ವಿಭಾಗೀಯ ಮಟ್ಟದ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ಗಂಗಾವತಿಯ ವೈಷ್ಣವಿ ರಾಜ್ಯಮಟ್ಟಕ್ಕೆ ಆಯ್ಕೆ

ಗಂಗಾವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಈ ವಿದ್ಯಾರ್ಥಿನಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. https://aratt.ai/@vishwaroopa_news_blog

ಯಶಸ್ವಿಯಾಗಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ

ಗಂಗಾವತಿ: ಡಿಸೆಂಬರ್-೩ ಬುಧವಾರ ವಿಶ್ವವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಜಿಲ್ಲೆಯ ಸಂಘ ಸಂಸ್ಥೆಗಳು ಹಾಗೂ ಸರ್ಕಾರದ ಸಂಯುಕ್ತಾಶ್ರಯದಲ್ಲಿ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯಿತು.

ವಿಶ್ವವಿಕಲಚೇತನರ ದಿನಾಚರಣೆ ನಿಮಿತ್ಯ ವಿವಿಧ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಸ್ಪರ್ಧೆಗಳಲ್ಲಿ ಲಯನ್ಸ್ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ೩೦ ವಿದ್ಯಾರ್ಥಿಗಳು ಭಾಗವಹಿಸಿ, ಕಿರಿಯರು ಹಾಗೂ ಹಿರಿಯರ ವಿಭಾಗ (೮-೧೧, ೧೨-೧೫ ಮತ್ತು ೧೬ ರಿಂದ ೨೧ ವರ್ಷ ಹಾಗೂ ೨೧ ವರ್ಷ ಮೇಲ್ಪಟ್ಟವರ ಕ್ರೀಡಾ ಸ್ಪರ್ಧೆಗಳಲಾದ ೨೫ ಮಿ, ೫೦ ಮಿ, ಮತ್ತು ೧೦೦ ಮಿ. ಓಟ, ಬಕೆಟ್‌ನಲ್ಲಿ ಚಂಡು ಹಾಕುವುದು, ಸಾಫ್ಟ್ ಬಾಲ್ ಥ್ರೋ, ಹಾಗೂ ಗುಂಡು ಎಸೆತಗಳಲ್ಲಿ ೧೦ ಪ್ರಥಮ ಹಾಗೂ ೧೦ ದ್ವಿತಿಯ ಬಹುಮಾನ ಪಡೆದು ಸಂಸ್ಥೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.

ಲಯನ್ಸ್ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲಾ ಮುಖ್ಯಗುರುಗಳಾದ ಪ್ರಭು ಹಿರೇಮಠ, ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರರು ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿಕಲಚೇತನರು ಹಾಗೂ ಶಾಲಾ ಸಿಬ್ಬಂದಿ ಎಲ್ಲರ ಸಹಕಾರದಿಂದ ವಿಶ್ವ ವಿಕಲಚೇತನರ ದಿನಾಚರಣೆ ಯಶಸ್ವಿಯಾಗಿದ್ದು, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾ ಡಾ|| ಜಿ.ಚಂದ್ರಪ್ಪರವರು ಹರ್ಷ ವ್ಯಕ್ತಪಡಿಸಿದ್ದಾರೆ. https://aratt.ai/@vishwaroopa_news_blog