ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವಿದ್ಯಾರ್ಥಿಗಳಿಗಾಗಿ ವಿವಿಧ ರೀತಿಯ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.

ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಪಾಲ್ಗೊಂಡರು. “ಪುಟಾಣಿ ವಿದ್ಯಾರ್ಥಿಗಳು ದೇವರಿದ್ದಂತೆ, ಅವರನ್ನು ಇಂತಹ ವೇಷಭೂಷಣಗಳಲ್ಲಿ ನೋಡುವುದೇ ಭಾಗ್ಯವಿದ್ದಂತೆ” ಎಂದು ಶಾಲೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ಅವರು ತಮ್ಮ ಉದ್ಘಾಟನಾ ನುಡಿಗಳನ್ನಾಡಿದರು.

“ಶಾಲೆಯಲ್ಲಿ ಎಲ್ಲಾ ರೀತಿಯ ಆಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅದೇರೀತಿಯಾಗಿ ಕೃಷ್ಣ ಜನ್ಮಾಷ್ಠಮಿಯನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಗುತ್ತಿದೆ” ಎಂದು ಶಾಲೆಯ ಕಾರ್ಯದರ್ಶಿಗಳಾದ ಶ್ರೀ ರುಬೇನ್ ಮಿರಜ್‌ಕರ್ ಅವರು ತಿಳಿಸಿದರು.

“ವಿದ್ಯಾರ್ಥಿಗಳಿಗೆ ಇಂತಹ ಚಟುವಟಿಕೆಗಳನ್ನು ಏರ್ಪಡಿಸುವುದರಿಂದ ಮಕ್ಕಳಲ್ಲಿ ಸೃಜನಶೀಲತೆ ಮೂಡುತ್ತದೆ ಮತ್ತು ಅವರನ್ನು ಕಲಿಕೆ ಕಡೆಗೆ ಹೆಚ್ಚು ಆಕರ್ಷಣೆಯನ್ನು ಮಾಡುತ್ತದೆ” ಎಂದು ಶಾಲೆಯ ಆಡಳತಾಧಿಕಾರಿಗಳಾದ ಶ್ರೀ ಚಂದ್ರಕಾಂತ್ ರಾವ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಆರೋನ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ ನಾಯಕ, ನಿವೇದಿತಾ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ರೇಖಾ ಠಾಕೂರ್, ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿಗಾಗಿ:
ಮಂಜುನಾಥ ನಾಯಕ
ಮುಖ್ಯೋಪಾಧ್ಯಾರು,
ಆರೋನ್ ಮೀರಜಕರ್ ಶಾಲೆ ಗಂಗಾವತಿ.
ಮೊ.ನಂ: ೯೯೮೦೫೧೯೩೨೭

ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬುಧವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ವಹಿಸಿದ್ದರು.

ಮುಖ್ಯ ಗುರುಗಳಾದ ಜಗನ್ನಾಥದಾಸ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಗುರುಪಾದಯ್ಯ, ಲಯನ್ ಕಾಶಿ ವಿಶ್ವನಾಥ ಸಿರಿಗೇರಿ, ಲಯನ್ ರಾಮನಾಥ ಭಂಢಾರ್ಕರ್, ಲಯನ್ ಆಜಾದ್, ಲಯನ್ಸ್ ಕ್ಲಬ್ ಖಜಾಂಚಿ ಶಿವಪ್ಪ ಗಾಳಿ, ಲಯನ್ಸ ಶಾಲೆಯ ಆಡಳಿತಾಧಿಕಾರಿ ಚಂದ್ರೇಗೌಡ, ಜಂಬಣ್ಣ ಐಲಿ ಇತರರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ. ಮಾತನಾಡಿದ ಗಣ್ಯರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ.

ಧರ್ಮ ನಿಷ್ಠೆಯನ್ನು ಹೊಂದಿದ್ದ ಶ್ರೀಕೃಷ್ಣ ಆತನ ಬಾಲ ಲೀಲೆಗಳು, ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಧರ್ಮ ರಕ್ಷಕನಾಗಿ ಪಾಂಡವರ ಗೆಲುವಿಗಾಗಿ ನಿಲ್ಲುವುದರ ಜೊತೆಗೆ ದುಷ್ಟರ ಸಂಹಾರ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತಗಳು ಸರ್ವ ಕಾಲಕ್ಕೂ ಅನ್ವಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ, ರಾಧಾ ಅವರ ವೇಷಧಾರಿ ಸ್ಪರ್ಧೆ ನೃತ್ಯ, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಗಮನ ಸೆಳೆದವು.

ಸ್ಪರ್ಧೆಯ ನಿರ್ಣಯಕರಾಗಿ ಶಕುಂತಲಾ ಕುಲಕರ್ಣಿ, ಉಲ್ಲಾಸ್, ಪ್ರತಿಮಾ ಸೇರಿದಂತೆ ಶಿಕ್ಷಕರು ಪಾಲಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನಂತರ ವಿವಿಧ ವೇಷಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ವಿಶೇಷವಾಗಿ ಅಹಮದ್ ಅಲಿ ಹಾಗೂ ಖಲಿದಾ ದಂಪತಿಗಳ ಮಗನಾದ ಆದಿಲ್ ಖಾನ್ ಎಂಬ ೨ನೇ ತರಗತಿಯ ವಿದ್ಯಾರ್ಥಿ ಕೃಷ್ಣನ ವೇಷ ಧರಿಸಿ ಸಾಮರಸ್ಯ ಮೆರೆದನು.

ಮಾಹಿತಿಗಾಗಿ:
ಡಾ|| ಶಿವಕುಮಾರ ಮಾಲಿಪಾಟೀಲ್
ಅಧ್ಯಕ್ಷರು, ಲಯನ್ಸ್ ಕ್ಲಬ್ ಗಂಗಾವತಿ
ಮೊ.ನಂ: ೯೪೪೮೩೦೨೭೭೫