ಮಾರ್ಚ್ 7ರಂದು ಶೃಂಗೇರಿಯ ಹಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ್ ಮಹಾಸ್ವಾಮಿಗಳ ಆಗಮನ: ಕೃಷ್ಣ ಪದಕಿ

ಗಂಗಾವತಿ: ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಶೃಂಗೇರಿಯ ಶ್ರೀ ಶಾರದಾ ಪೀಠ 36ನೆಯ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ 50ನೇ ವರ್ಷದ ಸನ್ಯಾಸತ್ವ ಪ್ರಯುಕ್ತ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಡಿಯಲ್ಲಿ ಶ್ರೀಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರು ಮಾರ್ಚ್-7 ರಂದು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀ ಶಂಕರ ಸೇವಾ ಸಮಿತಿ ಕೋಟೆ ಕೊಪ್ಪಳ ಅಧ್ಯಕ್ಷರಾದ ಕೃಷ್ಣ ಪದಕಿ. ವೆಂಕಟೇಶ್ ಪದಕಿ. ಶ್ರೀನಿವಾಸ್ ಹಾಗೂ ಡಿವಿ ಜೋಶಿ ಕೊಪ್ಪಳ ಅವರು ಹೇಳಿದರು.

ಅವರು ಗಂಗಾವತಿಯ ಶಂಕರ ಮಠಕ್ಕೆ ಆಗಮಿಸಿ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕೊಪ್ಪಳದ ಪದಕಿ ಟೌನ್ ಶಿಪ್ ಉದ್ದೇಶಿತ ಶ್ರೀ ಶಂಕರ ಮಠದ ನೂತನ ಕಟ್ಟಡದ ಭೂಮಿ ಪೂಜೆ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಅಮೃತ ಹಸ್ತದಿಂದ ಮಾರ್ಚ್-8 ರಂದು ಜರುಗಲಿದ್ದು, ಪ್ರಯುಕ್ತ ಮಾರ್ಚ್-7 ಶುಕ್ರವಾರ ಸಂಜೆ 6 ಗಂಟೆಗೆ ಪುರ ಪ್ರವೇಶ, ಪೂರ್ಣ ಕುಂಭ ಸ್ವಾಗತದ ಮೂಲಕ ಶುಭ ಯಾತ್ರೆ ಈಶ್ವರ ಪಾರ್ಕ್ ಹೊಸಪೇಟೆ ರಸ್ತೆಯಿಂದ ಕಿನ್ನಾಳ ರಸ್ತೆಯ ಮೂಲಕ ವಾಸವಿ ಮಂಗಲ ಭವನದವರಿಗೆ ಸಕಲ ವಾದ್ಯ ವೈಭವ ಹಾಗೂ ವಿವಿಧ ಬಜನಾ ತಂಡದ ಸದಸ್ಯರೊಂದಿಗೆ ಶ್ರದ್ಧೆ ಭಕ್ತಿಯಿಂದ ಸ್ವಾಗತಿಸಿಕೊಳ್ಳಲಾಗುವುದು.

ಸಂಜೆ 7:30 ಕ್ಕೆ ಶ್ರೀಗಳಿಗೆ ಧೂಳಿ ಪಾದಪೂಜೆ, ಫಲ ಸಮರ್ಪಣೆ,  ಭಿನ್ನ ವತ್ತಳೆ, ಅರ್ಪಣೆಯ ಜೊತೆಗೆ ಆಶೀರ್ವಚನ ಮಹಾಪ್ರಸಾದ ಜರುಗಲಿದೆ ಎಂದು ತಿಳಿಸಿದ ಅವರು ಮಾರ್ಚ್‌-8 ಶನಿವಾರ ಬೆಳಗ್ಗೆ ಶ್ರೀಮಠದ ಅರ್ಚಕರಿಂದ ಚಂದ್ರಮೌಳೇಶ್ವರ ಪೂಜೆ, ಬೆಳಿಗ್ಗೆ 10 ಗಂಟೆಗೆ ಶ್ರೀ ಶಂಕರ ಮಠದ ನೂತನ ಕಟ್ಟಡದ ಭೂಮಿ ಪೂಜೆ. 11:30 ಕ್ಕೆ ಶ್ರೀಗಳಿಗೆ ಭಕ್ತರಿಂದ ಪಾದುಕಾಪೂಜೆ, ವಸ್ತ್ರ ಸಮರ್ಪಣೆ, ದೀಕ್ಷಾ ವಂದನೆ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಶ್ರೀಗಳಿಂದ ಪರ ಮಂತ್ರಾಕ್ಷತೆ ಹಾಗೂ ಮಹಾಪ್ರಸಾದದೊಂದಿಗೆ ಸಂಪನ್ನಗೊಳ್ಳುವುದು ಎಂದು ತಿಳಿಸಿದ ಅವರು ಈ ಒಂದು ಧಾರ್ಮಿಕ. ಆಚರಣೆಗೆ ಗಂಗಾವತಿಯ ಶಂಕರ ಮಠದ ಹಾಗೂ ಆಸ್ತಿಕ ಬಂಧುಗಳು ಭಾಗವಿಸುವಂತೆ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದಂತೆ ಧರ್ಮದರ್ಶಿ ನಾರಾಯಣರಾವ್ ವೈದ್ಯ ಅವರ ಅನುಪಸ್ಥಿತಿಯಲ್ಲಿ ರಾಘವೇಂದ್ರ ಅಳವಂಡಿಕರ್ ಮಾತನಾಡಿ, ಕೊಪ್ಪಳದಲ್ಲಿ ಶಂಕರಮಠ ನಿರ್ಮಾಣಗೊಳ್ಳುತ್ತಿರುವುದು ಅತ್ಯಂತ ಸಂತಸದಾಯಕವಾಗಿದೆ. ತಮ್ಮ ಮೇಲಿನ ಎರಡು ದಿನದ ಎಲ್ಲಾ ಕಾರ್ಯಕ್ರಮಗಳಿಗೆ ಭಾಗವಹಿಸುವುದರ ಮೂಲಕ ತುಂಬು ಹೃದಯದ ಸಹಕಾರವನ್ನು ಕಲ್ಪಿಸುತ್ತೇವೆ ಎಂದು ತಿಳಿಸಿದರು.

ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ: ಇತ್ತೀಚೆಗೆ ಫೆಬ್ರವರಿ-೨೧ ರಂದು ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬವನ್ನು ತಾಲೂಕಿನ ಆಚಾರ ನರಸಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು ಎಂದು ಮರಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ಕೆ.ಎಂ ರವರು ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಈ ಕಲಿಕಾ ಹಬ್ಬದಲ್ಲಿ ಶಿಕ್ಷಣ ಪ್ರೇಮಿ ನಾಗರಾಜ ಬರಗೂರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾರಟಗಿ ವಲಯದ ಶಿಕ್ಷಣ ಸಂಯೋಜಕರಾದ ರಾಘವೇಂದ್ರ ಪಿ.ಸಿ ಇವರು ದೀಪ ಬೆಳಗಿಸುವುದರೊಂದಿಗೆ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿಗಳಾದ ನಾಗರಾಜ್ ಬರಗೂರು ಮಾತನಾಡಿ ಶಾಲೆಯ ಶ್ರೇಯೋಭಿವೃದ್ಧಿಗಾಗಿ ನಾವು ಸದಾ ಬೆಂಬಲವನ್ನು ನೀಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಮರಳಿ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುಮಂಗಳ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹನುಮಂತಪ್ಪ, ಚಂದ್ರೇಗೌಡ, ಚನ್ನಮಲ್ಲಿಕಾರ್ಜುನ ಮಠ ಟ್ರಸ್ಟ್ ಕಮಿಟಿಯ ಸದಸ್ಯರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ಗಾದಿಲಿಂಗಪ್ಪ, ಲಿಂಗನಗೌಡ ಎಂ.ಪಿ., ದ್ಯಾಮಣ್ಣ ಊರಿನ ಗಣ್ಯರು, ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕ್ಲಸ್ಟರ್‌ನ ಎಲ್ಲಾ ಶಾಲೆಯ ಮುಖ್ಯ ಗುರುಗಳು ಹಾಗೂ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಹಂಪಿ ಉತ್ಸವದಲ್ಲಿ ವಿಜಯನಗರ ಸಾಮ್ರಾಜ್ಯದ ಕುರಿತ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಗಣ್ಯಮಾನ್ಯರಿಂದ ಬಿಡುಗಡೆ

ಗಂಗಾವತಿ: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಆನೆಗುಂದಿ ಸಂಸ್ಥಾನದ ಮಹಾರಾಜರಾಗಿರುವ ಶ್ರೀ ಕೃಷ್ಣದೇವರಾಯ ಹಾಗೂ ಶ್ರೀಮತಿ ರತ್ನಶ್ರೀರಾಯ್ ಅವರ ಪುತ್ರರಾದ ತಿರುಮಲ ವೆಂಕಟದೇವರಾಯರು ವಿಜಯನಗರ ಸಾಮ್ರಾಜ್ಯದ ವೈಭವ ಕುರಿತು ಬರೆದಿರುವ “ಇನ್ ದಿ ಎಂಪೈರ್ ಆಫ್ ದಿ ಗಾಡ್ ಕಿಂಗ್” ಪುಸ್ತಕ ಫೆಬ್ರವರಿ-೨೮ ರ ಹಂಪಿ ಉತ್ಸವದಲ್ಲಿ ವಸತಿ ಹಾಗೂ ವಕ್ಫ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚವರಾದ ಶಿವರಾಜ ತಂಗಡಗಿಯವರು ಸೇರಿದಂತೆ ಗಣ್ಯಮಾನ್ಯರಿಂದ ಬಿಡುಗಡೆಯಾಯಿತು.

ತಿರುಮಲ ವೆಂಕಟರಾಯರು ಶ್ರೀಕೃಷ್ಣದೇವರಾಯರ ೨೦ನೇ ವಂಶಸ್ಥರು ಮತ್ತು ಆನೆಗುಂದಿ ಸಂಸ್ಥಾನದಲ್ಲಿ ವಿಜಯನಗರದ ಅರಸರ ಉತ್ತರಾಧಿಕಾರಿಯಾಗಿದ್ದು, ಇವರು ಆನೆಗುಂದಿಯ ರಾಜಾ ಶ್ರೀಕೃಷ್ಣದೇವರಾಯರ ಮಗ ಮತ್ತು ರಾಜ ಶ್ರೀ ಅಚ್ಯುತ ದೇವರಾಯರ ಮೊಮ್ಮಗರಾಗಿದ್ದಾರೆ. ಇವರು ಇಂಗ್ಲೆಂಡ್‌ನ ಡರ್ಹಾಮ್ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಪದವಿ ಪಡೆದಿದ್ದಾರೆ.

ಇದು ಇವರ ಮೊದಲ ಪುಸ್ತಕವಾಗಿದ್ದು, ವಿಜಯನಗರ ಸಾಮ್ರಾಜ್ಯದ ಇತಿಹಾಸವನ್ನು ಆಕರ್ಷಕ ನಿರೂಪಣೆಯ ರೂಪದಲ್ಲಿ ಹೇಳುವ ಗುರಿಯನ್ನು ಪುಸ್ತಕ ಹೊಂದಿದೆ.

ಸದರಿ ಪುಸ್ತಕವು ಮಾರ್ಚ್ ಕೊನೆಯವಾರದ ನಂತರ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಗಂಗಾವತಿಯ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ವಿನೂತನ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ

ಗಂಗಾವತಿ: ಫೆಬ್ರವರಿ-೨೮ ಶುಕ್ರವಾರದಂದು ಜಯನಗರದಲ್ಲಿರುವ ವಿಸ್ಡಂ ಎಲಿಮೆಂಟರಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ನೇತೃತ್ವದ ಸಮ್ಮೇಳನ ಕಾರ್ಯಕ್ರಮ ಎಂದರೆ ವಿದ್ಯಾರ್ಥಿಗಳು ಒಂದು ದಿನದ ಶಿಕ್ಷಕರಾಗುತ್ತಾರೆ ಮತ್ತು ಅವರು ತಮ್ಮ ಆಯ್ಕೆಯ ವಿಷಯದ ಬಗ್ಗೆ ಒಂದು ಪರಿಕಲ್ಪನೆಯನ್ನು ವಿವರಿಸುತ್ತಾರೆ ಅಥವಾ ಸಣ್ಣ ಪ್ರಾತ್ಯಕ್ಷಿಕೆಯನ್ನು ನೀಡುತ್ತಾರೆ.

ಭಾಗವಹಿಸುವಾಗ ವಿದ್ಯಾರ್ಥಿಗಳು ಒಂದು ಪರಿಕಲ್ಪನೆಯನ್ನು ಉತ್ತಮವಾಗಿ ಕಲಿಯಲು ಪ್ರೇರೇಪಿಸಲ್ಪಡುತ್ತಾರೆ. ಪ್ರೇಕ್ಷಕರ ಮುಂದೆ ನಿರಾಳವಾಗಿರುವುದು ಕಷ್ಟ. ಅದಕ್ಕಾಗಿಯೇ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಅವರಿಗೆ ಸವಾಲು ಹಾಕುವ ಮೂಲಕ ಅವರ ಸಂವಹನ ಮತ್ತು ಪ್ರಸ್ತುತಿ ಕೌಶಲ್ಯಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವಿದ್ಯಾರ್ಥಿಗಳು ಸಾಮಾನ್ಯ ಪಠ್ಯಪುಸ್ತಕಗಳನ್ನು ಮೀರಿ ಯೋಚಿಸಲು ಪ್ರೋತ್ಸಾಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಿಷಯವನ್ನು ಆರಿಸಿಕೊಂಡು ಅದನ್ನು ತಮಗೆ ಇಷ್ಟವಾದ ಸೃಜನಶೀಲ ರೀತಿಯಲ್ಲಿ ಪ್ರಸ್ತುತಪಡಿಸುತ್ತಾರೆ.

ಈ ಒಂದು ಕಾರ್ಯಕ್ರಮಕ್ಕೆ ನಮ್ಮ ಶಾಲೆಯ ಪೋಷಕರಾಗಿ ಆಗಮಿಸಿದ ಡಾ|| ಹೇಮಲತಾ ಹಾಗೂ ಡಾ|| ನಾಗರಾಜ್ ಅವರು ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಈ ಒಂದು ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಕಾರ್ಯದರ್ಶಿಗಳಾದ ರಾಜಕಿರಣ್ ಇಂಗಳಹಳ್ಳಿ ಹಾಗೂ ಶ್ರೀಮತಿ ಐಶ್ವರ್ಯ ರಾಜಕಿರಣ್ ಇಂಗಳಹಳ್ಳಿ ಹಾಗೂ ನಮ್ಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅರುಣದೇವಿ ಮೇಡಂ ಅವರು ಕೂಡ ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡುವುದರ ಮುಖಾಂತರ ಪ್ರೋತ್ಸಾಹಿಸಿದರು.

ಹಾಗೆಯೇ ವಿದ್ಯಾರ್ಥಿಗಳ ನೇತೃತ್ವ ಸಮ್ಮೇಳನದ ಕಾರ್ಯಕ್ರಮದಲ್ಲಿ ಸಮುದಾಯ ಸಹಾಯಕರು, ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿ ತಮಗೆ ಕೊಟ್ಟಿರುವಂತಹ ವಿಷಯಗಳ ಬಗ್ಗೆ ವಿವರಿಸಿ ಪೋಷಕರ ಗಮನ ಸೆಳೆದರು.

ತದನಂತರ ಎರಡನೆಯ ತರಗತಿಯ ಮಕ್ಕಳು ಭಾರತದ ಏಳು ಅದ್ಭುತಗಳ ಬಗ್ಗೆ ವಿವರಿಸಿದರು. ಅದರಲ್ಲಿ ತಾಜ್‌ಮಹಲ್ ಹಾಗೂ ಹಂಪಿಯ ಚಿತ್ರಗಳು ತುಂಬಾ ಆಕರ್ಷಣೀಯವಾಗಿ ಗಮನಿಸಳೆದವು ಹಾಗೂ ಸಂಚಾರ ಸಂಕೇತಗಳು, ಪ್ರಾಣಿಗಳ ಆಶ್ರಯ, ಗ್ರಾಮೀಣ ಮತ್ತು ನಗರಗಳು ಹಾಗೂ ವಿಧಾನಸೌಧದ ಮಾದರಿಗಳು ಕೇಂದ್ರಬಿಂದುಗಳಾಗಿ ನೋಡುಗರ ಗಮನಸೆಳೆದವು.
ಹಾಗೆ ಮಕ್ಕಳು ಕೇವಲ ಒಂದು ವಿಷಯಕ್ಕೆ ಸೀಮಿತವಾಗದೆ ಕನ್ನಡ, ಇಂಗ್ಲಿಷ್, ಹಿಂದಿ, ಸಮಾಜ ವಿಜ್ಞಾನ, ಕಂಪ್ಯೂಟರ್, ವಿಷಯಗಳಲ್ಲಿ ತೊಡಗಿಸಿಕೊಂಡು ತಮ್ಮ ಚಾಕಚಾತುರ್ಯವನ್ನು ಹೊರಹಾಕಿದರು.

ಈ ಒಂದು ಕಾರ್ಯಕ್ರಮಕ್ಕೆ ಆಗಮಿಸಿದಂತಹ ಪೋಷಕರು ಮಕ್ಕಳು ತಯಾರಿಸಿದ ಎಲ್ಲಾ ಮಾದರಿಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.