ಗಂಗಾವತಿ ಸಮೀಪದ ಮರಳಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸರ್ವಧರ್ಮದವರು ಕೈ ಹಿಡಿದು ವಿರುಪಾಕ್ಷಪ್ಪ ಹೇಮಗುಡ್ಡ ಅವರ ಗೆಲುವಿಗೆ ಕಾರಣಿಭೂತರಾದ ದಲಿತ ಸಮುದಾಯದ ಕಾಲೋನಿಯ ಹುಲಿಗಮ್ಮ ದೇವಸ್ಥಾನ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನ ಸಮಿತಿಗಳಿಗೆ ಈಗಾಗಲೇ ಅಲ್ಪಸೇವೆಯನ್ನು ಸಲ್ಲಿಸಲಾಗಿದ್ದು. ಅದೇ ಮಾದರಿಯಲ್ಲಿ ಮೆಹಬೂಬ್ ಸುಭಾನಿ ಜೆಂಡ ಕಟ್ಟೆಯ ತಾತನವರ ಸಮಿತಿಗೆ ದಾಸೋಹದ ಪರಿಕರಗಳನ್ನು. ಹೇಮಗುಡ್ಡ ಕುಟುಂಬಸ್ಥರಿಂದ ಬುಧವಾರದಂದು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹೇಮಗುಡ್ಡ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಂಡಿದ್ದರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗಂಗಾವತಿ ವತಿಯಿಂದ ಹಿರೇಬೆಣಕಲ್ ಗ್ರಾಮದಲ್ಲಿ ರೈತರಿಗಾಗಿ ರೈತ ಕ್ಷೇತ್ರ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಾಗಾರ ಉದ್ಘಾಟನೆ ಮಾಡಿದ ವೆಂಕಟಗಿರಿ ಹೋಬಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹರೀಶಕುಮಾರ S G ಯವರು ರೈತರಿಗೆ ಸ್ಥಳೀಯವಾಗಿ ಕಾಲಾನುಸಾರ ಬೆಳೆಯುವ ಬೆಳೆಗಳಲ್ಲಿನ ರೋಗಗಳ ಹತೋಟಿ ಕ್ರಮದ ಕುರಿತು, ಭತ್ತದಲ್ಲಿನ ಕಾಂಡ ಕೊರಕ ಹೂಳುಗಳ ನಿಯಂತ್ರಣದ ಕುರಿತು, ಕೃಷಿ ಇಲಾಖೆಯಲ್ಲಿ ದೊರಕುವ ವಿವಿಧ ಸೌಲಭ್ಯಗಳ ಕುರಿತು, ಮಾಹಿತಿ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಲೋಕೇಶ್ D ಯವರು ರೈತರಿಗೆ ಮಣ್ಣು ಪರೀಕ್ಷೆ ಮಾಡಿಸುವಂತೆ ಸಲಹೆ ನೀಡಿ ಮಣ್ಣು ಪರೀಕ್ಷೆಯ ಮಹತ್ವದ ಬಗ್ಗೆ ತಿಳಿಸಿ ಮಣ್ಣು ಸಂಗ್ರಹಣಾ ಮಾದರಿ ಕುರಿತು ತರಬೇತಿ ನೀಡಿದರು.
ಈ ಕಾರ್ಯಗಾರದಲ್ಲಿ ಗ್ರಾಮದ ಮುಖಂಡರಾದ ಬೆಟ್ಟದಯ್ಯಸ್ವಾಮಿ, ಬುಡ್ಡಪ್ಪ ಅಂಗಡಿ, ವಿರೂಪಾಕ್ಷಪ್ಪ, ನಿಂಗಪ್ಪ ಇಂಗರಗಿ, ಮಲ್ಲಪ್ಪ ಮಡಿವಾಳರ, ವಿರೇಶ ಅಂಗಡಿ, ಕೃಷಿ ಇಲಾಖೆಯ ATM ಗಣೇಶ, ಸೇವಾಪ್ರತಿನಿಧಿ ಮುಬಿನಾ ಸೇರಿದಂತೆ ಗ್ರಾಮದ ರೈತರು ಉಪಸ್ಥಿತರಿದ್ದರು.
ಗಂಗಾವತಿ: ರೈತ ದಿನಾಚರಣೆ ಭಾರತದ ಆಧಾರಸ್ತಂಭಗಳನ್ನು ಗೌರವಿಸುವ ದಿನ. ಭಾರತದ ರೈತರು ದೇಶದ ಆಹಾರ ಭದ್ರತೆಗೆ ಬಹಳ ಮುಖ್ಯ. ಅವರ ಕಠಿಣ ಪರಿಶ್ರಮದಿಂದಲೇ ನಾವು ಪ್ರತಿದಿನ ಆಹಾರ ಸೇವಿಸುತ್ತೇವೆ. ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್-೨೩ ರಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತದೆ. ರೈತ ದಿನಾಚರಣೆ ಎಂದರೆ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನ. ಭಾರತದ ೫ನೇ ಪ್ರಧಾನ ಮಂತ್ರಿಯಾಗಿದ್ದ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರೈತ ದಿನವಾಗಿ ಆಚರಿಸಲಾಗುತ್ತದೆ. ಅವರು ರೈತರ ಹಿತದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ದೇಶಕ್ಕೆ ಅನ್ನ ನೀಡುವ ರೈತ, ಪ್ರಸ್ತುತ ದಿನಮಾನಗಳಲ್ಲಿ ಬೆಂಬಲ ಬೆಲೆ ಇಲ್ಲದೆ, ಸಂಕಷ್ಟದಲ್ಲಿದ್ದು, ಆಹಾರ ಭದ್ರತೆ ಕಲ್ಪಿಸುವ ರೈತಾಪಿ ವರ್ಗಕ್ಕೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸುವುದರ ಮೂಲಕ ರೈತರ ಹಿತ ಕಾಪಾಡಬೇಕಿದೆ ಎಂದು ನೇತ್ರಾಜ್ ಗುರುವಿನಮಠ ಹೇಳಿದರು.
ಅವರು ಸೋಮವಾರದಂದು ಜಯನಗರದ ಮಹಾನ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ರಾಷ್ಟ್ರೀಯ ರೈತರ ದಿನಾಚರಣೆಯ ಸಾಧಕ ರೈತರ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ದಿನಂಪ್ರತಿ ಸೇವಿಸುವ ಆಹಾರದ ಉತ್ಪಾದನೆಯಲ್ಲಿ ಸಾವಿರಾರು ಕೈಗಳ ಶ್ರಮವಿದೆ. ಅಲ್ಲಿ ಇಲ್ಲಿ ಸಾಲ ಮಾಡಿ ಬೆಳೆ ಕೈಗೆ ಬರುವ ಸಂದರ್ಭದಲ್ಲಿಯೇ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿಯಿಂದ ಬೆಳೆ ನಷ್ಟಗೊಂಡು ಕೊನೆಗೆ ಆತ್ಮಹತ್ಯೆಯಂತಹ ದಾರಿ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಇನ್ನೋರ್ವ ರೈತ ಮುಖಂಡ ಜೋಗದ ನಾರಾಯಣಪ್ಪ ನಾಯಕ ಮಾತನಾಡಿ ಗೋ ಹತ್ಯೆ ನಿಷೇಧ ಕಾಯ್ದೆ ಒಂದೆಡೆ ವರ ಆದರೆ ಮತ್ತೊಂದೆಡೆ ಶಾಪವಾಗಿದೆ. ವಯಸ್ಸಾದ ಹಸುಗಳಿಗೆ ಸಮರ್ಪಕವಾಗಿ ಮೇವು ನೀರು ಇಲ್ಲದೆ ಗೋ ಶಾಲೆಗಳಿಗೆ ಕಳುಹಿಸಬೇಕಾದ ಪರಿಸ್ಥಿತಿ ಇದೆ. ಇದಕ್ಕೆ ಸರ್ಕಾರ ಯಾವುದೇ ಪರಿಹಾರ ಸಹ ನೀಡದೇ ಇರುವುದು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ತಿಳಿಸಿದ ಅವರು ರೈತಾಪಿ ವರ್ಗದ ಸರ್ವತೋಮುಖ ಅಭಿವೃದ್ಧಿಗೆ, ಸರ್ಕಾರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಸಮರ್ಪಕವಾಗಿ ರಸಗೊಬ್ಬರ ವಿತರಣೆ, ಬೆಳೆ ನಷ್ಟದ ಸಂದರ್ಭದಲ್ಲಿ ಸಮರ್ಪಕವಾದ ಪರಿಹಾರ ಧನ ವಿತರಣೆ ಕಲ್ಪಿಸಲು ಮುಂದಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸ್ವಾವಲಂಬಿ ರೈತರಾದ ರಮೇಶ್ ಸಾಲಿಗನೂರ್, ಶಿವರಾಜ ಸಾಲಿಗನೂರ್, ಜೋಗದ ನಾರಾಯಣಪ್ಪ ನಾಯಕ, ದುರ್ಗಪ್ಪ ಮಳ್ಳಿಕೇರಿ, ಸುರೇಶ್ ಮುರುಡಿ, ಈರಪ್ಪ ಗಾಡಿಮನೆ, ಹುಲುಗಪ್ಪ ಚೌಡಕಿ, ಮುಕುಂದ, ಚಿಕ್ಕಬೆಳಕಲ್ ದೊಡ್ಡಯ್ಯ ಶಾಸ್ತ್ರೀಮಠ, ಹನುಮಂತಪ್ಪ ಸಾಲಿಗನೂರು ಸೇರಿದಂತೆ ಇತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭಕ್ಕೂ ಮುನ್ನ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ಶಾಲೆ ಮುಖ್ಯಗುರುಗಳಾದ ಶ್ರೀಮತಿ ಸವಿತಾ ಗುರುವಿನಮಠ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗಂಗಾವತಿ: ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ಸಾಕಷ್ಟು ಅಭಿವೃದ್ಧಿಪಥದಲ್ಲಿ ಮುಂದೆ ಸಾಗಿದ್ದರೂ ಸಹ. ಪ್ರಮುಖವಾಗಿ ಜನತೆಗೆ ಅಗತ್ಯ ಇರುವ ಆಹಾರಕ್ಕೆ ಸಂಬಂಧಿಸಿದಂತೆ, ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತಾಪಿ ವರ್ಗ ಅವರ ಸೇವೆ ಅನನ್ಯವಾಗಿದೆ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಮಾಜಿ ಸದಸ್ಯ ಶ್ರೀಧರ್ ಕೇಸರಹಟ್ಟಿ ಹೇಳಿದರು.
ಅವರು ಶ್ರೀರಾಮನಗರದ ಶ್ರೀಮತಿ ಪರಿಮಳಬಾಯಿ ನಾರಾಯಣರಾವ್ ಅಪ್ಸಾನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ. ಸೋಮವಾರದಂದು ಜರುಗಿದ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಸಾಧಕ ರೈತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇಶವಾಸಿಗಳಿಗೆ ಹೊಟ್ಟೆ ತುಂಬಿಸುವುದು ಯಂತ್ರಗಳು ಅಲ್ಲ ಎಂಬ ಸ್ಪಷ್ಟವಾದ ಸಂದೇಶವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ರೈತರ ಕೃಷಿ ಬೆಳವಣಿಗೆಯಿಂದಾಗಿ ದೇಶ ಹಸಿವು ಮುಕ್ತವಾಗಲು ಸಾಧ್ಯವಾಗುತ್ತದೆ. ಅಂತಹ ರೈತರ ಕೃಷಿ ಕಾರ್ಯಚಟುವಟಿಕೆಗಳಿಗೆ ಸರ್ಕಾರಗಳು ಹಾಗೂ ಪ್ರತಿಯೊಬ್ಬರು ಸ್ಮರಿಸಲೇಬೇಕಾದ ಅವಶ್ಯಕತೆ ಇದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಸಮಾರಂಭ ಕುರಿತು ಮಾತನಾಡಿದರು.
ಇದಕ್ಕೂ ಪೂರ್ವದಲ್ಲಿ ಅಪಾರ ಸಂಖ್ಯೆಯ ರೈತರು ಬೃಹತ್ ಮೆರವಣಿಗೆಯನ್ನು ನಡೆಸಿದರು. ವೇದಿಕೆಯ ಕಾರ್ಯಕ್ರಮದಲ್ಲಿ ಗಂಗಾವತಿ ಕೆವಿಕೆ ಸಂಸ್ಥೆಯ ಸಂತೋಷ್ ಎಲ್.ಆರ್.ಸಿ ಅಧಿಕಾರಿ ಹಿರೇಮಠ್, ರೈತ ಮುಖಂಡ ಸಿದ್ದನಗೌಡ ಸೇರಿದಂತೆ ಇತರರು ಕೃಷಿಯ ತಮ್ಮ ಜೀವನದ ಉಸಿರಾಗಿಸಿಕೊಂಡ ರೈತರು ಆದ ಕುಸುಮ ರವಿ, ಕೃಷಿ ಉಪಕರಣಗಳ ತಯಾರಕರು ಸುಬ್ರಮಣ್ಯ ಬಸಾಪಟ್ಟಣ, ಸಿದ್ದನಗೌಡ, ರಮೇಶ್ ಕಲ್ಗುಡಿ, ಸತ್ಯನಾರಾಯಣ ಕೋಟೆಕ್ಯಾಂಪ್, ವೈ ಸತ್ಯನಾರಾಯಣ ಮುಸ್ಟೂರು ಡಗ್ಗಿ ಕ್ಯಾಂಪ್ ಶ್ರೀಧರ ಕೆಸರಹಟ್ಟಿ, ನರೇಶ್ ಮಲಕನಮರಡಿ ಅಣ್ಣಾರಾವ್. ನಾಗೇಶ್ ರಾವ್ ಹಾಗೂ ರಾಜಪ್ಪ ರೈತರನ್ನು ವೇದಿಕೆಯಲ್ಲಿನ ಗಣ್ಯರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
ರಾಣಿಬೆನ್ನೂರು ತಾಲ್ಲೂಕಿನ ಐರಣಿ ಮಠದ ಸನ್ನಿಧಿಯಲ್ಲಿ ನಿರ್ಮಲ ತುಂಗಭದ್ರ ಅಭಿಯಾನದ ಎರಡನೇ ಹಂತದ ಪಾದಯಾತ್ರೆಯನ್ನು ವೀರಾಪುರ ಹಿರೇಮಠದ ಡಾ. ಮರುಳಸಿದ್ದ ಪಂಡಿತಾರಾಧ್ಯ ಮಹಾಸ್ವಾಮಿಗಳು, ಐರಾವತ ಐರಣಿ ಮಠದ ಶ್ರೀ ಮಾಧವಾನಂದ ಸ್ವಾಮೀಜಿ, ಪ್ರಧಾನ ಸಂಘಟಕರಾದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ರಾಷ್ಟ್ರೀಯ ಸಂಚಾಲಕರಾದ ಶ್ರೀ ಬಸವರಾಜ್ ಪಾಟೀಲ್ ವೀರಾಪುರ, ಸಾಮಾಜಿಕ ಕಾರ್ಯಕರ್ತರು ಹಾಗೂ ಚನ್ನಗಿರಿ ಮಾಜಿ ಶಾಸಕರಾದ ಮಹಿಮಾ ಪಾಟೀಲ್, ಖ್ಯಾತ ಆರ್ಥಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಪ್ರೊ. ಬಿ.ಎನ್. ಕುಮಾರಸ್ವಾಮಿ, ಐ.ಐ.ಟಿ ಧಾರವಾಡದ ಪ್ರೊ. ಎಲ್.ಕೆ. ಶ್ರೀಪತಿ ಇವರು ತುಂಗಭದ್ರಾ ನದಿಗೆ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಂಘಟಕರಾದ ಬಾಲಕೃಷ್ಣ ನಾಯ್ಡು, ಮಾದವನ್ ಗೋ ಸಿರಿ, ಗೋವರ್ದನ್, ಗಂಗಾವತಿಯ ಡಾ|| ಶಿವಕುಮಾರ ಮಾಲಿಪಾಟೀಲ್, ಪ್ರಹ್ಲಾದ್ ಕುಲಕರ್ಣಿ, ಮಂಜುನಾಥ ಸಿರಿಗೇರಿ ಹಾಗೂ ಶಿವಮೊಗ್ಗ, ಹರಿಹರ, ಬೆಂಗಳೂರು, ದಾವಣಗೆರೆಯ ಹಲವಾರು ಪರಿಸರ ಪ್ರೇಮಿಗಳು, ಗಣ್ಯರು ಉಪಸ್ಥಿತರಿದ್ದರು.
ಗಂಗಾವತಿ: ನಗರದ ಹೊಸಳ್ಳಿ ರಸ್ತೆ ಮರ್ಗದ ಲಿಟಲ್ ಹಾರ್ಟ್ಸ್ ಸ್ಕೂಲ್ ಮುಂದಿರುವ ಕನ್ನಡ ಜಾಗೃತಿ ಸಮಿತಿಯ ಶ್ರೀ ಭುವನೇಶ್ವರಿ ಭವನದಲ್ಲಿ ನಡೆದ ಕವಿಗೋಷ್ಠಿಯಲ್ಲಿ ನಿರ್ಮಲ ತುಂಗಭದ್ರಾ ಕುರಿತು ಕವನ ವಾಚಿಸುವ ಮೂಲಕ ಕವಿ ಕವಯತ್ರಿಯರು ನಿರ್ಮಲ ತುಂಗಭದ್ರಾ ಅಭಿಯಾನ’ಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅರಳಹಳ್ಳಿಯ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ, ಗಂಗಾವತಿಯ ಕನ್ನಡ ಜಾಗೃತಿ ಸಮಿತಿ ಮತ್ತು ತುಂಗಭದ್ರಾ ಅಭಿಯಾನ ಸಹಯೋಗದಲ್ಲಿ ಕಾವ್ಯಲೋಕ ಸಂಘಟನೆ ‘ನಿರ್ಮಲ ತುಂಗಭದ್ರಾ’ ಶೀರ್ಷಿಕೆಯಡಿ ಆಯೋಜಿಸಿದ್ದ ೧೦೭ನೇ ಕವಿಗೋಷ್ಠಿಯಲ್ಲಿ ಹಿರಿಯ ಕವಿ ಶರಣಪ್ಪ ಮೆಟ್ರಿ, ಶಾಮೀದ್ ಲಾಠಿ, ಭೀಮನಗೌಡ ಕೇಸರಹಟ್ಟಿ, ಮಹಾದೇವ ಮೋಟಿ ಹೊಸಳ್ಳಿ, ಸೋಮಶೇಖರ್ ಕಂಚಿ, ವಿರುಪಣ್ಣ ಢಣಾಪುರ, ಮಂಜುಳ ವೆಂಕಟಗಿರಿ, ಗೋಪಿನಾಥ್ ದಿನ್ನಿ, ಹುಸೇನ್ ಸಾಬ್ ಗುಂಡೂರು, ನೀಲಮ್ಮ ಹಿರೇಮಠ, ಅಜ್ಜಯ್ಯಸ್ವಾಮಿ ವೆಂಕಟಗಿರಿ, ತಾರಾ ಸಂತೋಷ, ಜಡಿಯಪ್ಪ ಮೆಟ್ರಿ, ಶಶಿಕಲಾ, ಮಹ್ಮದ್ಮಿಯಾ ವೆಂಕಟಗಿರಿ, ಷಣ್ಮುಖಸ್ವಾಮಿ ಕಡ್ಡಿಪುಡಿ ಮತ್ತಿತರರು ತುಂಗಭದ್ರಾ ನದಿಯ ಸ್ವಚ್ಚತೆ, ರಕ್ಷಣೆ, ನಿರ್ಮಲತೆ ಇನ್ನಿತರ ವಿಷಯಗಳ ಬಗ್ಗೆ ಕವನ ವಾಚಿಸಿ ಗಮನ ಸೆಳೆದರು. ನವದೆಹಲಿಯ ಸ್ವಾಭಿಮಾನ ಆಂದೋಲನ ಮುಖ್ಯಸ್ಥ ಬಸವರಾಜ ಪಾಟೀಲ ವೀರಾಪುರ ಉದ್ಘಾಟನೆ ನೆರವೇರಿಸಿ ಮಾತನಾಡಿ, ತುಂಗಭದ್ರಾ ಜಲಾಶಯ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು. ಅಲ್ಲದೇ ಜಲ ರಕ್ಷಣೆ ಯೋಜನೆ ಕಾರ್ಯಗಳ ಮಾಹಿತಿ ನೀಡಿದರು. ಹಿರಿಯ ಸಾಹಿತಿ, ಶಿಕ್ಷಕ ರಾಘವೇಂದ್ರ ದಂಡಿನ್ ಅಧ್ಯಕ್ಷತೆವಹಿಸಿ ಮಾತನಾಡಿ, ಸಮಾಜದಲ್ಲಿನ ಆಗು ಹೋಗುಗಳಿಗೆ ಕವಿಗಳು ಸ್ಪಂದಿಸಬೇಕು. ನಾಡಿನ ನೆಲ, ಜಲ ಉಳಿಸುವ ಹೋರಾಟಗಳಿಗೆ ಕವಿಗಳು ಶುದ್ಧ ಅಂತಃಕರಣದಿಂದ ಕಾವ್ಯ ರಚಿಸುವ ಮೂಲಕ ನೈತಿಕ ಬೆಂಬಲ ನೀಡಬೇಕು. ಕವನದ ವಿಷಯ, ವಸ್ತು, ಲಾಲಿತ್ಯ, ಶಬ್ದಗಳ ಬಳಕೆ ಮೊದಲಾದ ಅಗತ್ಯತೆ ಬಗ್ಗೆ ಕವಿಗಳು ಗಮನ ಹರಿಸಬೇಕು ಎಂದರು. ರೈತ ಮುಖಂಡ, ನ್ಯಾಯವಾದಿ ತಿಪ್ಪೇರುದ್ರಸ್ವಾಮಿ, ಅಭಿಯಾನ ಸಂಚಾಲಕ, ಕಾವ್ಯಲೋಕ ಗೌರವ ಅಧ್ಯಕ್ಷ ಡಾ|| ಶಿವಕುಮಾರ ಮಾಲಿಪಾಟೀಲ್, ಅಭಿಯಾನ ಪ್ರಮುಖ ಮಂಜು ಕಟ್ಟಿಮನಿ ಮಾತನಾಡಿದರು. ಪ್ರಾಂಶುಪಾಲ ಡಾ. ಶರಣಬಸಪ್ಪ ಕೋಲ್ಕಾರ್ ಜಲ ಸಂಕಲ ಪ್ರತಿಜ್ಞಾ ವಿಧಿ ಬೋಧಿಸಿದರು. ಅರಳಹಳ್ಳಿಯ ರೇವಣಸಿದ್ದಯ್ಯ ತಾತ ಸಾನಿಧ್ಯ ವಹಿಸಿದ್ದರು. ಕಾವ್ಯಲೋಕ ಅಧ್ಯಕ್ಷ ಎಂ.ಪರಶುರಾಮ ಪ್ರಿಯ, ಆಶೀಶ್ ಕೃಷ್ಣ ಉಪಸ್ಥಿತರಿದ್ದರು. ತಾರಾ ಸಂತೋಷ ಮೇರವಾಡೆ ನಿರೂಪಿಸಿದರು.
ಗಂಗಾವತಿ: ಇಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನವನ್ನು ಆಚರಿಸಲಾಯಿತು. ಈ ಸಮಯದಲ್ಲಿ ಮಕ್ಕಳು ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯ ಮಕ್ಕಳು ಗಣಿತಕ್ಕೆ ಸಂಬAಧಿಸಿದ ಮಾಡಲ್ಗಳನ್ನು ಹಾಗೂ ಗಣಿತದ ಕಾನ್ಸೆಪ್ಟ್ ಗಳನ್ನು ಮಕ್ಕಳು ಸುಲಭವಾಗಿ ಪಾಲಕರಿಗೆ ತಿಳಿಸಿದರು. ಗಣಿತ ವಿಷಯ ಮಕ್ಕಳ ಬಾಯಿಯಲ್ಲಿ ನಿರರ್ಗಳವಾಗಿ ಬರುತ್ತಿರುವುದನ್ನು ಪಾಲಕರು ಕೇಳಿ ತುಂಬಾ ಅಚ್ಚರಿಪಟ್ಟರು. ಚಿಕ್ಕ ಚಿಕ್ಕ ಮಕ್ಕಳು ಮಾಡಲ್ಗಳನ್ನು ಹಿಡಿದು, ಆ ಮಾಡೆಲ್ಗಳನ್ನು ವಿವರಿಸುವ ಕೌಶಲ್ಯವನ್ನು ಹಾಗೂ ಮಕ್ಕಳು ಮಾತನಾಡುವ ಶೈಲಿ ಅವರ ಕಾನ್ಫಿಡೆನ್ಸ್ ಎಲ್ಲವೂ ಅದ್ಭುತವಾಗಿ ಇವೆಯೆಂದು ಪಾಲಕರು ಹೇಳುತ್ತಿದ್ದರು. ಇದೇ ಸಮಯದಲ್ಲಿ ಪಾಲಕರಿಗಾಗಿ ಹಲವಾರು ಗಣಿತ ಆಟಗಳನ್ನು ಇಡಲಾಗಿತ್ತು. ಆ ಆಟಗಳನ್ನು ಪಾಲಕರು ಆಡುತ್ತಾ ಇಷ್ಟೊಂದು ಆಟಗಳು ಗಣಿತದಲ್ಲಿ ಇವೆ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪಾಲಕರು ಹೇಳುತ್ತಿದ್ದರು. ಮಕ್ಕಳು ಪಾಲಕರು ಕೇವಲ ಮೊಬೈಲ್ಗಳಲ್ಲಿ ಆಟ ಆಡುವುದನ್ನು ಬಿಟ್ಟು ಈ ಗಣಿತಕ್ಕೆ ಸಂಬಂಧಿಸಿದಂತೆ ಆಟ ಆಡುವುದನ್ನು ಕಲಿತರೆ ಗಣಿತವು ಸುಲಭ ಹಾಗೂ ಮಕ್ಕಳು ಮೊಬೈಲ್ಗಳಿಂದ ದೂರ ಇರಬಹುದು. ಈ ಸಮಯದಲ್ಲಿ ಮಾತನಾಡಿದ ಶಾಲೆಯ ಅಧ್ಯಕ್ಷ ನೇತ್ರಾಜ್ ಗುರುವಿನ ಮಠರವರು ನಮ್ಮ ಶಾಲೆಯಲ್ಲಿ ಗಣಿತಕ್ಕೆ ವಿಶೇಷವಾದ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ. ನಮ್ಮ ಮಕ್ಕಳು ಗಣಿತ ವಿಷಯವನ್ನು ಆಟ ಆಡಿದಂತೆ ಕಲಿಯುತ್ತಾರೆ. ಕಳೆದ ಸಾಲಿನಲ್ಲಿ ೧೦ನೇ ತರಗತಿಯ ಎಲ್ಲಾ ಮಕ್ಕಳು ಗಣಿತ ವಿಷಯದಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದು ನೂರಕ್ಕೆ ನೂರು ಅಂಕಗಳನ್ನು ಪಡೆದಿರುವ ಮಕ್ಕಳಿದ್ದಾರೆ ಎಂದು ಹೇಳಿದರು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ಗುರುವಿನ ಮಠ ಮಾತನಾಡಿ ಮಕ್ಕಳಿಗೆ ಪ್ರತಿ ತಿಂಗಳು ಯಾವುದಾದರೂ ಒಂದು ವೇದಿಕೆ ಮೂಲಕ ಮಕ್ಕಳ ಕೌಶಲ್ಯ ಹೊರಗಡೆ ಬರಲು ನೋಡಿಕೊಳ್ಳುತ್ತೇವೆ. ಅದೇ ರೀತಿಯಾಗಿ ಇಂದು ಗಣಿತ ದಿನದಂದು ಮಕ್ಕಳು ತಮ್ಮ ಕೌಶಲ್ಯವನ್ನು ತೋರುತ್ತಿದ್ದಾರೆ ಎಂದು ಹೇಳಿದರು. ಈ ಸಮಯದಲ್ಲಿ ಸಿದ್ದೇಶ್, ಮಂಜುನಾಥ್, ತೇಜಸ್ವಿನಿ, ತಿಮ್ಮಪ್ಪ, ಸಲ್ಲಿನ, ಸೌಜನ್ಯ, ಮಂಜುನಾಥ್, ಕುಮುದಿನಿ, ವಿಜಯಲಕ್ಷ್ಮಿ, ಮುತ್ತ, ಚಂದ್ರಶೇಖರ್ ಹಾಗೂ ಪಾಲಕರೆಲ್ಲರೂ ಇದ್ದರು.
ಗಂಗಾವತಿ: ಇಲ್ಲಿನ ಶಂಕರ ಮಠದಲ್ಲಿ ಶ್ರೀ ದತ್ತಾತ್ರೇಯ ಜಯಂತೋತ್ಸವದ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಆಶಯದಂತೆ ಹರ ಮತ್ತು ಹರಿ ಒಂದೇ ಎಂಬ ದಿವ್ಯ ಸಂದೇಶವನ್ನು ಸಾರುವ ಉದ್ದೇಶದಿಂದ ಹಾಗೂ ಶ್ರೀಮತಸ್ಥರು ಒಂದಾಗುವುದರ ಮೂಲಕ ಸನಾತನ ಧರ್ಮದ ರಕ್ಷಣೆಗಾಗಿ ಹರಿ ನಾಮಾಮೃತ ಕೋಟಿ ಬರವಣಿಗೆ ಪತ್ರಿಕೆಯನ್ನು ಧರ್ಮದರ್ಶಿ ನಾರಾಯಣರಾವ್ ಉದ್ಘಾಟಿಸಿದರು
ಬಳಿಕ ಮಾತನಾಡಿದ ಅವರು ಯಾವುದೇ ಜಾತಿ ಮತ ಪಂಥವೆನಿಸದೆ ಸರ್ವ ಜನಾಂಗದವರು ಶಿವನಾಮ ಹಾಗೂ ರಾಮನಾಮವನ್ನು 108 ಬರವಣಿಗೆ ಮೂಲಕ ಶೃಂಗೇರಿ ಉಭಯ ಜಗದ್ಗುರುಗಳಿಗೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿ. ಆಗಮಿಸಿದ ಸರ್ವ ಭಕ್ತಾದಿಗಳಿಗೆ ವಿತರಿಸಿದರು.
ಇದೇ ಸಂದರ್ಭದಲ್ಲಿ ಮೋಹನ್ ಹಂಪಿ ಅವರಿಂದ ಶ್ರೀ ದತ್ತಾತ್ರೇಯ ಕುರಿತು ಪ್ರವಚನ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು.
ಅವರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪಿಹೆಚ್ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿ ಈ ಹಿಂದೆ ಉಪನ್ಯಾಸಕನಾಗಿ ಕೆಲಸ ನಿರ್ವಹಿಸುವಾಗ ನೆಮ್ಮದಿಯಿತ್ತು. ಬೋಧನೆ ಹೊರತು ಬೇರೆ ಯಾವುದೇ ಕಾರ್ಯಭಾರ ಇರಲಿಲ್ಲ. ಆದರೆ ಈಗ ಬೋಧನೆ ಸಹಿತ ಇನ್ನಿತರೆ ಕೆಲಸಗಳ ಒತ್ತಡದಲ್ಲಿ ಕಲಿಸುವುದು ಒಂದು ಭಾಗವಾಗಿ ಮಾತ್ರ ಉಳಿದಿದೆ ಎಂದು ಹೇಳಿದರು.
ರಾಜ್ಯಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ಡಾ.ಜೆ. ಮೋಹನ್ ಪ್ರಾಸ್ತಾವಿಕ ಮಾತನಾಡುತ್ತಾ ಕಾರ್ಯಾಗಾರಗಳು ಫಲಿಶಾಂಶ ಹೆಚ್ಚುಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು
ಪ್ರಾಂಶುಪಾಲರಾದ ವಿ. ಲೋಕೇಶ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಬದಲಾದ ಪಠ್ಯವಸ್ತು, ಪ್ರಶ್ನೆಪತ್ರಿಕೆಗೆ ಅನುಗುಣವಾಗಿ ಬೋಧನಾ ವಿಧಾನದಲ್ಲಿ ಹೊಸತನ ಕಂಡುಕೊಳ್ಳಲು ಇಂತಹ ಕಾರ್ಯಾಗಾರಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದರು.
ಹಿರಿಯ ಪ್ರಾಂಶುಪಾಲರಾದ ಹೆಚ್.ಬಿ. ನರಸಿಂಹಮೂರ್ತಿ, ಜಿ.ದೇವರಾಜ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್. ದೇವೇಂದ್ರಪ್ಪ, ಸಂಪನ್ಮೂಲ ವ್ಯಕ್ತಿ ಡಾ.ಎನ್. ಪ್ರಭಾಕರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಉಪನ್ಯಾಸಕಿ ಶ್ರೀಮತಿ ಮೀರಾ ನಾಡಿಗ್ ಪ್ರಾರ್ಥಿಸಿದರು, ಉಪನ್ಯಾಸಕ ಬುಡೇನ್ ಸಾಬ್ ಸ್ವಾಗತಿಸಿದರು, ಪ್ರಾಂಶುಪಾಲರಾದ ಶ್ರೀಮತಿ ಸರೋಜಮ್ಮ ವಂದಿಸಿದರು. ಉಪನ್ಯಾಸಕ ಆರ್.ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಮತ್ತು ಹಲ್ಲಿನ ಆಸ್ಪತ್ರೆ ಗಂಗಾವತಿ, ಇವರುಗಳ ಸಹಯೋಗದಲ್ಲಿ ಡಿಸೆಂಬರ್-೧೮ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಹೊಸಕೇರಾ ಗ್ರಾಮದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸಕೇರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸುನಿತಾ ಎಸ್. ಮತ್ತು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಕನ್ನಡಪ್ರೇಮಿ ಲಯನ್ ಜಿ. ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು ಹಾಗೂ ಗಂಭೀರ ಕಾಯಿಲೆಗಳಾದ ಹೃದಯರೋಗ, ಕಣ್ಣಿನ ತಪಾಸಣೆ, ಸಕ್ಕರೆ ಕಾಯಿಲೆ, ಬಿ.ಪಿ., ದಂತಚಿಕಿತ್ಸೆ ಸೇರಿದಂತೆ ಮುಂತಾದ ಕಾಯಿಲೆಗಳಿಗೆ ಸಂಬAಧಿಸಿದAತೆ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ೯೪೪೮೨೨೮೭೩೮ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.