ಮಹಾದoಡನಾಯಕರ ಸ್ಮರಣೋತ್ಸವದ ಕಾರ್ಯಕರ್ತರಿಗೆ ಮತ್ತು ದಾಸೋಹಿಗಳಿಗೆ ಗೌರವ ಸಮರ್ಪಣೆ.

ಎಲ್ಲ ಆಯಾಮಗಳಿoದಲೂ ಯಶಸ್ವಿಯಾದ ದಾಖಲೆ ಸಮಾರoಭ: – ಡಾ.ಶಿವಕುಮಾರ ಮಾಲಿಪಾಟೀಲ್‌

ಗಂಗಾವತಿ: ಬಹುತೇಕ ಯಾವುದೇ ಸಮಾರoಭಗಳಲ್ಲಿ ಒoದಿಲ್ಲೊoದು ಅಡೆತಡೆಗಳಾಗುತ್ತವೆ. ಅದು ಪ್ರಕೃತಿಯಿoದಾಗಬಹುದು ಮಾಡಿದ ಅಡುಗೆಯಲ್ಲಿ ವ್ಯತ್ಯಾಸವಾಗಬಹುದು. ಎಲ್ಲವೂ ಸರಿಯಾಗಿದ್ದರೂ ವೇದಿಕೆಯಲ್ಲಿರುವ ಅತಿಥಿಗಳಲ್ಲಿ ಯಾರೋ ಒಬ್ಬರ ವಿವಾದಾತ್ಮಕ ಹೇಳಿಕೆಯಿoದ ಸಭೆಯಲ್ಲಿ ಕೆಲವೊಮ್ಮೆ ಗೊoದಲಗಳಾಗಬಹುದು. ಆದರೆ ಯಾವುದೇ ಆಯಾಮಗಳಿoದಲೂ ತೊoದರೆಗಳಾಗದೆ ಅತ್ಯoತ ಯಶಸ್ವಿಯಾಗಿ ನಡೆದ ಸಮಾರoಭ ಮಾ-22 ರoದು ಗoಗಾವತಿಯಲ್ಲಿ ನಡೆದ ಮಹಾದoಡನಾಯಕರ ಸ್ಮರಣೋತ್ಸವ ಸಮಾರoಭ ಎoದು ಲಯನ್ಸ್ ಕ್ಲಬ್‌ನ ಅದ್ಯಕ್ಷರು, ಪರಿಸರ ಪ್ರೇಮಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.ಅವರು ರಾಷ್ಟ್ರೀಯ ಬಸವದಳದ ಗುರುಬಸವ ಮoಟಪದಲ್ಲಿ ಜರುಗಿದ ಸ್ಮರಣೋತ್ಸವ ಸಮಾರoಭದ ಯಶಸ್ಸಿಗೆಶ್ರಮಿಸಿದವರಿಗೆ ನಡೆದ ಸನ್ಮಾನ ಸಮಾರoಭದಲ್ಲಿ ಮಾತನಾಡುತ್ತಾ, ಈ ಯಶಸ್ಸಿನಲ್ಲಿ ವೀರೇಶ ಅವರನ್ನೊಳಗೊoಡoತೆ ಎಲ್ಲರ ಸಮರ್ಪಣಾ ಸೇವೆ ಇದೆ ಎoದುದಲ್ಲದೆ ಯಾರಿoದಲೂ ದೇಣಿಗೆ ತೆಗೆದುಕೊಳ್ಳದ ಈ ಕಾರ್ಯಕ್ರಮಕ್ಕೆ ನಾನು ಖುಷಿಯಿoದ ಐದು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಹೇಳಿದರು.

ನಾಗನಗೌಡ ಶಿಕ್ಷಕರು, ನೀಲಾoಬಿಕಾ ಮಹಿಳಾ ಸoಘದ ಅರೇಗಾರ ರತ್ನಮ್ಮ, ಕೊಪ್ಪಳದ ಸoಕಪ್ಪ ಅಮರಾಪುರ, ಪಾಮಯ್ಯ ಶರಣರು ಕoಪ್ಲಿ, ಬಸವಕೇoದ್ರದ ಅಧ್ಯಕ್ಷ ಕೆ. ಬಸವರಾಜ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕೆ. ವೀರೇಶಪ್ಪ ಇವರಿoದ ಸಾಮೂಹಿಕ ಪ್ರಾರ್ಥನೆ, ಚನ್ನಬಸಮ್ಮ ಕoಪ್ಲಿ ವಚನ ಹೇಳಿದರೆ, ರೇಣಮ್ಮ ಗೌಡರ್ ಇವರು ಮಾತಾಜಿಯವರ ಕುರಿತು ಹಾಡನ್ನು ಹಾಡಿದರು.

ಒoದೇ ವಾರದ ಅoತರದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ರಾಷ್ಟ್ರೀಯ ಬಸವದಳ, ಲಿoಗಾಯತ ಧರ್ಮ ಮಹಾಸಭಾ ಕ್ರಾoತಿಗoಗೋತ್ರಿ ಅಕ್ಕ ನಾಗಲಾoಬಿಕಾ ಗಣ ಬೀದರ, ಕಲಬುರಗಿ, ಬೆಳಗಾವಿ ಮತ್ತು ಬಸವ ಚಿoತನಪ್ರಭೆ ಆದ್ಯಾತ್ಮಿಕ, ಸಾಮಾಜಿಕ ಜಾಲತಾಣ ಕೊಪ್ಪಳ ಇವರು ಮುತುವರ್ಜಿವಹಿಸಿ ಮಾಡಿಸಿದ ಅಭಿನoದನೆಯ ನೆನಪಿನ ಕಾಣಿಕೆಗಳನ್ನು ಬಸವಕೇoದ್ರ ಮತ್ತು ಉಳಿದ ಆಯೋಜಕರಿಗೆ ಪ್ರಧಾನ ಮಾಡಿ ಮಾತನಾಡಿದ ಜಿಲ್ಲಾ ರಾಷ್ಟ್ರೀಯ ಬಸವದಳ ಅಧ್ಯಕ್ಷರಾದ ಸತೀಶ ವಿ. ಮoಗಳೂರ ಇವರು ಸ್ಮರಣೋತ್ಸವ ಹಾಗೂ ರಾಷ್ಟ್ರೀಯ ಬಸವದಳ ಸಮಾವೇಶದ ಜೊತೆಗೆ ಇದನ್ನು ಲಿoಗಾಯತ ಧರ್ಮದ ವಿಜಯೋತ್ಸವ ಎoದು ಕರೆಯಬಹುದಾಗಿದೆ ಎoದು ಹೃದಯತುoಬಿ ಹೇಳಿದರು.

ಅಧ್ಯಕ್ಷರಾದ ದಿಲೀಪಕುಮಾರ ವoದಾಲ, ಕೊಪ್ಪಳದ ಸುವರ್ಣ ಲಿoಗನಗೌಡ, ಗುರುರಾಜ, ಅಲ್ಲದೆ ಬಸವಜ್ಯೋತಿ, ವಿನಯಕುಮಾರ ಅoಗಡಿ, ಮಲ್ಲಿಕಾರ್ಜುನ ಅರಳಹಳ್ಳಿ, ವಿಜಯಲಕ್ಷ್ಮಿ ಹೊಮ್ಮಿನಾಳ, ರಾಜೇಶ್ವರಿ ಇನ್ನೂ ಹಲವಾರು ಶರಣ ಶರಣೆಯರು ಭಾಗವಹಿಸಿದ ಸಮಾರoಭವು ಅತ್ಯoತ ಯಶಸ್ವಿಯಾಗಿ ಜರುಗಿತು.https://aratt.ai/@vishwaroopa_news_blog

ಮೌನ ಸಾಧಕರಾಗಿ ಒಳಿತನ್ನು ಮಾಡಿ: ಹೆಚ್.ಎಸ್. ಪ್ರತಿಮಾ ಹಾಸನ್

ಹಾಸನ: ಮಾರ್ಚ್‌-14 ರಂದು ಹಾಸನದ ಹೌಸಿಂಗ್ ಬೋರ್ಡ್, ಚನ್ನಪಟ್ಟಣದಲ್ಲಿ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ತಾಲೂಕು ಅಧ್ಯಕ್ಷರಾದ ರಮ್ಯಾರವರ ನಿವಾಸದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಹಾಸನದ ಹೆಮ್ಮೆಯ ಪುತ್ರಿಯಾಗಿರುವ ಸಾಹಿತಿ, ಸಮಾಜ ಸೇವಕಿ, ಶಿಕ್ಷಕಿ, ಪತ್ರಕರ್ತೆ, ಸಾಮಾಜಿಕ ಚಿಂತಕಿ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ಸಾಧಕಿ, ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ (ರಿ ) ಸಂಸ್ಥಾಪಕ ಅಧ್ಯಕ್ಷರಾಗಿರುವ ಶ್ರೀಮತಿ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಡಿ ಅವರನ್ನು ಎಲ್ಲ ಮಹಿಳೆಯರು ಅರಿಶಿಣ ಕುಂಕುಮ, ಬಳೆ. ಸೀರೆ ಜೊತೆಗೆ ಬಾಗಿನ ನೀಡಿ ಅವರ ಸಾಧನೆಯ ಹಲವಾರು ಪ್ರಶಸ್ತಿ ಪಡೆದ ಭಾವಚಿತ್ರವಿರುವ ಫಲಕ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ನಂತರ ಬದುಕು ಎಂದ ಮೇಲೆ ಜೀವನದಲ್ಲಿ ಏರುಪೇರು ಸಹಜ. ಕಷ್ಟ ಸುಖ ಎಂಬುದು ಎಲ್ಲರ ಬದುಕಿನಲ್ಲಿ ಬರುತ್ತದೆ. ಕೈಲಾದಷ್ಟು ಸಹಾಯವನ್ನು ಕಷ್ಟದಲ್ಲಿ ಇರುವವರಿಗೆ, ಅಂಗವಿಕಲರು, ನೊಂದವರಿಗೆ, ನಿರ್ಗತಕರಿಗೆ ಮಾಡಬೇಕು ಮಾಡುವ ಕೆಲಸವಾಗಲಿ ಸಾಧನೆ ಆಗಲಿ ಮೌನದಲ್ಲಿ ಸಾಗಬೇಕು, ಎಂದಿಗೂ ಮೌನ ಸಾಧಕರಾಗಿ ಒಳಿತನ್ನು ಮಾಡುತ್ತಾ ಸಾಗಿದರೆ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಹೇಳುತ್ತಾ ಮಹಿಳೆಯರು ಪ್ರಬಲರಾಗಿ ಬದುಕಬೇಕು, ಆರ್ಥಿಕವಾಗಿ ಎಷ್ಟೇ ಪ್ರಬಲರಾದರು ದುಡಿಮೆಯನ್ನು ಮಾಡುತ್ತ ಸಾಗಿದರೆ ಸಮಾಜಕ್ಕೆ ಮಾದರಿಯಾಗಬಹುದು. ಅಷ್ಟೇ ಅಲ್ಲ ಮಹಿಳೆಯು ಅಬಲೆಯಲ್ಲ ಸಬಲೇ ಎಂಬ ಮಾತಿಗೆ ಎಲ್ಲಾ ಮಹಿಳೆಯರು ಸಂಸ್ಕೃತಿಯನ್ನು ಉಳಿಸುತ್ತಾ ಉಡುಗೆ-ತೊಡುಗಿಗಳಲ್ಲಿ ಬದಲಾವಣೆಗಳನ್ನು ತೋರದೆ ನಮ್ಮ ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನವನ್ನು ನೀಡುತ್ತಾ ನಮ್ಮ ಸಂಸ್ಕೃತಿಗೆ ವಿರುದ್ಧ ನಡೆಯದೆ ಕಾರ್ಯವನ್ನು ನಿರ್ವಹಿಸುತ್ತಾ ಸಾಗಿದರೆ ನಮ್ಮ ಸಮಾಜ ಸುಭದ್ರವಾಗಿರುತ್ತದೆ. ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನು ಅರಿತು ಸಾಗಬೇಕಿದೆ. ಒಟ್ಟಾರೆ ಮಹಿಳೆಯಿಂದ ಸಮಾಜ ಸುಭದ್ರತೆಯನ್ನು ಕಾಣಬಹುದಾಗಿದೆ. ಎಂದು ಹೆಚ್.ಎಸ್ ಪ್ರತಿಮಾ ಹಾಸನ್ ಅವರು ತಿಳಿಸಿದರು.

ನಂತರ ಹೆಚ್.ಎಸ್. ಪ್ರತಿಮಾ ಹಾಸನ್ ರವರ ಸಾಧನೆ ಬಹಳವಾಗಿದೆ, ಅವರು ನೂರಾರು ಮಹಿಳೆಯರಿಗೆ ಸ್ಪೂರ್ತಿದಾಯಕ ಹಾಗೂ ಮಾದರಿಯಾಗಿದ್ದಾರೆ. ನೊಂದ ಮಹಿಳೆಯರಿಗೆ ನ್ಯಾಯ ನೀಡುವುದಾಗಲಿ, ಕರಕುಶಲ ತರಬೇತಿಯಾಗಲಿ, ಸಾಹಿತಿಕವಾಗಿ ಕಾರ್ಯಕ್ರಮಗಳಾಗಲಿ ಗುರುತಿಸಿ ನಮ್ಮೆಲ್ಲರಿಗೂ ಪ್ರೋತ್ಸಾಹ ನೀಡುತ್ತಿರುವುದು ಅವರ ಸಾಧನೆಯಾಗಿ ಕಾಣುತ್ತದೆ. ಇವರು ಬಹುಮುಖ ಪ್ರತಿಭೆಯಾಗಿದ್ದು.ಯಾವುದೇ ನಿಷ್ಕಲ್ಮಶವನ್ನು ತೋರದೆ ನೇರ ನುಡಿಯ ಮಾತುಗಾರ್ತಿಯಾಗಿ ನಮ್ಮೆಲ್ಲರಿಗೂ ಗುರುವಿನಂತೆ. ಇವರನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಇಂದು ನಮ್ಮಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್(ರಿ ) ವತಿಯಿಂದ ಗೌರವಿಸುತ್ತಿರುವುದು ನಮಗೆಲ್ಲ ಹೆಮ್ಮೆ ಎನ್ನಿಸುತ್ತದೆ. ಹೀಗೆ ಇವರ ಕಾರ್ಯವು ಸುಗಮವಾಗಿ ನಡೆಯಲೆಂದು ಆಶಿಸುತ್ತೇವೆ ಎಂದು ತಾಲೂಕು ಅಧ್ಯಕ್ಷರಾದ ರಮ್ಯಾ ತಿಳಿಸಿದರು.

ನಮ್ಮ ಟ್ರಸ್ಟ್ ನ ಕಾರ್ಯವು ಸುಗಮವಾಗಿ ಸಾಗುತ್ತಾ ಸಮಾಜಕ್ಕೆ ಒಳಿತನ್ನು ಮಾಡಿದರೆ ಸಾಕೆಂದು ಎಲ್ಲಾ ಟ್ರಸ್ಟ್ ನ ಸದಸ್ಯರು ತಿಳಿಸಿದರು.

ಕಾರ್ಯಕ್ರಮದಲ್ಲಿಸೌಮ್ಯ, ಅಭಿಲಾಷ, ಕಲ್ಪನಾ, ಸಂಗೀತ, ಜಯಮ್ಮ ಪ್ರವೀಣ್ ಗೌಡ, ಬೇಬಿ ರಶಿಕ,ಬೇಬಿ ದಿಯಾ ಗೌಡ ಕೆ ಆರ್. ಇನ್ನೂ ಹಲವರು ಇದ್ದರು.  https://aratt.ai/@vishwaroopa_news_blog

ಹೆಜ್ಜೆ ಗೆಜ್ಜೆ ತಂಡದಿಂದ ಯುಗಾದಿ ರಂಗ ಸಂಭ್ರಮ ನಾಟಕೋತ್ಸವ

ಬೆಂಗಳೂರು: 50 ವರ್ಷದ ಸನಿಹದಲ್ಲಿರುವ ಬೆಂಗಳೂರಿನ ಗೆಜ್ಜಹೆಜ್ಜೆ ರಂಗತಂಡವು ಬೆಂಗಳೂರು ಸೇವಾ ಸದನ ರಂಗಮಂದಿರದಲ್ಲಿ ಮಾರ್ಚ್‌-12 ರಂದು ಯುಗಾದಿ ರಂಗ ಸಂಭ್ರಮ ನಾಟಕೋತ್ಸವ ಏರ್ಪಡಿಸಿತ್ತು.

ರಂಗಭೀಷ್ಮ ಬಿ.ವಿ ಕಾರಂತರ ಸಂಗೀತ ಸುಂಯೋಜನೆಯಲ್ಲಿ ಮೂಡಿ ಬಂದ ಗಜವದನ ಏರಂಬ ಎಂಬ ಗೀತೆಯನ್ನು ಗಣೇಶಯ್ಯನವರು ಆಡುವುದರ ಮುಖೇನ ನಾಟಕೋತ್ಸವಕ್ಕೆ ಚಾಲನೆ ನೀಡಿದರು.

ಹಲವಾರು ಪ್ರಸಿದ್ಧ ನಾಟಕಗಳ ರಂಗಗೀತೆಗಳನ್ನು ಒಂದು ಗಂಟೆಗಳ ಕಾಲ ಹಾಡಲಾಯಿತು. ತಂಡದ ಹೊಸ ಪ್ರಯೋಗ ಮಾದಕ ಯುವ ಮಾರಕ ಪ್ರದರ್ಶಿಸಲಾಯಿತು. ಯುವ ಜನತೆ ದುಶ್ಚಟಕ್ಕೆ ದಾಸರಾಗ್ತಾ ಇದ್ದಾರೆ. ಇದರ ಸುತ್ತ ಹೆಣೆಯಲಾದ ಕಥಾ ಹಂದರ ಮನುಷ್ಯ ಅನುಮಾನ ಮತ್ತು ಅವಮಾನದಿಂದ ಕೋಪ ತಾಪ ಆವೇಶ ಚಟ ಬಿದ್ದು ಚಟ್ಯಕೆ ಏರುತ್ತಾನೆ. ಬೀದಿ ಬದಿಗಳಲ್ಲಿ ಜನಸಂದಣಿ ಇರುವ ಜಾಗಗಳಲ್ಲಿ ಶಾಲಾ-ಕಾಲೇಜುನ ಸಮೀಪ ಏರ್ಪೋರ್ಟ್ ಬಸ್ಟ್ಯಾಂಡ್ ರೈಲು ನಿಲ್ದಾಣ ಮುಂತಾದ ಕಡೆಗಳಲ್ಲಿ ಗಾಂಜಾ ಅಫೀಮು ಎಲಾಯಿನ್ ಮತ್ತೇರಿಸುವ ಪದಾರ್ಥಗಳನ್ನು ಮಾರುತಿರುತ್ತಾರೆ. ಯುವಕ ಯುವತಿಯರನ್ನು ದುಶ್ಚಟಕ್ಕೆ ದಾಸರನ್ನಾಗಿಸುವ ವಂಚಕರ ಜಾಲವೇ ವಿಪರೀತವಾಗಿದೆ. ಪ್ರೇಕ್ಷಕರಿಗೆ ನೇರವಾಗಿ ಡ್ರಗ್ಸ್ ಮಾರಾಟ ಕಂಡು ಬಂದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಒಂದು ಪಾತ್ರ ಹೇಳುತ್ತದೆ. ಯುವ ಜನತೆಯನ್ನು ದುಸ್ಥಿತಿಯಿಂದ ಕಾಪಾಡಬೇಕಾದ ಪರಿಸ್ಥಿತಿ ಒದಗಿ ಬಂದಿರುವುದು ನೋವಿನ ಸಂಗತಿ.

ಧರೆಗೆ ತಂದು ಬಿಟ್ಬಿಟ್ನಪ್ಪ ಆಟ ಆಡ್ಸೋಕೆ ಪಾಠ ಕಲ್ಸೋಕೆ ಈ ಭೂಮಿ ಎಂಬ ರಂಗದ ಮೇಲೆ ಹಾಡೋಕ್ ಬಿಟ್ಟವ್ನೆ, ಕಾಮ ನೇಮ ಲೋಭ ಲಾಭದ ಪಾತ್ರ ಕೊಟ್ಟವ್ನೆ ಅಂತ ಹೇಳ್ತಾ ಪ್ರಹಸನ ಮುಕ್ತಾಯವಾಗುತ್ತದೆ. ನಿಂತ್ಕೋಳಿ ಅಲ್ಲಲ್ಲ ಕುಳಿತುಕೊಳ್ಳಿ ಎಂಬ ಹಾಸ್ಯ ಕಿರು ನಾಟಕ ಮತ್ತು ಎಂಡ್ ಇಲ್ಲದ ಬಂಡ್ ಅವತಾರ ರಾಜಕೀಯ ವಿಡಂಬನಾತ್ಮಕ ನಗೆ ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತದೆ ತಂಡ.

ರಂಗ ಉಪನ್ಯಾಸ ರಂಗ ಗೀತೆಗಳು, ಕಿರು ನಾಟಕ ರಂಗದ ಬಗ್ಗೆ ಮಾತುಗಳು ರಂಗ ಹಾಸ್ಯ ಪಟಾಕಿ ಎಲ್ಲಾ ಸರಿಸುಮಾರು ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡಿತು ಚಿಂತನೆಗೂ ಚಾಲನೆ ನೀಡಿತು. ಬೆಳಕು ವಿನ್ಯಾಸ ರವಿಶಂಕರ್ ಪ್ರಸಾದನ ಶಿವು, ಉಪನಿಷ ವಸ್ತ್ರಾಲಂಕಾರ ಪುಷ್ಪಲತಾ. ಪ್ರಚಾರ ಅಮಿತಾನಂದ ಶೇಖ ಪಾತ್ರವರ್ಗದಲ್ಲಿ ಮೈಸೂರು ರಮಾನಂದ್, ಶೇಖರ್ ಸೂರ್ಯನಾರಾಯಣರಾವ್, ಲಲಿತಾ ಗಣೇಶಯ್ಯ, ಟಿ.ಜಿ ಹರೀಶ್ ಸಂಗೀತ. ನಾಟಕ ಬರೆದಾಡಿಸಿದವರು ಮೈಸೂರು  ರಮಾನಂದ.  https://aratt.ai/@vishwaroopa_news_blog

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

ಪ್ಲಾಸ್ಟಿಕ್‌ ಬಳಕೆ ಆರೋಗ್ಯಕ್ಕೆ ಮಾರಕ

ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕಾರ್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ ಭೇಟಿ ನೀಡಿದರು.

ನಂತರ ಮಾತನಾಡಿದ  ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ ತ್ಯಜಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಜೀವನಶೈಲಿಗೆ ಬದಲಾಗಬೇಕಿದೆ. ಆ ಮೂಲಕ ಹಿರಿಯರಿಂದ ಬಳುವಳಿಯಾಗಿ ಬಂದ ಸುಂದರ-ಸ್ವಚ್ಚ ಪರಿಸರವನ್ನು ಯಥಾವತ್ತಾಗಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಸಾಧ್ಯವಾಗುತ್ತದೆ. ನಾಗರೀಕತೆಯ ಬೆಳವಣಿಗೆಯ ಭಾಗವಾಗಿ ದಿನನಿತ್ಯದ ಜೀವನಶೈಲಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿಯಾಗಿ ಅವುಗಳು ಪರಿಸರಕ್ಕೆ ಮತ್ತು ಮಾನವನ ಆರೋಗ್ಯಕ್ಕೆ ತೀವ್ರವಾದ ಹಾನಿಯನ್ನು ಉಂಟುಮಾಡುತ್ತಿವೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ವಸ್ತುಗಳ ಬದಲಾಗಿ ಪರ್ಯಾಯ ಬಳಕೆಯ ಕಡೆಗೆ ನಾವೆಲ್ಲ ಗಮನಹರಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕಾಗಿದೆ ಎಂದು ಕರೆ ನೀಡಿದರು. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಹಲವಾರು ಕಾಯ್ದೆ ಕಾನೂನುಗಳಿದ್ದರೂ ಸಹ ಜನ ಅವುಗಳನ್ನು ಗಮನಿಸದೆ ಮುಂದುವರೆದಲ್ಲಿ ಮಾನವ ಸಂಕುಲ ಅಪಾಯಕ್ಕೆ ಸಿಲುಕುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ಈ ಪವಿತ್ರ ಪರಿಸರದಲ್ಲಿ ವಾಸಿಸುವ ನಾವೆಲ್ಲರೂ ನಮ್ಮ ಸ್ವ-ಇಚ್ಚೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಹಾಗೂ ನಮ್ಮಗಳ ಆರೋಗ್ಯಯುತ ಜೀವನಕ್ಕೆ ಸಂಕಲ್ಪ ಮಾಡಬೇಕಾಗಿದೆ ಎಂದು ತಿಳಿಸಿದರು.

2021 ಆಗಸ್ಟ್ 12ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿದ ಅಧಿಸೂಚನೆಯಂತೆ ರಾಜ್ಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ ಅದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾವೆಲ್ಲರೂ ರಕ್ಕಸ ಪ್ಲಾಸ್ಟಿಕ್ ಅನ್ನು ತ್ಯಜಿಸಿ ಉತ್ತಮ ಪರಿಸರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಿದೆ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ರಮೇಶ್, ಶಿವಶರಣ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಯಾದ ರಾಹುಲ್ ಉಪಸ್ಥಿತರಿದ್ದರು.    https://aratt.ai/@vishwaroopa_news_blog

ವಾಸವಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಹೆಣ್ಣು ಜಗತ್ತು ಸೃಷ್ಟಿಯ ಪ್ರತೀಕ: ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ.

ಗಂಗಾವತಿ. ಜನ್ಮದಾತೆಯಿಂದ ಹಿಡಿದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾಣಬಹುದಾದ ಹೆಣ್ಣು ಸೃಷ್ಟಿಯ ಪ್ರತಿಕವಾಗಿ ಗೋಚರಿಸುತ್ತಾಳೆ ಎಂದು ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ಭಾಗ್ಯ ಈಶ್ವರಶೆಟ್ಟಿ ಹೇಳಿದರು.

ಅವರು ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಮಹಿಳಾ ಮಂಡಳಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೆಣ್ಣಿನ ಮೇಲೆ ಶೋಷಣೆ ಪ್ರಕರಣಗಳನ್ನು ಗಮನಿಸಿದಾಗ ಭ್ರೂಣ ಹತ್ಯೆಯಿಂದ ಹಿಡಿದು, ಶೋಷಣೆ, ಅತ್ಯಾಚಾರ, ಕೊಲೆ ನಿರಂತರವಾಗಿ ಜರುಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಆರ್ಯವೈಶ್ಯ ಸಮಾಜದ ಅಧ್ಯಕ್ಷ ರೂಪರಾಣಿ ರಾಯ್ಕರ್ ಮಾತನಾಡಿ, ಒಲಿದರೆ ನಾರಿ ಮುನಿದರೆ ಮಾರಿ ಎನ್ನುವಂತೆ ಹೆಣ್ಣು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಸಮಾಜದ ವಿವಿಧ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇರಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ರಾಧಿಕಾ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಸಂಪ್ರದಾಯಕ ಆಟಗಳು ಹಳೆಯ ನೆನಪುಗಳನ್ನು ಹಂಚಿಕೊಳ್ಳಲಾಯಿತು.

ಸಾಧಕರ ಪರಿಚಯವನ್ನು ವಿನೋದ್ ನೆರವೇರಿಸಿದರು. ಇಲ್ಲೂರ್ ಲಕ್ಷ್ಮಿ ದೇವಿ. ಎಂ ಭಾರತಿ. ಗಾಯಿತ್ರಿ ವಾಸು. ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  https://aratt.ai/@vishwaroopa_news_blog

ಮೂಲ ಸೋಮನಾಥ ಜ್ಯೋತಿರ್ಲಿಂಗ ಮಾರ್ಚ್‌-15 ರಂದು ಗಂಗಾವತಿ ಆಗಮನ: ರಘುನಾಥ ಪವಾರ್‌

ಗಂಗಾವತಿ: 1000 ವರ್ಷದ ಹಿಂದಿನ ಮೂಲ ಸೋಮನಾಥ ಜ್ಯೋತಿರ್ಲಿಂಗವು ಮೊಘಲರ ಆಕ್ರಮಣದಿಂದ ಲುಕ್ತವಾಗಿದದ್ದು ಅದನ್ನು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಪುನರ್ ಪ್ರತಿಷ್ಠಾಪಿಸಿ ಸಾರ್ವಜನಿಕ ವೀಕ್ಷಣೆಗಾಗಿ ಇಡೀ ಕರ್ನಾಟಕದಾದ್ಯಂತ ಪ್ರತಿ ತಾಲೂಕಿಗೆ ಜ್ಯೋತಿರ್ಲಿಂಗವು ಆಗಮಿಸುತ್ತಿದೆ. ಅದರಂತೆ ನಾಳೆ ರವಿವಾರ ಮಾರ್ಚ್-15 ರಂದು ಬೆಳಗ್ಗೆ ಗಂಗಾವತಿಗೆ ಆಗಮಿಸಲಿದೆ ಎಂದು ಆರ್ಟ್‌ ಆಫ್‌ ಲಿವಿಂಗ್‌ನ ಗಂಗಾವತಿ ಮುಖ್ಯ ಸಂಚಾಲಕರಾದ ರಘುನಾಥ ರಘುನಾಥ ಪವಾರ್‌ ಪ್ರಕಟಣೆಯಲ್ಲಿ ತಿಳಿಸಿದರು.

ಸನಾತನ ಧರ್ಮದ ಪ್ರಕಾರ 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ ಸೋಮನಾಥ ದೇವಾಲಯವನ್ನು ಸತ್ಯಯುಗದಲ್ಲಿ ಸೋಮ: ಅಂದರೆ ಚಂದ್ರನು ಪ್ರತಿಷ್ಠಾಪಿಸಿದನು ಮತ್ತು ಇಲ್ಲಿ ಶ್ರೀ ಕೃಷ್ಣನು ತಪಸ್ಸು ಮಾಡಿದ್ದನು ಎಂಬ ಪ್ರತೀತಿ ಇದೆ. ಈ ಮೂಲ ಜ್ಯೋತಿರ್ಲಿಂಗವು ಗಾಳಿಯಲ್ಲಿ ತೇಲುತ್ತಿತ್ತು ಎಂದು ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಈ ಶಿಲೆಯ ಕೇಂದ್ರ ಭಾಗವು ಅತ್ಯಂತ ಪ್ರಬಲವಾದ ಕಾಂತೀಯ ಶಕ್ತಿಯಿಂದ ಕೂಡಿದೆ. ಕ್ರಿ.ಶ 1026ರಲ್ಲಿ ಮೊಹಮ್ಮದ್ ಘಜನಿಯು ದೇವಾಲಯದ ಮೇಲೆ ಆಕ್ರಮಣ ಮಾಡಿ ಈ ಜ್ಯೋತಿರ್ಲಿಂಗವನ್ನು ಛಿದ್ರಗೊಳಿಸಿದನು. ಶಾಶ್ವತವಾಗಿ ನಷ್ಟವಾಗಿದೆ ಎಂದುಕೊಂಡಂತಹ ಈ ಶಿವಲಿಂಗದ ಭಾಗಗಳನ್ನು ಅಗ್ನಿಹೋತ್ರಿ ಪುರೋಹಿತರು ರಹಸ್ಯವಾಗಿ ತಮ್ಮ ಬಳಿ ಸಂರಕ್ಷಿಸಿದರು. ಅವರು ಈ ಚೂರುಗಳಿಗೆ ಶಿವಲಿಂಗದ ಆಕಾರವನ್ನು ನೀಡಿದರು ಮತ್ತು ಸುಮಾರು ಸಾವಿರ ವರ್ಷಗಳ ಕಾಲ ತಲೆ-ತಲಾಂತರದಿಂದ ಇದನ್ನು ಸಂರಕ್ಷಿಸಿಕೊಂಡು ಬಂದರು.

1924ರಲ್ಲಿ ಕಂಚಿ ಶಂಕರಾಚಾರ್ಯರು ಈ ಅಗ್ನಿಹೋತ್ರಿಗಳಿಗೆ ಈ ಶಿವಲಿಂಗಗಳನ್ನು ನೂರು ವರ್ಷಗಳ ಕಾಲ ಗುಪ್ತವಾಗಿ ಸಂರಕ್ಷಿಸುವಂತೆ ತಿಳಿಸಿದರು ಮತ್ತು ಅದನ್ನು ಗುರುದೇವರಿಗೆ ನೀಡುವಂತೆ ಸೂಚಿಸಿದ್ದರು. ಅದೇ ರೀತಿ ಜನವರಿ 2025 ರಲ್ಲಿ ಅಗ್ನಿಹೋತ್ರಿಗಳು ಈ ಶಿವಲಿಂಗಗಳನ್ನು ಗುರುದೇವರಿಗೆ ಹಸ್ತಾಂತರಿಸಿದರು. ಮಹಾಶಿವರಾತ್ರಿಯಂದು ಜ್ಯೋತಿರ್ಲಿಂಗದ ಈ ಭಾಗಗಳನ್ನು ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದಲ್ಲಿ, ಒಂದು ಸಾವಿರ ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಮತ್ತು ದರ್ಶನಕ್ಕೆ ಮುಕ್ತಗೊಳಿಸಲಾಯಿತು.

ಈ ಜ್ಯೋತಿರ್ಲಿಂಗವನ್ನು ಮಾರ್ಚ್‌-15 ರವಿವಾರ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆರವರೆಗೆ ಹಿರೇಜಂತಕಲ್ ಪ್ರಸನ್ನ ಪಂಪಾಪತಿ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಸಾಯಂಕಾಲ 4:30 ಇಂದ 7:00 ರ ವರೆಗೆ ಶ್ರೀ ಮಲ್ಲಿಕಾರ್ಜುನ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನೋಂದಣಿ ಮಾಡಿಕೊಂಡಂತ ಭಕ್ತರಿಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆವರೆಗೆ ಸಂಕಲ್ಪ ರುದ್ರಪೂಜೆ ಮಾಡಿಸಲಾಗುವುದು. ಕಾರಣ ಗಂಗಾವತಿ ನಗರದ ಹಾಗೂ ಸುತ್ತಮುತ್ತಲಿನ ಭಕ್ತರು ಈ ಮೂಲ ಜ್ಯೋತಿರ್ಲಿಂಗ ದರ್ಶನ ಪಡೆದುಕೊಂಡು ಪುನೀತರಾಗಬೇಕೆಂದು ವಿನಂತಿಸಿದ್ದಾರೆ. https://aratt.ai/@vishwaroopa_news_blog

ಅದ್ಧೂರಿಯಾಗಿ ಜರುಗಿದ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು.

ಗಂಗಾವತಿ: ಮಾರ್ಚ್-11 ರಂದು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ 134ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ರಥೋತ್ಸವ ಅದ್ಧೂರಿಯಾಗಿ ಜರುಗಿತು.

ಹಿಂದಿನ ದಿನ ಅಂದರೆ ಮಾರ್ಚ್-10 ರಂದು 134ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಜರುಗಿತು. ಮಾರ್ಚ್-11 ಫಾಲ್ಗುಣ ಬಹುಳ ಅಷ್ಠಮಿ ಬುಧವಾರ ಬೆಳಗಿನ ಜಾವ 5:30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ತದನಂತರ ಮಹಾಮಂಗಳಾರತಿ, 11:30 ರಿಂದ 12:30 ರವರೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭಮುಹೂರ್ತದಲ್ಲಿ 11 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಜರುಗಿತು.

 

ಈ ಉತ್ಸವದ ಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹೆಬ್ಬಾಳ ನಾಗಭೂಷಣ ಶಿವಾಚಾರ್ಯರು, ಕಂಪ್ಲಿ ಕಲ್ಮಠದ ಶ್ರೀ ಮ.ನಿ.ಪ್ರ ಅಭಿನವ ಪ್ರಭು ಮಹಾಸ್ವಾಮಿಗಳು, ಶಾ.ಗ  ಹೂವಿನಹಡಗಲಿ ಶ್ರೀ ಮ.ನಿ.ಪ್ರ. ಹಿರೇಶಾಂತವೀರ ಮಹಾಸ್ವಾಮಿಗಳು, ಬೆಳ್ಳಟ್ಟಿ ರಾಮಲಿಂಗೇಶ್ವರ ದಾಸೋಹ ಮಠದ ಶ್ರೀ ಷ.ಬ್ರ. ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಾವನೂರಿನ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ಸುಳೇಕಲ್ ಬೃಹನ್ಮಠದ ಶ್ರೀಶೀಶ್ರೀ ಭುವನೇಶ್ವರಯ್ಯ ತಾತನವರು, ಉಡುಮಕಲ್ ಹಿರೇಮಠದ ಶ್ರೀ ವೀರಬಸಯ್ಯ ಮಹಾಸ್ವಾಮಿಗಳು ವಹಿಸಿದ್ದರು.

 

ಮುಖ್ಯ ಅತಿಥಿಗಳಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನರೆಡ್ಡಿ , ಮಾಜಿ ವಿಧಾನ ಪರಿಷತ್‌ ಸದಸ್ಯರಾದ  ಹೆಚ್.ಆರ್. ಶ್ರೀನಾಥ್‌, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಪಾಲ್ಗೊಂಡಿದ್ದರು.

 

ಸಂಜೆ 5:00 ಗಂಟೆಗೆ ಸರಿಯಾಗಿ ಶ್ರೀ ಬೆಟ್ಟದೇಶ್ವರ ಹಾಗೂ ಶ್ರೀ ಲಿಂಗೇಶ್ವರರ ಜೋಡು ರಥೋತ್ಸವವು ಭಕ್ತರ ಸಮೂಹದಲ್ಲಿ ಅದ್ಧೂರಿಯಾಗಿ ಜರುಗಿತು.

ಅದೇರೀತಿ ಇಂದು ಸಾಯಂಕಾಲ ಕಡುಬಿನ ಕಾಳಗ ನಡೆಯಿತು. https://aratt.ai/@vishwaroopa_news_blog

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರ ಚಿತ್ರಕಲಾ ಪ್ರದರ್ಶನ

ಹಾಸನ: ಹಾಸನಾoಬ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಇವರು ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸನದ ಮಹಿಳಾ ಚಿತ್ರ ಕಲಾವಿದೆಯರು ರೂಪಿಸಿರುವ ಕಲಾಕೃತಿಗಳು ಪ್ರದರ್ಶನಗೊಂಡವು.

ಪ್ರಕೃತಿಯಿಂದ ಹಿಡಿದು ಮಹಿಳೆಯರ, ಮಕ್ಕಳ ಚಿತ್ರಗಳು ಪ್ರಕೃತಿಯ ಮಡಿಲಲ್ಲಿ ಬುದ್ಧನ ಚಿತ್ರ, ಪ್ರಕೃತಿಯಲ್ಲಿ ಹಾವಿನ ಜೀವನದ ಹಾದಿ, ಹೂಗಳಲ್ಲಿ ತಾವರೆ, ಗುಲಾಬಿ ಚಿತ್ರಕಲೆಗಳು. ಕೃಷ್ಣ ಮತ್ತು ಹಡಗು,
ರಾಧಾಕೃಷ್ಣರ ಪ್ರೀತಿಯ ನೋಟ, ಕ್ರಿಯೇಟಿವ್ ವರ್ಕ್ಸ್. ಮಹಿಳಾ ದೌರ್ಜನ್ಯ ವಿರೋಧಿ ಚಿತ್ರಗಳು ಹೀಗೆ ಹಲವಾರು ವೈವಿಧ್ಯ ಚಿತ್ರಗಳು ಮಹಿಳೆಯರ ಕೈಚಳಕದಲ್ಲಿ ರೂಪು ತೆಳೆದಿವೆ.

ಎರಡು ದಿನಗಳು ಚಿತ್ರಕಲೆಗಳನ್ನು ಪ್ರದರ್ಶನಕ್ಕೆ ಇಟ್ಟು ಅವರ ಪ್ರತಿಭೆಯನ್ನು ಗುರುತಿಸುವ ಪ್ರಯತ್ನ ಶ್ಲಾಘನೀಯ. ಈಗಿನ ಜಗತ್ತಿನಲ್ಲಿ ಎಲ್ಲಾ ಹೆಣ್ಣು ಮಕ್ಕಳು ಸಾಧನೆ ಮಾಡುವಲ್ಲಿ ಯಶಸ್ಸನ್ನು ಕಾಣುತ್ತಿದ್ದಾರೆ. ತಮ್ಮ ಸಂಸಾರದ ನೌಕೆ ಮತ್ತು ಅವರವರ ವೈಯಕ್ತಿಕ ಬದುಕಿನ ಕೆಲಸಗಳನ್ನು ಮಾಡಿಕೊಂಡು ಅವರು ತಮ್ಮ ಸಾಧನೆ ಮಾಡುವಲ್ಲಿ ಗಮನ ವಹಿಸುತ್ತಾ ಬಂದಿದ್ದಾರೆ.

ಹಾಸನ ಜಿಲ್ಲೆ ಕಲೆಯ ಬೀಡು ಎಂದು ಪ್ರಸಿದ್ಧಿ ಪಡೆದಿದೆ. ಚಿತ್ರಕಲಾ ಪ್ರದಶ೯ನದಲ್ಲಿ ಭಾಗವಹಿಸಿದ ಕಲಾವಿದೆಯರೆಂದರೆ ಶೋಭಾ ಆರ್., ಸೌಮ್ಯ ಎಸ್., ಅಶ್ವಿನಿ ಹೆಚ್.ವಿ., ಲತಾ ಎಲ್‌.ಜಿ., ಹೇಮಲತಾ, ಮಂಜುಳಾ, ಚಂದ್ರಪ್ರಭ, ಅಕ್ಷರ, ಹೇಮಲತಾ ಆರ್., ಹಂಸವೇಣಿ, ವೃತಿಕ ಕುಮಾರಿ, ಸ್ಪೂರ್ತಿ, ಕೋಮಲ, ಪ್ರಕೃತಿ ಜಿ.ಆರ್., ಭೂಮಿಕ, ನಂದಿನಿ.

ಅಚ್ಚುಕಟ್ಟಾಗಿ ಚಿತ್ರಕಲೆ ಪ್ರದರ್ಶಿಸಲು ಮಹಿಳೆಯರಿಗೆ ಬೆಂಬಲ ನೀಡಿ ಮಾರ್ಗದರ್ಶನ ನೀಡಿದವರು ಹಿರಿಯ ಕಲಾವಿದರಾದ ಹಾಸನದ ಬಿ.ಎಸ್. ದೇಸಾಯಿ, ಚನ್ನರಾಯಪಟ್ಟಣದ ಪ್ರಭಾಕರ್ ಎಸ್.ವೈ., ಸುರೇಶ್ ಅತ್ನಿ ಮತ್ತು ಶಿವಕುಮಾರ್ ಆರ್., ಕಲಾವಿದೆಯರಿಗೆ ಸ್ಪೂರ್ತಿ ನೀಡಿ ಅಭಿನಂದಿಸಲು ಬಂದು ಮಾರ್ಗದರ್ಶನ ಮಾಡಿದವರು ಗೊರೂರು ಆನಂತರಾಜು ಸಾಹಿತಿಗಳು, ಹಾಸನ ಮತ್ತು ಕೆ.ಎನ್. ಶಂಕರಪ್ಪ ಕಲ್ಯಾಡಿ
ಕಾರ್ಯದರ್ಶಿಗಳು, ಸಂಸ್ಕಾರ ಭಾರತಿ ಮತ್ತು ಚಿತ್ರಕಲಾವಿದರು.

ಹೊರರಾಜ್ಯ ಮಹಿಳೆಯರ ಸಹಕಾರದಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಉತ್ತಮ ಕಾರ್ಯಕ್ರಮವಾಗಿತ್ತು.  https://aratt.ai/@vishwaroopa_news_blog

ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.
ಗಂಗಾವತಿ: ದಲಿತ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಗಂಗಾವತಿ ವತಿಯಿಂದ ಮಾರ್ಚ್‌-8 ರಂದು ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶೈಲಜಾ ಹಿರೇಮಠರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಭಾರತೀಯ ವೈದ್ಯಕೀಯ ಭವನ (ಐ.ಎಂ.ಎ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕ ಅಧ್ಯಕ್ಷರಾದ ಛತ್ರಪ್ಪ ತಂಬೂರಿ ಹಾಗೂ ಕಾರ್ಯದರ್ಶಿಯಾದ ಮೈಲಾರಪ್ಪ ಬೂದಿಹಾಳ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮ ಉದ್ಘಾಟನೆ ಯನ್ನು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಮಾಡಲಿದ್ದು, ಅಧ್ಯಕ್ಷತೆಯನ್ನು ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷರಾದ ಡಾ. ಲಿಂಗಣ್ಣ ಜಂಗಮರಹಳ್ಳಿ ವಹಿಸಲಿದ್ದಾರೆ. ಸಾವಿತ್ರಿ ಬಾಪುಲೆರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾದ ರಮೇಶ ಗಬ್ಬೂರು ಹಾಗೂ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ ಮಾಡಲಿದ್ದಾರೆ. ಸಂವಿಧಾನ ಪೀಠಿಕೆಯನ್ನು ಶಿಕ್ಷಕಿಯಾದ ಶ್ರೀಮತಿ ಶಾರದಾ ಸುಂಕಪ್ಪ ಓದಲಿದ್ದಾರೆ.
ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 18 ಜನರಿಗೆ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯನ್ನು ಕೊಪ್ಪಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ್‌ ನೀಡಲಿದ್ದಾರೆ. ಶ್ರೀರಾಮನಗರದ ಇಂದಿರಾಗಾಂಧಿ ವಸತಿ ಶಾಲೆಯ ಸಾಧನೆಗೈದ ಇಬ್ಬರು ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವೈದ್ಯರು, ಸಾಹಿತಿಗಳು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನೇಕ ಗಣ್ಯರು, ವೈದ್ಯರು, ಸಾಹಿತಿಗಳು ಹಾಗೂ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಕುಮಾರಿ ರಂಜನಿ ಆರತಿ, ಬಿದಾನಂದ ಬರಗೂರು ಹಾಗೂ ಸಂಗಡಿಗರಿಂದ ಅರಿವಿನ ಹಾಡುಗಳು ಮೂಡಿಬರಲಿವೆ. https://aratt.ai/@vishwaroopa_news_blog
ಇತಿಹಾಸದ ಮೇಲೆ ಬೆಳಕು ಚೆಲ್ಲುವ ನಿಜಮಹಾತ್ಮ ಬಾಬಾ ಸಾಹೇಬ ನಾಟಕ

ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ರಂಗಭೂಮಿ ಟ್ರಸ್ಟ್ ಕೊಡಗು ಕಲಾವಿದರು ಶ್ರೀ ಅಡ್ಡಂಡ ಕಾರ್ಯಪ್ಪ ರಚನೆಯ ನಿಜ ಮಹಾತ್ಮ ಬಾಬಾ ಸಾಹೇಬ ನಾಟಕ ಪ್ರದರ್ಶಿಸಿದರು.

ಮೈಸೂರು ರಂಗಾಯಣ ನಿಕಟಪೂರ್ವ ನಿರ್ದೇಶಕರು ಅಡ್ಡಂಡ ಕಾರ್ಯಪ್ಪನವರು ಕೊಡಗು ಜಿಲ್ಲೆಯವರು. ಬಾಲ್ಯದಿಂದಲೂ ರಂಗಭೂಮಿ ಹಾಗೂ ಸಾಹಿತ್ಯದ ಬಗ್ಗೆ ತೀವ್ರವಾದ ಒಲವು ಬೆಳೆಸಿಕೊಂಡು ಇವರು ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ ರಾಜ್ಯಾದ್ಯಂತ ಪ್ರದರ್ಶಿಸಿದ ಹೆಗ್ಗಳಿಕೆ ಇವರದು. ಇವರು ಈ ಹಿಂದೆ ಹಾಸನದಲ್ಲಿ ಪರ್ವ ಕಾದಂಬರಿಯನ್ನು ನಾಟಕವಾಗಿ ಪ್ರದರ್ಶಿಸಿದ್ದರು. ಹಿಂದೆ ಇವರ ತಂಡದ ಟಿಪ್ಪು ನಿಜಕನಸುಗಳು ಮತ್ತು ಕರಿನೀರ ವೀರ ನಾಟಕಗಳನ್ನು ನೋಡಿ ಬರೆದಿದ್ದೆ. ಇವರ ಇನ್ನೊಂದು ನಾಟಕ ಸತ್ಯವನ್ನೇ ಹೇಳುತ್ತೇನೆ. ಈ ನಾಟಕವು ಡಾ. ಅಂಬೇಡ್ಕರ್ ವಿಷಯದಲ್ಲಿ ಬಚ್ಚಿಟ್ಟ ಸತ್ಯಗಳನ್ನು ಬಿಚ್ಚಿಡುವ ಪ್ರಯತ್ನ ಎಂದಿದ್ದಾರೆ.

ಡಾ. ಬಾಬಾಸಾಹೇಬ ಅಂಬೇಡ್ಕರ್ ತಮ್ಮ ಸ್ವಪ್ರಯತ್ನ ಸಾಧನೆಗಳಿಂದ ಮಾನವತಾವಾದಿಯಾಗಿ ಒಂದು ಅರ್ಥದಲ್ಲಿ ನಿಜಮಹಾತ್ಮರಾಗಿ ಬೆಳೆದಿದ್ದು ಅದ್ಭುತ ಯಶೋಗಾಥೆ. ಅವರ ವ್ಯಕ್ತಿತ್ವ, ವಿದ್ವತ್ತು, ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ, ಅಸ್ಪೃಶ್ಯತೆಯ ವಿರುದ್ಧದ ಹೋರಾಟ ಶ್ರಮ ಅದ್ವಿತೀಯ. ಬಾಬಾ ಸಾಹೇಬರ ಬಗ್ಗೆ ಸಾಮಾಜಿಕ ಕ್ರಾಂತಿ ಸೂರ್ಯ ಪುಸ್ತಕ ಬರೆದ ದತ್ತೋಪಂತ್ ಠೇಂಗಡಿ ಅವರ ನಿರೂಪಣೆಯಲ್ಲಿ ತೆರೆದುಕೊಳ್ಳುತ್ತದೆ ನಾಟಕ. ಅವರ ಜೀವನವನ್ನು ರಾಜಕೀಯ ಕಥಾನಕಗಳಿಂದ ಹೊರತಂದು ರಾಷ್ಪ್ರೀಯತೆಯ ನೆಲೆಯಲ್ಲಿ ಪುನರ್ ಸ್ಥಾಪಿಸಿದೆ. ಅವರನ್ನು ಯಾವುದೋ ಒಂದು ರಾಜಕೀಯ ಚೌಕಟ್ಟಿಗೆ ಸೀಮಿತಗೊಳಿಸದೆ ಅವರ ನೈಜ ಸ್ವಭಾವಗಳಾದ ಚಿಕಿತ್ಸಕ ಬುದ್ಧಿ, ತಪ್ಪನ್ನು ಪ್ರಶ್ನಿಸುವ ವಿರೋಧಿಸುವ ಧೈರ್ಯ, ಸತ್ಯಕ್ಕಾಗಿ ಒಬ್ಬಂಟಿಯಾಗಲು ಸಿದ್ಧರಾಗುವ ಮಹಾ ಮಾನವತೆಯನ್ನು ನೋಡಬಯಸುತ್ತದೆ.

ಬಾಬಾಸಾಹೇಬರ ಜೀವನದ ಅನೇಕ ಘಟನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ರಂಗದಲ್ಲಿ ತರಲಾಗಿದೆ. ಅವರ ವೈವಾಹಿಕ ಜೀವನ, ರಾಷ್ಪ್ರೀಯ ಸ್ವಯಂ ಸೇವಕ ಸಂಘದೊಂದಿಗೆ ಅವರಿಗಿದ್ದ ನಿಲುವು, ಸಂವಿಧಾನ ಕರಡು ತಿದ್ದುಪಡಿಯ ಸಂದರ್ಭದಲ್ಲಿ ಸಂಸತ್ತಿನಲ್ಲಿ ನಡೆದ ಚರ್ಚೆಗಳು, ಡಾ. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ನಡುವಿನ ಸಂಬಂಧ ಇವೆಲ್ಲವನ್ನು ಐತಿಹಾಸಿಕ ದಾಖಲೆಗಳನ್ನು ಇಟ್ಟುಕೊಂಡು ಪರದೆಯ ಮೇಲೆ ಸಾಕ್ಷ್ಯ ಚಿತ್ರಗಳನ್ನು ತೋರಿಸಿ ಪ್ರಸ್ತುತಿಪಡಿಸುತ್ತದೆ. ರಾಷ್ಪ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕರಾದ ಡಾ. ಕೇಶವ ಬಲಿರಾಮ್ ಹಡ್ಗೆವಾರ್ ಮತ್ತು ಬಾಬಾ ಸಾಹೇಬರು ಒಂದೇ ಕಾಲಘಟ್ಟದಲ್ಲಿದ್ದವರು. ಇವರಿಬ್ಬರ ಭೇಟಿ ವಿಚಾರ ವಿನಿಮಯ ಸಂಘದ ಶಿಬಿರಕ್ಕೆ ಭೇಟಿಯಿತ್ತ ಬಾಬಾ ಸಾಹೇಬರು ಅಲ್ಲಿ ಯಾರೂ ಜಾತಿಯಿಂದ ಗುರುತಿಸಿಕೊಳ್ಳದೇ ಹಿಂದೂಗಳಾಗಿ ಗುರುತಿಸಿಕೊಂಡಿದ್ದನ್ನು ವಿಶೇಷವಾಗಿ ಗಮನಿಸುತ್ತಾರೆ.

ಹಿಂದೂ ಸಮಾಜದಲ್ಲಿ ಮಹಿಳೆಯರಿಗೆ ಕಾನೂನುಬದ್ಧ ಸಮಾನ ಹಕ್ಕುಗಳನ್ನು ನೀಡುವ ಉದ್ದೇಶದ ಹಿಂದೂ ಕೋಡ್ ಬಿಲ್ ಅನ್ನು ೧೯೫೧ರಲ್ಲಿ ಸರಕಾರ ಮುಂದೂಡಿದ ಕಾರಣ ಬಾಬಾ ಸಾಹೇಬರು ನೆಹರು ಸಂಪುಟಕ್ಕೆ ರಾಜೀನಾಮೆ ನೀಡಿದರು. ೧೯೫೨ರ ಮೊದಲ ಲೋಕಸಭಾ ಚುನಾವಣೆಯಲ್ಲಿ ಅವರ ಸೋಲು ಅಘಾತಕಾರಿ. ೧೯೫೬ರ ಡಿಸೆಂಬರ್ ೬ರಂದು ಅಂಬೇಡ್ಕರ್ ಅಸ್ತಂಗತರಾದಾಗ ಅವರ ಅಂತ್ಯಕ್ರಿಯೆಗೆ ದೆಹಲಿಯಲ್ಲಿ ಜಾಗ ದೊರಕದಿರುವುದು ವಿಷಾದನೀಯ. ಈ ಅಂಶಗಳ ಮೇಲೆ ನಾಟಕ ಬೆಳಕು ಚೆಲ್ಲುತ್ತದೆ.
೧೯೨೭ರಲ್ಲಿ ಮಹಾರಾಷ್ಟ್ರದ ಮಹಾಡ್ನಲ್ಲಿ ನಡೆದ ಚವದಾರ್ ಕೆರೆ ಸತ್ಯಾಗ್ರಹ ಮತ್ತು ೧೯೩೦ರಲ್ಲಿ ನಾಸಿಕ್‌ನ ಕಾಳಾರಾಮ ದೇವಸ್ಥಾನ ಪ್ರವೇಶ ಚಳುವಳಿ ಇವು ಅವರ ಸಾಮಾಜಿಕ ಹೋರಾಟಗಳ ಪ್ರಮುಖ ಮೈಲಿಗಲ್ಲು. ದೇವಸ್ಥಾನಕ್ಕೆ ಹೋಗಿಬರಬೇಕೆಂದು ಬಯಸುವ ಪತ್ನಿಯನ್ನು ಸಂಭಾಳಿಸುವ ಸನ್ನಿವೇಶವು ಮನ ಕಲಕುತ್ತದೆ.

ಸ್ವಾತಂತ್ರ್ಯ ದೊರಕಿದ ಆರು ವರ್ಷಗಳ ಮೊದಲೇ ಬಾಬಾ ಸಾಹೇಬರು ಬರೆದ ಥಾಟ್ಸ್ ಆಫ್ ಪಾಕಿಸ್ಥಾನ (Thoughts of Pakisthan) ಕೃತಿಯನ್ನು ಪ್ರೇಕ್ಷಕರು ಓದಬೇಕೆಂದು ನಾಟಕದ ಮಧ್ಯಾಂತರದಲ್ಲಿ ಬಂದು ನಾಟಕಕಾರರು ನಿವೇದಿಸುತ್ತಾರೆ. ಬಾಬಾಸಾಹೇಬರ ಬದುಕು ತೆರೆದ ಪುಸ್ತಕ. ಅವರು ಬದುಕನ್ನು ಅಕ್ಷರಗಳಲ್ಲಿ ಬರೆದಿಟ್ಟಿದ್ದಾರೆ. ಅದನ್ನು ನಾವು ಓದಬೇಕಷ್ಟೇ. ಅವರು ಇದನ್ನು ಬರೆದಿದ್ದು ದೇಶ ವಿಭಜನೆಯ ಉದ್ದೇಶದಿಂದಲ್ಲ. ವಿಭಜನೆ ತರುವ ರಾಜಕೀಯ, ಸಾಮಾಜಿಕ ಮತ್ತು ಭೌಗೋಳಿಕ ಪರಿಣಾಮಗಳನ್ನು ಅದರಲ್ಲಿ ವಿಶ್ಲೇಷಿಸಿದ್ದರು. ಧರ್ಮದ ಆಧಾರದಲ್ಲಿ ದೇಶ ಒಡೆಯುವುದೇ ಆದರೆ ಸಂಪೂರ್ಣ ಪ್ರಜಾ ವಿನಿಮಯವಾಗಬೇಕು ಎಂಬುದು ಅವರ ನಿಲುವು. ಗಾಂಧೀಜಿಯವರು ಪ್ರಜಾ ವಿನಿಯಯ ಮಾಡಿಕೊಳ್ಳಬೇಕೆಂಬ ಅವರ ಬೇಡಿಕೆಯ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಿ ಬಾಬಾ ಸಾಹೇಬರು ತಮ್ಮ ಬೇಡಿಕೆಯಿಂದ ಹಿಂದೆ ಸರಿಯುವಂತೆ ಮಾಡುವ ದೃಶ್ಯ ಯಾಕೋ ಗಾಂಧೀ ಪಾತ್ರ ವ್ಯಂಗ್ಯವಾಗಿ ಗೋಚರಿಸಿತು. ಇತ್ತ ಸಾರ್ವಕರರು ಧರ್ಮಾಧಾರಿತ ವಿಭಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಅಖಂಡ ಬಾರತ ಎಂಬ ರಾಷ್ಪ್ರ ಕಲ್ಪನೆಯನ್ನು ಸ್ಫಷ್ಟವಾಗಿ ಪ್ರತಿಪಾದಿಸಿದರು. ಬಾಬಾ ಸಾಹೇಬರು ಮತ್ತು ಸಾವರ್ಕರರ ನಡುವೆ ರಾಷ್ಟ್ರ ಧರ್ಮ ಮತ್ತು ಭವಿಷ್ಯದ ಭಾರತದ ಕುರಿತ ಚರ್ಚೆಗಳು ಮುಖಾಮುಖಿ ಸಂಭಾಷಣೆಯಲ್ಲಿ ಅಭಿವ್ಯಕ್ತವಾಗುತ್ತದೆ. ಚುರುಕು ಮಾತುಗಳು, ದೃಶ್ಯದಿಂದ ದೃಶ್ಯಕ್ಕೆ ಬದಲಾಗುವ ಸನ್ನಿವೇಶಗಳು, ಎಲ್ಲೂ ಬಿಗಿ ತಪ್ಪದ ಕಥಾ ನಿರೂಪಣೆ, ಪಕ್ಕ ಲೈಟಿಂಗ್ಸ್ (ತೀರ್ಥಳ್ಳಿ ಶಿವಕುಮಾರ್) ನಾಟಕದ ಹೈಲೆಟ್ಸ್. ಸುಮಾರು ೨ ಗಂಟೆ ೧೦ ನಿಮಿಷದ ನಾಟಕದಲ್ಲಿ ಪ್ರಮುಖವಾಗಿ ಇಡೀ ನಾಟಕ ಆವರಿಸಿಕೊಂಡಿರುವ ಬಾಬಾಸಾಹೇಬರ ಪಾತ್ರವನ್ನು ಅಜಿತ್‌ಕುಮಾರ್ ಸಮರ್ಥವಾಗಿ ನಿಭಾಯಿಸಿದರು. ನಾಟಕದ ಇತರ ಕಲಾವಿದರು ನಾಟಕದ ಹಲವಾರು ಪಾತ್ರಗಳನ್ನು ಹಂಚಿಕೊಂಡರು.

ಅಶೋಕ್‌ಗೌಡ ಅವರು ಸುಧಾಮ, ಅರುಣ್‌ಚಂದ್ರ ಗುಹಾ ಪಾತ್ರಗಳನ್ನು, ಉಡುಪಿ ಸರ್ವೇಶ್ ಅವರು ರತ್ತು, ಮೆಹಬೂಬ್ ಆಲಿಬೇಗ್ ಪಾತ್ರಗಳನ್ನು, ಶರಣು ಯಳವಾರ ಅವರು ಬೋನ್ಸಲೆ, ಮಹಾವೀರ್ ತ್ಯಾಗಿ ಪಾತ್ರಗಳನ್ನು ಶಿವಕುಮಾರ್ ಅವರು ಶಂಕರಾನಂದ ಶಾಸ್ತ್ರೀ ಗಾಯಕ್‌ವಾಡ್, ಹೆಚ್.ವಿ.ಕಾಮತ್ ಪಾತ್ರಗಳನ್ನು, ಮನೋಜ್ ಅವರು ಅಮಿನ್ ಚಂದ್ ಗಾಂಧಿ, ಮೌಲಾನ ಆಶ್ರತ್ ಮೊಹಾನಿ ಪಾತ್ರಗಳನ್ನು, ಮಧು ಎಂ. ಕೇಶವ ಬಲಿರಾಮ್ ಹೆಡಗೆವಾರ್, ಡಾ. ಬಾಬು ರಾಜೇಂದ್ರ ಪ್ರಸಾದ್ ಪಾತ್ರಗಳನ್ನು, ಶ್ರೇಯಸ್ ವೆಂಕಟೇಶ್ ವೀರಸಾವರ್‌ಕರ್ ಪಾತ್ರ ಹಾಗೂ ಸಚಿನ್‌ರಾಜ ಅವರು ದತ್ತೋಪಂಥ ಶೇಂಗಡಿ, ಟಿ.ಟಿ.ಕೃಷ್ಣಮಾಚಾರಿ ಪಾತ್ರಗಳನ್ನು ನಿಭಾಯಿಸಿದರು.

ಇದೇ ಕಲಾವಿದರು ನಾಟಕದಲ್ಲಿ ಬಂದು ಹೋಗುವ ಗಾಂಧಿ ಭಕ್ತರು, ಸ್ವಯಂ ಸೇವಕರು ದಲಿತರ ಪಾತ್ರಗಳನ್ನು ನಿರ್ವಹಿಸಿದರು. ಅನಿತಾ ಕಾರ್ಯಪ್ಪರವರು ನಾಟಕದ ಸ್ತ್ರೀ ಪಾತ್ರಗಳು ಡಾ. ಸವಿತ ಅಂಬೇಡ್ಕರ್, ರಮಾದೇವಿ ಮತ್ತು ರೇಣುಕಾ ರೇ ಪಾತ್ರಗಳಲ್ಲಿ ಅಭಿನಯಿಸಿದರು. ರಘುಪ್ರಸಾದ್ ನೀನಾಸಮ್ ಅವರಿಂದ ಸ್ಕ್ರೀನ್ ಮೇಲೆ ಮೂಡಿಬಂದ ದೃಶ್ಯ ಚಿತ್ರ ದಾಖಲೀಕರಣ ಗಮನಾರ್ಹ.  https://aratt.ai/@vishwaroopa_news_blog

ಗೊರೂರು ಅನಂತರಾಜು, ಹಾಸನ.
ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ೩ನೇ ಕ್ರಾಸ್, ಹಾಸನ