ಕನಸುಗಾರರಾಗಿ ಅಬ್ದುಲ್ ಕಲಾಂ ಜಿ

ದೊಡ್ಡ ದೊಡ್ಡ ಕನಸುಗಳನ್ನು ಕಂಡು, ಅವುಗಳನ್ನು ಸಾಕಾರಗೊಳಿಸಲು ಕಷ್ಟಗಳ ಸಾಗರವನ್ನು ಈಜಿ ಮೇಲೆ ಏರಿದ ಮಹಾನ್ ಕನಸುಗಾರ ಡಾ.ಅಬ್ದುಲ್ ಕಲಾಂ. ಬಡವರಾಗಿ ಹುಟ್ಟುವುದು ತಪ್ಪಲ್ಲ ಆದರೆ ಬಡವರಾಗಿ ಸಾಯುವುದೇ ಮಹಾ ಪಾಪ ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡು ಸತತ ಪ್ರಯತ್ನದಿಂದ, ಹೋರಾಟದಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟ ಚೇತನ ಅಬ್ದುಲ್ ಕಲಾಂ. ಸೂರ್ಯನಂತೆ ಬೆಳಗಬೇಕೆಂದರೆ ಸೂರ್ಯನಂತೆ ಉರಿಯಬೇಕೆಂಬ ಆದರ್ಶ. ನಂಬಿಕೆಗಳಿಂದ ಕರ್ಮ ಯೋಗಿಯಾಗಿ ಸಾಧಕರಾಗಿ, ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನಕ್ಕೆ ಏರಿದ್ದು ನಿಜಕ್ಕೂ ನಂಬಲು ಅಸಾಧ್ಯವಾದರೂ ಸಾಧ್ಯ ಎನ್ನುವುದನ್ನು ನಾವು ಡಾ. ಅಬ್ದುಲ್ ಕಲಾಮರಿಂದ ನೋಡಿ ಕಲಿಯಬೇಕು. ಅವರ ದೃಷ್ಟಿ ಯಾವಾಗಲು ಆಕಾಶದೆಡಿಗೆ ಇರುತ್ತಿತ್ತು. ಆಕಾಶದಲ್ಲಿ ಹಾರುವ ವಿಮಾನಗಳನ್ನು ನೋಡಿ ತಾವು ಪೈಲೈಟ್ ಆಗಿ ವಿಮಾನದಲ್ಲಿ ಹಾಗೆ ಹಾರಾಡಬೇಕೆನ್ನುವ ಕನಸನ್ನು ಬಾಲ್ಯದಿಂದ ಕಂಡು ಅದನ್ನು ಗುರಿಯಾಗಿ ಇಟ್ಟುಕೊಂಡು ಬೆಳೆದರು. ಕೊನೆಗೆ ಪೈಲೆಟ್ ಆಗದಿದ್ದರೂ ರಾಕೆಟ್ ಗಳನ್ನು ತಯಾರಿಸುವ ಶಕ್ತಿ ಬೆಳೆಸಿಕೊಂಡು ಕೊನೆಗೆ ಜಗತ್ತೇ ಮೆಚ್ಚುವ ಕ್ಷಿಪಣಿ ಜನಕ ಎನ್ನುವ ಬಿರುದು ಗಳಿಸಿ ದೇಶವೇ ಬೆರಗಾಗುವಂತೆ ಆಕಾಶದೆತ್ತರಕ್ಕೆ ಬೆಳೆದು ನಿಂತರು. ಯಾವುದೇ ಕಾರ್ಯ ಮಾಡಿದರು ಅಚ್ಚುಕಟ್ಟಾಗಿ ಶ್ರದ್ಧೆಯಿಂದ ಮಾಡುವುದು ಅವರ ಹುಟ್ಟುಗುಣವಾಗಿತ್ತು. ‌

ಹೀಗಾಗಿ ರಾಷ್ಟ್ರಪತಿಯಾಗಿ, ವಿಜ್ಞಾನಿಯಾಗಿ ಸಂಶೋಧಕರಾಗಿ, ಉಪನ್ಯಾಸಕರಾಗಿ, ಬರಹಗಾರರಾಗಿ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದರೂ ಎಲ್ಲದರಲ್ಲೂ ಯಶಸ್ವಿಯಾಗಿ ಜನಮನ್ನಣೆ ಗಳಿಸಿದರು. ಅವರಲ್ಲಿನ ಉತ್ಸಾಹ ಚೈತನ್ಯ ಬಾಲ್ಯದಲ್ಲಿ ಇದ್ದಷ್ಟೇ ಅವರ ಇಳಿ ವಯಸ್ಸಿನಲ್ಲಿ ಇದ್ದಿದ್ದು ಆಶ್ಚರ್ಯವನಿಸುತ್ತದೆ. ಯಾವತ್ತೂ ಸುಮ್ಮನೆ ಕುಳಿತವರಲ್ಲ ಅಬ್ದುಲ್ ಕಲಾಂ ಜಿ. ಯಾವುದಾದರೂ ಒಂದು ಕ್ರಿಯೆಯಲ್ಲಿ ನಿರಂತರ ತಮ್ಮನ್ನು ತಾವು ತೊಡಗಿಸಿ ಕೊಂಡವರು. ದೇಶ ಕಂಡ ಅಪರೂಪದಲ್ಲೇ ಅಪರೂಪದ ಸಾಧಕರಲ್ಲಿ ಅಬ್ದುಲ್ ಕಲಾಂ ಒಬ್ಬರು. ತಾವು ನಿರಂತರ ಹೋರಾಟ, ಶ್ರಮದಿಂದ ಮೇಲೆ ಬಂದಂತೆಯೇ ಇತರರನ್ನು ನಿರಂತರ ಸ್ಪೂರ್ತಿದಾಯಕ ಮಾತುಗಳಿಂದ ಬೋಧನೆಯಿಂದ ಮೇಲೆತ್ತಿದವರು.

ಅವರಿಗೆ ಬೋಧನೆ ಎನ್ನುವುದು ಅಚ್ಚುಮೆಚ್ಚಿನ ಕಾರ್ಯವಾಗಿತ್ತು. ಸಮಯ ಸಿಕ್ಕಾಗೆಲ್ಲ ವಿದ್ಯಾರ್ಥಿಗಳೊಂದಿಗೆ ಕಳೆಯುತ್ತಿದ್ದರು ಹಾಗೂ ತಮ್ಮ ಅನುಭವಗಳನ್ನು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಾ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸಿದರು ಹಾಗೂ ಚೈತನ್ಯ ತುಂಬಿ ಸಾಧನೆ ಮಾಡುವಂತೆ ಹುರಿದುಂಬಿಸಿದರು ಅಬ್ದುಲ್ ಕಲಾಂ ಜಿ. ಅವರ ಜೀವನವೇ ಇತರರಿಗೆ ಒಂದು ಪಾಠದಂತೆ ಇತ್ತು. ಅವರ ಜೀವನವೇ ಇತರರಿಗೆ ದಾರಿ ದೀಪವಾಗಿ ಬೆಳಕು ನೀಡುತ್ತಿದೆ ಎಂದರೆ ತಪ್ಪಲ್ಲ. “ಮಾತಿಗಿಂತ ಕೃತಿ ಲೇಸು” ಎನ್ನುವ ಗಾದೆ ಮಾತಿನಂತೆ ನಿರಂತರವಾಗಿ ಕರ್ಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಸಾಯುವ ಕ್ಷಣದಲ್ಲೂ ಸಹ ವಿದ್ಯಾರ್ಥಿಗಳಿಗೆ ಬೋಧಿಸುತ್ತಾ ಶರಣರ ಬದುಕನ್ನು ಮರಣದಲ್ಲಿ ನೋಡಿ ಎನ್ನುವಂತೆ ಬದುಕಿನ ಕೊನೆಯ ಕ್ಷಣದವರೆಗೂ ಜೀವನದ ಸಾರ್ಥಕತೆಯನ್ನು ಮೆರೆದವರು ಅಬ್ದುಲ್ ಕಲಾಂ ಜಿ.

ಭಾರತ ರತ್ನವಾಗಿ, ಕ್ಷಿಪಣಿ ಜನಕನಾಗಿ, ರಾಷ್ಟ್ರಪತಿಯಾಗಿ ಎಲ್ಲಕ್ಕಿಂತ ಮೇಲಾಗಿ ಒಬ್ಬ ಆದರ್ಶ ಶಿಕ್ಷಕರಾಗಿ ಅವರು ತೋರಿದ ದಾರಿ ಎಲ್ಲರಿಗೂ ಸ್ಪೂರ್ತಿದಾಯಕ. ದೇಶದ ಬೆಳವಣಿಗೆಗೆ ತಮ್ಮದೇ ಆದ ಅಪರೂಪದ ಕಾಣಿಕೆಯನ್ನು ನೀಡಿ ದೇಶದ ಕೀರ್ತಿಯನ್ನು ಹೆಚ್ಚಿಸಿದ ಅಜರಾಮರವಾಗಿ ಉಳಿದ ಕನಸುಗಾರ ಅಬ್ದುಲ್ ಕಲಾಂ ಅವರಿಗೆ ನನ್ನದೊಂದು ಸಲಾಂ

ಲೇಖನ: ಲಕ್ಷ್ಮೀದೇವಿ ಪತ್ತಾರ, ಪ್ರೌಢಶಾಲಾ ಶಿಕ್ಷಕಿ, ಬರಹಗಾರ್ತಿ, ಗಂಗಾವತಿ. ಜಿಲ್ಲಾ: ಕೊಪ್ಪಳ

ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿವಿಧ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯಿಂದ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 14 ದಿನಗಳ ಸಾಫ್ಟ್ ಟಾಯ್ಸ್ (ಮೃದು ಆಟಿಕೆಗಳು) ತರಬೇತಿ ಹಾಗೂ 38 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ 23 ರಂದು ಸಂದರ್ಶನ ನಡೆಯಲಿದ್ದು, ಅ.24 ರಂದು ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಸಕ್ತರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್‌ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್, ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದಲ್ಲಿ ೫೧ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಣೆ.

ಗಂಗಾವತಿ: ಅಕ್ಟೋಬರ್-೧೨ ರಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ವಿವೇಕ ಭಾರತಿ ಶಾಲೆ ಆವರಣದಲ್ಲಿ ಬಿ.ಎಲ್. ಬುಲ್ಸ್ ಕರಾಟೆ ಸಂಸ್ಥೆಯ ೯ನೇ ವಾರ್ಷಿಕೋತ್ಸವದ ಅಂಗವಾಗಿ ಕರಾಟೆ ವಿದ್ಯಾರ್ಥಿಗಳಿಗೆ ಬೆಲ್ಟ್ ಪರೀಕ್ಷೆ ಮತ್ತು ಮಕ್ಕಳಿಗೆ ಸಸಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಪರಿವೀಕ್ಷಕರಾಗಿ ಅಬ್ದುಲ್ ರಜಾಕ್ ಸಿಂಧನೂರ್ ರವರು ಆಗಮಸಿದ್ದರು ಹಾಗೂ ೫೧ ಕರಾಟೆ ವಿದ್ಯಾರ್ಥಿಗಳು ಬೆಲ್ಟ್ ಪರೀಕ್ಷೆಯಲ್ಲಿ ಭಾಗವಹಿಸಿದ್ದರು ಮತ್ತು ಪ್ರಿಯಾ ಮತ್ತು ಪ್ರಣವಿ ವಿದ್ಯಾರ್ಥಿಗಳು ಡಬಲ್ ಪ್ರಮೋಶನ್ ಪಡೆದುಕೊಂಡರು.

ಕರಾಟೆಯ ಮುಖ್ಯ ತರಬೇತಿರಾದ ಮಂಜುನಾಥ ರಾಠೋಡ್ ಮಾತನಾಡಿ ಮಕ್ಕಳಿಗಿರುವ ಧೈರ್ಯ. ಪ್ರತಿಭೆ. ಸಾಹಸ ಪ್ರದರ್ಶನ ಮತ್ತು ಇನ್ನಿತರ ಐಚ್ಛಿಕ ಕಲಿಕೆ ಮಕ್ಕಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಜೊತೆಗೆ ಆತ್ಮ ರಕ್ಷಣಾ ಕಲೆ ಎಲ್ಲರಿಗೂ ಬಹು ಮುಖ್ಯವಾಗಿದೆ ಎಂದು ಹೇಳಿದ್ದರು. ಕರಾಟೆ ತರಬೇತಿದಾರಾದ ಫಯಾಜ್, ಮೀನಾಕ್ಷಿ, ಪ್ರಜ್ವಲ್ ಮತ್ತು ವಿವೇಕ ಭಾರತಿ ಶಾಲೆ ಅಧ್ಯಕ್ಷರಾದ ಅಶೋಕ್ ಮತ್ತು ಕರಾಟೆ ಪಾಲಕರಾದ ಮಂಜುನಾಥ್, ಶ್ರೀಮತಿ ಲಕ್ಷಿö್ಮ, ಶ್ರೀಮತಿ ಶ್ರೀಕುಮಾರಿ, ಡಾ|| ಕಿರಣ್ ಕುಮಾರ್, ಮಂಜುನಾಥ್ ವಕೀಲರು, ಪಲ್ಲವಿ, ವಲಿಭಾಷಾ, ಭೀಮರಾಯ ಮುಂತಾದವರು ಉಪಸ್ಥಿತರಿದ್ದರು.

ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ

ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ ಭಾರತಿ ಸ್ವಾಮಿಗಳು ಸಾಧಕಾಶ್ರಮ ಗೊಂದಿಮಠ ಅವರ ನೇತೃತ್ವದಲ್ಲಿ ಕಳೆದ 38 ವರ್ಷಗಳಿಂದ ಶ್ರೀ ಪಾಂಡುರಂಗ ಪಂಡರಾಪುರಕ್ಕೆ ಪಾದಯಾತ್ರೆಯನ್ನು ಇಂದಿಗೂ ನಾವು ಮುಂದುವರಿಸಿಕೊಂಡು ಬಂದಿದ್ದೇವೆ. ಪಾದಯಾತ್ರೆ ಉದ್ದೇಶ ದುಷ್ಟ ಚಟಗಳಿಂದ ದೂರ ಮಾಡುವುದು. ಗೋಂದಿಮಠ ಎಂದರೆ ಜೀವನದ ಜಂಜಾಟದಲ್ಲಿ ಜೊತೆಗೆ ಗೊಂದಲವಿಲ್ಲದ ಜೀವನ ನಡೆಸುವುದಕ್ಕೆ ಆಶ್ರಯ ನೀಡುವಂತ ಮಠ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವ ಬೃಂದಾವನ ಭಜನಾ ಮಂಡಳಿಯ ಅಧ್ಯಕ್ಷರಾದ ದರೋಜಿ ನರಸಿಂಹ ಶ್ರೇಷ್ಠಿ ಮತ್ತು ಭಜನಾ ಮಂಡಳಿಯ ಸದಸ್ಯರು, ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರುಕ್ಮಿಣಿಮ್ಮ. ಶ್ರೀಮತಿ ಪದ್ಮಾವತಿ, ಶ್ರೀಮತಿ ರಾಧಿಕಾ ಮತ್ತು ಸದಸ್ಯರು, ವಾಸವಿ ಯುವಜನ ಸಂಘದ ಅಧ್ಯಕ್ಷ ಮಂಜುನಾಥ ಮತ್ತು ದರೋಜಿ ವೆಂಕಟೇಶ. ಗುರು ಭೀಮ್ ಭಟ್ ಜೋಶಿ. ಭೀಷ್ಮ ನಾರಾಯಣ ಸೇರಿದಂತೆ ಸಮಾಜದ ಮುಖಂಡರಾದ ಜಿ.ಆರ್.ಎಸ್ ಸತ್ಯನಾರಾಯಣ, ಸಂಜಿವ ಕುಮಾರ ರಾಯಚೂರು. ಹೊಸೂರ ಮಂಜುನಾಥ ಶ್ರೇಷ್ಠಿ, ಬಸವರಾಜ, ಪ್ರಶಾಂತ ಸೇರಿದಂತೆ ಇತರರು ಭಾಗವಹಿಸಿ ಅಧ್ಯಕ್ಷರ ಕುಟುಂಬಸ್ಥರಿಂದ ಲಘುಉಪಹಾರವನ್ನು ನೆರವೇರಿಸಲಾಯಿತು.

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯಮಟ್ಟದ ಕರೋಕೆ ಚಿತ್ರಗೀತೆ ಸ್ಪರ್ಧೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಆಯೋಜಿಸಿರುವ ಕರ್ನಾಟಕ ಧ್ವನಿ ಸಂಚಿಕೆ ಒಂದು ಈ ಸ್ಪರ್ಧೆಯ ಅಂತಿಮ ಹಂತದ ಸ್ಪರ್ಧೆಯನ್ನು ವಿಜಯನಗರ ಜಿಲ್ಲೆ, ಹೊಸಪೇಟೆಯ ಬುದ್ಧ ಬಸವ ಭವನದಲ್ಲಿ ದಿನಾಂಕ 26-10-2025ರ ಭಾನುವಾರದಂದು ಆಯೋಜಿಸಲಾಗಿದೆ. ಈ ಗಾಯನ ಸ್ಪರ್ಧೆಯಲ್ಲಿ 38 ಜನ ಗಾಯಕರಿದ್ದು ಯುಗಳ ಗೀತೆಗಳು ಹಾಡಲಿದ್ದಾರೆ ಅಂತಿಮವಾಗಿ ಆಯ್ಕೆಯಾಗುವ ಗಾಯಕರಿಗೆ ಬೆಳಗಾವಿಯಲ್ಲಿ ನಡೆಯಲಿರುವ ಕನ್ನಡ ನುಡಿ ವೈಭವ 2026ರ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾರಾಣಿ ನಡೋಣಿ ಸದಸ್ಯರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ರಾಷ್ಟ್ರಮಟ್ಟದ ಚಿತ್ರ ಕಲಾವಿದರು ಬೆಳಗಾವಿ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಕೆ ಎಸ್ ನಾಯ್ಕರವರು ವಹಿಸಲಿದ್ದಾರೆ. ಗೊರೂರು ಅನಂತರಾಜು ಅವರ ಕೃತಿ ನಿಂತು ಹೋದ ರಂಗ ವೈಭವ ಪುಸ್ತಕದ ಲೋಕಾರ್ಪಣೆಯನ್ನು ಡಾ.ಸಿ ಸೋಮಶೇಖರ್, ಐ ಎ ಎಸ್ ಬಸವ ವೇದಿಕೆ ಬೆಂಗಳೂರು ಅಧ್ಯಕ್ಷರು ನೆರವೇರಸುತ್ತಾರೆ. ಸಿಂಗಾರ ಎಂಬ ಹಾಡನ್ನು ಶ್ರೀಮತಿ ಕಮಲ ಕುಲಕರ್ಣಿ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ಶ್ರೀ ಮಧುನಾಯ್ಕ, ಲಂಬಾಣಿ, ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ (ನೋಂ), ಹೂವಿನ ಹಡಗಲಿ. ಮುಖ್ಯ ಅತಿಥಿಗಳಾಗಿ ಶ್ರೀ ಗೊರೂರು ಅನಂತರಾಜು ಗೌರವ ಅಧ್ಯಕ್ಷರು ಹಾಗೂ ಸಾಹಿತಿಗಳು, ಶ್ರೀ ವಿರುಪಾಕ್ಷಪ್ಪ ಯು ಉಪಾಧ್ಯಕ್ಷರು, ಶ್ರೀ ಉದೇದಪ್ಪ ಕ್ಯಾದಿಗೆಹಾಳ್ ಹೊಸಪೇಟೆ ತಾಲೂಕು ಅಧ್ಯಕ್ಷರು. ಶ್ರೀ ಪಿ.ವಿ ವೆಂಕಟೇಶ ವಕೀಲರು ಕರುನಾಡ ಕ್ರಿಯಾಶೀಲ ಸಮಿತಿ ಅಧ್ಯಕ್ಷರು ಹೊಸಪೇಟೆ ಇವರು ಹಾಜರಿರುತ್ತಾರೆ.

ಈ ಸ್ಪರ್ದೆಯ ತೀರ್ಪುಗಾರರಾಗಿ ಶ್ರೀ ಕುಬೇರನಾಯ್ಕ ದಾವಣಗೆರೆ ಹಾಗೂ ಶ್ರೀ ಸ್ವರೂಪ ಭಾರದ್ವಾಜ್ ರವರು ನಿರ್ವಹಿಸುತ್ತಾರೆ.

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಕಲಾಭೂಷಣ ಪ್ರಶಸ್ತಿ

ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ)ಯ ಸರ್ವ ಸದಸ್ಯರ 8ನೇ ವಾರ್ಷಿಕ ಮಹಾಸಭೆಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿತು.ಸಭೆಯಲ್ಲಿ ಇತ್ತೀಚೆಗೆ ಕೀರ್ತಿಶೇಷರಾದ ಹಾಸನದ ಹಿರಿಯ ಕಲಾವಿದರಾದ ಚೆಲುವೆಗೌಡರು, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ, ಕಾದಂಬರಿಕಾರರಾದ ಶ್ರೀ ಎಸ್. ಎಲ್ ಭೈರಪ್ಪ, ಗಾಯಕರಾದ ಹಾಸನ ಬಾಬು ಹಾಗೂ ಹರಿಕಥಾ ವಿದ್ವಾಂಸರು ಹಾಗೂ ಪೌರಾಣಿಕ ರಂಗ ನಿರ್ದೇಶಕರಾದ ಚಂದ್ರಚಾರ್ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯ ಆಗುಹೋಗುಗಳ ವರದಿಯ ನಂತರ ಕಲಾವಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಲವು ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ 40 ಕಲಾವಿದರಿಗೆ ಕಲಾಭೂಷಣ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು. ಸಮಿತಿಯ ಶ್ರೇಯೋಭಿವೃದ್ಧಿಗೆ ಸದಸ್ಯರುಗಳೊಡನೆ ಚರ್ಚಿಸಿ ಸಲಹೆಗಳನ್ನು ಪಡೆದು ಅನಂತರ ಅಧ್ಯಕ್ಷರಾದ ರವಿಕುಮಾರ್ ಬಿದರೆಯವರು ಮಾತನಾಡಿ ಇನ್ನೂ ಉನ್ನತ ಮಟ್ಟದಲ್ಲಿ ಸಂಘವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸದಸ್ಯರೆಲ್ಲರ ಸಹಕಾರವನ್ನು ಕೋರುತ್ತಾ ತಮ್ಮ ಅಧ್ಯಕ್ಷೀಯ ಭಾಷಣ ಮಾಡಿದರು.ಮಧ್ಯಾಹ್ನ ಊಟದ ನಂತರ ರಂಗಗೀತೆಗಳ ಕಾರ್ಯಕ್ರಮವನ್ನು ನಡೆಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷರಾದ ಬಿದರೆ ರವಿಕುಮಾರ್, ಕಾರ್ಯದರ್ಶಿ ವೇದ ಶಿವಕುಮಾರ್, ಖಜಾಂಚಿ ರಮೇಶ್ ಗೌಡಪ್ಪ, ಗೌರವಾಧ್ಯಕ್ಷರಾದ ಶೇಖರಪ್ಪ, ಉಪಾಧ್ಯಕ್ಷರಾದ ಶ್ರೀಕಂಠಪ್ಪ, ಸೋಮಶೇಖರ್, ಕಾರ್ಯಾಧ್ಯಕ್ಷರಾದ ನಾಗಮೋಹನ್, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಗವೇನಹಳ್ಳಿ, ಕಾನೂನು ಸಲಹೆಗಾರರಾದ ಮಹೇಂದ್ರ ಹಾಗೂ ಸಲಹೆಗಾರರಾದ ರಂಗಸ್ವಾಮಿ ಕೆ ಕೆ, ಟಿ ವಿ, ನಾಗರಾಜ್, ನಾಗರಾಜ್ ಸಿ ಜೆ, ತೇಜೂರು ಸೋಮಣ್ಣ ದ್ಯಾವೇಗೌಡ, ಕೇಶವ ಜಿ ಜಿ. ಮುಂತಾದವರು ಉಪಸ್ಥಿತರಿದ್ದರು.

ೋಮಶೇಖರ್ ಸ್ವಾಗತಿಸಿ, ಸಾವಿತ್ರಿ ಗಂಗಾಧರ್ ಪ್ರಾರ್ಥಿಸಿದರು, ಶಶಿಕಾಂತ್ ನಿರೂಪಿಸಿ, ನಾಗಮೋಹನ್ ವಂದಿಸಿದರು.

ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣೆ

ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್‌-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ‌ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ‌ ಪ್ರಕಾರವು ರಚಿಸುವುದಾಗಿದೆ ಎಂದು‌ ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು.

ಪ್ರಾಸ್ತಾವಿಕ ‌ ನುಡಿಯಲ್ಲಿ ಅರಸೀಕೆರೆ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪದ್ಮಮೂರ್ತಿಯವರು ಲೇಖಕಿ ಸಾವಿತ್ರಮ್ಮ ಓಂಕಾರ್ ಅವರು ‌ ಸಾಹಿತ್ಯದಲ್ಲಿ ನಡೆದುಬಂದ ಹೆಜ್ಜೆಗಳನ್ನ ಹೇಳಿ ಅಭಿನಂದನೆ ಸಲ್ಲಿಸಿದರು. ಹಾಸನದ ಸಾಹಿತಿಗಳು ಗೊರೂರು ಅನಂತರಾಜುರವರು ಕೃತಿ ಪರಿಚಯವನ್ನ ಸುದೀರ್ಘವಾಗಿ ಮಾಡಿಕೊಡುತ್ತಾ ಅವರ ಅನೇಕ ಕೃತಿಗಳನ್ನ ಪರಿಚಯಿಸಿಕೊಟ್ಟಿರುವ ಕೃತಿಯ ಲೇಖಕಿ ಸಾವಿತ್ರಮ್ಮ ಓಂಕಾರ್ ಅವರ ಕಾರ್ಯನ ಬಗ್ಗೆ ಶ್ಲಾಘಿಸಿದರು.

ಕೃತಿಯ ‌ ಲೇಖಕಿ ತಮ್ಮ ಮನದ‌‌ ಮಾತಿನಲ್ಲಿ ಬಂದ‌ ಪ್ರತಿಯೊಬ್ಬರಿಗೂ ಕೃತಿಯಲ್ಲಿರುವ ಎಲ್ಲಾ ೭೪ಜನ ಸಾಧಕರ ಬಗ್ಗೆ ಪ್ರಶಂಸೆ ಮತ್ತು ಅಭಿನಂದನೆ ಸಲ್ಲಿಸಿದರು. ನಾಗರತ್ನ ರಾಜಶೇಖರ್ ರವರು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಸ್ವರಚಿತ ಚುಟುಕು ವಾಚನ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಸನದ ಪತ್ರಕರ್ತರು,‌ ಕಸಾಪ‌‌ ಮಾಜಿ‌ ಅಧ್ಯಕ್ಷರು ‌ ಉದಯರನಿ ಮಾತನಾಡಿ ಸಾಹಿತಿಗಳಿಗಾಗೇ ಒಂದು ಪುಟವನ್ನು ಮೀಸಲಿಟ್ಟ ಪ್ರತಿನಿಧಿ ಪತ್ರಿಕೆಯ ಬಗ್ಗೆ ತಿಳಿಸಿದರು. ಕೃತಿಯ‌ ಬಗ್ಗೆ ಪ್ರಶಂಸನೀಯ ನುಡಿಗಳನ್ನು‌ ಆಡಿ ಪ್ರತಿಯೊಬ್ಬ ಸಾಹಿತಿಗಳನ್ನು ಉತ್ತೇಜಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರು ಸುಂದರೇಶ್ ಡಿ. ಉಡುವಾರೆ, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷರು ಡಾ. ಬರಾಳು ಶಿವರಾಮ ವೇದಿಕೆಯಲ್ಲಿದ್ದು ಮಾತನಾಡಿದರು.

ಪುಸ್ತಕದಲ್ಲಿರುವ ಸಾಧಕರುಗಳಾದ ಮಧುಮಾಲತಿ ರುದ್ರೇಶ್, ಮಾಲಾ ಚಲುವನಹಳ್ಳಿ, ಸುಭದ್ರಾ, ಶಫೀತಾ ಬೇಗಂ, ಪ್ರೇಮಲತಾ ಸೋಮಶೇಖರ್, ಸುಧಾ ಬಾಣಾವರ. ವಿಶ್ವಾಸ್ ಗೌಡ. ಮಲ್ಲೇಶ್, ಉಮೇಶ್ ಹೊಸಹಳ್ಳಿ, ರುದ್ರೇಶ್, ಚಂದ್ರು ಬಾಣಾವರ, ಡಾ. ಹರೀಶ್ ಉಪಾನ್ಯಾಸಕರು, ಮುಂತಾದವರು ಚುಟುಕು ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಬಂದ ಪ್ರತಿಯೊಬ್ಬರಿಗೂ ಪುಸ್ತಕದ ಜೊತೆ ಸನ್ಮಾನ ಸಲ್ಲಿಸಲಾಯಿತು.

ಡಾ|| ಶಿವಕುಮಾರ ಮಾಲಿಪಾಟೀಲ್ ರವರಿಗೆ ಹೊಸಪೇಟೆಯಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ.

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ ಅಧ್ಯಕ್ಷರು, ದಂತವೈದ್ಯರು, ಪರಿಸರ ಪ್ರೇಮಿಗಳು, ಸಾಹಿತಿಗಳಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಅಕ್ಟೋಬರ್-೧೦ ರಂದು ಹೊಸಪೇಟೆಯಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿಯನ್ನು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಮಂಡಳಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ, ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ್, ಬಳ್ಳಾರಿ ಸಂಸದರಾದ ಇ. ತುಕಾರಾಂ, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ನೀಡಲಾಗಿರುತ್ತದೆ.

ಡಾ|| ಶಿವಕುಮಾರ ಮಾಲಿಪಾಟೀಲ್ ಅವರು ವೃತ್ತಿಯಲ್ಲಿ ದಂತವೈದ್ಯರಾಗಿ ಸಾಮಾಜಿಕ ಕಳಕಳಿ ಹಾಗೂ ನಿಸ್ವಾರ್ಥತೆಯಿಂದ, ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ್, ಗಂಗಾವತಿ ಪ್ರಾಣೇಶ್, ಕಳಕನಗೌಡ ಪಾಟೀಲ್ ಹಾಗೂ ಇತರ ಹಿರಿಯರ ಮಾರ್ಗದರ್ಶನದಲ್ಲಿ ಹಲವಾರು ಸಮಾಜಮುಖಿ, ಪರಿಸರ ಸ್ನೇಹಿ ಕಾರ್ಯಗಳನ್ನು ಮಾಡಿರುತ್ತಾರೆ.

ಈ ಪ್ರಶಸ್ತಿಯನ್ನು ಸ್ವೀಕರಿಸಿದ ಡಾ|| ಶಿವಕುಮಾರ ಮಾಲಿಪಾಟೀಲ್‌ ಮಾತನಾಡಿ, ನಮ್ಮ ಈ ಸೇವೆಗೆ ಗಂಗಾವತಿ ಚಾರಣ ಬಳಗ ಸದಸ್ಯರಾದ ಮೈಲಾರಪ್ಪ ಬೂದಿಹಾಳ, ಪ್ರಹ್ಲಾದ ಕುಲಕರ್ಣಿ, ರಮೇಶ ಗಬ್ಬೂರು, ರಾಮನಾಥ ಭಂಡಾರಕರ್, ಸುರೇಶ ಸಿಂಗನಾಳ, ಬದರಿನಾಥ ಸಿರಿಗೇರಿ, ಡಾ. ಬದರಿ ಪ್ರಸಾದ, ಶ್ರೀಮತಿ ಸಿ. ಮಹಾಲಕ್ಷಿö್ಮÃ, ಉಲ್ಲಾಸ್, ಶಾಹೀನ್ ಕೌಸರ್, ಮಂಜುನಾಥ ಗುಡ್ಲಾನೂರು, ಆಂಜನೇಯ ಟಿ., ಎನ್. ಸೂರ್ಯನಾರಾಯಣ, ಹನುಮೇಶ ಭಾವಿಕಟ್ಟಿ, ಮಹಮ್ಮದ ರಫಿ, ಆನಂದ ಲಕ್ಕಿ, ಮಂಜುನಾಥ ಕಟ್ಟಿಮನಿ, ಜಗದೀಶ ಮಾಲಿಪಾಟೀಲ್, ಹರನಾಯಕ, ಶರಣಪ್ಪ ಹಡಪದ ಹೀಗೆ ಸಮಾನ ಮನಸ್ಕರ ಸಹಕಾರದಿಂದ ದುರ್ಗಮ್ಮನ ಹಳ್ಳ ಸ್ವಚ್ಛತಾ ಆಂದೋಲನ, ಪ್ಲಾಸ್ಟಿಕ್ ಮುಕ್ತ ಗಂಗಾವತಿ ಅಭಿಯಾನ, ಅರಣ್ಯ ಪ್ರದೇಶದಲ್ಲಿ ಹೊಂಡಗಳ ನಿರ್ಮಾಣ, ಸ್ಮಾರಕಗಳ ಸ್ವಚ್ಛತಾ ಕಾರ್ಯ, ಸೂರ್ಯನಾಯಕನ ಕೆರೆ ಅಭಿವೃದ್ಧಿ, ಹಲವಾರು ವನಮಹೋತ್ಸವ ಕಾರ್ಯಕ್ರಮಗಳು ಹೀಗೆ ಹತ್ತಾರು ಅಭಿವೃದ್ಧಿಪರ ಕಾರ್ಯಗಳನ್ನು ಮಾಡಲಾಗಿದೆ ಎಂದರು.

ಇವರ ಈ ಸಾಮಾಜಿಕ, ಪರಿಸರಸ್ನೇಹಿ ಕಾಳಜಿಯುತ ಕಾರ್ಯಗಳನ್ನು ಗುರುತಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಪ್ರಶಸ್ತಿ ನೀಡಿ ಸನ್ಮಾನಿಸಿರುವುದಕ್ಕಾಗಿ ಗಂಗಾವತಿ ಚಾರಣ ಬಳಗವು ಡಾ|| ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದೆ.

12 ರಂದು ಜಿ ಹಂಪಣ್ಣ ಹೊಸ್ಕೇರಾ ಲಯನ್ಸ್ ಕಣ್ಣಿನ ಆಸ್ಪತ್ರೆ ಲೋಕಾರ್ಪಣೆ… ಹಲವು ದಶಕಗಳ ಕನಸು ನನಸು… ಎಂ.ಜೆ.ಎಫ್ ಲ. ಟಿ ರಾಮಕೃಷ್ಣ.

ಗಂಗಾವತಿ: ಸಾಮಾಜಿಕ ಸೇವಾ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಹಲವು ದಶಕಗಳ ಕನಸು ಅಕ್ಟೋಬರ್‌-12 ರಂದು ನೆರವೇರಲಿದ್ದು,  ಜಿ ಹಂಪಣ್ಣ ಹೊಸ್ಕೇರಾ ಲಯನ್ಸ್ ಕಣ್ಣಿನ ಆಸ್ಪತ್ರೆಯು ಕಂಪ್ಲಿ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆ ಜರುಗಲಿದೆ ಎಂದು ಲಯನ್ಸ್ ಕಣ್ಣಿನ ಆಸ್ಪತ್ರೆ ಸಮಿತಿಯ ಅಧ್ಯಕ್ಷ ಎಂ.ಜೆ.ಎಫ್‌ ಲ. ಟಿ. ರಾಮಕೃಷ್ಣ ಹೇಳಿದರು.

ಅವರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಅಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಯಾದ ಲಯನ್ಸ್ ಕ್ಲಬ್ ಗಂಗಾವತಿ ಹಿರಿಯ ಸದಸ್ಯರಾದ ಡಾ||  ಜಿ. ಚಂದ್ರಪ್ಪ, ಡಾ|| ಎ. ಸೋಮರಾಜು, ಡಾ|| ಮಾಧವ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನೂತನ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಲಾಗುತ್ತಿದ್ದು ಇದರ ಸದುಪಯೋಗವನ್ನು ಸಮಾಜದಲ್ಲಿನ ಬಡವರು ವಯಸ್ಸಾದವರು ಪಡೆದುಕೊಳ್ಳಬೇಕೆಂದು ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪೂರ್ವ ಪ್ರಾಥಮಿಕ ಶಾಲೆಯಿಂದ ಹಿಡಿದು, ಪಿಯುಸಿ ಕಾಲೇಜು ಹಾಗೂ ಬುದ್ಧಿಮಾಂದ್ಯ ಮಕ್ಕಳಿಗೆ ವಸತಿ ಸಹಿತ ಶಿಕ್ಷಣ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬರಲಾಗಿದ್ದು. ಅಂದಾಜು 5 ಕೋಟಿ ರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ|| ಜಿ. ಚಂದ್ರಪ್ಪ, ಡಾ|| ಎ. ಸೋಮರಾಜು, ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಜಂಬಣ್ಣ ಐಲಿ, ಖಜಾಂಚಿಯಾದ ಶಿವಪ್ಪ ಗಾಳಿ, ಪ್ರಾಚಾರ್ಯ ಅಭಿಷೇಕ್, ಶೇಷಗಿರಿ ರಾವ್ ಸೇರಿದಂತೆ ಇತರರು ಮಾತನಾಡಿದರು.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಲವಾರು ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ನೀಡುತ್ತಾ ಎಲೆಮರೆಕಾಯಿಯಂತಿರುವ ನೂರಾರು ಪ್ರತಿಭೆಗಳನ್ನು ಗುರುತಿಸುತ್ತಾ ಬಂದಿದೆ.

ಪ್ರಸ್ತುತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಸಂಚಾಲಕರಾನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ಅವರು ಅನುಮೋದನೆ ಮಾಡಿದ್ದಾರೆ. ಇಂದಿರಾ ಲೋಕೇಶ್ ರವರು ಸರಕಾರಿ ಪ್ರೌಢಶಾಲೆ ಬೆಳಗೋಡು ಸಕಲೇಶಪುರ ತಾಲೂಕು ಹಿಂದಿ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಕವನ, ಕಥೆ, ಲೇಖನ ಹಾಗೂ ಪ್ರಬಂಧಗಳ ರಚನೆ ಆಗಿರುತ್ತದೆ. ಜಿಲ್ಲಾ ಮಟ್ಟದ ಕವಿ ವಿಭೂಷಣ, ರಾಜ್ಯ ಮಟ್ಟದ ಕನ್ನಡ ರತ್ನ, ರಾಜ್ಯಮಟ್ಟದ ಕವಿರತ್ನ, ರಾಜ್ಯ ಮಟ್ಟದ ಕರುನಾಡು ಸಿರಿ ಸಂಪದ ಸಾಹಿತ್ಯ ಸೇವಾ ಪ್ರಶಸ್ತಿ, ಡಾ. ಪುನೀತ್ ರಾಜ್ ಕುಮಾರ್ ಪುರಸ್ಕಾರ, ಸಾಹಿತ್ಯ ಸೌರಭ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, ರಾಜ್ಯ ಮಟ್ಟದ ರಾಷ್ಟ್ರ ಭಾಷಾ ಸೇವಾ ರತ್ನ ಪುರಸ್ಕಾರ, ಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

ಹಾಸನ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಡಿ.ಉಡುವಾರೆ, ಗೌರವಾಧ್ಯಕ್ಷರು ಶ್ರೀ ವೆಂಕಟೇಶ.. ಉದಯ ವರದಿ ಪತ್ರಿಕೆಯ ಸಂಪಾದಕರು ಹಾಸನ, ಡಾ.ಲೋಕೇಶ ಉಪನ್ಯಾಸಕರು ಹೊಳೆನರಸೀಪುರ, ಡಾ. ಬರಾಳು ಶಿವರಾಮ, ಚನ್ನರಾಯಪಟ್ಟಣ ತಾಲ್ಲೂಕು. ಕಾರ್ಯದರ್ಶಿ ದಿಬ್ಬೂರು ರಮೇಶ, ಸಂಘಟನಾ ಕಾರ್ಯದರ್ಶಿ, ಶಿವಕುಮಾರ ಆರ್. ವಿಶ್ವಾಸ್ ಡಿ. ಗೌಡರು ಸಕಲೇಶಪುರ ತಾ. ಅಧ್ಯಕ್ಷರು. ಪರಮೇಶ್ ಮಡಬಲು. ಗಿರಿಜಾ ನಿರ್ವಾಣಿ. ರಾಣಿ ಚರಾಶ್ರಿ. ಬೋರೇಗೌಡರು ಅರಸೀಕೆರೆ. ಕಿರಣ್ ಅಧ್ಯಕ್ಷರು ಚುಸಾಪ ಬೇಲೂರು. ಎಸ್. ಎಸ್. ಪುಟ್ಟೇಗೌಡರು ಅಧ್ಯಕ್ಷರು ಅರಕಲಗೂಡು ತಾ. ಹಾಗು ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.