ಕೆರಳ ರಾಜ್ಯದಲ್ಲಿ ಕನ್ನಡಿಗ ಪತ್ರಕರ್ತನಿಗೆ ಒಲಿದ ಪ್ರಶಸ್ತಿ. ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ಪ್ರಶಸ್ತಿಗೆ ಟಿವಿ-೫ ನಾಗರಾಜ್.ವೈ ಆಯ್ಕೆ.

ಕಾಸರಗೋಡುನಲ್ಲಿ ನಡೆಯುವ ಸಮಾರಂಭದಲ್ಲಿ ಸಭಾಪತಿಗಳು ಸೇರಿದಂತೆ ಹಲವಾರು ಸಚಿವರು ಭಾಗಿ.

ಕಾಸರಗೋಡು (ಕೆರಳ) : ಕೇರಳ ರಾಜ್ಯದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಮಾಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪೈಕಿ ಶ್ರೀ ಜೋಸೆಫ್ ಮಥಾಯಿಸ್ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿ ಆಯ್ಕೆ ಸಮಿತಿಯು ಕೊಪ್ಪಳ ಜಿಲ್ಲೆಯ ಟಿವಿ-೫ ವಾಹಿನಿಯ ಜಿಲ್ಲಾ ವರದಿಗಾರ ನಾಗರಾಜ್ ವೈ ಅವರನ್ನು ಆಯ್ಕೆ ಮಾಡಿದೆ. ನಾಗರಾಜ್ ವೈ ರವರು ೧೨ ವರ್ಷಗಳ ಕಾಲ ಎಲೆಕ್ಟಾçನಿಕ್ ಮಿಡಿಯಾದಲ್ಲಿ ಮಾಡಿದ ಹಲವಾರು ಸಾಮಾಜಿಕ ವರದಿಗಳನ್ನು ಆಧರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು ೨ ದಶಕಗಳ ಸೇವೆಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಇತರ ಕನ್ನಡಪರ ಸಂಘ ಸಂಸ್ಥೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಕನ್ನಡ ಮತ್ತು ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಈ ಸಂಘವು ಕಾರ್ಯಾಚರಿಸುತ್ತಿದೆ.

ಈ ಸಂಘವು ವಾರ್ಷಿಕವಾಗಿ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು, ಈ ಬಾರಿಯ ಶ್ರೀ ಜೋಸೆಫ್ ಮಥಾಯಿಸ್ ದುಬೈ ನೀಡುವ ದತ್ತಿನಿಧಿ ಪ್ರಶಸ್ತಿಗೆ ನಾಗರಾಜ್. ವೈ ಅವರನ್ನು ಆಯ್ಕೆ ಸಮಿತಿಯು ಆರಿಸಿದೆ.

ಈ ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ. ೨೦೨೫ನೇ ಮೇ-೦೩ ಶನಿವಾರದಂದು ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಕೆ ಶೆಟ್ಟಿ ಕುತ್ತಿಕಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕದ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮುಂತಾದ ಗಣ್ಯರು ಸೇರಿ ಪ್ರಶಸ್ತಿ ಪ್ರಧಾನಿಸುವರು ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲಾ ಮಹಿಳಾ ಯುವ ಘಟಕದ ಪದಾಧಿಕಾರಿಗಳ ನೇಮಕ.

ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಕೊಪ್ಪಳ ಜಿಲ್ಲಾ ಮಹಿಳಾ ಯುವ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ಎಂದು ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಏಪ್ರಿಲ್-೨೦ ಭಾನುವಾರ ಕೊಪ್ಪಳದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಯಾದ ಕೆ.ಬಿ. ಶ್ರೀನಿವಾಸರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ಡಾ. ಮಹಾದೇವಸ್ವಾಮಿಗಳು ಕುಕನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವಪುತ್ರಪ್ಪ ಕಾಡನವರ್, ಕೊಪ್ಪಳ ತಾಲೂಕ ಅಧ್ಯಕ್ಷರಾದ ನಾಗಭೂಷಣ ಸಾಲಿಮಠ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಎಲ್ಲ ಮುಖಂಡರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಯುವ ಘಟಕಗಳನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ಕೊಪ್ಪಳ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಹೆಚ್.ಎಂ. ವಿರುಪಾಕ್ಷಯ್ಯಸ್ವಾಮಿ, ಉಪಾಧ್ಯಕ್ಷರುಗಳಾಗಿ ಬೆಟ್ಟಪ್ಪ ಮೂಲಿಮನಿ, ವಿನಾಯಕ ಬೆನ್ನಳ್ಳಿ, ಶೇಖರಗೌಡ ಬೂದಗುಂಪ, ಅಯ್ಯನಗೌಡ ಕನಕರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಹಾಂತೇಶ ಕುಂಬಾರ, ಕಾರ್ಯದರ್ಶಿಗಳಾಗಿ ಅವಿನಾಶ ಅರಿಕೇರಿ, ಶಿವಣ್ಣ ಮೂಲಿಮನಿ, ವಿರೇಶ ಟೆಂಗಿನಕಾಯಿ, ಲಿಂಗರಾಜ ಲಿಂಗದಳ್ಳಿ, ಕೋಶಾಧ್ಯಕ್ಷರಾಗಿ ಪಂಪನಗೌಡ ಜಂತಕಲ್, ಸದಸ್ಯರುಗಳಾಗಿ ವೀರಣ್ಣ ಮರಳಿ, ವಿನಾಯಕ ಭಾವಿಕಟ್ಟಿ, ಜಗದೀಶ ಜವಳಿ, ನವೀನಕುಮಾರ ಮಾಲಿಪಾಟೀಲ್, ಶಿವಶರಣಗೌಡ ಯರಡೋಣ, ಶರಣಯ್ಯ ಬೇವಿನಾಳ, ಪಂಪಾಪತಿ ಶಿವಲಂತರ, ವೀರನಗೌಡ ಕೊಪ್ಪಳ, ಗವಿಸಿದ್ದಪ್ಪ ಮುದುಗಲ್, ಮಹೇಶ ಭೂತೆ, ಪ್ರವೀಣ ಮತ್ತೂರು, ಆಶಿಕ್ ಕಲಬುರ್ಗಿ, ದೊಡ್ಡಬಸವ ಪವಾಡಶೆಟ್ಟರ್, ಬಸವನಗೌಡ ಎಂ. ಓಲಿ, ವಿರುಪಾಕ್ಷ ಗುಂಡೂರು, ವಿಜಯಕುಮಾರ ಹಿರೇಮಠ, ಸಂಗಯ್ಯಸ್ವಾಮಿ ಸಂಶೀಮಠ, ಮಹಾಬಲೇಶ ಕಾರಟಗಿ, ಸಂತೊಷ ಹಾದಿಮನಿ, ಬಸವರಾಜ ಗಂಗಾವತಿ ಇವರುಗಳು ಆಯ್ಕೆಯಾದರು.

ಅದೇರೀತಿ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಎಸ್. ಮ್ಯಾಗಳಮನಿ, ಉಪಾಧ್ಯಕ್ಷರುಗಳಾಗಿ ಪೂರ್ಣಿಮಾ ಶಶೀಧರಗೌಡ, ಸವಿತಾ ಗಂಗಾಧರಸ್ವಾಮಿ, ಶೀಲಾ ದೇಸಾಯಿಗೌಡ, ಶಾರದಾ ಕೆ. ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಮ್ಮ ಶರಣಬಸಪ್ಪ, ಕಾರ್ಯದರ್ಶಿಗಳಾಗಿ ಜಯಶ್ರೀ ಸಾಹುಕಾರ್, ಬಸಮ್ಮ ಶಿವಪುತ್ರಪ್ಪ, ನಂದಾ ಜಗದೀಶ, ಕಾವ್ಯ ಮಹೇಶ, ಕೋಶಾಧ್ಯಕ್ಷರಾಗಿ ವಿದ್ಯಾಲಕ್ಷ್ಮಿ ಗವಿಸಿದ್ದಪ್ಪ, ಸದಸ್ಯರುಗಳಾಗಿ ಸುಜಾತ ಅಯ್ಯನಗೌಡ, ಸರಸ್ವತಿ ವಿಶ್ವನಾಥ, ಶೈಲಾ ಸಂಗಪ್ಪ, ಬಸಮ್ಮ ಶಿವಾನಂದ, ವಿಶಾಲಾಕ್ಷಿ ಹೆಚ್.ಎಸ್.ಶಶಿಧರ, ಶಶಿಕಲಾ ಚಿನಿವಾಲರ್, ಡಿ.ವರಲಕ್ಷ್ಮಿ ಮಂಜುನಾಥ, ಲಕ್ಷ್ಮಿ ವಿರೇಶ, ನಯನ ವಿಜಯಕುಮಾರ, ಕೋಮಲಾ ಕೆ. ಕುದರಿಮೋತಿ, ಸುಮಂಗಲಾ ಮಲ್ಲಿಕಾರ್ಜುನ, ಗೀತಾಂಜಲಿ ಶರಣಯ್ಯ, ನೀಲಮ್ಮ ಶೇಖರಪ್ಪ, ಸವಿತಾ ಬಸವರಾಜ, ಅನ್ನಪೂರ್ಣ ಸಂಗಪ್ಪ, ಗೀತಾ ರಾಜಶೇಖರ, ಸುಧಾರಾಣಿ ರಮೇಶ, ಉಮಾಮಹೇಶ್ವರಿ ನಾಗೂರು, ಗೀತಾ ದೇವಣ್ಣ, ಪರಿಮಳ ಸಂಗಪ್ಪ ಇವರುಗಳು ಆಯ್ಕೆಯಾದರು.

ನೂತನವಾಗಿ ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯ ಹಾಗೂ ಜಿಲ್ಲಾ ಸಮಿತಿಗಳಿಂದ ಅಭಿನಂದಿಸಿ, ಮಹಾಸಭಾದ ಎಲ್ಲಾ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಹೋಗುವ ಮೂಲಕ ಬಲಪಡಿಸಲು ಸೂಚಿಸಲಾಯಿತು.