ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಸಿ.ಡಿ ನೇಮಕ.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕಾತಿಯು ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಆಗಸ್ಟ್-೨೩ ಶನಿವಾರ ನಗರದ ಕೋರ್ಟ್ ಮುಂಭಾಗದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ನಡೆಯಿತು.

ಗಂಗಾವತಿ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ರಾಮಕೃಷ್ಣ ಸಿ.ಡಿ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸವ ಮಾನ್ವಿ ಹಾಗೂ ಖಜಾಂಜಿಯಾಗಿ ದೇವದಾನಂ ಅವರು ಆಯ್ಕೆಯಾದರು ಎಂದು ಜಿಲ್ಲಾ ಅಧ್ಯಕ್ಷರಾದ ರಮೇಶ ಕೋಟಿ ಅವರು ತಿಳಿಸಿದರು.

ಪದಾಧಿಕಾರಿಗಳ ಆಯ್ಕೆಯ ಪೂರ್ವದಲ್ಲಿ ನೇತೃತ್ವವಹಿಸಿದ್ದ ಹೆಚ್. ಮಲ್ಲಿಕಾರ್ಜುನ ಅವರು ಮಾತನಾಡಿ, ಈ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಜಾಪ್ರಭುತ್ವದ ವ್ಯವಸ್ಥೆಯಂತೆ ಚುನಾವಣೆ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳು ಸಂಘದ ಬೈಲಾಗಳಲ್ಲಿನ ನಿಯಮಗಳಿಗೆ ಬದ್ಧರಾಗಿ, ಸಂಘದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಮಾರ್ಗದರ್ಶನದಂತೆ ಸಂಘವನ್ನು ಬಲಪಡಿಸಿಕೊಳ್ಳಬೇಕು.

ಸಂಘದ ಎಲ್ಲಾ ಸದಸ್ಯರ ವಿಶ್ವಾಸವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಅದರಂತೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಗಳಿಗೆ ಆಕಾಂಕ್ಷಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಎಲ್ಲಾ ಸದಸ್ಯರ ಮತದಾನದ ಮೂಲಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಮಕೃಷ್ಣ ಸಿ.ಡಿ ಯವರು ಮಾತನಾಡಿ, ಮತ ಚಲಾಯಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ಸಂಘದ ರಾಜ್ಯ, ಜಿಲ್ಲಾ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಂಘವನ್ನು ಒಮ್ಮತದಿಂದ ಮುನ್ನಡೆಸಿಕೊಂಡು ಹೋಗುವುದಾಗಿ ಹಾಗೂ ಸಂಘದ ಯಾವುದೇ ಸದಸ್ಯರು ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡು ಇತ್ಯರ್ಥಪಡಿಸಿಕೊಳ್ಳಬೇಕು.

ಸಂಘಕ್ಕೆ ಮುಜುಗರವುಂಟು ಮಾಡುವಂತಹ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಸದಸ್ಯರಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ಮಂಜುನಾಥ ಎಂ., ಡಿ.ಎಂ. ಸುರೇಶ, ದೇವದಾನಂ, ಹೆಚ್. ಭೋಗೇಶ, ಸೋಮಪ್ಪ, ಎಂ.ಡಿ ಗೌಸ್, ಶರಣಯ್ಯ ಹಿರೇಮಠ, ನಿಂಗಪ್ಪ ನಾಯಕ, ಜೆ. ಶ್ರೀನಿವಾಸ, ಎನ್. ಮಲ್ಲಿಕಾರ್ಜುನ, ಎಸ್. ಮಾರ್ಕಂಡೇಯ, ಮಂಜುನಾಥ ಆರತಿ, ನಾಗರಾಜ ಅಂಗಡಿ ಹಾಗೂ ಮಂಜುನಾಥ ವಣಗೇರಿ ಇವರುಗಳು ಉಪಸ್ಥಿತರಿದ್ದರು.

ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ಗಂಗಾವತಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನ ವಿನಾಯಕ ದೇವಸ್ಥಾನದ ನಾಲ್ಕನೆಯ ವರ್ಷದ ವಾರ್ಷಿಕೋತ್ಸವ ನಡೆಯಲಿದೆ.

ದಿನಾಂಕ 25 ರಂದು ಸೋಮವಾರ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಎಂದು ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಸೇರಿದಂತೆ ಅಲ್ಲಿನ ವಾಹನ ಚಾಲಕರ ಮತ್ತು ಮಾಲೀಕರ ಸದಸ್ಯರುಗಳು ಹೇಳಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾದ್ರಪದ ಮಾಸದ ಸೋಮವಾರ ದಿನದಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ಹಲವಾರು ಪೂಜಾ ಕಾರ್ಯಕ್ರಮಗಳನ್ನು ನಡೆಯಲಿವೆ.

ಶ್ರೀ ವಿನಾಯಕನಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ಮತ್ತಿತರ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಸೂಳೇಕಲ್ ಬೃಹನ್ ಮಠದ ಶ್ರೀ ವೇದಮೂರ್ತಿ ಭುವನೇಶ್ವರ ತಾತನವರು ಕಲ್ಮಠದ ಡಾಕ್ಟರ್ ಕೊಟ್ಟೂರು ಮಹಾಸ್ವಾಮಿಗಳು ಸೇರಿದಂತೆ ಶಾಸಕ ಜನಾರ್ದನ್ ರೆಡ್ಡಿ ಭಾಗವಹಿಸಲಿದ್ದಾರೆ.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ರಾಜಕೀಯ ಮುಖಂಡರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಡಾ ಶಿವಕುಮಾರ್ ಮಾಲಿಪಾಟೀಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ ಅವರು ಸಾರ್ವಜನಿಕರಿಗಾಗಿ ಅನ್ನ ದಾಸೋಹ ನಡೆಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಾಹನ ಚಾಲಕರು ಮಾತನಾಡಿ ಸದರಿ ಕಾಲೇಜಿನ ಗೃಹರಕ್ಷಕ ದಳದ ಕಚೇರಿಯ ಪಕ್ಕದಲ್ಲಿರುವ ಪರಿಸರವು ಅತ್ಯಂತ ಕೆಟ್ಟ ವಾಸನೆಯಿಂದ ಕೂಡಿದ್ದು ಕಳೆದ ನಾಲ್ಕು ವರ್ಷದಿಂದ ಅಧ್ಯಕ್ಷ ಶರಣಬಸಪ್ಪ ಅವರ ನೇತೃತ್ವದಲ್ಲಿ ಸ್ವಚ್ಛಗೊಳಿಸಿ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಮಾದರಿಯನ್ನಾಗಿ ಮಾಡಿದ್ದಾರೆ.

ವಾಹನ ಚಾಲಕರ ಹಿತ ಕಾಪಾಡುವ ದೇವಸ್ಥಾನ ಮುಂದೊಂದು ದಿನ ಬೃಹತ್ ಶಕ್ತಿ ಕೇಂದ್ರ ವಾಗಲಿದೆ ಎಂದು ಹೇಳಿದರು.

ಸೋಮವಾರದಂದು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಭೂಮಿ ಪೂಜೆ – ರೂಪಾರಾಣಿ ಲಕ್ಷ್ಮಣ ರೈಚೂರ್

ಗಂಗಾವತಿ ನಗರದ ಆರ್ಯವೈಶ್ಯ ಸಮಾಜದ ಜಯನಗರದ ಮಾಂತಗುಂಡ ಶಾಲೆ ಹತ್ತಿರ ಇರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ಅಡಿಗಲು ಸಮಾರಂಭ.

ಇದೇ ದಿನಾಂಕ 25 ಸೋಮವಾರ ದಿನದಂದು ಜರುಗಲಿದೆ ಎಂದು ಆರ್ಯವೈಶ್ಯ ಸಮಾಜದ ಅಧ್ಯಕ್ಷ ರೂಪ ರಾಣಿ ರೈಚೂರ್ ಹೇಳಿದರು.

ಅವರು ಶನಿವಾರದಂದು ವಾಸವಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಅಂದು ಬೆಳಿಗ್ಗೆ ಗಂಗೆ ಪೂಜೆ. ಪೂರ್ಣ ಕುಂಭದೊಂದಿಗೆ ಶ್ರೀ ನಗರೇಶ್ವರ ದೇವಸ್ಥಾನದಿಂದ ಸಕಲ ವಾದ್ಯ ವೈಭವದೊಂದಿಗೆ ದೇವಸ್ಥಾನ ನಿರ್ಮಾಣದ ಸ್ಥಳಕ್ಕೆ ಹೋಗಲಾಗುತ್ತಿದ್ದು.

ಭೂಮಿ ಪೂಜೆಯ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಗರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ದಿಗಂಬರ್ ಭಟ್ ಜೋಶಿ ನೆರವೇರಿಸಲಿದೆ. ಸಮಸ್ತ ಆರ್ಯವೈಶ್ಯ ಸಮಾಜ ಬಾಂಧವರು ಆಗಮಿಸಬೇಕೆಂದು ಮನವಿ ಮಾಡಿದರು.

ಕಾರ್ಯದರ್ಶಿ ಈಶ್ವರ ಶೆಟ್ಟಿ ಮಾತನಾಡಿ, ಗಂಗಾವತಿ ಆರ್ಯವೈಶ್ಯ ಸಮಾಜದ ಹಲವು ದಶಕಗಳ ಕನಸು ನನಸಾಗುವ ದಿನ ಸಮೀಪಸುತ್ತಿದೆ.

ಕುಲದೇವತೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ನಿರ್ಮಾಣ ಭೂಮಿ ಪೂಜ ಕಾರ್ಯಕ್ರಮಕ್ಕೆ ಶಾಸಕರಾದ ಗಾಲಿ ಜನಾರ್ದನ್ ರೆಡ್ಡಿ ಸಂಸದರಾದ ರಾಜಶೇಖರ್ ಹಿಟ್ನಾಳ್ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಮಾಜಿ ವಿಧಾನಪರಿಷತ್ ಸದಸ್ಯ ಎಚ್ ಆರ್ ಶ್ರೀನಾಥ್ ಸೇರಿದಂತೆ ಇತರ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ಸಮಾಜದ ಹಿರಿಯರು ಕುಟುಂಬ ಸಮೇತ ಭೂಮಿ ಪೂಜೆ ಅಡಿಗಲು ಕಾರ್ಯಕ್ರಮಕ್ಕೆ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೊಳಿಸಬೇಕೆಂದು ತಿಳಿಸಿದರು.

ಆರ್ಯವೈಶ್ಯ ಸಮಾಜ ಮಹಿಳಾ ಅಧ್ಯಕ್ಷರಾದ ಭಾಗ್ಯ ಈಶ್ವರ್ ಶ್ರೇಷ್ಠಿ, ಉಪಾಧ್ಯಕ್ಷರಾದ ಜಿ ಸುರೇಶ ಶ್ರೇಷ್ಠಿ, ಕಾರ್ಯದರ್ಶಿ ಈಶ್ವರ ಶ್ರೇಷ್ಠಿ, ಖಜಂಚಿ ಮಾರುತಿ ಪ್ರಸಾದ್ ರಾಯಚೂರು.

ಯುವ ಘಟಕದ ಅಧ್ಯಕ್ಷ ಪ್ರಸಾದ ಪಾಂಘಂಟಿ ಸೇರಿದಂತೆ ಇತರರು ಭೂಮಿ ಪೂಜ ಸಮಾರಂಭ ಕುರಿತು ಮಾತನಾಡಿದರು.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವಿದ್ಯಾರ್ಥಿಗಳಿಗಾಗಿ ವಿವಿಧ ರೀತಿಯ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.

ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಪಾಲ್ಗೊಂಡರು. “ಪುಟಾಣಿ ವಿದ್ಯಾರ್ಥಿಗಳು ದೇವರಿದ್ದಂತೆ, ಅವರನ್ನು ಇಂತಹ ವೇಷಭೂಷಣಗಳಲ್ಲಿ ನೋಡುವುದೇ ಭಾಗ್ಯವಿದ್ದಂತೆ” ಎಂದು ಶಾಲೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ಅವರು ತಮ್ಮ ಉದ್ಘಾಟನಾ ನುಡಿಗಳನ್ನಾಡಿದರು.

“ಶಾಲೆಯಲ್ಲಿ ಎಲ್ಲಾ ರೀತಿಯ ಆಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅದೇರೀತಿಯಾಗಿ ಕೃಷ್ಣ ಜನ್ಮಾಷ್ಠಮಿಯನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಗುತ್ತಿದೆ” ಎಂದು ಶಾಲೆಯ ಕಾರ್ಯದರ್ಶಿಗಳಾದ ಶ್ರೀ ರುಬೇನ್ ಮಿರಜ್‌ಕರ್ ಅವರು ತಿಳಿಸಿದರು.

“ವಿದ್ಯಾರ್ಥಿಗಳಿಗೆ ಇಂತಹ ಚಟುವಟಿಕೆಗಳನ್ನು ಏರ್ಪಡಿಸುವುದರಿಂದ ಮಕ್ಕಳಲ್ಲಿ ಸೃಜನಶೀಲತೆ ಮೂಡುತ್ತದೆ ಮತ್ತು ಅವರನ್ನು ಕಲಿಕೆ ಕಡೆಗೆ ಹೆಚ್ಚು ಆಕರ್ಷಣೆಯನ್ನು ಮಾಡುತ್ತದೆ” ಎಂದು ಶಾಲೆಯ ಆಡಳತಾಧಿಕಾರಿಗಳಾದ ಶ್ರೀ ಚಂದ್ರಕಾಂತ್ ರಾವ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಆರೋನ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ ನಾಯಕ, ನಿವೇದಿತಾ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ರೇಖಾ ಠಾಕೂರ್, ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿಗಾಗಿ:
ಮಂಜುನಾಥ ನಾಯಕ
ಮುಖ್ಯೋಪಾಧ್ಯಾರು,
ಆರೋನ್ ಮೀರಜಕರ್ ಶಾಲೆ ಗಂಗಾವತಿ.
ಮೊ.ನಂ: ೯೯೮೦೫೧೯೩೨೭

ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬುಧವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ವಹಿಸಿದ್ದರು.

ಮುಖ್ಯ ಗುರುಗಳಾದ ಜಗನ್ನಾಥದಾಸ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಗುರುಪಾದಯ್ಯ, ಲಯನ್ ಕಾಶಿ ವಿಶ್ವನಾಥ ಸಿರಿಗೇರಿ, ಲಯನ್ ರಾಮನಾಥ ಭಂಢಾರ್ಕರ್, ಲಯನ್ ಆಜಾದ್, ಲಯನ್ಸ್ ಕ್ಲಬ್ ಖಜಾಂಚಿ ಶಿವಪ್ಪ ಗಾಳಿ, ಲಯನ್ಸ ಶಾಲೆಯ ಆಡಳಿತಾಧಿಕಾರಿ ಚಂದ್ರೇಗೌಡ, ಜಂಬಣ್ಣ ಐಲಿ ಇತರರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ. ಮಾತನಾಡಿದ ಗಣ್ಯರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ.

ಧರ್ಮ ನಿಷ್ಠೆಯನ್ನು ಹೊಂದಿದ್ದ ಶ್ರೀಕೃಷ್ಣ ಆತನ ಬಾಲ ಲೀಲೆಗಳು, ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಧರ್ಮ ರಕ್ಷಕನಾಗಿ ಪಾಂಡವರ ಗೆಲುವಿಗಾಗಿ ನಿಲ್ಲುವುದರ ಜೊತೆಗೆ ದುಷ್ಟರ ಸಂಹಾರ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತಗಳು ಸರ್ವ ಕಾಲಕ್ಕೂ ಅನ್ವಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ, ರಾಧಾ ಅವರ ವೇಷಧಾರಿ ಸ್ಪರ್ಧೆ ನೃತ್ಯ, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಗಮನ ಸೆಳೆದವು.

ಸ್ಪರ್ಧೆಯ ನಿರ್ಣಯಕರಾಗಿ ಶಕುಂತಲಾ ಕುಲಕರ್ಣಿ, ಉಲ್ಲಾಸ್, ಪ್ರತಿಮಾ ಸೇರಿದಂತೆ ಶಿಕ್ಷಕರು ಪಾಲಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನಂತರ ವಿವಿಧ ವೇಷಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ವಿಶೇಷವಾಗಿ ಅಹಮದ್ ಅಲಿ ಹಾಗೂ ಖಲಿದಾ ದಂಪತಿಗಳ ಮಗನಾದ ಆದಿಲ್ ಖಾನ್ ಎಂಬ ೨ನೇ ತರಗತಿಯ ವಿದ್ಯಾರ್ಥಿ ಕೃಷ್ಣನ ವೇಷ ಧರಿಸಿ ಸಾಮರಸ್ಯ ಮೆರೆದನು.

ಮಾಹಿತಿಗಾಗಿ:
ಡಾ|| ಶಿವಕುಮಾರ ಮಾಲಿಪಾಟೀಲ್
ಅಧ್ಯಕ್ಷರು, ಲಯನ್ಸ್ ಕ್ಲಬ್ ಗಂಗಾವತಿ
ಮೊ.ನಂ: ೯೪೪೮೩೦೨೭೭೫

ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಹಲವಾರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾವತಿ ಚಾರಣ ಬಳಗದ ಮಾರ್ಗದರ್ಶಕರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರಕಟಣೆಯಲ್ಲಿ ಸಂತಸ ಹಂಚಿಕೊಂಡರು.

ಪ್ರವಾಸೋದ್ಯಮ ಮಂತ್ರಿಗಳಾದ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಬೆಣಕಲ್ ಗ್ರಾಮಕ್ಕೆ ಭೇಟಿ ಕೊಟ್ಟು ಅಲ್ಲಿಯ ಪ್ರಾಗೈತಿಹಾಸಿಕ ಸ್ಮಾರಕಗಳ ಬಗ್ಗೆ ಮಾಹಿತಿ ಪಡೆದಿದ್ದರು.

ಅದರ ಬಗ್ಗೆ ವಿಧಾನಸಭೆ ಪ್ರಶ್ನೋತ್ತರ ವೇಳೆ ಚರ್ಚೆ ನಡೆದು ನಾಡಿನ ಗಮನ ಸೆಳೆದಿತ್ತು.

ಎರಡು ವರ್ಷಗಳ ಹಿಂದೆ ಸುವರ್ಣ ಚಾನಲ್ ಹಾಗೂ ಕನ್ನಡಪ್ರಭ ಪತ್ರಿಕೆಗಳು ನಡೆಸಿದ ಕರ್ನಾಟಕದ ಏಳು ಅದ್ಭುತಗಳ ಅಭಿಯಾನದಲ್ಲಿ ಹಿರೇಬೆಣಕಲ್ ಮೊರೆರ ಬೆಟ್ಟ ಮೊದಲ ಸ್ಥಾನ ಪಡೆದಿತ್ತು.

ಆಗಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಏಳು ಅಧ್ಬುತಗಳ ಕುರಿತು ಘೋಷಣೆ ಮಾಡಿದ್ದರು.

ಖ್ಯಾತ ನಟ ರಮೇಶ ಅರವಿಂದ, ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಸುಂದರರಾಜ್ ಇತರರು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ ಹತ್ತಾರು ವರ್ಷಗಳಿಂದ ಈ ಸ್ಥಳವನ್ನು ಪ್ರಚಾರ ಮಾಡಿ ಮುನ್ನೆಲೆಗೆ ತಂದ ಗಂಗಾವತಿ ಚಾರಣ ಬಳಗ ಇದರ ಮೂಲಭೂತ ಅಭಿವೃದ್ಧಿಯಾಗಿ ಆಗ್ರಹ ಮಾಡುತ್ತಾ ಬಂದಿದೆ.

ಇಲ್ಲಿಯವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳನ್ನು ಹತ್ತಾರು ಬಾರಿ ಮೊರೆರ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಅಭಿವೃದ್ಧಿಗೆ ಮನವಿ ಮಾಡಿದೆ.

ಈಗಲಾದರೂ ಸರಕಾರ ಮೊರೆರ ಬೆಟ್ಟ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳಿಗೆ ಹತ್ತು ಕೋಟಿ ರೂಪಾಯಿಗಳನ್ನು ಮಂಜೂರು ಮಾಡಬೇಕೆಂದು ಆಗ್ರಹಪಡಿಸಿದೆ.

ಗಂಗಾವತಿ ಚಾರಣ ಬಳಗದ ಪ್ರಮುಖರಾದ ಡಾ|| ಶಿವಕುಮಾರ್ ಮಾಲಿಪಾಟೀಲ್, ಮಂಜುನಾಥ ಗುಡ್ಲಾನೂರ್, ಮೈಲಾರಪ್ಪ ಬೂದಿಹಾಳ, ಪ್ರಹ್ಲಾದ್ ಕುಲಕರ್ಣಿ, ರಾಮನಾಥ ಭಂಡಾರಕರ್ ಹಾಗೂ ಬೆಣಕಲ್ ಗ್ರಾಮದ ವಿರೇಶ ಅಂಗಡಿ, ಬಸನಗೌಡ ಹೊಸಳ್ಳಿ, ಬೆಂಗಳೂರಿನಲ್ಲಿ ನಡೆದ ಪ್ರದರ್ಶನಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ ಭಜನೆ, ಧಾರ್ಮಿಕ ಭಕ್ತಿ ಗೀತೆಗಳು, ನೃತ್ಯ, ಕೋಲಾಟ ಹಾಗೂ ವಿವಿಧ ವೇಷ ಭೂಷಣಗಳ ಮೂಲಕ ನಡೆಸಲಾಗುವುದು. ಯಾಜ್ಞವಲ್ಕ್ಯ ಮಂದಿರದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಬೆಂಗಳೂರು ಕಾರ್ಯಾಧ್ಯಕ್ಷರಾದ ನಾಗರಾಜ ಎಸ್ ಗುತ್ತೇದಾರ ವಕೀಲರು ಈ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಭೆಯ ನಂತರ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಈ ಸಂಕೀರ್ತನಾ ಕಾರ್ಯಕ್ರಮಕ್ಕೆ ಎಲ್ಲರೂ ಒಂದೇ ಮನಸ್ಸಿನಿಂದ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸರ್ವ ಸಮಾಜದವರಲ್ಲಿ ಕೋರಿದ್ದಾರೆ.

ಮಾಹಿತಿಗಾಗಿ:
ಸದಾನಂದ ಶೇಟ್
ಅಧ್ಯಕ್ಷರು, ನಗರ ಸಂಕೀರ್ತನಾ ಯಾತ್ರೆ
ಮೊ.ನಂ: ೯೩೮೦೪೨೫೨೮೧

ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು.

ರೋಟರಿ ಕ್ಲಬ್, ಕಾವ್ಯ ಲೋಕ ಸಂಘಟನೆ ಮತ್ತು ವಿಶ್ವ ರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾತಂತ್ರ್ಯ ಸಂಭ್ರಮ 109ನೇ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಸ್ವವರಚಿತವಾಗಿರುವ ಕವನಗಳು ಸಾಮಾಜಿಕ, ರಾಜಕೀಯ, ಸಾಹಿತ್ಯಕವಾಗಿರುವ ವಿಷಯಗಳು ಪರಿಣಾಮಕಾರಿಯಾಗಿರಬೇಕೆಂದು ತಿಳಿಸಿದ ಅವರು ಕವನಗಳನ್ನು ವಾಚಿಸಿದರೆ ಅದು ಪರಿಣಾಮಕಾರಿಯಾಗಿ ವಿವಿಧ ಕ್ಷೇತ್ರಗಳಿಗೆ ತಲುಪುವುದರ ಮೂಲಕ ಸ್ಪಂದನೆ ಸಿಗಬೇಕೆಂದರು.

ಇತ್ತೀಚಿನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಮೊಬೈಲ್, ಫೇಸ್ ಬುಕ್ ಗಳಲ್ಲಿ ಪೋಸ್ಟ್ ಮಾಡಿ ತೃಪ್ತಿ ಪಡುತ್ತಿರುವದನ್ನು ನಾವು ಕಾಣುತ್ತೇವೆ.

ಕವಿಗಳು ಅರ್ಥಗರ್ಭಿತ ವಿಷಯಗಳನ್ಳು ಅಳವಡಿಸಿಕೊಂಡಾಗ ಕವನಗಳಿಗೆ ಮೌಲ್ಯ ಬರುತ್ತದೆ ಎಂದರು.

ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ ಅವರು ಬರುವ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕವಿಗೋಷ್ಠಿ ಆಯೋಜಿಸಲಿ ಇದಕ್ಕೆ ಎಲ್ಲರು ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವಿಜಯ ವೈದ್ಯ ಮಾತನಾಡಿ ಕವಿಗಳು ಸಮಾಜ ತಿದ್ದುವ ಹಾಗೆ ಕವನಗಳಲ್ಲಿ ವಿಷಯ ಸಂಗ್ರಹವಾಗಬೇಕಾಗಿದೆ.

ಕವಿಗೋಷ್ಟಿ ಎಂದರೆ ಬಹಳಷ್ಟು ಕವಿಗಳು ಭಾಗವಹಿಸುವಂತ ಆಸಕ್ತಿ ಇರಬೇಕೆಂದು ತಿಳಿಸಿದ ಅವರು ಸ್ವರಚಿತ ಕವನಗಳಲ್ಲಿ ಕ್ರೀಯಾಶೀಲತೆ ಇರಬೇಕೆಂದರು.

ಕಾವ್ಯ ಲೋಕ ಸಂಘಟನೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಎಲೆಮರೆಕಾಯಿಯಂತೆ ಇರುವ ಪ್ರತಿಭೆಗಳನ್ನು ಗುರಿತಿಸುವ ಕಾರ್ಯ ಮಾಡುತ್ತಿರುವದು ಪ್ರಶಂಸನೀಯವಾಗಿದೆ ಎಂದರು.

ಸಿಜೆಕೆ ಪ್ರಶಸ್ತಿ ಪುರಸ್ಕ್ರತ ಸನ್ಮಾನಿತರಾದ ನಾಗರಾಜ್ ಇಂಗಳಗಿ ಮಾತನಾಡಿ ಕಾವ್ಯ ಲೋಕ ಸಂಘಟನೆ ಪರುಶರಾಮಪ್ರೀಯ ಅವರು ಕಳೆದ 30 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಪ್ರತಿಭಗೆಳನ್ನು ಗುರಿತಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಈ ಸಂಘಟನೆಗೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು. ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚೆನ್ನಬಸವ ಜೇಕಿನ್ ಮಾತನಾಡಿ 110 ನೇ ಕವಿಗೋಷ್ಟಿಗೆ 110 ಕವಿಗಳು ಭಾಗವಹಿಸುವ ರೀತಿ ಆಯೋಜನೆ ಮಾಡ ಬೇಕು ಇದಕ್ಕೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು.

ರೋಟರಿ ಅಸಿಸ್ಟೆಂಟ್ ಮಾಜಿ ಗವರ್ನರ್ ಟಿ.ಆಂಜನೇಯ ಅವರು ರೋಟರಿ ಸಂಸ್ಥೆಯ ಪ್ರಗತಿ ಮತ್ತು ಸೇವಾ ಕಾರ್ಯ ಕುರಿತು ವಿವರಿಸಿದರು.

ವೇದಿಕೆ ಮೇಲೆ ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜೇಶ್ವರಿ ಸುರೇಶ, ಡಾ.ಶಿವಕುಮಾರ, ನ್ಯಾಯವಾದಿ ನಿಂಗಪ್ಪ ಸುದ್ದಿ, ಮಂಜುನಾಥ ಹೊಸಕೇರಾ, ಪುಂಡಪ್ಪಗೌಡ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಕೆ.ಬಸವರಾಜ್, ಕಾವ್ಯ ಲೋಕ ಸಂಘಟನೆ ಅಧ್ಯಕ್ಷ ಎಂ. ಪರುಶರಾಮಪ್ರೀಯ, ವಿಶ್ವರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ರಗಡಪ್ಪ ಹೊಸಳ್ಳಿ ಉಪಸ್ಥಿತರಿದ್ದರು.

ಶಿಕ್ಷಕಿ ನಾಗರತ್ನ ಪ್ರಾರ್ಥಿಸಿದರು, ಜಡಿಯಪ್ಪ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕವನ ವಾಚನ ಮಾಡಿದ 20 ಕ್ಕೂ ಹೆಚ್ಚು ಕವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

 

ಫೋಟುಃ-17 ಜಿಎನ್ ಜಿ1ಃ- ಗಂಗಾವತಿ ಸಾಹಿತ್ಯ ಭವನದಲ್ಲಿ ಜರುಗಿದ 109 ನೇ ಕವಿಗೋಷ್ಟಿಯನ್ನು ಪತ್ರಕರ್ತ ರಾಮಮೂರ್ತಿ ನವಲಿ ಉದ್ಘಾಟಿಸಿದರು.

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು.

ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು.

ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ ಸಂಸದರಾದ ರಾಜಶೇಖರ್ ಹಿಟ್ನಾಳ್ ಪಿವಿ ಪಾಟೀಲ್ ಆರ್ ವಿ ಪಾಟೀಲ್ ಯಂಕಪ್ಪ ಹೊಸಳ್ಳಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ ಅತ್ಯಂತ ಸಹಕಾರಿಯಾಗಿದ್ದು, ದೇವರ ನಾಮ ಸ್ಮರಣೆಯ ಮೂಲಕ ಸರ್ವರಿಗೂ ಸುಖ ಶಾಂತಿ, ಸಮೃದ್ಧಿ ದೊರೆಯುವಂತೆ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೇಮಾವತಿ ಕುಲಕರ್ಣಿ, ಸುಮಾ ಗಡದ್, ರೇಣುಕಾ, ಕುಮದಾ, ಗೀತಾ ಬಾಯಿ, ಶ್ರೀದೇವಿ ಜಗನ್ನಾಥ್ ಅಳವಂಡಿಕರ್, ರಜಿನಿ, ವೀಣಾ ಅಳವಂಡಿ ಇತರರು ಉಪಸ್ಥಿತರಿದ್ದರು.