ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಧೀಕ್ಷೆ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ

ಗಂಗಾವತಿ: ನಗರದ ಶ್ರೀ ಕೊಟ್ಟೂರುಬಸವೇಶ್ವರ ದೇವಸ್ಥಾನ ಸಮಿತಿ ನೇತೃತ್ವದಲ್ಲಿ ಫೆಬ್ರವರಿ-೨೬ ಬುಧವಾರ ಮಹಾಶಿವರಾತ್ರಿ ಪ್ರಯುಕ್ತ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥನದಲ್ಲಿ ಇಷ್ಟಲಿಂಗ ಧೀಕ್ಷಾ ಹಾಗೂ ಪ್ರಾತ್ಯಕ್ಷಿತೆ ಸಮಾರಂಭ ನಡೆಯಲಿದೆ ಎಂದು ಬಸವಕೇಂದ್ರದ ಗಂಗಾವತಿ ತಾಲೂಕ ಕಾರ್ಯದರ್ಶಿಯಾದ ಎ.ಕೆ. ಮಹೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಹೆಬ್ಬಾಳ ಬೃಹನ್ಮಠದ ಪೂಜ್ಯ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯರು ಹಾಗೂ ಸುಳೇಕಲ್ ಬೃಹನ್ಮಠದ ಪೂಜ್ಯ ಶ್ರೀ ಭುವನೇಶ್ವರಯ್ಯ ತಾತನವರು ವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಹೊಸಪೇಟೆ ಇಷ್ಟಲಿಂಗ ಅಧ್ಯಯನ ಕೇಂದ್ರದ ಸದಸ್ಯರು ಹಾಗೂ ಉಪನ್ಯಾಸಕರಾದ ಬಸವರಾಜ ಟಿ.ಹೆಚ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಇಷ್ಟಲಿಂಗದ ವೈಜ್ಞಾನಿಕ ಹಿನ್ನೆಲೆ ಹಾಗೂ ಶಿವಯೋಗ ಪ್ರಾತ್ಯಕ್ಷಿತೆಯ ವಿವರಣೆ ನೀಡಲಾಗುವುದು.

ಇಷ್ಟಲಿಂಗ ಧೀಕ್ಷೆ ಪಡೆಯುವವರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ನೋಂದಾಯಿಸಿಕೊಂಡು, ಫೆಬ್ರವರಿ-೨೬ ಬುಧವಾರ ಬೆಳಿಗ್ಗೆ ೭:೩೦ಕ್ಕೆ ಶುಚಿರ್ಭೂತರಾಗಿ ಬಿಳಿವಸ್ತ್ರದೊಂದಿಗೆ ಪಾಲಕರೊಡಗೂಡಿ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ: ೯೯೮೬೨೧೧೯೯೧, ೯೦೩೫೪೭೪೬೭೦, ೯೧೬೪೫೩೮೫೪೦, ೯೪೪೮೬೪೯೫೨೨, ೯೯೦೦೧೯೬೩೬೩ ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಪವಿತ್ರ ತ್ರಿವೇಣಿ ಸಂಗಮದ ಕುಂಭಮೇಳದ ಜಲ ವಿತರಣೆ: ರೂಪರಾಣಿ ರಾಯಚೂರು

ಗಂಗಾವತಿ: ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾದ ಪ್ರಯಾಗರಾಜ್ ತ್ರಿವೇಣಿ ಸಂಗಮದ ಕುಂಭಮೇಳದ ಪವಿತ್ರ ಜಲವನ್ನು ಆರ್ಯವೈಶ್ಯ ಸಮಾಜದ ಬಾಂಧವರು ಸೇರಿದಂತೆ ಭಕ್ತಾದಿಗಳಿಗೆ ಸಮಾಜದ ಅಧ್ಯಕ್ಷೆ ರೂಪರಾಣಿ ರಾಯಚೂರುರವರು ಸೋಮವಾರದಂದು ವಿತರಿಸಿದರು.

ನಗರದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಪ್ರತಿ ಸೋಮವಾರದಂತೆ ನಡೆಸಲಾಗುತ್ತಿರುವ ಭಜನೆ, ಪಾಲಕಿ ಉತ್ಸವ, ಅಷ್ಟಾವಧಾನ ಸೇವೆ, ಧಾರ್ಮಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಕರ್ತನ ಸನ್ಮಾನವನ್ನು ದೇವಸ್ಥಾನದ ಅರ್ಚಕ ದಿಗಂಬರ್ ಭಟ್ ನೆರವೇರಿಸಿದರು. ಬಳಿಕ ಜಲ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷೆ ರೂಪರಾಣಿಯವರು, ತಾವು ತಮ್ಮ ಕುಟುಂಬದ ಸದಸ್ಯರೊಂದಿಗೆ ಕುಂಭಮೇಳಕ್ಕೆ ಹೋಗಿದ್ದು, ಅಲ್ಲಿ ದಿನಂಪ್ರತಿ ಕಂಡುಬರುವ ಕೋಟ್ಯಾಂತರ ಜನ ಭಕ್ತರ ಪವಿತ್ರ ಸ್ನಾನ, ಸಾಧು ಸಂತರು, ನಾಗ ಸಾಧುಗಳಿಂದ ಹರ ಹರ ಮಹಾದೇವ ಎಂಬ ಘೋಷಣೆ ಬಾನೆತ್ತರಕ್ಕೆ ತಲುಪುವಂತಿತ್ತು ಎಂದು ತಿಳಿಸಿದ ಅವರು ಸಮಾಜ ಬಾಂಧವರ ಒಳಿತಿಗಾಗಿ ಹಾಗೂ ಭಕ್ತರಿಗಾಗಿ ಮಹಾಶಿವರಾತ್ರಿಯ ಪ್ರಯುಕ್ತ ತ್ರಿವೇಣಿ ಸಂಗಮದ ಪವಿತ್ರ ಜಲವನ್ನು ವಿತರಿಸಲಾಗಿದೆ ಎಂದು ಹೇಳಿದರು.

ಸಮಾಜದ ಕಾರ್ಯದರ್ಶಿ ಈಶ್ವರ ಶೆಟ್ಟಿ ಮಾತನಾಡಿ ಭಾರತದ ಸನಾತನ ಧರ್ಮದ ಸಂಸ್ಕೃತಿ ಕುಂಭಮೇಳದಲ್ಲಿ ರಾರಾಜಿಸಿದ್ದು ಕಂಡುಬಂದಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ನೇತೃತ್ವದ ಸರಕಾರ ಭಕ್ತಾದಿಗಳಿಗೆ ಸಕಲ ಸೌಲಭ್ಯವನ್ನು ಕಲ್ಪಿಸಿದ್ದರು. ಒಟ್ಟಾರೆ ದೇವಲೋಕ ಧರೆಗಿಳಿದು ಬದಂತೆ ಬಾಸವಾಯಿತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುರೇಶ ಶೆಟ್ಟಿ, ಖಜಾಂಚಿ ಮಾರುತಿ ಪ್ರಸಾದ್, ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಭಾಗ್ಯ ಈಶ್ವರಶೆಟ್ಟಿ, ಸೇವಾ ಕರ್ತರಾದ ಶೋಭಾರಾಣಿ ದಂಪತಿಗಳು, ಯೋಜನೆ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.