SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ
ಗಂಗಾವತಿ: ಜನೇವರಿ-೨೪ ಶನಿವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಆರೋನ್ ಮಿರಜ್ಕರ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ, ಆರೋನ್ ಮಿರಜ್ಕರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ SPECTRUM-3 ಎನ್ನುವ ಶೀರ್ಷಿಕೆಯಡಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀಮತಿ ಚಿನ್ನಮ್ಮ ಮಿರಜ್ಕರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಇ.ಸಿ.ಐ. ಚರ್ಚ್ನ ಬಿಷಪ್ ರವಿಕುಮಾರ್, ಅತಿಥಿಗಳಾಗಿ ಎಂ.ಎನ್.ಎಂ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಾಂತಪ್ಪ, ಯೇಸುದಾಸ್ ಫಾಸ್ಟರ್, ಸಂಸ್ಥೆಯ ಕಾರ್ಯದರ್ಶಿಗಳಾದ ರುಬೇನ್ ಮಿರಜ್ಕರ್, ಖಜಾಂಚಿಗಳಾದ ಸುನೀತಾ ಮಿರಜ್ಕರ್, ಶಾಲೆಯ ಆಡಳಿತಾಧಿಕಾಗಳಾದ ಜಿ. ಚಂದ್ರಕಾಂ
ತ್ರಾವ್, ಶಾಲೆಯ ವ್ಯವಸ್ಥಾಪಕರಾದ ಮಂಜುನಾಥ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಾನಸಾ ಪಾಟೀಲ್ ಹಾಗೂ ರೇಖಾ ಠಾಕೂರ್, ಝೀ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅಪ್ಪಣ್ಣ ಗಾಣಿಗೇರ್ ಮತ್ತು ವಾಣಿಗೌಡ ಇದ್ದರು.
ಕಾರ್ಯಕ್ರಮವನ್ನು ಪ್ರಾರ್ಥನೆ ಹಾಗೂ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟನೆ ಮಾಡಲಾಯಿತು. ಉಭಯ ಮುಖ್ಯೋಪಾಧ್ಯಾಯರು ಶಾಲಾ ವಾರ್ಷಿಕ ವರದಿ ವಾಚನವನ್ನು ಮಂಡಿಸಿದರು. ವೇದಿಕೆಯ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಯಿತು.
‘ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಲ್ಲಿ ಚೈತನ್ಯವನ್ನು ಉಂಟು ಮಾಡುತ್ತವೆ. ವಿದ್ಯಾರ್ಥಿಗಳು ತುಂಬಾ ಉತ್ತಮವಾದ ನೃತ್ಯವನ್ನು ಪ್ರದರ್ಶಿಸಲಿ’ ಎಂದು ಮುಖ್ಯ ಅತಿಥಿಗಳಾದ ಬಿಷಪ್ ರವಿಕುಮಾರ್ ಅವರು ಹೇಳಿದರು.
‘ಪ್ರತಿಯೊಂದು ಮಕ್ಕಳಲ್ಲಿ ತನ್ನದೇ ಆದ ಸುಪ್ತ ಪ್ರತಿಭೆಗಳಿರುತ್ತವೆ. ಅವುಗಳನ್ನು ಹುಡುಕಿ ತೆಗೆಯುವ ಕೆಲಸವನ್ನು ಶಿಕ್ಷಕರಾದ ನಾವು ಮಾಡಬೇಕಾಗಿದೆ’ ಎಂದು ಅತಿಥಿಗಳಾದ ಶಾಂತಪ್ಪನವರು ನುಡಿದರು.
‘ಇಂದಿನ ಮಕ್ಕಳೇ ನಾಳಿನ ಪ್ರಜೆಗಳು, ಮಕ್ಕಳು ದೇವರ ಪ್ರತಿರೂಪವಿದ್ದಂತೆ. ಮಕ್ಕಳ ಈ ಕಾರ್ಯಕ್ರಮವು ಸ್ವರ್ಗದಂತೆ ಭಾಸವಾಗುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಚಿನ್ನಮ್ಮ ಮಿರಜ್ಕರ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳನ್ನಾಡಿದರು.
‘ಒಂದು ಕೈ ಸೇರಿದರೆ ಚಪ್ಪಾಳೆಯಾಗದು ಎನ್ನುವಂತೆ, ಈ ಕಾರ್ಯಕ್ರಮವು ಒಬ್ಬರ ಶ್ರಮದಿಂದ ಯಶಸ್ವಿಯಾಗಲು ಸಾಧ್ಯವಿಲ್ಲ. ಹಾಗಾಗಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ತುಂಬು ಹೃದಯದ ವಂದನೆಗಳನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೇನ್ ಮಿರಜ್ಕರ್ ಅವರು ತಮ್ಮ ವಂದನಾ ನುಡಿಗಳನ್ನಾಡಿದರು.
ವೇದಿಕೆಯ ಕಾರ್ಯಕ್ರಮದ ನಂತರ ಮಕ್ಕಳಿಂದ ವಿಭಿನ್ನ ಪ್ರಕಾರದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅಪ್ಪಣ್ಣ ಗಾಣಿಗೇರ್ ಮತ್ತು ವಾಣಿಗೌಡ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಶ್ರಮಿಸಿದ ಎಲ್ಲರಿಗೂ ಸವಿನೆನಪಿನ ಕಾಣಿಕೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು, ಪಾಲಕರು, ಪತ್ರಿಕಾ ಮಾಧ್ಯಮದವರು, ಆರಕ್ಷಕ ಸಿಬ್ಬಂದಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ ಕಾರ್ಯಕ್ರಮದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪೊಲೀಸ್ ಉಪಾಧೀಕ್ಷರಾದ ಸಿದ್ದಲಿಂಗಪ್ಪಗೌಡ ಪಾಟೀಲ್, ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ಮಾಳಿ, ಪೊಲೀಸ್ ಉಪ ನಿರೀಕ್ಷಕರಾದ ಶ್ರೀಮತಿ ಶಾರದಮ್ಮ, ಆರಕ್ಷಕ ಪೊಲೀಸ್ ಉಪನಿರೀಕ್ಷಕರಾದ ಇಸ್ಮಾಯಿಲ್ ಸಾಹೇಬ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್ ವಸ್ತ್ರದ ಮಕ್ಕಳಿಗೆ ಪ್ರಶಸ್ತಿ ಪತ್ರವನ್ನು ಹಾಗೂ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.
ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಬರ್ಕೊಂಡು ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು ಮುಂದುವರೆದು ಪ್ಲಾಷ್ ಬ್ಯಾಕ್ಗೆ ಬಂದೆವು. ಮಲ್ಲಪ್ಪದೂರ ಉತ್ತಮ ನಟರು. ಅವರ ಊರು ಮೈಸೂರು ತಾ. ದೂರ. ಅದು ನಂಜನಗೂಡು ಕಡೆ ಬರುತ್ತದೆಯಂತೆ.! ನಮ್ಮೂರಿನಲ್ಲಿ ಹೇಮಾವತಿ ನದಿ ಅಣೆಕಟ್ಟೆ ಕೆಲಸ ಪ್ರಾರಂಭವಾಗಿ ಸರ್ಕಾರಿ ದಿನಗೂಲಿ ಕೆಲಸ ಸೇರಿ ಹೇಮಾವತಿ ವಸತಿ ಕಾಲೋನಿಯಲ್ಲಿ ವಾಸವಿದ್ದರು. ಆಗ ನಾನು ಹೈಸ್ಕೂಲು ವಿದ್ಯಾರ್ಥಿ. ಊರಿನಲ್ಲಿ ಜಿ.ಎಸ್.ಪ್ರಕಾಶ್ ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ, ರಾಜ್ಯೋತ್ಸವ ದಿನ ಸಾಮಾಜಿಕ ನಾಟಕ ಕಲಿತು ಹೆಚ್ಆರ್ಪಿ ಮನರಂಜನಾ ಮಂದಿರದಲ್ಲಿ ಪ್ರದರ್ಶಿಸುತ್ತಿದ್ದರು. ಬೇಲೂರು ಕೃಷ್ಣಮೂರ್ತಿಯವರ ಲಚ್ಚಿ, ತ್ಯಾಗಿ, ಕಂಬನಿ, ಕುದುರೆ ಮೊಟ್ಟೆ ನಾಟಕ ಪ್ರದರ್ಶಿಸಿದ ನೆನಪು. ಈ ಎಲ್ಲಾ ನಾಟಕಗಳಲ್ಲಿ ಮಲ್ಲಪ್ಪದೂರ ಅಭಿನಯಿಸಿದ್ದರು. ಈ ತಂಡ ಪ್ರದರ್ಶಿಸಿದ ಸುಳಿಯಲ್ಲಿ ಸಿಕ್ಕವರು ನಾಟಕ ರಂಗದ ಮೇಲೆ ಅದ್ಭುತವಾಗಿ ಮೂಡಿಬಂದಿತ್ತು. ತ್ಯಾಗಿ ನಾಟಕದ ಅಭಿನಯದಿಂದ ತ್ಯಾಗಿಮಂಜು ಎಂದೇ ಊರಿನಲ್ಲಿ ಹೆಸರಾಗಿದ್ದರು ಬ್ರದರ್ ಜಿ.ಆರ್.ಮಂಜುನಾಥ್. ನವೆಂಬರ್ ೧ಕ್ಕೆ ಕುದುರೆ ಮೊಟ್ಟೆ ನಾಟಕ ಪ್ರದರ್ಶಿಸಿ ನನಗೆ ಸ್ಟೂಡೆಂಟ್ ಆಗಿ ಗುರುಗಳನ್ನು ನೋಡಲು ಬರುವಂತೆ ರಂಗದ ಮೇಲೆ ಮಂಜಣ್ಣ ಹೇಳಿದ್ದರು. ಯಾವುದೇ ಡೈಲಾಗ್ ಇಲ್ಲದೆ ರಂಗ ಪ್ರವೇಶಿಸಿದ್ದ ನನ್ನನ್ನು ಬ್ರದರ್ ಕಾಮಿಡಿಗೆ ಬಳಸಿಕೊಂಡು ಗೇಲಿ ಮಾಡಿ ಪ್ರೇಕ್ಷಕರನ್ನು ನಗಿಸಿದ್ದರು. ಪ್ರಥಮ ರಂಗ ಪ್ರವೇಶವೇ ನನಗೆ ಶೇಮ್.! ಬಹುಶ: ನನಗೆ ಗೊತ್ತಿಲ್ಲದೇ ಇದನ್ನೇ ಸವಾಲಾಗಿ ಸ್ವೀಕರಿಸಿ ನಟ ನಾಟಕಕಾರ, ರಂಗ ವಿಮರ್ಶಕನಾಗಿ ಬೆಳೆದೆನು. ಮುಂದೆ ಮಂಜಣ್ಣ ನಾನೇ ಬರೆದಾಡಿಸಿದ ವೀರಪ್ಪನ್ ಭೂತ ನಾಟಕದಲ್ಲಿ ನಟಿಸಿದ್ದರು. ಈ ನಾಟಕಕ್ಕೆ ನಿಜವಾಗಿಯೂ ಜೀವ ತುಂಬಿ ಜನಪ್ರಿಯತೆಗೆ ಕಾರಣರಾದವರು ಮಲ್ಲಪ್ಪದೂರ. ಆಗ ಡಿಸೆಂಬರ್ ಜನವರಿ ತಿಂಗಳಲ್ಲಿ ಹಾಸನ, ಸಕಲೇಶಪುರ, ಹೊಳೆನರಸೀಪುರ ಜಾತ್ರೆಗಳಲ್ಲಿ ಈ ನಾಟಕ ಪ್ರದರ್ಶಿಸಿದೆವು. ಹಾಸನ ಜಾತ್ರೆ ವಸ್ತು ಪ್ರದರ್ಶನದಲ್ಲಿ ಸಂಜೆ ಆರರಿಂದ ಏಳು ಗಂಟೆಯವರೆಗೆ ಜಿಲ್ಲಾ ನಾಟಕ ತಂಡಗಳಿಗೆ ಸ್ಫರ್ಧಾ ನಾಟಕಕ್ಕೆ ಅವಕಾಶ. ಅಂದು ನಮ್ಮ ನಾಟಕದ ನಂತರ ಮಾಸ್ಟರ್ ಹಿರಣ್ಣಯ್ಯನವರ ನಾಟಕ. ನಾಟಕದ ಹೆಸರು ನೆನಪಿಲ್ಲ. ನಮ್ಮ ನಾಟಕದ ಮಧ್ಯೆ ನಿರೂಪಕರು ಸ್ವರೂಪ್ ಬಂದು ನಾಟಕ ಬೇಗ ಮುಗಿಸಿ ಮಾಸ್ಟರ್ ಹಿರಣ್ಣಯ್ಯನವರ ನಾಟಕ ಇದೆ ಎಂದು ಅವಸರಿಸಿ ನನಗೆ ಸಿಟ್ಟು ಬಂತು. ಆಗ ಹಿರಣ್ಣಯ್ಯನವರೇ ಏಕೆ ಅವರ ನಾಟಕಕ್ಕೆ ತೊಂದರೆ ಕೊಡ್ತಿರಿ. ಅವರು ಕಲಾವಿದರೇ ಚೆನ್ನಾಗಿ ಮಾಡ್ತಿದ್ದಾರೆ ಬಿಡಿ. ನನ್ನ ನಾಟಕ ನೋಡುವ ಆಸಕ್ತಿ ಇದ್ದವರು ಕಾಯುತ್ತಾರೆ. ನಾನು ನಾಟಕದಲ್ಲಿ ರಾಜಕಾರಣಿಗಳು ನೇರಾ ಟೀಕಿಸಿ ವಿಡಂಬಿಸಿದರೆ ಇವರು ಚಪ್ಪಲಿ ಸುತ್ತಿ ಹೊಡೆಯುತ್ತಿದ್ದಾರೆ ಅಷ್ಟೇ ಬಿಡಿ ಎಂದಿದ್ದರು. ಮಾಸ್ಟರ್ ಹಿರಣ್ಣಯ್ಯರಂತೆ ಮಲ್ಲಪ್ಪ ದೂರ ಕೂಡ ಸಂದರ್ಭೋಚಿತ ಹೊಸ ಡೈಲಾಗ್ ಹೊಡೆದು ಎದುರು ಪಾತ್ರದಾರಿಯನ್ನು ಗಲಿಬಿಲಿಗೊಳಿಸುತ್ತಿದ್ದರು. ಈ ವೀರಪ್ಪನ್ ಭೂತ ನಾಟಕ ನಾನು ಬರೆದು ಪ್ರಥಮ ಪ್ರದರ್ಶನ ತಾ. ೩೦-೧೧-೧೯೯೧ರಂದು ಗೊರೂರಿನಲ್ಲಿ ನಡೆದಿತು. ನಾಟಕ ನೋಡಿ ಕೃಪಾ ಎಂಬುವರು ತಾ. ೬-೧೨-೧೯೯೧ರ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಒಳ್ಳೆಯ ವಿಮರ್ಶೆ ಬರೆದಿದ್ದರು. ಯಾರಪ್ಪ ಕೃಪಾ ಇಷ್ಟು ಚೆನ್ನಾಗಿ ಬರೆದಿದ್ದಾರಲ್ಲಾ ಎಂದು ಆಶ್ಚರ್ಯಪಟ್ಟಿದ್ದೆ. ಇರಲಿ ಅಂದು ನಾನು ಸೃಷ್ಟಿಸಿದ ನಾಟಕದ ಪಾತ್ರಗಳು ಮುಂದಿನ ದಿನಗಳಲ್ಲಿ ವಾಸ್ತವವಾಗಿ ಗೋಚರಿಸಿದ್ದವು. ಆಗ ಯಾರ ಕಣ್ಣಿಗೂ ಬೀಳದ ವೀರಪ್ಪನ್ ಭೂತವಾಗಿ ಪೊಲೀಸರನ್ನು ಕಾಡುತ್ತಿದ್ದನು. ನನ್ನ ನಾಟಕದಲ್ಲೂ ವೀರಪ್ಪನ್ ಬರುವುದಿಲ್ಲ. ಬದಲು ಕಾಡಿನಲ್ಲಿ ಈರಪ್ಪ ಎಂಬ ವ್ಯಕ್ತಿ ಗಾರ್ಡ್ ಗಳ ಕೈಗೆ ಸಿಕ್ಕಿ ನಡೆಯುವ ಘಟನೆಗಳು ಕಾಲ್ಪನಿಕವಾಗಿ ರೂಪು ತೆಳೆದಿದ್ದವು. ಮುಂದೆ ಅವುಗಳಲ್ಲಿ ಒಂದಿಷ್ಟು ನಿಜವಾಗಿ ಘಟಿಸಿದವು. ಇದೇ ವರ್ಷ ೧೯೯೧ರಲ್ಲಿ ನಿಜ ವೀರಪ್ಪ ಮತ್ತು ಈರಪ್ಪ ಮುಖಾಮುಖಿ ಆಗಿದ್ದ ಸನ್ನಿವೇಶವನ್ನು ಜಿ.ಬಿ.ಅಶೋಕಕುಮಾರ್ ಅವರು ತಮ್ಮ ಹುಲಿಯ ನೆನಪು ಪುಸ್ತಕದಲ್ಲಿ ಬರೆದಿದ್ದಾರೆ.
ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಅವರ ಸನ್ಯಾಸ ಸ್ವೀಕಾರ ಸುವರ್ಣೋತ್ಸವ ಸಂಭ್ರಮಾಚರಣೆ ಹಾಗೂ ವಿಜಯ ಯಾತ್ರೆ ಪ್ರಯುಕ್ತ ಗಂಗಾವತಿಯ ಶಂಕರ ಮಠಕ್ಕೆ ಆಗಮಿಸಿ ಮಂಗಳವಾರದಂದು ಧರ್ಮಸಭೆಯನ್ನು ಉದ್ದೇಶಿಸಿ ಆಶೀರ್ವದಿಸಿದರು. ಸನಾತನ ಎಂಬುದು ನಮ್ಮ ದೇಶದ ಪರಂಪರೆ ಹಾಗೂ ಸಂಸ್ಕೃತಿಯಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ವಿದೇಶಿಗರು ಸಹ ಇಲ್ಲಿಯ ಪದ್ಧತಿಗಳನ್ನು ಅನುಸರಿಸಿಕೊಳ್ಳುತ್ತಿರುವುದು ಕಾಣಬಹುದಾಗಿದೆ. ಇತರೆ ಅನ್ಯ ಧರ್ಮೀಯರ ಕಾಲದ ಸಂಕಷ್ಟದ ಸಂದರ್ಭದಲ್ಲಿ ಪುನರ್ ಸ್ಥಾಪಿಸಿದ ಕೀರ್ತಿಗೆ ಆದಿ ಗುರು ಶ್ರೀ ಶಂಕರಾಚಾರ್ಯರು ಪ್ರಥಮರು ಎಂದು ಹೇಳಬಹುದು. ಪುನರಪಿ ಜನನಂ ಪುನರಪಿ ಮರಣಂ ಎನ್ನುವಂತೆ ಹುಟ್ಟಿದ ಜನ್ಮ ಸಾರ್ಥಕವಾಗಲೂ ಗುಣಮಟ್ಟದ ಸಂಸ್ಕಾರಗಳನ್ನು ಮಾನವೀಯ ಮೌಲ್ಯಗಳನ್ನು. ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ. ಫಲವತ್ತಾದ ಭೂಮಿ ಒಂದಕ್ಕೆ ಯಾ
ವ ಬೀಜವನ್ನು ನಾವು ಹಾಕಿ ನೀರು ಹಾಕಿ ಬೆಳೆಸುವುದು ಎಷ್ಟು ಮುಖ್ಯವೋ ಆ ಬೀಜದಲ್ಲಿರುವ ಗುಣಮಟ್ಟ ಅಂದರೆ ಸಂಸ್ಕಾರ ಅವಶ್ಯವಾಗಿರುತ್ತದೆ ಎಂದು ಹತ್ತು ಹಲವಾರು ಸಂದೇಶದ ಮಹಾತ್ಮಗಳನ್ನು ಕುರಿತು ಮಾಹಿತಿ ನೀಡಿದರು. ಜೊತೆಗೆ ಶೃಂಗೇರಿ ಪೀಠದ ೧೨ನೇ ಜಗದ್ಗುರುಗಳಾದ ಶ್ರೀ ವಿದ್ಯಾರಣ್ಯ ಮಹಾಸ್ವಾಮಿಗಳವರ ಅನುಗ್ರಹದಿಂದ ೧೩೩೬ರಲ್ಲಿ ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೊಳ್ಳುವುದರ ಮೂಲಕ ಸನಾತನದ ಸಂರಕ್ಷಣೆಗೆ ಆಳ್ವಿಕೆಯ ನಾಲ್ಕು ಮನೆತನಗಳು ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಹೀಗಾಗಿ ಅವರ ಹೆಸರನ್ನು ಶಂಕರ ಮಠದಲ್ಲಿ ನವೀಕೃತಗೊಂಡ ಭವನಕ್ಕೆ ಶ್ರೀ ವಿದ್ಯಾರಣ್ಯ ಮಹಾಸ್ವಾಮಿಗಳ ಹೆಸರನ್ನು ನಾಮಕರಣಗೊಳಿಸಬೇಕೆಂದು ಸಲಹೆ ನೀಡಿದರು. ಒಟ್ಟಾರೆ ದೇವರು ಒಬ್ಬನೇ ನಾಮ ಹಲವು ಎಂಬಂತೆ ಹರಿ ಹಾಗೂ ಹರ ದುಷ್ಟರ ಸಂಹಾರಕ್ಕಾಗಿ, ಶಿಷ್ಟರ ಸಂರಕ್ಷಣೆಗಾಗಿ ವಿವಿಧ ನಾಮದ ಅಡಿಯಲ್ಲಿ ದೇವರುಗಳಿಗೆ ಪ್ರಾರ್ಥಿಸಿಕೊಳ್ಳಲಾಗುತ್ತದೆ ಎಂದು ಆಶೀರ್ವದಿಸಿದರು.
ಗಂಗಾವತಿಯ ಸಮಸ್ತ ನಾಗರೀಕರ ಪರವಾಗಿ ಅಭಿನಂದನಾ ಪತ್ರ ನೀಡಿ, ಗೌರವ ಸಮರ್ಪಣೆಯನ್ನು ನಾರಾಯಣರಾವ್. ವೈದ್ಯ ಹಾಗೂ ಮಹೇಶ್ ಭಟ್ ಜೋಶಿ ನೆರವೇರಿಸಿ ಗುರುಗಳ ಆಶೀರ್ವಾದ ಪಡೆದುಕೊಂಡರು. ಸಾವಿರಾರು ಭಕ್ತಾದಿಗಳು, ಆಸ್ತಿಕ ಬಂಧುಗಳು, ವಿವಿಧ ಸಮಾಜದ ಮುಖಂಡರು, ಅನ್ಯರೂ ಪಡೆದುಕೊಂಡರು.
