ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ ಭಜನೆ, ಧಾರ್ಮಿಕ ಭಕ್ತಿ ಗೀತೆಗಳು, ನೃತ್ಯ, ಕೋಲಾಟ ಹಾಗೂ ವಿವಿಧ ವೇಷ ಭೂಷಣಗಳ ಮೂಲಕ ನಡೆಸಲಾಗುವುದು. ಯಾಜ್ಞವಲ್ಕ್ಯ ಮಂದಿರದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಬೆಂಗಳೂರು ಕಾರ್ಯಾಧ್ಯಕ್ಷರಾದ ನಾಗರಾಜ ಎಸ್ ಗುತ್ತೇದಾರ ವಕೀಲರು ಈ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಭೆಯ ನಂತರ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಈ ಸಂಕೀರ್ತನಾ ಕಾರ್ಯಕ್ರಮಕ್ಕೆ ಎಲ್ಲರೂ ಒಂದೇ ಮನಸ್ಸಿನಿಂದ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸರ್ವ ಸಮಾಜದವರಲ್ಲಿ ಕೋರಿದ್ದಾರೆ.

ಮಾಹಿತಿಗಾಗಿ:
ಸದಾನಂದ ಶೇಟ್
ಅಧ್ಯಕ್ಷರು, ನಗರ ಸಂಕೀರ್ತನಾ ಯಾತ್ರೆ
ಮೊ.ನಂ: ೯೩೮೦೪೨೫೨೮೧

ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು.

ರೋಟರಿ ಕ್ಲಬ್, ಕಾವ್ಯ ಲೋಕ ಸಂಘಟನೆ ಮತ್ತು ವಿಶ್ವ ರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾತಂತ್ರ್ಯ ಸಂಭ್ರಮ 109ನೇ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಸ್ವವರಚಿತವಾಗಿರುವ ಕವನಗಳು ಸಾಮಾಜಿಕ, ರಾಜಕೀಯ, ಸಾಹಿತ್ಯಕವಾಗಿರುವ ವಿಷಯಗಳು ಪರಿಣಾಮಕಾರಿಯಾಗಿರಬೇಕೆಂದು ತಿಳಿಸಿದ ಅವರು ಕವನಗಳನ್ನು ವಾಚಿಸಿದರೆ ಅದು ಪರಿಣಾಮಕಾರಿಯಾಗಿ ವಿವಿಧ ಕ್ಷೇತ್ರಗಳಿಗೆ ತಲುಪುವುದರ ಮೂಲಕ ಸ್ಪಂದನೆ ಸಿಗಬೇಕೆಂದರು.

ಇತ್ತೀಚಿನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಮೊಬೈಲ್, ಫೇಸ್ ಬುಕ್ ಗಳಲ್ಲಿ ಪೋಸ್ಟ್ ಮಾಡಿ ತೃಪ್ತಿ ಪಡುತ್ತಿರುವದನ್ನು ನಾವು ಕಾಣುತ್ತೇವೆ.

ಕವಿಗಳು ಅರ್ಥಗರ್ಭಿತ ವಿಷಯಗಳನ್ಳು ಅಳವಡಿಸಿಕೊಂಡಾಗ ಕವನಗಳಿಗೆ ಮೌಲ್ಯ ಬರುತ್ತದೆ ಎಂದರು.

ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ ಅವರು ಬರುವ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕವಿಗೋಷ್ಠಿ ಆಯೋಜಿಸಲಿ ಇದಕ್ಕೆ ಎಲ್ಲರು ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವಿಜಯ ವೈದ್ಯ ಮಾತನಾಡಿ ಕವಿಗಳು ಸಮಾಜ ತಿದ್ದುವ ಹಾಗೆ ಕವನಗಳಲ್ಲಿ ವಿಷಯ ಸಂಗ್ರಹವಾಗಬೇಕಾಗಿದೆ.

ಕವಿಗೋಷ್ಟಿ ಎಂದರೆ ಬಹಳಷ್ಟು ಕವಿಗಳು ಭಾಗವಹಿಸುವಂತ ಆಸಕ್ತಿ ಇರಬೇಕೆಂದು ತಿಳಿಸಿದ ಅವರು ಸ್ವರಚಿತ ಕವನಗಳಲ್ಲಿ ಕ್ರೀಯಾಶೀಲತೆ ಇರಬೇಕೆಂದರು.

ಕಾವ್ಯ ಲೋಕ ಸಂಘಟನೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಎಲೆಮರೆಕಾಯಿಯಂತೆ ಇರುವ ಪ್ರತಿಭೆಗಳನ್ನು ಗುರಿತಿಸುವ ಕಾರ್ಯ ಮಾಡುತ್ತಿರುವದು ಪ್ರಶಂಸನೀಯವಾಗಿದೆ ಎಂದರು.

ಸಿಜೆಕೆ ಪ್ರಶಸ್ತಿ ಪುರಸ್ಕ್ರತ ಸನ್ಮಾನಿತರಾದ ನಾಗರಾಜ್ ಇಂಗಳಗಿ ಮಾತನಾಡಿ ಕಾವ್ಯ ಲೋಕ ಸಂಘಟನೆ ಪರುಶರಾಮಪ್ರೀಯ ಅವರು ಕಳೆದ 30 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಪ್ರತಿಭಗೆಳನ್ನು ಗುರಿತಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಈ ಸಂಘಟನೆಗೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು. ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚೆನ್ನಬಸವ ಜೇಕಿನ್ ಮಾತನಾಡಿ 110 ನೇ ಕವಿಗೋಷ್ಟಿಗೆ 110 ಕವಿಗಳು ಭಾಗವಹಿಸುವ ರೀತಿ ಆಯೋಜನೆ ಮಾಡ ಬೇಕು ಇದಕ್ಕೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು.

ರೋಟರಿ ಅಸಿಸ್ಟೆಂಟ್ ಮಾಜಿ ಗವರ್ನರ್ ಟಿ.ಆಂಜನೇಯ ಅವರು ರೋಟರಿ ಸಂಸ್ಥೆಯ ಪ್ರಗತಿ ಮತ್ತು ಸೇವಾ ಕಾರ್ಯ ಕುರಿತು ವಿವರಿಸಿದರು.

ವೇದಿಕೆ ಮೇಲೆ ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜೇಶ್ವರಿ ಸುರೇಶ, ಡಾ.ಶಿವಕುಮಾರ, ನ್ಯಾಯವಾದಿ ನಿಂಗಪ್ಪ ಸುದ್ದಿ, ಮಂಜುನಾಥ ಹೊಸಕೇರಾ, ಪುಂಡಪ್ಪಗೌಡ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಕೆ.ಬಸವರಾಜ್, ಕಾವ್ಯ ಲೋಕ ಸಂಘಟನೆ ಅಧ್ಯಕ್ಷ ಎಂ. ಪರುಶರಾಮಪ್ರೀಯ, ವಿಶ್ವರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ರಗಡಪ್ಪ ಹೊಸಳ್ಳಿ ಉಪಸ್ಥಿತರಿದ್ದರು.

ಶಿಕ್ಷಕಿ ನಾಗರತ್ನ ಪ್ರಾರ್ಥಿಸಿದರು, ಜಡಿಯಪ್ಪ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕವನ ವಾಚನ ಮಾಡಿದ 20 ಕ್ಕೂ ಹೆಚ್ಚು ಕವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

 

ಫೋಟುಃ-17 ಜಿಎನ್ ಜಿ1ಃ- ಗಂಗಾವತಿ ಸಾಹಿತ್ಯ ಭವನದಲ್ಲಿ ಜರುಗಿದ 109 ನೇ ಕವಿಗೋಷ್ಟಿಯನ್ನು ಪತ್ರಕರ್ತ ರಾಮಮೂರ್ತಿ ನವಲಿ ಉದ್ಘಾಟಿಸಿದರು.

ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ

ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮತ್ತು ಹಾಸನಖಂಡಿ ನಿಂಗಾಪೂರು ಹೊಸಳ್ಳಿ ಹುಲಿಗಿ ಬಂಡಿ ಅರ್ಲಾಪುರ್, ಬಗ್ನಾಳ್, ಹಿಟ್ನಾಳ ಗ್ರಾಮಸ್ಥರು ವಿಜಯವಾತ್ರಿಯಲ್ಲಿ ವೀರಾಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿದರು.

ಬೆಳಗ್ಗೆ 8:00ಗೆ ಸಂಕಲ್ಪ ಉಮಾ ಹವನಗಳು ಮತ್ತು ತುಂಗಭದ್ರಾ ಹರತಿ ಗೋಪೂಜೆ ಅಶ್ವಪೂಜೆ 111 ಮಹಿಳೆಯರಿಂದ ಕುಂಭ ಮೆರವಣಿಗೆ ವಾದ್ಯ ಮೇಳದೊಂದಿಗೆ ದೇವಸ್ಥಾನದವರೆಗೆ ಮೆರಣಿಗೆ ನಡೆಯಿತು.

ಈ ಸಂದರ್ಭದಲ್ಲಿ ತುಂಗಾ ಹಾರ್ತಿಯಲ್ಲಿ ಸಂಸದರಾದ ರಾಜಶೇಖರ್ ಹಿಟ್ನಾಳ್ ಪಿವಿ ಪಾಟೀಲ್ ಆರ್ ವಿ ಪಾಟೀಲ್ ಯಂಕಪ್ಪ ಹೊಸಳ್ಳಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ಸಂಪನ್ನ

ಗಂಗಾವತಿ: ನಗರದ ಶಾರದಾ ದೇಗುಲದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ಶಾರದಾ ಶಂಕರ ಭಕ್ತ ಭಜನಾ ಮಂಡಳಿ ಆಯೋಜಿಸಿರುವ ಶ್ರಾವಣ ಸಂಭ್ರಮ ವಿಶೇಷ ಭಜನಾ ಕಾರ್ಯಕ್ರಮ ನಾಲ್ಕನೆಯ ಸೋಮವಾರ ದಿನದಂದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ಭಜನೆಯೊಂದಿಗೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಜಿಲ್ಲಾ ಸಂಯೋಜಕಿ ಮಾತನಾಡಿ ಶೃಂಗೇರಿಯ ಜಗದ್ಗುರುಗಳ ಅನುಗ್ರಹದ ಮೇರೆಗೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗಿದ್ದು, ಭಕ್ತಿ ಮಾರ್ಗಕ್ಕೆ ಭಜನೆ ಅತ್ಯಂತ ಸಹಕಾರಿಯಾಗಿದ್ದು, ದೇವರ ನಾಮ ಸ್ಮರಣೆಯ ಮೂಲಕ ಸರ್ವರಿಗೂ ಸುಖ ಶಾಂತಿ, ಸಮೃದ್ಧಿ ದೊರೆಯುವಂತೆ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೇಮಾವತಿ ಕುಲಕರ್ಣಿ, ಸುಮಾ ಗಡದ್, ರೇಣುಕಾ, ಕುಮದಾ, ಗೀತಾ ಬಾಯಿ, ಶ್ರೀದೇವಿ ಜಗನ್ನಾಥ್ ಅಳವಂಡಿಕರ್, ರಜಿನಿ, ವೀಣಾ ಅಳವಂಡಿ ಇತರರು ಉಪಸ್ಥಿತರಿದ್ದರು.

ಯುವ ಜನಾಂಗದ ದೇಶದ ಶಕ್ತಿಯಾಗಲಿ – ಕಲ್ಮಠ ಶ್ರೀಗಳು

ಭಾರತಕ್ಕೆ ಸ್ವಾತಂತ್ರ್ಯ ದೊರೆತು 79 ವರ್ಷಗಳು ಕಳೆದಿವೆ.

ಈ ಸುದೀರ್ಘ ಅವಧಿಯಲ್ಲಿ ಭಾರತ ದೇಶವು ವಿಜ್ಞಾನ ,ತಂತ್ರಜ್ಞಾನ, ಆರೋಗ್ಯ ,ಶಿಕ್ಷಣ, ಬಹ್ಯಾಕಾಶ ಸಂಶೋಧನೆ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಯನ್ನು ಮಾಡಿ ಅಪಾರ ಪ್ರಗತಿಯನ್ನು ಸಾಧಿಸಿದೆ.

ಆದಾಗ್ಯೂ ಭಾರತವನ್ನು ಮತ್ತಷ್ಟು ಜಾಗತಿಕ ಶಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲೆ ಇದೆ.

ಯುವಜನತೆ ಹೊಸ ಹೊಸ ಆಲೋಚನೆ, ಕ್ರಿಯಾಶೀಲತೆ, ಅನನ್ಯ ಆವಿಷ್ಕಾರಗಳಿಂದ ದೇಶದ ಪ್ರಗತಿಗೆ ಚೈತನ್ಯ ಶಕ್ತಿಯನ್ನು ತುಂಬಬೇಕಾಗಿದೆ.

ವಿಶ್ವದಲ್ಲಿಯೇ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಭಾರತಕ್ಕೆ ಅದೇ ಭಾರವಾಗದೆ ದೇಶದ ಶಕ್ತಿಯಾಗಿ ಮಾರ್ಪಡಬೇಕೆಂದು ಗಂಗಾವತಿಯ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕೊಟ್ಟೂರು ಮಹಾಸ್ವಾಮಿಗಳು ಹೇಳಿದರು.

ಅವರು ಇಂದು ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆದ 79ನೇ ಭಾರತ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಸಾಧನೆ ಮಾಡಿರುವ ಕಾಶಿ ವಿಶ್ವನಾಥ್ ಸಿರಿಗೇರಿ, ನಾಗರಾಜ್ ಇಂಗಳಗಿ, ಎಂ ಜೆ ಶ್ರೀನಿವಾಸ್, ಮತ್ತು ಹರೀಶ್ ಕುಲಕರ್ಣಿಯವರಿಗೆ ಈ ವರ್ಷದಿಂದ ಸಂಸ್ಥೆ ಪ್ರಾರಂಭಿಸಿದ ಕೊಟ್ಟೂರೇಶ್ವರ ಪ್ರಶಸ್ತಿ ಪ್ರಧಾನಿಸಿತು.

ಸಂಸ್ಥೆಗೆ ನೂತನ ಸದಸ್ಯರಾಗಿ ನೇಮಕಗೊಂಡ ರಾಚಯ್ಯ ಸ್ವಾಮಿ, ಹುಚ್ಚೇಶ್ವರ ಮಠ ಹಾಗೂ ಸಂಸ್ಥೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರದ ವಿ.ಜಿ. ಯಾವಗಲ್ ,ಪ್ರಕಾಶ್ ಗೌಡ ಪಾಟೀಲ್, ಬಾಲಪ್ಪ ರವರನ್ನು ಹಾಗೂ ಮುಂಬಡ್ತಿ ಪಡೆದ ಚಂದ್ರಶೇಖರ, ಯು.ಎಂ. ಬಸವರಾಜ್, ವಿಶ್ವನಾಥ್ ಹಿರೇಮಠರನ್ನು ಸನ್ಮಾನಿಸಲಾಯಿತು.

ಅದೇ ರೀತಿ ಕೊಟ್ಟೂರೇಶ್ವರ ಸಂಸ್ಥೆಯಲ್ಲಿ ಎಲ್ಕೆಜಿಯಿಂದ ಪಿಜಿ ಅವರಿಗೆ ಅಧ್ಯಯನ ಮಾಡಿದ ರಕ್ಷಿತಾ ಹಾಗೂ ಸುಬ್ರಮಣ್ಯರನ್ನು ಮತ್ತು 2024- 25 ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ್ ಪ್ರಸ್ತಾವಿಕವಾಗಿ ಮಾತನಾಡಿ ಸಂಸ್ಥೆ ನಡೆದು ಬಂದ ಹಾದಿಯನ್ನು ವಿವರಿಸಿದರು.

ದೈಹಿಕ ನಿರ್ದೇಶಕರಾದ ಹೊನ್ನಪ್ಪ ಮಾಸ್ತಮ್ಮ ನವರ ನೇತೃತ್ವದಲ್ಲಿ ಸೇವಾದಳ, ಸ್ಕೌಟ್ಸ್ ಎನ್ಎಸ್ಎಸ್, ತಂಡಗಳಿಂದ ಧ್ವಜ ಕವಾಯತು, ನೆರವೇರಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಕೆ ಚನ್ನಬಸಯ್ಯ ಸ್ವಾಮಿ, ಕಾರ್ಯದರ್ಶಿಗಳಾದ ಶರಣೇಗೌಡ ಮಾಲಿಪಾಟೀಲ್ ,ಕೋಶಾಧ್ಯಕ್ಷರಾದ ಸಿಂಗನಾಳ ಸುರೇಶ್, ನಿರ್ದೇಶಕರಾದ ಕಳಕನ ಗೌಡ ಪಾಟೀಲ್ ಲಿಂಗಪ್ಪಕಮತಗಿ ಹಾಗೂ ಎಲ್ಲಾ ಶಾಲಾ ಕಾಲೇಜುಗಳ ಪ್ರಾಚಾರ್ಯರು ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಶಿಕ್ಷಕರಾದ ಮುತ್ತನಗೌಡ ಮತ್ತು ರೇಣುಕಾ ನಿರ್ವಹಿಸಿದರು

ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯಧ್ಯಕ್ಷರಾದ ನಾಗರಾಜ್ ಎಸ್ ಗುತ್ತೇದಾರ್ ವಕೀಲರು ನಮ್ಮ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಬದುಕಿಗೆ ಬೇಕಾದ ಮೌಲ್ಯಗಳನ್ನು ಕಲಿಸುವ ಮೂಲಕ ಉದಾತ್ತ ಮೌಲ್ಯಗಳನ್ನು ಪೋಷಿಸುವ ಹಾಗೂ ಅವುಗಳನ್ನು ಯಥಾವತ್ತಾಗಿ ಸಮಾಜಕ್ಕೆ ಮುಂದುವರಿಸುವ ಕಾರ್ಯವನ್ನು ಮಾಡುತ್ತಿದೆ.

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಜೀವನದ ಉದಾತ್ತ ಮೌಲ್ಯಗಳು, ಆದರ್ಶಗಳು, ಸಂಸ್ಕಾರಗಳು, ಹಾಗೂ ನಮ್ಮ ಹಿರಿಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂದೇಶ ನೀಡಿದರು.

ಇಂದಿನ ಆಧುನಿಕ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣಗಳ ಒತ್ತಡಕ್ಕೆ ವಿದ್ಯಾರ್ಥಿಗಳು ಒಳಗಾಗದೆ ಬದುಕಿನ ನೈಜ ತಿರುಳನ್ನು ಆಸ್ವಾದಿಸುವ ಕಡೆ ಗಮನಹರಿಸಬೇಕಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು ಈ ಹಂತದಲ್ಲಿ ಪ್ರತಿಯೊಬ್ಬರು ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಸಮಾಜದ ಮುಖ್ಯವಾಹಿನಿಯಲ್ಲಿ ಉನ್ನತ ಹುದ್ದೆಗೆ ಏರುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಹೇಮಂತ್ ರಾಜ್ ಕಲ್ಮಂಗಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಲುಕುಹಾಕಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷರು, ಪ್ರಾಂಶುಪಾಲರಾದ ಎಂ.ಆರ್ ಮಂಜು ಸ್ವಾಮಿ ಅವರು ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ.

ವಿದ್ಯಾರ್ಥಿಗಳು ಉತ್ತಮ ಜೀವನ ನಡೆಸಲು ಇಂದಿನ ಕಠಿಣ ಪರಿಶ್ರಮವೇ ಕಾರಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಅಮಿತ್ ಕುಮಾರ್ ರೆಡ್ಡಿ, ಪದವಿ ಕಾಲೇಜಿನ ಪ್ರಾಚಾರ್ಯ ಬಸಪ್ಪ ಶಿರಿಗೇರಿ, ಉಪನ್ಯಾಸಕರಾದ ಶಂಕರಲಿಂಗಪ್ಪ ಕೊಪ್ಪದ, ನಾಗರಾಜ್ ಹೆಚ್., ಅಶೋಕ್, ಶಂಕರ್ ವಗರನಾಳ, ಶರಣಬಸವ, ಬಸನಗೌಡ ಹಾಗೂ ಅಧ್ಯಾಪಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಅವರ ಪಾಲಕರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಸತ್ಕರಿಸಲಾಯಿತು.

ಮಾಹಿತಿಗಾಗಿ:
ಬಸಪ್ಪ ಶಿರಿಗೇರಿ
ಪ್ರಾಚಾರ್ಯರು,
ಸಂಕಲ್ಪ ಮಹಿಳಾ ಪದವಿ ಮಹಾವಿದ್ಯಾಲಯ ಗಂಗಾವತಿ
ಮೊ.ನಂ: ೯೦೧೯೧೯೮೦೬೭

ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿ|| ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಪುಸ್ತಕ ಬಿಡುಗಡೆ

ಗಂಗಾವತಿ: ೭೯ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಗಂಗಾವತಿ ಸಂಸ್ಥೆ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಪ್ರತಿಮ ಸ್ವತಂತ್ರ ಹೋರಾಟಗಾರರಾದ ಶ್ರೀ ಅಲ್ಲೂರಿ ಸತ್ಯನಾರಾಯಣರಾಜು ಅವರ ಜೀವನ ಕುರಿತ ಎಸ್.ಡಿ.ವಿ ಅಜೀಜ್ ಅವರು ಇಂಗ್ಲಿಷ್ ಭಾಷೆಯಲ್ಲಿ ರಚಿಸಿದ ಪುಸ್ತಕ ಬಿಡುಗಡೆಯಾಯಿತು.

ಪುಸ್ತಕದ ಬಗ್ಗೆ ವಿವರವಾಗಿ ಖ್ಯಾತ ಕಣ್ಣಿನ ತಜ್ಞರಾದ ಡಾ|| ಹನುಮಂತಪ್ಪ ಹಾಗೂ ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ಮಾತನಾಡಿದರು.

ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ ಅವರು, ದೇಶಪ್ರೇಮಿಯಾಗಿದ್ದ ಅಲ್ಲೂರಿ ಸತ್ಯನಾರಾಯಣರಾಜು ಅವರ ಪುಸ್ತಕ ಕನ್ನಡದಲ್ಲಿ ಬರಬೇಕು ಆಗ ಅಂತಹ ಹೋರಾಟಗಾರರ ಪರಿಚಯ ಕನ್ನಡಿಗರಿಗೂ ಆಗುತ್ತದೆ ಎಂದರು.

ಆದರ್ಶ ದಂಪತಿಗಳಾದ ದಿ. ಅಲ್ಲೂರಿ ಸತ್ಯನಾರಾಯಣರಾಜು ಹಾಗೂ ದಿ. ಅನ್ನಪೂರ್ಣಮ್ಮ ಅವರ ಪುತ್ರರಾದ ಡಾ. ಸೋಮರಾಜು, ಅವರ ತಂದೆಯವರ ಜೀವನ ಚರಿತ್ರೆಯನ್ನು ಪುಸ್ತಕ ರೂಪದಲ್ಲಿ ತಂದಿದ್ದು ಸಾರ್ಥಕ ಕೆಲಸವೆಂದುಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವೈದ್ಯರಾದ ಡಾ. ಚಂದ್ರಪ್ಪ ವಹಿಸಿದ್ದರು. ನಂತರ ವಸುಧಾ ಪೌಂಢೇಷನ್ ಹೈದರಾಬಾದ್ ಅವರು ದಾನವಾಗಿ ನೀಡಿದ ಬೆಡ್‌ಶೀಟು, ಸೀರೆಗಳನ್ನು ಅನಾಥಾಶ್ರಮಕ್ಕೆ ಹಸ್ತಾಂತರಿಸಲಾಯಿತು ಹಾಗೂ ವಿಕಲಚೇತನ ಶಾಲೆಯ ಮಕ್ಕಳಿಗೆ ಪುಸ್ತಕ, ಬೆಡ್‌ಶೀಟುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ|| ಮಾದವಶೆಟ್ಟಿ, ಡಾ|| ಮಲ್ಲನಗೌಡ, ಡಾ|| ಸುಲೋಚನಾ ಚಿನಿವಾಲರ್, ಡಾ|| ಎ.ಎಸ್.ಎನ್ ರಾಜು, ಡಾ|| ನಾಗರಾಜ, ಸಿದ್ದನಗೌಡ ವಕೀಲರು, ಡಾ|| ಮಧುಸೂದನ್, ಡಾ|| ಪ್ರಶಾಂತ ದೇಸಾಯಿ, ರಾಜಶೇಖರ ಹೇರೂರ್, ಸುಭಾಷ್ ಬಂಬ್, ಚೇತನ ಹಿರೇಮಠ, ಲಯನ್ಸ್ ಕ್ಲಬ್ ಖಜಾಂಚಿ ಶಿವಪ್ಪ ಗಾಳಿ ಇತರರಿದ್ದರು.

ವರದಿ:
ಡಾ|| ಶಿವಕುಮಾರ ಮಾಲಿಪಾಟೀಲ್
ಅಧ್ಯಕ್ಷರು, ಲಯನ್ಸ್ ಕ್ಲಬ್, ಗಂಗಾವತಿ
ಮೊ ನಂ: ೯೪೪೮೩೦೨೭೭೫

ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ. ಸತ್ಯ ಧರ್ಮ ಪಾಲನೆಯ ಶ್ರೀ ಕೃಷ್ಣ ಜನ್ಮದಿನದ ಉದ್ದೇಶ: ಸವಿತಾ ನೇತ್ರಾಜ್ ಗುರುವಿನ ಮಠ.

ಗಂಗಾವತಿ ನಗರದ ಪ್ರತಿಷ್ಠಿತ ಶಾಲೆಯಾದ ಮಹಾನ್ ಕಿಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ವಿಷ್ಣುವಿನ ದಶಾವತಾರದಲ್ಲಿ ಒಂದಾದ ಶ್ರೀ ಕೃಷ್ಣ ಪರಮಾತ್ಮ ಸತ್ಯಧರ್ಮನ್ಯಾಯ ಸಂದೇಶದ ಪ್ರತೀಕವಾಗಿ ಕಂಗೊಳಿಸುತ್ತಿದ್ದಾರೆ ಎಂದು ಮುಖ್ಯೋಪಾಧ್ಯಾಯನಿ ಸವಿತಾ ನೇತ್ರಾಜ್ ಗುರುವಿನಮಠ ಹೇಳಿದರು.

ಅವರು ಶಾಲೆಯಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ದೇಶದ ಎರಡು ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಮಧ್ಯೆ ಜರುಗಿದ ಯುದ್ಧದಲ್ಲಿ ಶ್ರೀ ಕೃಷ್ಣನು ಧರ್ಮದ ಪರವಾಗಿ ಪಾಂಡವರಿಗೆ ಜಯಶಾಲಿ ಆಗುವಂತೆ ಹರಿಸಿದನು.

ಜೊತೆಗೆ ಅಧರ್ಮದಿಂದ ಕೂಡಿದ್ದ ಕೌರವರು ಸೋಲಲು ಶ್ರೀ ಕೃಷ್ಣನೇ ಕಾರಣರಾಗಿದ್ದು, ಅವರ ತತ್ವ ಸಿದ್ಧಾಂತಗಳನ್ನು ಬಾಲ್ಯದಲ್ಲಿ ಮಕ್ಕಳು ಅಳವಡಿಸಿಕೊಳ್ಳಬೇಕೆಂಬುವ ಉದ್ದೇಶದಿಂದ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಲಂಕಾರಗೊಳಿಸಿದ ತೊಟ್ಟಿಲಿಗೆ ಪೂಜಿ ಸಲ್ಲಿಸಿ ಶ್ರೀ ಕೃಷ್ಣ ಜಯಂತೋತ್ಸವ ಆಚರಿಸುವುದರ ಜೊತೆಗೆ ವೇಷಧಾರಿ ಶ್ರೀ ಕೃಷ್ಣ ಹಾಗೂ ರಾಧೆಯ ಬಾಲ್ಯ ತುಂಟತನ ಮೊಸರು ಗಡಿಗೆ ಆಟ ಬೆಣ್ಣೆ ಕದಿಯೋ ರೂಪಕಗಳನ್ನು ನೆರವೇರಿಸಿ, ಸೋದರ ಮೂಲಕ ಅರ್ಥಪೂರ್ಣ ಆಚರಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮಹಾನ್ ಕಿಡ್ಸ್ ಶಾಲೆಯ ಮುಖ್ಯಸ್ಥರಾದ ನೇತ್ರಾಜ್ ಗುರುವಿನ ಮಠ, ಶಾಲೆಯ ಸಿಬ್ಬಂದಿ ವರ್ಗದವರಾದ ಪೂರ್ಣಿಮಾ, ಕುಮುದಿನಿ, ನಾಗರತ್ನ, ಲತಾಶ್ರೀ, ರೇಷ್ಮಾ, ಶಿಲ್ಪ, ವೈಷ್ಣವಿ, ಸುಮಾ, ಜ್ಯೋತಿ, ಮಂಜುನಾಥ, ಪಾಲಕರಾದ ಭೀಮರಾಯ, ಅಂತರಾಷ್ಟ್ರೀಯ ಕಲಾವಿದ ಭೀಮರಾಯ ವಕೀಲರು, ಜಾನವಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿಗಾಗಿ:
ನೇತ್ರಾಜ್ ಗುರುವಿನಮಠ
ಅಧ್ಯಕ್ಷರು, ಮಹಾನ್ ಕಿಡ್ಸ್ ಸ್ಕೂಲ್, ಗಂಗಾವತಿ.
ಮೊ.ನಂ: ೯೯೮೬೧೬೭೩೬೭

ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ, ಶಿಕ್ಷಕರು, ಶಾಲಾ ಮಕ್ಕಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಊರಿನ ಗುರುಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ, ಸ್ವಾತಂತ್ರ್ಯದ ಮಹತ್ವವನ್ನು ಹೊಗಳುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಡಿಸಿದರು.

ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಇಂದು ಗಂಗಾವತಿ ತಾಲೂಕ ಪಂಚಾಯಿತಿ ಮತ್ತು ಗಂಗಾವತಿ ನಗರಸಭೆ ಹಾಗೂ ಗಂಗಾವತಿ ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ತಾಲೂಕ ಕ್ರೀಡಾಂಗಣದಲ್ಲಿ ಜರುಗಿತು.

ಇದರ ಪ್ರಯುಕ್ತ ನಡೆದ ಅನೇಕ ಸ್ಪರ್ಧೆಗಳಲ್ಲಿ ಶ್ರೀ ಚನ್ನಬಸವ ಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಶ್ರೀಮತಿ ಗಂಗಮ್ಮ ಗುರುಪಾದಗೌಡ ಮಾಲಿ ಪಾಟೀಲ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಮಣಿಕಂಠ ತಂದೆ ರಮೇಶ್ ಇವನು ಸ್ಥಳದಲ್ಲಿಯೇ ಪ್ರಬಂಧ ಬರೆದು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾನೆ.

ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಗಂಗಾವತಿಯ ಶಾಸಕರು ಸನ್ಮಾನ್ಯ ಶ್ರೀ ಜನಾರ್ದನ್ ರೆಡ್ಡಿ ಅವರು ವಿದ್ಯಾರ್ಥಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ನೀಡಿ ಅಭಿನಂದಿಸಿದ್ದಾರೆ.

ಪ್ರಯುಕ್ತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಈತನ ಪ್ರತಿಭೆಗೆ ಶ್ಲಾಘಿಸಿದ್ದಾರೆ.