೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆ.

ಗಂಗಾವತಿ: ರಂಜು ಆರ್ಟ್ಸ್ ಯೋಗ ಟ್ರಸ್ಟ್ ಹಂಪಿ ಮತ್ತು ಆಯುಷ್ ಇಲಾಖೆ ವಿಜಯನಗರ ಜಿಲ್ಲಾ ಸಂಘಟಿತ ೨ನೇ ರಾಜ್ಯ ಮುಕ್ತ ಯೋಗಾಸನ ಚಾಂಪಿಯನ್‌ಶಿಪ್ ಫೆಬ್ರವರಿ-೧೬ ಭಾನುವಾರ ಹಂಪಿಯ ಶಿವರಾಮ ಅವಧೂತ ಮಂಟಪದಲ್ಲಿ ನಡೆಯಿತು.

ಈ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿಯ ಪ್ರಜ್ವಲ ಯೋಗ ಕೇಂದ್ರದ ೧೪ ಸ್ಪರ್ದಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು ಎಂದು ಯೋಗ ತರಬೇತಿದಾರರಾದ ಎನ್. ಭಾನುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದರು.

ಅದರಲ್ಲಿ ೮ ವರ್ಷದೊಳಗಿನವರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸಾನಿಧ್ಯ, ದ್ವಿತೀಯ ಸ್ಥಾನವನ್ನು ಆವಂತಿಕಾ ಪಡೆದರೆ, ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಹೃತ್ವಿಕ್ ಪಡೆದರು. ಅದೇರೀತಿ ೮ ರಿಂದ ೧೦ ವಯಸ್ಸಿನ ವರ್ಗದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಿ. ನಿತಿಕಾ, ದ್ವಿತೀಯ ಸ್ಥಾನವನ್ನು ಶ್ರೇಯಾ ಕುಲಕರ್ಣಿ ಪಡೆದರೆ, ಬಾಲಕರ ವಿಭಾಗದಲ್ಲಿ ನಿತಿನ್ ಎರಡನೇ ಸ್ಥಾನ ಪಡೆದು ಚಾಂಪಿಯನ್ ಆಪ್ ದಿ ಚಾಂಪಿಯನ್ ಆಗಿ ಹಂಪಿ ಕುಮಾರ ಎನ್ನುವ ಪ್ರಶಸ್ತಿ ಪಡೆದರು. ಅದೇರೀತಿ ೧೧ ರಿಂದ ೧೪ ವಯಸ್ಸಿನ ವರ್ಗದಲ್ಲಿ ಪ್ರಥಮ ಸ್ಥಾನವನ್ನು ಕೆ ಪ್ರಬಂಜನ್ ಪಡೆದರು. ಈ ಸ್ಪರ್ಧೆಯಲ್ಲಿ ಇನ್ನಿತರ ವಿದ್ಯಾರ್ಥಿಗಳಾಗಿ ಭಾರ್ಗವಿ, ವಿನಯ್, ಅನುಷಾ, ವಿಶಾಲ್, ನಿಹಾರಿಕಾ, ಎನ್ ಚೇತನ್ ಕೃಷ್ಣಾ ರೆಡ್ಡಿ, ಕೆ ಅನನ್ಯಾ ಭಾಗವಹಿಸಿ ಪ್ರಮಾಣಪತ್ರ ಮತ್ತು ಪದಕ ಪಡೆದರು.

ಈ ವಿದ್ಯಾರ್ಥಿಗಳಿಗೆ ಪ್ರಗತಿ ಕ್ರೀಡಾ ಅಕಾಡೆಮಿಯ ಅಧ್ಯಕ್ಷರಾದ ಅಬ್ದುಲ್ ರಜಾಕ್ ಟೇಲರ್, ನಿರ್ದೇಶಕರಾದ ಜಗನ್ನಾಥ ಆಲಂಪಲ್ಲಿ ಅವರು, ಯೋಗ ತರಬೇತುದಾರರಾದ ಎನ್. ಭಾನುಪ್ರಸಾದ್ ಮತ್ತು ಸಹಕರಿಸಿದ ಪೋಷಕರಿಗೆ ಅಭಿನಂದನೆಗಳನ್ನು ತಿಳಿಸಿದರು.

ಮಹಾತ್ಮ ಗಾಂಧೀಜಿ ಕಂಡ ಗ್ರಾಮಗಳ ಅಭಿವೃದ್ದಿ ಕನಸು ಧರ್ಮಸ್ಥಳ ವಿರೇಂದ್ರ ಹೆಗ್ಡೆಯವರ ಯೋಜನೆಗಳ ಮೂಲಕ ಸಾಕಾರ: ಜೆ. ಚಂದ್ರಶೇಖರ

ಗಂಗಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ (ರಿ) ಟ್ರಸ್ಟ್ ಗಂಗಾವತಿ ವತಿಯಿಂದ ಫೆಬ್ರವರಿ -16 ರವಿವಾರ ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪ್ ನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಜೆ ಚಂದ್ರಶೇಖರ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಗಾಂಧೀಜಿಯವರ ಗ್ರಾಮಗಳ ಅಭಿವೃದ್ದಿಗೆ ಕಂಡ ಕನಸನ್ನು ಪೂಜ್ಯ ಹೆಗ್ಡೆಯವರು ಧರ್ಮಸ್ಥಳ ಯೋಜನೆ ಮೂಲಕ ಸಾಕಾರ ಮಾಡುತಲಿದ್ದಾರೆ, ಬಡವರ ಅಭಿವೃದ್ಧಿಯನ್ನೇ ಮೂಲ ಗುರಿಯಾಗಿಸಿಕೊಂಡಿರುವ ಪೂಜ್ಯರು, ಆರ್ಥಿಕ ಅಭಿವೃದ್ಧಿಗೆ ಮಾರ್ಗದರ್ಶನ ನೀಡಿದ್ದಾರೆ. ಡಾ ಹೇಮಾವತಿ ಅಮ್ಮನವರು ಮಹಿಳೆಯರಿಗೆ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಶಿಸ್ತು, ಸ್ವಚ್ಛತೆ, ಧ್ಯಾನದಂತ ಕಾರ್ಯಕ್ರಮಗಳ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಬುನಾದಿಯನ್ನು ಹಾಕುವಂತ ಕೆಲಸ ಮಾಡುತ್ತಿದ್ದಾರೆ. ಇದರ ಸದುಪಯೋಗಪಡಿಸಿಕೊಂಡರೆ ಗ್ರಾಮಗಳ ಅಭಿವೃದ್ಧಿ ಮಾಡಲು ಬೇರೆ ಯಾರೂ ಬರಬೇಕಾಗಿಲ್ಲ, ನಾವೇ ಸಾಕು ಎಂದು ಪ್ರೇರಣಾ ಮಾತುಗಳನ್ನು ಆಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ರಾಜೇಶ್ವರಿ ಎ, ಯವರು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮಹಿಳೆಯರ ಪಾತ್ರ ಎಷ್ಟು ಮುಖ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ರಾಜೇಶ್ವರಿ ವಕೀಲರು ಆನೆಗುಂದಿ ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಲಲಿತಾ ನಾರಾಯಣರವರು, ಮಹಾಲಕ್ಷ್ಮಿ ದೇವಸ್ಥಾನದ ಕಾರ್ಯದರ್ಶಿ ಶ್ರೀ ಶಂಕರನಾಗ್ ನರಸಪ್ಪ ಗೌಳಿ ಯವರು, ಶಂಕರನಾಯಕ ರವರು ಸೇರಿದಂತೆ ತಾಲೂಕಿನ ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜಾ ರವರು ತಾಲೂಕಿನ ಸಿಬ್ಬಂದಿಗಳು ಸೇವಾಪ್ರತಿನಿಧಿಗಳು ಸೇರಿದಂತೆ ಜ್ಞಾನವಿಕಾಸ ಕಾರ್ಯಕ್ರಮದ ಸರ್ವ ಸದಸ್ಯರು ಉಪಸ್ಥಿರಿದ್ದರು.