಂಗ್‌ರು ದೇಶದ ಆರ್ಥಿಕ ಸ್ಥಿತಿಯಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರಹಿಸಿದ್ದರು. ನಂತರ ಅವರು ೨೦೦೪ ರಿಂದ ೨೦೧೪ ರವರೆಗೆ ಹತ್ತುವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಭಾರತದ ಆಥಿಕತೆಯನ್ನು ಪ್ರಪಂಚ ಮಟ್ಟದಲ್ಲಿ ಎರಡನೇ ಸ್ಥಾನಕ್ಕೆ ಏರಿಸಿದ್ದರು. ದೇಶದ ಆರ್ಥಿಕ ಸ್ಥಿತಿ ಭದ್ರವಾಗಿರುವುದಕ್ಕೆ ಮನಮೋಹನಸಿಂಗ್‌ರೇ ಕಾರಣರಾಗಿದ್ದಾರೆ. ದೇಶ ಕಂಡ ಅಪ್ರತಿಮ ಆರ್ಥಿಕ ನೀತಿಯ ತಜ್ಞರಾಗಿದ್ದ ಮಾಜಿ ಪ್ರಧಾನಿ ಸಿಂಗ್‌ರನ್ನು ಕಳೆದುಕೊಂಡ ಭಾರತ ಈಗ ಸಂಕಷ್ಟದಲ್ಲಿ ಸಿಲುಕಿದೆ ಎಂದು ಭಾರಧ್ವಾಜ್ ಕಳವಳ ವ್ಯಕ್ತಪಡಿಸಿದರು

ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.

ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನನ ಸರ್ವಾಧ್ಯಕ್ಷರಾಗಿ ರಂಗ ಕಲಾವಿದೆ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀಮತಿ ಉಮಾಶ್ರೀ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನವನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರು ಉದ್ಘಾಟಿಸಲಿದ್ದಾರೆ. ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್‌ಕುಮಾರ್, ನ್ಯಾಯಮೂರ್ತಿ ನಾಗಮೋಹನ ದಾಸ್‌ರವರು, ವೈಜ್ಞಾನಿಕ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹುಲಿಕಲ್ ನಟರಾಜ್ ರವರು, ನಿವೃತ್ತ ಐಎಎಸ್ ಅಧಿಕಾರಿಗಳಾದ ಸೋಮಶೇಖರ್ ಅವರು ಸಹ ಉಪಸ್ಥಿತರಿರಲಿದ್ದಾರೆ. ಸಮ್ಮೇಳನದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ, ಕರಕುಶಲ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ರಾಜ್ಯಮಟ್ಟದ ನಾಲ್ಕನೇ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯಿಂದ ಜೀವಮಾನ ಸಾಧಕ ಪ್ರಶಸ್ತಿಗೆ ಆಯ್ಕೆಯಾದ ಸನ್ಮಾನ್ಯ ಶ್ರೀ ಮಹಾಂತಗೌಡ ಪಾಟೀಲ್, ರಾಜ್ಯಮಟ್ಟದ ಎಚ್.ಎನ್ ಪ್ರಶಸ್ತಿಗೆ ಆಯ್ಕೆಯಾದ ಎಸ್.ಎಂ. ಗವಿ ರವರನ್ನ ಹಾಗೂ ಈ ಬಾರಿ ವಿಶೇಷವಾಗಿ ರಾಜ್ಯ ಮಟ್ಟದಲ್ಲಿ ಮಹಿಳೆಯರಿಗಾಗಿ ನೀಡಲಾಗುತ್ತಿರುವ ಚೈತನ್ಯ ಶ್ರೀ ಪ್ರಶಸ್ತಿಗೆ ಆಯ್ಕೆಯಾದ ಸಂಗೀತ ಕಲ್ಲೇಶ್ ರವರನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಊಟ, ಉಪಹಾರ ವ್ಯವಸ್ಥೆಯನ್ನು ಮಾಡಲಾಗಿದೆ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಈ ಸಮ್ಮೇಳನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸುವಂತೆ ಸಿದ್ದಲಿಂಗೇಶ್ವರ ಪೂಲಬಾವಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ೭೯೭೫೪೫೨೦೫೯ ವಿನಂತಿ.

ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖ್ಯಾತ ಗಾಯಕ ಮಹಮದ್ ರಫಿ ಜನಸಾಮಾನ್ಯರ ಗಾಯಕ: ಖಾಜಾಸಾಬ

ಗಂಗಾವತಿ:ತಮ್ಮ ಗಾಯನದ ಮೂಲಕ ನಾಡಿಗೆ ಸೇವೆ ಸಲ್ಲಿಸಿದ ಶ್ರೇಷ್ಠ ಗಾಯಕರನ್ನು ಗೌರವಿಸುವ ಪರಂಪರೆಯನ್ನು ಸಂಗೀತ ಸ್ವರಾಂಜಲಿ ಕರೋಕೆ ಗಾಯಕರು ಮಾಡುತ್ತಿದ್ದಾರೆ. ಪ್ರತಿ ಗಾಯಕರನ್ನು ಸ್ಮರಣೆ ಮಾಡಲಾಗುತ್ತಿದೆ ಸ್ಥಳೀಯ ಗಾಯಕ ಸಾಬ ಹೇಳಿದರು.

ನಗರದ ಪರಶುರಾಮ ದೇವರಮನೆ ಕರೋಕೆ ಸ್ಟಡಿಯೋದಲ್ಲಿ ಮಹಮದ್ ರಫಿಯವರ ನೂರನೇಯ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಹಮದ್ ರಫಿ ದೇಶದ ಜನಪ್ರೀಯ ಸಿನೆಮಾ ಗಾಯಕರಾಗಿ ಸಮಸ್ತ ದೇಶವಾಸಿಗಳ ಮನಸ್ಸನ್ನು ಗೆದ್ದಿದ್ದ ಅಪ್ಪಟ ದೇಶಭಕ್ತರಾಗಿದ್ದರು.
ಚೈನಾ ಭಾರತದ ಯುದ್ಧ ಸಂದರ್ಭದಲ್ಲಿ ಸೈನಿಕರು ಮತ್ತು ದೇಶದ ಜನರಿಗೆ ದೇಶ ಭಕ್ತಿಗೀತೆಗಳ ಮೂಲಕ ಪ್ರೇರಣೆ ನೀಡಿದ್ದ ಮಹಮದ್ ರಫಿಯವರು ಭಾರತ ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಸಂಬಂಧಿಕರು ಪಾಕಿಸ್ತಾನಕ್ಕೆ ಸ್ಥಳಾಂತರಗೊಂಡರೂ, ಮಹಮ್ಮದ್‌ ರಫಿ ಭಾರತದ ನೆಲವನ್ನು ಪ್ರೀತಿಸಿ ಇಲ್ಲೆ ಉಳಿದು ಭಾರತ ದೇಶವನ್ನು ಪ್ರೀತಿಸುವ ಭಕ್ತರಾದರು.

ದೇಶದ ಎಲ್ಲಾ ಭಾಷೆಗಳ ಸಿನೆಮಾಗಳ ಹಾಡುಗಳನ್ನು ಹಾಡಿದ್ದು, ಕನ್ನಡದಲ್ಲಿಯೂ ‘ನಿನೆಲ್ಲಿ ನಡೆವೆ ದೂರು ದೂರ’ ಎನ್ನುವ ಏಕೈಕ ಹಾಡನ್ನು ಹಾಡುವ ಮೂಲಕ ಕನ್ನಡಿಗರ ಮೇಲೆ ಅಪಾರ ಪ್ರೀತಿ ಗೌರವವನ್ನು ಮಹಮದ್ ಹೊಂದಿದ್ದರು. ಇಡೀ ವಿಶ್ವದಲ್ಲಿ ರಫಿಯವರನ್ನು ಪ್ರೀತಿಸುವ ಜನರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕರ್ನೂಲ್ ಬಾಬಾ ದರ್ಗಾ ಪೀರಾ, ಕರೋಕೆ ಗಾಯಕರಾದ ಜಗನ್ನಾಥ, ಕೆ.ನಿಂಗಜ್ಜ, ವಿಜಯಕುಮಾರ, ಕಾಜಸಾಬ ಮಣ್ಣೂರು, ಹಾಜಿ, ಐಲಿ ಮಾರುತಿ, ಯಲ್ಲಪ್ಪ ಪೋಲಕಾಲ್, ಹನುಮೇಶ, ದುರುಗೇಶ, ಶರಣಪ್ಪ, ಮೇರಾಜ್, ಬಿ. ಕೃಷ್ಣ, ಮಂಜು ಸ್ವಾಮಿ, ಹನುಮಂತಪ್ಪ, ವಿಜಯಲಕ್ಷ್ಮಿ, ದುರುಗೇಶ, ಅಂಬಿಕಾ, ಪಿ. ವಿರೇಶ, ಧೂಳ್ ವೆಂಕಟೇಶ, ನಬಿಸಾಬ, ಶಾಮಣ್ಣ, ಮಂಜುನಾಥ ಗೋಡಿನಾಳ, ಕುರುಗೋಡು ವೆಂಕಟೇಶ, ಸತ್ಯನಾರಾಯಣ, ಗುತ್ತಿ, ಮರ್ದಾನ್ ಇದ್ದರು.

ಶಾಸಕ, ಸಂಸದರು ಸೇರಿದಂತೆ ಕೈ ನಾಯಕರಿಗೆ ಮಹಾಂತೇಶಗೌಡ ಪಾಟೀಲರಿಂದ ಸನ್ಮಾನ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ ಪಾಟೀಲ ಅವರನ್ನು ರಾಜ್ಯಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ನೇಮಕ ಮಾಡಿದ್ದರು. ಈ ಹಿನ್ನೆಲೆ ನೂತನ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶಗೌಡ ಪಾಟೀಲ ಅವರು, ಬುಧವಾರದಂದು ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಹಾಂತೇಶಗೌಡ ಪಾಟೀಲ ಅವರ ಹಿತೈಷಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ. ಬ ಪಾಟೀಲ ನೇಮಕ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ. ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರರಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ. ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ‌ ಮಾಡಿದ್ದಾರೆ.

ಇನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲು ಕಾರಣರಾದ ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ‌ ಶಿವಕುಮಾರ್, ತೋಟಗಾರಿಕೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ, ಜಿಲ್ಲಾಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ, ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕರು ಹಾಗೂ ಕಾಡಾ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಹೆಚ್.ಆರ್ ಶ್ರೀನಾಥ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಮಹಾಂತೇಶಗೌಡ ಪಾಟೀಲ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ನನನ್ನು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಸದಸ್ಯನಾಗಿ ಘನವೆತ್ತ ಕರ್ನಾಟಕದ ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆಂದು ತಿಳಿಸಲು ಹರ್ಷಿತನಾಗಿದ್ದೇನೆ.
ರಾಜ್ಯ ಸರ್ಕಾರ ಸಹಕಾರದಿಂದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ನಾಮನಿರ್ದೇಶನ ಸದಸ್ಯನಾಗಿ ನೇಮಕವಾಗಿದ್ದೇನೆ.. ನನ್ನನ್ನು ನಾಮನಿರ್ದೇಶನ ಮಾಡಿದ ಸರ್ಕಾರಕ್ಕೆ ನಾನು ಅಭಾರಿಯಾಗಿದ್ದು, ಇನ್ನು ಹೆಚ್ಚಿನ ರೀತಿಯಲ್ಲಿ ರೈತಪರ ಕೆಲಸ ಮಾಡುವೆ. ರೈತಪರ ಕೆಲಸಕ್ಕೆ ಇದೇ ರೀತಿ ಎಲ್ಲರ ಸಹಕಾರ ಇರಲಿ.