ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಹಲವಾರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾವತಿ ಚಾರಣ ಬಳಗದ ಮಾರ್ಗದರ್ಶಕರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರಕಟಣೆಯಲ್ಲಿ ಸಂತಸ ಹಂಚಿಕೊಂಡರು.

ಪ್ರವಾಸೋದ್ಯಮ ಮಂತ್ರಿಗಳಾದ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಬೆಣಕಲ್ ಗ್ರಾಮಕ್ಕೆ ಭೇಟಿ ಕೊಟ್ಟು ಅಲ್ಲಿಯ ಪ್ರಾಗೈತಿಹಾಸಿಕ ಸ್ಮಾರಕಗಳ ಬಗ್ಗೆ ಮಾಹಿತಿ ಪಡೆದಿದ್ದರು.

ಅದರ ಬಗ್ಗೆ ವಿಧಾನಸಭೆ ಪ್ರಶ್ನೋತ್ತರ ವೇಳೆ ಚರ್ಚೆ ನಡೆದು ನಾಡಿನ ಗಮನ ಸೆಳೆದಿತ್ತು.

ಎರಡು ವರ್ಷಗಳ ಹಿಂದೆ ಸುವರ್ಣ ಚಾನಲ್ ಹಾಗೂ ಕನ್ನಡಪ್ರಭ ಪತ್ರಿಕೆಗಳು ನಡೆಸಿದ ಕರ್ನಾಟಕದ ಏಳು ಅದ್ಭುತಗಳ ಅಭಿಯಾನದಲ್ಲಿ ಹಿರೇಬೆಣಕಲ್ ಮೊರೆರ ಬೆಟ್ಟ ಮೊದಲ ಸ್ಥಾನ ಪಡೆದಿತ್ತು.

ಆಗಿನ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಏಳು ಅಧ್ಬುತಗಳ ಕುರಿತು ಘೋಷಣೆ ಮಾಡಿದ್ದರು.

ಖ್ಯಾತ ನಟ ರಮೇಶ ಅರವಿಂದ, ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಸುಂದರರಾಜ್ ಇತರರು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ ಹತ್ತಾರು ವರ್ಷಗಳಿಂದ ಈ ಸ್ಥಳವನ್ನು ಪ್ರಚಾರ ಮಾಡಿ ಮುನ್ನೆಲೆಗೆ ತಂದ ಗಂಗಾವತಿ ಚಾರಣ ಬಳಗ ಇದರ ಮೂಲಭೂತ ಅಭಿವೃದ್ಧಿಯಾಗಿ ಆಗ್ರಹ ಮಾಡುತ್ತಾ ಬಂದಿದೆ.

ಇಲ್ಲಿಯವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳನ್ನು ಹತ್ತಾರು ಬಾರಿ ಮೊರೆರ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಅಭಿವೃದ್ಧಿಗೆ ಮನವಿ ಮಾಡಿದೆ.

ಈಗಲಾದರೂ ಸರಕಾರ ಮೊರೆರ ಬೆಟ್ಟ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳಿಗೆ ಹತ್ತು ಕೋಟಿ ರೂಪಾಯಿಗಳನ್ನು ಮಂಜೂರು ಮಾಡಬೇಕೆಂದು ಆಗ್ರಹಪಡಿಸಿದೆ.

ಗಂಗಾವತಿ ಚಾರಣ ಬಳಗದ ಪ್ರಮುಖರಾದ ಡಾ|| ಶಿವಕುಮಾರ್ ಮಾಲಿಪಾಟೀಲ್, ಮಂಜುನಾಥ ಗುಡ್ಲಾನೂರ್, ಮೈಲಾರಪ್ಪ ಬೂದಿಹಾಳ, ಪ್ರಹ್ಲಾದ್ ಕುಲಕರ್ಣಿ, ರಾಮನಾಥ ಭಂಡಾರಕರ್ ಹಾಗೂ ಬೆಣಕಲ್ ಗ್ರಾಮದ ವಿರೇಶ ಅಂಗಡಿ, ಬಸನಗೌಡ ಹೊಸಳ್ಳಿ, ಬೆಂಗಳೂರಿನಲ್ಲಿ ನಡೆದ ಪ್ರದರ್ಶನಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ ಭಜನೆ, ಧಾರ್ಮಿಕ ಭಕ್ತಿ ಗೀತೆಗಳು, ನೃತ್ಯ, ಕೋಲಾಟ ಹಾಗೂ ವಿವಿಧ ವೇಷ ಭೂಷಣಗಳ ಮೂಲಕ ನಡೆಸಲಾಗುವುದು. ಯಾಜ್ಞವಲ್ಕ್ಯ ಮಂದಿರದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ (ರಿ) ಬೆಂಗಳೂರು ಕಾರ್ಯಾಧ್ಯಕ್ಷರಾದ ನಾಗರಾಜ ಎಸ್ ಗುತ್ತೇದಾರ ವಕೀಲರು ಈ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಭೆಯ ನಂತರ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಈ ಸಂಕೀರ್ತನಾ ಕಾರ್ಯಕ್ರಮಕ್ಕೆ ಎಲ್ಲರೂ ಒಂದೇ ಮನಸ್ಸಿನಿಂದ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸರ್ವ ಸಮಾಜದವರಲ್ಲಿ ಕೋರಿದ್ದಾರೆ.

ಮಾಹಿತಿಗಾಗಿ:
ಸದಾನಂದ ಶೇಟ್
ಅಧ್ಯಕ್ಷರು, ನಗರ ಸಂಕೀರ್ತನಾ ಯಾತ್ರೆ
ಮೊ.ನಂ: ೯೩೮೦೪೨೫೨೮೧

ಕವನ ಪರಿಣಾಮಕಾರಿಯಾಗಿರಲಿ : ರಾಮಮೂರ್ತಿ ನವಲಿ ಗಂಗಾವತಿ

ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು.

ರೋಟರಿ ಕ್ಲಬ್, ಕಾವ್ಯ ಲೋಕ ಸಂಘಟನೆ ಮತ್ತು ವಿಶ್ವ ರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾತಂತ್ರ್ಯ ಸಂಭ್ರಮ 109ನೇ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಸ್ವವರಚಿತವಾಗಿರುವ ಕವನಗಳು ಸಾಮಾಜಿಕ, ರಾಜಕೀಯ, ಸಾಹಿತ್ಯಕವಾಗಿರುವ ವಿಷಯಗಳು ಪರಿಣಾಮಕಾರಿಯಾಗಿರಬೇಕೆಂದು ತಿಳಿಸಿದ ಅವರು ಕವನಗಳನ್ನು ವಾಚಿಸಿದರೆ ಅದು ಪರಿಣಾಮಕಾರಿಯಾಗಿ ವಿವಿಧ ಕ್ಷೇತ್ರಗಳಿಗೆ ತಲುಪುವುದರ ಮೂಲಕ ಸ್ಪಂದನೆ ಸಿಗಬೇಕೆಂದರು.

ಇತ್ತೀಚಿನ ದಿನಗಳಲ್ಲಿ ಕವಿಗಳು ಕೇವಲ ಪ್ರಚಾರಕ್ಕಾಗಿ ಮೊಬೈಲ್, ಫೇಸ್ ಬುಕ್ ಗಳಲ್ಲಿ ಪೋಸ್ಟ್ ಮಾಡಿ ತೃಪ್ತಿ ಪಡುತ್ತಿರುವದನ್ನು ನಾವು ಕಾಣುತ್ತೇವೆ.

ಕವಿಗಳು ಅರ್ಥಗರ್ಭಿತ ವಿಷಯಗಳನ್ಳು ಅಳವಡಿಸಿಕೊಂಡಾಗ ಕವನಗಳಿಗೆ ಮೌಲ್ಯ ಬರುತ್ತದೆ ಎಂದರು.

ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ ಅವರು ಬರುವ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಕವಿಗೋಷ್ಠಿ ಆಯೋಜಿಸಲಿ ಇದಕ್ಕೆ ಎಲ್ಲರು ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವಿಜಯ ವೈದ್ಯ ಮಾತನಾಡಿ ಕವಿಗಳು ಸಮಾಜ ತಿದ್ದುವ ಹಾಗೆ ಕವನಗಳಲ್ಲಿ ವಿಷಯ ಸಂಗ್ರಹವಾಗಬೇಕಾಗಿದೆ.

ಕವಿಗೋಷ್ಟಿ ಎಂದರೆ ಬಹಳಷ್ಟು ಕವಿಗಳು ಭಾಗವಹಿಸುವಂತ ಆಸಕ್ತಿ ಇರಬೇಕೆಂದು ತಿಳಿಸಿದ ಅವರು ಸ್ವರಚಿತ ಕವನಗಳಲ್ಲಿ ಕ್ರೀಯಾಶೀಲತೆ ಇರಬೇಕೆಂದರು.

ಕಾವ್ಯ ಲೋಕ ಸಂಘಟನೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಎಲೆಮರೆಕಾಯಿಯಂತೆ ಇರುವ ಪ್ರತಿಭೆಗಳನ್ನು ಗುರಿತಿಸುವ ಕಾರ್ಯ ಮಾಡುತ್ತಿರುವದು ಪ್ರಶಂಸನೀಯವಾಗಿದೆ ಎಂದರು.

ಸಿಜೆಕೆ ಪ್ರಶಸ್ತಿ ಪುರಸ್ಕ್ರತ ಸನ್ಮಾನಿತರಾದ ನಾಗರಾಜ್ ಇಂಗಳಗಿ ಮಾತನಾಡಿ ಕಾವ್ಯ ಲೋಕ ಸಂಘಟನೆ ಪರುಶರಾಮಪ್ರೀಯ ಅವರು ಕಳೆದ 30 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ಪ್ರತಿಭಗೆಳನ್ನು ಗುರಿತಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಈ ಸಂಘಟನೆಗೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು. ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚೆನ್ನಬಸವ ಜೇಕಿನ್ ಮಾತನಾಡಿ 110 ನೇ ಕವಿಗೋಷ್ಟಿಗೆ 110 ಕವಿಗಳು ಭಾಗವಹಿಸುವ ರೀತಿ ಆಯೋಜನೆ ಮಾಡ ಬೇಕು ಇದಕ್ಕೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು.

ರೋಟರಿ ಅಸಿಸ್ಟೆಂಟ್ ಮಾಜಿ ಗವರ್ನರ್ ಟಿ.ಆಂಜನೇಯ ಅವರು ರೋಟರಿ ಸಂಸ್ಥೆಯ ಪ್ರಗತಿ ಮತ್ತು ಸೇವಾ ಕಾರ್ಯ ಕುರಿತು ವಿವರಿಸಿದರು.

ವೇದಿಕೆ ಮೇಲೆ ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜೇಶ್ವರಿ ಸುರೇಶ, ಡಾ.ಶಿವಕುಮಾರ, ನ್ಯಾಯವಾದಿ ನಿಂಗಪ್ಪ ಸುದ್ದಿ, ಮಂಜುನಾಥ ಹೊಸಕೇರಾ, ಪುಂಡಪ್ಪಗೌಡ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಕೆ.ಬಸವರಾಜ್, ಕಾವ್ಯ ಲೋಕ ಸಂಘಟನೆ ಅಧ್ಯಕ್ಷ ಎಂ. ಪರುಶರಾಮಪ್ರೀಯ, ವಿಶ್ವರತ್ನ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ರಗಡಪ್ಪ ಹೊಸಳ್ಳಿ ಉಪಸ್ಥಿತರಿದ್ದರು.

ಶಿಕ್ಷಕಿ ನಾಗರತ್ನ ಪ್ರಾರ್ಥಿಸಿದರು, ಜಡಿಯಪ್ಪ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕವನ ವಾಚನ ಮಾಡಿದ 20 ಕ್ಕೂ ಹೆಚ್ಚು ಕವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

 

ಫೋಟುಃ-17 ಜಿಎನ್ ಜಿ1ಃ- ಗಂಗಾವತಿ ಸಾಹಿತ್ಯ ಭವನದಲ್ಲಿ ಜರುಗಿದ 109 ನೇ ಕವಿಗೋಷ್ಟಿಯನ್ನು ಪತ್ರಕರ್ತ ರಾಮಮೂರ್ತಿ ನವಲಿ ಉದ್ಘಾಟಿಸಿದರು.